Author: UllalaVani

Kannada News From Coastal Karnataka

ಉಳ್ಳಾಲ: ಸನಾತನ ಹಿಂದೂ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ ಹಾಗೂ ಸನಾತನ ಧರ್ಮಸಭೆ ಉದ್ಘಾಟನಾ ಸಮಾರಂಭ ಹಾಗೂ ಸನಾತನ ಧರ್ಮಸಭೆ ಫೆ.15 ರಂದು ಸಂಜೆ 6 ಕ್ಕೆ ಶ್ರೀ ಕ್ಷೇತ್ರ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ದಿ| ಲೋಕಯ್ಯ ಗಟ್ಟಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಸಮಾನ ಮನಸ್ಕರ ಬಳಗವಾಗಿ ರೂಪುಗೊಂಡಿರುವ ಈ ನೂತನ ಸಂಘಟನೆ ಧರ್ಮ ಜಾಗೃತಿ ಮೂಡಿಸುವುದು, ಸುತ್ತಮುತ್ತಲಿನ ಪ್ರದೇಶದಲ್ಲಿ ಧಾರ್ಮಿಕ ಶ್ರದ್ಧೆ ಪಸರಿಸುವುದು, ಆರ್ಥಿಕ ಮತ್ತು ದೈಹಿಕವಾಗಿ ಅಶಕ್ತರಾಗಿರುವವರಿಗೆ ನೆರವು ನೀಡುವುದು ಉದ್ದೇಶವಾಗಿದೆ ಎಂದು ಸನಾತನ ಹಿಂದೂ ಸೇವಾ ಪ್ರತಿಷ್ಠಾನ ಇದರ ಅಧ್ಯಕ್ಷ ಸುರೇಶ್‌ ಚೌಟ ಹೇಳಿದರು. ತೊಕ್ಕೊಟ್ಟು ಸೇವಾಸೌಧದಲ್ಲಿನ ಉಳ್ಳಾಲ ಪ್ರೆಸ್‌ ಕ್ಲಬ್‌ ನಲ್ಲಿ ಇಂದು ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಯುವಜನಾಂಗದಲ್ಲಿ ಹಿಂದೂ ಧರ್ಮದ ನಿಜಾರ್ಥದ ಪ್ರಜ್ಞೆ ಮೂಡಿಸುವುದು ಸೇರಿದಂತೆ ವಿವಿಧ ಸಾಮಾಜಿಕ ಕಳಕಳಿಯ ಉದ್ದೇಶಗಳನ್ನು ಹೊಂದಿದೆ. ದೂರದ ಪ್ರದೇಶಗಳಿಂದ ಉದ್ಯಮಿಗಳನ್ನೂ, ದಾನಿಗಳನ್ನೂ ಗುರುತಿಸಿ ಅವರ ಮೂಲಕ ಆರ್ಥಿಕ ಸಹಾಯವನ್ನು ಸಂಗ್ರಹಿಸಿ…

Read More

ಬೆಳ್ತಂಗಡಿ,ಫೆ. 10 :  ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ.  ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ದೂರಿನಲ್ಲಿ ಉಲ್ಲೇಖಿಸಲಾದ ಯಾವುದೇ ವಾಹನ ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟು ಮಾಡಿಕೊಂಡ ಗಾಯ ಎಂದು ತಿಳಿಸಲಾಗಿತ್ತು. ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ.ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು. ಎಂದು ತಿಳಿಸಿದ್ದಾರೆ.ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಫೆ.9ರಂದು ಬೆಳಗ್ಗೆ 8:30ರ ಸುಮಾರಿಗೆ 16 ವರ್ಷದ ಕಾಲೇಜು ವಿದ್ಯಾರ್ಥಿನಿ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ…

Read More

ಉಡುಪಿ,ಫೆ. 10: ಮಂಗಳೂರಿನಿಂದ ಶಿರ್ವಕ್ಕೆ ತೆರಳುತ್ತಿದ್ದ ಕಾರೊಂದು ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ್ ಶ್ರೀ ಜಾರಂದಾಯ ದೈವಸ್ಥಾನದ ಬಳಿ ರಸ್ತೆ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾದ ಘಟನೆ ಬೆಳಕಿಗೆ ಬಂದಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.ಸೋಮವಾರ ತಡರಾತ್ರಿ, ಕಾರು ಮಂಗಳೂರಿನಿಂದ ಶಿರ್ವ ಕಡೆಗೆ ಹೋಗುತ್ತಿದ್ದಾಗ ನ್ಯಾರ್ಮ್ ಪ್ರದೇಶವನ್ನು ತಲುಪಿದಾಗ, ಎಂಜಿನ್ ವಿಭಾಗದಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿತು. ಇದರಿಂದ ಎಚ್ಚೆತ್ತ ಚಾಲಕ ತಕ್ಷಣವೇ ವಾಹನವನ್ನು ರಸ್ತೆಯ ಬದಿಗೆ ನಿಲ್ಲಿಸಿ ತನ್ನೊಂದಿಗೆ ಪ್ರಯಾಣಿಸುತ್ತಿದ್ದ ನಾಲ್ವರು ಕುಟುಂಬ ಸದಸ್ಯರನ್ನು ತಕ್ಷಣ ಕೆಳಗಿಳಿಯುವಂತೆ ಸೂಚಿಸಿದ್ದಾನೆ.ಎಲ್ಲರೂ ಇಳಿದ ಕೆಲವೇ ಕ್ಷಣಗಳಲ್ಲಿ, ಬೆಂಕಿಯ ಜ್ವಾಲೆಗಳು ಇಡೀ ಕಾರನ್ನು ಆವರಿಸಿಕೊಂಡು ಸ್ವಲ್ಪ ಸಮಯದೊಳಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ. ಬೆಂಕಿಯನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಬಂದು ಹತ್ತಿರದ ಮನೆಗಳಿಂದ ಪೈಪ್‌ಗಳ ಮೂಲಕ ನೀರನ್ನು ಸಿಂಪಡಿಸುವ ಮೂಲಕ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಆದರೆ, ಬೆಂಕಿ ವೇಗವಾಗಿ ಹರಡಿದ ಪರಿಣಾಮವಾಗಿ ಕಾರು ಸುಟ್ಟು ಭಸ್ಮವಾಗಿದೆ.

Read More

ಉಳ್ಳಾಲ: ಅಂಬ್ಲಮೊಗರು ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ದ್ವಿತೀಯ ಹಂತದ ಹಾಗೂ ಜನಪ್ರತಿನಿಧಿಗಳ ಆಡಳಿತದ ಕೊನೆಯ ಗ್ರಾಮಸಭೆ ಸೋಮವಾರ ಗ್ರಾ.ಪಂ. ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ ಮದಕ, ನಾಲ್ಕು ವರ್ಷಗಳಿಂದ ಕಂಡಿಲದಿಂದ ಲಕ್ಷ್ಮಿ ನರಸಿಂಹ ದೇವಸ್ಥಾನಕ್ಕೆ ಹೋಗಲು ರಸ್ತೆಯೇ ಇಲ್ಲ. ತಹಸೀಲ್ದಾರ್ ಈ ಬಗ್ಗೆ ಮೌನವಾಗಿದ್ದಾರೆ. ಸರ್ಕಾರಿ ಜಾಗದಲ್ಲಿ ಅಹೋರಾತ್ರಿ ಕೆಲಸ ನಡೆಯುತ್ತಿದ್ದು ಕಂದಾಯ ಇಲಾಖೆ ಮೌನವೇಕೆ? ಈಗಲೂ ಕೆಲಸ ನಡೆಯುತ್ತಿದ್ದು ತಕ್ಷಣ ನಿಲ್ಲಿಸಬೇಕು. ಮೈದಾನದ ಮೀಸಲು ಜಾಗ, ದೇವಸ್ಥಾನ ಸಂಪರ್ಕ ರಸ್ತೆ ಎಲ್ಲಿದೆ ಎಂದು ಪ್ರಶ್ನಿಸಿದರು. ಜಾಗದ ಬಗ್ಗೆ ಪೂರ್ಣ ವಿವರ ಕಲೆ ಹಾಕಲಾಗಿದ್ದು ಸರ್ವೇ ಇಲಾಖೆ ಸ್ಪಷ್ಟ ವರದಿ ಕೊಡಬೇಕಿದೆ. ಖಾಸಗಿ ಜಾಗಕ್ಕೆ ಅಧಿಕಾರಿಗಳು ಹೋಗುವಂತಿಲ್ಲ, ಪಾವೂರಿನಲ್ಲಿ ಈಗಾಗಲೇ ಖಾಸಗಿ ಜಾಗದವರು ಕೇಸ್ ಹಾಕಿದ್ದಾರೆ. ಸರ್ಕಾರಿ ಜಾಗದಲ್ಲಿ ಕೆಲಸ ನಡೆಯುತ್ತಿದ್ದರೆ ನಿಲ್ಲಿಸುವುದಾಗಿ ಅಂಬ್ಲಮೊಗರು ಗ್ರಾಮ ಆಡಳಿತಗಾರೆ ನಯನ ತಿಳಿಸಿದರು.ಯು.ಟಿ. ಫರೀದ್ ಹೆಸರಲ್ಲಿ ನಾಲ್ಕೂವರೆ ಎಕರೆ ಜಮೀನು ಮೈದಾನಕ್ಕೆ ಮೀಸಲಿಡಲಾಗಿದೆ. ಆದರೆ ಈಗಿರುವ ಜಾಗ ರಸ್ತೆಬದಿ ಇರುವುದರಿಂದ ಪಂಚಾಯಿತಿಗೆ…

Read More

ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನವಾಗಿದ್ದ ಆರೋಪಿಯನ್ನು ಫರಿದಾಬಾದ್ ಜೈಲಿನಲ್ಲೇ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.ಅಬ್ದುಲ್ ರೆಹಮಾನ್ ಮತ್ತು ಅರುಣ್‌ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನನ್ನು ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ರೆಹಮಾನ್‌ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.ರೆಹಮಾನ್ ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯ ಮಿಲ್ಕಿಪುರ ನಿವಾಸಿಯಾಗಿದ್ದು ಮಾರ್ಚ್ 2, 2025 ರಂದು ಫರಿದಾಬಾದ್‌ನ ಪಾಲಿ ಗ್ರಾಮದ ಬಳಿ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಹರಿಯಾಣ ವಿಶೇಷ ಕಾರ್ಯಪಡೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು.ಆತನ ಬಳಿಯಿದ್ದ…

Read More

ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲ್ಯುಯೆನ್ಸರ್ ಆದೂರು ಮೂಲದ ಚಿನ್ನು ಪಾಪು (ರೇಶ್ಮಾ 24) ಕಾಸರಗೋಡು ನಗರ ಹೊರ ವಲಯದ ಉಳಿಯತ್ತಡ್ಕದ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಶ್ಮಾ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸೋಮವಾರ ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಈಕೆಯನ್ನು ಸ್ಥಳಿಯರು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಚಿನ್ನು ಪಾಪು ಎಂದೇ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಕಾಣಿಸಿಕೊಂಡು ಕಾಸರಗೋಡು ಭಾಷೆಯಲ್ಲೇ ಮಾತನಾಡಿ ಜನಪ್ರಿಯತೆ ಪಡೆದಿದ್ದ ಈಕೆಗೆ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ರೇಶ್ಮಾ ಈ ಮೊದಲೇ ವಿವಾಹಿತಳಾಗಿದ್ದು, ಒಂದು ಮಗುವನ್ನೂ ಹೊಂದಿದ್ದ ಈಕೆ ಪತಿಯಿಂದ ವಿಚ್ಛೇದಿತಳಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.ಸಾಮಾಜಿಕ ಜಾಲತಾಣದ ಪ್ರಭಾವೀ ವೇದಿಕೆಯಲ್ಲಿ ಕಾಣಿಸಿಕೊಂಡು ಅಪಾರ ವೀಕ್ಷಕರನ್ನು ಹೊಂದಿದ್ದ ಈಕೆಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಚ್ಚೇದನದಿಂದ ಮಾನಸಿಕ ಒತ್ತಡ ಅಥವಾ ಇನ್ಯಾವುದೇ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು…

Read More

ಕೋಟೆಕಾರ್; ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್ ಕರ್ನಾಟಕ ಮುಸ್ಲಿಂ ಜಮಾತ್ ಎಸ್ ವೈ ಎಸ್, ಎಸ್ಸೆಸ್ಸಫ್, ಜಂಟಿ ಆಶ್ರಯದಲ್ಲಿ ವಾರ್ಷಿಕ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮ ಸೋಮವಾರ ಸಂಜೆ 4-30 ಗಂಟೆಗೆ ಮಸೀದಿ ಯಲ್ಲಿ ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶಬೀರ್ ಅಶ್ ಅರಿ ಅಲ್ ಹಂದಾನಿ ಉದ್ಘಾಟನೆ ಮಾಡಿದರು. ಕೆ ಪಿ ಹುಸೈನ್ ಸಅದಿ ಕೆ.ಸಿ.ರೋಡ್ ಮುಖ್ಯ ಬಾಷಣ ಮಾಡಿದರು ಹುಸೈನಿಯಾ ದರ್ಸ್ ವಿಧ್ಯಾರ್ಥಿಗಳ ವಾರ್ಷಿಕ ಕಾರ್ಯಕ್ರಮ ಮಗ್ರಿಬ್ ನಮಾಝ್ ಬಳಿಕ ಜರಗಿತು ಮಸೀದಿಯಲ್ಲಿ ಖಿಳ್ರ್ ಮೌಲಿದ್ ಪಾರಾಯಣ ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಕೂರ್ ಸಅದಿ ಮುಹಧ್ಸಿನ್, ಮುಅಲ್ಲಿಂ ಫಾರೂಕ್ ಸಅದಿ ಕೊಮರಂಗಳ, ನೌಫಲ್ ಅಹ್ಸನಿ ಸದರ್ ಝುಬೈರ್ ಝುಹ್ರಿ, ಅಬ್ದುಲ್ ಕರೀಂ, ಬಶೀರ್ ಅಹ್ಸನಿ ತೋಡಾರ್ ಮಸೀದಿ ಉಪಾಧ್ಯಕ್ಷ ಕೆ ಎಮ್ ಅಬ್ದುಲ್ ಕಾದರ್, ಯು ಎಮ್ ಉಮರಬ್ಬ ಮಂಗಳೂರು ಹಾಗೂ ಇನ್ನಿತರ ಉಲಮಾ ಉಮರಾ ನೇತಾರರು ಉಪಸ್ಥಿತರಿದ್ದರು ಮಸೀದಿ ಕಾರ್ಯದರ್ಶಿ…

Read More

ಉಳ್ಳಾಲ: ಸಾರ್ವಜನಿಕ ದೂರುಗಳು ಹಾಗೂ ಅಪಘಾತಗಳ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಸ್ಥಳೀಯಾಡಳಿತದ ನೇತೃತ್ವದಲ್ಲಿ ತೊಕ್ಕೊಟ್ಟು ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯ ತೊಕ್ಕೊಟ್ಟುವಿನಿಂದ ಅಸೈಗೋಳಿವರೆಗೆ ಹೆದ್ದಾರಿ ಬದಿಯ ಗೂಡಂಗಡಿಗಳ ತೆರವು ಕರ‍್ಯಾಚರಣೆ ಸೋಮವಾರ ಬೆಳಗ್ಗಿನಿಂದ ಸಂಜೆಯವರೆಗೂ ಎರಡು ಜೆಸಿಬಿಗಳು ಹಾಗೂ 10 ಮಂದಿ ಕೆಲಸಗಾರರ ಮೂಲಕ ನಡೆಯಿತು. 50 ಕ್ಕೂ ಹೆಚ್ಚು ಗೂಡಂಗಡಿಗಳ ತೆರವು ಕರ‍್ಯಾಚರಣೆ ನಡೆಯಿತು. ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಫೆ.2 ರಂದು ಹೆದ್ದಾರಿ ಸಮೀಪದಲ್ಲಿ ಹಾಕಿರುವ ಗೂಡಂಗಡಿಗಳು, ಬೀದಿ ಬದಿ ವ್ಯಾಪಾರದ ಶೆಡ್ ಗಳಿಗೆ ತೆರವುಗೊಳಿಸಲು ಸ್ಟಿಕರ್ ಅಂಟಿಸಲಾಗಿತ್ತು. ಫೆ.5 ರ ಒಳಗೆ ತೆರವು ನಡೆಸುವಂತೆ ಸೂಚನೆ ನೀಡಲಾಗಿತ್ತು. ಬಳಿಕ ಎರಡು ದಿನಗಳ ಕಾಲ ಹೆಚ್ಚು ದಿನ ಮುಂದೂಡಿ ಇಂದು ತೆರವು ಕರ‍್ಯಾಚರಣೆಯನ್ನು ಕೈಗೊಳ್ಳಲಾಗಿತ್ತು. ತೊಕ್ಕೊಟ್ಟು, ಚೆಂಬುಗುಡ್ಡೆ, ಪಂಡಿತ್ ಹೌಸ್, ಕುತ್ತಾರು, ಯೆನೆಪೋಯ, ನಿತ್ಯಾನಂದನಗರ, ಕೆ.ಎಸ್ ಹೆಗ್ಡೆ, ದೇರಳಕಟ್ಟೆ, ಕಣಚೂರು, ನಾಟೆಕಲ್ , ಅಸೈಗೋಳಿವರೆಗೂ ಹೆದ್ದಾರಿಯ ಎರಡೂ ಇಕ್ಕೆಲಗಳಲ್ಲಿ ಇರಿಸಲಾದ ಅಂಗಡಿಗಳ ತೆರವು ಕರ‍್ಯಾಚರಣೆಯನ್ನು ನಡೆಸಲಾಯಿತು. ಉಳ್ಳಾಲ ನಗರಸಭೆ ವ್ಯಾಪ್ತಿಗಳಲ್ಲಿ…

Read More

ದೇರಳಕಟ್ಟೆ; ದೇರಳಕಟ್ಟೆಯ ದೆ ಮೆರ್ಸಿದೆ ಮಕ್ಕಳ ಆಶ್ರಮಕ್ಕೆ ಮಂಗಳೂರು ತಾಲೂಕು ಧ್ವನಿ ಮತ್ತು ಬೆಳಕು ಮಾಲಕರ ಸಂಘದ ವತಿಯಿಂದ ಸುಮಾರು ಒಂದು ಲಕ್ಷ ಐವತ್ತು ಸಾವಿರ ರೂ. ಮೌಲ್ಯದ 60 ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದೇ ಸಂದರ್ಭ ಸುಮಾರು 100 ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಸಿಸ್ಟರ್ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಲೂಸಿ ಪಿಂಟೊ ಅವರು ಮಾತನಾಡಿ, ಬಿಸಿಲ ಬೇಗೆಗೆ ಮಕ್ಕಳಿಗೆ ಕೊಂಚ ಸಮಸ್ಯೆಯಾಗುತ್ತಿತ್ತು. ಆದ್ರೆ ಇಂದು ತಣ್ಣಗಾಗುವ ನಿಟ್ಟಿನಲ್ಲಿ ಫ್ಯಾನ್‌ಗಳನ್ನು ಧ್ವನಿ ಮತ್ತು ಬೆಳಕು ಮಾಲಕರ ಸಂಘ ನೀಡಿದ್ದಾರೆ. ಇದರ ಜೊತೆಗೆ ಮಕ್ಕಳ ಹುಟ್ಟುಹಬ್ಬವನ್ನು ಸಿಹಿತಿಂಡಿಗಳನ್ನು ಹಂಚುವ ಮೂಲಕ ಆಚರಿಸಿಕೊಂಡಿದ್ದು, ಇವರ ಈ ಸೇವೆ ಇನ್ನಷ್ಟು ಮುಂದುವರೆಯಲಿ ಎಂದು ಶುಭಹಾರೈಸಿದ್ರು. ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಬೆನೆಟ್ ಡಿಸಿಲ್ವ ಅವರು ಮಾತನಾಡುತ್ತಾ, ಸಂಘದ ವತಿಯಿಂದ ಸುಮಾರು 60 ಫ್ಯಾನ್‌ಗಳನ್ನು ನೀಡಿದ್ದೇವೆ. ಇದರ ಜೊತೆಗೆ ಅಂದಾಜು 100 ಮಕ್ಕಳ ಹುಟ್ಟು ಹಬ್ಬವನ್ನು ಆಚರಿಸಿದ್ದು, ಊಟದ ವ್ಯವಸ್ಥೆಯನ್ನು…

Read More

ಉಳ್ಳಾಲ: ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗಿದೆ. ಪ್ರೀತಿ, ವಿಶ್ವಾಸ ಮತ್ತು ಏಕತೆಯಿಂದ ಮುಂದುವರಿದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯವಿದೆ. ಗ್ರಾಮಸ್ಥರಿಗೆ ಗೌರವ ಸಿಗಬೇಕಾದರೆ ಒಗ್ಗಟ್ಟಿನಿಂದ ಜೀವನ ಸಾಗಿಸುವುದು ಮುಖ್ಯವಾಗಿದ್ದು ಗ್ರಾಮದಲ್ಲಿರುವ ಕಟ್ಟಡಗಳು ಹಾಗೂ ಶ್ರೀಮಂತಿಕೆಯಿಂದ ಗೌರವ ನಿರೀಕ್ಷಿಸಲಾಗದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಪಾವೂರು ಗ್ರಾಮ ಪಂಚಾಯಿತಿಯ ನವೀಕೃತ ಕಟ್ಟಡ ‘ಗ್ರಾಮ ಸೌಧ’ ಶನಿವಾರ ಉದ್ಘಾಟಿಸಿ ಮಾತನಾಡಿದರು.ಗ್ರಾಮಸೌಧ ಕೇವಲ ಕಟ್ಟಡವಲ್ಲ, ಗ್ರಾಮದ ಹೃದಯ. ಕಟ್ಟಡ ನಿರ್ಮಾಣವಾದ ಕೂಡಲೇ ಗ್ರಾಮದ ಅಭಿವೃದ್ಧಿ ಅಥವಾ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಅಧಿಕಾರಿಗಳು ಹಾಗೂ ಆಡಳಿತ ವರ್ಗ ಒಟ್ಟಾಗಿ ತಂಡವಾಗಿ ಜನಸಾಮಾನ್ಯರ ಮನಸ್ಸಿಗೆ ನೋವಾಗದಂತೆ ಸೇವೆ ನೀಡುವ ಕಾರ್ಯ ಅಗತ್ಯ. ಇಲ್ಲೂ ಹೊರಜಿಲ್ಲೆಯವರು ಬಂಡವಾಳ ಹೂಡುವಂತಹ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಹೇಳಿದರು.ಪಂಚ ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ರಫೀಕ್ ಅಂಬ್ಲಮೊಗರು ಮಾತನಾಡಿ, ಪಾವೂರು ಗ್ರಾಮಕ್ಕೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲೇ ೧೪೩ ಅರ್ಜಿಗಳ ಪೈಕಿ ೧೦೩ ಫಲಾನುಭವಿಗಳಿಗೆ ಯೋಜನೆ ಲಭಿಸಿದ್ದು ೫.೫೦ಕೋಟಿ ರೂ. ಅನುದಾನ…

Read More