UN networks ಉಳ್ಳಾಲ: ಯೆನೆಪೆÇೀಯಾ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಸಹಯೋಗದೊಂದಿಗೆ ಯೆನೆಪೆÇೀಯಾ ಫೌಂಡೇಶನ್ (ಯೆನೆಪೆÇೀಯಾ ಮೊಯ್ದೀನ್ ಕುಂಞÂ ಸ್ಮರಣಾರ್ಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ (ನಿ.)ನ ಒಂದು ಘಟಕ] ವತಿಯಿಂದ ಪ್ರತಿ ವರ್ಷ ನೀಡಲ್ಪಡುವ ಎಎಸ್ಎಸ್ಎಲ್ಸಿ , ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಪುರಸ್ಕಾರಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ. 2019-20ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ / ಪಿಯುಸಿ ಮತ್ತು ಪದವಿ ಕೋರ್ಸುಗಳಲ್ಲಿ ಉತ್ತಮ ಸಾಧನೆ ಮಾಡಿದ ಅಭ್ಯರ್ಥಿಗಳಿಂದ ಶೈಕ್ಷಣಿಕ ಶ್ರೇಷ್ಠತೆಯ ಪ್ರಶಸ್ತಿ (ಅಕಾಡೆಮಿಕ್ಎಕ್ಸಲೆನ್ಸ್ ಅವಾಡ್ರ್ಸ್) – 2020 ಗೆ ಅರ್ಜಿ ಆಹ್ವಾನಿಸಲಾಗಿದೆ. ದ.ಕ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಈ ಪ್ರಶಸ್ತಿ ಪಡೆಯಬಹುದು. ಎಸ್ಎಸ್ಎಲ್ಸಿ/ ಪಿಯುಸಿಯಲ್ಲಿ ಶೇ.90 (ಸಿಜಿಪಿಎ 9.5) ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದವರು, ಪದವಿ ಕೋರ್ಸುಳಾದ ಬಿ.ಕಾಂ, ಬಿ.ಎಸ್ಸಿ, ಬಿಸಿಎ, ಬಿಬಿಎಂ ಮತ್ತು ಬಿಎಗಳಲ್ಲಿ ಶೇ.75 (ಸಿಜಿಪಿಎ 7.9) ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದವರು…
Author: UllalaVani
UN networks ಕೊಣಾಜೆ: ಕೊಣಾಜೆ ಬೊಳ್ಳೆಕುಮೇರು ನಿವಾಸಿ ಲಕ್ಷ್ಮಣ ಪೂಜಾರಿ ಅವರ ಪುತ್ರ ಧರಣೇಶ್ ಕೊಣಾಜೆ (39) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಇದ್ದರೂ ಛಲವಾದಿಯಾಗಿ ಯಶಸ್ವಿ ಛಾಯಾಗ್ರಾಹಕರಾಗಿ ಗುರುತಿಸಿಕೊಂಡಿದ್ದರು. ಅಸೌಖ್ಯವಿದ್ದರೂ ದುಡಿಯಲು ಅಸಾಧ್ಯ ಎಂದು ಭಾವಿಸದ ಧರಣೇಶ್, ಗಂಜಿಮಠ ಸ್ನೇಹಿತನ ಸ್ಟುಡಿಯೋದಲ್ಲಿ ಕ್ಯಾಮರಾ ತರಬೇತಿ ಪಡೆದುಕೊಂಡರು. ಬಳಿಕ ತಾನೋರ್ವ ಛಾಯಗ್ರಾಹಕನಾಗಬೇಕೆಂಬ ಹಂಬಲದಿಂದ ಕ್ಯಾಮರಾ ಖರೀದಿಸಿ ಛಾಯಗ್ರಾಹಕ ವೃತ್ತಿ ಯನ್ನು ಆರಂಭಿಸಿದವರು. 15 ವರ್ಷಗಳಿಂದ ಛಾಯಗ್ರಾಹಕನಾಗಿ ಹಲವು ಮದುವೆ, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳ ಫೋಟೋಗಳನ್ನು ಕ್ಲಿಕ್ಕಿಸಿದವರು. ಪ್ರತಿ ದಿನವೂ ಉತ್ಸಾಹದಿಂದಲೇ ಇರುತ್ತಿದ್ದ ವ್ಯಕ್ತಿ ಎಲ್ಲರಿಗೂ ಪರಿಚಿತರು. ಕೊಣಾಜೆ – ಸ್ಟೇಟ್ ಬ್ಯಾಂಕ್ ನಡುವೆ ಚಲಿಸುವ ಸುಷ್ಮಿತಾ ಬಸ್ಸಿನಲ್ಲಿ ಬೆಳಿಗ್ಗೆ ತೆರಳುವ ದಿನಚರಿ ಹೊಂದಿದ್ದ ಇವರು ಬಸ್ ನಿರ್ವಾಹಕ ನಾರಾಯಣ ಅವರ ಜತೆಗೆ ಸೇರಿಕೊಂಡು ಸದ್ದಿಲ್ಲದೆ ಅಶಕ್ತರಿಗೂ ಧನ ಸಂಗ್ರಹಿಸಿ ಸಹಾಯ ಮಾಡಿದವರು.
UN Networks ಕೋಟೆಕಾರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘವು 2019-2020 ನೇ ಸಾಲಿನಲ್ಲಿ 439.23 ಕೋಟಿರೂ. ಗಳ ವ್ಯವಹಾರವನ್ನು ನಡೆಸಿ 1.45ಕೋಟಿ ನಿವ್ವಳ ಲಾಭಾಂಶ ಗಳಿಸಿ ಪ್ರಗತಿ ಪ್ರಥದಲ್ಲಿ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿದರು. ಕೋಟೆಕಾರುಸಂಘದ ಪ್ರಧಾನ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 2019-20 ನೇ ಸಾಲಿನ ಅಂತ್ಯಕ್ಕೆ ಸಂಘವು “ಎ” ತರಗತಿಯ 7157 ಸದಸ್ಯರನ್ನು ಹೊಂದಿದ್ದು 2.09 ಕೋಟಿ ರೂಗಳ ಪಾಲು ಬಂಡವಾಳವನ್ನು ಹೊಂದಿರುತ್ತದೆ. ವರದಿ ವರ್ಷದಲ್ಲಿರೂ 211.04 ಕೋಟಿ ಠೇವಣಿ ಸಂಗ್ರಹಿಸಿ 202.08 ಕೋಟಿ ಠೇವಣಿಯನ್ನು ಪಾವತಿಸಿ, ವರ್ಷಾಂತ್ಯಕ್ಕೆ ರೂ 101.85 ಕೋಟಿ ಠೇವಣಿ ಹೊಂದಿರುತ್ತದೆ. ಠೇವಣಿ ಸಂಗ್ರಹದಲ್ಲಿಗುರಿ ವಿೂೀರಿದ ಸಾಧನೆಯನ್ನು ಮಾಡಿದೆ. ಕಳೆದ ವರ್ಷಾಂತ್ಯಕ್ಕೆ ಹೋಲಿಸಿದರೆ ಠೇವಣಿ ಸಂಗ್ರಹದಲ್ಲಿ 8.95 ಕೋಟಿ ರೂಗಳ ಪ್ರಗತಿಯನ್ನು ಸಾಧಿಸಲಾಗಿದೆ.ವರದಿ ಸಾಲಿನಲ್ಲಿ 110.74 ಕೋಟಿ ಸಾಲ ವಿತರಿಸಲಾಗಿದ್ದು, 103.57 ಕೋಟಿ ಸಾಲ ವಸೂಲಿಯಾಗಿದೆ. ವರ್ಷಾಂತ್ಯಕ್ಕೆ 72.72 ಕೋಟಿ ಹೊರ…
UN Networks ಉಳ್ಳಾಲ ನಗರದ ಸಭೆಯಿಂದ ದಿಢೀರ್ ರೈಡ್, ಹಲವು ಅಂಗಡಿಗಳಿಗೆ ಬೀಗಹಲವು ವರ್ಷಗಳಿಂದ ಲಕ್ಷಾಂತರ ರೂಪಾಯಿ ಬಾಡಿಗೆ ಕಟ್ಟದೆ ವ್ಯವಹಾರ ನಡೆಸುತ್ತಿದ್ದ ಅಂಗಡಿಗಳಿಗೆ ಗುರುವಾರ ನಗರಸಭೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಅತ್ಯಧಿಕ ಬಾಡಿಗೆ ಬಾಕಿಯಿದ್ದ ಅಂಗಡಿಗಳಿಗೆ ಬೀಗ ಜಡಿದಿದೆ. ಉಳ್ಳಾಲ ನಗರಸಭೆಯ ತೊಕ್ಕೊಟ್ಟಿನಲ್ಲಿರುವ ಕಟ್ಟಡದಲ್ಲಿ ಹೋಟೆಲ್, ಬಟ್ಟೆಯಂಗಡಿ, ಬೇಕರಿ, ಜೆರಾಕ್ಸ್, ಫಾಸ್ಟ್ ಫುಡ್ ಸಹಿತ 50 ಮಳಿಗೆಗಳಿದ್ದು, ಹಲವು ಮಳಿಗೆಗಳಿಂದ ಬಾಡಿಗೆ ಪಾವತಿಯಾಗದೆ ಹಲವು ತಿಂಗಳುಗಳೇ ಕಳೆದಿವೆ. ಐದು ಲಕ್ಷ ಬಾಡಿಗೆ ಬಾಕಿಯಿರುವ ಅಂಗಡಿಗಳೂ ಇವೆ. ಈ ಹಿನ್ನೆಲೆಯಲ್ಲಿ ಗುರುವಾರ ಪೌರಾಯುಕ್ತ ರಾಯಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಧಕ ಬಾಡಿಗೆ ಬಾಕಿಯಿದ್ದ ಅಂಗಡಿಗಳಿಗೆ ಬೀಗ ಜಡಿದರೆ, ಕೆಲವು ಅಂಗಡಿದಾರರಿಗೆ ಎರಡು ದಿನಗಳ ಸಮಯ ನಿಗದಿಪಡಿಸಿದ್ದಾರೆ. ಇದೇ ವೇಳೆ ನಗರಸಭೆಯ ಅಡಿಭಾಗದಲ್ಲಿರುವ ಮೂರು ಅಂಗಡಿಗಳಿಗೂ ಬೀಗ ಜಡಿದಿದ್ದಾರೆ.ಕೌನ್ಸಿಲರ್ ನಿಂದಲೂ ಬಾಕಿ!ದಾಳಿ ಸಂದರ್ಭ ಕೌನ್ಸಿಲರ್ ಭಾರತಿ ಅವರ ಅಂಗಡಿಯಿಂದಲೂ 30 ಸಾವಿರ ರೂಪಾಯಿ ಬಾಡಿಗೆ ಬಾಕಿಯಿರುವುದು ಕಂಡು ಬಂದಿದೆ.…
UN networks ಕೊಣಾಜೆ: ಖ್ಯಾತ ಜ್ಯೋತಿಷಿ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಸುಟ್ಟ ದಿ. ರಾಮ ಪಂಡಿತ ಅವರ ಪುತ್ರ, ಖ್ಯಾತ ಆಯುರ್ವೇದ ತಜ್ಞ ಡಾ. ಎಸ್. ಎಸ್. ರಾಮ್ ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಕೈರಂಗಳ ದುಗ್ಗಜ್ಜರಕಟ್ಟೆಯಲ್ಲಿ ನಾಲ್ಕು ದಶಕಗಳಿಂದ ಕ್ಲಿನಿಕ್ ತೆರೆದು ತನ್ನ ಕೈಗುಣದಿಂದಲೇ ಅತ್ಯುತ್ತಮ ವೈದ್ಯರೆಂದು ಜನಾನುರಾಗಿಯಾಗಿದ್ದರು. ಕೈರಂಗಳ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘದ ಅಧ್ಯಕ್ಷರಾಗಿ, ಗೋಪಾಲಕೃಷ್ಣ ದೇವಸ್ಥಾನ ಹಾಗೂ ಭಜನ ಮಂದಿರದ ಗೌರವ ಸಲಹೆಗಾರರಾಗಿ ಕೈರಂಗಳ ಶ್ರೀ ಕೃಷ್ಣ ಗೇಮ್ಸ್ ಕ್ಲಬ್ನಲ್ಲೂ ಸಕ್ರಿಯರಾಗಿದ್ದರು. ನಡಿನ ಬಹಳಷ್ಟು ದೈವ ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೊಡುಗೈ ದಾನಿಯಾಗಿದ್ದರು. ನರಿಂಗಾನ ಮರಕಟ್ಟ ಶ್ರೀ ಮಲರಾಯ ದೈವಸ್ಥಾನದಲ್ಲಿ ಕುಟುಂಬದಿAದ ಬಂದಿದ್ದ ದೈವೀ ಸೇವೆಯನ್ನು ನಿರಂತರ ಮಾಡುತ್ತಾ ಬಂದಿದ್ದರು. ನಾಟಕ ಕಲಾವಿದರಾಗಿ ಬಯ್ಯಮಲ್ಲಿಗೆ, ಜೇನಿನಗೂಡು, ಕರ್ದಬ್ಬ ತನ್ನಿಮಾನಿಗ, ಸೂರ್ಯಕಾಂತಿ, ಗಂಗಾರಾಮ್ ಮೊದಲಾದ ನಾಟಕದಲ್ಲಿ ಅತ್ಯುತ್ತಮ ಅಭಿನಯ ನೀಡಿದ್ದರು. ಯಕ್ಷಗಾನಗಳಲ್ಲೂ ಸಣ್ಣಪುಟ್ಟ ವೇಷ ಧರಿಸಿದ್ದರು.…
UN networks ಉಳ್ಳಾಲ: ಮನೆ ಆವರಣದಲ್ಲಿ ನಿಲ್ಲಿಸಲಾದ ಬೈಕ್ ನ್ನು ಕಳ್ಳರು ಕಳವು ನಡೆಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ಉಳ್ಳಾಲ ಠಾಣಾ ವ್ಯಾಪ್ತಿಯ ನಡಾರು ಬಳಿ ನಡೆದಿದ್ದು, ಕೆಲ ದಿನಗಳ ಅಂತರದಲ್ಲಿ ಮನೆ ಎದುರುಗಡೆ ನಿಲ್ಲಿಸಲಾದ ಬೈಕನ್ನು ಕಳವು ನಡೆಸಿರುವ ಎರಡನೇ ಪ್ರಕರಣವಾದರೂ ಉಳ್ಳಾಲ ಠಾಣಾ ಪೊಲೀಸರಿಗೆ ಈವರೆಗೆ ಕಳ್ಳರ ಪತ್ತೆ ಅಸಾಧ್ಯವಾಗಿದೆ. ದೇರಳಕಟ್ಟೆ ನಡಾರು ಬಳಿಯ ನಿಶಾಂತ್ ಎಂಬವರಿಗೆ ಸೇರಿದ ಸಿಲ್ವರ್ ಬಣ್ಣದ ರಾಯಲ್ ಎನ್ಫೀಲ್ಡ್ ಬುಲೆಟ್ ವಾಹನ ಕಳವು ನಡೆದಿದೆ. ಮನೆ ಎದುರುಗಡೆ ಡಿ.16 ರ ಬುಧವಾರ ರಾತ್ರಿ ಬೈಕ್ ನಿಲ್ಲಿಸಲಾಗಿತ್ತು. ಇಂದು ಬೆಳಿಗ್ಗೆ ಬುಲೆಟ್ ಕಳವಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಗೆ ನಿಶಾಂತ್ ಅವರು ದೂರು ಸಲ್ಲಿಸಿದ್ದಾರೆ. ಎರಡು ದಿನಗಳಲ್ಲಿ ಪ್ರಕರಣ ದಾಖಲಿಸುವ ಕುರಿತು ಪೊಲೀಸರು ತಿಳಿಸಿದ್ದಾರೆ.ಕೆಲ ದಿನಗಳ ಅಂತರದಲ್ಲಿ ಇದು ಎರಡನೇ ಕಳವು ಪ್ರಕರಣವಾಗಿದೆ. ಕೊಲ್ಯ ಮನೆ ಎದುರುಗಡೆ ನಿಲ್ಲಿಸಲಾಗಿದ್ದ ಬೈಕನ್ನು ಕಳ್ಳರಿಬ್ಬರು ಕಳವು ನಡೆಸಿ ದಿನಗಳೇ ಕಳೆದಿವೆ. ಈ ಕುರಿತು ಕಳ್ಳರಿಬ್ಬರ…
UN networks ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣೆಯಲ್ಲಿರುವ ಹಳೇಯ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಹರಾಜು ಪ್ರಕ್ರಿಯೆ ನಡೆಯಲಿದೆ. ಪೊಲೀಸ್ ಠಾಣಾ ಪ್ರಕರಣಗಳಿಗೆ ಸಂಬಂಧಪಟ್ಟ 16 ಹಳೇಯ ದ್ವಿಚಕ್ರ ,3 ಹಳೇಯ ಕಾರುಗಳು ಮತ್ತು 2 ಹಳೆಯ ಆಟೋ ರಿಕ್ಷಾ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಡಿ.24 ರಂದು ಬೆಳಿಗ್ಗೆ 11 ಕ್ಕೆ ಉಳ್ಳಾಲ ಪೊಲೀಸ್ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
UN networks ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ66ರ ಕೋಟೆಕಾರು ಪೆಟ್ರೋಲ್ ಪಂಪ್ ಬಳಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋಟೆಕಾರ್ ನಿವಾಸಿ ಜಾನಿ(60) ಮೃತಪಟ್ಟ ಪಾದಾಚಾರಿಯಾಗಿದ್ದು, ಕೊಟೆಕಾರ್ ಪೆಟ್ರೋಲ್ ಪಂಪ್ ನ ಹತ್ತಿರ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಹೋಗುವ ರಸ್ತೆಯ ರಾಷ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಂಚರಿಸುತ್ತಿದ್ದ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತದಿಂದ ಜಾನಿಯವರು ಡಾಂಬರ್ ರಸ್ತೆಗೆ ಬಿದ್ದು ಅವರ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದು ಸ್ಥಳೀಯರು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ್ದು, ದಕ್ಷಿಣ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಕಾರು ಚಾಲಕ ಮಹಮ್ಮದ್ ಸಫ್ವಾನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಉಳ್ಳಾಲ : ಮಂಗಳೂರು ಕ್ಷೇತ್ರದ 19 ಗ್ರಾ.ಪಂ ಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ನಗರದಲ್ಲಿರುವ ವ್ಯವಸ್ಥೆಯನ್ನು ಗ್ರಾಮೀಣ ಮಟ್ಟಕ್ಕೂ ತಲುಪಿಸಿದ್ದೇವೆ. ರಸ್ತೆ ವ್ಯವಸ್ಥೆ, ಕುಡಿಯುವ ನೀರು, ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭ, ಸಾರಿಗೆ ವ್ಯವಸ್ಥೆ, ನಗರ ಮಟ್ಟದ ಸವಲತ್ತುಗಳು ಎಲ್ಲವನ್ನೂ ಉಳ್ಳಾಲ ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಪ್ರತಿ ಮತದಾರ ಕಾಂಗ್ರೆಸ್ ಅನ್ನು ಬೆಂಬಲಿಸಲಿದ್ದಾನೆ ಎಂದು ಮಂಗಳೂರು ಕ್ಷೇತ್ರ ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ತೊಕ್ಕೊಟ್ಟು ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯ ಲ್ಲಿ ಮಾಹಿತಿ ನೀಡಿದ ಅವರು ಉಳ್ಳಾಲವನ್ನು ತಾಲೂಕಾಗಿ ಮಾರ್ಪಾಡು ಮಾಡಲಾಗಿದೆ. ಪ್ರತಿ ಗ್ರಾಮದಲ್ಲಿ ಸಹೋದರತೆ, ಪ್ರೀತಿ ವಿಶ್ವಾಸ ವಾತಾವರಣ ಸೃಷ್ಟಿಸುವುದು ಕಾಂಗ್ರೆಸ್ ಉದ್ದೇಶ. ಇದನ್ನು ಕಾಂಗ್ರೆಸ್ ನಿರ್ಮಿಸಿದೆ. ಬಿಜೆಪಿ ಆಡಳಿತದಲ್ಲಿ ಗ್ರಾಮೀಣ ಮಟ್ಟದಲ್ಲಿ ಜನ ಜೀವಿಸಲು ಯಾವುದೇ ಕಾರ್ಯಕ್ರಮವನ್ನು ಅನುಷ್ಠಾನ ಮಾಡಿಲ್ಲ. ರೇಷನ್, ಪೆನ್ಶನ್, ಸಂಧ್ಯಾ ಸುರಕ್ಷೆ ಎಲ್ಲಾ ಸವಲತ್ತುಗಳನ್ನು ನಿಲ್ಲಿಸಿದ್ದಾರೆ. ಪೆಟ್ರೋಲ್ ರೂ.100 ಕ್ಕೆ ಮುಟ್ಟುವ ಹಂತಕ್ಕೆ ತಲುಪಿದೆ. ಸರಕಾರಿ ಸಂಸ್ಥೆಗಳನ್ನು…
ಉಳ್ಳಾಲ: ಮಂಗಳೂರು ವಿಧಾನಸಬಾ ಕ್ಷೇತ್ರದ 19 ಗ್ರಾಮ ಪಂಚಾಯತ್ಗಳ 332 ಸ್ಥಾನಗಳಲ್ಲಿ 278 ಭಾರತೀಯ ಜನತಾ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 180ಕ್ಕೂ ಹೆಚ್ಚು ಅಭ್ಯರ್ಥಿಗಳು ಜಯಗಳಿಸಲಿದ್ದು, 12ರಿಂದ 15 ಪಂಚಾಯತ್ಗಳಲ್ಲಿ ಬಿಜೆಪಿ ಬೆಂಬಲಿತ ಆಡಳಿತ ಬರಲಿದೆ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ ಪಂಡಿತ್ಹೌಸ್ ತಿಳಿಸಿದರು. ತೊಕ್ಕೊಟ್ಟು ಕಾಪಿಕಾಡ್ನ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು ಈ ಬಾರಿ ನಮಗೆ ಯಾವುದೇ ಆತಂಕವಿಲ್ಲ. ಗ್ರಾಮ ಮಟ್ಟದಲ್ಲಿ ಹೆಚ್ಚಿನ ಅನುದಾನವನ್ನು ನೀಡಿದ್ದೇವೆ. ಕೋವಿಡ್ 19 ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತೀ ಮನೆ ಮನೆಗೆ ತೆರಳಿ ಅವರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಅಲ್ಪ ಸಂಖ್ಯಾತರು ಬಿಜೆಪಿಯನ್ನು ಬೆಂಬಲಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧೆಯಲ್ಲಿದ್ದಾರೆ. ಪಕ್ಷದಿಂದ ಆಭ್ಯರ್ಥಿಗಳಾಗಲು ಹೆಚ್ಚು ಮಂದಿ ಮುಂದೆ ಬಂದಿದ್ದಾರೆ ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ನಲ್ಲಿ ಬಿಜೆಪಿ ಮೇಲಗೈ ಸಾ„ಸುವುದು ಸಿದ್ಧ ಎಂದ ಅವರು ಕಳೆದ ಅ„ಕಾರ ಅವ„ಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ 6 ಗ್ರಾಮ ಪಂಚಾಯತ್ನಲ್ಲಿ ಆಡಳಿತ ನಡೆಸುತ್ತಿದ್ದು,…

