Author: UllalaVani

Kannada News From Coastal Karnataka

ಮಂಗಳೂರು: ಲಷ್ಕರ್ ಇ ತೊಯ್ಬಾ ಮತ್ತು ತಾಲಿಬಾನ್ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ರೀತಿಯಲ್ಲಿ ರಸ್ತೆಬದಿ ಗೋಡೆ ಮೇಲೆ ಗೀಚುಬರಹ ಕದ್ರಿಯಲ್ಲಿ ಶುಕ್ರವಾರ ಕಂಡುಬಂದು ಭಾರಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಅದೇ ಬರಹಕ್ಕೆ ಸಡ್ಡು ಹೊಡೆಯುವ ಮತ್ತೊಂದು ಎಡಿಟೆಡ್ ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನಗರದ ಕದ್ರಿಯ ಅಪಾರ್ಟ್ ಮೆಂಟ್ ಒಂದರ ಕಂಪೌಂಡ್ ಮೇಲೆ ಯಾರೋ ಕಿಡಿಗೇಡಿಗಳು ಉಗ್ರ ಸಂಘಟನೆಗಳು ಪರ ಗೋಡೆ ಬರಹವು ಶುಕ್ರವಾರ ಬೆಳಕಿಗೆ ಬಂದಿತ್ತು.ಹ್ಯಾಶ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಎಂದು ಬರೆದು ಇಂಗ್ಲಿಷ್ ನಲ್ಲಿ Do not force us to invite Lashkare-Toiba and Taliban to deal with Sanghis and Manvedis’ ಎಂದು ಬರೆದ ಬೆನ್ನಲ್ಲೇ ಇದೀಗ ಅದನ್ನೇ ಹೋಲುವ ಮತ್ತೊಂದು ಎಡಿಟೆಡ್ ಬರಹ ಹರಿದಾಡುತ್ತಿದ್ದು ‘ invite ಯಾರನ್ನು ಬೇಕಾದ್ರೂ ಮಾಡಿ ನಾವೇನು ಅಂಗನವಾಡಿ ಸಜ್ಜಿಗೆ ತಿನ್ನುತ್ತಾ ಕುಳಿತುಕೊಳ್ಳೇವಾ? ಇದು modi fied India # Indian army’…

Read More

ಉಳ್ಳಾಲ: ನೀರಿನ ಟ್ಯಾಂಕ್ ಪರಿಶೀಲನೆಗೆ ತೆರಳಿದ ಕಾರ್ಮಿಕ ಬಹುಮಹಡಿ ಕಟ್ಟಡದ ಮೇಲಿನಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ಯಾರೀಸ್ ಜಂಕ್ಷನ್ ನಲ್ಲಿ ಇಂದು ತಡರಾತ್ರಿ ವೇಳೆ ಸಂಭವಿಸಿದೆ. ಚೆಂಬುಗುಡ್ಡೆ ನಿವಾಸಿ ಮುತ್ತು(45) ಸಾವನ್ನಪ್ಪಿದವರು. ಇನ್ ಲ್ಯಾಂಡ್ ಕಟ್ಟಡದಲ್ಲಿ ದುರ್ಘಟನೆ ಸಂಭವಿಸಿದೆ. ನೀರಿನ ಟ್ಯಾಂಕ್ ಪರಿಶೀಲನೆಗೆಂದು ತೆರಳಿದಾಗ ಕಾಲು ಜಾರಿ ಕೆಳಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ: ಕೊರೊನಾ ಸಂಬಂಧ ಆಸ್ಪತ್ರೆಯಲ್ಲಿ ಹಣ ಕೊಡುತ್ತಿರುವುದಾಗಿ ಮಹಿಳೆಯೋರ್ವರನ್ನು ನಂಬಿಸಿ ಯುವಕನೋರ್ವ 60,000 ರೂ ಮೌಲ್ಯದ ಕರಿಮಣಿ ಸರ ಮತ್ತು 20,000 ರೂ . ನಗದು ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 30-35 ಹರೆಯದ ರಾಕೇಶ್ ಎಂಬ ಹೆಸರಿನಲ್ಲಿ ಯುವಕ ವಂಚಿಸಿದ್ದಾನೆ. ನ.20 ರಂದು ತೊಕ್ಕೊಟ್ಟು ಒಳಪೇಟೆಯ ನ್ಯಾಯಬೆಲೆ ಅಂಗಡಿ ಸಮೀಪ ನಿಂತಿದ್ದ ಮಹಿಳೆಯನ್ನು ತನ್ನನ್ನು ಬ್ಯಾಂಕ್ ಸಿಬ್ಬಂದಿಯೆಂದು ರಾಕೇಶ್ ಪರಿಚಯ ಮಾಡಿಕೊಂಡಿದ್ದ. ಕೊರೊನಾ ಸಂಬಂಧ ಆಸ್ಪತ್ರೆಗಳಲ್ಲಿ ರೂ. 2 ಲಕ್ಷ ಹಣ ನೀಡಲಾಗುತ್ತಿದ್ದು, ಅದನ್ನು ವಾಪಸ್ಸು ಕಟ್ಟಲು ಇರುವುದಿಲ್ಲ. ಈ ದಿನವೇ ಹಣ ಸಿಗುತ್ತದೆ ಎಂದು ನಂಬಿಸಿ ರಿಕ್ಷಾದಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ವೈದ್ಯರಿಗೆ ನೀಡಲು ರೂ.20,000 ಹಾಗೂ ಹೆಚ್ಚುವರಿಯಾಗಿ ನೀಡಲು ಮಹಿಳೆ ಬಳಿ ಚಿನ್ನವನ್ನು ಕೇಳಿದ್ದ. ಅದರಂತೆ ಮಹಿಳೆಯು 4 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ನೀಡಿದ್ದಾರೆ. ಅದಕ್ಕೆ ಬದಲಾಗಿ ತನ್ನ ತಾಯಿಯ ಚಿನ್ನದ ಸರ ಇರುವುದಾಗಿ…

Read More

UN netowrks ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ಚಾಕಲೇಟ್ ನೀಡಿ ಮಕ್ಕಳ ಅಪಹರಣಾಗುತ್ತಿದೆ ಅನ್ನುವ ಎಚ್ಚರಿಕೆಯ ಸಂದೇಶ ವೈರಲ್ ಆಗುತ್ತಿದ್ದು, ಈ ಕುರಿತು ಮಾಹಿತಿ ನೀಡಿರುವ ಉಳ್ಳಾಲ ಠಾಣಾಧಿಕಾರಿ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಮಕ್ಕಳ ಅಪಹರಣವಾಗಿಲ್ಲ, ಸುಳ್ಳು ಮಾಹಿತಿಯ ಸಂದೇಶ ವೈರಲ್ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.ವರ್ಷದ ಹಿಂದೆ ಇದೇ ರೀತಿಯ ವೈರಲ್ ಸಂದೇಶ ಹೊರಜಿಲ್ಲೆಯೊಂದರಲ್ಲಿ ಹರಿದಾಡಿದ್ದು, ಊರಿನ ಜನ ತಪ್ಪಾಗಿ ಭಾವಿಸಿ ವಿಹಾರಕ್ಕೆ ಬಂದ ಟೆಕ್ಕಿಗಳು ಮಕ್ಕಳಿಗೆ ಚಾಕಲೇಟ್ ನೀಡುವ ಸಂದರ್ಭ ಅವರಿಗೆ ಹಲ್ಲೆ ನಡೆಸಿ ಹೈದರಾಬಾದ್ ಮೂಲದ ಟೆಕ್ಕಿ ಓರ್ವನನ್ನು ಹತ್ಯೆ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ಜಾಗೃತೆ ವಹಿಸಿರುವ ಠಾಣಾಧಿಕಾರಿ ಸಂದೀಪ್ ವಾಟ್ಸ್ಯಾಪ್ ಸಂದೇಶದ ಸುಳ್ಳು ಮಾಹಿತಿ. ಮಕ್ಕಳ ಅಪಹರಣದ ಕುರಿತ ಯಾವುದೇ ಪ್ರಕರಣಗಳು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

Read More

UN networks ಉಳ್ಳಾಲ: ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿಯಾದರೂ ಪಾಕಿಸ್ತಾನ ಏಜೆಂಟರಾಗಿರುವ ಕಲ್ಲಡ್ಕ ಭಟ್ ವಿರುದ್ಧ ಎಫ್ ಐಆರ್ ದಾಖಲಿಸುವುದು ಖಚಿತ. ದಾವೆಗೆ ಎಷ್ಟು ಖರ್ಚಾದರೂ ಉಳ್ಳಾಲದ ಜನ ಸಿದ್ಧರಿದ್ದಾರೆ ಎಂದು ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹೇಳಿದರು. ಅವರು ಉಳ್ಳಾಲ ಪ್ರದೇಶವನ್ನು ಪಾಕಿಸ್ತಾನ ಎಂದು ಹೇಳಿ ಅವಮಾನಗೊಳಿಸಿದ ದೇಶವಿರೋಧಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಾಸ್ತಿಕಟ್ಟೆ ಜಂಕ್ಷನ್ ನಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ನಕಲಿ ಜಾತ್ಯಾತೀತ ಮುಖವಾಡದವರ ಪೆÇ್ರೀತ್ಸಾಹ ದಿಂದ ಕಲ್ಲಡ್ಕ ಭಟ್ ನಿರಂತರವಾಗಿ ಅಶಾಂತಿ ಸೃಷ್ಟಿಸುವ ಮಾತುಗಳನ್ನಾಡುತ್ತಿದ್ದಾರೆ. ಉಳ್ಳಾಲ ಪಾಕಿಸ್ತಾನ ಎಂದ ಭಟ್ ವಿರುದ್ಧವೇ ಸ್ವಕ್ಷೇತ್ರದ ಶಾಸಕರಿಗೆ ಪೆÇಲೀಸ್ ಇಲಾಖೆಯಲ್ಲಿ ದೂರು ನೀಡಲು ಅಸಾಧ್ಯವಾಗಿದೆ. ಜಾತ್ಯಾತೀತ ಮುಖವಾಡ ತೋರಿಸಿಕೊಂಡು ಕೋಮುವಾದವನ್ನು ಶಾಸಕರು ವಿರೋಧಿಸುತ್ತಿಲ್ಲ. ಭಟ್ ವಿರುದ್ಧ ಪ್ರಕರಣ ದಾಖಲಿಸದ ಪೆÇಲೀಸರು ಐಪಿಸಿ ಸೆಕ್ಷನ್ ಅನ್ನು ಮತ್ತೆ ಅಧ್ಯಯನ ಮಾಡುವ ಅನಿವಾರ್ಯತೆ ಇದೆ.ಬಾಬರಿ…

Read More

UN networks ಉಳ್ಳಾಲ: ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲಿದೆ. ಈಗಾಗಲೇ ಪ್ರಭಾಕರ್ ಭಟ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಸ್.ಡಿ.ಪಿ.ಐ ದೂರು ದಾಖಲಿಸಿತ್ತು. ಆದರೆ ಪೊಲೀಸರು ಪ್ರಕರಣವನ್ನು ದಾಖಲಿಸಿರಲಿಲ್ಲ. ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಗಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ಇಂದು ಸಂಜೆ 4.00 ಗಂಟೆಗೆ ಪಕ್ಷದ ವತಿಯಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಉಳ್ಳಾಲ ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಬ್ಬಾಸ್ ಕಿನ್ಯ ತಿಳಿಸಿದ್ದಾರೆ. ನವೆಂಬರ್ 1ರಂದು ಕಿನ್ಯದ ಕೇಶವ ಶಿಶು ಮಂದಿರ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಉಳ್ಳಾಲವನ್ನು ಪಾಕಿಸ್ತಾನವೆಂದು ಕರೆದಿದ್ದರು. ಬಿಗಿ ಬಂದೋಬಸ್ತ್ಪ್ರತಿಭಟನೆ ಸಂದರ್ಭ ಅಹಿತಕರ ಘಟನೆಗಳು ನಡೆಯಂತೆ ಉಳ್ಳಾಲ ಠಾಣಾ ಎದುರುಗಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Read More

UN networks ಉಳ್ಳಾಲ: ಒಂದೂವರೆ ವರ್ಷದ ಹಿಂದೆ ಹಿಂದೂ ಸಂಘಟನೆಗಳಿಂದ ಪಜೀರು ಗೋವನಿತಾ ಆಶ್ರಮಕ್ಕೆ ಸೇರಿಸಿದ್ದ ವಿಧವೆ ಮಹಿಳೆ ಮತ್ತೆ ಹಳೇಯ ಪ್ರಿಯಕರನ ಜತೆಗೆ ಉಳ್ಳಾಲದಲ್ಲಿ ಪತ್ತೆಯಾಗಿದ್ದಾಳೆ.ಅಡ್ಯಾರುಪದವಿನಲ್ಲಿದ್ದ ವಿಧವೆ ಮಹಿಳೆಗೆ ಎರಡು ವರ್ಷಗಳ ಹಿಂದೆ ಉಳ್ಳಾಲದ ಶೌಕತ್ ಎಂಬಾತನ ಜತೆಗೆ ಪ್ರೇಮವಿತ್ತು. ಒಂದೂವರೆ ವರ್ಷದ ಹಿಂದೆ ಜತೆಯಾಗಿ ವಾಮಂಜೂರಿನಲ್ಲಿದ್ದ ಶೌಕತ್ ಮತ್ತು ಮಹಿಳೆಯನ್ನು ಒಂದೂವರೆ ವರ್ಷದ ಹಿಂದೆ ಹಿಂದೂ ಸಂಘಟಕರು ಬೇರೆ ಮಾಡಿಸಿ, ಪಜೀರು ಗೋವನಿತಾಶ್ರಮಕ್ಕೆ ಒಪ್ಪಿಸಿದ್ದರು. ವಿಧವೆ ಮಹಿಳೆ ಆಶ್ರಮದಲ್ಲಿದ್ದು ಮತ್ತೆ ಶೌಕತ್ ಸಂಪರ್ಕದಲ್ಲಿದ್ದಳು. ನ.2 ರಂದು ಮಹಿಳೆ ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಗೋವನಿತಾಶ್ರಮ ಸಮಿತಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಕೊಣಾಜೆ ಠಾಣಾ ಅಪರಾಧ ವಿಭಾಗದ ಎಸ್. ಐ ಶರಣಪ್ಪ ನೇತೃತ್ವದ ತಂಡ ಮತ್ತೆ ಮಹಿಳೆಯನ್ನು ಶೌಕತ್ ಮನೆಯಲ್ಲೇ ಪತ್ತೆಹಚ್ಚಿದ್ದಾರೆ. ಇಬ್ಬರು ವಯಸ್ಕರಾಗಿದ್ದು, ಸ್ವ ಇಚ್ಛೆಯಿಂದ ತೆರಳಿರುವುದರಿಂದ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.ಶೌಕತ್ ವಿವಾಹಿತನಾಗಿದ್ದು, ಓರ್ವ ಮಗಳಿದ್ದಾಳೆ.

Read More

UN networks ದೆಹಲಿ: ಕೆಂಪು ಕೋಟೆ ದೆಹಲಿಯಲ್ಲಿ ಕೊರೋನ ಅಟ್ಟಹಾಸ ಮತ್ತೊಮ್ಮೆ ಶುರುವಾಗಿದೆ. ಈಗಾಗಲೇ ಕೊರೋನದಿಂದ ಭಾರಿ ಸಾವು ನೋವು ಪ್ರಕರಣಗಳು ಹೆಚ್ಚಾಗುತ್ತಿದ್ದು ಆತಂಕ ಆರಂಭವಾಗಿದೆ. ಕೆಲ ದಿನಗಳ ಹಿಂದೆ ಸೋಂಕಿನ‌ಪ್ರಮಾಣ ಕಡಿಮೆಯಾಗಿದ್ದು ಎರಡು ಬಾರಿ ಪ್ರಕರಣ ಕಡಿಮೆಯಾಗಿ ಇದೀಗ ಹೆಚ್ಚಾಗುತ್ತಿದ್ದಂತೆ ಜನರಿಗೆ ನಡುಕ ಶುರುವಾಗಿದೆ. ಒಂದೇ ದಿನ 7178 ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ ಕೊರೊನಾ ಸೋಂಕು ಆರಂಭವಾದಾಗಿನಿಂದ ಒಂದೇ ದಿನ ಇಷ್ಟೊಂದು ಪ್ರಮಾಣದ ಸೋಂಕಿತರು ಪತ್ತೆಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿತರ ಸಂಖ್ಯೆ 7 ಸಾವಿರ ದಾಟಿದೆ.ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಿತ್ಯ 6 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿದ್ದವು. ನವೆಂಬರ್ 4 ರಂದು 6842 ಪ್ರಕರಣಗಳು ಪತ್ತೆಯಾಗಿತ್ತು.ದೆಹಲಿಯಲ್ಲಿ ಈಗ ಒಟ್ಟು 4,23,831 ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 64 ಮಂದಿ ಸಾವನ್ನಪ್ಪಿದ್ದಾರೆ. ಶೇ.89ರಷ್ಟು ಚೇತರಿಕೆ ಕಂಡಿದ್ದಾರೆ. ಚಳಿಗಾಲದಲ್ಲಿ ವಾಯುಗುಣಮಟ್ಟ ಕುಸಿಯಲಿದ್ದು, ಇದು ಕೊರೊನಾ ಸೋಂಕಿತರಿಗೆ ಮತ್ತಷ್ಟು ಅಪಾಯವನ್ನುಂಟು ಮಾಡಲಿದೆ.ಇದರಿಂದ ಉಸಿರಾಟ ಸಮಸ್ಯೆಯೂ ಹೆಚ್ಚಾಗಲಿದೆ. ದೆಹಲಿ ಭಾರತದ ಕೊರೊನಾ ರಾಜಧಾನಿಯಾಗಲು…

Read More

UN networks ಕೊಣಾಜೆ: ಇಲ್ಲಿನ ಠಾಣಾ ವ್ಯಾಪ್ತಿಯ ಬಗಂಬಿಲ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ‌ ಪೊಲೀಸರ ತಂಡ ದೇರಳಕಟ್ಟೆ ಯಿಂದ ಬಂಧಿಸಿದ್ದಾರೆ. ಕೇರಳ ಮೂಲದ ಸುಲ್ತಾನ್ (28) ಬಂಧಿತ. ದೇರಳಕಟ್ಟೆಯಲ್ಲಿರುವ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ಈತ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದಾನೆ.ನಿನ್ನೆ ಸಂಜೆ ಕೆಲಸಬಮುಗಿಸಿ ಮನೆವಕಡೆಗೆ ತೆರಳುತ್ತಿದ್ದ ನಿಶಾ ಎಂಬವರ ಕುತ್ತಿಗೆಯಿಂದ ಒಂದು ಪವನ್ ಬೆಲೆಬಾಳುವ ಚಿನ್ನದ ಸರವನ್ನು ಬುಲೆಟ್ ಬೈಕಿನಲ್ಲಿ ಬಂದ ಆರೋಪಿ ಸುಲ್ತಾನ್ ಕಳವು ನಡೆಸಿದ್ದ. ಈತನ ಕಳವು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಅಲ್ಲಲ್ಲಿ ಬಂದೋಬಸ್ತ್ ನಡೆಸಿ ತಪಾಸಣೆ ಆರಂಭಿಸಿದ್ದರು. ಕೊಣಾಜೆ ಠಾಣಾ ಕ್ರೈಂ ತಂಡದ ಸಹಕಾರವನ್ನು ಪಡೆದು ತಪಾಸಣೆ ಆರಂಭಿಸಿದಾಗ ಸಿಸಿಟಿವಿಯಲ್ಲಿ ಸೆರೆಸಿಕ್ಕ ಬುಲೆಟ್ ಮತ್ತು ಆರೋಪಿಯ ಟೀಶಟ್ ೯ ಆಧಾರದಲ್ಲಿ, ಆರೋಪಿ ಬಾರ್ ಒಳಗಡೆ ಪ್ರವೇಶಿಸುತ್ತಿದ್ದಂತೆ ಸೆರೆ ಹಿಡಿದು ಬಂಧಿಸಿದ್ದಾರೆ. ಯುವತಿ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದ ಸಂದರ್ಭದಲ್ಲೇ ಆರೋಪಿಯನ್ನು ಸೆರೆ…

Read More

ಕೋಟೆಕಾರು: ಕಳೆದ ಎರಡು ವರ್ಷಗಳಿಂದ ಅಧ್ಯಕ್ಷರಿಲ್ಲದ ಕೋಟೆಕಾರು ಪಟ್ಟಣ ಪಂಚಾಯತಿಗೆ ಇಂದು ಅಧ್ಯಕ್ಷರ ಭಾಗ್ಯ ದೊರೆತಿದೆ. ಬಿಜೆಪಿಯ ಜಯಶ್ರೀ ಫ್ರಫುಲ್ಲಾ ದಾಸ್ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮೀಸಲಾತಿಗೆ ಅನುಸಾರವಾಗಿ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಇಲ್ಲದೇ ಎರಡು ವರ್ಷಗಳ ಕಾಲ ಉಪಾಧ್ಯಕ್ಷರ ಆಡಳಿತದಲ್ಲಿ ಪಟ್ಟಣ ಪಂಚಾಯಿತಿ ಮುಂದುವರಿದಿತ್ತು. ಭಾರತಿ ರಾಘವ ಗಟ್ಟಿ ಉಪಾಧ್ಯಕ್ಷರಾಗಿದ್ದರು. ಎರಡು ವರ್ಷಗಳ ಹಿಂದೆ ಎಸ್. ಟಿ ಮಹಿಳೆ ಮೀಸಲಾತಿ ಬಂದಿರುವುದರಿಂದ ಬಿಜೆಪಿಯಿಂದ ಅಭ್ಯರ್ಥಿ ಇರಲಿಲ್ಲ. ಆದ್ದರಿಂದ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಾತ್ರ ನಡೆದಿತ್ತು. ಬಿಜೆಪಿ ಬೆಂಬಲಿತ 11, ಕಾಂಗ್ರೆಸ್ -4 ಎಸ್ ಡಿಪಿಐ-1 ಹಾಗೂ ಸಿಪಿಎಂ ನ -1 ಅಭ್ಯರ್ಥಿ ಚುನಾಯಿತರಾಗಿದ್ದರು. ಇದೀಗ ಎರಡೂವರೆ ವರ್ಷಗಳ ಬಳಿಕ ಅಧ್ಯಕ್ಷರ ಆಯ್ಕೆ ನಡೆದರೂ, ಕೇವಲ ಆರು ತಿಂಗಳಿಗೆ ಮಾತ್ರ ಅಧಿಕಾರ ಇದ್ದು, ಬಳಿಕ ಅವಧಿ ಮುಗಿಯಲಿದೆ.ಆಯ್ಕೆ ಪ್ರಕ್ರಿಯೆ ಸಂದರ್ಭ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕ್ಷೇತ್ರ ಬಿಜೆಪಿ ಮುಖಂಡರುಗಳಾದ ಚಂದ್ರಹಾಸ್ ಪಂಡಿತ್ ಹೌಸ್, ಸಂತೋಷ್ ಬೋಳಿಯಾಋ, ಸತೀಶ್ ಕುಂಪಲ, ರವೀಂದ್ರ…

Read More