Author: UllalaVani

Kannada News From Coastal Karnataka

ಕೋಟೆಕಾರು: ಕಳೆದ ಎರಡು ವರ್ಷಗಳಿಂದ ಅಧ್ಯಕ್ಷರಿಲ್ಲದ ಕೋಟೆಕಾರು ಪಟ್ಟಣ ಪಂಚಾಯತಿಗೆ ಇಂದು ಅಧ್ಯಕ್ಷರ ಭಾಗ್ಯ ದೊರೆತಿದೆ. ಬಿಜೆಪಿಯ ಜಯಶ್ರೀ ಫ್ರಫುಲ್ಲಾ ದಾಸ್ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮೀಸಲಾತಿಗೆ ಅನುಸಾರವಾಗಿ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಇಲ್ಲದೇ ಎರಡು ವರ್ಷಗಳ ಕಾಲ ಉಪಾಧ್ಯಕ್ಷರ ಆಡಳಿತದಲ್ಲಿ ಪಟ್ಟಣ ಪಂಚಾಯಿತಿ ಮುಂದುವರಿದಿತ್ತು. ಭಾರತಿ ರಾಘವ ಗಟ್ಟಿ ಉಪಾಧ್ಯಕ್ಷರಾಗಿದ್ದರು. ಎರಡು ವರ್ಷಗಳ ಹಿಂದೆ ಎಸ್. ಟಿ ಮಹಿಳೆ ಮೀಸಲಾತಿ ಬಂದಿರುವುದರಿಂದ ಬಿಜೆಪಿಯಿಂದ ಅಭ್ಯರ್ಥಿ ಇರಲಿಲ್ಲ. ಆದ್ದರಿಂದ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಾತ್ರ ನಡೆದಿತ್ತು. ಬಿಜೆಪಿ ಬೆಂಬಲಿತ 11, ಕಾಂಗ್ರೆಸ್ -4 ಎಸ್ ಡಿಪಿಐ-1 ಹಾಗೂ ಸಿಪಿಎಂ ನ -1 ಅಭ್ಯರ್ಥಿ ಚುನಾಯಿತರಾಗಿದ್ದರು. ಇದೀಗ ಎರಡೂವರೆ ವರ್ಷಗಳ ಬಳಿಕ ಅಧ್ಯಕ್ಷರ ಆಯ್ಕೆ ನಡೆದರೂ, ಕೇವಲ ಆರು ತಿಂಗಳಿಗೆ ಮಾತ್ರ ಅಧಿಕಾರ ಇದ್ದು, ಬಳಿಕ ಅವಧಿ ಮುಗಿಯಲಿದೆ.ಆಯ್ಕೆ ಪ್ರಕ್ರಿಯೆ ಸಂದರ್ಭ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕ್ಷೇತ್ರ ಬಿಜೆಪಿ ಮುಖಂಡರುಗಳಾದ ಚಂದ್ರಹಾಸ್ ಪಂಡಿತ್ ಹೌಸ್, ಸಂತೋಷ್ ಬೋಳಿಯಾಋ, ಸತೀಶ್ ಕುಂಪಲ, ರವೀಂದ್ರ…

Read More

ಕುತ್ತಾರು: ಉಪಚುನಾವಣೆ ನಡೆದ ಶಿರಾ ಕ್ಷೇತ್ರದಲ್ಲಿ 25,000 ಮತಗಳ ಅಂತರದಲ್ಲಿ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ಕುತ್ತಾರು ಬಾಲಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಆಶ್ರಮದ ಮಕ್ಕಳ ಜೊತೆಗೆ ಹುಟ್ಟು ಹಬ್ಬವನ್ನು ಸರಳವಾಗಿ ಮಂಗಳವಾರ ಆಚರಿಸಿ ಮಾತನಾಡಿದರು. ಜೆ.ಪಿ ನೆಡ್ಡಾ ಅವರ ಸೂಚನೆಯಂತೆ ಮೈಸೂರಿನಿಂದ ಪಕ್ಷ ಸಂಘಟನೆ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಯಡಿಯೂರಪ್ಪರ ಮಗನಾಗಿರುವುದಕ್ಕೆ ಹೆಮ್ಮೆ ವಿಷಯ.ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಪ್ರೀತಿ ವಿಶ್ವಾಸದೊಂದಿಗೆ ಬೆಳೆಯುತ್ತಾ ಇದ್ದೇವೆ.ಕುತ್ತಾರು ಆಶ್ರಮದ ಸಂಘಟಕರು ಅಪೇಕ್ಷೆ ಪಡೆಯದೆ ಸೇವೆಗೆ ಅಡಚಣೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಆಶ್ರಮಕ್ಕೆ ಎಲ್ಲಾ ರೀತಿಯ ಸಹಕಾರ ಒದಗಿಸಲಾಗುವುದು.ಹುಟ್ಟುಹಬ್ಬ ಆಚರಿಸುವ ಉದ್ದೇಶವಿರಲಿಲ್ಲ, ಆದರೆ ಕಾರ್ಯಕರ್ತರ ಒತ್ತಾಯಕ್ಕೆ ಸರಳವಾಗಿ ಆಶ್ರಮದ ಮಕ್ಕಳ ಜತೆಗೆ ಆಚರಿಸಿದ್ದೇನೆ ಎಂದರು. ಈ ಸಂದರ್ಭ ಆಶ್ರಮ ಸಂಘಟಕ ಅನಂತಕೃಷ್ಣ ಭಟ್, ಬಿಜೆಪಿ ಮುಖಂಡರುಗಳಾದ ಕಿಶೋರ್ ಕುಮಾರ್ ಪುತ್ತೂರು, ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್, ಗೋಪಾಲ್ ಕುತ್ತಾರ್, ರಾಜೀವ್…

Read More

UN network ಕುತ್ತಾರು: ಕುತ್ತಾರು ಬಾಲಸಂರಕ್ಷಣಾ ಕೇಂದ್ರಕ್ಕೆ ದಲ್ಲಿ ಆಶ್ರಮದ ಮಕ್ಕಳ ಜೊತೆಗೆ ಹುಟ್ಟು ಹಬ್ಬವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಮಂಗಳವಾರ ಸರಳವಾಗಿ ಆಚರಿಸಿದರು. ಬೆಳಿಗ್ಗೆ 8.30 ರ ಹೊತ್ತಿಗೆ ಆಗಮಿಸಿದ ಸಂಸದರನ್ನು ಉಳ್ಳಾಲ ವಲಯದ ಬಿಜೆಪಿ ಕಾರ್ಯಕರ್ತರು ಬರಮಾಡಿಕೊಂಡರು. ಮೊದಲಿಗೆ ಗೋಪೂಜೆ ನೆರವೇರಿಸಿ ನಂತರ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷರು ನಂತರ ಮಕ್ಕಳ ಜತೆಗೆ ಹುಟ್ಟುಹಬ್ಬ ಆಚರಿಸಿದರು.

Read More

ಉಳ್ಳಾಲ :  ಸವಿತಾ ಸಮಾಜ ಉಳ್ಳಾಲ ಇದರ 2020-21 ನೇ ಸಾಲಿನ ಅಧ್ಯಕ್ಷರಾಗಿ ರಮೇಶ್ ಕೆ. ಕುತ್ತಾರ್ ಇವರು  ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ತೊಕ್ಕೊಟ್ಟು ಗಣೇಶಮಂದಿರದಲ್ಲಿ ಇತ್ತೀಚೆಗೆ ನಡೆದ  ವಾರ್ಷಿಕ ಸಭೆ ನಡೆಯಿತು. ಪದಾಧಿಕಾರಿಗಳ ಆಯ್ಕೆಯಲ್ಲಿ  ಗೌರವ ಅಧ್ಯಕ್ಷರಾಗಿ   ಎಸ್. ವಿಶ್ವನಾಥ್ ಭಂಡಾರಿ ಪ್ರಧಾನ ಕಾರ್ಯದರ್ಶಿ ಆಗಿ  ಎ. ಶಶಿಕುಮಾರ್,  ಕೋಶಾಧಿಕಾರಿಯಾಗಿ  ಯತೀಶ್. ಬಿ. ಸಾಲಿಯಾನ್ ಇವರುಗಳನ್ನು ನೇಮಕಮಾಡಲಾಯಿತು.  ಸಮಾಜದ ಹಿರಿಯರಾದ ಮತ್ತು ಸರಕಾರದ ಕಾರ್ಮಿಕ ಶ್ರಮ ಸಮ್ಮಾನ 2020ರ  ವಿಶೇಷ ಪ್ರಶಸ್ತಿ ಪಡೆದ  ಎಸ್. ವಿಶ್ವನಾಥ್ ಭಂಡಾರಿಯವರನ್ನು ಉಳ್ಳಾಲ ಸವಿತಾ ಸಮಾಜ ಪರವಾಗಿ ಸಮ್ಮಾನಿಸಲಾಯಿತು. 

Read More

ಉಳ್ಳಾಲ: ಉಳ್ಳಾಲ ಬ್ಲಾಕ್ ಯುವ ಇಂಟಕ್ ಅಧ್ಯಕ್ಷರಾಗಿ ವಿಶಾಲ್ ಕೊಲ್ಯ ಇವರನ್ನು ಆಯ್ಕೆ ಮಾಡಲಾಗಿದೆ. ಇಂಟಕ್ ರಾಜ್ಯಾಧ್ಯಕ್ಷ  ವರುಣ್ ಕುಮಾರ್ ಎಸ್.ಕೆ  ನೇಮಕ ಮಾಡಿರುವ ಪತ್ರವನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಇತ್ತೀಚೆಗೆ ಹಸ್ತಾಂತರಿಸಿದರು. 

Read More

UN NETWORK ಉಳ್ಳಾಲ : ಉಳ್ಳಾಲಕ್ಕೆ ಹೋಗಲು ಪಾಸ್ ಪೋಟ್ ಕಡ್ಡಾಯ, ವಿಮಾನ ಕೂಡ ರೆಡಿಯಾಗಿದೆ… , ನೇತ್ರಾವತಿ ಬ್ರಿಡ್ಜ್ ನಲ್ಲಿ ಪಾಸ್‍ಪೋರ್ಟ್ ಚೆಕಿಂಗ್ ಸೆಂಟರ್ ಆರಂಭವಾಗಿದೆ. .. ಹೀಗೆ ಕಿನ್ಯಾ ಕೇಶವ ಶಿಶುಮಂದಿರದಲ್ಲಿ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆಯನ್ನು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ಉಳ್ಳಾಲಕ್ಕೆ ಹೋಗುವ ಸಿಟಿ ಬಸ್‍ಗೆ ಸ್ಟೇಟ್ ಬ್ಯಾಂಕ್ ಟು ಪಾಕಿಸ್ತಾನ್, ಶಾಸಕ ಯು.ಟಿ ಖಾದರ್ ಮತ್ತು ಕಲ್ಲಡ್ಕ ಭಟ್ ಜತೆಯಾಗಿ ಮಾತನಾಡುತ್ತಿರುವುದು ` ಪಾಕಿಸ್ತಾನದ ಪ್ರಧಾನಿ ಜತೆಗೆ ಓಮ್ನಿಸ್ತಾನದ ಪ್ರಧಾನಿಯ ಮಾತುಕತೆ ‘ ಪಾಸ್ ಪೋರ್ಟ್ ಚೆಕಿಂಗ್ ಸೆಂಟರ್ ಹೀಗೆ ವಿವಿಧ ರೀತಿಯಲ್ಲಿ ಕಲ್ಲಡ್ಕ ಭಟ್ ಹೇಳಿಕೆ ಟ್ರೋಲ್ ಆಗಿ ತಿರುಗಾಡುತ್ತಿದೆ. ಭಟ್ ಅವರ ಹೇಳಿಕೆಗಳು ಬಿಸಿ ವಾತಾವರಣಕ್ಕೆ ಕಾರಣವಾಗುತ್ತಿದ್ದರೂ, ಟ್ರೋಲಿಗರು ವಿಚಾರವನ್ನು ಹಾಸ್ಯಾಸ್ಪದವಾಗಿ ಸ್ವೀಕರಿಸಿದ್ದಾರೆ.

Read More

ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪಾಕಿಸ್ತಾನವಾಗಿದೆ ಎಂಬ ಆರ್.ಎಸ್.ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಯನ್ನು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಖಂಡಿಸಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಇಂತಹ ಹೇಳಿಕೆಯನ್ನು ನೀಡಲಾಗುತ್ತಿದೆ. ಇದು ಫ್ಯಾಸಿಸ್ಟ್ ಶಕ್ತಿಗಳು ಹಿಂದಿನಿಂದಲೂ ಅನುಸರಿಸಿಕೊಂಡು ಬಂದ ತಂತ್ರವಾಗಿದ್ದು ಅಭಿವೃದ್ಧಿಯ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲದಿದ್ದಾಗ ಧರ್ಮ ಸಂಘರ್ಷದ ಮಾತುಗಳನ್ನಾಡಿ ಜನರ ಗಮನ ಬೇರೆಡೆ ತಿರುಗಿಸುವ ತಂತ್ರವನ್ನು ಭಟ್ ನಿರ್ವಹಿಸಿದ್ದಾರೆ. ಉಳ್ಳಾಲ ತಾಲೂಕಿನಲ್ಲಿ ಕೋವಿಡ್ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಲೂಟಿ ಮಿತಿಮೀರಿದೆ. ಅದೇ ರೀತಿ ಯುವಜನರ ನಿರುದ್ಯೋಗದ ಪ್ರಮಾಣದಲ್ಲೂ ಏರಿಕೆಯಾಗಿದೆ. ಇಂತಹ ನೈಜ ವಿಷಯಗಳ ಬಗ್ಗೆ ಮಾತನಾಡುವುದು ಬಿಟ್ಟು ಪ್ರಭಾಕರ ಭಟ್ ಅಬ್ಬಕ್ಕ ಆಳಿದ ನಾಡನ್ನು ಪಾಕಿಸ್ತಾನ ಎಂದು ಕರೆಯುವ ಮೂಲಕ ತಾಲೂಕನ್ನು ಅವಮಾನಿಸಿದ್ದು ಇವರ ಈ ಹೇಳಿಕೆಯನ್ನು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಖಂಡಿಸುತ್ತದೆ ಎಂದು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್…

Read More

ಉಳ್ಳಾಲ: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ, ಆಗುತ್ತಿವೆ ಎನ್ನುವ ಮೂಲಕ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದ ಸೃಷ್ಟಿಸಿದ್ದಾರೆ. ತಲಪಾಡಿ ಬಳಿಯ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಿನ್ಯಾದಲ್ಲಿ ಕೇಳಿ, ಸುತ್ತಲೂ ಯಾರಿದ್ದಾರೆ ಅಂತ.. ಪ್ರಶ್ನೆ ಮಾಡಿದ್ರು. ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಅಲ್ಲಿ ಹೋದರೆ ಪಾಕಿಸ್ತಾನವನ್ನು ನೋಡಿದಂತೆ ಆಗುತ್ತದೆ. ಹಿಂದುಗಳ ಸಂಖ್ಯೆ ಕಡಿನೆಯಾದರೆ ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕಾಯಿತು..? ನಮ್ಮವರ ಸಂಖ್ಯೆ ಕಡಿಮೆ…

Read More

ಪಾವೂರು:ಮಲಾರ್ ನಿವಾಸಿ ಮೋನು ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ಪೊಲೀಸರು ವಶಡಿಸಿಕೊಂಡಿದ್ದಾರೆ. ಮಲಾರ್ ನಿವಾಸಿ ಅಜರ್(27), ಅಲ್ತಾಫ್ (24) , ,ಸಜಿಪ ನಿವಾಸಿ ಅಮೀರ್(26) , ಅರ್ಫಾಝ್ (25) ವಶಕ್ಕೆ ಪಡೆದುಕೊಂಡಿರುವ ಆರೋಪಿಗಳು. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಹಂಝ ಪತ್ತೆಗಾಗಿ ಪೊಲೀಸರು ಈಗಾಗಲೇ ಹುಡುಕಾಟ ನಡೆಸುತ್ತಿದ್ದಾರೆ. ಪಾವೂರು ಗ್ರಾಮ ಪಂಚಾಯತ್ ನ ಮಲಾರು ನಿವಾಸಿ ಪಲ್ಲಿಯಾಕ ಯಾನೆ ಮೋನು (70) ಎಂಬವರನ್ನು ಹತ್ಯೆ ನಡೆಸಲಾಗಿತ್ತು. ಅ.29 ರಂದು ಮೋನು ನಾಪತ್ತೆಯಾಗಿದ್ದರು. ಅಂದು ಸಂಬಂಧಿ ಯುವಕನೋರ್ವ ಪಡೆದುಕೊಂಡ ಬಡ್ಡಿಸಾಲದ ಹಣವನ್ನು ಮರುಪಾವತಿಸುವುದಾಗಿ ನಂಬಿಸಿ ರಿಕ್ಷಾದಲ್ಲಿ ಕರೆದೊಯ್ದಿದ್ದನು. ಬೋಳಿಯಾರು ಮೂಲಕ ಮೋನು ಅವರನ್ನು ಕರೆದೊಯ್ದ ಚಾಲಕ, ಅಲ್ಲಿಂದ ಇತರ ನಾಲ್ಕು ಮಂದಿಯ ತಂಡವನ್ನು ಕುಳ್ಳಿರಿಸಿ ನಿರ್ಜನ ಪ್ರದೇಶವಾಗಿರುವ ಇರಾಪದವಿನ ಕಲ್ಲಿನಕೋರೆ ಬಳಿ ಕರೆದೊಯ್ದಿದ್ದಾರೆ. ಅಲ್ಲಿ ಎಲ್ಲರೂ ಸೇರಿ ಮೋನು ಅವರಲ್ಲಿದ್ದ ಬೈರಾಸಿನಿಂದ ಕುತ್ತಿಗೆಯನ್ನು ಬಿಗಿದು ಹತ್ಯೆ ನಡೆಸಿದ್ದರು. ಅಂದು ಅಲ್ಲೇ ಕಲ್ಲಿನ ಕೋರೆಯ ಹಳ್ಳದಲ್ಲಿ ಮೃತದೇಹವನ್ನು ಬಿಟ್ಟು ಬಂದಿದ್ದ ತಂಡ ಮರುದಿನ ಶುಕ್ರವಾರ ಅ.30…

Read More

ಉಳ್ಳಾಲ: ಉಳ್ಳಾಲ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಏರಿದ್ದು, ಕಾಂಗ್ರೆಸ್‍ನ ಚಿತ್ರಕಲಾ ಚಂದ್ರಕಾಂತ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಆಯೂಬ್ ಮಂಚಿಲ ಆಯ್ಕೆಯಾಗಿದ್ದು ಚುನಾವಣೆ ನಡೆದು ಎರಡು ವರ್ಷದ ಬಳಿಕ ನಗರಸಭೆಗೆ ಚುನಾಯಿತ ಆಡಳಿತ ಅಧಿಕಾರಕ್ಕೆ ಬಂದಂತಾಗಿದೆ. ಉಳ್ಳಾಲ ನಗರಸಭೆ ಮತ್ತೆ ಅಧಿಕಾರಕ್ಕೆ ಕಾಂಗ್ರೆಸ್   ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉಳ್ಳಾಲ ನಗರಸಭೆಯ 31 ಸ್ಥಾನಗಳಲ್ಲಿ  ಕಾಂಗ್ರೆಸ್ 13ಸದಸ್ಯರನ್ನು ಹೊಂದಿದ್ದರೆ, ಬಿಜೆಪಿ 6 , ಎಸ್‍ಡಿಪಿಐ 6,  ಜೆಡಿಎಸ್ 4 ಹಾಗೂ ಪಕ್ಷೇತರ ಇಬ್ಬರು ಸದಸ್ಯರಿದ್ದರು. ಅತೀ ಹೆಚ್ಚು ಸಂಖ್ಯಾಬಲವನ್ನು ಹೊಂದಿದ್ದರು ಕಾಂಗ್ರೆಸ್‍ಗೆ ಅಧಿಕಾರಕ್ಕೇರಲು ಸ್ಪಷ್ಟ ಬಹುಮತವಿರಲಿಲ್ಲ. ಅಧ್ಯಕ್ಷ , ಉಪಾಧ್ಯಕ್ಷ ಗಾದಿಯ ನೇಮಕಾತಿಯ ಮೀಸಲಾತಿ ವಿಚಾರದಲ್ಲಿ ಕಾನೂನು ತೊಡಕು ಉಂಟಾಗಿ ವ್ಯಾಜ್ಯ ಕೋರ್ಟ್ ಮೆಟ್ಟಿಲೇರಿ ಆಡಳಿತ ಚುನಾವಣೆ ವಿಳಂಬವಾಗಿತ್ತು. ಎರಡು ವರ್ಷಗಳ ಬಳಿಕ ಮೀಸಲಾತಿ ಪ್ರಕಟಿಸಿದ್ದು, ಕಾಂಗ್ರೆಸ್‍ಗೆ ಪಕ್ಷೇತರ ಅಭ್ಯರ್ಥಿಯೊಬ್ಬರು ಬೆಂಬಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಚಿತ್ರಕಲಾ ಚಂದ್ರಕಾಂತ್‍ಗೆ ಕಾಂಗ್ರೆಸ್‍ನ 13 ಸದಸ್ಯರು ಮತ್ತು…

Read More