Author: UllalaVani

Kannada News From Coastal Karnataka

ಮಂಗಳೂರು ಫೆ.07: ದೇಶದ ರೈತರಿಗೆ ಗೌರವ ಸಲ್ಲಬೇಕು, ಕೃಷಿ ಕೆಲಸಕ್ಕೆ ಪ್ರೋತ್ಸಾಹ ದೊರೆಯಬೇಕು ಎಂಬ ಉದ್ದೇಶದಿಂದ ದಕ್ಷಿಣ ಕನ್ನಡದ ರೈತ ಉದ್ಯಮಿ, ಎಸ್ಕೆಎಫ್ ಎಲಿಕ್ಸರ್ ಸಂಸ್ಥೆಯ ಮುಖ್ಯಸ್ಥರಾದ ಡಾ.ರಾಮಕೃಷ್ಣ ಆಚಾರ್ ಅವರು ಒಂದು ಲಕ್ಷ ರೂಪಾಯಿ ಮೊತ್ತದ ವಿನೂತನ ರೈತಪೀಠ ಪ್ರಶಸ್ತಿ ಯನ್ನು ಸ್ಥಾಪಿಸಿದ್ದಾರೆ. ಪ್ರತೀ ವರ್ಷವೂ ರೈತರನ್ನು ಪುರಸ್ಕರಿಸಿ ಗೌರವಿಸುವ ಉದ್ದೇಶದಿಂದ ಸ್ಥಾಪಿಸಲಾದ ಈ ಪ್ರಶಸ್ತಿಗೆ 200ಕ್ಕೂ ಹೆಚ್ಚು ಅಪರೂಪದ ಭತ್ತದ ತಳಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸಿರುವ ಅಪರೂಪದ ರೈತ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಬಿ.ಕೆ. ದೇವರಾಯ ಮಿತ್ತಬಾಗಿಲು ಅವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಹಳಷ್ಟು ಕಡೆಗಳಲ್ಲಿ ಭತ್ತದ ಕೃಷಿ ಕ್ಷೀಣಿಸುತ್ತಿದ್ದರೂ 80ರ ಹರೆಯದ ಬಿ.ಕೆ ದೇವರಾಯರು 200ಕ್ಕೂ ಹೆಚ್ಚು ಭತ್ತದ ತಳಿಗಳನ್ನು ಉಳಿಸಿ ಬೆಳೆಸುತ್ತಾ ಬಂದಿದ್ದಾರೆ. ‘ಕಾಲದ ಹೊಡೆತಕ್ಕೆ ಮರೆಯಾಗಿಹೋಗಬಹುದಾಗಿದ್ದ ಅಪರೂಪದ ತಳಿಗಳನ್ನು ಮುಂದಿನ ಪೀಳಿಗೆಗೆ ಉಳಿಸಿರುವುದಲ್ಲದೇ, ಕೃಷಿಯಲ್ಲಿ ಇತರರಿಗೂ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ. ದೇವರಾಯರಿಗೆ ಮತ್ತು ಅವರ ಶ್ರೇಷ್ಠ ಬದುಕಿಗೆ ಗೌರವ ನೀಡುವ ಸಲುವಾಗಿ…

Read More

ತೌಡುಗೋಳಿ ; ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರಕ್ಕೆ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಶಿಲಾನ್ಯಾಸಗೈದರು.ಬಳಿಕ ಆಶೀರ್ವಚನ ನೀಡಿದ ಶ್ರೀ ಗಳು ಹಿಂದೂ ಸಮಾಜದ ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಕಾಲಘಟ್ಟದಲ್ಲಿ ನಾವಿರುವಾಗ ತೌಡುಗೋಳಿಯಲ್ಲಿ ನಡೆಯುತ್ತಿರುವಂತಹ ಈ ಕ್ಷೇತ್ರದ ಜೀರ್ಣೋದ್ದಾರ ಮಹತ್ವ ಪಡೆದಿದೆ. ಪ್ರತಿಯೊಬ್ಬರೂ ಈ ಪುಣ್ಯಕಾರ್ಯದಲ್ಲಿ ಕೈ ಜೋಡಿಸಿ ಯಶಸ್ವೀಗೊಳಿಸಲು ಕರೆ ನೀಡಿದರು.ಉದ್ಯಾವರ ಮಾಡ ಅರಸು ಮಂಜಿಷ್ಣಾರ್ ದೈವದ ಅಣ್ಣ ದೈವದ ಪಾತ್ರಿ ರಾಜ ಬೆಳ್ಚಪ್ಪಾಡರು ಮಾತನಾಡಿ ಈ ಕ್ಷೇತ್ರದ ಜೀರ್ಣೋದ್ದಾರ ಕೆಲಸಗಳು ಸಾಂಗವಾಗಿ ನೆರವೇರಿ ಬ್ರಹ್ಮಕಲಶ ನೋಡುವ ಭಾಗ್ಯ ನಮಗೆಲ್ಲರಿಗೂ ಆದಷ್ಟು ಬೇಗ ಸಿಗಲಿ ಎಂದು ಹಾರೈಸಿದರು. ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ನಿಧಿ ಸಂಚಯದ ಕೂಪನ್ ಗಳನ್ನು ಮಾಣಿಲ ಶ್ರೀ ಗಳು ದಾನಿಗಳಿಗೆ ನೀಡಿ ಬಿಡುಗಡೆ ಮಾಡಿದರು.ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ಅನುವಂಶೀಯ ಮೊಕ್ತೇಸರ ಗೋವಿಂದ ಗುರುಸ್ವಾಮಿ, ವರ್ಕಾಡಿ ಗ್ರಾಮ…

Read More

ಕೊಣಾಜೆ: ಉತ್ತಮ ಸಂಸ್ಕಾರದೊಂದಿಗೆ ನಮ್ಮಲ್ಲಿರುವ ಅಜ್ಞಾನದ ಕತ್ತಲೆಯನ್ನು ದೂರಗೊಳಿಸಬೇಕು.‌ ನಾವು ಎಷ್ಟು ದೊಡ್ಡವರಾದರೂ ತಂದೆ ತಾಯಿ‌ ಋಣ‌ ತೀರಿಸಲು ಸಾಧ್ಯವಿಲ್ಲ. ಆದರೆ ಇಂದು ಆಶ್ರಮವಾಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಉನ್ನತ ಶಿಕ್ಷಣ ಪಡೆದವರು, ಉತ್ತಮ ಉದ್ಯೋಗದಲ್ಲಿರುವವರ ತಂದೆ ತಾಯಿಗಳೇ ಹೆಚ್ಚಾಗಿ ಆಶ್ರಮ ಸೇರುತ್ತಿರುವುದು ಬೇಸರದ ಸಂಗತಿಯಾಗಿದೆ.‌‌ ಸಂಸ್ಕಾರವಿಲ್ಲದ ಶಿಕ್ಷಣ, ಉದ್ಯೋಗ ನಮಗೆ ಅಗತ್ಯವಿದೆಯೇ? ಉತ್ತಮ ಸಂಸ್ಕಾರದೊಂದಿಗೆ ತಂದೆ ತಾಯಿಯನ್ನು ಗೌರವಿಸೋಣ ಎಂದು ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು ಅವರು ಹೇಳಿದರು. ಅವರು ಗುಳಿಗ ಕೊರಗಜ್ಜ ಸೇವಾ ಸಮಿತಿ ಅಸೈಗೋಳಿ ಇದರ ಆಶ್ರಯದಲ್ಲಿ ನಡೆಯುವ ಕೋಲೋತ್ಸವ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಮಾತೆ,‌ ಪ್ರಕೃತಿ,‌ ಶಕ್ತಿ ನಮ್ಮ ಜೀವನದ ಮಹತ್ತರವಾದ ಪಾತ್ರವಹಿಸುತ್ತದೆ ಎಂದರು.ದೈವ ಪಾತ್ರಿ ಪ್ರವೀಣ್ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿದರು.ಕೊಣಾಜೆ ಠಾಣೆ ಉಪನಿರೀಕ್ಷರಾದ ನಾಗಾರಾಜ್ ಅವರು ಮಾತನಾಡಿ, ತಂತ್ರಜ್ಞಾನ ಎಷ್ಡು ಮುಂದುವರಿದರೂ ನಮ್ಮ ಸಂಪ್ರದಾಯ,‌ಸಂಸ್ಕೃತಿ,‌ದೈವಾರಾಧನೆಯ ಮಹತ್ವವನ್ನು ಮಕ್ಕಳಿಗೆ ತಿಳಿಯ ಪಡಿಸುವ ಕಾರ್ಯ ಆಗಬೇಕಿದೆ ಎಂದರು.ಮಂಗಳೂರು ವಿವಿ…

Read More

ಮುಲ್ಕಿ,, ಫೆ. 07 : ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿಯ ಪಾವಂಜೆ ದೆವಸ್ಥಾನದ ಮುಂಭಾಗ ನಡೆದಿದೆ. ಗಾಯಗೊಂಡವರನ್ನು‌ ಶಿಕ್ಷಕಿ ಕುಸುಮಾ ಮತ್ತು ಅವರ ಮಗಳು ಸುಮಲತಾ (14) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅವರು ಪಾವಂಜೆಯಲ್ಲಿ ನಿಂತು ಬಸ್ ಕಾಯುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿ ಕಡೆ ಸಂಚರಿಸುತ್ತಿದ ಟ್ರೈಲರ್ ಢಿಕ್ಕಿ ಹೊಡೆದಿದೆ.ಘಟನೆಯಿಂದ ಕುಸುಮಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸುಮಲತಾ ಅವರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನಾ‌ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರೈಲರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು, ಫೆ. 07 : ನಗರದ ನಂತೂರು ಬಳಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ, ದೀಪ್ತಿ ಅವರ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಗೆ ತಂದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಬಲ್ಲಾಳ್‌ಬಾಗ್ ಬಳಿಯ ವಿವೇಕನಗರದ ಅಮಿತ್, ಕೀರ್ತನ್, ನವೀತ್, ಭರತ್‌ರಾಜ್, ಪವನ್ ಮತ್ತು ಲೋಕೇಶ್, ಬಲ್ಲಾಲ್‌ಬಾಗ್‌ನ ಮನ್ವೀತ್, ಕಂಕನಾಡಿಯ ಅನಿಲ್ ಕುಮಾರ್; ಬಲ್ಲಾಲ್‌ಬಾಗ್‌ನ ಪ್ರೇಮನಾಥ್ಮ, ತ್ತು ಸುಮಾರು 50 ಜನರು ಆಂಬ್ಯುಲೆನ್ಸ್‌ನೊಂದಿಗೆ ದ್ವಿಚಕ್ರ ವಾಹನಗಳು ಮತ್ತು ಕಾರುಗಳಲ್ಲಿ ಕದ್ರಿ ಪೊಲೀಸ್ ಠಾಣೆ ಬಳಿ ಬಂದು ಕಾನೂನುಬಾಹಿರವಾಗಿ ಸಭೆ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲವೆಂದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಭಟನಾಕಾರರಿಗೆ ಮನವರಿಗೆ ಮಾಡಿದರೂ ಕೇಳದೆ ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆಯು ಸಾರ್ವಜನಿಕ ವಾಹನ ಸಂಚಾರಕ್ಕೆ ಅಡಚಣೆಯಾಗಿದ ಎಂದು ಆರೋಪಿಸಲಾಗಿದೆ. ಈ ಆರೋಪಗಳ ಆಧಾರದ ಮೇಲೆ, ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Read More

ಬೆಂಗಳೂರು, ಫೆ. 07 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದ ವೇಳೆ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.ಗಾಂಜಾ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಬೆಳ್ತಂಗಡಿ, ಫೆ. 7: ಚಿರತೆಯೊಂದು ಮನೆಯ ಅಂಗಳದಲ್ಲಿದ್ದ ನಾಯಿಯನ್ನು ಎಳೆದುಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ನಡೆದಿದೆ. ನಾರಾಯಣ ಗೌಡ ಎಂಬವರ ಮನೆಯ ಹೊರ ಜಗುಲಿಯಲ್ಲಿ ಮಲಗಿದ್ದ ನಾಯಿಯನ್ನು ರಾತ್ರಿ ವೇಳೆ ಚಿರತೆ ಹೊಂಚು ಹಾಕಿ ಕಚ್ಚಿ ಎಳೆದೊಯ್ದಿದೆ. ಚಿರತೆ ಮನೆಯಂಗಳಕ್ಕೆ ನುಗ್ಗಿದ ವೇಳೆ ಅಲ್ಲೇ ಮಲಗಿದ್ದ ಬೆಕ್ಕು ಅದೃಷ್ಟವಶಾತ್ ಚಿರತೆಯ ಬಾಯಿಂದ ತಪ್ಪಿಸಿಕೊಂಡಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯ ಮನೆಯ ಮುಂಭಾಗ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.ಈ ಘಟನೆ ಬಳಿಕ ದಿಡುಪೆ ಗ್ರಾಮಸ್ಥರಲ್ಲಿ ಭೀತಿ ಮನೆ ಮಾಡಿದ್ದು, ರಾತ್ರಿ ವೇಳೆ ಮನೆ ಹೊರಗೆ ಹೋಗಲು ಜನರು ಹೆದರುತ್ತಿದ್ದಾರೆ. ಈ ಹಿಂದೆ ಸಹ ದಿಡುಪೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕು ಪ್ರಾಣಿಗಳನ್ನು ಚಿರತೆ ಹೊತ್ತೊಯ್ದ ಘಟನೆಗಳು ನಡೆದಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಚಿರತೆಯ ಸಂಚರಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಪ್ರಾಣಿಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ…

Read More

ಕುರ್ನಾಡು : ಕುರ್ನಾಡು ಗ್ರಾಮದ ಕಿನ್ಯಾಜೆಯಿಂದ ಕುರ್ನಾಡು ಬೆಟ್ಟುವನ್ನು ಸಂಪರ್ಕಿಸುವ ಸಾರ್ವಜನಿಕ ರಸ್ತೆಯ ಮೇಲೆ ಅತಿಕ್ರಮಣ ನಡೆಯುತ್ತಿದ್ದು, ಇದರಿಂದ ಸುಮಾರು 12 ಕುಟುಂಬಗಳ ದೈನಂದಿನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಆದ್ದರಿಂದ ಕೂಡಲೇ ರಸ್ತೆಗೆ ಅಡ್ಡಲಾಗಿ ಹಾಕಿರುವ ಅಡಿಕೆ ಮರದ ತುಂಡುಗಳು ಹಾಗೂ ಕಲ್ಲಿನ ರಾಶಿಗಳನ್ನು ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ರಸ್ತೆ ವಂಚಿತರು ಹಾಗೂ ಊರಿನ ಪ್ರಮುಖರು ಸಂಘಟನೆಯ ಮುಂದಾಳ್ವತದಲ್ಲಿ ಫೆಬ್ರವರಿ 9ರ ಸೋಮವಾರದಂದು ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ಎಚ್ಚರಿಕೆ ನೀಡಿದ್ದಾರೆ. ಅವರು ಶುಕ್ರವಾರ ತೊಕ್ಕೊಟ್ಟು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಈ ರಸ್ತೆಯನ್ನು ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯ ಪೀಡಿತರು ಪ್ರತಿದಿನ ಬಳಸುತ್ತಿದ್ದು, ರಸ್ತೆ ಇಕ್ಕೆಲೆಗಳಲ್ಲಿ ಸಂತೋಷ್ ಡಿಸೋಜ ಎಂಬವರು ಅಡಿಕೆ ಮರದ ತುಂಡುಗಳು ಹಾಗೂ ಕಲ್ಲುಗಳನ್ನು ರಾಶಿ ಹಾಕಿರುವುದರಿಂದ ವಾಹನ ಹಾಗೂ ಕಾಲ್ನಡಿಗೆ ಸಂಚಾರಕ್ಕೆ ತೀವ್ರ ಅಡ್ಡಿಯಾಗುತ್ತಿದೆ…

Read More

ಮುಡಿಪು: ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕ ಸಹಿ ಸಂಗ್ರಹಮುಡಿಪು ನವೋದಯದಿಂದ ಮುದುಂಗಾರು ಕಟ್ಟೆ–ಪಾತೂರು ಸಂಪರ್ಕಿಸುವ ಮುಖ್ಯ ರಸ್ತೆಯ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ನಾಗರಿಕ ಹೋರಾಟ ಸಮಿತಿ ಮುದುಂಗಾರು ಕಟ್ಟೆ–ಬಾಳೆಪುಣಿ ವತಿಯಿಂದ ಇಂದು ಸಾರ್ವಜನಿಕ ಸಹಿ ಸಂಗ್ರಹ ಕಾರ್ಯಕ್ರಮ ನಡೆಯಿತು. ನಂತರ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿ, ಕೆಲವೇ ದಿನಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಲಾಯಿತು. ರಸ್ತೆ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರು ಹಾಗೂ ನಾಗರಿಕ ಹೋರಾಟ ಸಮಿತಿಯ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ನಾಗರಿಕ ಹೋರಾಟ ಸಮಿತಿ ಸದಸ್ಯರಾದ ಉಸ್ಮಾನ್ ಅಲ್ತಾಫ್, ಅಬ್ದುಲ್ ಅಝೀಜ್,, ಅಬೂಬಕ್ಕರ್ ಜಲ್ಲಿ, ದಿವಾಕರ ಆರಂತಾಡಿ, ಪ್ರದೀಪ್ ಆರಂತಾಡಿ, ಕೇಶವ ಶೆಟ್ಟಿಗಾರ್, ಅಸ್ಪಾಕ್ ಕಾಚರಮಾರ್, ಖಲೀಲ್ ಸಿ. ಹೆಚ್, ಅಶ್ರಫ್ ಯು. ಎಮ್, ಅನ್ಸಾರ್ SAIM,…

Read More

ಕುಂಬಳೆ :ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಅರಿಕ್ಕಾಡಿ ಟೋಲ್ ಪ್ಲಾಜಾ ವಿವಾದಕ್ಕೆ ಸಂಬಂಧಿಸಿದಂತೆ, ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಂದ ಪಡೆಯಲಾಗುತ್ತಿದ್ದ ಹೆಚ್ಚುವರಿ ಟೋಲ್ ಶುಲ್ಕವನ್ನು ಕೆಎಸ್‌ಆರ್‌ಟಿಸಿ ಹಿಂಪಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿ ಮೂಲಕ ಹಾದುಹೋಗುವ ವಾಹನಗಳಿಂದ ಫಾಸ್ಟ್‌ಟ್ಯಾಗ್ ಮೂಲಕ ಟೋಲ್ ಕಡಿತಗೊಳಿಸುವ ತನ್ನ ಆದೇಶವನ್ನು ಕೇಂದ್ರ ಸರ್ಕಾರವು ಫೆಬ್ರವರಿ 4 ರಂದು ಹಿಂತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಈ ಆದೇಶದ ಬೆನ್ನಲ್ಲೇ, ಕೆಎಸ್‌ಆರ್‌ಟಿಸಿ ಕೂಡ ಪ್ರಯಾಣಿಕರ ಟಿಕೆಟ್ ದರದೊಂದಿಗೆ ಸಂಗ್ರಹಿಸುತ್ತಿದ್ದ ಹೆಚ್ಚುವರಿ ಟೋಲ್ ಮೊತ್ತವನ್ನು ನಿಲ್ಲಿಸಿದೆ.ಈ ವರ್ಷದ ಜನವರಿ 13 ರಿಂದ ಅರಿಕ್ಕಾಡಿ ಮೂಲಕ ಸಂಚರಿಸುವ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಮೂಲಕ ಟೋಲ್ ಶುಲ್ಕವನ್ನು ಕಡಿತಗೊಳಿಸಲಾಗುತ್ತಿತ್ತು. ಇದರಿಂದಾಗಿ ಬಸ್ ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರೆ ಬಿದ್ದಿತ್ತು.ಟೋಲ್ ಶುಲ್ಕ ಹಿಂಪಡೆದಿರುವುದರಿಂದ ಈಗ ಮಂಗಳೂರು-ಕಾಸರಗೋಡು ನಡುವಿನ ಬಸ್ ಪ್ರಯಾಣ ದರವು ಮೊದಲಿನಂತೆಯೇ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕ್ರಮದಿಂದ ಪ್ರತಿದಿನ ಕೆಲಸ ಮತ್ತು ಶಿಕ್ಷಣಕ್ಕಾಗಿ…

Read More