UN NEWS NETWORKS ಉಳ್ಳಾಲ : ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ತಡೆಯಿದ್ದ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಉಳ್ಳಾಲ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಇಂದು ನಡೆಯಲಿದ್ದು, ಅಧ್ಯಕ್ಷೆಯಾಗಿ ಕಾಂಗ್ರೆಸ್ ನ ಚಿತ್ರಾ ಚಂದ್ರಕಾಂತ್ ಮತ್ತು ಉಪಾಧ್ಯಕ್ಷರಾಗಿ ಐಯೂಬ್ ಮಂಚಿಲ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. 1.30 ಗೆ ಚುನಾವಣೆ ಫಲಿತಾಂಶ ಹೊರಬಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ. ಎಸ್ ಡಿಪಿಐನಿಂದ ಜರೀನಾ ರವೂಫ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ರಮೀಜ್ ಕೋಡಿ ಮತ್ತು ಜೆಡಿಎಸ್ ನ ಜಬ್ಬಾರ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.ಕಾಂಗ್ರೆಸ್ 13 , ಪಕ್ಷೇತರ 2 , ಹಾಗೂ ಶಾಸಕ ಯು.ಟಿ ಖಾದರ್ ಅವರ ಬೆಂಬಲದಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಅನ್ನುವ ಅಭಿಪ್ರಾಯ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಕೇಳಿಬಂದಿದೆ.
Author: UllalaVani
UN networks ಕೊಣಾಜೆ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ (70) ಎಂಬುವರನ್ನು ಗಾಂಜಾ ವ್ಯಸನಿಗಳ ತಂಡವೊಂದು ಕೊಂದು ಇರಾ ಸಮೀಪದ ಗುಡ್ಡವೊಂದರಲ್ಲಿ ಹೂತು ಹಾಕಿದ ಬಗ್ಗೆ ವರದಿಯಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ಪಲ್ಲಿಯಬ್ಬ ಅವರು ಗುರುವಾರ ಸಂಜೆಯಿಂದ ಕಾಣೆಯಾಗಿದ್ದರು. ಮನೆ ಸಮೀಪದ ಇಬ್ಬರು ಯುವಕರು ಹೊರ ಊರಿನ ಕೆಲವು ಮಂದಿಯ ಸಹಕಾರದಿಂದ ಕೊಂದು ಹೂತಿದ್ದರು ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನದವರೆಗೂ ಇವರ ಮೊಬೈಲ್ ರಿಂಗ್ ಆಗುತ್ತಿತ್ತು. ಬಳಿಕ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡ ಪಲ್ಲಿಯಬ್ಬ ಅವರ ಸಂಬಂಧಿಕರು ಊರಿನ ಇಬ್ಬರು ಶಂಕಿತರನ್ನು ವಿಚಾರಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ.
UN NEWS NETWORKS ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಾಲ್ವರ ಖತರ್ನಾಕ್ ಗ್ಯಾಂಗ್ ವಾಹನ ಕಳವು ಜಾಲದಲ್ಲಿ ಸಕ್ರಿಯವಾಗಿದೆ. ರಸ್ತೆ ಬದಿಯಲ್ಲಿ ಅಥವಾ ರಸ್ತೆ ಬದಿಯ ಮನೆಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕದ್ದು ಮಾರಾಟ ಮಾಡುತ್ತಿರುವ ಜಾಲ ಬೆಳಕಿಗೆ ಬಂದಿದೆ. ಕಳವುಗೈದ ವಾಹನಗಳನ್ನು ಕೇರಳಕ್ಕೆ ಕೊಂಡೊಯ್ದು ಮಾರಾಟ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ.ಕೆಲ ದಿನಗಳ ಹಿಂದಷ್ಟೇ ದೇರಳಕಟ್ಟೆ ಕ್ಷೇಮ ಆಸ್ಪತ್ರೆಯ ಎದುರುಗಡೆ ನಿಲ್ಲಿಸಿದ್ದ ವಾಹನಗಳನ್ನು ಇಬ್ಬರ ತಂಡ ಕಳವು ನಡೆಸಿತ್ತು. ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ದಾಖಲೆಗಳನ್ನು ಸಂಗ್ರಹಿಸಿದ ಉಳ್ಳಾಲ ಪೊಲೀಸರು ತಂಡವನ್ನು ಒಂದು ವಾರದಲ್ಲಿ ಪತ್ತೆಹಚ್ಚುವಲ್ಲಿ ಸಫಲರಾಗಿದ್ದರು. ಮುಖಕ್ಕೆ ಮಾಸ್ಕ್ ಧರಿಸಿದ್ದರೂ ಸಂಶಯದ ಮೇರೆಗೆ ಮನೆಗೆ ನುಗ್ಗಿ ಬಂಧಿಸಿದ್ದರು. ವಿಚಾರಣೆ ವೇಳೆ ಇಬ್ಬರಿಂದ ನಾಲ್ಕು ಬೈಕ್ ಗಳನ್ನು ವಶಪಡಿಸಲಾಗಿತ್ತು. ಘಟನೆ ನಡೆದ ಒಂದೇ ವಾರದಲ್ಲಿ ಇದೀಗ ನಾಲ್ವರ ಖತರ್ನಾಕ್ ಗ್ಯಾಂಗ್ ಸಕ್ರಿಯವಾಗಿದೆ. ಕೊಲ್ಯ ಸಂಸ್ಥೆಯೊಂದರಿಂದ ಮೂರು ದಿನಗಳ ಹಿಂದಷ್ಟೇ ಬೈಕ್ ಕಳವು ನಡೆಸಲಾಗಿತ್ತು. ಈ ಕುರಿತು ಸಿಸಿಟಿವಿ ದಾಖಲೆಗಳು ಲಭ್ಯವಾಗಿದ್ದು, ನಾಲ್ವರ ತಂಡ…
ಉಳ್ಳಾಲ: ಸಮುದ್ರಕ್ಕೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ಸಮುದ್ರ ತೀರದಲ್ಲಿ ನಡೆದಿದ್ದು, ಮಧ್ಯಾಹ್ನ ವೇಳೆ ಮೃತದೇಹ ಪತ್ತೆಯಾಗಿದೆ.ಸಂಕೊಳಿಗೆ ನಿವಾಸಿ ಉಷಾ(60) ಆತ್ಮಹತ್ಯೆ ನಡೆಸಿದವರು. ಒಂದು ದಿನದಿಂದ ನಾಪತ್ತೆಯಾಗಿದ್ದ ಉಷಾ ಅವರ ಮೃತದೇಹ ಇಂದು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಸ್ಥಳೀಯರು ಈ ಕುರಿತು ಉಳ್ಳಾಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಉಳ್ಳಾಲ ಪೊಲೀಸರು ಮೃತದೇಹವನ್ನು ಸ್ಥಳಮಹಜರಿಗೆ ಕಳುಹಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಸ್ಥಳೀಯರ ನೆರವಿನಿಂದ ಬದುಕಿ ಉಳಿದಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
UN networks ಉಳ್ಳಾಲ : ನವದಂಪತಿ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಬೆನ್ನಲ್ಲೇ ಎಚ್ಚೆತ್ತ ನವಯುಗ ಸಂಸ್ಥೆ ಕಾಪಿಕಾಡು ಬಳಿ ರಾ.ಹೆ ಯ ಡಿವೈಡರ್ ತೆರವುಗೊಳಿಸಿ ಉಳ್ಳಾಲಕ್ಕೆ ಹೋಗುವ ವಾಹನಗಳಿಗೆ ವ್ಯವಸ್ಥೆ ಮಾಡಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಈ ಹಿಂದೆ ಲಾಕ್ ಡೌನ್ ಸಂದರ್ಭ ಜು. 16 ರಂದು ಇದೇ ಡಿವೈಡರ್ ತೆರವುಗೊಳಿಸಿದ್ದರಿಂದ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಅಪಘಾತ ನಡೆದಿತ್ತು. ಇದೀಗ ಮತ್ತೆ ಅಪಾಯವನ್ನು ಆಹ್ವಾನಿಸುವಂತಾಗಿದೆ. ಜು.16 ರಂದು ನಡೆದ ಅಪಘಾತದಲ್ಲಿ ಚೆಂಬುಗುಡ್ಡೆ ನಿವಾಸಿಗಳಾದ ಚರಣ್ ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಸಂದರ್ಭ ಮುಂದಿನಿಂದ ಇದ್ದ ಕಾರು ತೆರವುಗೊಳಿಸಿದ ಡಿವೈಡರ್ ಆಗಿ ತಿರುಗಲು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಕಾರು ಚಾಲಕ ಮಹಮ್ಮದ್ ಅಜ್ಮಲ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ವರದಿ ಬೆನ್ನಲ್ಲೇ ಮುಚ್ಚಿದರೂ ಮತ್ತೆ ತೆರವುಗೊಳಿಸಿದರು?’ಅವೈಜ್ಞಾನಿಕ ರಸ್ತೆ ತೆರವು ಶೀರ್ಷಿಕೆಯಡಿ ಕಾಪಿಕಾಡು ಭಾಗದಲ್ಲಿ…
ಉಳ್ಳಾಲ: ಕಳ್ಳರಿಬ್ಬರು ಬೈಕ್ ಕಳವು ನಡೆಸಿರುವ ಘಟನೆ ಎರಡನೇ ಕೊಲ್ಯ ಗಂಗೂಸ್ ಕಿಚನ್ ಹೋಂ ಟು ಹೋಂ ಫುಡ್ ಡೆಲಿವರಿ ಸಂಸ್ಥೆ ಯಲ್ಲಿ ಮಂಗಳವಾರ ತಡರಾತ್ರಿ 1.48. ರ ವೇಳೆಗೆ ನಡೆದಿದೆ. ಕಳ್ಳರಿಬ್ಬರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಸ್ಥೆಗೆ ಸೇರಿದ ಹೀರೋ ಹೋಂಡ ಫ್ಯಾಷನ್ ಪ್ಲಸ್ ಬೈಕನ್ನು ಕಳವು ನಡೆಸಲಾಗಿದೆ. ಸಂಸ್ಥೆ ಹೊರಗಡೆ ನಿಲ್ಲಿಸಲಾದ ಬೈಕನ್ನು ಕಳ್ಳರಿಬ್ಬರು ಬಂದು ಕಳವು ನಡೆಸಿದ್ದಾರೆ. ಸಿಸಿಟಿವಿಯಲ್ಲಿ ಕಳ್ಳರಿಬ್ಬರ ಚಹರೆ ಪತ್ತೆಯಾಗಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರಿಗೆ ಕಳ್ಳರಿಬ್ಬರ ಸುಳಿವು ಲಭ್ಯವಾಗಿದ್ದು, ಶೀಘ್ರವೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ContentsKurs dolara 23 listopada w okolicy 4,55 złRynek PolskiKurs sprzedaży RUBCeny paliw na Węgrzech wystrzeliły. Dodatkowe zyski MOL trafią do budżetuWiadomościWszystkie wiadomościRosja: dolary nie dla obywateli Nie mają też możliwości zakupu walut zachodnich w gotówce. W czwartek, 8 grudnia w Sądzie Okręgowym w Poznaniu ruszył proces odwoławczy Marka M., oskarżonego o publiczne nawoływanie do zabójstwa abpa Marka Jędraszewskiego – informuje “Głos Wielkopolski”. Rzeczniczka rosyjskiego MSZ Maria Zacharowa skomentowała wizytę szefa polityki zagranicznej Unii Europejskiej Josepa Borrela w obozie szkoleniowym dla ukraińskich żołnierzy w Polsce. Jej zdaniem militaryzm bierze górę nad wszelkimi próbami dyplomacji. 25 lutego Bank Centralny odnotował rekordowy dzienny…
СодержаниеДостоинства и недостатки показателя DCF дисконтирования денежных потоковФормула дисконтирования денежных потоковКоэффициент дисконтированияМетоды инвестиционного анализа, использующие дисконтированные денежные потокиДисконтирование денежных потоков Самый главный минус в том, что даже небольшие неточности или ошибка в исходных данных могут привести к большим изменениям в расчёте стоимости бизнеса. Дисконтирование денежного потока позволит посчитать, сколько будет стоить компания в будущем с учётом инфляции, рисков, альтернативных доходов и так далее. Предлагает расчет дисконтированной стоимости долговых ценных бумаг и предоставленных займов (п. 23). Первый денежный поток CF0 не дисконтируется, если это платежи текущего периода или продолжительность периодов на которых вычисляются потоки мала, то есть нет смысла дисконтировать. Касательно…
ContentsHelp and supportEnter your text hereACCESSORIESInterview: ITV offers insights into the future of travelWhen will I get my CAS number? If you enter the UK before the start date of your 90-day temporary travel vignette using the eGates, you will enter the UK as a visitor. You will not be able to enrol onto your course as a visitor and will be required to leave the Common Travel Area and re-enter the UK after your Student visa is valid in order to ‘activate’ your Student visa. The amount of money the sponsor is giving to you or a statement that…
UN NETWORKS ಕೈರಂಗಳ : “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಕೊಡುಗೆ ರಾಮಣ್ಣ ರೈ’ ಚಲನ ಚಿತ್ರದ ಪ್ರಮುಖ ಕಥಾಭಾಗ ಚಿತ್ರೀಕರಣಗೊಂಡಿದ್ದ ಬಂಟ್ವಾಳ ತಾ| ಕೈರಂಗಳ ಗ್ರಾಮದ ದುಗ್ಗಜ್ಜರಕಟ್ಟೆಯ ಖಾಸಗಿ ಅನುದಾನಿತ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಆಂಗ್ಲ ಮಾಧ್ಯಮವೂ ಆರಂಭಗೊಂಡಿದೆ. ಎಲ್ಕೆಜಿ ಮತ್ತು ಯುಕೆಜಿ ಶಿಕ್ಷಣದ ಅಧಿಕೃತ ಉದ್ಘಾಟನೆ ಸೆ. 15ರಂದು ನಡೆಯಲಿದ್ದು, ಜತೆಗೆ ಹಳೆ ವಿದ್ಯಾರ್ಥಿಗಳ ಸಂಗಮ, ಚಿತ್ರ ನಿರ್ಮಾಪಕ ರಿಷಭ್ ಶೆಟ್ಟಿ ಅವರಿಗೆ ಸಮ್ಮಾನ ನಡೆಯಲಿದೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾದ ಯಶಸ್ಸಿನ ಬಳಿಕ ರಿಷಭ್ ಶೆಟ್ಟಿ ಮತ್ತು ತಂಡ ಶಾಲೆ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದ್ದರು. ಶಾಲೆಯ ಶಿಥಿಲ ಛಾವಣಿ ಮರು ನಿರ್ಮಾಣ, ಗೋಡೆಗಳಲ್ಲಿ ಬಣ್ಣದ ಚಿತ್ತಾರ ಮೂಡಿಸಲಾಗಿತ್ತು. ಬಳಿಕ ವಿದ್ಯಾರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಕನ್ನಡದೊಂದಿಗೆ ಆಂಗ್ಲ ಮಾಧ್ಯಮ ಆರಂಭಕ್ಕೆ ಪ್ರೋತ್ಸಾಹ ನೀಡಿದ್ದರು. ವಿದ್ಯೋದಯ ಪ್ರೈಮರಿ ಶಾಲೆಆಂಗ್ಲ ಮಾಧ್ಯಮ ವಿಭಾಗಕ್ಕೆ ವಿದ್ಯೋದಯ ಪ್ರೈಮರಿ ಶಾಲೆ…

