Author: UllalaVani

Kannada News From Coastal Karnataka

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಿಗೆ ಪೂರೈಸುತ್ತಿರುವ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆತಂಕವನ್ನು ಈ ಹಿಂದೆ ಉಳ್ಳಾಲವಾಣಿ ವರದಿಯ ಮೂಲಕ ಜನರ ಗಮನಕ್ಕೆ ತಂದಿತ್ತು. ಇದೀಗ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ 100ಕ್ಕೂ ಹೆಚ್ಚು ಜನರು ವಾಂತಿ, ಬೇಧಿ ಸೇರಿದಂತೆ ಆರೋಗ್ಯ ಸಮಸ್ಯೆಗಳಿಂದ ಅಸ್ವಸ್ಥರಾಗಿರುವ ಘಟನೆಗಳು ಸಾರ್ವಜನಿಕ ವಲಯಗಳಲ್ಲಿ ಇದ್ದು ಇದು ಆತಂಕಕ್ಕೆ ಕಾರಣವಾಗಿದೆ. ಸ್ವಾರ್ಟ್ ಸಿಟಿ ಮಂಗಳೂರಿನಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಮರ್ಪಕವಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ, ಚರಂಡಿ ನೀರು ಕುಡಿಯುವ ನೀರಿನ ಪೈಪ್‌ಗಳಿಗೆ ಬೆರೆತು ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಈ ಹಿಂದೆಯೇ ಎಚ್ಚರಿಸಲಾಗಿತ್ತು. ಇದೀಗ ನಡೆದಿರುವ ಬೆಳವಣಿಗೆಗಳು ಆ ಆತಂಕವನ್ನು ಮತ್ತೊಮ್ಮೆ ದೃಢಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ, ಸಮಸ್ಯೆಯ ಮೂಲವನ್ನು ಪತ್ತೆಹಚ್ಚಿ, ನೀರಿನ ಗುಣಮಟ್ಟದ ಸಮಗ್ರ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಸುರಕ್ಷಿತ ಕುಡಿಯುವ…

Read More

ಪುತ್ತೂರು : ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ಇದರ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ “ಆರೋಗ್ಯಕರ ಜಮಾಅತ್” ಶೀರ್ಷಿಕೆಯಡಿ ಸಸಿ ವಿತರಣಾ ಕಾರ್ಯಕ್ರಮವು ಸಂಟ್ಯಾರ್ ಜುಮಾ ಮಸೀದಿ ವಠಾರದಲ್ಲಿ ನಡೆಯಿತು. ಮಸೀದಿ ಖತೀಬರಾದ ಅಬ್ದುಲ್ ಲತೀಫ್ ಹನೀಫಿಯವರು ದುಆ ನೆರವೇರಿಸಿ ಜಮಾಅತ್ ಕಮಿಟಿ ಉಪಾಧ್ಯಕ್ಷರಾದ ಮಹಮ್ಮದ್ ಮಲಾರ್ ರವರಿಗೆ ಸಸಿ ವಿತರಿಸಿ, ಮಾತನಾಡಿದ ಅವರು ಸಸಿ ನೆಡುವುದು ಆ ಮೂಲಕ ಪರಿಸರ ಸಂರಕ್ಷಣೆಯು ನಮ್ಮ ಜವಾಬ್ದಾರಿಯಾಗಿದ್ದು, ಮಹಾ ಪ್ರತಿಫಲ ಲಭಿಸುವ ಪುಣ್ಯ ಕಾರ್ಯವಾಗಿದೆ, ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರುವ ಬದ್ರಿಯಾ ಗಲ್ಫ್ ಫ್ರೆಂಡ್ಸ್ ಗೆ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ಜಮಾಅತ್ ಕಮಿಟಿ ಕಾರ್ಯದರ್ಶಿಗಳಾದ ಹಮೀದ್ ಕಲ್ಲರ್ಪೆ, ಜಮಾಅತ್ ಕಮಿಟಿ ಸದಸ್ಯರಾದ ರಝಾಕ್ ಸಂಟ್ಯಾರ್, ಫಾರೂಕ್ ಸಂಟ್ಯಾರ್, ಹಾರಿಸ್ ಸಂಟ್ಯಾರ್, ಅಬ್ಬಾಸ್ ಆರ್ಯಾಪು, ಅಬ್ದುಲ್ಲಾ ಮರಿಕೆ, ಶಂಸುದ್ದೀನ್ ಕಲ್ಲರ್ಪೆ, ಮಸೀದಿ ಸದರ್ ಮುಅಲ್ಲಿಮ್ ಅಬ್ದುಲ್ ರಹ್ಮಾನ್ ಮುಸ್ಲಿಯಾರ್ , ಅನ್ಸಾರಿಯಾ ಯಂಗ್ಮೆನ್ಸ್ ಸಂಟ್ಯಾರ್ ಅಧ್ಯಕ್ಷರಾದ ಪವಾಝ್ ಮರಿಕೆ ಹಾಗೂ ಬದ್ರಿಯಾ ಗಲ್ಫ್…

Read More

ಉರ್ವಾ; ದೀನದಲಿತರ ನೋವಿಗೆ ಧನಿಯಾಗಿ, ಸಮಾಜಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡ ದೈವತ್ವಕ್ಕೇರಿದ ಸಂತ ಅಲೋಶಿಯಸ್ ಗೊನ್ನಾಗ ಇವರ ಹುಟ್ಟುಹಬ್ಬವನ್ನು ಶಾಲಾ ಪಾಲಕರ ದಿನಾಚರಣೆಯಾಗಿ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗೊಂಝಾಗ ಜೀವನ,ಆದರ್ಶಗಳು ಎಂದಿಗೂ ನಮಗೆ ಅನುಕರಣೆಯ ಎಂಬುದಾಗಿ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜರವರು ವಿದ್ಯಾರ್ಥಿಗಳಿಗೆ ತಿಳಿಸಿದರು . 10ನೇ ತರಗತಿಯ ವಿದ್ಯಾರ್ಥಿಗಳು ಅಸೆಂಬ್ಲಿಯನ್ನು ನೆರವೇರಿಸಿದರು. ತರಗತಿ ಶಿಕ್ಷಕರು ಕಾರ್ಯಕ್ರಮ ಸಂಯೋಜಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Read More

ಶಿಕ್ಷಣವು ಕೇವಲ ಶಾಲೆಯಲ್ಲಿ ಮಾತ್ರ ಕಲಿಯುವುದಲ್ಲ ಮಗು ಹುಟ್ಟಿನಲ್ಲಿಂದ ಸಾಯುವವರೆಗೆ ಮಗು ಕಲಿಯುತಿರಬೇಕು. ಮತ್ತು ಕಲಿಯುತ್ತಾ ಇರುತ್ತದೆ. ಮಗುವಿಗೆ ಎಳೆಯದರಲ್ಲೇ ಸ್ನೇಹ ಮೈ ಜೀವನ, ಶಿಸ್ತುಮಯ ಜೀವನ, ಪ್ರಾಮಾಣಿಕ ಜೀವನ, ಸದಾ ಸತ್ಯವನ್ನೇ ನುಡಿಯುವುದು ಮೊದಲಾದ ಮಾನವೀಯ ಮೌಲ್ಯಗಳು ಬೆಳೆಯಬೇಕು. ಇದು ಶಾಲೆ ಮತ್ತು ಮನೆಯಲ್ಲಿ ಮಗುವಿಗೆ ಅಭ್ಯಾಸವಾಗಿದೆ. ಮಗುವಿನ ಮೊದಲನೆಯ ಗುರು ತಾಯಿ ಮನೆಯಲ್ಲಿ ಅಭ್ಯಾಸಗಳನ್ನ ಮಾಡಿಸಬೇಕು ಎಂದು ಉಳ್ಳಾಲ ಠಾಣಾ ಅಧಿಕಾರಿ ಮೊಮ್ಮದ್ ಮನ್ಸೂರ್ ರವರು ಹೇಳಿದರು. ಅವರ ಇತ್ತೀಚೆಗೆ ಹಳೆಕೋಟೆ ಸಯ್ಯದ್ ಮದನಿ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿ ರಕ್ಷಕರ ಸಭೆಯಲ್ಲಿ ಮಾತನಾಡುತ್ತಾ ತಾಯಿಯ ಪ್ರೀತಿಯು ಮಗುವಿಗೆ ಶ್ರೇಷ್ಠವಾದದ್ದು. ಆ ಪ್ರೀತಿಯಿಂದಲೇ ಮಗುವನ್ನ ತಿದ್ದಿ ಸುಂದರ ರೂಪ ಕೊಡಲು ಸಾಧ್ಯವಿದೆ. ಎಂದರು. ವಿದ್ಯಾರ್ಥಿ ರಕ್ಷಕರ ಸಭೆಯಲ್ಲಿ ಮುಖ್ಯ ಉಪಾಧ್ಯಾಯರಾದ ಶ್ರೀಯುತ ಕೆ ಎಂ ಕೆ ಮಂಜನಾಡಿ ಅವರು ಶಾಲೆಯಲ್ಲಿ ದೊರೆಯುವ ಸೌಲತ್ತುಗಳು, ಸರಕಾರದಿಂದ ಸಿಗುವ ಸೌಲತ್ತುಗಳು, ಸಾಲ ಆಡಳಿತ ಮಂಡಳಿಯೂ ನೀಡುವ ಉಚಿತ ಸೌಲಭ್ಯಗಳು ಇಂದು ಕನ್ನಡ ಮಾಧ್ಯಮ…

Read More

ಬೆಂಗಳೂರು, ಜೂನ್ 19: ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕನಿಷ್ಠ ವೇತನವನ್ನು ಖಚಿತಪಡಿಸುವ ಮಹತ್ವದ ಆದೇಶವನ್ನು ನಿರ್ದೇಶನಾಲಯ ಹೊರಡಿಸಿದೆ. ಈ ಆದೇಶವು 2026ರ ಏಪ್ರಿಲ್ 1ರಿಂದ 2027ರ ಮಾರ್ಚ್ 31ರವರೆಗೆ ಜಾರಿಯಲ್ಲಿರಲಿದೆ. ಕಾರ್ಮಿಕ ಇಲಾಖೆಯ ಅಧಿಸೂಚನೆ ಸಂಖ್ಯೆ KAE 106 LWA 2021, ದಿನಾಂಕ 28-07-2022 ರ ಅನ್ವಯ, ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ನೀಡುವುದು ಕಡ್ಡಾಯವಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದೇಶದ ಪ್ರಕಾರ, ಹೊರಗುತ್ತಿಗೆ ಪೂರೈಕೆದಾರ ಸಂಸ್ಥೆಗಳು ನೌಕರರಿಗೆ ನಿಗದಿತ ವೇತನವನ್ನು ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಪಾವತಿಸಬೇಕು. ವೇತನ ಪಾವತಿಯನ್ನು ನೇರವಾಗಿ ಸಿಬ್ಬಂದಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದ್ದು, ಇಎಸ್‌ಐ ಮತ್ತು ಪಿಎಫ್ ಸೇರಿದಂತೆ ಕಾನೂನುಬದ್ಧ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿಯೂ ಸಂಸ್ಥೆಗಳ ಮೇಲಿದೆ. ಈ ಕ್ರಮದಿಂದ ರಾಜ್ಯದ ವಿವಿಧ ಸೇವಾ ಕೇಂದ್ರಗಳು ಮತ್ತು ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಹೊರಗುತ್ತಿಗೆ ಸಿಬ್ಬಂದಿಗೆ…

Read More

ಮಂಗಳೂರು: ಭಾರತದ ಪ್ರವಾಸೋದ್ಯಮ ನಕ್ಷೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಗೋವಾ, ತನ್ನ ಸೂರ್ಯಕಿರಣಗಳಿಂದ ಕಂಗೊಳಿಸುವ ಕಡಲತೀರಗಳು, ಸಮೃದ್ಧ ಸಾಂಸ್ಕೃತಿಕ ಪರಂಪರೆ, ಆಹ್ಲಾದಕರ ಹವಾಮಾನ ಹಾಗೂ ಅಪರೂಪದ ನೈಸರ್ಗಿಕ ಸೌಂದರ್ಯದಿಂದ ದೇಶ-ವಿದೇಶಗಳ ಪ್ರವಾಸಿಗರನ್ನು ನಿರಂತರವಾಗಿ ಆಕರ್ಷಿಸುತ್ತಿದೆ. ಗೋವಾದ ರಾಜಧಾನಿಯಾದ ಪಣಜಿಯ ಹೃದಯಭಾಗದಲ್ಲಿ ನೆಲೆಗೊಂಡಿರುವ ‘ಗೋಲ್ಡ್ ಫಿಂಚ್ ಪಣಜಿ ಗೋವಾ’ ಅತ್ಯಾಧುನಿಕ ಆತಿಥ್ಯ ಸೇವೆಗಳನ್ನು ಗೋವಾದ ವಿಶಿಷ್ಟ ಸೊಬಗಿನೊಂದಿಗೆ ಸಂಯೋಜಿಸಿ ಪ್ರವಾಸಿಗರಿಗೆ ಹೊಸ ಅನುಭವವನ್ನು ನೀಡುತ್ತಿದೆ. ಸುಂದರ ಮಂಡೋವಿ ನದಿಯ ನೋಟವನ್ನು ಹೊಂದಿರುವ ಈ ಹೋಟೆಲ್, ಗೋಲ್ಡ್ ಫಿಂಚ್ ಹಾಸ್ಪಿಟಾಲಿಟಿಯ ದೇಶಾದ್ಯಂತ ಬೆಳೆಯುತ್ತಿರುವ ಹೋಟೆಲ್ ಜಾಲಕ್ಕೆ ಹೊಸ ಸೇರ್ಪಡೆಯಾಗಿದೆ. ವ್ಯಾಪಾರ ಮತ್ತು ಪ್ರವಾಸ ಉದ್ದೇಶದ ಅತಿಥಿಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾದ ಈ ಹೋಟೆಲ್, ಆರಾಮ, ಅನುಕೂಲತೆ ಮತ್ತು ಆಧುನಿಕ ಸೊಬಗನ್ನು ಒಂದೇ ವೇದಿಕೆಯಲ್ಲಿ ಒದಗಿಸುತ್ತದೆ.ಒಟ್ಟು 98 ಸುಸಜ್ಜಿತ ಕೊಠಡಿಗಳನ್ನು ಹೊಂದಿರುವ ಈ ಹೋಟೆಲ್‌ನಲ್ಲಿ ಏಳು ವಿಶಾಲ ಸೂಟ್‌ಗಳಿವೆ. ಆಧುನಿಕ ಸೌಲಭ್ಯಗಳು, ವಿಶಾಲ ಲಾಬಿ, ಹಸಿರು ಪರಿಸರ ಹಾಗೂ ಆಕರ್ಷಕ ಒಳಾಂಗಣ ವಿನ್ಯಾಸಗಳು ಗೋವಾದ ನಿರಾಳ…

Read More

ಮಣಿಪಾಲ, ಜೂ. 18 : ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು ಜಖಂಗೊಂಡಿದೆ. ಕಾರು ಚಾಲಕ ಹಾಗೂ ಅಪ್ರಾಪ್ತ ಬಾಲಕನಿಗೆ ಕಾರನ್ನು ಚಲಾಯಿಸಲು ನೀಡಿದ ಕಾರಿನ ಮಾಲಕ ಸಲೀಂ ಎಂಬವರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜೂ. 18 : ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ‘ಭ್ರಾಮರೀ ಯಕ್ಷವೈಭವ–2026’ ಕಾರ್ಯಕ್ರಮವು ಆಗಸ್ಟ್ 1ರಂದು ಶನಿವಾರ ಸಂಜೆ 7 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಆರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಹಿರಿಯ ಕಲಾವಿದ ಕೆ.ಎಚ್. ದಾಸಪ್ಪ ರೈ ಅವರಿಗೆ ಪ್ರತಿಷ್ಠಿತ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಪ್ರಶಸ್ತಿಯು ರೂ.15 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಬೆಳ್ಳಿಯ ಪದಕವನ್ನು ಒಳಗೊಂಡಿದೆ. ತಮ್ಮ 15ನೇ ವಯಸ್ಸಿನಲ್ಲೇ ಯಕ್ಷಗಾನ ರಂಗ ಪ್ರವೇಶಿಸಿದ ಕೆ.ಎಚ್. ದಾಸಪ್ಪ ರೈ ಅವರು ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಯಕ್ಷಗಾನ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಕರ್ನಾಟಕ ಮೇಳ, ಕದ್ರಿ ಮೇಳ, ಕುಂಬಳೆ-ಕಣಿಪುರ ಮೇಳ, ಮಂಗಳಾದೇವಿ ಮೇಳ ಸೇರಿದಂತೆ ಹಲವು ಪ್ರಸಿದ್ಧ ಮೇಳಗಳಲ್ಲಿ ಸೇವೆ ಸಲ್ಲಿಸಿರುವ ಅವರು ದೇಶ-ವಿದೇಶಗಳಲ್ಲಿ ಅನೇಕ ಯಶಸ್ವಿ ಪ್ರದರ್ಶನಗಳನ್ನು ನೀಡಿದ್ದಾರೆ.‘ಕೋಟಿ-ಚೆನ್ನಯ’ ಯಕ್ಷಗಾನದ ಕೋಟಿ ಹಾಗೂ ‘ಕಾಡಮಲ್ಲಿಗೆ’…

Read More

ಉಡುಪಿ, ಜೂ. 18 : ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66 ರ ಸಾಯಿ ಸರ್ವಿಸ್ ಸ್ಟೇಷನ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ವರದಿಗಳ ಪ್ರಕಾರ, ಕಾಪು ಸರ್ವಿಸ್ ರಸ್ತೆ ಮತ್ತು ಹೆದ್ದಾರಿಯ ಜಂಕ್ಷನ್‌ನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್, ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.ಗಾಯಗೊಂಡ ಸ್ಕೂಟಿ ಸವಾರನನ್ನು ಮಂಗಳೂರಿನ ಸಸಿಹಿತ್ಲು ಮೂಲದ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕಾಪುವಿನಲ್ಲಿ ವಾಸಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯ ನಿವಾಸಿಗಳು ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಿದರು.ಸ್ಕೂಟಿಗೆ ಡಿಕ್ಕಿ ಹೊಡೆದ ನಂತರ, ಬಸ್ ಡಿವೈಡರ್‌ ಮೇಲೆ ಹೋಗಿ ನಿಂತಿದ್ದು, ದೊಡ್ಡ ಅನಾಹುತವೊಂದನ್ನು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ಕುಟುಂಬ ಆಸ್ತಿ ವಿವಾದಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ತಾತನು ಸ್ವತಃ ಸಂಪಾದಿಸಿದ ಆಸ್ತಿಯು ನಂತರ ಕುಟುಂಬ ವಿಭಜನೆಯ ಮೂಲಕ ತಂದೆಯ ಪಾಲಿಗೆ ಬಂದರೆ, ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ ಹೊರತು ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇಂತಹ ಆಸ್ತಿಯಲ್ಲಿ ಮೊಮ್ಮಕ್ಕಳು ಅಥವಾ ಮೊಮ್ಮಗಳು ಸ್ವಯಂ ಕಾನೂನಾತ್ಮಕ ಪಾಲು ಕೇಳಲು ಅವಕಾಶವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಟಿ.ಎಂ. ನದಾಫ್ ಅವರಿದ್ದ ವಿಭಾಗೀಯ ಪೀಠವು ಅಮೆರಿಕದಲ್ಲಿ ನೆಲೆಸಿರುವ ಉಷಾ ಎನ್. ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ದಾಖಲೆಗಳು ಮತ್ತು ವಾದ-ಪ್ರತಿವಾದಗಳನ್ನು ಪರಿಶೀಲಿಸಿದ ನ್ಯಾಯಪೀಠ, ವಿವಾದಿತ ಆಸ್ತಿಗಳು ಅರ್ಜಿದಾರರ ತಾತನ ಸ್ವಯಂ ಸಂಪಾದಿತ ಆಸ್ತಿಗಳಾಗಿದ್ದವು ಎಂದು ಗಮನಿಸಿದೆ. ತಾತ ಅವರು ಕುಟುಂಬ ಒಪ್ಪಂದದ ಮೂಲಕ ಮಕ್ಕಳ ನಡುವೆ ಆಸ್ತಿಯನ್ನು ಹಂಚಿಕೆ ಮಾಡಿದ್ದು, ಆ ಭಾಗವಾಗಿ ತಂದೆಗೆ ಬಂದ ಆಸ್ತಿ ಅವರ ವೈಯಕ್ತಿಕ ಆಸ್ತಿಯಾಗುತ್ತದೆ ಎಂದು…

Read More