ಉಳ್ಳಾಲ ನಗರ ಸಭೆ ವತಿಯಿಂದ ಶೇ.24.10 ಅಮೃತನಗರೋತ್ಥಾನ ಉಳ್ಳಾಲ ನಗರ ಸಭಾ ನಿಧಿ, ಎಸ್.ಎಫ್,ಸಿ ನಿಧಿಯಡಿ ಫಲಾನುಭವಿಗಳಿಗೆ ಹೊಸಮನೆ ನಿರ್ಮಾಣ, ಮನೆ ದುರಸ್ತಿ, ಶೌಚಾಲಯ ರಚನೆ, ಸ್ವ-ಉದ್ಯೋಗದ ಫಲಾನುಭವಿಗಳಿಗೆ ಮಂಜೂರಾದ ಆದೇಶ ಪತ್ರ ಕಾಮಗಾರಿ ಆದೇಶ ಪತ್ರ ವಿತರಣೆ, ಶೇ.5ರ ಯೋಜನೆಯಡಿ ಫಲಾನುಭವಿಗಳಿಗೆ ಮನೆ ದುರಸ್ತಿಗೆ ಮಂಜೂರಾತಿ ಪತ್ರ ವಿತರಣೆ ಮತ್ತು ಉಳ್ಳಾಲ ನಗರ ಸಭೆಯ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಉಳ್ಳಾಲ ನಗರ ಸಭಾ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕರ್ನಾಟಕ ರಾಜ್ಯ ವಿಧಾನ ಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಒಟ್ಟು 78 ಫಲಾನುಭವಿಗಳಿಗೆ 62,07000 ಸಹಾಯ ಧನವನ್ನು ವಿತರಿಸಿದರು ಹಾಗೂ ಉಳ್ಳಾಲ ನಗರ ಸಭೆಯ ಪೌರಕಾರ್ಮಿಕರನ್ನು ಸನ್ಮಾನಿಸಿದರು ಬಳಿಕ ಮಾತನಾಡಿದ ಅವರು ಕಳೆದ 5 ವರ್ಷದಲ್ಲಿ ತಮ್ಮ ಅಧಿಕಾರದ ಅವಧಿಯಲ್ಲಿ ಉಳ್ಳಾಲ ನಗರ ಸಭೆ ದ.ಕ ಕನ್ನಡ ಜಿಲ್ಲೆಯಲ್ಲಿ ಅತ್ಯತ್ತಮವಾದ ನಗರ ಸಭೆಯೆಂಬ ಗೌರವ ಪಡೆದಿದೆ. ಅಧಿಕಾರಿಗಳು, ಸಿಬ್ಬಂಧಿಗಳು ಮತ್ತು ಪೌರಕಾರ್ಮಿಕರು ಇದಕ್ಕೆ ಕಾರಣರಾಗಿದ್ದಾರೆ, ತಳಮಟ್ಟದಲ್ಲಿ ಸಮರ್ಪಕವಾಗಿ ಕೆಲಸ ಕಾರ್ಯವನ್ನು ಮಾಡುವವರು…
Author: UllalaVani
ಮಂಗಳೂರು, ಫೆ. 06 : ಕುಪ್ಪೆಪದವು-ಕಲ್ಲಾಡಿ-ಪೂವಣಿಬೆಟ್ಟು-ಮಂಗಳೂರು ಮಾರ್ಗದಲ್ಲಿ ಬುಧವಾರ ಸಂಭವಿಸಬಹುದಾಗಿದ್ದ ಭಾರೀ ಅಪಘಾತವೊಂದು ಖಾಸಗಿ ಬಸ್ ಚಾಲಕನ ಜಾಗರೂಕತೆ ಮತ್ತು ಸಮಯೋಚಿತ ನಿರ್ಧಾರದಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕುಪ್ಪೆಪದವಿನಿಂದ ಕಲ್ಲಾಡಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನೇರಳಿಕೆಯಲ್ಲಿನ ಕೆಳಮುಖ ತಿರುವು ಪಡೆಯುವ ವೇಳೆ ಅಕಸ್ಮಾತ್ತಾಗಿ ಬ್ರೇಕ್ ವೈಫಲ್ಯಕ್ಕೆ ಒಳಗಾಯಿತು. ಪರಿಸ್ಥಿತಿಯ ಗಂಭೀರತೆಯನ್ನು ತಕ್ಷಣವೇ ಅರಿತ ಚಾಲಕ ವಾಸು ಅಲಿಯಾಸ್ ಅಮ್ಮಿ ಅವರು, ಬಸ್ಸನ್ನು ಬಲಭಾಗದಲ್ಲಿರುವ ಗುಡ್ಡದ ಅಂಚಿನ ಚರಂಡಿಯ ಕಡೆಗೆ ತಿರುಗಿಸಿದರು. ಪರಿಣಾಮವಾಗಿ ಬಸ್ಸಿನ ಚಕ್ರಗಳು ಚರಂಡಿಯಲ್ಲಿ ಸಿಲುಕಿಕೊಂಡು ದೊಡ್ಡ ಅಪಘಾತ ಸಂಭವಿಸುವುದು ತಪ್ಪಿತು.ಘಟನೆ ಸಂಭವಿಸಿದ ವೇಳೆಗೆ ಬಸ್ ಕುಪ್ಪೆಪದವಿನಿಂದ ಪೂವಣಿಬೆಟ್ಟು ಕಡೆಗೆ ಸಾಗುತ್ತಿದ್ದು, ಕೆಲವೇ ಪ್ರಯಾಣಿಕರು ಮಾತ್ರ ಬಸ್ಸಿನಲ್ಲಿದ್ದರು. ರಸ್ತೆಯ ಎಡಭಾಗದಲ್ಲಿ ತಗ್ಗು ಪ್ರದೇಶದಲ್ಲಿ ಹಲವು ಮನೆಗಳು ಇರುವುದನ್ನು ಗಮನಿಸಿದ ಚಾಲಕ, ಆ ದಿಕ್ಕಿಗೆ ಬಸ್ ಸಾಗದಂತೆ ಎಚ್ಚರಿಕೆಯಿಂದ ನಿರ್ಧಾರ ಕೈಗೊಂಡು, ಪ್ರಯಾಣಿಕರು ಹಾಗೂ ಸ್ಥಳೀಯ ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸಿದರು.ಚಾಲಕನ ಸಕಾಲಿಕ ಕ್ರಮದಿಂದ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಆದರೆ ಬಸ್ಗೆ ಮಾತ್ರ…
ಮಂಗಳೂರು, ಫೆ. 06: ನಗರದ ನಂತೂರು ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ಸಂಭವಿಸಿದ ಹೃದಯ ವಿದ್ರಾವಕ ಅಪಘಾತದಲ್ಲಿ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ದೀಪ್ತಿ (24) ಎಂಬ ಯುವತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಅತ್ಯಂತ ನೋವಿನ ಅಂಶವೆಂದರೆ, ಸ್ಕೂಟರ್ಗೆ ಡಿಕ್ಕಿ ಹೊಡೆದ ಅದೇ ಬಸ್ನಲ್ಲಿ ಅವರ ತಾಯಿಯೂ ಪ್ರಯಾಣಿಸುತ್ತಿದ್ದರು. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿರುವ ಶಾಲಿನಿ ಅವರ ಐದು ಹೆಣ್ಣುಮಕ್ಕಳಲ್ಲಿ ದೀಪ್ತಿ ಹಿರಿಯವಳು. ಪ್ರೀತಿಯ ಅಕ್ಕನನ್ನು ಕಳೆದುಕೊಂಡ ಕಿರಿಯ ಸಹೋದರಿಯರ ಆಕ್ರಂದನ ಮುಗಿಲುಮುಟ್ಟಿತ್ತು.ಮೃತ ದೀಪ್ತಿ ಕುಟುಂಬವು ಮಂಗಳೂರಿನ ಬಲ್ಲಾಲ್ಬಾಗ್ ಸಮೀಪದ ವಿವೇಕನಗರದಲ್ಲಿ ವಾಸವಿದೆ. ದೀಪ್ತಿ ಅವರ ತಂದೆ ಮಹೇಶ್ ಅವರು ಕೂಡ ನಿಗಮದ ಪೌರಕಾರ್ಮಿಕರಾಗಿದ್ದು, ಕೆಲ ವರ್ಷಗಳ ಹಿಂದೆ ನಿಧನರಾದರು. ಅವರ ನಿಧನದ ಬಳಿಕ, ಶಾಲಿನಿ ಅವರನ್ನು ಅನುಕಂಪದ ಆಧಾರದ ಮೇಲೆ ಆ ಹುದ್ದೆಗೆ ನೇಮಕ ಮಾಡಲಾಗಿತ್ತು. ಆಗಿನಿಂದ ಅವರು ತಮ್ಮ ಐದು ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಅವಿಶ್ರಾಂತವಾಗಿ ಶ್ರಮಿಸುತ್ತಿದ್ದರು.ದೀಪ್ತಿ ಖಾಸಗಿ ಕಾಲೇಜೊಂದರಲ್ಲಿ ಬಿಕಾಂ ಪದವಿ ಪೂರ್ಣಗೊಳಿಸಿ ತಾತ್ಕಾಲಿಕವಾಗಿ…
ಸೋಮೇಶ್ವರ: ಕುಂಪಲ ಬೈಪಾಸ್ ಸಮೀಪ 60ರ ಹರೆಯದ ದಯಾನಂದ ಗಟ್ಟಿ ಸಾವಿನ ಪ್ರಕರಣಕ್ಕೆ ಸಂಬoಧಿಸಿದ ಅಂತಿಮ ಎಫ್ ಎಸ್ ಎಲ್ ವರದಿ ಬಂದಿದ್ದು, ನಾಯಿಯೇ ಸಾವಿಗೆ ಕಾರಣ ಎಂಬುದಾಗಿ ಸಾಬೀತಾಗಿದೆ. ಈ ಕುರಿತು ಉಳ್ಳಾಲವಾಣಿ ಉಳ್ಳಾಲ ಪೊಲೀಸ್ ಠಾಣಾಧಿಕಾರಿ , ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಜೊತೆಗೆ ನಿರಂತರ ಸಂಭಾಷಣೆ ನಡೆಸಿ ತಡವಾಗಿರುವುದನ್ನು ಪ್ರಶ್ನಿಸುತ್ತಾ ಬಂದಿದ್ದು, ಫೆ.5 ರಂದು ಅಂತಿಮ ವರದಿ ಬಂದಿರುವ ಕುರಿತು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಗಟ್ಟಿ (60) ನ.14ರ ಬೆಳಿಗ್ಗೆ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕುಂಪಲ ಬೈಪಾಸ್ ಸಮೀಪದ ಮನೆ ಆವರಣದಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ಹಲವು ಶಂಕೆಗಳು ವ್ಯಕ್ತವಾದರೂ, ಸ್ಥಳೀಯರ ಕಂಡ ಪ್ರಕಾರ ನಾಯಿ ಅವರ ಮೇಲಿರುವುದನ್ನು ಸ್ಪಷ್ಟಪಡಿಸಿ, ನಾಯಿಗಾಗಿ ಹುಡುಕಾಟ ನಡೆಸಿ ಅದರ ಮುಖದ ಮೇಲಿದ್ದ ರಕ್ತದ ಕುರುಹುಗಳನ್ನು ಪರಿಶೀಲಿಸಿ ಸ್ಥಳಕ್ಕಾಗಮಿಸಿದ್ದ ಫಾರೆನ್ಸಿಕ್ ತಂಡ ಪ್ರಾಣಿ ದಾಳಿಯಿಂದ ಸಾವನ್ನಪ್ಪಿರುವುದನ್ನು ಪ್ರಾಥಮಿಕ ಹಂತದಲ್ಲಿ ಸ್ಪಷ್ಟಪಡಿಸಿತ್ತು. ಮತ್ತೆ ಮೃತರ ಸಂಬAಧಿಕರು ಸಂಶಯ ವ್ಯಕ್ತಪಡಿಸಿ…
ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು ವೀರರಾಣಿ ಅಬ್ಬಕ್ಕ ಕಾರಣ. ತಾಯಿ ಭಗವತಿ ಅವರ ಪೂರ್ಣ ಅನುಗ್ರಹ ಎಲ್ಲರ ಮೇಲೂ ಇರಲಿ. ಈ ಬಾರಿ ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ಅಬ್ಬಕ್ಕ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿರುವುದು ವಿಶೇಷ. ಉತ್ಸವದ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಎಲ್ಲರಿಗೂ ಸುಖ, ಶಾಂತಿ ಹಾಗೂ ಯಶಸ್ಸು ದೊರಕಲಿ ಎಂದು ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮಂಜಪ್ಪ ಕಾರ್ನವರ್ ಆಶೀರ್ವದಿಸಿದರು.ತೊಕ್ಕೊಟ್ಟಿನ ಅಂಬೇಡ್ಕರ್ ಭವನದಲ್ಲಿ ಫೆ.೧೪ ರಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವ 2025–26ರ ಕುತ್ತಾರು ಖಾಸಗಿ ಹೊಟೇಲಿನಲ್ಲಿ ಜರಗಿದಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕರು ಹಾಗೂ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ, “1920ರಲ್ಲಿ ನಡೆದ ಗಾಂಧೀಜಿ ಹೋರಾಟಕ್ಕೂ ಮುನ್ನವೇ ವೀರರಾಣಿ ಅಬ್ಬಕ್ಕಳು ಪೋರ್ಚುಗೀಸರ ವಿರುದ್ಧ ಹೋರಾಟ ನಡೆಸಿದ್ದರು. ಅಬ್ಬಕ್ಕಳ ಕಾಲದಲ್ಲಿ ಹಿಂದೂ,…
ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿರುವ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮವನ್ನು ಫೆ.6ರಿಂದ ಫೆ.25ರವರೆಗೆ ಮಂಜನಾಡಿಯ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಯೆನೆಪೋಯ ನ್ಯಾಚುರೋಪತಿ ಆ್ಯಂಡ್ ಯೋಗ ಸೈನ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರಿನ್ಸಿಪಾಲ್ ಡಾ.ಪುನೀತ್ ತಿಳಿಸಿದ್ದಾರೆ. ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವು ಯೋಗಾಭ್ಯಾಸ, ಪ್ರಕೃತಿ ಚಿಕಿತ್ಸಾ ವಿಧಾನಗಳು, ಆಹಾರ ನಿಯಂತ್ರಣ ಮತ್ತು ಜೀವನಶೈಲಿ ಪರಿವರ್ತನೆಯ ಮೂಲಕ ಸ್ಥೂಲಕಾಯದ ಸಮಗ್ರ, ಸುರಕ್ಷಿತ ಹಾಗೂ ಸಹಜ ನಿರ್ವಹಣೆಯನ್ನು ಪರಿಣಿತ ವೈದ್ಯರ ಮಾರ್ಗದರ್ಶನದಲ್ಲಿ ಒದಗಿಸುವ ಉದ್ದೇಶವನ್ನು ಹೊಂದಿದೆ ಎಂದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳಾಗಿ ಪ್ರಮಾಣಾಧಾರಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನಗಳು, ಔಷಧ ರಹಿತ ಹಾಗೂ ಸಹಜ…
ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್ ಸುಭಾಷನಗರ ನಿವಾಸಿ ಅನ್ವರ್ ಯಾನೆ ಅನ್ವರ್ ಹುಸೈನ್ (42) ಬಂಧಿತ. ತಡೆದು ಹಣದ ಬೆದರಿಕೆ, ಅವಮಾನಿಸಿದ ಹಿನ್ನೆಲೆಯಲ್ಲಿ 2007 ರಲ್ಲಿ ಐಪಿಸಿ 341, 384, 504, 506 ರ ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಜೆಎಂಎಫ್ ಸಿ ಮೂರನೇ ನ್ಯಾಯಾಲಯಕ್ಕೆ ಹಾಜರಾಗದೇ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸದ್ದಾರೆ.
ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ ವಿಷಯವಾಗಿದೆ. ಈ ಅವಧಿಯಲ್ಲಿ ಸದಾ ಸಹಕಾರ, ಮಾರ್ಗದರ್ಶನ ಹಾಗೂ ಸಹಾನುಭೂತಿಯೊಂದಿಗೆ ಬೆಂಬಲ ನೀಡಿದ ಕೆನರಾ ಬ್ಯಾಂಕ್ನ ಎಲ್ಲಾ ಗೌರವಾನ್ವಿತ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿವರಾಮ ಕಾಸರಗೋಡು ಹೇಳಿದರು. ದೇರಳಕಟ್ಟೆ ಕೆನರಾ ಬ್ಯಾಂಕ್ ಶಾಖೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ನಿಸ್ವಾರ್ಥ ಸೇವಾಭಾವ, ಸಮಯೋಚಿತ ಸ್ಪಂದನೆ ಮತ್ತು ಗ್ರಾಹಕಪರ ದೃಷ್ಟಿಕೋನದಿಂದ ಬ್ಯಾಂಕಿನ ಕಾರ್ಯ ಯಶಸ್ವಿಯಾಗಿ ನೆರವೇರಲು ಸಾಧ್ಯವಾಯಿತು. ಈ ಸಂದರ್ಭದಲ್ಲಿ ಎಲ್ಲರ ಸಹಕಾರಕ್ಕೆ ಹೃತ್ಪೂರ್ವಕವಾಗಿ ಋಣಿಯಾಗಿದ್ದೇನೆ ಎಂದರು.ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಹಿರಿಯ ಪ್ರಬಂಧಕ ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆನರಾ ಬ್ಯಾಂಕ್ನಲ್ಲಿ ಕಳೆದ ನಾಲ್ಕು ದಶಕಗಳಿಂದ ಕಾರ್ಯನಿರ್ವಹಿಸಿ ನಿವೃತ್ತರಾಗುತ್ತಿರುವ ಶಿವರಾಮ ಕಾಸರಗೋಡು ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಸಾಂಸ್ಕೃತಿಕ…
ಹಿದಾಯತ್ ನಗರ:ಕೋಟೆಕಾರ್ ಹುಸೈನಿಯ್ಯ ದಅವಾ ದರ್ಸ್ ಅಲ್ ಹಿದಾಯ ಜುಮಾ ಮಸ್ಜಿದ್ ,ಕರ್ನಾಟಕ ಮುಸ್ಲಿಂ ಜಮಾಅತ್ ,ಎಸ್ ವೈ ಎಸ್,ಎಸ್ಸೆಸ್ಸಫ್, ಹಿದಾಯತ್ ನಗರ ಇದರ ವತಿಯಿಂದ ಮಹ್ಳರತುಲ್ ಬದ್ರಿಯ ವಾರ್ಷಿಕ , ದರ್ಸ್ ವಾರ್ಷಿಕ ಹಾಗೂ ” ಮಾದರಿ ಮದುವೆ ಶತದಿನ ಅಭಿಯಾನದ ” ಪ್ರಯುಕ್ತ ಯೂನಿಟ್ ಕಾನ್ಫರೆನ್ಸ್ ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ, ಅವರ ನೇತೃತ್ವದಲ್ಲಿ 2026 ಫೆಬ್ರವರಿ 08 ಆದಿತ್ಯವಾರ ಮಗ್ರಿಬ್ ನಮಾಝ್ ಬಳಿಕ ಮಸೀದಿ ವಠಾರದಲ್ಲಿ ಜರಗಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ,
ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕೇಂದ್ರ ಮಹಿಳಾ ಫಟಕದ ನವಮ ವಾರ್ಷಿಕೋತ್ಸವ ಪಾವಂಜೆ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ತಡಂಬೈಲ್ ವಹಿಸಿದ್ದರು. ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಗುತ್ತು ಸತೀಶ್ ಶೆಟ್ಟಿ ಅವರು ಅಸಕ್ತ ಕಲಾವಿದರ ಬದುಕಿಗೆ ಶಕ್ತಿ ತುಂಬಿದ್ದಾರೆ. ಕಲಾವಿದರ ವೈಯಕ್ತಿಕ ಬದುಕಿನ ಸತ್ಯವನ್ನು ಶೋಧಿಸಿದ ಪಟ್ಲರವರು ಆ ಕಾರಣಕ್ಕಾಗಿಯೇ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಿಸಿ ಕಲಾವಿದರಿಗೆ ಆಸರೆಯಾದರು ಎಂದವರು ತಿಳಿಸಿದರು. ಕಲಾವಿದರಿಗೆ ಮನೆ ನಿರ್ಮಣಕ್ಕೆ ಕಲಾವಿದರ ಮಕ್ಕಳಿಗೆ ಶಿಕ್ಷಣ ಮತ್ತು ಕಲಾವಿದರ ಆರೋಗ್ಯಕ್ಕೆ ಟ್ರಸ್ಟ್ ನಿಂದ ಸಹಾಯ ಮಾಡುತ್ತಿರುವುದನ್ನು ನಾವು ಕಾಣಬಹುದಾಗಿದೆ. ಟ್ರಸ್ಟ್ ಮೂಲಕ ನಿರಂತರ ಕಾರ್ಯಯೋಜನೆಗಳನ್ನು ಕೈಗೊಳ್ಳುತಿರುವ ಪಟ್ಲರ ಸಾಧನೆ ಶ್ಲಾಘನೆಗೆ ಪಾತ್ರವಾಗಿದೆ ಎಂದರು.ಪಟ್ಲ ಸತೀಶ್ ಶೆಟ್ಟಿ ಮಾತನಾಡಿ ಕೇಂದ್ರೀಯ ಮಹಿಳಾ ಘಟಕ ಕಳೆದ ಒಂಬತ್ತು ವರ್ಷಗಳಿಂದ ಕಲಾ ಸೇವೆ ಮಾಡುತ್ತಾ…

