ಉಳ್ಳಾಲ: ರಾಜ್ಯ ಸರಕಾರ ಟೈಲರ್ ನವರಿಗೆ ಘೋಷಣೆ ಮಾಡಿದ ಪರಿಹಾರದ ಸಹಾಯಧನವನ್ನು ಕೇವಲ ಬಿಪಿಎಲ್ ಕಾರ್ಡುದಾರರಿಗೆ ಮಾತ್ರ ನೀಡುವುದರಿಂದ ಶೇ.70 ಕ್ಕಿಂತ ಹೆಚ್ಚಿನ ಕಾರ್ಮಿಕರು ಸೌಲಭ್ಯ ವಂಚಿತರಾಗಿದ್ದಾರೆ. ಸಹಾಯಧನ ಪಡೆಯುವ ಕೊನೆಯ ದಿನಾಂಕವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಉಳ್ಳಾಲ ಕ್ಷೇತ್ರ ಸಮಿತಿ ವತಿಯಿಂದ ಶಾಸಕ ಯು.ಟಿ ಖಾದರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.ಪರಿಹಾರ ಮೊತ್ತ ರೂ.2,000 ಘೋಷಣೆ ಮಾಡುವ ಮೂಲಕ ಟೈಲರ್ ನವರಿಗೆ ನಿರಾಸೆ ಮಾಡಲಾಗಿದೆ. ಕಳೆದ ಬಾರಿ ಘೋಷಿಸಿದ ರೂ. 5,000 ಮೊತ್ತವನ್ನು ಕೊನೆಯ ಹಂತದಲ್ಲಿ ತಡೆಹಿಡಿದಿರುವುದರಿಂದ ಈ ಬಾರಿಯಾದರೂ ಅಷ್ಟೇ ಮೊತ್ತ ಘೋಷಿಸುವ ವಿಶ್ವಾಸವಿತ್ತು. ಒಂದೂವರೆ ತಿಂಗಳು ಅಂಗಡಿ ಬಂದ್ ಮಾಡಿ ಬಾಡಿಗೆ ಕೊಡಲು, ಲೋನ್ ಕಟ್ಟಲು , ದಿನ ಸಾಮಗ್ರಿ ಖರೀದಿಸಲು ಕಷ್ಟಕರವಾಗಿರುವ ಸಮಯದಲ್ಲಿ ರೂ.5,000 ಸಹಾಯಧನವನ್ನು ನೀಡಬೇಕು. ಮೇ.19ರ ಒಳಗೆ ಸ್ಮಾರ್ಟ್ ಕಾರ್ಡು ಮಾಡಿದ ಸದಸ್ಯರಿಗೆ ಮಾತ್ರ ಸೌಲಭ್ಯ ಎಂದು ನಮೂದಿಸಲಾಗಿದೆ. ಆ ಬಳಿಕ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು…
Author: UllalaVani
ಕುರ್ನಾಡು : ಕೊರೊನಾ ಕಾರಣದಿಂದ ಮೊದಲನೆಯ ಅಲೆ, ಎರಡನೆಯ ಅಲೆಯಿಂದಾದ ನಷ್ಟ ಸಂಕಷ್ಟ ತಪ್ಪಿಸಲು ಸಾಧ್ಯವಿಲ್ಲ. ಆದರೆ ಮುಂದೆ ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮದು ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.ಕರ್ಣಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯು. ಟಿ. ಖಾದರ್ ಅವರ ಸೂಚನೆಯಂತೆ ಕುರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದ ವೈದ್ಯರ ನಡೆ ಹಳ್ಳಿಯ ಕಡೆ ಗ್ರಾಮ ಮಟ್ಟದಲ್ಲಿ ಮನೆ ಮನೆ ಭೇಟಿ ಹಾಗೂ ಅನಾರೋಗ್ಯ ಪೀಡಿತರಿಗೆ ಧೈರ್ಯ ತುಂಬುವ ವಿನೂತನ ಕಾರ್ಯಕ್ರಮಕ್ಕೆ ಅವರು ಆನ್ಲೈನ್ ಮೂಲಕ ಚಾಲನೆ ನೀಡಿ ಮಾತನಾಡಿದರು.ಇದೊಂದು ಮಾದರಿ ಕಾರ್ಯಕ್ರಮವಾಗಿದ್ದು ಆರೋಗ್ಯಕ್ಕೆ ಸಂಬಂಧಪಟ್ಟಂತೆ ನಮ್ಮ ಜಿಲ್ಲೆಯಲ್ಲಿರುವ ವೈದ್ಯಕೀಯ ಸೌಲಭ್ಯವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು. ಈ ಕಾರ್ಯಕ್ರಮದಲ್ಲಿ ವೈದ್ಯರು ಕೇವಲ ಕೊರೊನಾ ಪರೀಕ್ಷೆ ಮಾತ್ರ ಮಾಡುವುದಲ್ಲ, ಅದರ ಜೊತೆಗೆ ಇತರ ಪರೀಕ್ಷೆ ಮಾಡುವ ಮೂಲಕ ಮನೆ ಬಾಗಿಲಲ್ಲಿ ಸೇವೆ…
ಉಳ್ಳಾಲ: ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ಎರಡು ಅಂಗಡಿ ಗಳ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕೆಸಿರೋಡ್ ನಲ್ಲಿ ಇರುವ ಗ್ರೀನ್ ಟ್ರೇಡರ್ಸ್ ಹಾಗೂ ಮಾಸ್ತಿ ಕಟ್ಟೆ ಯಲ್ಲಿ ಇರುವ ಕಾರ್ ವಾಶ್ ನಲ್ಲಿ ಎಂದಿನಂತೆ ಕೆಲಸ ಕಾರ್ಯಗಳು ನಡೆಯುತ್ತಿದ್ದವು. ಈ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಕೆಲಸ ಕಾರ್ಯಗಳನ್ನು ಸ್ಥಗಿತ ಗೊಳಿಸುವಂತೆ ಸೂಚಿಸಿದ್ದರು. ಅಲ್ಲದೆ ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಉಳ್ಳಾಲ, ತೊಕ್ಕೊಟ್ಟು , ಕಿನ್ಯ ಮುಂತಾದ ಪ್ರದೇಶಗಳಲ್ಲಿ ಅನಗತ್ಯ ವಾಗಿ ಓಡಾಡುತ್ತಿದ್ದ 25 ವಾಹನ ಗಳನ್ನು ವಶಪಡಿಸಿಕೊಂಡ ಉಳ್ಳಾಲ ಪೊಲೀಸರು ವಾಹನದ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.
ಮಾಧವಪುರ: ಲಾಕ್ಡೌನ್ ಉಲ್ಲಂಘಿಸಿ ಮೂರು ಬೈಕುಗಳಲ್ಲಿ ತಿರುಗುತ್ತಿದ್ದ ಮೂವರ ವಿರುದ್ಧ ಲಾಕ್ಡೌನ್ ಆದೇಶ ಉಲ್ಲಂಘಿಸಿದ ಕಾಯ್ದೆಯಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೂರು ಬೈಕುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಿಎಸ್ ಐ ರೇವಣ್ಣ ಸಿದ್ಧಪ್ಪ ರೌಂಡ್ಸ್ ನಲ್ಲಿದ್ದ ಸಂದರ್ಭ ಕಿನ್ಯಾ ಗ್ರಾಮದ ಮಾಧವಪುರ ಬಸ್ ನಿಲ್ದಾಣದ ಬಳಿ ಮೂರು ಮಂದಿ ಮೂರು ಬೈಕುಗಳಲ್ಲಿ ಅನಾವಶ್ಯವಾಗಿ ತಿರುಗಾಡುತ್ತಿದ್ದರು. ಮೂರು ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಸೂಚಿಸಿದಾಗ ನಿಲ್ಲಿಸದೆ ಪರಾರಿಯಾಗಿದ್ದರು. ಬಳಿಕ ಪರಿಶೀಲನೆ ನಡೆಸಿದಾಗ KA 19 EW 2549 , (2) KE 19 HB 4139 (3) KA 19 EJ 6357 ಮೂರು ಬೈಕ್ ಗಳ ಪತ್ತೆಯಾಗಿದೆ. ಮೂರನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ಮೂವರ ವಿರುದ್ಧ ಲಾಕ್ಡೌನ್ ಆದೇಶ ಉಲ್ಲಂಘಿಸಿದ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಳ್ಳಾಲ: ಕೊರೊನಾದಿಂದಾಗಿ ಇಡೀ ಸಮಾಜಕ್ಕೆ ಕತ್ತಲೆ ಕವಿದಿರುವ ಇಂತಹ ಸಂದರ್ಭದಲ್ಲಿಯೂ ಆಶಾಕಿರಣವಾಗಿ ಆಶಾ ಕಾರ್ಯಕರ್ತೆಯರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದುಕೊಂಡು ಕೆಲಸ ಮಾಡುತ್ತಿದ್ದು, ಅವರ ಸೇವೆ ಶ್ಲಾಘನೀಯವಾದುದು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಏಳು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಭಾನುವಾರ ನಾಟೆಕಲ್, ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಭಿನಂದನೆ ಹಾಗೂ ಪೆÇ್ರೀತ್ಸಾಹ ಧನವನ್ನು ವಿತರಿಸಿ ಅವರು ಮಾತನಾಡಿದರು.ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಬೆಂಗಳೂರಿನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ, ನರೇಂದ್ರ ಮೋದಿಯವರು ಕೊರೊನಾದಂತಹ ಸಂದಿಗ್ಧತೆಯ ಕಾಲದಲ್ಲೂ ಉತ್ತಮ ಆಡಳಿತದೊಂದಿಗೆ, ಕೊರೊನಾ ನಿಯಂತ್ರಣಕ್ಕಾಗಿ ಹಗಲಿರುಲು ಶ್ರಮಿಸುತ್ತಿದ್ದಾರೆ. ಅಲ್ಲದೆ ಕೊರೊನಾ ಸಂಕಷ್ಟ ಕಾಲದಲ್ಲಿ ಸಮಾಜದ ಸ್ವಾಸ್ಥ್ಯ ವನ್ನು ಕಾಪಾಡುವಲ್ಲಿ ಆಶಾಕಾರ್ಯಕರ್ತೆಯರ ಪಾತ್ರವು ಪ್ರಮುಖವಾದದ್ದು. ಸಮಾಜದಲ್ಲಿ ಅವರನ್ನು ಗೌರವಿಸುವ ಕೆಲಸಗಳು ಆಗಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ರಾಜ್ಯ ಅಧ್ಯಕ್ಷ…
ಉಳ್ಳಾಲ: ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ಭಾನುವಾರ ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೊಣಾಜೆ ಪೆÇೀಲಿಸ್ ಠಾಣೆಯ ಅಧಿಕ್ಷಕ ಮಲ್ಲಿಕಾರ್ಜುನ ಅವರು ಮಾತನಾಡಿ, ಕೊರೊನ ಸಮಯದಲ್ಲಿ ಯಾರೂ ಕೂಡಾ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೆಲವು ಸಮಾಜ ಸೇವಾ ಸಂಘಟನೆಗಳು ಸೌಹಾರ್ದತೆಯೊಂದಿಗೆ ಇಂತಹ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ. ಇಂತಹ ಕೆಲಸಗಳು ಸಮಾಜದಲ್ಲಿ ಹೆಚ್ಚೆಚ್ಚು ನಡೆಯಬೇಕಿದೆ ಎಂದರು.ಬೋಳಾ ನರಿಂಗಾನ ಚಚ್9 ನ ಧರ್ಮ ಗುರು ಫಾದರ್ ಮೈಕಲ್,ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಕೆ.ಶೆಟ್ಟಿ ಉಳಿದೊಟ್ಟುರೆಂಜಾಡಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಹನೀಫ್, ಶ್ರೀ ಅಯ್ಯಪ್ಪ ಸ್ವಾಮೀ ದೇವಸ್ಥಾನದ ಸಮಿತಿ ಅಧ್ಯಕ್ಷ ಜಗದೀಶ್ ರೈ, ಬೆಳ್ಮ ಗ್ರಾ.ಪಂ ಆಧ್ಯಕ್ಷ ಬಿ.ಎಂ ಅಬ್ದುಲ್ ಸತ್ತಾರ್, ಎಸ್ ಕೆಎಸ್ಸೆಸ್ಸಫ್ ಉಳ್ಳಾಲ ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ದಾರಿಮಿ, ದೇರಳಕಟ್ಟೆ ಬದ್ರಿಯ…
ಉಳ್ಳಾಲ: ಬ್ಯಾಟರಿ ಅಂಗಡಿ ಬೆಂಕಿಗೆ ಆಹುತಿಯಾದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ಗೋಲ್ಡನ್ ಇಲೆಕ್ಟ್ರಿಕಲ್ಸ್ ಅಂಗಡಿ ಇದಾಗಿದೆ. ಇಂದು ಬೆಳಗ್ಗಿನ ಜಾವ ಅಂಗಡಿಗೆ ಆಗಮಿಸಿದ್ದ ಭರತ್ ಅವರು ದೇವರಿಗೆ ದೀಪ ಇಟ್ಟು ಬಳಿಕ ಲಾಕ್ಡೌನ್ ಹಿನ್ನೆಲೆಯಲ್ಲಿ ಅಂಗಡಿಗೆ ಶಟರ್ ಹಾಕಿ ತೆರಳಿದ್ದರು. ಆದರೆ ಸ್ವಲ್ಪ ಹೊತ್ತಿನಲ್ಲಿ ಅಂಗಡಿಯೊಳಗಿನಿಂದ ಹೊಗೆ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ಶಟರ್ ಒಡೆದು ಒಳನೋಡಿದಾಗ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಸ್ಥಳೀಯರೆಲ್ಲರೂ ಸೇರಿಕೊಂಡು ನೀರು ಹಾಕಿ ನಂದಿಸಲು ಯತ್ನಿಸಿದರೂ ವಿಫಲವಾಯಿತು. ಬಳಿಕ ಯುವಕರ ತಂಡವೊಂದು ನೀರಿನ ಟ್ಯಾಂಕರ್ ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ನೀರು ಹಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಶಾಮಕ ದಳಕ್ಕೆ ದೂರು ನೀಡಲಾದರೂ, ಮಂಗಳೂರಿನಿಂದ ತೊಕ್ಕೊಟ್ಟುವಿಗೆ ಆಗಮಿಸುವಷ್ಟರಲ್ಲಿ ಸ್ಥಳೀಯರು ಸೇರಿಕೊಂಡು ಬೆಂಕಿಯನ್ನು ನಂದಿಸಿ ಆಗಿತ್ತು.
ಕೊಣಾಜೆ ಪಾವೂರಿನಲ್ಲಿ ಮೇ 20ರಂದು ತಮ್ಮ ಮಗಳ ಮದುವೆ ಕಾರ್ಯಕ್ರಮ ನಡೆಸಲು ಶೋಭ ಎಂಬುವರು ಪಾವೂರು ಪಂಚಾಯತಿಯಿಂದ ಅನುಮತಿ ಪಡೆದಿದ್ದರು. ಮದುವೆಗೆ ಮಾತ್ರ ಅನುಮತಿ ಪಡೆದ ವಧುವಿನ ಕಡೆಯವರು ಮದುವೆಯ ಮುನ್ನ ದಿನ ರಾತ್ರಿ ಮೆಹಂದಿ ಕಾರ್ಯಕ್ರಮದಲ್ಲಿ ಸಾಮೂಹಿಕ ನೃತ್ಯ ಮಾಡಿ, ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆ.ಅನುಮತಿ ಇಲ್ಲದಿದ್ದರೂ ಧ್ವನಿವರ್ಧಕ ಬಳಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನೃತ್ಯ ಮಾಡಿದ್ದಾರೆ. ಇದರ ವಿಡಿಯೋ ಗಮನಕ್ಕೆ ಬಂದ ಬಳಿಕ ಪಾವೂರು ಪಂಚಾಯತಿ ಪಿಡಿಓ ಸುಧಾರಾಣಿ ಅವರು ಕೋವಿಡ್ ನಿಯಮಾವಳಿ ಉಲ್ಲಂಘಿಸಿರುವುದರಿಂದ ಕಾನೂನು ಕ್ರಮ ಕೈಗೊಳ್ಳುವಂತೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಸೂಚಿಸಿದ್ದಾರೆ. ಅವರ ಆದೇಶ ಅನ್ವಯ ದೂರು ದಾಖಲಿಸಿಕೊಳ್ಳಲಾಗಿದೆ.
ಉಳ್ಳಾಲ : ವೈಯಕ್ತಿಕ ವರ್ಚಸ್ಸಿನ ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಕೆಲವರ ಮೇಲಿನ ಸೇಡನ್ನು ತೀರಿಸಲು ಶ್ರೀ ಕ್ಷೇತ್ರ ಕೊಂಡಾಣವನ್ನು ವೇದಿಕೆ ಮಾಡಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಕ್ರಮ ಇಡೀ ಗ್ರಾಮಸ್ಥರು ಮತ್ತು ಶ್ರೀ ಕ್ಷೇತ್ರದ ಭಕ್ತಾಧಿಗಳಿಗೆ ನೋವನ್ನು ತಂದಿದ್ದು, ಶ್ರೀ ಕ್ಷೇತ್ರದಲ್ಲಿ ಈ ಹಿಂದೆ ನಡೆದಂತೆ ಸಂಪ್ರಾದಾಯ, ಕಟ್ಟುಕಟ್ಟಳೆಯಂತೆ ಕಾರ್ಯಕ್ರಮಗಳನ್ನು ನಡೆಸಬೇಕು ಇದಕ್ಕೆ ವ್ಯವಸ್ಥಾಪನಾ ಸಮಿತಿ ವ್ಯವಸ್ಥೆ ಮಾಡಬೇಕು ಹೊರತು ಕಟ್ಟುಕಟ್ಟಳೆಯನ್ನು ಉಲ್ಲಂಘಿಸಿ ಕಾರ್ಯಕ್ರಮಗಳನ್ನು ನಡೆಸಬಾರದು,ವ್ಯವಸ್ಥಾಪನಾ ಸಮಿತಿ, ದೈವಸ್ಥಾನಕ್ಕೆ ಸಂಬಂಧಪಟ್ಟವರು ಮತ್ತು ಗ್ರಾಮಸ್ಥರು ಒಂದು ಸೇರಿ ಸಭೆ ನಡೆಸಿ ಸಮನ್ವಯ ಸಮಿತಿ ರಚಿಸಿ ಸಮಸ್ಯೆ ಬಗೆಹರಿಸುವ ಕಾರ್ಯ ಆಗಬೇಕು ಎಂದು ಶ್ರೀ ಕ್ಷೇತ್ರ ಕೊಂಡಾಣದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ರೈ ಕೋಟೆಕಾರು ಗುತ್ತು ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಕೊಂಡಾಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಧಾರ್ಮಿಕ ದತ್ತಿ ಇಲಾಖೆಯ ಕಾನೂನು ಇಡೀ ರಾಜ್ಯಕ್ಕೆ ಒಂದೇ ಕಾನೂನು ಆದರೆ ತುಳುನಾಡಿನ ದೈವಾರಾದನೆ ಕಟ್ಟುಪಾಡುಗಳ ಕುರಿತು ಪ್ರಸ್ತಾಪ ಇಲ್ಲ. ದೇವಸ್ಥಾನದಲ್ಲಿ…
ಉಳ್ಳಾಲ: ಕೇಂದ್ರ ಮತ್ತು ರಾಜ್ಯ ಸರಕಾರ ಎಪಿಎಂಸಿಯನ್ನು ಖಾಸಗೀಕರಣಗೊಳಿಸುವ ಮೂಲಕ ದೇಶದ ಬೆನ್ನೆಲುಬು ರೈತನಿಗೆ ಅನ್ಯಾಯ ಮಾಡುವುದರ ಜೊತೆಗೆ ವಿದ್ಯುತ್ ಶಕ್ತಿ ಇಲಾಖೆಯನ್ನು ಖಾಸಗೀಕರಣಗೊಳಿಸಿ ರೈತರನ್ನು ಕಂಗಾಲಾಗಿ ಮಾಡಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್ ಹೇಳಿದರು.ಅವರು ಕಿಸಾನ್ ಸಂಯುಕ್ತ ಮೋರ್ಚಾ ದೇಶವ್ಯಾಪಿ ಕರೆ ನೀಡಿರುವ ಕಪ್ಪು ಪಟ್ಟಿ ಪ್ರದರ್ಶನ ಅಂಗವಾಗಿ ಕುತ್ತಾರು ತೇವುಲದಲ್ಲಿ ಹಮ್ಮಿಕೊಂಡ ಕಪ್ಪು ಪಟ್ಟಿ ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು.ರೈತರ ಉತ್ಪತ್ತಿಗೆ ಎಪಿಎಂಸಿ ಯಲ್ಲಿ ಸೂಕ್ತ ಬೆಲೆ ದೊರೆಯುತಿತ್ತು. ಇದೀಗ ಅದನ್ನು ಖಾಸಗೀಕರಣಗೊಳಿಸು ಮೂಲಕ ರೈತರನ್ನು ಕಂಗಾಲಾಗಿ ಮಾಡಿದೆ.ಹೋರಾಟ ನಡೆಸಿ ಪಡೆದಂತಹ ಕೃಷಿಭೂಮಿಯನ್ನು ಭೂಸುಧಾರಣೆ ಕಾಯಿದೆ ಜಾರಿಗೆ ತಂದು ಬಂಡವಾಳಶಾಹಿ, ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುವ ವ್ಯವಸ್ಥೆ ಸರಕಾರ ಮಾಡಿದೆ. ಇದೆಲ್ಲವನ್ನು ಮುಂದಿಟ್ಟು 500 ರೈತ ಸಂಘಟನೆಗಳು ದೆಹಲಿಯಲ್ಲಿ ಆರು ತಿಂಗಳಿನಿಂದ ಬಿಸಿಲು-ಮಳೆಯೆನ್ನದೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. 180 ದಿನಗಳ ಪ್ರತಿಭಟನೆ ಮುಂದುವರಿದರೂ ಕೇಂದ್ರ ಸರಕಾರ ಮಾತ್ರ ಕಿವಿ ಕೇಳಿಸದ ರೀತಿಯಲ್ಲಿ ವರ್ತಿಸಿ ರೈತವಿರೋಧಿ, ಜನವಿರೋಧಿಯಾಗಿ…

