UN NETWORKS ಕುಂಪಲ : ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ, ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಕೃಷ್ಣ ಭಟ್ ಪೂಂಜಾಲಕಟ್ಟೆ ಪೌರೋಹಿತ್ಯದಲ್ಲಿ ನಡೆಯಿತು.
Author: UllalaVani
UN NETWORKS ಇರಾ : ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿ. ಪಂ ಹಿ ಪ್ರಾ ಶಾಲೆ ಇರಾ ಪರಪ್ಪು ಮತ್ತು ಇರಾ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನದಿಂದ ನಿರ್ಮಾಣಗೊಳ್ಳುವ ರಂಗಮಂದಿರಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು. ಟಿ. ಖಾದರ್ ಶಿಲಾನ್ಯಾಸಗೈದರು. ಬಳಿಕ ಮಾತನಾಡಿದ ಅವರು ಕ್ಷೇತ್ರದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇರಾ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ರಂಗಮಂದಿರವೂ ಕೂಡ ಸಹಕಾರಿಯಾಗಲಿದೆ. ಶಾಲಾ ಮಕ್ಕಳಿಗೆ ಶುಭ ಹಾರೈಸಿದ ಅವರು ಬಡವನಾಗಿ ಹುಟ್ಟಿದರೂ ಬಡವನಾಗಿಯೇ ಸಾಯಬೇಕಿಲ್ಲ. ಉತ್ತಮ ಶಿಕ್ಷಣವನ್ನು ಪಡೆದು ವಿದ್ಯಾವಂತರಾಗಬೇಕು ಎಂದು ತಿಳಿಸಿದರು. ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕುರ್ನಾಡು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ , ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಎಸ್.ಡಿ.ಎಂ.ಸಿ ಅಧ್ಯಕ್ಷ ಸೈಯದ್ ಪಿ.…
UN NETWORKS ಉಳ್ಳಾಲ : ತ್ಯಾಗ ಬಲಿದಾನದ ಸಂಕೇತವಾಗಿರುವ ಈದುಲ್ ಅಝ್ಆ ಹಬ್ಬವನ್ನು ಪರಸ್ಪರ ಅರ್ಥ ಮಾಡಿಕೊಂಡು ಆಚರಿಸಬೇಕಾಗಿದೆ. ಜಾತಿ, ಧರ್ಮ ಇಲ್ಲದೇ ಪ್ರೀತಿ, ಸ್ನೇಹದಿಂದ ಎಲ್ಲ ವರ್ಗ ಸೇರಿ ಹಬ್ಬದ ಮಹತ್ವ ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಈದುಲ್ ಅಝಾ ಹಬ್ಬದ ಪ್ರಯುಕ್ತ ಉಳ್ಳಾಲ ಸಯ್ಯದ್ ಮದನಿ ದರ್ಗಾ ಭೇಟಿ ನೀಡಿ ಪ್ರಾರ್ಥನೆ ಮಾಡಿದ ಬಳಿಕ ಅವರು ಮಾತನಾಡಿದರು. ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಮಾತನಾಡಿ ಹಬ್ಬಗಳಿರುವುದು ಮನೋರಂಜನೆಗಾಗಿ ಅಲ್ಲ. ಈದುಲ್ ಅಝಾ ತ್ಯಾಗ ಬಲಿದಾನದ ಹಬ್ಬವಾಗಿದ್ದು ಸೌಹಾರ್ದತೆಯಿಂದ ಆಚರಿಸಬೇಕಾಗಿದೆ.ಒಗ್ಗಟ್ಟು ಪ್ರದರ್ಶಿಸಿ ದೇಶ ಅಭಿವೃದ್ಧಿಯ ಕೆಲಸ ನಮ್ಮಿಂದ ಆಗಬೇಕು ಎಂದರು. ಖತೀಬ ಅಬ್ದುಲ್ ಅಝೀಝ್ ಬಾಖವಿ ಈದ್ ಖುತ್ಬಾ ಮತ್ತು ನಮಾಝ್ ನಿರ್ವಹಿಸಿದರು. ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹ, ಉಪಾಧ್ಯಕ್ಷ ಯು.ಕೆ. ಮೋನು ಇಸ್ಮಾಯಿಲ್, ಬಾವ ಮುಹಮ್ಮದ್, ಕೋಶಾ„ಕಾರಿ ಯು.ಕೆ ಇಲ್ಯಾಸ್, ಆಡಿಟರ್ ಯು.ಟಿ.…
UN NETWORKS ಉಳ್ಳಾಲ : ಕಡಲ್ಕೊರೆತದಿಂದಾಗಿ ತೀವ್ರಹಾನಿಗೊಳಗಾಗಿ ಕೊಚ್ಚಿ ಹೋಗಿರುವ ಉಚ್ಚಿಲ ಬೆಟ್ಟಂಪಾಡಿ ರಸ್ತೆ ಪ್ರದೇಶಕ್ಕೆ ಹಾಗೂ ಪೆರಿಬೈಲ್ ಪ್ರದೇಶಕ್ಕೆ ಶಾಸಕ ಯು.ಟಿ.ಖಾದರ್ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರಕಾರದ ಮುಖ್ಯ ಕಾರ್ಯದರ್ಶಿ ಜತೆಗೆ ಈಗಾಗಲೇ ಚರ್ಚಿಸಲಾಗಿದ್ದು, ಶೀಘ್ರವೇ ಹಾನಿಗೊಳಗಾದ ರಸ್ತೆ ಹಾಗೂ ಮನೆಗಳಿಗೆ ಪರಿಹಾರ ವ್ಯವಸ್ಥೆ ಕಲ್ಪಿಸಲು ಪ್ರಯತ್ನ ಪಡುವುದಾಗಿ ಭರವಸೆ ನೀಡಿದರು. ಬಳಿಕ ರಾಷ್ಟ್ರೀಯ ಹೆದ್ದಾರಿ ಉಚ್ಚಿಲ ಕಳೆದ ಹಲವಾರು ಸಮಯದಿಂದ ನೀರು ನಿಂತು, ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿತ್ತು. ಈ ಪ್ರದೇಶಕ್ಕೆ ಭೇಟಿ ನೀಡಿದ ಖಾದರ್ ಅವರು, ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಬಗೆಹರಿಸಲು ಆದೇಶ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರುಗಳಾದ ಈಶ್ವರ್ ಉಳ್ಳಾಲ್, ಸುರೇಶ್ ಭಟ್ನಗರ, ದಿನೇಶ್ ಕುಂಪಲ, ವಿಶಾಲ್ ಕೊಲ್ಯ, ಸೋಮೇಶ್ವರ ಮುಖ್ಯಾಧಿಕಾರಿ ವಾಣಿ ಆಳ್ವ ಮೊದಲಾದವರು ಉಪಸ್ಥಿತರಿದ್ದರು. ಹಾಗೆಯೇ ಮುನ್ನೂರು ಗ್ರಾಮದ ಉಳಿಯ ನೆರೆಪೀಡಿತ ಪ್ರದೇಶಗಳಿಗೆ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
UN NETWORKS ಮಂಗಳೂರು : ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಭಾಗಿತ್ವದಲ್ಲಿ ಕದ್ರಿಯ ಕೆಪಿಟಿಯಲ್ಲಿ ಜಿಲ್ಲಾಡಳಿತದಿಂದ ಆರಂಭಿಸಿರುವ ನೆರೆ ಸಾಮಗ್ರಿ ಸಂಗ್ರಹಣಾ ಕೇಂದ್ರಕ್ಕೆ ಒಂದು ಲಕ್ಷ ಮೌಲ್ಯದ ಮಿನರಲ್ ವಾಟರ್ ಹಾಗೂ ಆಹಾರ ಸಾಮಗ್ರಿಗಳನ್ನು ರವಿವಾರ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಗೋಕುಲ್ದಾಸ್ ನಾಯಕ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ನೆರೆ ಸಂತ್ರಸ್ತರಿಗೆ ಅಗತ್ಯವಿರುವ ಬಿಸ್ಕೆಟ್, ಕುಕೀಸ್, ಮಿನರಲ್ ವಾಟರ್ ಸೇರಿದಂತೆ ಆಹಾರ ಸಾಮಗ್ರಿಗಳನ್ನು ಹಸ್ತಾಂತರ ಮಾಡಿದ್ದಾರೆ. ಇದು ಶ್ಲಾಘನೀಯ ವಿಚಾರ. ಸಂಗ್ರಹಿಸಿದ ಸಾಮಗ್ರಿಗಳನ್ನು ದ.ಕ. ಜಿಲ್ಲೆಗೆ ಬಳಸಿಕೊಳ್ಳಲಾಗುವುದು. ಹೊರಜಿಲ್ಲೆಯಿಂದಲೂ ಬೇಡಿಕೆ ಬಂದಿದೆ ಎಂದರು. ರಾಜ್ಯದ ವಿವಿಧೆಡೆ ಪ್ರವಾಹ ಉಂಟಾಗಿ ಜನತೆ ಎಲ್ಲ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಜಿಲ್ಲಾಡಳಿತದಿಂದ ನೆರೆ ಸಂತ್ರಸ್ತರಿಗೆ…
UN NETWORKS ಉಳ್ಳಾಲ : ಉಳ್ಳಾಲ ನಗರಸಭೆಯ ಕಲ್ಲಾಪು ವಾರ್ಡಿನ ಪಕ್ಷೇತರ ಕೌನ್ಸಿಲರ್ ಮುಸ್ತಾಕ್ ಪಟ್ಲರವರಿಗೆ ದೈಹಿಕ ಹಲ್ಲೆ ನಡೆದಿರುವುದಕ್ಕೆ ಎಸ್.ಡಿ.ಪಿ.ಐ. ಉಳ್ಳಾಲ ನಗರ ಸಮಿತಿ ಮತ್ತು ಪಕ್ಷದ ಆರು ಕೌನ್ಸಿಲರ್ ಗಳು ಖಂಡಿಸಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ಮುಸ್ತಾಕ್ ಪಟ್ಲರವರನ್ನು ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ಅಕ್ರಮ್ ಹಸನ್ ,ಎಸ್.ಡಿ.ಪಿ.ಐ.ಕೌನ್ಸಿಲರ್ ರಮೀಝ್ ಕೋಡಿ ಬೇಟಿ ನೀಡಿದರು. ನೆರೆ ಪರಿಹಾರ ರಕ್ಷಣಾ ಕಾರ್ಯದಲ್ಲಿ ನಿರತರಾದ ಮುಸ್ತಾಕ್ ಪಟ್ಲರವರಿಗೆ ರಾಜಕೀಯ ವಿರೋಧಿಗಳ ಕುಮ್ಮಕ್ಕು ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪೋಲಿಸ್ ಇಲಾಖೆ ಹಲ್ಲೆ ನಡೆಸಿದವರನ್ನು ಮತ್ತು ಅವರ ಬೆಂಬಲಿಗರ ವಿರುದ್ಧ ಕೇಸು ದಾಖಲಿಸಲು ಮತ್ತು ಬಂಧಿಸಲು ಎಸ್.ಡಿ.ಪಿ.ಐ. ಉಳ್ಳಾಲ ನಗರ ಸಮಿತಿಯು ಆಗ್ರಹಿಸಿದೆ.
UN NETWORKS ಉಳ್ಳಾಲ : ಕಳೆದೆರಡು ದಿನಗಳಿಂದ ಸುರಿದ ಗಾಳಿ ಮಳೆಗೆ ನೇತ್ರಾವತಿ ನದಿ ಉಕ್ಕಿ ಹರಿದು ನದಿ ತಟದ ಪ್ರದೇಶಗಳು ಸೇರಿದಂತೆ ನಡುಗಡ್ಡೆಗಳು(ಕುದ್ರು)ಜಲಾವೃತಗೊಂಡಿದ್ದು, ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು ಉಳ್ಳಾಲ ವ್ಯಾಪ್ತಿಯ ವಿವಿಧ ಗ್ರಾಮಗಳ ನದಿ ತಟದ ಸುಮಾರು 300ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದ್ದು, ಹೆಚ್ಚುನ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಯಿತು. ಸ್ಥಳಕ್ಕೆ ಜಿಲ್ಲಾ„ಕಾರಿ ಭೇಟಿ ನೀಡಿದ್ದು, ಶಾಸಕ ಯು,ಟಿ, ಖಾದರ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಮತ್ತು ಸ್ಥಳೀಯ ಕೌನ್ಸಿಲರ್ ಗಳ ನೇತೃತ್ವದಲ್ಲಿ ಸಂಘ ಸಂಸ್ಥೆಗಳು ಸಂಘಟನೆಗಳ ಯುವಕರು ರಕ್ಷಣೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉಳ್ಳಾಲ ಭಾಗಶ: ಜಲಾವೃತ : ಉಳ್ಳಾಲ ನಗರಸಭಾ ವ್ಯಾಪ್ತಿಯ ನೇತ್ರಾವತಿ ನದಿ ತಟದ ಭಾಗಶ: ಪ್ರದೇಶಗಳು ಜಲಾವೃತಗೊಂಡಿದೆ. ಉಳ್ಳಾಲದ ಪ್ರಮುಖ ದ್ವೀಪ ಪ್ರದೇಶವಾಗಿರುವ ಉಳ್ಳಾಲ ಉಳಿಯ ವ್ಯಾಪ್ತಿಯಲ್ಲಿ ಸುಮಾರು 25 ಮನೆಗಳು ಜಲಾವೃತಗೊಂಡಿದ್ದು ಇದರಲ್ಲಿ 10 ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಉಳ್ಳಾಲ ಹೊೈಗೆ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು…
UN NETWORKS ಕೊಣಾಜೆ : ಗ್ರಂಥಸಂಪಾದನಾ ಶಾಸ್ತ್ರವನ್ನು ಪ್ರಾಚೀನ ಕಾಲದ ಗ್ರಂಥಸಂಪಾದನೆಗಳಿಗಷ್ಟೇ ಸೀಮಿತಗೊಳಿಸದೆ ಆಧುನಿಕ ಕಾಲದ ಹಸ್ತಪ್ರತಿ ಸಾಹಿತ್ಯ ಮತ್ತು ಜನಪದ ಮೌಖಿಕ ಪಠ್ಯಗಳ ಸಂಪಾದನೆಗೂ ಇದನ್ನು ವಿಸ್ತರಿಸುವ ಕಾರ್ಯ ಅಗತ್ಯವಾಗಿ ಆಗಬೇಕಿದೆ ಎಂದು ಹಾವೇರಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಚಿನ್ನಪ್ಪ ಗೌಡ ಅವರು ಅಭಿಪ್ರಾಯಪಟ್ಟರು. ಅವರು ಗುರುವಾರ ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ ವಿವಿಯಲ್ಲಿ ಕನ್ನಡ ಗ್ರಂಥ ಸಂಪಾದನೆ: ಹೊಸ ಚಿಂತನೆಗಳು ಎಂಬ ವಿಷಯದಲ್ಲಿ ಮೂರು ದಿನಗಳ ಕಾಲ ನಡೆದ ವಿಚಾರಸಂಕಿರಣದ ಸಮಾರೋಪ ಭಾಷಣದಲ್ಲಿ ಮಾತನಾಡಿದರು.ಪ್ರಾಚೀನ ಕಾಲದ ತಾಳೆಗರಿಯ ಕಾವ್ಯ ವಸ್ತುಶಾಸ್ತ್ರ ಗ್ರಂಥಗಳನ್ನು ಪ್ರಕಟಿಸುವ ಗ್ರಂಥ ಸಂಪಾದನಾ ಶಾಸ್ತ್ರಕ್ಕೆ ಮಹತ್ವದ ಸ್ಥಾನವಿದೆ. ಈ ಶಾಸ್ತ್ರವು ಸಂಕೀರ್ಣವಾದ ಮತ್ತು ಬೆಳವಣಿಗೊಳ್ಳುತ್ತಾ ಬಂದ ಅಧ್ಯಯನ ಶಿಸ್ತು ಆಗಿದೆ. ಗ್ರಂಥ ಸಂಪಾದನಾ ಶಾಸ್ತ್ರವು ಸಾಹಿತ್ಯ ಚರಿತ್ರೆಯ ಚರಿತ್ರೆ ಮತ್ತು ಕವಿ ಕೇಂದ್ರಿತ, ಕೃತಿ ಕೇಂದ್ರಿತ ಹಾಗೂ ಓದುಗ…
UN NETWORKS ಕೊಣಾಜೆ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಕೊಣಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾರಿಪ್ಪಾಡಿ ಸೈಟ್ನಲ್ಲಿಯ ಮಾರ್ಟಿನ್ ಪೆರಾವೋ ಎಂಬವರ ಮನೆಗೆ ಬುಧವಾರ ಸುರಿದ ಭಾರೀ ಗಾಳಿ ಮಳೆಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಅಪಾರ ಹಾನಿ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ. ಕೊಣಾಜೆ ನಡುಪದವು ಕಲ್ಲುಗುಂಡಿಯ ಖಾದರ್ ಹಾಜಿ ಎಂಬವರ ಮನೆ ಬಳಿಯ ಮರವೊಂದು ವಿದ್ಯುತ್ ತಂತಿಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ವಿದ್ಯುತ್ ಕಂಬಗಳು ಧರೆಗುರಳಿದೆ. ಅಲ್ಲದೆ ಇಲ್ಲಿಯೇ ಸಮೀಪದ ಸುಧಾಕರ್ ಎಂಬವರ ಮನೆ ಸಮೀಪದ ಹಲಸಿನ ಮರವೊಂದು ಬುಧವಾರ ರಾತ್ರಿ ಗಾಳಿಗೆ ಮುರಿದು ಬಿದ್ದಿದೆ. ಪಟ್ಟೋರಿಯ ಶ್ರೀ ನಾಗಬ್ರಹ್ಮ ಉಳ್ಳಾಲ್ತಿ ದೈವಸ್ಥಾನದ ಮುಂಭಾಗದ ಆವರಣ ಗೋಡೆಯು ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಕುಸಿದು ಬಿದ್ದು ಹಾನಿ ಸಂಭವಿಸಿದೆ. ಕೊಣಾಜೆ ದೊಡ್ಡುಗುಳಿಯ ಗೋಪಾಲ್ ಎಂಬವರ ಮನೆ ಸಮೀಪದ ಗುಡ್ಡದ ಮಣ್ಣು ಕುಸಿದು ಮನೆಗೆ ಹಾನಿ ಸಂಭವಿಸಿದೆ.
UN NETWORKS ತೊಕ್ಕೊಟ್ಟು : ಕಾಂಗ್ರೆಸ್ ಅಧಿಕಾರದ ಸುಖ ಅನುಭವಿಸಲು ಮತ ಬ್ಯಾಂಕ್ ಸೃಷ್ಟಿಗಾಗಿ ಮಾಡಿರುವ ದುರಂತಮಯ ಕಾಯ್ದೆಗಳನ್ನು ರದ್ದುಗೊಳಿಸಿ ಸಬ್ ಕಾ ಸಾಥ್ ಸಬ್ ವಿಕಾಸ್ ದೋರಣೆಯೊಂದಿಗೆ ಹೆಜ್ಜೆ ಇಡುತ್ತಿರುವ ನರೇಂದ್ರ ಮೋದಿಯವರ ಆಡಳಿತದ ಕೇಂದ್ರ ಸರಕಾರ ಜಮ್ಮು ಕಾಶ್ಮೀರ ಕ್ಕೆ ನೀಡಿರುವ ವಿಶೇಷ ಸ್ಥಾನಮಾನ 370 ಮತ್ತು 35 A ಕಾಯ್ಧೆಯನ್ನು ರದ್ದುಗೊಳಿಸಿದ ಐತಿಹಾಸಿಕ ತೀರ್ಮಾನವನ್ನು ಅಭಿನಂದಿಸಿ ಮಂಗಳೂರು ಕ್ಷೇತ್ರ ಬಿ.ಜೆ.ಪಿ.ಯಿಂದ ತೊಕ್ಕೊಟಿನಲ್ಲಿ ಸಿಹಿ ತಿಂಡಿ ನೀಡಿ ಹರ್ಷಾಚರಣೆಗೈಯಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ,ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರವೀಂದ್ರ ಶೆಟ್ಟಿ, ಮಾಜಿ ಅಧ್ಯಕ್ಷ ರಾದ ಚಂದ್ರಶೇಖರ ಉಚ್ಚಿಲ್, ಹಿರಿಯರಾದ ಸಂಜೀವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಮಾತನಾಡಿದರು. ಕ್ಷೇತ್ರದ ಉಪಾಧ್ಯಕ್ಷ ರಾದ ಹರಿಯಪ್ಪ ಸಾಲ್ಯಾನ್, ಪ್ರಕಾಶ್ ಸಿಂಫೋನಿ, ಮಹಿಳಾ ಮೋರ್ಚಾದ ಜಿಲ್ಲಾ ಪ್ರ.ಕಾರ್ಯದರ್ಶಿ ರಾಜೀವಿ ಕೆಂಪುಮಣ್ಣು, ಮಾಧ್ಯಮ ಸಂಚಾಲಕರಾದ ಜೀವನ್ ಕುಮಾರ್ ತೊಕ್ಕೊಟು, ಪ್ರಮುಖರಾದ ಚಂದ್ರಹಾಸ ಪಂಡಿತ್ ಹೌಸ್, ಪ್ರಶಾಂತ್ ಕಾಪಿಕಾಡ್, ಅಜಂತ್…

