ಉಳ್ಳಾಲ: ಮಣ್ಣು, ಕಲ್ಲು, ಮರ, ಪ್ರಾಣಿಪಕ್ಷಿಗಳಲ್ಲಿ ದೇವರನ್ನು ಕಾಣುವವರು ಹಿಂದೂಗಳು. ಇಲ್ಲಿ ದೈವೀ ಶಕ್ತಿಯೆದುರು ಅನ್ಯಾಯವೆಸಗಿ ಬದುಕಲು ಸಾಧ್ಯವೇ ಇಲ್ಲ. ಕೆಲವರಿಗೆ ಶುಕ್ರವಾರ ಮಧ್ಯಾಹ್ನ ಪ್ರಾರ್ಥನೆ ಮಾಡಿದರೆ , ಇನ್ನು ಕೆಲವರಿಗೆ ಭಾನುವಾರ ಪ್ರಾರ್ಥನೆ ಮಾಡಿದಲ್ಲಿ ಮಾತ್ರ ದೇವರು ಸಿಗುತ್ತಾನೆ. ಆದರೆ ಹಿಂದೂ ಧರ್ಮಕ್ಕೆ ಪ್ರತಿನಿತ್ಯವೂ ಪ್ರಾರ್ಥನೆ ಮಾಡಿದಲ್ಲಿ ದೇವರು ಕಾಣುತ್ತಾನೆ ಎಂದು ಆರ್ ಎಸ್ ಎಸ್ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್ಯಕಾರಿ ಸಮಿತಿ ಪ್ರಮುಖ್ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ಕೊರಗತನಿಯ ಸೇವಾ ಸಮಿತಿ (ಕೆಟಿಎಸ್ ಎಸ್ ಬಾಯ್ಸ್ ) ಪಿಲಾರು ಪ್ರಕಾಶನಗರ ದ 10 ನೇ ವಾರ್ಷಿಕೋತ್ಸವ ಹಾಗೂ ಬಿಸು ಪರ್ಬ-2021 ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಭಾಗವಹಿಸಿ ಮಾತನಾಡಿದರು. ಹಿಂದೂಗಳ ದೇವರ ಆರಾಧನೆಗೆ ನಿಗದಿತ ಸಮಯವಿಲ್ಲ, ದಿನವಿಲ್ಲ, ಧಿಕ್ಕುಗಳಿಲ್ಲ. ಆದರೆ ಕೆಲವರಿಗೆ ಶುಕ್ರವಾರ ನಮಾಜ್ ಮಾಡಿದರೆ ಮಾತ್ರ ದೇವರು ಕಾಣುತ್ತಾನೆ. ಇನ್ನು ಕೆಲವರಿಗೆ ಭಾನುವಾರ ಪ್ರಾರ್ಥನೆ ಮಾಡಿದಲ್ಲಿ ಮಾತ್ರ ದೇವರು…
Author: UllalaVani
ಉಳ್ಳಾಲ: ಪುರಾಣ ಪ್ರಸಿದ್ಧ ಶ್ರೀ ಸೋಮನಾಥ ದೇವರ ಸಾನಿಧ್ಯದಲ್ಲಿ ನೂತನ ಬ್ರಹ್ಮರಥ ಸಮರ್ಪಣೆಯೊಂದಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಎಪ್ರಿಲ್ 18ರಿಂದ 26ರ ವರೆಗೆ ನಡೆಯಲಿದ್ದು, ಈ ಪ್ರಯುಕ್ತ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಬುಧವಾರ ಉಳ್ಳಾಲದ ಸಯ್ಯದ್ ಮದನಿ ದರ್ಗಾಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ರವರನ್ನು ಆಮಂತ್ರಣ ಪತ್ರಿಕೆ ನೀಡಿ ಆಮಂತ್ರಿಸಿದರು.ಈ ಸಂದರ್ಭ ಮಾತನಾಡಿದ ಅವರು ಸುಮಾರು ಸಾವಿರದ ಐನೂರು ವರ್ಷಗಳ ಇತಿಹಾಸವಿರುವ ಈ ದೇವಸ್ಥಾನ ಉಳ್ಳಾಲ ಪ್ರದೇಶಕ್ಕೆ ಹೆಸರು ತಂದುಕೊಟ್ಟ ಪುಣ್ಯಕ್ಷೇತ್ರ, ಕಳೆದ ವರ್ಷ ಕೊರೋನಾ ಮಹಾಮಾರಿಯಿಂದಾಗಿ ಮುಂದೂಡಲ್ಪಟ್ಟಿತ್ತು. ಆದರೆ ದೇವರ ಯಾವುದೇ ಕಾರ್ಯ ಅವರ ಅನುಮತಿ ಸಮ್ಮತಿ ಬೇಕು, ಈಗ ಆಕಾಲ ಕೂಡಿ ಬಂದಿದೆ ಎಂದರು. ಅಲ್ಲದೆ ಸನ್ನಿಧಾನದಲ್ಲಿ ನಡೆಯುವ ಎಲ್ಲಾ ಕಾರ್ಯಗಳು ಯಾವುದೇ ವಿಘ್ನವಿಲ್ಲದೆ ಉತ್ತಮ ರೀತಿಯಲ್ಲಿ ನಡೆಸುವಂತಹ ಭಾಗ್ಯವನ್ನು ದೇವರು ಕಲ್ಪಿಸಿ ಕೊಡಲಿ. ಆ ಮೂಲಕ ಎಲ್ಲಾ ವರ್ಗಗಳ ಜನರು ಭಾಗವಹಿಸಿಕೊಂಡು ಸೌಹಾರ್ಧತೆಯನ್ನು ಮೆರೆಯುವುದರ ಜೊತೆಗೆ ನಾವು ದೇವರ ಮಕ್ಕಳು ಎಂಬ ದೃಷ್ಠಿಯಲ್ಲಿ ಒಂದಾಗಿ…
ಉಳ್ಳಾಲ: ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ದಾವಣಗೆರೆಯಲ್ಲಿ ಅಪಘಾತವಾಗಿದ್ದು ಖಾದರ್ ಅಪಾಯದಿಂದ ಪಾರಾಗಿದ್ದಾರೆ.ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ಬಳಿಯ ಹೆಬ್ಬಾಳದ ರಾಷ್ಟ್ರೀಯ ಹೆದ್ದಾರಿ 4 ರ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖಾದರ್ ಬೆಂಗಳೂರಿನಿಂದ ಬೆಳಗಾವಿ ಕಡೆಗೆ ಪ್ರಯಾಣಿಸುತ್ತಿದ್ದರು.ಹಂಪ್ಸ್ ನಲ್ಲಿ ಮುಂದಿನಿಂದ ನಿಧಾನವಾಗಿ ಸಾಗುತ್ತಿದ್ದ ಕಂಟೇನರ್ ಲಾರಿಗೆ ಖಾದರ್ ಅವರ ಕಾರು ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಖಾದರ್ ಮತ್ತು ಕಾರಿನ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಜಖಂ ಆಗಿದ್ದು ಖಾದರ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಕುರಿತು ದಾವಣಗೆರೆ ಎಸ್.ಪಿ ಹನಮಂತರಾಯ ಅವರೊಂದಿಗೆ ಖಾದರ್ ಅಪಘಾತದ ಮಾಹಿತಿ ನಡೆಸಿದರು.
ತೊಕ್ಕೊಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನೂತನವಾಗಿ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದ ಪಿಲಾರು ದಾರಂದಬಾಗಿಲು ನಿವಾಸಿ ಸಂತೋಷ್ (35) ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸುರಿಬೈಲು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಸಹಸವಾರ ರಂಜಿತ್ ಗಾಯಗೊಂಡಿದ್ದಾರೆ. ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಪಿಕಪ್ ವಾಹನವನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ (ಎಸ್ ಕೆ ಡಿ ಆರ್ ಪಿ)ಯಲ್ಲಿ ಸಿಬ್ಬಂದಿಯಾಗಿ ಆಯ್ಕೆಗೊಂಡಿದ್ದ ಇವರು ಧಾರವಾಡದಲ್ಲಿ ತರಬೇತಿ ಮುಗಿಸಿ ಇತ್ತೀಚೆಗೆ ಆಗಮಿಸಿದ್ದರು. ಮೃತರು ತಾಯಿ, ಇಬ್ಬರು ಸಹೋದರಿಯರು ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.
ಉಳ್ಳಾಲ: ಅಪರಿಚಿತ ಕಾರು ಢಿಕ್ಕಿ ಹೊಡೆದು ರಸ್ತೆಗುರುಳಿದ ಸ್ಕೂಟರ್ ಸವಾರನ ಮೇಲೆ ಸಿಟಿ ಬಸ್ ಚಲಿಸಿದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ.66ರ ಎಕ್ಕೂರು ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.ಧೀಮಂತ್ ರಭೀಂದ್ರ ಮೃತರು. ಅತ್ತಾವರದ ಲೆನ್ಸ್ ಕಾರ್ಟ್.ಕಾಂ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಇವರು ತೊಕ್ಕೊಟ್ಟುವಿನಲ್ಲಿ ಬಾಡಿಗೆ ಮನೆಯನ್ನು ಹೊಂದಿದ್ದರು. ಅಲ್ಲಿಂದ ಇಂದು ಬೆಳಿಗ್ಗೆ ಉದ್ಯೋಗಕ್ಕೆ ತೆರಳುವ ಸಂದರ್ಭ ಇವರಿದ್ದ ಸ್ಕೂಟರಿಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ರಭೀಂದ್ರ ಅವರ ಮೇಲೆ ಅದೇ ರಸ್ತೆಯಾಗಿ ಚಲಿಸುತ್ತಿದ್ದ ಸಿಟಿ ಬಸ್ ಚಲಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಗಾಯಾಳುವನ್ನು ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಕೊಂಡೊಯ್ದರಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಕೊಲೆಯಾದ ಆಕೀಫ್ ಪ್ರಕರಣದ ಆರೋಪಿಯ ಮನೆಯನ್ನು ಗುಟ್ಟಾಗಿ ಸ್ಥಳಾಂತರಿಸಲಾಗುತಿತ್ತು, ಈ ಬಗ್ಗೆ ಪೊಲೀಸ್ ಕಮೀಷನರ್ ಗಮನ ಸೆಳೆದಾಗ ಪ್ರಕ್ರಿಯೆ ನಿಂತಿತ್ತು. ಇದು ಸಾಕ್ಷ್ಯ ನಾಶ ಮಾಡಲು ಮಾಡುತ್ತಿರುವ ತಂತ್ರವಾಗಿದೆ ಎಂದು ಜಸ್ಟಿಸ್ ಫಾರ್ ಆಕಿಫ್ ನಾಗರಿಕರ ಸಮಿತಿ ಕೆಸಿರೋಡ್ ಮುಖಂಡ ಖಲೀಲ್ ತಲಪಾಡಿ ಆರೋಪಿಸಿದ್ದಾರೆ. ಅವರು ಜಸ್ಟಿಸ್ ಫಾರ್ ಆಕಿಫ್ ನಾಗರಿಕರ ಸಮಿತಿ ಕೆಸಿರೋಡ್ ಇದರ ಆಶ್ರಯದಲ್ಲಿ ಕೆಸಿರೋಡ್ ನಲ್ಲಿ ಸೋಮವಾರ ನಡೆಸಿದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಆಕಿಫ್ ನಿಗೂಢ ಕೊಲೆ ಯ ಹಿಂದೆ ಏನಿದೆ ಎಂಬ ಪ್ರಶ್ನೆ ಎಲ್ಲರಲ್ಲಿ ಮನೆ ಮಾಡಿದೆ. ಇದಕ್ಕೆ ಸೂಕ್ತ ಉತ್ತರ ಬೇಕಾಗಿದೆ. ಘಟನೆಯ ದಿನದಂದು ಪೆÇಲೀಸ್ ಕಮಿಷನರ್ ಶಶಿಕುಮಾರ್ ಅವರು ಮನೆ ಮಗನಂತೆ ನೋಡಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಬಾಲಾರೋಪಿಯ ವಾಸ್ತವ ಇದ್ದ ಸ್ಥಳದಿಂದ ಕೆಲವು ಸರಕುಗಳನ್ನು ಗುಟ್ಟಾಗಿ ಸಾಗಾಟ ಮಾಡುವ ಪ್ರಯತ್ನ ನಡೆದಿದೆ.ಈ ಬಗ್ಗೆ ಕಮಿಷನರ್ ಗಮನ ಸೆಳೆದಾಗ ಸಾಗಾಟ ಸ್ಥಗಿತ ಆಗಿತ್ತು. ಆಕಿಫ್ ಕೊಲೆ…
ಉಳ್ಳಾಲ: ಯುವತಿಗೆ ಗುಪ್ತಾಂಗ ತೋರಿಸಿದ ಆರೋಪಿಯನ್ನು ದೂರು ದಾಖಲಾದ ಗಂಟೆಯೊಳಗೆ ಉಳ್ಳಾಲ ಠಾಣಾಧಿಕಾರಿ ಸಂದೀಪ್ ಮಾರ್ಗದರ್ಶನದಲ್ಲಿ ಪಿ ಎಸ್ ಐ .ಶಿವಕುಮಾರ್ ಮತ್ತು ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದೆ.ಪಿಲಾರು ನಿವಾಸಿ ಮಹಮ್ಮದ್ ಆರೀಫ್ (27) ಬಂಧಿತ. ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ ಕುತ್ತಾರು ಜಂಕ್ಷನ್ ಕಡೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಮಾಸ್ಕ್ ಮತ್ತು ಟೋಪಿ ಧರಿಸಿಕೊಂಡು ಮೊಬೈಲಲ್ಲಿ ಮಾತನಾಡುತ್ತಾ ತನ್ನ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿದ್ದಾನೆ ಎನ್ನಲಾಗಿದೆ.ಬೆದರಿದ ಯುವತಿ ಹತ್ತಿರದ ಟೈಲರ್ ಅಂಗಡಿಗೆ ನುಗ್ಗಿ ಸಹಾಯ ಯಾಚಿಸಿದ್ದಾಳೆ. ಕೂಡಲೇ ಅಲ್ಲಿ ನೆರೆದಿದ್ದ ಜನರು ಎಚ್ಚೆತ್ತಾಗ ಗುಪ್ತಾಂಗ ತೋರಿಸಿದಾತ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕೃತ್ಯ ಎಸಗಿದ ಆರೋಪಿಯ ಫೋಟೊವನ್ನು ಕಾರು ಚಾಲಕರೊಬ್ಬರು ಸೆರೆ ಹಿಡಿದಿದ್ದಾರೆ.ಆರೋಪಿ ಈ ಹಿಂದೆಯೂ ಇದೇ ರೀತಿ ಕೃತ್ಯವನ್ನು ಮಹಿಳೆ ಮುಂದೆ ಎಸಗಿದ್ದನೆನ್ನಲಾಗಿದೆ. ನೊಂದ ಯುವತಿಯ ತಾಯಿ ಉಳ್ಳಾಲ ಠಾಣೆಗೆ ನೀಡಿದ ದೂರಿನಂತೆ ಆರೋಪಿಯನ್ನು ಗಂಟೆಯೊಳಗೆ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ: ಮೀನುಗಾರಿಕಾ ದೋಣಿ ಮತ್ತು ಹಡಗು ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಮೀನುಗಾರಿಕಾ ದೋಣಿಯಲ್ಲಿದ್ದ 9 ಮಂದಿ ನಾಪತ್ತೆಯಾಗಿದ್ದು, ಮೂವರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿರುವ ಘಟನೆ ಮಂಗಳೂರು ಬಂದರಿನಿಂದ 60 ನಾಟಿಕಲ್ ಮೈಲು ದೂರವಾದ ಮಂಜೇಶ್ವರ-ಉಳ್ಳಾಲ ಸಮುದ್ರ ಮಧ್ಯದಲ್ಲಿ ಇಂದು ಸಂಭವಿಸಿದೆ.ಉಪ್ಪಳದ ಬೇಕೂರಿನಿಂದ ಮೀನುಗಾರಿಕೆಂದು ಹೊರಟಿದ್ದ ದೋಣಿಗೆ ಸಮುದ್ರ ಮಧ್ಯದಲ್ಲಿ ಸರಕು ಸಾಗಾಟದ ಹಡಗು ಢಿಕ್ಕಿ ಹೊಡೆದಿದೆ. ಪರಿಣಾಮ ದೋಣಿ ಸಂಪೂರ್ಣ ಹಾನಿಗೀಡಾಗಿದ್ದು , ದೋಣಿಯಲ್ಲಿದ್ದ 14 ಮಂದಿ ಮೀನುಗಾರರರು ಸಮುದ್ರ ಪಾಲಾಗಿದ್ದರು. ಮಾಹಿತಿ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್ ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಿ ಸದ್ಯ ಮೂವರನ್ನು ರಕ್ಷಿಸಿದ್ದಾರೆ. ಸಮುದ್ರ ಮಧ್ಯದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.
ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಆಡಳಿತ ಬಹಳಷ್ಟು ಕಾಮಗಾರಿ ನಡೆಸಿದ್ದು ಕನೀರುತೋಟ ರಸ್ತೆ ಕಾಮಗಾರಿ ಆದಷ್ಟು ಬೇಗ ನಡೆಯಲಿ. ಮುಂದಿನ ಬಾರಿ ಚುನಾವಣೆಯಲ್ಲೂ ಜನರ ಆಶೀರ್ವಾದ ಇಲ್ಲಿನ ಜನಪ್ರತಿನಿಧಿಗಳ ಮೇಲೆ ಸದಾ ಇರಲಿ ಎಂದು ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.ಅವರು ಕೊಲ್ಯ ಕನೀರುತೋಟ ರಸ್ತೆ ಗೆ ರೂ. 14 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರೀಟಿಕರಣ ಕಾಮಗಾರಿಗೆ ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಚಾಲನೆ ನೀಡಿದರು.ಪಟ್ಟಣ ಪಂಚಾಯಿತಿ ಅಧ್ಯಕ್ಷರ ಅನುದಾನದಿಂದ ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಲಿದ್ದು ಇನ್ನಷ್ಟು ಅನುದಾನ ಗ್ರಾಮಕ್ಕೆ ಸಿಗುವಂತಾಗಲಿ ಎಂದರು.ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಪ್ರಫುಲ್ಲದಾಸ್, ಕೋಟೆಕಾರು ಶಕ್ತಿಕೇಂದ್ರ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ, ಪ್ರ.ಕಾ ಪುರುಷೋತ್ತಮ್ ಗಟ್ಟಿ, ಹಿರಿಯ ಮುಖಂಡ ಸೀತಾರಾಮ ಬಂಗೇರ, ಕೋಟೆಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಶೇಖರ್ ಕನೀರುತೋಟ, ಮುಖಂಡ ಯಶವಂತ ಅಮೀನ್,…
ಉಳ್ಳಾಲ: ಬಾಲಕಿಯೋರ್ವಳು ಮನೆಯೊಳಗೆ ಶಾಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ಶನಿವಾರದಂದು ನಡೆದಿದೆ.ಕಾಸರಗೋಡು ಎಡನೀರು ನಿವಾಸಿ ಕೃಷ್ಣ ನಾಯ್ಕ್ ಎಂಬವರ ಪುತ್ರಿ ಮೇಘಶ್ರೀ (13) ಸಾವನ್ನಪ್ಪಿದ ಬಾಲಕಿ. ಚೆರ್ಕಳ ಎಡನೀರು ಮಠದ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ ಕೋಟೆಕಾರಿನ ಮಾವನ ಮನೆಯಲ್ಲಿ ಒಂದು ತಿಂಗಳಿನಿಂದ ಇದ್ದಳು. ಹಾಡು ಹಾಕಿ ನೃತ್ಯ ಮಾಡುವ ಹವ್ಯಾಸ ಹೊಂದಿದ್ದ ಈಕೆ, ವೇಲು ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಮೇಘಶ್ರೀ ಸಾವಿನಲ್ಲಿ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆಮಂದಿಯನ್ನು ಹಾಗೂ ಹೆತ್ತವರನ್ನು ಉಳ್ಳಾಲ ಠಾಣಾ ಪೊಲೀಸರು ವಿಚಾರಣೆಗೆ ತೆಗೆದುಕೊಂಡಿದ್ದರು. ಆ ಬಳಿಕ ಸ್ಥಳ ಮಹಜರು ವೇಳೆ ಬಾಲಕಿ ಕೋಣೆಯ ಬಾಗಿಲು ಹಾಕಿದ್ದು, ಬಾಗಿಲು ಒಡೆದು ನೋಡಿದಾಗ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿರುವುದು ಗೊತ್ತಾಗಿದೆ. ಮೇಘಶ್ರೀ ತನ್ನ ಬಣ್ಣ ಕಪ್ಪು ಎಂಬ ಜಿಗುಪ್ಸೆಯನ್ನು ಹೊಂದಿದ್ದಳು. ಇದರಿಂದ ಬೇಸತ್ತು ಆತ್ಮಹತ್ಯೆ ನಡೆಸಿರುವ ಶಂಕೆಯೂ ಒಂದು ಹಂತದಲಿ ವ್ಯಕ್ತವಾಗಿದೆ. ಆದರೆ ಕಿರಿ…

