UN NETWORKS ಕಣಚೂರು : ವಿದ್ಯಾರ್ಥಿನಿಯರು ಶ್ರಮಪಟ್ಟು ಕಲಿತರೆ ಮುಂದಿನ ಜೀವನ ಸುಖಮಯವಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ವಿದ್ಯಾರ್ಥಿನಿಯರು ಪ್ರತಿಯೊಂದು ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿರಬೇಕು ಎಂದು ಕಣಚೂರು ವಿಧ್ಯಾಸಂಸ್ಥೆಯ ಅಧ್ಯಕ್ಷ ಯು.ಕೆ ಮೋನು ಅಭಿಪ್ರಾಯಪಟ್ಟರು. ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜು ದೇರಳಕಟ್ಟೆ ವಿದ್ಯಾರ್ಥಿನಿ ಸಂಘದ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಗಳನ್ನು ವಿತರಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಅವಕಾಶಗಳ ಸದುಪಯೋಗವನ್ನು ಮಾಡಿಕೊಂಡು ವಿದ್ಯಾಸಂಸ್ಧೆಯ ಕೀರ್ತಿಯನ್ನು ಬೆಳಗುವುದರೊಂದಿಗೆ ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡುವಂತಾಗಬೇಕು ಎಂದರು. ಕಣಚೂರು ಮ್ಯಾನೇಜ್ ಮೆಂಟ್ ಆಂಡ್ ಸೈನ್ಸ ನ ಪ್ರಾಂಶುಪಾಲ ಪ್ರೊ| ಇಕ್ಬಾಲ್ ಅಹಮದ್ ಯು.ಟಿ., ಕಣಚೂರು ಹೈಸ್ಕೂಲ್ನ ಪ್ರಾಂಶುಪಾಲ ವಿನೀತ ಗಾಮ ರೋಸ್ ಮಥಾಯಸ್, ಕಣಚೂರು ಪ್ರಾಥಮಿಕ ಶಾಲೆಯ ಪ್ರಾಂಶುಪಾಲೆ ಆನಂದಿ ಹಾಗೂ ಕಣಚೂರು ಪೂರ್ವ ಪ್ರಾಥಮಿಕ ಹಾಗು ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಯನಿ ಲಿನೆಟ್ ಡಿ’ಸೋಜ ಉಪಸ್ಧಿತರಿದ್ದರು. ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾರವರು ವಿದ್ಯಾರ್ಥಿ ಸಂಘದ ಸದಸ್ಯರಿಗೆ ಪ್ರಮಾಣ…
Author: UllalaVani
UN NETWORKS ತಲಪಾಡಿ : ಪ್ರಾಚೀನ ಭಾರತದಿಂದ ಋಷಿ ಮುನಿಗಳು, ತಪಸ್ವಿಗಳು ಮಾಡಿದ ಸಾಧನೆಯನ್ನು ಪತಂಜಲಿ ಮಹರ್ಷಿ ಯೋಗ ವಿಜ್ಞಾನದ ರೂಪದಲ್ಲಿ ಜನಮಾನಸಕ್ಕೆ ತಲುಪಿಸುವ ಕಾರ್ಯ ಮಾಡಿದ್ದು ಇಂದು ಯೋಗ ವಿದ್ಯೆಯ ಮೂಲಕ ಜಗತಿನಾದ್ಯಂತ ಭಾರತದ ಆಧ್ಯಾತ್ಮಿಕ ಶಕ್ತಿ ಪ್ರದರ್ಶನಗೊಳ್ಳುತ್ತಿದ್ದು, ಇದರ ಉಪಯೋಗ ಪ್ರತಿಯೊಬ್ಬರು ಪಡೆಯುವಂತಾಗಬೇಕು ಎಂದು ಮಂಗಳೂರು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್ ಅಭಿಪ್ರಾಯಪಟ್ಟರು. ಅವರು ತಲಪಾಡಿಯ ಶಾರದಾ ಆಯುರ್ವೇದ ಆಸ್ಪತ್ರೆಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮುಂದಿನ 15 ದಿನಗಳ ಕಾಲ ರೋಗಕ್ಕೆ ಅನುಸಾರವಾಗಿ ಯೋಗ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಯೋಗ ವಿಜ್ಞಾನ ಒಂದು ಧಾರ್ಮಿಕ ನಂಬಿಕೆಯಲ್ಲ ಅದು ತಪ್ಪಸ್ವಿಗಳ ಸಾಧನೆ ಇದನ್ನು ವಿಶ್ವದಾದ್ಯಂತ ಪಸರಿಸುವ ನಿಟ್ಟಿನ್ಲಲಿ ವಿಶ್ವಸಂಸ್ತೆಯಲ್ಲಿ ನಡೆದ ಸಭೆಯಲ್ಲಿ ಯೋಗ ದಿನಾಚರಣೆಯ ಠರಾವು ಮಂಡಿಸಿದ್ದರು. ಪಾಶ್ಚಿಮಾತ್ಯ ರಾಷ್ಟ್ಗ್ರಗಳು,ಗಲ್ಪ್ ರಾಷ್ಟ್ರಗಳು ಸೇರಿದಂತೆ ವಿಶ್ವದ 175 ರಾಷ್ಟ್ರಗಳು ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದು ಬಾರತದಲ್ಲಿಯೂ ಯೋಗಕ್ಕೆ ಹೆಚ್ಚಿನ ಮಹತ್ವ ಬಂದಿದೆ…
UN NETWORKS ಪಾನೀರ್ : ವಿದ್ಯಾರ್ಥಿಗಳಿಗೆ ಸರ್ಕಾರಿ ಸವಲತ್ತು ಪಡೆಯಲು ಆನ್ ಲೈನ್ ವ್ಯವಸ್ಥೆ ಜಾರಿಯಲ್ಲಿದ್ದು ಜಾಗರೂಕತೆಯಿಂದ ಭರ್ತಿ ಮಾಡಬೇಕು, ಅರ್ಜಿ ಕಾಲಂನಲ್ಲಿ ಟ್ಯೂಶನ್ ಶುಲ್ಕ ಹಾಕಬೇಕಿದ್ದು ಆ ಹಣ ಸ್ಕಾಲರ್ ಶಿಪ್ ಮೂಲಕ ಸಿಗಲಿದೆ ಎಂದು ಮಂಗಳೂರು ತಾಲೂಕು ಮಾಹಿತಿ ಕೇಂದ್ರದ ಸಂಯೋಜಕ ನಝೀರ್ ಅಭಿಪ್ರಾಯಪಟ್ಟರು. ಕೆಥೊಲಿಕ್ ಸಭಾ ಪಾನೀರ್ ಘಟಕದ ವತಿಯಿಂದ ಭಾನುವಾರ ಪಾನೀರ್ ಚರ್ಚ್ ಸಭಾಂಗಣದಲ್ಲಿ ನಡೆದ ಸರ್ಕಾರಿ ಸವಲತ್ತುಗಳ ಮಾಹಿತಿ ಹಾಗೂ ಸಸಿ ವಿತರಣಾ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಅಲ್ಪಸಂಖ್ಯಾತ ಇಲಾಖೆಯಿಂದಲೇ ಐಎಎಸ್, ಐಪಿಎಸ್ ತರಬೇತಿ ಕೇಂದ್ರಗಳಿದ್ದು ಹತ್ತು ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ. ಸಿಇಟಿ, ನೀಟ್ ತರಬೇತಿಯೂ ಉಚಿತವಾಗಿ ನೀಡುವ ವ್ಯವಸ್ಥೆಯಿದ್ದು ಹತ್ತು ಸಾವಿರ ಮೌಲ್ಯದ ಪುಸ್ತಕ ಉಚಿತವಾಗಿ ನೀಡಲಾಗುತ್ತದೆ. ಪಿಎಚ್ ಡಿ ಮತ್ತು ಎಂಫಿಲ್ ಮಾಡುವವರಿಗೆ 25 ಸಾವಿರ, ಹೊರದೇಶದಲ್ಲಿ ಕಲಿಯಲು ಬಯಸುವವರಿಗೆ ಎರಡು ವರ್ಷಕ್ಕೆ ಹತ್ತು ಲಕ್ಷ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಎಂದು ತಿಳಿಸಿದರು. ಕೆಥೊಲಿಕ್ ಸಭಾ ಪಾನೀರ್ ಘಟಕಾಧ್ಯಕ್ಷ…
UN NETWORKS ಹರೇಕಳ : ಸೌಜನ್ಯ ಸ್ಕೌಟ್ ದಳ, ಶ್ರೀ ರಾಮಕೃಷ್ಣ ಪ್ರೌಢಶಾಲೆ ಹರೇಕಳ ಮತ್ತು ಆರ್ಟ್ ಆಫ್ ಲೀವಿಂಗ್ ಸಂಸ್ಥೆ ಮಂಗಳೂರು ಆಶ್ರಯದಲ್ಲಿ ಇಂದು ಪ್ರೌಢಶಾಲಾ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಸದಸ್ಯರಾದ ಕಡೆಂಜ ಸೋಮಶೇಖರ್ ಚೌಟ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರಾದ ಕೆ.ರವೀಂದ್ರ ರೈಯವರು ಯೋಗ ನಮ್ಮ ದೇಶದ ಅತ್ಯಂತ ಪ್ರಾಚೀನ ವಿದ್ಯೆಯಾಗಿದ್ದು, ಅದರ ಔಚಿತ್ಯ ಇಂದಿನ ಕಾಲದಲ್ಲಿ ಅತ್ಯಂತ ಅಗತ್ಯವಾಗಿದೆ. ಇದೊಂದು ಆರೋಗ್ಯವರ್ಧಕವಾಗಿದ್ದು, ಮಕ್ಕಳು ತನ್ನ ದೈನಂದಿನ ಜೀವನದಲ್ಲಿ ಈ ವಿದ್ಯೆಯನ್ನು ಅಳವಡಿಸಿಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು.ನಂತರ ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಸದಸ್ಯರಾದ ಸೂರ್ಯ ಪ್ರಕಾಶ್ ಪಕ್ಕಳ, ಸುನೀತ ಉದಯ ಕುಮಾರ್, ಸುರೇಖ, ಅಕ್ಷಯ ಕೃಷ್ಣ ಮಕ್ಕಳಿಗೆ ಯೋಗ ತರಬೇತಿ ನೀಡಿದರು. ಅತಿಥಿಗಳಾಗಿ ಕೆ.ಎಸ್. ಹೆಗ್ಡೆ ವೈದ್ಯಾಧಿಕಾರಿಗಳಾದ ಡಾ. ಗೀತಾಂಜಲಿ ಹಾಗೂ ಡಾ. ಸುಜನ ಶುಭವನ್ನು ಕೋರಿದರು. ಅಧ್ಯಾಪಕರಾದ ಕೃಷ್ಣಶಾಸ್ತ್ರಿ ಪ್ರಾರ್ಥಿಸಿದರು.…
UN NETWORKS ಉಳ್ಳಾಲ : ವಿಶ್ವ ಯೋಗ ದಿನ ಘೋಷಣೆ ಬಳಿಕ ವಿಶ್ವದಾದ್ಯಂತ 117 ದೇಶಗಳಿಂದ ಯೋಗಾಭ್ಯಾಸಕ್ಕೆ ಬೆಂಬಲ ದೊರೆತಿದೆ. ಈ ಮೂಲಕ ವಿಶ್ವಕ್ಕೆ ಯೋಗದ ಅರಿವು ಜೊತೆಗೆ ಯುವಜನರಿಗೆ ಯೋಗದ ಕುರಿತು ಜ್ಞಾನ ಮೂಡಿಸುವ ಕೆಲಸವಾಗಿದೆ ಎಂದು ಯೋಗಾಚಾರ್ಯ ಲಯನ್. ಶಿವರಾಂ ಶೆಟ್ಟಿ ಹೇಳಿದರು. ನಿಟ್ಟೆ ಪರಿಗಣಿಸಲ್ಪಟ್ಟಿರುವ ವಿಶ್ವವಿದ್ಯಾಲಯದ ದೇರಳಕಟ್ಟೆಯ ಫಿಸಿಯೋಥೆರಪಿ ಕಾಲೇಜಿನಲ್ಲಿ ನಿರಂತರ ಯೋಗ ಶಿಕ್ಷಣಕ್ಕಾಗಿ ಆರಂಭವಾದ ಪತಂಜಲಿ ಸಭಾಂಗಣ ಉದ್ಘಾಟಿಸಿ, ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಹರ್ಷಿ ಪತಂಜಲಿ ಯೋಗ ಸೂತ್ರದ ಪುಸ್ತಕದ ಆಧಾರದಲ್ಲಿ ಯೋಗ ನಡೆಯುತ್ತಿದೆ. ಯೋಗದ ಕುರಿತು ವೈಜ್ಞಾನಿಕ ಸಂಶೋಧನೆಗಳು ನಿರಂತರವಾಗಿ ನಡೆದು, ಮನುಷ್ಯ ಜೀವನಕ್ಕೆ ಅವಶ್ಯಕ ಅನ್ನುವುದು ಸಾಬೀತಾಗಿದೆ. ತಾಂತ್ರಿಕತೆ ಮುಂದುವರಿದು ಯುವಸಮುದಾಯಕ್ಕೆ ನಿತ್ಯ ಚಟುವಟಿಕೆಗಳಿಗೆ ಸಮಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮಾನಸಿಕ ಒತ್ತಡಗಳಿಗೆ ತುತ್ತಾಗಿ ಮಧುಮೇಹ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗುವವರ ಸಂಖ್ಯೆ ಪ್ರತಿ ವರ್ಷವೂ ಏರಿಕೆಯಾಗುತ್ತಲೇ ಇದೆ. ಇವೆಲ್ಲವನ್ನು ನಿಯಂತ್ರಿಸಲು ಯೋಗ ಅತ್ಯಾವಶ್ಯಕ. ಈ ಮೂಲಕ ಆರೋಗ್ಯವಂತ ದೇಹ…
UN NETWORKS ಕೋಟೆಕಾರ್ : ಮದರಸ ಎನ್ನುವುದು ಧಾರ್ಮಿಕ ವಿದ್ಯೆ ನೀಡುವ ಕೇಂದ್ರವಾಗಿದ್ದು ಹೆಣ್ಣು, ಗಂಡು ಎನ್ನುವ ಭೇದವಿಲ್ಲ. ಎಷ್ಟೇ ದೊಡ್ಡ ಧಾರ್ಮಿಕ ಶಿಕ್ಷಣ ಪಡೆದವನಾದರೂ ಆತನಿಗೆ ಮದರಸ ಶಿಕ್ಷಣ ಅನಿವಾರ್ಯ ಎಂದು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ತಾಜುಲ್ ಫುಖಹಾಳ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅಭಿಪ್ರಾಯಪಟ್ಟರು. ಕೋಟೆಕಾರ್ ಗ್ರಾಮದ ಹಿದಾಯತ್ ನಗರದಲ್ಲಿರುವ ಹಿಹ್ಸಾನುಲ್ ವಹ್ಹಾಬ್ ಅಲ್ ಮದರಸತುಲ್ ಹಿದಾಯ ಇದರ ಮೇಲಂತಸ್ತು ಉದ್ಘಾಟನಾ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಲೌಕಿಕ ವಿದ್ಯೆ ಎನ್ನುವುದು ಭೂಲೋಕದಲ್ಲಿ ಅತ್ಯಗತ್ಯ. ಇದರಿಂದ ಜೀವನಕ್ಕೆ ಕೆಲಸ ದೊರಕಬಹುದು. ಅದೇ ರೀತಿ ಧಾರ್ಮಿಕ ವಿದ್ಯೆಯೂ ಮುಖ್ಯ. ಈ ವಿದ್ಯೆಯಿಂದ ಮನುಷ್ಯನ ಜೀವನ ಪಾಠ ಸಿಗುತ್ತದೆ. ಧಾರ್ಮಿಕ ವಿದ್ಯೆ ಪಡೆಯದವರು ಸುಸಂಸ್ಕೃತ ಜೀವನ ನಡೆಸಲಾಗದು. ವಿದ್ಯೆ ಪಡೆದರೆ ಸಾಲದು, ಅದಕ್ಕೆ ತಕ್ಕಂತೆ ಜೀವನ ಸಾಗಿಸುವುದು ಮುಖ್ಯ ಎಂದು ಹೇಳಿದರು. ಎಸ್ ವೈಎಸ್ ರಾಜ್ಯಾಧ್ಯಕ್ಷ ಹುಸೈನ್ ಸಅದಿ ಕೆ.ಸಿ.ರೋಡು ಮಾತನಾಡಿ, ಹಿದಾಯತ್ ನಗರ ಮದರಸ ಮತ್ತು ಮಸೀದಿಯ ವಿಸ್ತರಣೆ ಸಂದರ್ಭ ದಾನಿಗಳು…
UN NETWORKS ಗ್ರಾಮಚಾವಡಿ : ಹರೇಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಚಾವಡಿ ಬಳಿ ನೂತನವಾಗಿ ಆರಂಭಿಸಲಾದ ಮದ್ಯದಂಗಡಿಯನ್ನು ಕೂಡಲೇ ಬಂದ್ ಗೊಳಿಸುವಂತೆ ಆಗ್ರಹಿಸಿ ಹರೇಕಳ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ನಾಗರಿಕ ಸಮಿತಿಯ ಝಾಹಿದ್ ಮಲಾರ್ ಗ್ರಾಮಚಾವಡಿ ಪ್ರದೇಶವು ಮೂರು ಗ್ರಾಮ, ಎರಡು ತಾಲೂಕುಗಳನ್ನು ಸಂಪರ್ಕಿಸುವ ಪ್ರದೇಶವಾಗಿದೆ. ಇಲ್ಲಿಯ ಜನರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಮದ್ಯದಂಗಡಿ ಆರಂಭಗೊಂಡಿರುವ ಕಟ್ಟಡದಲ್ಲಿ ಶಿಕ್ಷಣ ಸಂಸ್ಥೆಯೂ ಇದೆ. ಅಬಕಾರಿ ಇಲಾಖೆಯ ಷಡ್ಯಂತ್ರದೊಂದಿಗೆ ಇಲ್ಲಿ ಮದ್ಯದಂಗಡಿಗೆ ಪರವಾನಗಿ ನೀಡಲಾಗಿದ್ದು, ಕೂಡಲೇ ಮದ್ಯದಂಗಡಿಯನ್ನು ಬಂದ್ ಗೊಳಿಸದಿದ್ದರೆ ನಾವೇ ಬಂದ್ ಮಾಡುತ್ತೇವೆ ಎಂದು ಎಚ್ಚರಿಸಿದರು.ರಫೀಕ್ ಮಾತನಾಡಿ ಸ್ಥಳೀಯ ಗ್ರಾಮ ಪಂಚಾಯತಿಯ ಪರವಾನಿಗೆಯನ್ನು ಪಡೆಯದೇ ಗ್ರಾಮದಲ್ಲಿ ಅಕ್ರಮ ಮದ್ಯದಂಗಡಿ ತೆರೆಯಲಾಗಿದೆ. ಇದರ ಪಕ್ಕದಲ್ಲೇ ಶಾಲೆ , ಮಹಿಳಾ ಹೊಲಿಗೆ ತರಬೇತಿ ಕೇಂದ್ರ , ಧಾರ್ಮಿಕ ಕೇಂದ್ರಗಳು ಹಾಗೂ ಜನವಸತಿ ಪ್ರದೇಶ ಇರುವುದರಿಂದ ಮುಂದೆ ಬಹಳಷ್ಟು ಸಮಸ್ಯೆಗಳು ಉದ್ಬವಿಸಲಿವೆ ಎಂಬ ಆತಂಕ ಸ್ಥಳೀಯರಲ್ಲಿ ಮನೆಮಾಡಿವೆ ಎಂದರು.ಹರೇಕಳದಲ್ಲಿ ಹೆಚ್ಚಾಗಿ…
UN NETWORKS ತೊಕ್ಕೊಟ್ಟು : ರಸ್ತೆ ನಿಯಮ ಉಲ್ಲಂಘಿಸಿ ಬೈಕ್ ಚಲಾಯಿಸುತ್ತಿರುವುದನ್ನು ಗಮನಿಸಿ ಸವಾರನ ಫೋಟೊ ತೆಗೆದ ಸಂಚಾರಿ ಪೊಲೀಸ್ ಪೇದೆ ಮೇಲೆ ಬೈಕ್ ಸವಾರರಿಬ್ಬರು ಹಲ್ಲೆ ನಡೆಸಿರುವ ಘಟನೆ ತೊಕ್ಕೊಟ್ಟು ಹೊಸ ಬಸ್ಸು ನಿಲ್ದಾಣದ ಹೊರಗಡೆ ಶುಕ್ರವಾರ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು ಸವಾರನನ್ನು ಬಂಧಿಸಿದ್ದು, ಸಹಸವಾರ ತಲೆಮರೆಸಿಕೊಂಡಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಪೇದೆ ಸಂಗಣ್ಣ ಗೌಡ ಹಲ್ಲೆಗೊಳಗಾದವರು. ಮದನಿ ನಗರ ಮಸೀದಿ ಸಮೀಪ ಜ್ಯೋತಿ ಫ್ಲ್ಯಾಟ್ ನಿವಾಸಿ ಮಹಮ್ಮದ್ ಅಝರುದ್ದೀನ್ (32) ಬಂಧಿತ. ಸಹಸವಾರ ರಿಯಾಝ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಅಝರುದ್ದೀನ್ ಮತ್ತು ರಿಯಾಝ್ ಹೆಲ್ಮೆಟ್ ಧರಿಸದೆ, ನಂಬರ್ ಪ್ಲೇಟ್ ಇಲ್ಲದ ಬೈಕಿನಲ್ಲಿ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದರು. ಇದನ್ನು ಗಮನಿಸಿದ ತೊಕ್ಕೊಟ್ಟುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆ ಸಂಗಣ್ಣ ಗೌಡ ಅವರು ಮೊಬೈಲ್ ಮೂಲಕ ಫೋಟೊ ತೆಗೆದಿದ್ದರು. ಇದರಿಂದ ಕುಪಿತಗೊಂಡ ಸವಾರರಿಬ್ಬರು ಬೈಕ್ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ , ಪೇದೆಯ ಎಡಕೆನ್ನೆ, ಎದೆಯ ಭಾಗಕ್ಕೆ…
UN NETWORKS ಮಂಜನಾಡಿ : ಮಂಜನಾಡಿಯ ಅಲ್ ಮದೀನ ದಅ್ ವಾ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಲಾ ಸಂಘಟನೆ ಬಿಶಾರತುಲ್ ಮದೀನಾಕ್ಕೆ 2019-20ನೇ ಶೈಕ್ಷಣಿಕ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಮುಹಮ್ಮದ್ ನಿಝಾರ್ ಬಕ್ರವಳ್ಳಿ ಹಾಸನ, ಪ್ರಧಾನ ಕಾರ್ಯದರ್ಶಿಯಾಗಿ ನೌಶಾದ್ ಕಲ್ಮಿಂಜ, ಕೋಶಾಧಿಕಾರಿ ಅಬ್ದುಲ್ ಸಮದ್ ಪರಪ್ಪು, ಉಪಾಧ್ಯಕ್ಷರಾಗಿ ಶಫೀಕ್ ಬೊಳ್ಮಾರ್ ಆಯ್ಕೆಗೊಂಡರು. ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯನ್ನು ಮುದರ್ರಿಸ್ ಅಬ್ದುರ್ರಹ್ಮಾನ್ ಅಹ್ಸನಿ ಉಧ್ಘಾಟಿಸಿದರು. ದಅ್ ವಾ ಪ್ರಾಂಶುಪಾಲ ಅಬ್ದುಸ್ಸಲಾಂ ಅಹ್ಸನಿ, ಮುನೀರ್ ಸಖಾಫಿ, ಇರ್ಫಾನ್ ನೂರಾನಿ, ಅಶ್ರಫ್ ಸಖಾಫಿ, ರಝಾಖ್, ಇಕ್ಬಾಲ್ ಮರ್ಝೂಖಿ, ಜುನೈದ್ ಮರ್ಝೂಖಿ ಮತ್ತಿತರು ಉಪಸ್ಥಿತರಿದ್ದರು. ನಿಕಟ ಪೂರ್ವ ಕಾರ್ಯದರ್ಶಿ ಶರೀಫ್ ವಲಾಲ್ ವರದಿ ವಾಚಿಸಿದರು. ಅಧ್ಯಕ್ಷ ಅನೀಸ್ ಸುರತ್ಕಲ್ ಸ್ವಾಗತಿಸಿದರು. ಹನೀಫ್ ಕುಂಜತ್ತೂರು ವಂದಿಸಿದರು.
UN NETWORKS ಯೆನೆಪೋಯ: ಯೋಗ ಕುರಿತು ಒಂದು ಕಾಲದಲ್ಲಿ ಬಹಳಷ್ಟು ತಪ್ಪು ತಿಳುವಳಿಕೆಗಳು ಇದ್ದವು. ಅದೊಂದು ಧಾರ್ಮಿಕ ಸಂಬಂಧಿಸಿದ ವಿಚಾರವಲ್ಲ , ಜೀವನದ ಅವಶ್ಯ ಅಂಗ ಅನ್ನುವುದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಘೋಷಣೆಯಾದ ಬಳಿಕ ಅರಿವು ಮೂಡಿದೆ ಎಂದು ನಿಟ್ಟೆ ಪರಿಗಣಿಸಲ್ಪಟ್ಟಿರುವ ವಿಶ್ವವಿದ್ಯಾಲಯಗಳ ಉಪಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ ಅಭಿಪ್ರಾಯಪಟ್ಟರು. ಅವರು ಯೆನೆಪೋಯ ಪರಿಗಣಿಸಲ್ಪಟ್ಟಿರುವ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆಯ ಪ್ರಯುಕ್ತ ಮ್ಯಾರಥಾನ್ (ದೀರ್ಘಕಾಲದ) ಯೋಗ ಬೋಧನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು. ಅಂತರಾಷ್ಟ್ರೀಯ ಯೋಗ ದಿನಾಚರಣೆ ಘೋಷಣೆಯಿಂದ ವಿಶ್ವದ 170 ರಾಷ್ಟ್ರಗಳಲ್ಲಿ ಯೋಗ ದಿನಾಚರಣೆಯನ್ನು ನಡೆಸಲಾಗುತ್ತಿದೆ. ಮಾನಸಿಕ ಒತ್ತಡಗಳಿಂದ ಹಿಡಿದು ಕ್ಯಾನ್ಸರ್ ತಡೆಗಟ್ಟುವಿಕೆಗೆ ಯೋಗಾಭ್ಯಾಸ ಪರಿಣಾಮಕಾರಿ ಅನ್ನುವುದು ಸಾಬೀತಾದ ವಿಚಾರ. ನಿರಂತರ ಯೋಗಾಭ್ಯಾಸದಿಂದ ಜೀವನ ಶೈಲಿಯಲ್ಲೂ ಬದಲಾವಣೆಗಳಾಗುತ್ತವೆ. ಈ ಮೂಲಕ ದುರಾಭ್ಯಾಸಗಳನ್ನು ದೂರವಾಗಿಸಲು ಸಾಧ್ಯ ಎಂದರು.ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೋಭಾರಾಣಿ ಮಾತನಾಡಿ ಖಾಸಗಿ ಹಾಗೂ ಸರಕಾರಿ ಸಂಸ್ಥೆಗಳು ಸೇರಿ ಜಂಟಿಯಾಗಿ ಆರೋಗ್ಯ ಸುಧಾರಣೆ ಕಾರ್ಯಕ್ರಮಗಳನ್ನು ನಡೆಸಿದಾಗ ಆರೋಗ್ಯ ಕ್ಷೇತ್ರಗಳಲ್ಲಿ ಬಹಳಷ್ಟು…

