ಉಳ್ಳಾಲ; ನಮ್ಮ ಭಾರತದ ನೆಲಕ್ಕೆ ಅಪಮಾನವಾದಾಗ ನಾವೆಲ್ಲರೂ ಒಗ್ಗಟ್ಟಾಗಿ ಉತ್ತರ ನೀಡೋಣ. ಈ ದೇಶದ ಮೇಲೆ ನಿರಂತರವಾಗಿ ಆಕ್ರಮಣಗಳಾಗಿವೆ. ಇಂತಹ ಆಕ್ರಮಣಗಳಿಂದ ಬೇರೆ ಬೇರೆ ದೇಶಗಳ ಸಂಸ್ಕೃತಿಯು ನಾಶವಾಗಿದೆ. ಆದರೆ ಭಾರತೀಯ ಸಂಸ್ಕೃತಿಯ ನಾಶ ಎಂದಿಗೂ ಸಾಧ್ಯವಿಲ್ಲ ವಕೀಲರಾದ ಪ್ರಸಾದ್ ಕುಮಾರ್ ರೈ ಬಿ.ಸಿ.ರೋಡ್ ಹೇಳಿದರು. ಹಿಂದೂ ಸಂಗಮ ಆಯೋಜನಾ ಸಮಿತಿ ಉಳ್ಳಾಲ ತಾಲೂಕು ಇದರ ವತಿಯಿಂದ ಕುರ್ನಾಡು, ಪಜೀರು, ಬೋಳಿಯಾರ್, ಚೇಳೂರು, ಸಜಿಪನಡು, ಸಜಿಪಪಡು ಗ್ರಾಮಗಳನ್ನೊಳಗೊಂಡ ಕುರ್ನಾಡು ಮಂಡಲದ ಮುಡಿಪುವಿನಲ್ಲಿ ಭಾನುವಾರ ನಡೆದ ಹಿಂದೂ ಸಂಗಮದಲ್ಲಿ ಬೌದ್ಧಿಕ್ ನೀಡಿದರು. ಎಲ್ಲರಿಗೂ ಒಳಿತಾಗಲಿ ಎನ್ನುವ ಸಂಸ್ಕೃತಿ ನಮ್ಮದು. ಶತ್ರುಪಾಲಯದ ಮೇಲೆ ನುಗ್ಗಿ ದಾಳಿ ಮಾಡುವುದೂ ನಮಗೆ ತಿಳಿದಿದೆ. ರಾಮಾಯಣ ಕಾಲದಿಂದ ಹಿಡಿದು ಇತ್ತೀಚಿನ ಸಿಂಧೂರ ಆಪರೇಷನ್ ವರಗೂ ಇದು ನಡೆದಿದೆ. ನಮ್ಮ ಶಕ್ತಿಯನ್ನು, ಸಾಮರ್ಥ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಅಗತ್ಯವಿದ್ದು, ಈ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮತನವನ್ನು ಗಟ್ಟಿಗೊಳಿಸುವ ಕಾರ್ಯ ಆಗಬೇಕಿದೆ. ಕುಟುಂಬ ಪದ್ದತಿಯನ್ನು ಸುದೃಢಗೊಳಿಸಬೇಕಿದೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಬೆಳೆಸೋಣ ಎಂದರು.…
Author: UllalaVani
ಕಣಚೂರು: ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಶಾಸ್ತ್ರ ಹಾಗೂ ಚಿಕಿತ್ಸಾ ವಿಭಾಗ, ಸೂಕ್ಷ್ಮ ಜೀವ ವಿಜ್ಞಾನ (ಮೈಕ್ರೋಬಿಯಾಲಜಿ) ವಿಭಾಗ ಮತ್ತು ಔಷಧ ಶಾಸ್ತ್ರ (ಫಾರ್ಮಕಾಲಜಿ) ವಿಭಾಗಗಳ ಸಹಯೋಗದಲ್ಲಿ ಒಂದು ದಿನದ ಸಮಗ್ರ ವೈದ್ಯಕೀಯ ಕಾರ್ಯಗಾರವು “ಪುಟ್ಟ ರೋಗಿಗಳು – ದೊಡ್ಡ ನಿರ್ಧಾರಗಳು” ಎಂಬ ಶೀರ್ಷಿಕೆಯಡಿ ಫೆಬ್ರವರಿ 7ರಂದು ಕಣಚೂರು ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಕ್ಕಳ ಶಾಸ್ತ್ರ ತಜ್ಞರು ಹಾಗೂ ಕಾರ್ಯಗಾರದ ಸಂಘಟನಾ ಕಾರ್ಯದರ್ಶಿಯಾದ ಡಾ. ಪೃಥ್ವಿ ತಿಳಿಸಿದ್ದಾರೆ. ಸೋಮವಾರ ತೊಕ್ಕೊಟ್ಟು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರಗಳನ್ನು ನೀಡಿದರು. ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಯು.ಕೆ. ಮೋನು ವೈದ್ಯಕೀಯ ಕಾರ್ಯಗಾರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಿಮ್ಸ್ ನಿರ್ದೇಶಕರಾದ ಅಬ್ದುಲ್ ರಹೀಮಾನ್, ಡೀನ್ ಪ್ರೊ. ಡಾ. ಶಹನವಾಜ್ ಮಣಿಪಾಡಿ, ಮುಖ್ಯ ಸಲಹೆಗಾರ ಪ್ರೊ. ಡಾ. ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ , ಪ್ರೊಫೆಸರ್ ಎಮೆರಿಟಸ್ (ಮಕ್ಕಳ ವೈದ್ಯಕೀಯ) ಪ್ರೊ. ಡಾ. ಶಂಶಾದ್ ಎ. ಖಾನ್, ಮಕ್ಕಳ ವೈದ್ಯಕೀಯ…
ಉಳ್ಳಾಲ: ಕರ್ನಾಟಕ ಜಾನಪದ ಪರಿಷತ್ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಸ್ಥಾನದ ಪತ್ರವನ್ನು ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಪ್ರೋ.ಬೋರಲಿಂಗಯ್ಯರವರಿAದ ದ.ಕ ಜಿಲ್ಲಾಘಟಕದ ಅಧ್ಯಕ್ಷರಾದ ಪ್ರವೀಣ್ ಕೊಡಿಯಾಲ್ಬೈಲ್ ಉಪಸ್ಥಿತಿಯಲ್ಲಿ ಉಳ್ಳಾಲ ತಾಲೂಕು ಘಟಕದ ನೂತನ ಅಧ್ಯಕ್ಷರಾದ ಪ್ರವೀಣ್ ಎಸ್ ಕುಂಪಲ ಸ್ವೀಕರಿಸಿದರು. ಉಳ್ಳಾಲ ತಾಲೂಕು ಘಟಕದ ಪ್ರಧಾನ ಸಂಘಟನಾ ಕಾರ್ಯದರ್ಶಿ ಕಿರಣ್ ಕೊಲ್ಯ ಉಪಸ್ಥಿತರಿದ್ದರು.
ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು“ ಎಂದು ಮಾಹಿತಿ ನೀಡಿದರು.ಚಿತ್ರದ ನಿರ್ಮಾಪಕಿ ದೀಪ್ತಿ ದಾಮೋದರ್ ಮಾತಾಡಿ, “ಸಿನಿಮಾದಲ್ಲಿ ಎಲ್ಲರೂ ಕಷ್ಟಪಟ್ಟು ನಟಿಸಿದ್ದಾರೆ. ನಾವೆಲ್ಲರೂ ಸಿನಿಮಾ ನೋಡಲು ಉತ್ಸುಕರಾಗಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು.ಚಿತ್ರಕ್ಕೆ ಸಂಭಾಷಣೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, “ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು 6 ಹಾಡುಗಳನ್ನು ನಾನೇ ಬರೆದಿದ್ದೇನೆ. ಎಲ್ಲ ಹಾಡುಗಳು ಕೂಡ ಚೆನ್ನಾಗಿ ಮೂಡಿಬಂದಿದ್ದು 60 ದಿನಗಳ ಕಾಲ ಚಿತ್ರೀಕರಣ…
ಸೋಮೇಶ್ವರ; ಲಯನ್ಸ್ ಕ್ಲಬ್ ಆಫ್ ಸೋಮೇಶ್ವರ ಆಯೋಜಿಸಿದ ಝೋನ್ ಸಾಮಾಜಿಕ ಸಭೆಯ ಸಂದರ್ಭದಲ್ಲಿ, ಆರೋಗ್ಯಕರ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸ್ವಾರ್ಥರಹಿತವಾಗಿ ಸೇವೆ ಸಲ್ಲಿಸುತ್ತಿರುವ ದೇಹದಾರ್ಢ್ಯ ತರಬೇತುದಾರರು ಹಾಗೂ ಯೋಗ ಶಿಕ್ಷಕರನ್ನು ಗೌರವಿಸಲಾಯಿತು. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವಲ್ಲಿ ಅವರ ಪಾತ್ರವನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಪ್ರಶಂಸಿಸಲಾಯಿತು. ಲಯನ್ ವಿಜಯಕುಮಾರ್, ಲಯನ್ ಶಶಿ ಕುಮಾರ್ ನಾಯರ್, ಲಯನ್ ನಿರ್ಮಿತಾ ಭಂಡಾರಿ ಹಾಗೂ ಲಯನ್ ರಾಜಶ್ರೀ ನಾಯರ್ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ ವಿಜಯನ್ ಕೆ, ಅಧ್ಯಕ್ಷರು, ಲಯನ್ಸ್ ಕ್ಲಬ್ ಸೋಮೇಶ್ವರ ವಹಿಸಿದ್ದರು. ರಿಜನ್ 5 ರ ರೀಜನಲ್ ಚೇರ್ಪರ್ಸನ್ ಲಯನ್ ಮಲ್ಲಿಕಾ ಭಂಡಾರಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಝೋನ್ 1 ರ ಚೇರ್ಪರ್ಸನ್ ಲಯನ್ ಜೆಸಿಂತ ಮೆಂಡೋನ್ಸ, ಕ್ಲಬ್ ಎಕ್ಸ್ಟೆನ್ಶನ್ ಆಫೀಸರ್ ಲಯನ್ ಭಾರತಿ ವಿನೋದ್ ಶೆಟ್ಟಿ ಹಾಗೂ ಕಾರ್ಯದರ್ಶಿ ಲಯನ್ ರಾಜಶ್ರೀ ನಾಯರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕ್ಲಬ್ ಉಪಾಧ್ಯಕ್ಷ ಲಯನ್ ವಿಜಯಕುಮಾರ್ ಕೆ…
ಮಂಗಳೂರು: ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಪ್ರತಿವರ್ಷ ನೀಡುವ ವೀರಾರಾಣಿ ಅಬ್ಬಕ್ಕ ಪ್ರಶಸ್ತಿ-2025-26ನೇ ಸಾಲಿನ ಪ್ರಶಸ್ತಿಗೆ ಸಾಹಿತ್ಯದಲ್ಲಿ ಡಾ.ಸಾಯಿಗೀತಾ ಹಾಗೂ ಕಲೆಯಲ್ಲಿ ವಿದುಷಿ ರಾಜಶ್ರೀ ಉಳ್ಳಾಲ್ ಆಯ್ಕೆಯಾಗಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿಯ ಪ್ರಮುಖರಾದ ಜಯರಾಮ ಶೆಟ್ಟಿ, ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಹೊಂದಿರುತ್ತದೆ. ಫೆ.14ರಂದು ತೊಕ್ಕೊಟ್ಟಿನಲ್ಲಿ ನಡೆಯುವ ಅಬ್ಬಕ್ಕ ಉತ್ಸವದಲ್ಲಿ ಪ್ರಧಾನ ಮಾಡಲಾಗುತ್ತದೆ. ಹಲವು ಮಂದಿ ಗಣ್ಯರು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದರು. ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಮಾನವಿಕ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಹಾಗೂ ಇದೇ ಸಂಸ್ಥೆಯಲ್ಲಿ ಡಾ.ಕೆ.ಆರ್.ಶೆಟ್ಟಿ ತುಳು ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸುತ್ತಿರುವ ಡಾ.ಸಾಯಿಗೀತಾ ಅವರು ಸಂಶೋಧನೆ, ಪದಕೋಶ, ಕವನಸಂಕಲನ, ಜೀವನಚರಿತ್ರೆ, ಭಾಷೆ ಕಲಿಯುವಿಕೆಯ ಪಠ್ಯ, ಅನುವಾದ ಹಾಗೂ ಸಂಪಾದಿತ ಪುಸ್ತಕಗಳು ಸೇರಿ 70ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ ಎಂದರು. ರಾಜಶ್ರೀ ಉಳ್ಳಾಲ್ ಅವರು ರಾಜ್ಯ ಸರ್ಕಾರ ನಡೆಸುವ ಭರತನ್ಯಾ…
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60 ನೇ ಜನ್ಮ ವರ್ಷಾಚರಣೆಯನ್ನು ಗೋ- ಸೇವೆಯ ಮೂಲಕ ಗುರುತಿಸಿಕೊಳ್ಳುವುದಕ್ಕಾಗಿ ಕಾಸರಗೋಡು ಕನ್ನಡ ಗ್ರಾಮದ ಆವರಣದಲ್ಲಿ 2025 ನವಂಬರ್ 4 ರಂದು “ಕಾಸರಗೋಡು ಗೋ-ಕುಟೀರ”ಕ್ಕೆ ಎಡನೀರು ಮಠದ ಸಚ್ಚಿದಾನಂದ ಭಾರತೀ ಪಾದಂಗಳವರು ಭೂಮಿ ಪೂಜೆ ಸಲ್ಲಿಸಿ, “ಕಾಸರಗೋಡು ಗೋ-ಕುಟೀರದ ನಿರ್ಮಾಣಕ್ಕೆ ಚಾಲನೆ ನೀಡಿದರು. ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವುದಕ್ಕಾಗಿ ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಕಾಸರಗೋಡು ಗೋ-ಕ್ಷೇತ್ರ- ಗೋ-ಕುಟೀರವನ್ನು ಒಂದು ಧಾರ್ಮಿಕ ಶ್ರದ್ದಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ಸಾರ್ವಜನಿಕರು,ಹಾಗೂ ಗೋ ಭಕ್ತರ ಸಹಕಾರದಿಂದ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಬೃಹತ್ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ. ರಾಜ್ಯದ ಪ್ರತಿಯೊಂದು ಮನೆ ಮನೆಗಳಿಂದ ಗೋವುಗಳಿಗೆ ಭಕ್ತಿ ಪೂರ್ವಕವಾಗಿ ಮೇವು, ಗೋ-ಆಹಾರವನ್ನು ಭಕ್ತಿ ಶ್ರದ್ಧೆಯಿಂದ “ಹೊರೆಕಾಣಿಕೆ-ಹಸಿರು ವಾಣಿ” ಮಾದರಿಯಲ್ಲಿ ದಿನನಿತ್ಯ ಗೋ ಸೇವೆಯನ್ನು ಸಲ್ಲಿಸುವ ಮೂಲಕ ಗೋ- ಸೇವಾ ಅಭಿಯಾನವನ್ನು…
ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಫೆ.1ರಿಂದ 6ರವರೆಗೆ ನಡೆಯಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರಿಗೆ ಹೊರೆಕಾಣಿಕೆ ಸಮರ್ಪಣೆಗೆ ಅನುಕೂಲವಾಗಲು ತೊಕ್ಕೋಟ್ಟು ಜೈ ವೀರಮಾರುತಿ ವ್ಯಾಯಾಮ ಶಾಲೆಯ ಆವರಣದಲ್ಲಿ ಹೊರೆಕಾಣಿಕೆ ಕೇಂದ್ರವನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ ಶೇಖರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಎಲ್ಲಾ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರು ಹೊರೆಕಾಣಿಕೆ ತೊಕ್ಕೋಟ್ಟಿನ ವೀರಮಾರುತಿ ವ್ಯಾಯಾಮ ಶಾಲೆಯಿಂದಲೇ ಆರಂಭಗೊoಡಿದ್ದು, ಹಾಗೂ ಎಲ್ಲವೂ ಯಶಸ್ವಿಯಾಗಿದೆ, ನಮ್ಮ ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ಕ್ಷೇತ್ರದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಸಿರು ಹೊರೆಕಾಣಿಕೆಯ ಕೇಂದ್ರವನ್ನು ಇಲ್ಲಿ ಉದ್ಘಾಟಿಸಿದ್ದೇವೆ, ಇದು ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ಸಂದರ್ಭ ದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಭಟ್ನಗರ , ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡ್ , ವೀರಮಾರುತಿ ವ್ಯಾಯಾಮ ಶಾಲೆ ಅಧ್ಯಕ್ಷ ಪುರುಷೋತ್ತಮ ಗಟ್ಟಿ , ಬುರ್ದುಗೊಳಿ…
ಶರವು: ಉಳ್ಳಾಲ ಕಾಪಿಕಾಡ್ ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲ ಶೋತ್ಸವ ಮತ್ತು ವಾರ್ಷಿಕ ಜಾತ್ರೆ ಹಿನ್ನೆಲೆಯಲ್ಲಿ ಭಕ್ತರಿಗೆ ಹೊರೆಕಾಣಿಕೆ ಸಮರ್ಪಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊರೆಕಾಣಿಕೆ ಕೇಂದ್ರವನ್ನು ಶರವು ಮಹಾಗಣಪತಿ ಕ್ಷೇತ್ರದ ಆವರಣದಲ್ಲಿ ಉದ್ಘಾಟಿಸಲಾಯಿತು. ಶರವು ಕ್ಷೇತ್ರದ ಮೊಕ್ತೇಸರರಾದ ಶರವು ರಾಘವೇಂದ್ರ ಶಾಸ್ತಿçà ಅವರು ಹೊರೆ ಕಾಣಿಕೆ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಬ್ರಹ್ಮಕಲಶೋತ್ಸವಗಳಿಗೆ ತಾವೂ ಸಹಕಾರ ನೀಡಬೇಕು ಎನ್ನುವ ಭಾವನೆ ಸಾಕಷ್ಟು ಮಂದಿ ಭಕ್ತರಲ್ಲಿ ಇರುತ್ತದೆ. ಆದರೆ ಹೊರೆಕಾಣಿಯನ್ನು ಎಲ್ಲಿಗೆ ಹೇಗೆ ಸಮರ್ಪಿಸಬೇಕು ಎನ್ನುವ ಮಾಹಿತಿ ಇರುವುದಿಲ್ಲ. ಹಾಗಾಗಿ ಸಂಗ್ರಹಕೇAದ್ರದಿAದ ಭಕ್ತರಿಗೆ ನೆರವಾಗಿದೆ. ನಗರ ಪ್ರದೇಶದ ಜನರು ಇಲ್ಲಿಗೆ ತಾವು ನೀಡುವಂತಹ ತರಕಾರಿ, ದಿನಸಿ, ಪಾತ್ರೆ ಇತ್ಯಾದಿ ವಸ್ತುಗಳನ್ನು ನೀಡುವುದರಿಂದ ಅದು ಉಮಾಮಹೇಶ್ವರಿ ದೇವಸ್ಥಾನಕ್ಕೆ ಸಂದಾಯವಾಗುತ್ತದೆ ಎಂದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಉಮಾಮಹೇಶ್ವರ ಕ್ಷೇತ್ರದಲ್ಲಿ ಫೆ. 1ರಿಂದ 8ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ, ವಾರ್ಷಿಕಜಾತ್ರೆ ನಡೆಯಲಿದೆ. ಎಲ್ಲರೂ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಬೇಕು…
ಉಳ್ಳಾಲ: ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಸಮುದ್ರ ತೀರದ ಮಳೆ ನೀರಿನ ಚರಂಡಿಗೆ ತ್ಯಾಜ್ಯ ಎಸೆದ ಗುಜರಿ ಅಂಗಡಿ ಮಾಲೀಕನಿಗೆ ಪುರಸಭೆ ಆಡಳಿತ ರೂ. 20,000 ದಂಡ ವಿಧಿಸಿದೆ. ಬೀರಿ ಎ.ಆರ್ ಟ್ರೇಡರ್ಸ್ ನ ಗುಜರಿ ಅಂಗಡಿ ಮಾಲೀಕ ಸಯ್ಯದ್ ಸಂಶೀರ್ ಎಂಬವರ ವಿರುದ್ಧ ದಂಡ ಹಾಕಲಾಗಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಉಚ್ಚಿಲ ಪರಿಸರದಲ್ಲಿ ಮಳೆ ನೀರಿನ ಚರಂಡಿಗೆ ತ್ಯಾಜ್ಯವಸ್ತುಗಳನ್ನು ಎಸೆದು ಪರಿಸರ ಮಾಲಿನ್ಯಗೊಳಿಸಿರುವುದು ಕಂಡು ಬಂದಿತ್ತು. ಅದರಂತೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ 15 ಕಡೆಗಳಲ್ಲಿ ಈಗಾಗಲೇ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದ್ದು,ತ್ಯಾಜ್ಯ ಎಸೆಯುವವರ ಮೇಲೆ ನಿಘಾ ವಹಿಸಲಾಗಿತ್ತು. ಅಲ್ಲದೆ ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವವರು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಾಧಿಕಾರಿ ಎಚ್ಚರಿಸಿದ್ದರು.

