UN NETWORKS ಉಳ್ಳಾಲ : ಕೆಲವೇ ದಿನಗಳಲ್ಲಿ ಪಂಪ್ ವೆಲ್ ಫ್ಲೈಓವರ್ ಅನ್ನು ನವಯುಗ ಸಂಸ್ಥೆ ಬಿಟ್ಟುಕೊಡಬೇಕೆಂದು ಆದೇಶಿಸಲಾಗಿದೆ. ಮಳೆಯ ತೀವ್ರತೆ ಇಲ್ಲದೇ ಇದ್ದಲ್ಲಿ ಪಂಪ್ ವೆಲ್ ಫ್ಲೈಓವರ್ ಶೀಘ್ರದಲ್ಲೇ ಸಂಚಾರ ಮುಕ್ತ ಗೊಳಿಸಲಾಗುವುದು ಎಂದು ಸಂಸದ ಕಟೀಲ್ ತಿಳಿಸಿದರು. ಕಳೆದ ಎಂಟು ವರ್ಷಗಳ ಹಿಂದೆ ಆರಂಭಗೊಂಡ ಭಾರೀ ಪ್ರಚಾರ ಕಂಡ ತೊಕ್ಕೊಟ್ಟು ಫ್ಲೈಓವರ್ ಉದ್ಘಾಟನೆಯನ್ನು ಸಂಸದ ನಳಿನ್ ಕಟೀಲ್ ಗುರುವಾರ ನೆರವೇರಿಸಿದರು. ಈ ಮೂಲಕ ಇಂದಿನಿಂದ ತೊಕ್ಕೊಟ್ಟು ಫ್ಲೈಒವರ್ ವಾಹನ ಸಂಚಾರಕ್ಕೆ ಮುಕ್ತವಾಯಿತು. ಸರಕಾರದಿಂದ ಸಂಸ್ಥೆಗೆ ಸಿಗಬೇಕಾದ ಹೆಚ್ಚುವರಿ ರೂ. 7 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಯುದ್ದೋಪಾದಿಯಲ್ಲಿ ನವಯುಗ ಸಂಸ್ಥೆ ಪಂಪ್ ವೆಲ್ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಬೇಕಿದೆ. ತೊಕ್ಕೊಟ್ಟು ಮೇಲ್ಸೇತುವೆ ಬಿಡುಗಡೆಯಿಂದಾಗಿ ಕಾಸರಗೋಡು, ತಲಪಾಡಿ, ಉಡುಪಿಗೆ, ಮಂಗಳೂರಿಗೆ ಹೋಗುವ ವಾಹನ ಸವಾರರು ಸುಗಮವಾಗಿ ಸಆಗಬಹುದು, ತೊಕ್ಕೊಟ್ಟು ಬ್ಲಾಕ್ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದ ಅವರು ತಲಪಾಡಿ=-ಕುಂದಾಫುರ ರಾ.ಹೆಯ ತೊಕ್ಕೊಟ್ಟು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ನವಯುಗ ಸಂಸ್ಥೆ…
Author: UllalaVani
UN NETWORKS ಕೊಣಾಜೆ : ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತಿಬ್ಲಪದವು ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಕಂಬ್ಲಪದವು , ದೇವಿನಗರ ನಿವಾಸಿ ಹರ್ಷಿತ್ ಶೆಟ್ಟಿ (20) ಮೃತ ಯುವಕ. ಮಂಗಳೂರಿನಲ್ಲಿ ಎ.ಸಿ ಟೆಕ್ನೀಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರ್ಷಿತೆ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಎದುರಿನಲ್ಲಿದ್ದ ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರುಗಡೆಯಿದ್ದ ಬಸ್ ಬೈಕಿಗೆ ಢಿಕ್ಕಿ ಹೊಡೆದು, ಹರ್ಷಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಪಜೀರು ಗ್ರಾ.ಪಂ ಸದಸ್ಯೆ ಸುಜಾತಾ ಶೆಟ್ಟಿ ಎಂಬವರ ಅವಳಿ-ಜವಳಿ ಪುತ್ರರಲ್ಲಿ ಓರ್ವನಾಗಿದ್ದಾರೆ. ತಾನು ಖರೀದಿಸಿದ್ದ ಹೊಸ ಬೈಕನ್ನು ಮನೆಯಲ್ಲೇ ಬಿಟ್ಟು, ಸ್ನೇಹಿತನ ಬೈಕಿನಲ್ಲಿ ಹೊರಟಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
UN NETWORKS ಉಳ್ಳಾಲ : ಖುರ್ರಸ್ಸಾದಾತ್ ಅಸ್ಸಯ್ಯಿದ್ ಕೂರತ್ ತಂಙಳ್ ರವರನ್ನು ಕಲ್ಕಟ್ಟ ಇಲ್ಯಾಸ್ ಜುಮಾ ಮಸೀದಿಯ ಖಾಝಿಯಾಗಿ ಸ್ವೀಕಾರ ಸಮಾರಂಭ ಜೂನ್ 14ಶುಕ್ರವಾರ ಅಸರ್ ನಮಾಝಿನ ಬಳಿಕ ಕಲ್ಕಟ್ಟ ಇಲ್ಯಾಸ್ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ. ಮಂಜನಾಡಿ ಅಲ್-ಮದೀನಾ ವಿದ್ಯಾಸಂಸ್ಥೆಯ ಸ್ಥಾಪಕಾಧ್ಯಕ್ಷ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅಧ್ಯಕ್ಷತೆಯಲ್ಲಿ ತಾಜುಶ್ಯರೀಅ ಎಂ.ಅಲಿ ಕುಂಞ ಉಸ್ತಾದ್ ಖಾಝಿ ಸಮರ್ಪಣೆ ಮಾಡಲಿದ್ದಾರೆ. ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಮಂಜನಾಡಿ ಮುದರ್ರಿಸ್ ಅಹ್ಮದ್ ಬಾಖವಿ, ಸಚಿವ ಯು.ಟಿ ಖಾದರ್, ಕೆ.ಎ ರಝ್ವೀ ಕಲ್ಕಟ್ಟ, ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಸೀದಿ ಉಪಾಧ್ಯಕ್ಷ ಹಾಜಿ ಮಹ್ಮೂದ್ ಕಂಡಿಕ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
UN NETWORKS ಉಳ್ಳಾಲ : ಉಳ್ಳಾಲದಲ್ಲಿ ಕಡಲ್ಕೊರೆತ ಬುಧವಾರದಂದು ಮುಂದುವರಿದಿದೆ. ಕೈಕೋ ಕಿಲಿರಿಯಾನಗರದಲ್ಲಿರುವ ಎಂಟು ಮನೆಮಂದಿ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಗೊಂಡಿದ್ದಾರೆ. ಸೋಮೇಶ್ವರ-ಉಚ್ಚಿಲ ಭಾಗದಲ್ಲಿ ಒಂದು ಮನೆ ಸಂಜೆ ವೇಳೆ ಸಮುದ್ರದ ಪಾಲಾಗಿದೆ. ಖಲೀಲ್, ಝೊಹರಾ, ಜೈನಬಾ, ಝೊಹರಾ ರಹೀಂ, ಜುಬೇರಾ, ನಸೀಮಾ ಹಾಗೂ ಮನೆ ಕಳೆದುಕೊಂಡ ಮೈಮುನಾ ಇಕ್ಬಾಲ್ ಮತ್ತು ಝೊಹರಾ ಎಂಟು ಕುಟುಂಬಗಳು ಕೋಟೆಕಾರು ಮತ್ತು ಉಳ್ಳಾಲಬೈಲಿನಲ್ಲಿರುವ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಗೊಂಡಿದ್ದೇವೆ ಎಂದು ಖಲೀಲ್ ತಿಳಿಸಿದರು. ಮಂಗಳವಾರ ರಾತ್ರಿಯಿಡೀ ಅಲೆಗಳು ಹೊಡೆತ ವಿಪರೀತವಾಗಿತ್ತು. ಅಪಾಯದಂಚಿನಲ್ಲಿರುವ ಮನೆಗಳಿಗೆ ಭಾಗಶ: ಹಾನಿಯಾಗುತ್ತಿದೆ. ಸ್ಥಳೀಯ ಮನೆಗಳ ಅಂಗಳಕ್ಕೆ ಸಮುದ್ರ ನೀರು ಇಕ್ಕಟ್ಟಾಗುವುದರಿಂದ ಅಲ್ಲಿ ಉಳಿಯಲು ಕಷ್ಟವಾಗುತ್ತಿದೆ. ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಉಳ್ಳಾಲ ಬೀಚ್ ಸಮೀಪವಿರುವ ಅಲ್ಬುಕರ್ಕ್ ಅವರಿಗೆ ಸೇರಿದ ಸಮ್ಮರ್ ಸ್ಯಾಂಡ್ ರೆಸಾಟ್ ್ ಗೋಡೆಗಳಿಗೂ ಅಲೆಗಳು ಸಂಜೆ ಹೊತ್ತಿನಲ್ಲಿ ಹೊಡೆಯಲು ಆರಂಭವಾಗಿದೆ. ಕಟ್ಟಡ ತೀರಾ ಅಪಾಯದಂಚಿನಲ್ಲಿದೆ. ಸೋಮೇಶ್ವರ-ಉಚ್ಚಿಲ ಭಾಗದಲ್ಲಿ ಅಬೂಬಕರ್ ಎಂಬವರ ಮನೆ ಅರ್ಧದಷ್ಟು ಹಾನಿಯಾಗಿದೆ. ನಾಗೇಶ್ , ವಿಶ್ವನಾಥ್ ಎಂಬವರ…
UN NETWORKS ಉಳ್ಳಾಲ : ನಿರಂತರ ಗಾಳಿ-ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರ ಉಚ್ಚಿಲದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿ ಯಾಗಿದೆ. 40ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. 50ಕ್ಕೂ ಮರಗಳು ಸಮುದ್ರ ಪಾಲಾಗಿವೆ. ಸೋಮೇಶ್ವರ ಉಚ್ಚಿಲದ ಬೀಚ್ರೋಡ್ನ ಫೆರಿಬೈಲು ಮತ್ತು ಬಟ್ಟಪ್ಪಾಡಿ ಬಳಿ ಹೆಚ್ಚು ಹಾನಿಗೀಡಾಗಿದ್ದು ವಿಶ್ವನಾಥ್, ನಾಗೇಶ್ ಅವರ ಮನೆಗಳು ಹೆಚ್ಚು ಹಾನಿಯಾಗಿದ್ದು, 6ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಕಿಲೇರಿಯಾ ನಗರದಲ್ಲಿ ಮೈಮುನಾ ಇಕ್ಬಾಲ್ ಮತ್ತು ಝೊಹರಾ ಅವರ ಮನೆಗೆ ಹಾನಿಯಾಗಿದೆ. ಉಳ್ಳಾಲ ಬೀಚ್ ಸಮೀಪದ ಸಮ್ಮರ್ ಸ್ಯಾಂಡ್ ರೆಸಾರ್ಟ್ನ ಶೌಚಾಲಯ ಕಟ್ಟಡ, ಭಾಗಶಃ ಹಾನಿಯಾಗಿದೆ. ಕಿಲೇರಿಯಾ ಮಸೀದಿ, ಕೈಕೊದಲ್ಲಿ ರುವ ರಿಫಾಯಿಯ ಮಸೀದಿ ಕಟ್ಟಡಕ್ಕೂ ಅಲೆಗಳು ಬಡಿಯುತ್ತಿವೆ. ಕಡಲ್ಕೊರೆತ ಪ್ರದೇಶಗಳಿಗೆ ಸಹಾಯಕ ಆಯುಕ್ತ ರವಿಚಂದ್ರ ನಾಯಕ್, ಉಳ್ಳಾಲ ನಗರಸಭೆ ಪೌರಾಯುಕ್ತ ಶ್ರೀನಿವಾಸ ಮೂರ್ತಿ ತಹಶೀಲ್ದಾರ್ ಗುರುಪ್ರಸಾದ್ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವ-ಸಂಸದರ ಭೇಟಿ ಉಳ್ಳಾಲ ಮತ್ತು ಉಚ್ಚಿಲ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್…
UN NETWORKS ತೊಕ್ಕೊಟ್ಟು : ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಯ ವಿಚಾರದಲ್ಲಿ ಕಣ್ಣಾ ಮುಚ್ಚಾಲೆ ಆಡುತ್ತಿದ್ದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ಎಂಟು ವರ್ಷಗಳಿಂದ ಜನರನ್ನು ಕಾಡುತ್ತಿರುವ ತೊಕ್ಕೊಟ್ಟು ಮೇಲ್ಸೇತುವೆ ಹಲವು ಗಡುವುಗಳ ಬಳಿಕ ಕೊನೆಗೂ ಪೂರ್ಣಗೊಂಡಿದೆ. ಜೂನ್ 10ರಂದು ಸಾರ್ವಜನಿಕರಿಗೆ ಸಮರ್ಪಣೆಯಾಗಲಿದೆ ಎನ್ನುವಷ್ಟರಲ್ಲಿ ಉಳ್ಳಾಲ ತಿರುವಿನಲ್ಲಿನ ಅಪಾಯವನ್ನು ಎತ್ತಿ ಹಿಡಿದ ಸಚಿವ ಯು.ಟಿ.ಖಾದರ್ ಅವರು, ಅಪಘಾತ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಸಂಸದರು, ಅಧಿಕಾರಿಗಳ ಜೊತೆ ಸಭೆ ನಿಗದಿಪಡಿಸಿದ್ದರು. ಆದರೆ ನಿಗದಿತ ದಿನದಂದು ಸಭೆ ನಡೆದಿಲ್ಲ. ಈ ನಡುವೆ ರಾ.ಹೆ. ಯೋಜನಾ ನಿರ್ದೇಶಕ ಹಾಗೂ ಕಿರಿಯ ಇಂಜಿನಿಯರ್ ದೆಹಲಿಯಿಂದಲೇ ವರ್ಗಾವಣೆ ಪಡೆದಿದ್ದಾರೆ. ಇನ್ನೇನಿದ್ದರೂ ಜೂನ್ 14 ಅಥವಾ 15ರಂದು ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಖಾದರ್ ತಿಳಿಸಿದ್ದರು. ಈ ನಡುವೆ ಇಂದು ಬೆಳಗ್ಗೆ 8.30ಕ್ಕೆ ಮೇಲ್ಸೇತುವೆ ಉದ್ಘಾಟನೆಗೆ ಸಂಸದರು ಏಕಾಏಕಿ ದಿನ ನಿಗದಿಗೊಳಿಸಿ ಅಚ್ಚರಿ ಮೂಡಿಸಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ಈ ನಿರ್ಧಾರವೂ ಬದಲಾಗಿದೆ. ಜೂನ್ 13ರಂದು ಉದ್ಘಾಟನೆಗೆ ಇನ್ನೊಂದು…
UN NETWORKS ದೇರಳಕಟ್ಟೆ : ದಂತ ಚಿಕಿತ್ಸೆಯಲ್ಲಿ ಎ.ಬಿ.ಶೆಟ್ಟಿ ಕಾಲೇಜು ಸದಾ ಮುಂದಿದ್ದು, ನೂತನ ಕ್ಲಿನಿಕ್ ಗುಣಮಟ್ಟದ ಚಿಕಿತ್ಸೆಗೆ ಇನ್ನಷ್ಟು ಬಲ ತುಂಬಲಿದೆ. ದೇಶದಲ್ಲಿರುವ ದಂತ ಕಾಲೇಜುಗಳ ಪೈಕಿ ಎ.ಬಿ.ಶೆಟ್ಟಿ ಕಾಲೇಜು ಎರಡನೇ ಸ್ಥಾನ ಪಡೆದಿದ್ದು ಇಲ್ಲಿನ ವೈದ್ಯರು, ಸಿಬ್ಬಂದಿಯ ಕಠಿಣ ಪರಿಶ್ರಮ ಕಾರಣ, ಶೀಘ್ರವೇ ಮೊದಲ ಸ್ಥಾನ ತಲುಪಿಸುವಲ್ಲಿ ತಂಡ ಇನ್ನಷ್ಟು ಪರಿಶ್ರಮಪಡಬೇಕಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ವಿಶಾಲ್ ಹೆಗ್ಡೆ ಅಭಿಪ್ರಾಯಪಟ್ಟರು. ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯ ಅಧೀನದಲಲ ದೇರಳಕಟ್ಟೆಯಲ್ಲುಲಿರುವ ಎ.ಬಿ.ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದಲ್ಲಿ ನೂತನವಾಗಿ ಆರಂಭಗೊಂಡ ‘ಓರೋಫೇಶಿಯಲ್ ಪೈನ್ ಕ್ಲಿನಿಕ್’ ಮಂಗಳವಾರ ಉದ್ಘಾಟಿಸಿ, ವಿಂಶತಿ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕರ್ನಾಟಕ ರಾಜ್ಯ ದಂತ ಕೌನ್ಸಿಲ್ ಅಧ್ಯಕ್ಷ ಡಾ.ರಾಜ್ ಕುಮಾರ್ ಅಲೆ, ನೂತನ ಕ್ಲಿನಿಕ್ ಅತ್ಯಾಧುನಿಕ ಹಾಗೂ ನೂತನ ತಂತ್ರಜ್ಞಾನಗಳನ್ನು ಹೊಂದಿದ್ದು, ಮುಖಾಂಗಕ್ಕೆ ಸಂಬಂಧಪಟ್ಟ ಕ್ಲಿಷ್ಟಕರ ಸಮಸ್ಯೆಗಳ ಪರಿಹಾರ ಸುಲಭವಾಗಲಿದೆ ಎಂದು ಹೇಳಿದರು. ಮಂಗಳೂರು ಎಂಸಿಓಡಿಎಸ್ ಓರಲ್ ಮೆಡಿಸಿನ್ ಮತ್ತು ರೇಡಿಯೋಲಜಿ ವಿಭಾಗ ಮುಖ್ಯಸ್ಥ ಡಾ.ರವಿಕಿರಣ್…
UN NETWORKS ಉಳ್ಳಾಲ : ಮಳೆಗಾಲ ಆರಂಭಗೊಳ್ಳುತ್ತಿರುವಂತೆಯೇ ಉಳ್ಳಾಲ ಸೇರಿದಂತೆ ಸೋಮೇಶ್ವರ, ಉಚ್ಚಿಲ ಸಮುದ್ರ ತೀರದಲ್ಲಿ ಕಡಲ್ಕೊರೆತದ ಅಬ್ಬರ ಆರಂಭಗೊಂಡಿದ್ದು ಸುಮಾರು 50 ಕ್ಕೂ ಹೆಚ್ಚು ಮನೆಗಳು ಅಪಾಯದ ಅಂಚಿನಲ್ಲಿದ್ದು, ಕಡಲ ತಡಿಯ ಜನರು ಆತಂಕಗೊಂಡಿದ್ದಾರೆ. ಉಳ್ಳಾಲ ವ್ಯಾಪ್ತಿಯ ಮೊಗವೀರಪಟ್ಣ ಮತ್ತು ಉಳ್ಳಾಲಕೋಡಿ ಸಂಪರ್ಕಿಸುವ ಸೋಲಾರ್ ಕ್ಲಬ್ ಬಳಿ, ಕೈಕೋ, ಕಿಲೇರಿಯಾನಗರ, ಸೀಗ್ರೌಂಡ್ ಪ್ರದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದು ಅಪಾಯದ ಅಂಚಿನಲ್ಲಿವೆ. ಅಲ್ಲದೆ ಸಮ್ಮರ್ ಸ್ಯಾಂಡ್ ಬೀಚ್ನ ತಡೆಗೋಡೆ ಸಮುದ್ರಪಾಲಾಗಿದ್ದು, ಕಟ್ಟಡವೊಂದು ಬಿರುಕು ಬಿಟ್ಟು ಅಪಾಯದಲ್ಲಿದೆ. ಕೈಕೋ ಮತ್ತು ಕಿಲೇರಿಯಾ ನಗರದಲ್ಲಿ ಮಸೀದಿಗಳು ಅಪಾಯದಲ್ಲಿವೆ. ಮೊಗವೀರಪಟ್ಣ ಬೀಚ್ ಬಳಿ ಯಾವುದೇ ಹಾನಿಯಾಗದಿದ್ದರೂ ಕೆಲವು ಕಡೆ ಬೀಚ್ ಪ್ರದೇಶ ಸಮುದ್ರ ಪಾಲಾಗಿದೆ. ಕೈಕೋ ಕಿಲೇರಿಯಾ ನಗರದಲ್ಲಿ ತಾತ್ಕಾಲಿಕ ತಡೆಗೋಡೆ ಸಮುದ್ರ ಪಾಲಾಗುತ್ತಿದ್ದು ಸಮಸ್ಯೆ ಇರುವ ಪ್ರದೇಶಗಳಲ್ಲಿ ಕಲ್ಲು ಹಾಕುವ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಸ್ಥಳೀಯ ಕೌನ್ಸಿಲರ್ಗಳಾದ ಬಶೀರ್, ಮಹಮ್ಮದ್ ಮುಕ್ಕಚ್ಚೇರಿ ಇದ್ದರು. ಉಚ್ಚಿಲದಲ್ಲೂ ಹಲವಾರು ಮನೆಗಳು ಅಪಾಯದಂಚಿನಲ್ಲಿಉಚ್ಚಿಲದ…
UN NETWORKS ಯೆನೆಪೋಯ : ರೋಗಿಗಳ ಜೊತೆಗೆ ವೈದ್ಯರು ಹಾಗೂ ತಂತ್ರಜ್ಞರು ಉತ್ತಮ ಬಾಂಧವ್ಯವನ್ನು ಇರಿಸುವ ಮೂಲಕ ಡಿಸ್ಪೆನ್ಸರಿಯಲ್ಲಿ ವಿಶ್ವಾಸವನ್ನು ಹೆಚ್ಚಿಸಬೇಕಿದೆ ಎಂದು ಮಂಗಳೂರು ಇಎಸ್ ಐ ಕಾರ್ಪೊರೇಷನ್ನ ಎಸ್ಆರ್ ಒ ಇದರ ಆಡಳಿತ ನಿರ್ದೇಶಕ ಎಸ್.ಶಿವರಾಮಕೃಷ್ಣನ್ ಹೇಳಿದರು. ಅವರು ದೇರಳಕಟ್ಟೆ ನಿತ್ಯಾನಂದನಗರದ ಝುಲೇಖಾ ಭವನ ಕಟ್ಟಡದಲ್ಲಿ ಯೆನೆಪೋಯ ಸ್ವಾಯುತ್ತೆಗೊಳ್ಳಲಿರುವ ವಿಶ್ವವಿದ್ಯಾಲಯ ನಿರ್ವಹಿಸಲ್ಪಡುವ ಇಎಸ್ಐ ಕಾರ್ಪೊರೇಷನ್ ಇದರ ಅತ್ಯಾಧುನಿಕ ಉದ್ಯೋಗದಾತರ ಬಳಕೆ ಔಷಧಾಲಯದ ಉದ್ಘಾಟನಾ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ದೇರಳಕಟ್ಟೆಯಲ್ಲಿ ಯೆನೆಪೋಯ ಆಸ್ಪತ್ರೆಯಿಂದ ನಿರ್ವಹಿಸಲ್ಪಡುವ ಇಎಸ್ಐ ಕಾರ್ಪೊರೇಷನ್ ಡಿಸ್ಪೆನ್ಸರಿ ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಮೂರು ತಿಂಗಳಲ್ಲಿ ನಾಲ್ಕನೇ ಘಟಕವನ್ನು ತೆರೆಯಲಾಗಿದೆ. ಈ ಪೈಕಿ ದೇರಳಕಟ್ಟೆ ಅತಿ ದೊಡ್ಡ ಡಿಸ್ಪೆನ್ಸರಿಯಾಗಿದೆ. ಕರ್ನಾಟಕದಾದ್ಯಂತ 9 ಕಡೆಗಳಲ್ಲಿ ಡಿಸ್ಪೆನ್ಸರಿಗಳು ಕಾರ್ಯಾಚರಿಸುತ್ತಿದೆ. ಜಿಲ್ಲೆಯಲ್ಲಿ ಮೂಡಬಿದ್ರೆ, ಸುಳ್ಯ, ಉಜಿರೆ ಸೇರಿದಂತೆ ಇದೀಗ ದೊಡ್ಡದಾಗಿ ದೇರಳಕಟ್ಟೆಯಲ್ಲಿ ಕಾರ್ಯಾರಂಭಗೊಂಡಿದೆ. ದೇರಳಕಟ್ಟೆ, ಉಳ್ಳಾಲ ಭಾಗದಲ್ಲಿ 7,000 ಕುಟುಂಬಗಳಿಗೆ ಘಟಕ ಸಹಕಾರಿಯಾಗಲಿದೆ ಎಂದರು. ಡಿಸ್ಪೆನ್ಸರಿ ಉದ್ಘಾಟಿಸಿದ ಯೆನೆಪೋಯ ಸ್ವಾಯುತ್ತೆಗೊಳ್ಳಲಿರುವ ವಿ.ವಿ…
UN NETWORKS ತೊಕ್ಕೊಟ್ಟು : ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್ನ ಮೇಲ್ಸೇತುವೆ ಕಾಮಗಾರಿ ರವಿವಾರ ಪೂರ್ಣಗೊಂಡಿದೆ. ಜೂ. 10ಕ್ಕೆ ಉದ್ಘಾಟನೆಗೆ ನಿಗದಿಯಾಗಿದ್ದ ಮುಹೂರ್ತ ತಾಂತ್ರಿಕ ಕಾರಣಗಳಿಂದ ಮುಂದೂಡುವ ಸಾಧ್ಯತೆಯಿದ್ದು, ಜೂ. 14ರಂದು ಜನಪ್ರತಿನಿಧಿಗಳು, ಜಿಲ್ಲಾಡಳಿತ ಮತ್ತು ಹೆದ್ದಾರಿ ಇಲಾಖೆಯ ಅಧಿಕಾರಿಗಳ ಸಭೆಯ ಬಳಿಕ ಉದ್ಘಾಟನೆಯ ದಿನಾಂಕ ನಿಗದಿಯಾಗಲಿದೆ. ಎಂಟು ವರ್ಷಗಳ ಹಿಂದೆ ಆರಂಭಗೊಂಡಿದ್ದ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಆರ್ಥಿಕ ಅಡಚಣೆಯಿಂದ ಅಮೆಗತಿಯಲ್ಲಿತ್ತು. ಕಾಮಗಾರಿ ನಡೆ ಸುವ ಸಂಸ್ಥೆಗೆ ಸಂಸದರ ಶಿಫಾರಸ್ಸಿನ ಮೇರೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿದ್ದರು. ಈಗ ಕಾಮಗಾರಿ ಪೂರ್ಣ ಗೊಂಡಿದ್ದು ಉದ್ಘಾಟನೆಗೆ ದಿನಾಂಕ ನಿಗದಿಯಾಗಬೇಕಿದೆ. ಕಾಮಗಾರಿ ಸಂಪೂರ್ಣ ಮೂರು ತಿಂಗಳಲ್ಲಿ 24 ಗಂಟೆಗಳ ಕಾಲ ನಿರಂತರ ಕಾಮಗಾರಿ ನಡೆದಿದ್ದು, ಇನ್ನೊಂದೆಡೆ ಮಳೆ ಕಾಮಗಾರಿ ಅಡಚಣೆ ನೀಡದ ಕಾರಣ ಸದ್ಯ ಕಾಮಗಾರಿ ಪೂರ್ಣ ಗೊಂಡಿದೆ. ತಡೆಗೋಡೆಗೆ ಪೈಟಿಂಗ್ ಕಾರ್ಯ ಮತ್ತು ಹೆದ್ದಾರಿ ಮದ್ಯೆ ಎರಡು ವಾಹನಗಳು ಸಂಚರಿಸುವ ಮಧ್ಯೆ ಲೈನ್ ಹಾಕುವ…

