Author: UllalaVani

Kannada News From Coastal Karnataka

ಉಳ್ಳಾಲ: ಕೇರಳ ಗಡಿಭಾಗದಲ್ಲಿ ಯಕ್ಷಗಾನ ಬೊಂಬೆಯಾಟವನ್ನು ಸ್ಥಾಪಿಸಿ ಸದ್ಯದ ಕಾಲಘಟ್ಟದಲ್ಲಿ ತ್ರಿಶಂಕು ಸ್ಥಿತಿಯಲ್ಲಿದ್ದೇವೆ, ಪ್ರೋತ್ಸಾಹದ ಕೊರತೆಯಿಂದ ಮುಂದಿನ ದಿನಗಳಲ್ಲಿ ನಮ್ಮೊಂದಿಗೆ ಬೊಂಬೆಯಾಟ ನಿಲ್ಲುತ್ತದೋ ಅನ್ನುವ ಆತಂಕವಿದೆ. ಕಲಾಸಕ್ತರು, ಯಕ್ಷರಸಿಕರು, ವಿದ್ಯಾರ್ಥಿಗಳು ವಿಶ್ವ ಪ್ರಸಿದ್ಧಿ ಪಡೆದು ಪಾಕಿಸ್ತಾನ, ಚೀನಾ, ಫ್ರಾನ್ಸ್‌ ಸಹಿತ ಹಲವು ವಿದೇಶಗಳಲ್ಲಿ ಪ್ರದರ್ಶಗೊಂಡಿರುವ ಕಾಸರಗೋಡು ಶ್ರೀ ಗೋಪಾಲಕೃಷ್ಣ ಬೊಂಬೆಯಾಟದ ಉಳಿವಿಗಾಗಿ “ಗಣ್ಯರೆಡೆಗೆ ಬೊಂಬೆ ನಡಿಗೆ” ಯಕ್ಷಗಾನ ಬೊಂಬೆಯಾಟಕ್ಕೆ ಫೆ.2 ರಂದು ಧರ್ಮಸ್ಥದಲ್ಲಿ ಚಾಲನೆ ನೀಡಲಾಗುವುದು ಎಂದು ಕಾಸರಗೋಡು ಶ್ರೀ ಗೋಪಾಲಕೃಷ್ಣ ಬೊಂಬೆಯಾಟ ಸಂಘದ ನಿರ್ದೇಶಕ ಕೆ. ವಿ. ರಮೇಶ್‌ ಹೇಳಿದರು. ತೊಕ್ಕೊಟ್ಟು ಸೇವಾಸೌಧ ಕಚೇರಿಯಲ್ಲಿರುವ ಉಳ್ಳಾಲ ಪ್ರೆಸ್‌ ಕ್ಲಬ್‌ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ತೆಂಕುತಿಟ್ಟು ಯಕ್ಷಗಾನವನ್ನು ಬೊಂಬೆಯಾಟದ ಮೂಲಕ ಪ್ರದರ್ಶಿಸುತ್ತಿರುವ ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘವು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಮೂಲಕ ವಿಶ್ವದ ಗಮನ ಸೆಳೆದಿದೆ. 2030ರಲ್ಲಿ ಸಂಸ್ಥೆಯ ಸುವರ್ಣ ಮಹೋತ್ಸವ ಜರಗಲಿದ್ದು ಚಂದ್ರಗಿರಿ ತೀರದ ಯಕ್ಷಪುತ್ಥಳಿ ಬೊಂಬೆಮನೆಯಲ್ಲಿ ಸಾವಿರ ಬೊಂಬೆಗಳ ಮ್ಯೂಸಿಯಂ…

Read More

ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ಸಲ್ಲಿಸಿದ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು, “ಚಿನ್ನದ ದರ ಇಳಿಯಲಿ, ಬಡವರು ಹಾಗೂ ಸಾಮಾನ್ಯ ಜನರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಅಪರೂಪದ ಆಶಯದೊಂದಿಗೆ ದೇವಿಯ ಮುಂದೆ ಹರಕೆ ಸಲ್ಲಿಸಿದರು. ತಾಯಿಯ ರಥೋತ್ಸವದ ವೇಳೆ, ನಾಗರಾಜ ಉಲವತ್ತಿ ಅವರು ಬಾಳೆ ಹಣ್ಣಿನ ಮೇಲೆ “ಚಿನ್ನದ ದರ ಇಳಿಯಲಿ, ಮುನಿದ ಚಿನ್ನ ಒಲಿಯಲಿ” ಎಂದು ಬರೆದು ಭಕ್ತಿಪೂರ್ವಕವಾಗಿ ದೇವಿಗೆ ಅರ್ಪಿಸಿದರು. ಈ ವಿಭಿನ್ನ ಭಕ್ತಿ ಪ್ರದರ್ಶನ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರ ಗಮನ ಸೆಳೆಯಿತು.ಚಿಮ್ನಳ್ಳಿ ದುರ್ಗಮ್ಮ ಜಾತ್ರೆಯಲ್ಲಿ ಭಕ್ತರ ಮಹಾಪೂರವೇ ಹರಿದು ಬರುತ್ತಿರುವ ಸಂದರ್ಭದಲ್ಲಿ, ನಾಗರಾಜ ಅವರ ಈ ವಿಶಿಷ್ಟ ಹರಕೆ ವಿಶೇಷ ಚರ್ಚೆಗೆ ಕಾರಣವಾಯಿತು. ದೇವಿಯ ಕೃಪೆಯಿಂದ ಚಿನ್ನದ ಬೆಲೆ ಇಳಿದು, ಸಾಮಾನ್ಯ ಜನರಿಗೂ ಚಿನ್ನದ…

Read More

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ಸಿನಿಮಾ 17 ನೇ ಬೆಂಗಳೂರು ಅಂತಾರಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕನ್ನಡ ಸೂಪರ್ ಹಿಟ್ ಚಿತ್ರಗಳ ಜತೆ ಪಾಪ್ಯುಲರ್ ಎಂಟರ್ಟೈನ್ಮೆoಟ್ ವಿಭಾಗದಲ್ಲಿ ಜೈ ತುಳು ಸಿನಿಮಾ ಆಯ್ಕೆಯಾಗಿದೆ. ಜೈ ಸಿನಿಮಾ ಟಿವಿ, ಓಟಿಟಿ ಹಾಗೂ ಎಲ್ಲಾ ಭಾಷೆಯ ಡಬ್ಬಿಂಗ್ ಹಕ್ಕುಗಳನ್ನು ಭಾರತದ ಪ್ರಖ್ಯಾತ ಸಂಸ್ಥೆ ಬಹು ದೊಡ್ಡ ಮೊತ್ತಕ್ಕೆ ಖರೀದಿಸಿದೆ. ಸಿನಿಮಾ 75 ದಿನಗಳನ್ನು ಪೂರೈಸಿದ್ದು ಶೀಘ್ರದಲ್ಲೇ ಸಿನಿಮಾ 100 ದಿನಗಳನ್ನು ಪೂರೈಸಲಿದೆ. ಸಿನಿಮಾದ 100 ದಿನಗಳ ಸಂಭ್ರಮಾಚರಣೆಯ ವೇಳೆ ಹೊಸ ಸಿನಿಮಾದ ಘೋಷಣೆಯನ್ನು ಮಾಡಲಾಗುವುದು ಎಂದು ರೂಪೇಶ್ ಶೆಟ್ಟಿ ತಿಳಿಸಿದ್ದಾರೆ. ಮುಂಬೈಯಲ್ಲಿ ಇತಿಹಾಸದಲ್ಲೇ ಅತೀ ದೊಡ್ಡ ತುಳು ಪ್ರೀಮಿಯರ್ ಒಂದೇ ದಿನ 9 ಟಾಕೀಸ್ ಗಳಲ್ಲಿ 25 ಕ್ಕೂ ಹೆಚ್ಚು ಶೋ ನಡೆದು ದಾಖಲೆ ಬರೆದಿದೆ. ಜೈ ತುಳು ಸಿನಿಮಾ ತುಳು ಸಿನಿಮಾ ರಂಗದ ಇತಿಹಾಸದಲ್ಲೇ ಪ್ರಥಮ ದಿನದಲ್ಲೇ 1020 ಪ್ರದರ್ಶನಗಳನ್ನು ಕಂಡು ದಾಖಲೆ ನಿರ್ಮಿಸಿದೆ. ಈಗಾಗಲೇ…

Read More

ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳಲು ಸಂಚು ರೂಪಿಸಿದೆ. ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡಲು ಶ್ರಮಜೀವಿಗಳ ರಕ್ತ ಹೀರಲು ಸನ್ನದ್ದವಾಗಿದೆ.ಈ ಹಿನ್ನೆಲೆಯಲ್ಲಿ ಜಾರಿಗೊಂಡ 4 ಸಂಹಿತೆಗಳು ಕಾರ್ಮಿಕರ ಪಾಲಿಗಂತೂ ಮರಣ ಶಾಸನವಾಗಲಿದೆ ಎಂದು CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂರವರು ತೀವ್ರ ಆತಂಕ ವ್ಯಕ್ತಪಡಿಸಿದರು. ಕಾರ್ಮಿಕ ಸಂಹಿತೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಕಳೆದ 4 ದಿನಗಳಿಂದ ದ.ಕ.ಜಿಲ್ಲೆಯಾದ್ಯಂತ ಸಂಚರಿಸಿದ ಪಾದಯಾತ್ರೆಗಳು ಇಂದು ಮಂಗಳೂರಿನ ಹೃದಯಭಾಗದಲ್ಲಿ ಸಮಾಪನಗೊಂಡಿದ್ದು,ಅದರ ಭಾಗವಾಗಿ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಅವರು,ಈ ಮಾತುಗಳನ್ನು ಹೇಳಿದರು. ಮುಂದುವರಿಸುತ್ತಾ ಅವರು, ಕೇಂದ್ರ ಸರಕಾರವು ಜನದ್ರೋಹಿ ಸಂಹಿತೆಗಳನ್ನು ಜಾರಿಗೊಳಿಸಿದರೆ, ರಾಜ್ಯದ ಕಾಂಗ್ರೆಸ್ ಸರಕಾರವೂ ಕೂಡ ಅದಕ್ಕೆ ಪೂರಕವಾಗಿ ಕರಡು ನಿಯಮಾವಳಿಗಳನ್ನು ರೂಪಿಸಲು ಹೊರಟಿರುವ ಮೂಲಕ ಕಾರ್ಮಿಕ ವರ್ಗದ ವಿರುದ್ದ ದ್ವೇಷ ಸಾಧಿಸುವುದರಲ್ಲಿ ಬಿಜೆಪಿ ಕಾಂಗ್ರೆಸ್ ಒಂದೇ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ.ಬೀಜ ಮಸೂದೆ,ವಿದ್ಯುತ್ ಮಸೂದೆಗಳಂತಹ…

Read More

ಉಳ್ಳಾಲ: ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆಯ 41ನೇ ವಾರ್ಷಿಕ ಮಹಾಸಭೆ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಜಯರಾಮ್ ಕುತ್ತಾರ್ ಇವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸಂಸ್ಥೆಯ ವಾರ್ಷಿಕ ಚಟುವಟಿಕೆಗಳ ಬಗ್ಗೆ ವಿಮರ್ಶೆ ನಡೆಸಿ, 2026ರ ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಬಳಿಕ 21 ಜನರ ನೂತನ ಸಮಿತಿ ಹಾಗೂ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಗಣೇಶ್ ಟೈಲರ್ ಹಾಗೂ ಅಧ್ಯಕ್ಷರಾಗಿ ಸುನಿಲ್ ತೇವುಲ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸ್ವೀಕೃತ್ ಕುತ್ತಾರ್ ಮತ್ತು ಗುರುರಾಜ್ ಹೊಸಮನೆ, ಕಾರ್ಯದರ್ಶಿಯಾಗಿ ಕಿಶನ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ದಿವ್ಯರಾಜ್ ಕುತ್ತಾರ್, ಕೋಶಾಧಿಕಾರಿಯಾಗಿ ಸೃಜನ್ ದೆಸೋಡಿ ಆಯ್ಕೆಯಾದರು. ಕ್ರೀಡಾ ಕಾರ್ಯದರ್ಶಿಗಳಾಗಿ ಶ್ರಾವಣ್ ತೇವುಲ, ನಿಶಾಂತ್ ಆಯರೆಬೆಟ್ಟು ಮತ್ತು ವರ್ಷಿತ್ ಆಯರೆಬೆಟ್ಟು ಆಯ್ಕೆಗೊಂಡರೆ, ಪೂಜಾ ಸಂಚಾಲಕರಾಗಿ ದಿವ್ಯರಾಜ್ ತೇವುಲ ಹಾಗೂ ಕವನ್ ಆಯರೆಬೆಟ್ಟು ಇವರನ್ನು ಆಯ್ಕೆ ಮಾಡಲಾಯಿತು.

Read More

ಮಂಗಳೂರು, ಜ. 29: ಕುಳಾಯಿ ಗ್ರಾಮದ ಬೀಗ ಹಾಕಿದ ಮನೆಯಿಂದ ದೈವದ ಮೂರ್ತಿಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಮಾರು 1.95 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಸೈಯದ್ ಅಲಿ (40), ಬಜ್ಪೆ ನಿವಾಸಿ ವಾಜಿದ್ ಜೆ ಅಲಿಯಾಸ್ ವಾಜಿ (27) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಳಾಯಿ ಗ್ರಾಮದ ಯಶೋದಾ ಕ್ಲಿನಿಕ್ ಬಳಿಯ ನಿವಾಸಿ ಸುರೇಶ್ ಅವರ ಪತ್ನಿ ಅಮಿತಾ (43) ದೂರು ದಾಖಲಿಸಿದ್ದಾರೆ. ದೈವ ವಿಗ್ರಹಗಳು ಮತ್ತು ಸಂಬಂಧಿತ ಪೂಜಾ ಸಾಮಗ್ರಿಗಳನ್ನು ತನ್ನ ತಾಯಿಯ ಮನೆಯಲ್ಲಿ ಇಡಲಾಗಿತ್ತು, ಅಲ್ಲಿ ಜನರು ವಾಸಿಸುತ್ತಿರಲಿಲ್ಲ ಪೂಜೆ ಮತ್ತು ದೀಪಗಳನ್ನು ಬೆಳಗಿಸಲು ಮಾತ್ರ ತೆರೆಯಲಾಗುತ್ತಿತ್ತು ಮತ್ತು ನಂತರ ಬೀಗ ಹಾಕಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.ಡಿಸೆಂಬರ್ 26, 2025 ರ ರಾತ್ರಿ, ಅಪರಿಚಿತ ವ್ಯಕ್ತಿಗಳು ಮನೆಯ ಛಾವಣಿಯ ಹಂಚುಗಳನ್ನು ತೆಗೆದು, ಮನೆಯೊಳಗೆ ನುಗ್ಗಿ ಪಸಪ್ಪ ದೈವದ ತಾಮ್ರದ ವಿಗ್ರಹ, ಮಂತ್ರದೇವತೆಯ…

Read More

ಮಂಗಳೂರು,ಜ.28;ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ,ಮಂಗಳೂರು ನಗರ ಪೊಲೀಸ್ ಮತ್ತು ರೋಶನಿ ನಿಲಯ ವಿದ್ಯಾ ಸಂಸ್ಥೆ ಗಳ ಸಹಯೋಗದೊಂದಿಗೆ ಸ್ಟೇಟ್ ಬ್ಯಾಂಕ್ ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಪಿ.ಉಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ಎಸಿಪಿ ರವೀಶ್ ನಾಯ್ಕ್ ಮಾತನಾಡುತ್ತಾ,ಮಾದಕ ದ್ರವ್ಯ ಬಳಕೆ ಯಿಂದ ಸಮಾಜದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು‌. ಮಾಡಿ.ಮಾದಕ ದ್ರವ್ಯ ಸೇವನೆ ಒಂದು ಪಿಡುಗು.ಮಕ್ಕಳು ಮಾದಕ ದ್ರವ್ಯ ಸೇವನೆ ಮಾಡುವವರು ಬಂದರೆ ಅವರ ಮಾಹಿತಿ ಗೌಪ್ಯವಾಗಿಟ್ಟು ಅವರಿಗೆ ಚಿಕಿತ್ಸೆ ಗೆ ಸಹಾಯ ಮಾಡಲಾಗುವುದು.ನಗರದಲ್ಲಿಮಾದಕ ಪದಾರ್ಥಗಳ ಪೂರೈಕೆ ಮಾಡುವ ವರ ವಿರುದ್ಧ ಪ್ರಕರಣ ದಾಖಲು ಮಾಡಿ ಕ್ರಮ ಕೈ ಗೊಳ್ಳಲಾಗುತ್ತಿದೆ.ಈ ನಿಟ್ಟಿನಲ್ಲಿ ಸಾರ್ವಜ ನಿಕರ ಸಹಕಾರ ಅಗತ್ಯ ಎಂದರು.ಜೊತೆಗೆ ಸೈಬರ್ ಕ್ರೈಮ್ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗುತ್ತಿದೆ.ಈ ಬಗ್ಗೆ ಸಾರ್ವಜನಿಕರುಭಯ ಪಡಬಾರದು ಧೈರ್ಯ ವಾಗಿ ಎದುರಿಸಬೇಕು.ಪೊಲೀಸರ ಸಹಾಯ ಪಡೆದುಕೊಳ್ಳಬೇಕು.ಇದುವರೆಗೆ…

Read More

ಮಂಗಳೂರು: ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.2ರಿಂದ ಫೆ.11ರವರೆಗೆ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಾಣೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿ, ಫೆ.2ರಂದು ಬೆಳಗ್ಗೆ 8.00ಕ್ಕೆ ಆಚಾರ್ಯರ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ನಾನಾ ಧಾರ್ಮಿಕ ಕಾರ್ಯಕ್ರಮ. ರಾತ್ರಿ 7.00ರಿಂದ : ಸ್ಥಳಿಯ ಪ್ರತಿಭೆಗಳಿಂದ ಹಾಗೂ ನಾನಾ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ವೈಭವ. ಫೆ.3ರಂದು ಬೆಳಗ್ಗೆ 8.00ರಿಂದ ಮಹಾಮೃತ್ಯುಂಜಯ ಯಾಗ, ಸಂಜೆ 5.00ರಿಂದ ನಾಗಾಲಯ ವಸ್ತ್ವಾದಿ, ನಾಗ ಬಿಂಬಾಧಿವಾಸ, ಪ್ರೋಕ್ತಹೋಮ. ರಾತ್ರಿ 7.00ರಿಂದ ಕಲ್ಲಡ್ಕ ಶ್ರೀ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ. ಫೆ. 4ರಂದು ಬೆಳಗ್ಗೆ 8.00ರಿಂದ: ನವಗ್ರಹ ಶಾಂತಿ ಹೋಮ ಬಳಿಕ ನೂತನ ನಾಗಾಲಯದಲ್ಲಿ ಶ್ರೀ ನಾಗದೇವರ ಪ್ರತಿಷ್ಠೆ, ನಾಗದರ್ಶನ. 5.30ರಿಂದ : ಆಶ್ಲೇಷಾಬಲಿ, ಶ್ರೀ ಸುಬ್ರಹ್ಮಣ್ಯ ದೇವರ ಬಿಂಬ…

Read More

ಕೊಣಾಜೆ: ಖ್ಯಾತ ಸಂಖ್ಯಾಶಾಸ್ತ್ರಜ್ಞ, ನಿವೃತ್ತ ಪ್ರಾಧ್ಯಾಪಕ ಪ್ರೊ. ಸುಬ್ಬ ಪಕ್ಕಳ ಪಂಜಾಳ(80) ಅವರು ಬುಧವಾರ ಮುಂಜಾನೆ ಹೃದಯ ಸಂಬಂದಿ ಕಾಯಿಲೆಯಿಂದ ನಿಧನರಾದರು. ಇವರ ಕುಟುಂಬದ ಮನೆ ತಲಪಾಡಿಯಾಗಿದ್ದು ಕಳೆದ ಹಲವು ವರ್ಷಗಳಿಂದ ಕೊಣಾಜೆಯ ಗ್ರೀನ್ ವ್ಯೂ ಪರಿಸರದಲ್ಲಿ ವಾಸವಾಗಿದ್ದರು.ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅನೇಕ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು. 1976 ರಿಂದ 1981 ವರೆಗೆ ಮಂಗಳೂರಿನ ಸರಕಾರಿ ಕಾಲೇಜು (ಈಗಿನ ವಿ. ವಿ ಕಾಲೇಜು) ಅಲ್ಲಿ ಉಪಾನ್ಯಾಸಕರಾಗಿ ನಂತರ ಬೆಂಗಳೂರಿನ ಸರಕಾರಿ ಕಾಲೇಜಿನಲ್ಲಿ ಮತ್ತು ಪ್ರತಿಷ್ಠಿತ ಮಹಾರಾಣಿ ಕಾಲೇಜಿನಲ್ಲಿ ಸೇವೆಸಲ್ಲಿಸಿ ಬಳಿಕ ದಿನಗಳಲ್ಲಿ ಹೆಬ್ರಿಯ ಸರಕಾರಿ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿ, ಕೊನೆಗೆ ಬೆಂಗಳೂರಿನ ಪದವಿಕಾಲೇಜು ಪ್ರಿನ್ಸಿಪಾಲ್ ಆಗಿ ನಿವೃತ್ತಿ ಹೊಂದಿದ್ದರು. ಲೇಖಕರೂ ಕವಿಗಳು ಅದ ಇವರು ತಮ್ಮ ನಿವೃತ್ತಿ ನಂತರ ಕೂಡ ಹಲವು ಶಾಲಾ ಕಾಲೇಜು ಸಂಘ ಸಂಸ್ಥೆಗಳಿಗೆ ತೆರಲಿ ಸಂಖ್ಯಾ ಶಾಸ್ತ್ರದ ಬಗ್ಗೆ ಉಚಿತ ಶಿಕ್ಷಣ ನೀಡುತಿದ್ದರು.ಕಾಲೇಜಿನಲ್ಲಿ ರಾಂಕ್ ವಿದ್ಯಾರ್ಥಿಯಾಗಿದ್ದ ಅವರು…

Read More

ಮಂಗಳೂರು, ಜ. 28: ಸ್ವತಂತ್ರ್ಯ ಹೋರಾಟದಲ್ಲಿ ಮೂಡಿ ಬಂದ ಕಾರ್ಮಿಕ ಚಳುವಳಿ ಬ್ರೀಟೀಷರ ವಿರುದ್ಧ ಪ್ರಬಲ ಹೋರಾಟ,ತ್ಯಾಗ ಬಲಿದಾನದ ಪರಂಪರೆಯಿಂದಾಗಿ ಕಾರ್ಮಿಕ ಕಾನೂನುಗಳು ಅಸ್ಥಿತ್ವಕ್ಕೆ ಬಂದಿದೆ. ಸಂವಿಧಾನದಲ್ಲಿ ಕೂಡಾ ಈ ಎಲ್ಲಾ ಆಶಯಗಳು ಪ್ರತಿಫಲನಗೊಂಡಿದೆ.ಮೂಲಭೂತ ಹಕ್ಕುಗಳು,ರಾಜ್ಯ ಸರಕಾರಗಳ ನಿರ್ಧೇಶಕ ಸೂತ್ರಗಳು ಕಾರ್ಮಿಕ ಹೋರಾಟದ ಬಳುವಳಿಗಳು. ಆದರೆ ದೇಶವನ್ನಾಳುವ ಕೇಂದ್ರ ಸರ್ಕಾರ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಕಾಪಾಡುವ ಮೂಲಕ ಕಾರ್ಮಿಕ ಕಾನೂನುಗಳನ್ನು ಬಲಿ‌ತೆಗೆದುಕೊಂಡಿದೆ ಎಂದು CITU ದ.ಕ ಜಿಲ್ಲಾ ಉಪಾಧ್ಯಕ್ಷರಾದ ವಸಂತ ಆಚಾರಿಯವರು ಹೇಳಿದರು. ಅವರು ಕಾರ್ಮಿಕ ಸಂಹಿತೆಗಳ ವಿರುದ್ದ ಮೂಡಬಿದ್ರೆಯಿಂದ ಮಂಗಳೂರಿಗೆ ಸಂಚರಿಸಲಿರುವ ಪಾದಯಾತ್ರೆಯನ್ನು‌ ಉದ್ಘಾಟಿಸುತ್ತಾ ಈ ಮಾತುಗಳನ್ನು ಹೇಳಿದರು.1990ರಲ್ಲಿ ಕಾಂಗ್ರೆಸ್ಸು ಸರಕಾರ ಉದಾರೀಕರಣ , ಖಾಸಗೀಕರಣ, ಜಾಗತೀಕರಣ ನೀತಿಗಳನ್ನು ಜಾರಿಗೆ ತಂದು ಖಾಸಗೀಕರಣ ನೀತಿಗೆ ನಾಂದಿ ಹಾಡಿತು.ಈಗಿನ ನರೇಂದ್ರ ಮೋದಿ ಸರಕಾರ ಸರಕಾರಿ ಬಂಡವಾಳ, ಸಾರ್ವತ್ರಿಕ ರಂಗಗಳು, ವಿಮಾರಂಗ ಎಲ್ಲಾವನ್ನು ಖಾಸಗೀ ಕಂಪನಿಗಳಿಗೆ ಮಾರಾಟ ಮಾಡಿದೆ.ಕಾರ್ಪೋರೇಟ್ ಸಂಸ್ಥೆಗಳಿಗಾಗಿ ದೇಶದ 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಸಂಹಿತೆಗಳನ್ನಾಗಿ ರೂಪಿಸುವ ಮೂಲಕ ಕಾರ್ಮಿಕರನ್ನು…

Read More