Author: UllalaVani

Kannada News From Coastal Karnataka

UN NETWORKS ಕೆ.ಸಿ.ರೋಡು : ದೂರದೂರಿನಿಂದ ಆಗಮಿಸುವ ಪ್ರವಾಸಿಗರನ್ನು ಸ್ವಾಗತಿಸಿ ಆತ್ಮೀಯ ಸೇವೆ ನೀಡುವ ಆಟೋ ಚಾಲಕರು ಸಮಯಪ್ರಜ್ಞೆಯೊಂದಿಗೆ ಅತ್ಯಂತ ಮಹತ್ವದ್ದಾಗಿರುವ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಮಾನವೀಯ ಸೇವೆಗೆ ಮುಂದಾಗಿರುವುದು ಶ್ಲಾಘನೀಯ ಎಂದು ಎಸ್‍ವೈಎಸ್ ಕೆ.ಸಿ.ರೋಡು ಘಟಕಾಧ್ಯಕ್ಷ ಉಮರಬ್ಬ ಮಾಸ್ಟರ್ ಅಭಿಪ್ರಾಯಪಟ್ಟರು. ಕೆ.ಸಿ.ರೋಡು ಅಟೋ ಚಾಲಕ-ಮಾಲಕರ ಸಂಘ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಭಾಗಿತ್ವದಲ್ಲಿ ಭಾನುವಾರ ಕೆ.ಸಿ.ರೋಡ್‍ನಲ್ಲಿ ನಡೆದ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನವನಾಗಿ ಹುಟ್ಟಿದ ಬಳಿಕ ಯಾವುದಾದರೂ ರೀತಿಯಲ್ಲಿ ಸೇವೆ ನೀಡದಿದ್ದರೆ ಮನುಷ್ಯ ಜೀವನವೇ ನಿಷ್ಪ್ರಯೋಜಕ ಎನಿಸುತ್ತದೆ. ರಕ್ತಕ್ಕೆ ಪರ್ಯಾಯ ಎನಿಸುವಂತದ್ದು ಯಾವುದೂ ಇಲ್ಲ. ಇದನ್ನು ಅರಿತುಕೊಂಡು ಅಟೋ ಚಾಲಕರು ಶಿಬಿರ ಹಮ್ಮಿಕೊಳ್ಳುವ ಮೂಲಕ ಸಹೋದರತೆಯನ್ನು ತೋರಿಸಿದ್ದಾರೆ ಎಂದು ಹೇಳಿದರು. ಎ.ಜೆ.ಆಸ್ಪತ್ರೆಯ ಡಾ.ನಿತಿನ್ ಆಚಾರ್ಯ ಉದ್ಘಾಟಿಸಿದರು. ಯುಎಸ್‍ಡಬ್ಲ್ಯುಓ ಅಧ್ಯಕ್ಷ ರಹೀಂ ಯು.ಬಿ.ಎಂ., ಬ್ಲಡ್ ಹೆಲ್ಪ್‍ಲೈನ್ ಪ್ರಯೋಜಕ ನವಾಝ್ ದೇರಳಕಟ್ಟೆ, ಗೌರವಾಧ್ಯಕ್ಷ ನಝೀರ್ ಹುಸೈನ್, ಸಮಾಜ…

Read More

UN NETWORKS ಉಳ್ಳಾಲ: ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಸುಧಾಕರ್(55) ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 30 ವರ್ಷಗಳಿಂದ ಖಾಸಗಿ ಬಸ್ಸಿನಲ್ಲಿ ಕ್ಲಿನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸುಧಾಕರ್ ಈ ಹಿಂದೆಯೂ ಮನೆಯಿಂದ ಹೊರ ಹೋದರೆ ಮೂರು ನಾಲ್ಕು ತಿಂಗಳು ಕಳೆದು ಮನೆಗೆ ಬರುತ್ತಿದ್ದರು. 2018ರ ಅಕ್ಟೋಬರ್ 19ರಂದು ಮೊಬೈಲ್ ಮನೆಯಲ್ಲಿಟ್ಟು ಬೆಂಗಳೂರಿಗೆ ತೆರಳಿರುವ ಸುಧಾಕರ್ ಈವರೆಗೆ ಮನೆಗೆ ಬಾರದೆ ದೂರವಾಣಿ ಸಂಪರ್ಕವನ್ನು ಮಾಡಿಲ್ಲ ಮತ್ತು ಯಾವುದೇ ಸಂಬಂಧಿಕರ ಮನೆಗೂ ತೆರಳದೆ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

Read More

UN NETWORKS ಬಂಟ್ವಾಳ: ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮುಡಿಪು ವ್ಯಾಪ್ತಿಯ ಮೂಳೂರು ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತರನ್ನು ಮಂಚಿ ಗ್ರಾಮದ ಕಯ್ಯೂರು ನಿವಾಸಿ ಅದ್ರಾಮ ಬ್ಯಾರಿ ಎಂಬವರ ಪುತ್ರ, ದ್ವಿಚಕ್ರ ವಾಹನ ಸವಾರ ಮುಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದ್ದು, ಝಹೀರ್ ಗಾಯಗೊಂಡ ಸಹಸವಾರ. ಝಹೀರ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಸಿನಾನ್ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ:ಇಂದು ಸಂಜೆ ಸಿನಾನ್ ಅವರು ತನ್ನ ಸ್ನೇಹಿತ ಝಹೀರ್ ಅವರ ಜೊತೆ ಮುಡಿಪು ವ್ಯಾಪ್ತಿಯ ಮೂಳೂರಿನಿಂದ ಮಂಚಿ ಕಡೆಗೆ ಬರುತ್ತಿದ್ದಾಗ ಮೂಳೂರಿನ ಅಲ್ಪ ದೂರದಲ್ಲಿ ಟಿಪ್ಪರ್ ಲಾರಿಯು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇವರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯ ಸಹಕಾರದೊಂದಿಗೆ ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಸಿನಾನ್ ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು,…

Read More

UN NETWORKS ಉಳ್ಳಾಲ : ಇಲ್ಲಿನ ಮೊಗವೀರಪಟ್ಣ ಬೀಚ್ ಬಳಿ ಸಮುದ್ರ ಪಾಲಾಗುತ್ತಿದ್ದ ಮೈಸೂರು ಮೂಲದ ಇಬ್ಬರು ಮಹಿಳೆಯರನ್ನು ಜೀವರಕ್ಷಏಕ ಈಜುಗಾರರ ಸಂಘದ ಸದಸ್ಯರು ರಕ್ಷಿಸಿದ್ದು, ಅಸ್ವಸ್ಥಗೊಂಡ ಮಹಿಳೆಯರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ದರ್ಗಾ ವೀಕ್ಷಣೆಗೆಂದು ಆಗಮಿಸಿದ್ದ ಮೈಸೂರು ಮೂಲದ ಕುಟುಂಬದ ಸದಸ್ಯರು ಸಂಜೆ ಉಳ್ಳಾಲ ಮೊಗವೀರಪಟ್ಣ ಬೀಚ್ ಬಳಿ ಸಮುದ್ರದ ಅಲೆಗಳೊಂದಿಗೆ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಜೀವರಕ್ಷಕ ಈಜುಗಾರರ ಸಂಘದ ಸದಸ್ಯರು ಸಮುದ್ರದ ಅಲೆಗಳೊಂದಿಗೆ ಅಪಾಯಕಾರಿಯಾಗಿ ಆಟವಾಡಬೇಡಿ ಎಂದು ಎಚ್ಚರಿಕೆ ನೀಡಿದ್ದರೂ ನಿರ್ಲಕ್ಷಿಸಿ ಸಮುದ್ರದ ಅಲೆಗಳೊಂದಿಗೆ ಆಟವಾಡುತ್ತಿದ್ದಾಗ ದೊಡ್ಡದೊಮದು ಅಲೆಗೆ ಸಿಲುಕಿ ಇಬ್ಬರು ಮಹಿಳೆಯರು ಸಮುದ್ರಪಾಲಾದರು. ಪ್ರವಾಸಿಗರ ಬೊಬ್ಬೆ ಕೇಳಿ ಆಗಮಿಸಿದ ಕರಾವಳಿ ನಿಯಂತ್ರಣ ದಳದ ಪ್ರಸಾದ್ ಸುವರ್ಣ, ಜೀವರಕ್ಷಕ ಸಂಘದ ಶಶಿಧರ್ ಕರ್ಕೇರ, ನವೀನ್ ಅಮೀನ್, ಜಿತೇಂದ್ರ ಬಂಗೇರ ಮೋಹನ್ ಪುತ್ರನ್ , ಸುರೇಶ್ ತಂಡ ಇಬ್ಬರನ್ನು ರಕ್ಷಿಸಿದ್ದು ಅಸ್ವಸ್ಥಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.

Read More

UN NETWORKS ತೊಕ್ಕೊಟ್ಟು: ಉಗ್ರರ ಕೃತ್ಯವನ್ನು ವಿಶ್ವವೇ ಖಂಡಿಸುತ್ತದೆ. ಕರ್ನಾಟಕದ 10 ಸೇರಿದಂತೆ ಜಿಲ್ಲೆಯ ಒಬ್ಬರು ಮಹಿಳೆ ಸಾವನ್ನಪ್ಪಿರುವುದು ತೀರಾ ದು:ಖಕರ, ಮೃತರ ಆತ್ಮಕ್ಕೆ ಶಾಂತಿಯನ್ನು ಒದಗಿಸಲು ಎಲ್ಲರೂ ಪ್ರಾರ್ಥಿಸುವುದಾಗಿ ಎಂದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎನ್.ಎಸ್. ಕರೀಂ ಹೇಳಿದರು. ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಚರ್ಚ್ ದಾಳಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಮತ್ತು ಯುವ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಶುಕ್ರವಾರ ಜರಗಿದ ಬೃಹತ್ ಸಂತಾಪ ಮತ್ತು ಖಂಡನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಈಶ್ವರ್ ಉಳ್ಳಾಲ್ ಮಾತನಾಡಿ, ಉಗ್ರರ ಹೀನಾಯ ಕೃತ್ಯದಿಂದ ಆಗುತ್ತಿರುವ ಪರಿಸ್ಥಿತಿಯನ್ನು ವಿಶ್ವದಾದ್ಯಂತ ವಿವಿಧ ದೇಶಗಳು ಒಗ್ಗೂಡಿ ಪರಿಹರಿಸಬೇಕಿದೆ. ಮೃತರ ಕುಟುಂಬಗಳಿಗೆ ದು:ಖ ಸಹಿಸುವ ಶಕ್ತಿ ದೇವರು ನೀಡಲಿ. ಮೃತರ ಕುಟುಂಬಗಳಿಗೆ ಸರಕಾರ ಸಹಾಯಹಸ್ತವನ್ನು ನೀಡಬೇಕಿದೆ. ಬಡ ಕುಟುಂಬದವರೂ ಸಾವನ್ನಪ್ಪಿರುವುದು ದುರಾದೃಷ್ಟ ಎಂದರು.…

Read More

UN NETWORKS ದೇರಳಕಟ್ಟೆ: ಬದ್ರಿಯಾ ಫ್ರೆಂಡ್ಸ್ ದುಬೈ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ಎ.26 ರಂದು ಬೆಳಗ್ಗೆ 10ಕ್ಕೆ ದುಬೈ ಲತೀಫಾ ಆಸ್ಪತ್ರೆ ಹೂದ್ ಮೆಹ್ತಾ ದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಅಮೆಚೂರು ಕಬ್ಬಡ್ಡಿ ಅಸೋಶಿಯೇಷನ್ ಮತ್ತು ಕಾಸ್ಕ್ ನರಿಂಗಾನ ಆಯೋಜಿಸುತ್ತಿರುವ ಆರ್ಮಿ ಟ್ರೋಪಿ 2019 ಇದರ ಪ್ರಯುಕ್ತ ಶಮಾ ಗೋಲ್ಡ್, ಸಹದ ಟ್ರೇಡರ್ಸ್ ಸಹರಾ ಸ್ಪೋರ್ಟ್ಸ್ ಪ್ರಾಯೋಜಕತ್ವದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಎ.27 ಮತ್ತು 28 ರಂದು ದೇರಳಕಟ್ಟೆ ಗ್ರೀನ್ ಗ್ರೌಂಡ್ ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಪಂದ್ಯಾಟದ ಪ್ರಯುಕ್ತ ಸಹರಾ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಎ. 28 ರಂದು ಬೆಳಗ್ಗೆ 9ಕ್ಕೆ ರಕ್ತದಾನ ಶಿಬಿರ ನಡೆಯಲಿದೆ ಎಂದು ಬ್ಲಡ್ ಡೋನರ್ಸ್ ಮಂಗಳೂರು ತಂಡ ಪ್ರಕಟನೆಯಲ್ಲಿ ತಿಳಿಸಿದೆ.

Read More

UN NETWORKS ಉಳ್ಳಾಲ: ಎಸ್ಸೆಸ್ಸೆಫ್‌ ಮುಡಿಪು ಡಿವಿಶನ್‌ ವತಿಯಿಂದ ಒರ್ಬಿಟ್‌  ಕ‌ರಿಯರ್‌ ಗೈಡೆನ್ಸ್‌ ಕಾರ್ಯಾಗಾರವು ವಲಯಾಧ್ಯಕ್ಷ ತೌಸೀಫ್‌ ಸಅದಿ ಉಸ್ತಾದರ ಅಧ್ಯಕ್ಷತೆಯಲ್ಲಿ ಅಲ್‌ ಮದೀನ ಕ್ಯಾಂಪಸ್‌ ಮಂಜನಾಡಿಯಲ್ಲಿ ನಡೆಯಿತು.ಎಸ್ಸೆಸ್ಸೆಫ್‌ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್‌ ಮಾಸ್ಟರ್‌ ಮೊಂಟೆಪದವು ಕಾರ್ಯಕ್ರಮ ಉದ್ಘಾಟಿಸಿದರು. ಗೈಡನ್ಸ್‌ ಕರಿಯರ್‌ ತರಗತಿ ಮುಡಿಪು ಡಿವಿಶನ್‌ ಇವೆಂಟ್ಸ್‌ ಮತ್ತು ಟ್ರೆ„ ನಿಂಗ್‌ ಕನ್ವೀನರ್‌ ಮನ್ಸೂರ್‌ ಹಿಮಮಿ ಮೊಂಟೆಪದವು ಮತ್ತು ನಾಸಿರ್‌ ಬಜಪೆ ಕೆರಿಯರ್‌ ಗೈಡನ್ಸ್‌ ಬಗ್ಗೆ ತರಗತಿ ನಡೆಸಿದರು. ಅಲ್‌-ಮದೀನಾ ಮುದರ್ರಿಸ್‌ ಅಬ್ದುಲ್‌ ಸಲಾಂ ಅಹ್ಞನಿ ಹಾಗೂ ಅಬ್ದುರ್ರಝಾಕ್‌ ಮಾಸ್ಟರ್‌ ನಾವೂರು ಶುಭ ಹಾರೈಸಿದರು.ಪ್ರಧಾನ ಕಾರ್ಯದರ್ಶಿ ಇಲ್ಯಾಸ್‌ ಪೊಟ್ಟೋಳಿಕೆ ಸ್ವಾಗತಿಸಿದರು. ಶರೀಫ್‌ ಪಾನೇಲ ವಂದಿಸಿದರು.

Read More

UN NETWORKS ಅಸೈಗೋಳಿ: ಯಾವುದೇ ಒಂದು ಕ್ಷೇತ್ರಕ್ಕೆ ಕಳೆ ಬರಬೇಕಾದರೆ ಅಲ್ಲಿ ನಿರಂತರ ಭಜನಾ ಕಾರ್ಯಕ್ರಮ ನಡೆಸುವುದು ಉತ್ತಮ ಎಂದು ಅಯ್ಯಪ್ಪಸ್ವಾಮಿ ಮಂದಿರ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಸುರೇಶ್ ಚೌಟ ಅಭಿಪ್ರಾಯಪಟ್ಟರು. ಅಸೈಗೋಳಿ ಶ್ರೀ ಅಯ್ಯಪ್ಪಸ್ವಾಮಿ ಮಂದಿರದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಎ.23ರಿಂದ ಮೇ 10ರವರೆಗೆ ನಡೆಯಲಿರುವ ಭಜನಾ ಸಂಕೀರ್ತನೆಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ಆರ್ಥಿಕ ಸಮಿತಿ ಸಂಚಾಲಕ ಮಂಜುನಾಥ ಆಳ್ವ, ಭಜನಾ ಸಂಚಾಲಕ ಗಣೇಶ್ ಅಸೈಗೋಳಿ ಸೈಟ್, ಸ್ವಾಗತ ಸಮಿತಿ ಸಂಚಾಲಕ ನಾರಾಯಣ ರೈ ಕಕ್ಕೆಮಜಲು, ಪ್ರಧಾನ ಕಾರ್ಯದರ್ಶಿ ಚೇತನ್ ಅಸೈಗೋಳಿ, ಮಹಿಳಾ ಸಂಚಾಲಕಿ ದೇವಕಿ ಉಪಸ್ಥಿತರಿದ್ದರು. ಆನಂದ ಕೆ. ಅಸೈಗೋಳಿ ಸ್ವಾಗತಿಸಿದರು. ಶ್ರೀನಿವಾಸ ಶೆಟ್ಟಿ ಪುಲ್ಲು ಪ್ರಾಸ್ತಾವಿಕವಾಗಿ ಮಾತನಾಡಿದರು. ತ್ಯಾಗಂ ಹರೇಕಳ ವಂದಿಸಿದರು. ಶಿವಪ್ರಸಾದ್ ಕಕ್ಕೆಮಜಲು ಕಾರ್ಯಕ್ರಮ ನಿರೂಪಿಸಿದರು.

Read More

UN NETWORKS ತೊಕ್ಕೊಟ್ಟು : ಈಸ್ಟರ್ ಹಬ್ಬದಂದು ಶುಭ್ರ ಮನಸ್ಸಿನಲ್ಲಿ ದೇವರಲ್ಲಿ ಪ್ರಾರ್ಥಿಸುತ್ತಿದ್ದ ಅಮಾಯಕರನ್ನು ಕೊಲ್ಲುವ ಮೂಲಕ ಉಗ್ರರು ತಂದೆಗೆ ಮಕ್ಕಳು, ಮಕ್ಕಳಿಗೆ ತಂದೆ ಇಲ್ಲದಂತೆ ಮಾಡಿರುವುದು ಪೈಶಾಚಿಕ ಕೃತ್ಯವಾಗಿದೆ. ಇಂತಹ ದುಷ್ಕೃತ್ಯವನ್ನು ಮನುಷ್ಯ ಎನಿಸಿಕೊಂಡವರು ಕ್ಷಮಿಸಲೂ ಅಸಾಧ್ಯ ಎಂದು ಉಳ್ಳಾಲ ನಗರಸಭಾ ಸದಸ್ಯ ಮುಹಮ್ಮದ್ ಮುಕಚ್ಚೇರಿ ಹೇಳಿದರು. ನ್ಯೂಝಿಲೆಂಡ್ ಮತ್ತು ಶ್ರೀಲಂಕಾದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಉಳ್ಳಾಲ ನಗರಸಭಾ ವ್ಯಾಪ್ತಿಯ ಜನಪ್ರತಿಧಿಗಳು ಮತ್ತು ಸಮಾನ ಮನಸ್ಕರ ವತಿಯಿಂದ ಬುಧವಾರ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದ ಸಂತಾಪ ಸೂಚಕ ಸಭೆಯಲ್ಲಿ ಅವರು ಮಾತನಾಡಿದರು.ನಗರಸಭಾ ಸದಸ್ಯ ಅಯ್ಯೂಬ್ ಮಂಚಿಲ ಮಾತನಾಡಿ ಕೆಲವು ತಿಂಗಳ ಹಿಂದೆ ನ್ಯೂಜಿಲ್ಯಾಂಡ್ ಮಸೀದಿಯಲ್ಲಿ ಉಗ್ರದಾಳಿ ನಡೆದಿದ್ದರೆ ಇದೀಗ ಶ್ರೀಲಂಕಾ ಚರ್ಚ್ ಮತ್ತು ಮಾಲ್ಗಳಲ್ಲಿ ಉಗ್ರರು ದುಷ್ಕೃತ್ಯ ಎಸಗಿದ್ದಾರೆ. ಇದು ಮಾನವೀಯತೆಗೆ ಕಳಂಕವಾಗಿದೆ. ಉಗ್ರರಿಗೆ ಜಾತಿ, ಧರ್ಮ ಎಂಬುದಿಲ್ಲ. ಯಾರೇ ಆದರೂ ಇಂತಹ ದುಷ್ಕೃತ್ಯದಲ್ಲಿ ಭಾಗಿಯಾದರೂ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು. ನಗರಸಭಾ ಸದಸ್ಯರಾದ ಬಾಝಿಲ್ ಡಿಸೋಜ,…

Read More

UN NETWORKS ಉಳ್ಳಾಲ : ಟಿ.ಐ.ಎಮ್ ಎಸ್ ವೈಎಸ್ ಹಾಗೂ ಎಸ್ಸೆಸ್ಸೆಫ್ ಕಾನೆಕೆರೆ ಶಾಖೆ ಮತ್ತು ತಾಜುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಕಾನೆಕೆರೆಯಲ್ಲಿ ನಿರ್ಮಿಸಿದ ತಾಜುಲ್ ಉಲಮಾ ಮಸ್ಜಿದ್ ಉದ್ಘಾಟನೆ ಸಮಾರಂಭ ಹಾಗೂ ಜುಮುಅ ಸಂಸ್ಥಾಪನೆ ಕಾರ್ಯಕ್ರಮ ಎ,26ಶುಕ್ರವಾರ ನಡೆಯಲಿದೆ. ಖುರ್ರತುಸ್ಸಾದಾತ್ ಸಯ್ಯದ್ ಫಯಲ್ ಕೋಯಮ್ಮ ತಂಙಳ್ ಅಲ್-ಬುಖಾರಿ ಕೂರತ್ ತಾಜುಲ್ ಉಲಮಾ ಮಸ್ಜಿದ್ ಉದ್ಘಾಟಿಸಲಿದ್ದಾರೆ. ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಅಲ್-ಮಶ್ ಹೂರು ತಲಕ್ಕಿ, ಮಂಜನಾಡಿ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಹಾಗೂ ಅಬೂ ಸ್ವಾದಿಕ್ ಬಿ.ಮುಹಮ್ಮದ್ ಫೈಝಿ ಚೆರ್ವತ್ತೂರು ಜುಮುಅ ನೇತೃತ್ವ ವಹಿಸಲಿದ್ದಾರೆ. ಮಗ್ರಿಬ್ ನಮಾಝಿನ ಬಳಿಕ ಬೆಳ್ತಂಗಡಿ ತಾಲೂಕು ಸಂಯುಕ್ತ ಜಮಾಅತ್ ಉಪ ಖಾಝಿ ಸಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ನೇತೃತ್ವದಲ್ಲಿ ಜಾಮಿಅ ಸ ಅದಿಯ್ಯಾ ಹುಸೈನ್ ಸ ಅದಿ ಕೆ.ಸಿ ರೋಡ್ ಮುಖ್ಯ ಪ್ರಭಾಷಣಗೈಯಲಿದ್ದಾರೆ ಎಂದು ತಾಜುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ನ ಪ್ರ.ಕಾರ್ಯದರ್ಶಿ ವಿ.ಯು ಇಸ್ಹಾಕ್ ಝುಹ್ ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More