Author: UllalaVani

Kannada News From Coastal Karnataka

UN NETWORKS ತೊಕ್ಕೊಟ್ಟು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರನ್ನು‌ ಮೂರು‌ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಿಸುವ ಸಲುವಾಗಿ ವರಿಷ್ಠರ ನಿರ್ದೇಶನದಂತೆ ನೂತನ ಕಾರ್ಯತಂತ್ರಗಳನ್ನು ಪಕ್ಷದ ಕಾರ್ಯಕರ್ತರಿಗೆ ತಿಳಿಸುವ ಸಲುವಾಗಿ ಕಾರ್ಯಕರ್ತರು ಹಾಗೂ ಪೇಜ್ ಪ್ರಮುಖರ ಸಮಾವೇಶ ಮಾ. 30ರಂದು ಗಟ್ಟಿ ಸಮಾಜಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಹೇಳಿದರು. ತೊಕ್ಕೊಟ್ಟು ಕಾಪಿಕಾಡಿನ ಚುನಾವಣಾ ಕಾರ್ಯಾಲಯದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು‌ ಮತ್ತೊಮ್ಮೆ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಆಡಳಿತ ನಡೆಸುವುದು‌ ಶತಸಿದ್ಧ. ಅದಕ್ಕಾಗಿ ತಳಮಟ್ಟದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷರ ತನಕ ನಿತ್ಯ ನಿರಂತರ ಕಾರ್ಯತಂತ್ರಗಳು ನಡೆಯುತ್ತಾ ಇದೆ. ಕಳೆದ ಬಾರಿ ಮಂಗಳೂರು‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು‌ ಅವರು ಜಿಲ್ಲೆಯಲ್ಲಿ ಏಳು ಕಾಂಗ್ರೆಸ್ ಶಾಸಕರ ಪ್ರಾಬಲ್ಯದ ನಡುವೆಯೂ 1,53,000ಮತಗಳ ಅಂತರದ ಗೆಲವು ದಾಖಲಿಸಿದ್ದರು.…

Read More

UN NETWORKS ನರಿಂಗಾನ :  ತಾಯಿ ಮರಣದ ಅತೀವ ದು:ಖದ ನಡುವೆಯೂ ವಿದ್ಯಾರ್ಥಿ ನಿಯೋರ್ವಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವ ಘಟನೆ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಸರಕಾರಿ ಪ್ರೌಢಶಾಲೆ ಮೊಂಟೆಪದವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಅಲ್ ಮದೀನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿನಿ ಶೈಬಾ ತನ್ನ ತಾಯಿಯ ಸಾವಿನ‌ ದು: ಖದ ನಡುವೆಯೂ ಬುಧವಾರ ಪರೀಕ್ಷೆ ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.  ನರಿಂಗಾನ ಗ್ರಾಮದ ಕೊಡಂಚಿಲ್ ಅಬ್ಬಾಸ್ ಹಾಗೂ ಸೆಫಿಯಾ ದಂಪತಿ‌ ಪುತ್ರಿ ಶೈಬಾ ಇಂತಹ ಧೈರ್ಯ ತೋರಿರುವುದು ನಿಜಕ್ಕೂ ಶ್ಲಾಘನೀಯ. ಶೈಬಾ ತಾಯಿ ಸೆಫಿಯಾ ಅವರಿಗೆ ಕೆಲವು ದಿನಗಳಿಂದ ಅರೋಗ್ಯದಲ್ಲಿ ವ್ಯತ್ಯಯವಾಗಿದ್ದು ಮಂಗಳವಾರ ರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಶೈಬಾ ಅವರ ದುಃಖದ ಕಟ್ಟೆ ಒಡೆದಿದ್ದರೂ ಪರೀಕ್ಷೆಯನ್ನು ಬರೆಯಲು, ಕುಟುಂಬಸ್ಥರು ಧೈರ್ಯ ನೀಡಿದ್ದರು. ಅದರಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶೇಷ ಮುತುವರ್ಜಿಯಿಂದ ವಿದ್ಯಾರ್ಥಿನಿ ಶೈಬಾ ಅವರಿಗೆ ಪರೀಕ್ಷಾ ಕೇಂದ್ರವಾಗಿರುವ ಮೊಂಟೆಪದವಿನ ‌ಸರಕಾರಿ ಪ್ರೌಢಶಾಲೆಯ…

Read More

UN NETWORKS ಕಣಚೂರು : ಕ್ಷಯರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳ ಸಹಿತ 20 ಐಸಿಟಿಸಿ ಸೆಂಟರುಗಳು ಕಾರ್ಯಾಚರಿಸುತ್ತಿವೆ ಎಂದು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಬದ್ರುದ್ದೀನ್ ಅಭಿಪ್ರಾಯಪಟ್ಟರು. ಅವರು ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವಿಭಾಗದ ಆಶ್ರಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ಕಣಚೂರು ಆಸ್ಪತ್ರೆ ಸಭಾಂಗಣದಲ್ಲಿ ಬುಧವಾರ ಜರಗಿದ `ರಿವೈಸ್ಡ್ ನ್ಯಾಷನಲ್ ಟ್ಯೂಬರ್ ಕ್ಯುಲೋಸಿಸ್ ಕಂಟ್ರೋಲ್ ಪ್ರೊಗ್ರಾಂ’ ನಲ್ಲಿ ಭಾಗವಹಿಸಿ ಮಾತನಾಡಿದರು.ದೇಶಾದ್ಯಂತ ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಗಳು ಕ್ರಮಕೈಗೊಳ್ಳುತ್ತಾ ಬಂದಿದೆ. ಜಿಲ್ಲೆಯಲ್ಲಿಯೂ ಪರಿಣಾಮಕಾರಿಯಾಗಿ ಕ್ಷಯರೋಗ ನಿರ್ಮೂಲನೆಗೆಂದು ಆರೋಗ್ಯ ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಆಧುನಿಕ ಸವಲತ್ತುಗಳನ್ನು ಒಳಗೊಂಡು, ಖಾಸಗಿ ಸಂಸ್ಥೆಗಳ ಜತೆಗೆ ಸೇರಿಕೊಂಡು ಜಾಗೃತಿ ಕಾರ್ಯಕ್ರಮಗಳ ಮೂಲಕ ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತಿದೆ ಎಂದ ಅವರು ಈ ನಿಟ್ಟಿನಲ್ಲಿ ಕಣಚೂರು ಸಂಸ್ಥೆ ಹಲವು ಸಮಯಗಳಿಂದ ಹಮ್ಮಿಕೊಂಡಿರುವ ಕಾರ್ಯ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಣಚೂರು ಸಮೂಹ ಸಂಸ್ಥೆಗಳ…

Read More

UN NETWORKS ಉಳ್ಳಾಲ : ಉಳ್ಳಾಲ ಶ್ರೀ ವ್ಯಾಘ್ರಚಾಮುಂಡೇಶ್ವರೀ ದೇವಸ್ಥಾನ ದಲ್ಲಿ ಶ್ರೀ ಗುಳಿಗ ಕೋಲದ ಪ್ರಯುಕ್ತ ಮೊಗವೀರ ಪಟ್ಣದ ರಾಣಿ ಅಬ್ಬಕ್ಕ ಯುವಕ ಮಂಡಲ ವತಿಯಿಂದ ಧಾರ್ಮಿಕ ಸಭೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅತ್ತಾವರ ಶ್ರೀ ಉಮಾ ಮಹೇಶ್ವರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮತಿ ಅಧ್ಯಕ್ಷ ಹರೀಶ್ ಕುತ್ತಾರು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಬೇಕಾದರೆ ಆಧ್ಯಾತ್ಮ ಚಿಂತನೆ ಅಗತ್ಯ. ಆ ಬಗ್ಗೆ ಜನರು ಹೆಚ್ಚೆಚ್ಚು ತೊಡಗಿಸಿಕೊಂಡರೆ ದೇಶದಲ್ಲಿ ಶಾಂತಿ ನೆಲೆಸಿ ದೇಶ ಸುಭೀಕ್ಷವಾಗುತ್ತದೆ ಎಂದು ಹೇಳಿದರು. ಉಳ್ಳಾಲ ಭಗವತೀ ತೀಯಾ ಸಮಾಜದ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್ ಮಾತನಾಡಿ ಮೊಗವೀರರು ಒಗ್ಗಟ್ಟಿಗೆ ಮೊದಲ ಸ್ಥಾನವನ್ನು ನೀಡುವುದರೊಂದಿಗೆ ದೇವರ ಮೇಲೆ ಅವರಿಟ್ಟ ವಿಶ್ವಾಸ ಅವರ್ಣನೀಯ. ಆ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ತೊಡಗುವುದಲ್ಲದೇ ಅತೀವ ದೈರ್ಯದಿಂದ ದೇಶ ಕಟ್ಟುವ ಮನೋಭಾವ ಅವರಿಗೆ ರಕ್ತಗತವಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್ ಯುವ ಶಕ್ತಿ ದುರ್ವ್ಯಸಗಳಿಂದ ದೂರವಿದ್ದು ಇಂತಹ ಸಮಾಜಮುಖಿ…

Read More

UN NETWORKS ಯೆನೆಪೋಯ : ಸಮಗ್ರ ತತ್ವಶಾಸ್ತ್ರಗಳನ್ನು ಒಳಗೊಂಡು ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಜೊತೆಗೆ ಸಮುದಾಯವನ್ನು ಶೈಕ್ಷಣಿಕ ಅಭಿವೃದ್ಧಿಗೊಳಿಸುತ್ತಿರುವ ಯೆನೆಪೋಯ ಸಂಸ್ಥೆಯ ಜೊತೆಗಿನ ಒಪ್ಪಂದ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಆಸ್ಟ್ರೇಲಿಯಾದ ಕಿ ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ದಂತ ವಿಭಾಗದ ಮುಖ್ಯಸ್ಥೆ ಪ್ರೊ. ಪೌಲೀನ್ ಫೋರ್ಡ್ ಅಭಿಪ್ರಾಯಪಟ್ಟರು. ಅವರು ಪರಸ್ಪರ ಶೈಕ್ಷಣಿಕ ಹಾಗೂ ಸಂಶೋಧನಾ ಸಹಭಾಗಿತ್ವಕ್ಕಾಗಿ ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದೊಂದಿಗೆ ಯೆನೆಪೋಯ (ಪರಿಗಣಿತ) ವಿಶ್ವವಿದ್ಯಾಲಯದೊಂದಿಗೆ ಪರಸ್ಪರ ಒಡಂಬಡಿಕೆಯ ತಿಳುವಳಿಕೆ ಪತ್ರಕ್ಕೆ ಗುರುವಾರ ದೇರಳಕಟ್ಟೆಯ ಯೆನೆಪೋಯ ದಂತ ಕಾಲೇಜು ಆಡಿಟೋರಿಯಂನಲ್ಲಿ ಜರಗಿದ ಸಮಾರಂಭದಲ್ಲಿ ಸಹಿ ಹಾಕಿ ಮಾತನಾಡಿದರು.ಅದ್ಭುತವಾದ ಮೂಲಸೌಕರ್ಯಗಳನ್ನು ಒದಗಿಸುತ್ತಿರುವ ಯೆನೆಪೋಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ವಿ.ವಿ ಜತೆಗಿನ ಒಪ್ಪಂದದ ಮೂಲಕ ಪರಸ್ಪರ ಜ್ಞಾನವನ್ನು ಹಂಚಿಕೊಳ್ಳಲು ಸಾಧ್ಯ. ಆರೋಗ್ಯ ಕ್ಷೇತ್ರದ ಸುಧಾರಣೆಗೆ ಪರಸ್ಪರ ಒಪ್ಪಂದ ಸಹಕಾರಿ. ಈ ಮೂಲಕ ನಾವೀನ್ಯತೆಯನ್ನು ಕಂಡುಕೊಳ್ಳುವ ಸಂಶೋಧಕರಿಗೆ ತಮ್ಮೊಳಗಿರುವ ಸಮಸ್ಯೆಗಳನ್ನು ಹಂಚಿಕೊಳ್ಳಲು ಸಿಗುವಂತಹ ಅವಕಾಶವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ…

Read More

UN NETWORKS ಕೊಣಾಜೆ : ಭಾರತದ ಸಂಸ್ಕೃತಿ, ಆಚರಣೆ, ಸಂಪ್ರದಾಯಗಳು ವೈಶಿಷ್ಟ್ಯಪೂರ್ಣವಾದುದು. ಆದರೆ ಇತ್ತೀಚೆಗೆ ಭಾರತದಲ್ಲಿ ಶಿಕ್ಷಣ ಪಡೆದು ವಿದೇಶಕ್ಕೆ ತೆರಳಿ ದುಡಿಯುವ ಮನೋಭಾವ ಯುವಕರಲ್ಲಿ ಹೆಚ್ಚಾಗುತ್ತಿದೆ. ಯುವ ಸಮುದಾಯ ಇಂತಹ ಮನೋಭಾವನ್ನು ದೂರಮಾಡಿ ನಮ್ಮ ದೇಶದ ಸೇವೆಯನ್ನೇ ಮಾಡುವಂತಹ ದೃಢಸಂಕಲ್ಪ ಮಾಡಬೇಕು ಎಂದು ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಎಂದೇ ಖ್ಯಾತರಾಗಿರುವ ಸೇತು ಬಂಧು ಡಾ. ಗಿರೀಶ್ ಭಾರದ್ವಾಜ್ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ `ಸಂಭ್ರಮ-2019’ರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ನಮ್ಮ ದೇಹ, ಬಟ್ಟೆಯನ್ನು ನಾವು ಹೇಗೆ ಸ್ವಚ್ಚವಾಗಿಟ್ಟುಕೊಳ್ಳುತ್ತೇವೆಯೋ ಅದೇ ರೀತಿ ನಮ್ಮ ಹೃದಯವನ್ನು ಕೂಡಾ ಸ್ವಚ್ಚವಾಗಿಟ್ಟುಕೊಳ್ಳಬೇಕು. ನಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದನ್ನು ಕಲಿತುಕೊಳ್ಳಬೇಕು. ದೃಢವಾದ ವಿಶ್ವಾಸ ನಮ್ಮನ್ನು ಯಶಸ್ವಿ ಜೀವನದತ್ತ ಕೊಂಡೊಯ್ಯುತ್ತದೆ. ಜೊತೆಗೆ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ರಕ್ಷಣೆಯೊಂದಿಗೆ ಗುರುಹಿರಿಯರಿಗೆ ಗೌರವ ನೀಡುವ ಗುಣ ನಮ್ಮಲ್ಲಿ ಸದಾ ಇರಬೇಕು ಎಂದು…

Read More

UN NETWORKS ಕುರ್ನಾಡು : ಸುಮಾರು ಸಾವಿರ ವರ್ಷಗಳ ಇತಿಹಾಸವಿರುವ ಬಂಟ್ವಾಳ ತಾಲೂಕಿನ ಅಮ್ಮೆಂಬಳ ಮಾಗಣೆ ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅಷ್ಟಬಂಧ ಸಹಸ್ರ ಕುಂಭಾಭಿಷೇಕ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. 25ವರ್ಷಗಳ ಬಳಿಕ ನವೀಕಣಗೊಂಡ ದೇವಸ್ಥಾನದಲ್ಲಿ ಮಾ. 27ರಿಂದ ಏ. 1ರ ತನಕ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉತ್ಸವಾದಿಗಳನ್ನು ಆಯೋಜಿಸಲಾಗಿದೆ. ದೇವಸ್ಥಾನವನ್ನು ಸುಮಾರು 4ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿದೆ. ಎದುರಿನ ಗೋಪುರ, ವಸಂತ ಮಂಟಪ, ನಾಗನಕಟ್ಟೆ, ದೇವರಕಟ್ಟೆ, ದೇವಿಯ ಕಟ್ಟೆ, ಗಣಪತಿ ಗುಡಿ, ಗಿರಾವು ದೈವದ ಗುಡಿಗಳನ್ನು ನವೀಕರಿಸಲಾಗಿದೆ. 1000ಮಂದಿ ಏಕಕಾಲದಲ್ಲಿ ಅನ್ನಪ್ರಸಾದ ಸೇವಿಸಬಹುದಾದ ಭೋಜನಶಾಲೆ, ಪಾಕಶಾಲೆ, ಅತಿಥಿಗಳ ಕೊಠಡಿ, ಕಚೇರಿ ಕೊಠಡಿ, ಶೌಚಾಲಯಗಳನ್ನು ಹೊಸದಾಗಿ ಶಾಶ್ವತ ಕಾಮಗಾರಿ ರೂಪದಲ್ಲಿ ನಿರ್ಮಿಸಲಾಗಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ 4000ಸಭಿಕರ ಸಾಮಥ್ರ್ಯದ ವಿಶಾಲ ಸಭಾಂಗಣ ಹಾಗೂ ವೇದಿಕೆ, 10ಸಾವಿರ ಮಂದಿಯ ಸಾಮಥ್ರ್ಯದ ಭೋಜನ ಶಾಲೆ ನಿರ್ಮಿಸಲಾಗಿದೆ. ಪ್ರತಿದಿನ ಮಧ್ಯಾಹ್ನ ಹಾಗೂ ರಾತ್ರಿ ಅನ್ನದಾನವಿದ್ದು, ಇತರ ದಿನಗಳಂದು ಸುಮಾರು 10 ಸಾವಿರ ಮಂದಿ ಹಾಗೂ ಸಹಸ್ರ ಕುಂಭಾಭಿಷೇಕದ…

Read More

UN NETWORKS ಹರೇಕಳ : ಹರೇಕಳ ಗ್ರಾಮದಲ್ಲಿ ನಿವೇಶನ ರಹಿತರಿಗೆ ಮೀಸಲಿಟ್ಟಿದ್ದ ಜಮೀನು ಕಬಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಡಿವೈಎಫ್‍ಐ ಹರೇಕಳ ಗ್ರಾಮ ಸಮಿತಿಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ. ಹರೇಕಳ ಗ್ರಾಮದ ಮಲಾರ್ ಎಂಬಲ್ಲಿ ಸರ್ವೇ ನಂಬ್ರ 124/2 ಮತ್ತು 125/1ನ್ನು ಗ್ರಾಮದ ನಿವೇಶನ ರಹಿತರಿಗೆ ಮೀಸಲಿಡಲಾಗಿದೆ. ಆದರೆ ಭಾನುವಾರ ಬೆಳಗ್ಗೆ ಜೆಸಿಬಿ ಯಂತ್ರ ಬಳಸಿ ಜಮೀನು ಸಮತಟ್ಟು ಮಾಡಲಾಗಿದ್ದು ಮನೆ ನಿರ್ಮಾಣಕ್ಕೆ ಪ್ರಯತ್ನಿಸಲಾಗಿದೆ. ಈ ಸಂದರ್ಭ ಸಾರ್ವಜನಿಕರು ತಡೆಯದಿದ್ದಲ್ಲಿ ಜಮೀನು ಅತಿಕ್ರಮಣವಾಗುವ ಭೀತಿಯಿತ್ತು. ಪ್ರಕರಣ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ಸರ್ಕಾರಿ ಭೂಮಿ ಸಂರಕ್ಷಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್‍ಐ ಲಿಖಿತ ಮನವಿ ಮಾಡಿದೆ.

Read More

UN NETWORKS ದೇರಳಕಟ್ಟೆ: ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿವಿಯ ಅಧೀನದ ನಿಟ್ಟೆ ಉಷಾ ಇನ್‍ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‍ನ ಆಶ್ರಯದಲ್ಲಿ ಆರೋಗ್ಯ ಮತ್ತು ಸಂತೋಷ ಕುರಿತಾಗಿ ವಿಚಾರ ಸಂಕಿರಣ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಚಿಂತನಾ ಸಭಾಂಗಣದಲ್ಲಿ ಶನಿವಾರ ನಡೆಯಿತು. ಯೂತ್ ರೆಡ್ ಕ್ರಾಸ್ ಸಂಯೋಜಕಿ ಲತಾ ಎಸ್. ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪ್ರಕಾಶ್ ವಿ. ಪೈ ಯುವಕರಲ್ಲಿ ಒತ್ತಡ ಕಡಿತ ಮತ್ತು ಸಮಯ ನಿರ್ವಹಣೆಯ ಅಗತ್ಯತೆ ತಿಳಿಸಿ ಸಂತೋಷದಾಯಕ ಬದುಕಿಗೆ ವಿವಿಧ ಮಾರ್ಗೋಪಾಯ ತಿಳಿಸಿದರು. ಆರ್ಥೊಡೋಂಟಿಕ್ಸ್ ವಿಭಾಗ ಮುಖ್ಯಸ್ಥ ಪ್ರೊ.ಎಂ.ಎಸ್. ರವಿ ಉಪಸ್ಥಿತರಿದ್ದರು.ಯೂತ್ ರೆಡ್ ಕ್ರಾಸ್ ಘಟಕದ ಪ್ರೆಸಿಡೆಂಟ್ ರೋಸ್ಮೆರಿ ವಂದಿಸಿದರು. ಸ್ಟೆಪಿ ಬಿ. ಪೆರಿಂಜಿಲ್ ಕಾರ್ಯಕ್ರಮ ನಿರೂಪಿಸಿದರು.

Read More

UN NETWORKS ನರಿಂಗಾನ : ವರ್ಕಾಡಿ-ನರಿಂಗಾನ ಗ್ರಾಮದ ಕಾರಣಿಕ ಕ್ಷೇತ್ರ ಶಾಂತಿಪಳಿಕೆ ಶ್ರೀ ಮಹಾಮಾಯ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದ ತಂತ್ರಿ, ವೇದಮೂರ್ತಿ ವರ್ಕಾಡಿ ಶ್ರೀ ರಾಜೇಶ್ ತಾಳಿತ್ತಾಯರ ನೇತೃತ್ವದಲ್ಲಿ ಸೋಮವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದೇರಳಕಟ್ಟೆಯ ವಿದ್ಯಾರತ್ನ‌ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ ಒಂದು ದೈವಸ್ಥಾನ, ದೇವಸ್ಥಾನ, ಧಾರ್ಮಿಕ ಮಂದಿರ, ಕ್ಷೇತ್ರ ನಿರ್ಮಾಣವಾಗಬೇಕಾದರೆ ಅದಕ್ಕಾಗಿ ಭಗವದ್ಭಕ್ತರು ಪ್ರಾಮಾಣಿಕವಾಗಿ ಶ್ರದ್ಧಾ ಭಕ್ತಿಯಿಂದ ಒಂದೇ ಮನಸ್ಸಿನಿಂದ ಕರ್ತವ್ಯ ಕಾರ್ಯನಿರ್ವಹಿಸಿದಾಗ ಮಾತ್ರ ಅದು ಕ್ಷಿಪ್ರಗತಿಯಲ್ಲಿ ನೆರವೇರಲು ಸಾಧ್ಯ ಎಂದರು. ಜೀರ್ಣೋದ್ಧಾರ ಸಮಿತಿ‌ ಅಧ್ಯಕ್ಷ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು ಮಾತನಾಡಿ ಹತ್ತು ಯುವಕರು ಸಿಕ್ಕರೆ ದೇಶ ಕಟ್ಟುತ್ತೇನೆ ಎಂಬ ವಿವೇಕಾನಂದರ ನುಡಿಯಂತೆ ಶ್ರೀಕ್ಷೇತ್ರದಲ್ಲಿ ಯುವಕರು ಹಾಗೂ ಮಾತೆಯರ ತಂಡ ಸ್ವಯಂ ಸೇವಕರಾಗಿ ಹಗಲಿರುಳು ಸೇವೆ ಸಲ್ಲಿಸುತ್ತಾ, ಕ್ಷೇತ್ರಕ್ಕೆ ಬೇಕಾದ ಪರಿಕರಗಳ ಸಂಗ್ರಹಕ್ಕೆ ಬಹಳಷ್ಟು ಕೊಡುಗೆ ನೀಡುವ ಮೂಲಕ ಕ್ಷೇತ್ರ ನಿರ್ಮಾಣದ ಕನಸು ನನಸಾಗುತ್ತಿದೆ…

Read More