Author: UllalaVani

Kannada News From Coastal Karnataka

UN NETWORKS ತೊಕ್ಕೊಟ್ಟು : ಎಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿಲು ಕಾರ್ಯಕರ್ತರು ಶಕ್ತಿಮೀರಿ ಕೆಲಸ ಮಾಡಬೇಕು.ನರೇಂದ್ರ ಮೋದಿಯವರ ಸರಕಾರದ ಸಾಧನೆ, ಬಡಜನರಿಗೆ ನೀಡಿದ ಸವಲತ್ತುಗಳನ್ನು, ಯೋಜನೆಯನ್ನು ಮತದಾರರಿಗೆ ತಿಳಿಸಬೇಕು.ಉಳ್ಳಾಲ ಮಹಾಶಕ್ತಿ ಕೇಂದ್ರದಲ್ಲಿ ಪಕ್ಷಕ್ಕೆ ಅತೀ ಹೆಚ್ಚು ಮತ ಬರುವಂತಾಗಲು ತಂತ್ರ ರೂಪಿಸಬೇಕೆಂದು ಬಿ.ಜೆ.ಪಿ.ಮಂಗಳೂರು ಕ್ಷೇತ್ರದ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದರು.ಅವರು ತೊಕ್ಕೊಟಿನ ಬಿ.ಜೆ.ಪಿ‌. ಕಛೇರಿಯಲ್ಲಿ ಉಳ್ಳಾಲ ಮಹಾ ಶಕ್ತಿಕೇಂದ್ರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರದ ಪ್ರ.ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್., ಉಪಾಧ್ಯಕ್ಷರಾದ ಯಶವಂತ್ ಅಮೀನ್, ಪ್ರಕಾಶ್ ಸಿಂಫೋನಿ, ಕಾರ್ಯದರ್ಶಿ ಗಳಾದ ರಾಮಕೃಷ್ಣ ಪಟ್ಟೊರಿ, ಹೇಮಂತ್ ಶೆಟ್ಟಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಪ್ರ.ಕಾರ್ಯದರ್ಶಿ ಪ್ರಶಾಂತ್ ಕಾಪಿಕಾಡ್, ಶಕ್ತಿ ಕೇಂದ್ರದ ಪ್ರಮುಖರು, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

Read More

UN NETWORKS ತೊಕ್ಕೊಟ್ಟು: ರಾಜ್ಯದ ಮುಖ್ಯಮಂತ್ರಿ ಜಿಲ್ಲೆಯ ಮಹತ್ವಾಕಾಂಶೆ ಯೋಜನೆಯಾಗಿರುವ ಮಣಿಪಾಲದಿಂದ ಕೊಣಾಜೆಗೆ ಶೈಕ್ಷಣಿಕ ಕಾರಿಡಾರ್ ನಿರ್ಮಾಣಕ್ಕೆ ಬಜೆಟಿನಲ್ಲಿ ಅಸ್ತು ನೀಡಿರುವುದು ದೊಡ್ಡ ಸಾಧನೆ. ಈ ಮೂಲಕ ರಾಜ್ಯದ ಸಮ್ಮಿಶ್ರ ಸರಕಾರ ಅಭಿವೃದ್ಧಿಪರ ಕಾರ್ಯಸಾಧನೆಗಳಲ್ಲಿ ಮುಂಚೂಣಿಯಲ್ಲಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಜಾತ್ಯಾತೀತ ಜನತಾದಳದ ರಾಜ್ಯ ಉಪಾಧ್ಯಕ್ಷ ಎಂ.ಬಿ ಸದಾಶಿವ ಹೇಳಿದರು. ತೊಕ್ಕೊಟ್ಟುವಿನಲ್ಲಿ ಸೋಮವಾರ ಜಾತ್ಯಾತೀತ ಜನತಾದಳ ಮಂಗಳೂರು ವಿಧಾನಸಭಾ ಕ್ಷೇತ್ರ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಮಣಿಪಾಲದಲ್ಲಿ ಉನ್ನತ ವ್ಯಾಸಾಂಗದ ಕಾಲೇಜುಗಳಿಂದ ಮಂಗಳೂರು ವಿಶ್ವವಿದ್ಯಾನಿಲಯದವರೆಗೆ ಸಂಪರ್ಕ ಕಲ್ಪಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಬಹಳಷ್ಟು ಸಹಕಾರಿಯಾಗಲಿದೆ ಎಂದರು. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಎಂಟು ತಿಂಗಳಲ್ಲಿ ನಡೆಸಿರುವ ಕಾರ್ಯಸಾಧನೆಗಳಿಂದ ರಾಜ್ಯದ ಪ್ರತಿ ಲೋಕಸಭಾ ಸ್ಥಾನಗಳಲ್ಲಿ ಸಮ್ಮಿಶ್ರ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಸಾಧಿಸಲಿದ್ದಾರೆ. ಸಾಮರಸ್ಯ, ಸೌಹಾರ್ದ ಸೃಷ್ಟಿಸುವ ಅನುಭವವುಳ್ಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೇಂದ್ರ ಸರಕಾರದ ನೀತಿಗಳಿಂದ ಅತೀ ಹೆಚ್ಚು ಸಾಲಗಾರರು ದೇಶದಲ್ಲಿದ್ದಾರೆ. ಸಿಬಿಐ ಒಡೆದ ಮನೆಯಾಗಿದೆ. ಸರ್ವೋಚ್ಛ ನ್ಯಾಯಾಲಯದ ಪ್ರತಿನಿಧಿಗಳು ಮಾಧ್ಯಮಗಳ…

Read More

UN NETWORKS ಮಕ್ಕಾ: ಜಿ ಸಿ ಸಿ ಸುನ್ನಿ ಫ್ರೆಂಡ್ಸ್ ಬನ್ನೂರು ವತಿಯಿಂದ ಖ್ವಾಜಾ ಗರೀಭ್ ನವಾಜ್ ಅಲ್-ಹಿಂದ್ ಅಜ್ಮೀರ್ (ಖ.ಸಿ), ತಾಜುಲ್ ಉಲಮಾ (ಖ.ಸಿ) ಅನುಸ್ಮರಣೆ ಹಾಗೂ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಜಬಲನ್ನೂರ್ ಮಕ್ಕತುಲ್ ಮುಕರ್ರಮದಲ್ಲಿ ಉಮ್ಮರ್ ಹಾಜಿ ಕರ್ವೇಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೆ.ಸಿ.ಎಫ್ ಜಿದ್ದಾ ಝೋನ್ ಅಧ್ಯಕ್ಷರಾದ ಹಾಫಿಲ್ ಉಒ ಸುಲೈಮಾನ್ ಹನೀಫೀ ಉದ್ಘಾಟಿಸಿದರು.ಸ್ವಲಾತ್ ಮಜ್ಲಿಸ್ ಗೆ ನೇತೃತ್ವವನ್ನು ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಯ್ಯಿದ್ ಇಂಬಿಚ್ಚಿಕೋಯ ಜಮುಲ್ಲೈಲಿ ತಂಙಳ್ ಕಾಟುಕುಕ್ಕೆ ಯಾವುದೇ ಒಂದು ಸಂಘಟನೆಯು, ಯಶಸ್ವಿಯಾಗಿ ಮುನ್ನಡೆಯಲು ಅದರ ಪ್ರತಿಯೊಬ್ಬ ಸದಸ್ಯರ ಪರಿಶ್ರಮವು ಅತ್ಯಗತ್ಯ ಪ್ರತಿಯೊಬ್ಬ ಸದಸ್ಯ ಕಾರ್ಯಚರಿಸಿದರೆ ಮಾತ್ರ ಒಂದು ಸಂಘಟನೆ ಯಶಸ್ವಿಯಾಗಿ ಮುನ್ನಡೆಯುತ್ತದೆ ಎಂದು ತಿಳಿಸಿ, ಜಿ ಸಿ ಸಿ ಸುನ್ನಿ ಫ್ರೆಂಡ್ಸ್ ನಡೆಸುತ್ತಿರುವ ಕಾರ್ಯಗಳನ್ನು ಶ್ಲಾಘಿಸಿದರು.ತ್ವೈಬಾ ಎಜ್ಯುಕೇಶನಲ್ ಸೆಂಟರ್ ಈಶ್ವರಮಂಗಿಲ ಹಾಗೂ ವೈಸ್ ಪ್ರಿನ್ಸಿಪಾಲ್ ಮುಹಿಮ್ಮಾತ್ ಕುರ್’ಆನ್ ರಿಸರ್ಚ್ ಸೆಂಟರ್ ಇದರ ಮುದರ್ರಿಸ್ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಿಲ ಅನುಸ್ಮರಣಾ ಭಾಷಣ…

Read More

UN NETWORKS ಉಳ್ಳಾಲ: ಕೇರಳ ಭಾಗದಿಂದ ಗಾಂಜಾ ಖರೀದಿಸಿ ಮಂಗಳೂರು ಕಡೆಗೆ ಮಾರಾಟ ನಡೆಸಲೆಂದು ತರುತ್ತಿರುವ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದ್ವಿಚಕ್ರ ವಾಹನ ಸೇರಿದಂತೆ ಆರೋಪಿಯನ್ನು ಗಡಿಪ್ರದೇಶ ತಲಪಾಡಿಯಿಂದ ಬಂಧಿಸಿದ್ದಾರೆ. ಕೆ.ಸಿ ರೋಡು ನಿವಾಸಿ ಮುನಾವರ್ (32) ಬಂಧಿತ. ಈತನ ಬಳಿಯಿದ್ದ ಒಂದು ಕೆ.ಜಿ 50 ಗ್ರಾಂ ಗಾಂಜಾ ಸಹಿತ ಸಾಗಾಟಕ್ಕೆ ಬಳಸಿದ ಏವಿಯೇಟರ್ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿತ ಕೇರಳ ಭಾಗದಿಂದ ಗಾಂಜಾ ಖರೀದಿಸಿ ಮಂಗಳೂರು ಕಡೆಯತ್ತ ಮಾರಾಟ ನಡೆಸಲೆಂದು ಸಾಗಾಟ ನಡೆಸುವಾಗ ಬಂಧಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ ಕೆ.ಆರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಎಸ್.ಐ ಗುರುವಪ್ಪ ಕಾಂತಿ ಹಾಗೂ ಸಿಬ್ಬಂದಿಗಳಾದ ದಯಾನಂದ, ಶರೀಫ್, ಪ್ರಶಾಂತ್, ಲಿಂಗರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Read More

UN NETWORKS ಸೌದಿ ಅರೇಬಿಯಾ : ಕೆಸಿಎಫ್ ಮದೀನಾ ಮುನವ್ವರ ಸೆಕ್ಟರ್ ನ ಮಹಾಸಭೆಯು ಇತ್ತೀಚೆಗೆ ಮದೀನಾ ಮುನವ್ವರದ ಕೆಸಿಎಫ್ ಭವನದಲ್ಲಿ ನಡೆಯಿತು. ಇಸ್ಮಾಯಿಲ್ ಸಅಃದಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಂತ್ವನ ಪ್ರವರ್ತನೆಗಳಲ್ಲಿ ಮದೀನಾ ಮುನವ್ವರದ ಕೆಸಿಎಫ್ ಕಾರ್ಯಕರ್ತರ ಕೆಲಸ ಶ್ಲಾಘನೀಯವಾಗಿದೆ. ನಬಿ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ಹಾಗೂ ಸ್ವಹಾಬಿಗಳ ಚರ್ಯೆಯನ್ನು ಪಾಲಿಸುವ ಅಹ್ಲ್ ಸುನ್ನತ್ ಜಮಾತ್ ಅಡಿಸ್ಥಾನದಲ್ಲಿ ಉತ್ತಮ ನಿಯ್ಯತ್ ನೊಂದಿಗೆ ಕಾರ್ಯಕರ್ತರು ಕೆಲಸವನ್ನು ಮಾಡಬೇಕೆಂದರು. ಮದೀನಾ ಸೆಕ್ಟರ್ ಕಾರ್ಯದರ್ಶಿ ಅಶ್ರಫ್ ದೇರಳಕಟ್ಟೆ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ಕೆಸಿಎಫ್ ಮದೀನಾ ಸೆಕ್ಟರ್ ಅಧ್ಯಕ್ಷ, ಅಶ್ರಫ್ ಸಖಾಫಿ ನೂಜಿ ಮಾತನಾಡಿ ಧರ್ಮ ಪ್ರಬೋಧನೆ ಪ್ರತಿಯೊಬ್ಬ ಮುಸ್ಲಿಮನ ಕರ್ತವ್ಯವಾಗಿದ್ದು, ಒಬ್ಬ ತಾನು ಉತ್ತಮನಾಗುದರೊಂದಿಗೆ ಇತರರನ್ನು ಉತ್ತಮಗೊಳಿಸಲು ಪ್ರಯತ್ನಿಸಬೇಕು. ನಮ್ಮಿಂದಾಗಿ ಒಬ್ಬ ತಪ್ಪಿನಿಂದ ದೂರ ಸರಿದಲ್ಲಿ ಇಹ-ಪರ ಲೋಕದಲ್ಲಿರುವ ಎಲ್ಲದಕ್ಕಿಂತಲೂ ಉತ್ತಮವಾಗಿದೆ ಎಂದು ನಬಿ ಸ.ಅ ತಿಳಿಸಿದ್ದು, ಹಬೀಬರ ಸನ್ನಿಧಿಯಲ್ಲಿ ಜೀವಿಸುವುದು ನಮ್ಮ ಭಾಗ್ಯ ವಾಗಿದೆ. ಈ ಅವಕಾಶವನ್ನು…

Read More

UN NETWORKS ಪಜೀರ್ : ಸಿ.ಒ.ಡಿ.ಪಿ. ಮಂಗಳೂರು ಪ್ರವರ್ತಿತ ಮಹಾಸಂಘದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಪರಿಸರ ಸ್ವಚ್ಛತಾ ಕಾರ್ಯಕ್ರಮ ಪಜೀರ್ ನಲ್ಲಿ ಶುಕ್ರವಾರ ನಡೆಯಿತು. ಪಜೀರ್ ಮೆರ್ಸಿಯಮ್ಮ ಮಾತಾ ದೇವಾಲಯದ ಧರ್ಮಗುರು ವಂ. ಸುನಿಲ್ ವೇಗಸ್ ಅವರು ಪ್ಲಾಸ್ಟಿಕ್ ಬ್ರಿಕ್ ಬೆಂಚನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು.ಫ್ರಾನ್ಸಿಸ್ ಅಸ್ಸಿಸಿ ದಲ್ಮೇಡ ಮಾತನಾಡಿ, ಮಹಿಳೆ ಇಲ್ಲದ ಮನೆ ವ್ಯವಸ್ಥಿತವಾಗಿರಲು ಸಾಧ್ಯವಿಲ್ಲ. ಮಹಿಳೆಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬಕ್ಕೆ ಹೋಗುತ್ತದೆ. ಪುರುಷನಿಗೆ ಶಿಕ್ಷಣ ನೀಡಿದರೆ ಅದು ಒಬ್ಬರಲ್ಲೇ ಉಳಿಯುತ್ತದೆ ಎಂದರು.ಸಂತ ಜೋಸೆಫ್ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಇನೆಟ್ ಸಿಸ್ಟರ್ ವಿಜಯ್, ಪಜೀರ್ ಗ್ರಾಮ ಪಂಚಾಯಿತಿ ಸದಸ್ಯರಾದ ಶಾಫಿ ಮತ್ತು ಫ್ಲೋರಿನ್, ಸಿಒಡಿಪಿ ಸಂಯೋಜಕಿ ರೀಟಾ ಡಿಸೋಜ ಹಾಗೂ ಕಾರ್ಯಕರ್ತೆ ಗುಲಾಬಿ ಮೊಂತೆರೋ ಉಪಸ್ಥಿತರಿದ್ದರು. ಬೆನಾರ್ಡ್ ಸ್ವಾಗತಿಸಿದರು. ಸ್ನೇಹಾ ಮಹಾಸಂಘದ ಅಧ್ಯಕ್ಷೆ ಲವಿನದಾಂತಿ ಕಾರ್ಯಕ್ರಮ ನಿರೂಪಿಸಿದರು.

Read More

UN NETWORKS ದೇರಳಕಟ್ಟೆ : ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಬೆಲೆ ಕಳೆದುಕೊಂಡಿದೆ. ಮನುಷ್ಯ ತೃಪ್ತಿ ಹಾಗೂ ಮಾನವೀಯ ಮೌಲ್ಯಗಳಿಗೆ ಮಹತ್ವ ಕೊಡದಿದ್ದರೆ ಸೌಹಾರ್ದಯುತ ಸಮಾಜವನ್ನು ನಾವು ಖಂಡಿತ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ, ಕರ್ನಾಟಕ ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು. ನಿಟ್ಟೆ ಎಜ್ಯುಕೇಶನ್ ಟ್ರಸ್ಟ್ ಹಾಗೂ ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ದೇರಳಕಟ್ಟೆಯ ನಿಟ್ಟೆ ವಿವಿ ಕ್ಯಾಂಪಸ್‍ನ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ಶನಿವಾರ ನಡೆದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಅತ್ಯುತ್ತಮ ಶಾಲಾ ಪ್ರಶಸ್ತಿ-2018 ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಅವರು ಪ್ರಶಸ್ತಿ ವಿತರಿಸಿ ಮಾತನಾಡಿದರು.ನ್ಯಾಯಮೂರ್ತಿಯಾಗಿದ್ದ ಅವಧಿಯಲ್ಲಿ ತಿಳಿದುಕೊಂಡದ್ದಕ್ಕಿಂತ ಹೆಚ್ಚು ಕರ್ನಾಟಕ ಲೋಕಾಯುಕ್ತನಾದ ಬಳಿಕ ಈ ಸಮಾಜದಲ್ಲಿ ಬಹಳಷ್ಟು ಅನ್ಯಾಯ ನಡೆಯುವುದು ಗಮನಕ್ಕೆ ಬಂತು. ಶ್ರೀಮಂತಿಕೆ ಹಾಗೂ ಅಧಿಕಾರ ಪೂಜಿಸುವ ಸಮಾಜದಲ್ಲಿದ್ದೇವೆ ಎಂಬುದನ್ನು ಅರಿತುಕೊಂಡೆನು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಮೌಲ್ಯಗಳನ್ನು ಕಾಪಾಡಬೇಕು. ಯುವ ವಿದ್ಯಾರ್ಥಿಗಳೇ ಉತ್ತಮ ಸಮಾಜ ಈ ದೇಶವನ್ನು ಕಟ್ಟಿ ಬೆಳೆಸುವ…

Read More

UN NETWORKS ಮುಡಿಪು : ಮುಡಿಪಿನ ಕುರ್ನಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಅಂತರ್ ಕಾಲೇಜು ಮಟ್ಟದ ಒಂದು ದಿನದ ಕಾರ್ಯಗಾರ ಮುಡಿಪು ಶ್ರೀ ಗೋಪಾಲಕೃಷ್ಣ ಸಂಭಾಗಣದಲ್ಲಿ ನಡೆಯಿತು. ಮಂಗಳೂರಿನ ಸಹ್ಯಾದ್ರಿ ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾಲೇಜಿನ ವಿದ್ಯಾರ್ಥಿ ಸಮಾಲೋಚಕ ಅಂಕಿತ್ ಎಸ್. ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಗಿರಿಧರ್ ರಾವ್ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವಾಗಲೇ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ರೆಡ್ ಕ್ರಾಸ್ ಸಂಚಾಲಕ ಮಾಳವಿಕ ಕ್ಯಾತರಿನ್ ಸ್ವಾಗತಿಸಿದರು. ಡಾ. ರಿತೇಶ್ ಡಿ ಕುನ್ಹಾ ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.ಅಂತರ್ ಕಾಲೇಜು ಮಟ್ಟದ ರಸ ಪ್ರಶ್ನೆ ಹಾಗೂ ಬೀದಿ ನಾಟಕ ಸ್ಪರ್ಧೆಗಳು ನಡೆಯಿತು. ರಂಗಭೂಮಿ ಹಾಗೂ ಚಲನ ಚಿತ್ರನಟ ದೀಕ್ಷಿತ್ ಕೆ, ಉಪನ್ಯಾಸಕ ಪ್ರದೀಪ್ ಬಂಗೇರ ಹಾಗೂ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಶೋಭಾಮಣಿ ಬೀದಿ ನಾಟಕ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು.ವಿದ್ಯಾರ್ಥಿಗಳಾದ ಪ್ರಮೀಳಾ ಡಿಸೋಜ ಪರಿಚಯಿಸಿದರು.…

Read More

UN NETWORKS ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಮಂಗಳ ಸಭಾಂಗಣದಲ್ಲಿ ನಡೆದ ಯಕ್ಷಮಂಗಳ ಪ್ರಶಸ್ತಿ ಸಮಾರಂಭದಲ್ಲಿ ಯಕ್ಷಮಂಗಳ ವಿದ್ಯಾರ್ಥಿ ತಂಡದಿಂದ `ಮೋಹಿನೀ ಏಕಾದಶಿ’ ಯಕ್ಷಗಾನ ಪ್ರದರ್ಶನ ನಡೆಯಿತು. ದೀವಿತ್ ಎಸ್.ಕೆ. ಪೆರಾಡಿ ಅವರು ನಿರ್ದೇಶನ ನೀಡಿದ್ದು, ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀನಿವಾಸ ಬಳ್ಳಮಂಜ, ಚೆಂಡೆಯಲ್ಲಿ ಸವಿನಯ ನೆಲ್ಲಿತೀರ್ಥ, ಮದ್ದಳೆಯಲ್ಲಿ ಮಯೂರ ನಾಯ್ಗ ಮಾಡೂರು, ಚಕ್ರತಾಳದಲ್ಲಿ ಯಜ್ಞೇಶ್ ರೈ ಕಟೀಲು ಸಹಕರಿಸಿದ್ದರು. ಮುಮ್ಮೇಳದಲ್ಲಿ ಯಕ್ಷಮಂಗಳ ವಿದ್ಯಾರ್ಥಿಗಳಾದ ವಿನುತ ಎಂ.ಎಸ್(ಕನ್ನಡ), ಅಭಿಷೇಕ್(ಭೌತಶಾಸ್ತ್ರ), ನಿಖಿತಾ ಕಿಣಿ(ಗಣಕ ವಿಜ್ಞಾನ), ಬೇಬಿ ಎಸ್.(ಇತಿಹಾಸ), ಗ್ರೀಷ್ಮ ಆರ್.(ಭೌತಶಾಸ್ತ್ರ), ಜ್ಯೋತಿ(ಸಮಾಜ ಕಾರ್ಯ), ಸಂಜನಾ(ಸಮಾಜ ಕಾರ್ಯ), ಶ್ರೀ ಹರಿ(ಪ್ರಾಣಿಶಾಸ್ತ್ರ), ಸುರೇಖಾ(ಸಮಾಜ ಕಾರ್ಯ), ಸಮೀಕ್ಷಾ ಶೆಟ್ಟಿ(ಗಣಕ ವಿಜ್ಞಾನ), ಶ್ರೇಯಾ ಶೆಟ್ಟಿ(ಗಣಕ ವಿಜ್ಞಾನ), ಸಹನಾ ಶೆಟ್ಟಿ(ಪ್ರಾಣಿಶಾಸ್ತ್ರ), ಭಾರತಿ ಕೆ.(ಭೌತಶಾಸ್ತ್ರ), ಸೌಭಾಗ್ಯ ಬಿ. ಶೆಟ್ಟಿ(ಭೌತಶಾಸ್ತ್ರ), ಅರ್ಚನ(ರಸಾಯನಶಾಸ್ತ್ರ), ಸಂಪತ್ ಎಂ. ಆರ್(ಫುಡ್ ಸೈನ್ಸ್), ಅಂಜನ್ ಎಂ(ಫುಡ್ ಸೈನ್ಸ್), ಸೌಂದರ್ಯ ಡಿ.(ಕನ್ನಡ), ಕಾವ್ಯ ಎ. ಆರ್.(ಕನ್ನಡ), ದಿವ್ಯ ಪಿ.(ಅರ್ಥಶಾಸ್ತ್ರ),…

Read More

UN NETWORKS ಕೊಣಾಜೆ: ಇಂದಿನ ಯುವಜನತೆ ಸಾಮಾಜಿಕ ಜಾಲತಾಣ ಹಾಗೂ ಇನ್ನಿತರ ಮಾಧ್ಯಮಗಳನ್ನು ಪರಸ್ಪರರಲ್ಲಿ ದ್ವೇಷ ಹರಡುವ ಕಾರ್ಯಕ್ಕೆ ಉಪಯೋಗಿಸುತ್ತಿರುವುದು ಕಳವಳಕಾರಿಯಾಗಿದೆ. ಈ ನಿಟ್ಟಿನಲ್ಲಿ ನಾವು ಸಮಸ್ತದ ನೇತಾರರನ್ನು ಮಾದರಿಯಾಗಿಸಬೇಕಾಗಿದೆ ಎಂದು ಖ್ಯಾತ ವಾಗ್ಮಿ ಬಹು ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಪಯ್ಯನ್ನೂರು ಹೇಳಿದರು. ಅವರು ನಡುಪದವಿನ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಹಾಗೂ ಎಸ್‍ಕೆಎಸ್‍ಎಸ್‍ಎಫ್ ನಡುಪದವು ಪಟ್ಟೋರಿ ಶಾಖೆ ಇದರ ವತಿಯಿಂದ ಆಯೋಜಿಸಲಾಗಿದ್ದ ಸಾಧಕರಿಗೆ ಸನ್ಮಾನ ಹಾಗೂ ಸಮಸ್ತ ಅಗಲಿದ ನೇತಾರರ ಅನುಸ್ಮರಣಾ ಸಂಗಮದಲ್ಲಿ ಭಾಗವಹಿಸಿ ಮಾತನಾಡಿದರು.ಬಹು ಅಸಯ್ಯಿದ್ ಅಮೀರ್ ತಂಙಳ್ ಅಲ್ ಬುಖಾರಿ ಕಿನ್ಯರವರ ದುವಾದೊಂದಿಗೆ ಆರಂಭಗೊಂಡ ಸಭೆಯಲ್ಲಿ ಶೈಖುನಾ ಅಲ್ ಹಾಜ್ ಎಂಪಿ.ಮಹಮ್ಮದ್ ಮುಸ್ಲಿಯಾರ್ ಪಟ್ಟೋರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಸ್ತ ಕರ್ನಾಟಕ ಜಂಯಿಯ್ಯತುಲ್ ಉಲಮಾ ಇದರ ಪ್ರಧಾನ ಕಾರ್ಯದರ್ಶಿ ಬಿ.ಕೆ.ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಅವರು ಸಮಾರಂಭವನ್ನು ಉದ್ಘಾಟಿಸಿದರು. ಇಬ್ರಾಹಿಂ ಭಾಖವಿ ಕೆ.ಸಿ.ರೋಡ್, ರಿಯಾಝ್ ರಹ್ಮಾನಿ ಕಿನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಸಚಿವ ಯು.ಟಿ.ಖಾದರ್,…

Read More