UN NETWORKS ತಲಪಾಡಿ:ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಹಳೆ ಆರ್.ಟಿ.ಒ ಬಳಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಒಂದರಿಂದ ಗ್ಯಾಸ್ ಸೋರಿಕೆ ಕಂಡು ಬಂದಿದೆ. ಮಂಗಳವಾರ ಸಂಜೆ 6 ಘಂಟೆಯ ಸುಮಾರಿಗೆ ಘಟನೆ ನಡೆದಿದೆ.ಕೂಡಲೇ ಸ್ಥಳೀಯರು ಮಂಜೇಶ್ವರ ಪೊಲೀಸರಿಗೆ ಹಾಗೂ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸುರಕ್ಷಾ ಕಾರ್ಯ ನಡೆಸಿದ್ದಾರೆ.ಗ್ಯಾಸ್ ಸೋರಿಕೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ಥವ್ಯಸ್ಥಗೊಂಡಿತ್ತು.
Author: UllalaVani
UN NETWORKS ಕೊಣಾಜೆ: ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್, ಎಸ್ಕೆಎಸ್ಸೆಸ್ಸೆಫ್ ನಡುಪದವು ಪಟ್ಟೋರಿ ಹಾಗೂ ಯು.ಟಿ.ಫರೀದ್ ಫೌಂಡೇಶನ್ ಮಂಗಳೂರು ಇದರ ವತಿಯಿಂದ ಕಣಚೂರು ಮೆಡಿಕಲ್ ಕಾಲೇಜು ಹಾಗೂ ಪ್ರಸಾದ್ ನೇತ್ರಾಲಯ ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡುಪದವಿನ ಪಿ.ಎ.ಕಾಲೇಜು ಕ್ಯಾಂಪಸ್ನಲ್ಲಿ ನಡೆಯಿತು. ಇಸ್ಲಾಮಿಕ್ ಸೆಂಟರ್ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ನಡುಪದವು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಬಳಿಕ ಮಾತನಾಡಿದ ಅವರು ಸಮಾಜದ ಅಭಿವೃದ್ಧಿಗಾಗಿ ಸಂಘಟನೆಗಳು ಉತ್ತಮ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾಗಿದ್ದು ಈ ನಿಟ್ಟಿನಲ್ಲಿ ನಡುಪದವಿನಲ್ಲಿ ಪರಿಸರದ ಎಲ್ಲರಿಗೂ ಅನುಕೂಲವಾಗುವಂತೆ ಉಚಿತ ಆರೊಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಕಾರ್ಯಕ್ರಮವನ್ನು ಅಲ್ ಹಾಜ್ ಅಬ್ದುಲ್ ಅಝೀಝ್ ಫೈಝಿ ಪಟ್ಟೋರಿಯವರು ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು.ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಝರ್ ಷಾ ಪಟ್ಟೋರಿ, ಹಾಜಿ. ಎಚ್.ಅಬ್ದುಲ್ ಖಾದರ್, ಎಸ್ಸಿಲರ್ ವಿಷನ್ ಐ ಫೌಂಡೇಶನ್ ಐ ಪೌಂಡೇಶನ್ ಇದರ ಹಿರಿಯ ವ್ಯವಸ್ಥಾಪಕರಾದ ಧರ್ಮ ಪ್ರಸಾದ್ ರೈ, ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾ.ರೋಹಿತ್ , ಪಂಚಾಯಿತಿ ಸದಸ್ಯರಾದ ಎನ್.ಎಸ್.…
UN NETWORKS ದೇರಳಕಟ್ಟೆ: ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿವಿದ ಅಧೀನ ಸಂಸ್ಥೆ ನಿಟ್ಟೆ ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸೋಮವಾರ ನಡೆಯಿತು. “ಥಿಂಕ್ ಈಖ್ವಲ್, ಬಿಲ್ಟ್ ಸ್ಮಾರ್ಟ್, ಇನ್ನೊವೇಟ್ ಫಾರ್ ಚೇಂಜ್” ಎಂಬ ವಿಷಯದ ಮೇಲೆ ಕಾರ್ಯಕ್ರಮ ನಡೆಯಿತು.ನಿಟ್ಟೆ ವಿವಿಯ ಸಂಶೋಧನೆ ವಿಭಾಗ ನಿರ್ದೇಶಕಿ ಪ್ರೊಫೆಸರ್ ಡಾ. ಇಂದ್ರಾಣಿ ಕರುಣಾಸಾಗರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಭಾರತದಲ್ಲಿ ಮತ್ತು ವಿದೇಶದಲ್ಲಿ ಲಿಂಗ ಸಮಾನತೆಯ ಕುರಿತು ವಿವರಿಸಿ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಮಹಿಳೆಯ ಸಮಾನತೆಗಾಗಿ ಹೇಗೆ ಹೋರಾಡಬೇಕು ಎಂದು ತಿಳಿಸಿದರು.ಸ್ವೀಡನ್ ನ ಗೊಥೆನ್ ಬರ್ಗ್ ವಿವಿಯ ಸಂಶೋಧನಾ ವಿದ್ಯಾರ್ಥಿ ಜೋಸ್ಟಿನ್ ಹಾಗೂ ಇಂಗ್ಲೆಂಡ್ ನ ಪ್ಲೈ ಮೌತ್ ವಿವಿಯ ಡಾ. ಎಲೆನಾ ಉಪಸ್ಥಿತರಿದ್ದರು. ಮುಖ್ಯ ಗ್ರಂಥಪಾಲಕಿ ಜಾನವಿ ಸ್ವಾಗತಿಸಿದರು. ಅಕೌಂಟೆಂಟ್ ಶ್ವೇತಾ ನಿರೂಪಿಸಿದರು. ಕಂಪ್ಯೂಟರ್ ಸಹಾಯಕ ಕಂಪ್ಯೂಟರ್ ಸಹಾಯಕಿ ಅಶ್ವಿನಿ ವಂದಿಸಿದರು. ಬೋಧನೆ ಮತ್ತು ಬೋಧನಾ ಸಿಬ್ಬಂದಿಗಳು ಮಹಿಳಾ ಘಟಕದ ವಿವಿಧ…
UN NETWORKS ಉಳ್ಳಾಲ: ತುಳುಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಲ್ಲಿ ಸೇರಿಸುವ ಪ್ರಯತ್ನದಲ್ಲಿ ಭಾಷಾವಿಷಯಕವಾದ ಶಾಸ್ತ್ರಗ್ರಂಥಗಳು ಹಾಗೂ ಪದಕೋಶಗಳ ಅಗತ್ಯವಿದೆ. ಆ ನಿಟ್ಟಿನಲ್ಲಿ ನಿಟ್ಟೆ ವಿವಿ ತುಳುಭಾಷಾ ಪೀಠ ಡಾ. ಪದ್ಮನಾಭ ಕೇಕುಣ್ಣಾಯ ಹಾಗೂ ಡಾ. ಸಾಯಿಗೀತಾ ಅವರ ಐದು ವರ್ಷಗಳ ನಿರಂತರ ಪರಿಶ್ರಮದ ಫಲವಾಗಿ ಹೊರತಂದಿರುವ ತುಳುಜ್ಞಾತಿ ಪದಕೋಶ ಸಂಶೋದನಾಸಕ್ತರಿಗೆ ಹಾಗೂ ಅಧ್ಯಯನ ನಡೆಸುವವರಿಗೆ ಬಹಳ ಉಪಯುಕ್ತವಾಗಲಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಹೇಳಿದರು. ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿವಿಯ ಸೆಮಿನಾರ್ ಹಾಲ್ ನಲ್ಲಿ ಮಂಗಳವಾರ ನಡೆದ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು ತುಳುಜ್ಞಾತಿ ಪದಕಶೋಶ ರಚನೆಗೆ 2014ರಲ್ಲಿ ನಿಟ್ಟೆ ವಿವಿಯ ಕುಲಾಧಿಪತಿ ವಿನಯ್ ಹೆಗ್ಡೆ ಅವರು ಚಾಲನೆ ನೀಡುವ ಮೂಲಕ ಯೋಜನೆಯ ನಿಟ್ಟೆ ವಿವಿಯ ಪ್ರಾಯೋಜಿತ ಯೋಜನೆಯಾಗಿ ರೂಪುಗೊಂಡಿತು. ಗಣಕಯಂತ್ರಕ್ಕೆ ಭಾರತೀಯ ಲಿಪಿಗಳನ್ನು ಅಳವಡಿಸಿದ ಪ್ರೊ.ಕೆ.ಪಿ. ರಾವ್ ಅವರು ತಾವು ರೂಪಿಸಿದ “ಅಪಾರ’ಹೆಸರಿನ ಫಾಂಟ್ ತಂತ್ರಾಂಶವನ್ನುತುಳುಜ್ಞಾತಿಪದಕೋಶಕ್ಕೆ ಒದಗಿಸಿದ ಡಾ. ಪದ್ಮನಾಭ ಕೇಕುಣ್ಣಾಯ ಅಕ್ಷರಶಃ ರೂಪುರೇಶೆಯನ್ನು…
UN NETWORKS ಹರೇಕಳ : ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಮಂಗಳೂರಿನ ಕಾರ್ಪೊರೇಷನ್ ಬ್ಯಾಂಕ್ನ ಆರ್ಥಿಕ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಉಚಿತ ವೈದಕೀಯ ತಪಾಸಣಾ ಶಿಬಿರವು ನಡೆಯಿತು. ಕಾರ್ಪೊರೇಷನ್ ಬ್ಯಾಂಕ್ನ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಈ ಶಿಬಿರದ ಉದ್ಘಾಟನೆಯನ್ನು ಬ್ಯಾಂಕ್ನ ಉಪಮಹಾಪ್ರಬಂಧಕರಾದ ಎ.ಎನ್. ರವಿಶಂಕರ್ ನೆರವೇರಿಸಿ, ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಬೇಕು. ರೋಗ ಬಂದ ಮೇಲೆ ಡಾಕ್ಟರ್ ಹತ್ತಿರ ಹೋಗುವ ಬದಲು, ರೋಗಗಳು ಬಾರದೆ ಹಾಗೆ ಆರೋಗ್ಯವನ್ನು ನೋಡಿಕೊಳ್ಳುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಜೀವನದಲ್ಲಿ ಶ್ರದ್ಧೆಯನ್ನು ಅಳವಡಿಸಿಕೊಳ್ಳಬೇಕು. ಎಲ್ಲಾ ವಿಚಾರದಲ್ಲೂ ಶ್ರದ್ಧೆ ಇದ್ದರೆ ಉತ್ತಮ ಆರೋಗ್ಯ, ಉತ್ತಮ ಜ್ಞಾನ, ಉತ್ತಮ ಯಶಸ್ಸು ನಿಮ್ಮದಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಕಾರ್ಪೊರೇಷನ್ ಬ್ಯಾಂಕ್ನ ಸಹಾಯಕ ಮಹಾಪ್ರಬಂಧಕರಾದ ರವಿಕುಮಾರ್ ಅವರು ಉಪಸ್ಥಿತರಿದ್ದರು. ಪ್ರಸ್ತಾವನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕೆ.ರವೀಂದ್ರ ರೈ ಅವರು ನೆರವೇರಿಸಿ ಸರ್ವರನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಕೆ.ಎಂ.ಸಿ ಅತ್ತಾವರದ ಮಕ್ಕಳ ತಜ್ಞೆ ಡಾ. ಮೊನಿಕ ಮತ್ತು ಅವರ ತಂಡ ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳನ್ನು…
UN NETWORKS ಉಳ್ಳಾಲ: ಸೋಮೇಶ್ವರ ಗ್ರಾಮ ದಾರಂದಬಾಗಿಲು ಪಿಲಾರ್ ಯುವಕ ಮಂಡಲದ 44ನೇ ವಾರ್ಷಿಕೋತ್ಸವ, ಪಿಲಾರ್ ಶ್ರೀಪಂಜದರಾಯ ದೈವದ ನೇಮೋತ್ಸವದ ಸಂದರ್ಭದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಶ್ರಾಂತ ಯೋಧ, ನಿವೃತ್ತ ಡಿವೈಎಸ್ಪಿ ರಾಜೇಂದ್ರಕುಮಾರ್ ಅವರು, ಪಂಜದರಾಯ ದೈವದ ನೇಮೋತ್ಸವದ ಸಂದರ್ಭದಲ್ಲಿ ಪಿಲಾರ್ ಯುವಕ ಮಂಡಲದವರು ಈ ಬಾರಿ ಯೋಧರನ್ನು ಗೌರವಿಸುವ ಕಾರ್ಯಕ್ರಮ ನಡೆಸಿದ್ದಾರೆ. ಇದು ನಿಜವಾಗಿ ಅರ್ಥಪೂರ್ಣವಾದ ಕಾರ್ಯಕ್ರಮವಾಗಿದೆ ಎಂದರು. ಈ ಸಂದರ್ಭ ಸಮಾಜಸೇವಕ ಬಾಬು ಪಿಲಾರ್ , ಪೊಲೀಸ್ ಇಲಾಖೆಯಲ್ಲಿ ದಕ್ಷಸೇವೆ ಸಲ್ಲಿಸಿ ಮುಖ್ಯಮಂತ್ರಿ ಪದಕ ಪಡೆದ ಚಂದ್ರಶೇಖರ್ ಎನ್.ಎ., ವಿಶ್ರಾಂತ ಯೋಧರಾದ ಪ್ರವೀಣ್ ಶೆಟ್ಟಿ ಮೇಗಿನ ಮನೆ, ಎಂ. ವಿಶ್ವನಾಥ ಗಟ್ಟಿ, ದೇವಸ್ಯ ಪಿ.ಪಿ. , ಶೀನಪ್ಪಗೌಡ, ಪುರುಷೋತ್ತಮ ಗೌಡ, ಜೋಸೆಫ್ ಕೆ.ಯವರ ಪರವಾಗಿ ಅವರ ಧರ್ಮಪತ್ನಿ ವೀಣಾ ಜೋಸೆಫ್ , ಸುದೇಶ್ ಕುಮಾರ್, ರಾಜೇಶ್ ಲಕ್ಷ್ಮೀಗುಡ್ಡೆ ಅವರನ್ನು ಸನ್ಮಾನಿಸಲಾಯಿತು.ಬಳಿಕ ಪರಿಸರದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ…
UN NETWORKS ಅಸೈಗೋಳಿ: ಅಯ್ಯಪ್ಪ ಸ್ವಾಮಿ ಮಂದಿರ ಇರುವ ಊರಿನಲ್ಲಿ ಒಂದು ರೀತಿಯ ನೆಮ್ಮದಿ, ಶಾಂತಿಯ ಜೊತೆ ಪ್ರದೇಶದಲ್ಲಿ ಶಕ್ತಿಯೂ ತುಂಬಿರುತ್ತದೆ. ಭಜನೆಯಿಂದಾಗಿ ಸಂಸ್ಕೃತಿಯೂ ಮೇಳೈಸುತ್ತದೆ ಎಂದು ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷ ಮಾಧವ ಮಾವೆ ಅಭಿಪ್ರಾಯಪಟ್ಟರು.ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಮಾತನಾಡಿ, ಗ್ರಾಮದಲ್ಲಿ ಹೆಚ್ಚು ಜನಸಂಖ್ಯೆ ಇರುವುದು ಅಸೈಗೋಳಿಯಲ್ಲಾಗಿದೆ. ಇಲ್ಲಿನ ಜನರ ನೆಮ್ಮದಿಗಾಗಿ ಅತ್ಯಗತ್ಯವಾ ಮಂದಿರ ಎಲ್ಲರ ಸಹಕಾರದಿಂದ ಎದ್ದು ನಿಂತಿದೆ. ಆಮಂತ್ರಣ ಪತ್ರಿಕೆ ದೊಡ್ಡ ಶಕ್ತಿಯಾಗಿದ್ದು ಪ್ರತಿಯೊಬ್ಬರಿಗೂ ತಲುಪಿದಾಗ ಬ್ರಹ್ಮಕಲಶ ಅದ್ಧೂರಿಯಾಗಿ ನಡೆಸಲು ಸಾಧ್ಯ ಎಂದರು. ಕೊಣಾಜೆಯ ಮಾಜಿ ಪಟೇಲ್ ರಘುರಾಮ ಕಾಜವ ಉದ್ಘಾಟಿಸಿದರು. ಧಾರ್ಮಿಕ ಮುಖಂಡ ಸೀತಾರಾಮ ಶೆಟ್ಟಿ ದಡಸ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಚಂದ್ರಶೇಖರ ಮಂಟಮೆ, ಉದ್ಯಮಿ ದೇವಣ್ಣ ಶೆಟ್ಟಿ, ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್,…
UN NETWORKS ಉಳ್ಳಾಲ : ವಿದಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಒಂದೇ ಸ್ಥಾನ ಪಡೆದಿದೆ ಎನ್ನುವ ಕಾರಣಕ್ಕೆ ಧೃತಿಗೆಡಬೇಡಿ, ಈ ಚುನಾವಣೆಯಲ್ಲಿ ಹೇಡಿಗಳದೆ ಧೈರ್ಯ, ಆತ್ಮವಿಶ್ವಾಸದಿಂದ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿ ಅತ್ಯಧಿಕ ಮತಗಳ ಮುನ್ನುಡೆ ದೊರಕಿಸಿ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಈಶ್ವರ್ ಉಳ್ಳಾಲ್ ಕರೆ ನೀಡಿದರು. ಉಳ್ಳಾಲ ಬ್ಲಾಕ್ ಅಲ್ಪಸಂಖ್ಯಾತ ವಿಭಾಗದ ಆಶ್ರಯದಲ್ಲಿ ಸೋಮವಾರ ಕಲ್ಲಾಪುವಿನಲ್ಲಿ ನಡೆದ ಕಾರ್ಯಕರ್ತರ ಸಭೆ ಮತ್ತು ಹಿರಿಯ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಇದೀಗ ಉಳ್ಳಾಲವನ್ನು ತಾಲೂಕು ಮಾಡುವ ಮೂಲಕ ಕ್ಷೇತ್ರ ಸದೃಢವಾಗಿ ಬೆಳೆಯುವಂತಾಗಿದೆ. ಲೋಕಸಭಾ ಚುನಾವಣೆ ಘೋಷಣೆ ಆಗಿರುವುದರಿಂದ ಕಾರ್ಯಕರ್ತರು ಜಾಗೃತರಾಗಿರಬೇಕು. ಮತ ಕೇಳುವುದು ಹೇಗೆ ಎನ್ನುವ ಬಗ್ಗೆ ಯೋಜನೆ ರೂಪಿಸಬೇಕು ಎಂದು ಹೇಳಿದರು.ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗ ಅಧ್ಯಕ್ಷ ಉಸ್ಮಾನ್ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ತಾಲೂಕು ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ಮೋನು, ಸದಸ್ಯ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್…
UN NETWORKS ಕುರ್ನಾಡು : ಹೊರೆಕಾಣಿಕೆ ಮೆರವಣಿಗೆ ಹಿಂದುತ್ವದ ಶಕ್ತಿಯಾಗಿ, ಇನ್ನೊಂದು ಧರ್ಮಕ್ಕೂ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಅತ್ಯಂತ ಅದ್ದೂರಿಯಾಗಿ ನಡೆದು ಇತಿಹಾಸ ಸೃಷ್ಟಿಯಾಗುವಂತೆ ಭಕ್ತರು ನೋಡಿಕೊಳ್ಳಬೇಕಾಗಿದ್ದು, ಅಂದಿನ ದಿನ ಯಾವುದೇ ಕೆಲಸವಿದ್ದರೂ ರಜೆ ತೆಗೆದುಕೊಳ್ಳಬೇಕಾಗಿದೆ ಎಂದು ಹೊರೆಕಾಣಿಕೆ ಸಮಿತಿ ಸಂಚಾಲಕ ಸಂತೋಷ್ ರೈ ಬೋಳಿಯಾರ್ ಹೇಳಿದರು. ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯಲಿರುವ ಹೊರೆಕಾಣಿಕೆ ಮೆರವಣಿಗೆಯ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.ಬ್ರಹ್ಮಕಲಶದಲ್ಲಿ 30 ಸಾವಿರಕ್ಕೂ ಅಧಿಕ ಭಕ್ತರು ಅನ್ನದಾನ ಸ್ವೀಕರಿಸಲಿದ್ದಾರೆ. ಅನ್ನದ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಅಕ್ಕಿ ನೀಡಲು ಬಯಸುವವರು ಒಂದೇ ರೀತಿಯ ಅಕ್ಕಿಗೆ ಆದ್ಯತೆ ನೀಡಬೇಕು. ಬಾಳೆಎಲೆ ಕೊರತೆ ಇರುವುದರಿಂದ ತೋಟ ಇರುವವರು ಹೆಚ್ಚಿನ ಸಂಖ್ಯೆಯಲ್ಲಿ ಎಲೆ ನೀಡಲು ಮುಂದಾಗಬೇಕು. ಜಾತಿ, ಭೇದಕ್ಕೆ ಅವಕಾಶ ನೀಡದೆ ಪ್ರತಿಯೊಬ್ಬರು ಒಂದೇ ತಾಯಿಯ ಮಕ್ಕಳಂತೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿದೆ ಎಂದು ತಿಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ಜಯರಾಮ ಸಾಂತ ಬೋಳ್ಯಾರುಗುತ್ತು ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಸೇರಿದ ಭಕ್ತರನ್ನು ಕಂಡಾಗ ಯಶಸ್ಸು ಖಚಿತ.…
UN NETWORKS ತೊಕ್ಕೊಟ್ಟು: ಸರಕಾರ ಜಾರಿಗೊಳಿಸಿರುವ ಸಾಮಾಜಿಕ ಸುರಕ್ಷಾ ಸಂಹಿತಿ ಮಸೂದೆ ಜಾರಿಗೊಂಡರೆ ಕಟ್ಟಡ ಮತ್ತು ಇತರೆ ಕಾರ್ಮಿಕರು ಹಲವು ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ. ಈ ಕೂಡಲೇ ಮಸೂದೆಯನ್ನು ಸರಕಾರ ಹಿಂಪಡೆಯಬೇಕು ಎಂದು ಸಿಐಟಿಯು ಉಳ್ಳಾಲ ವಲಯ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್ ಹೇಳಿದರು. ಸಾಮಾಜಿಕ ಸುರಕ್ಷಾ ಮಸೂದೆ ಕರಡು ಹಿಂಪಡೆಯುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ತೊಕ್ಕೊಟ್ಟುವಿನಲ್ಲಿ ಇತ್ತೀಚೆಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಉಳ್ಳಾಲ ವಲಯ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ 2006ರಲ್ಲಿ ರಚನೆಯಾದ ಕಲ್ಯಾಣ ಮಂಡಳಿಯಲ್ಲಿ ಸುಮಾರು 3 ಲಕ್ಷಕ್ಕಿಂತ ಅಧಿಕ ಕಾರ್ಮಿಕರು ಫಲಾನುಭವಿಗಳಾಗಿ ಸೇರ್ಪಡೆಗೊಂಡಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ 1996ರ ಅಡಿಯಲ್ಲಿ ಸಂಗ್ರಹವಾಗಿರುವ 7500 ಕೋಟಿ ಹಣದಲ್ಲಿ ಪಿಂಚಣಿ, ಮದುವೆ, ಶೈಕ್ಷಣಿಕ, ವೈದ್ಯಕೀಯ ಹಾಗೂ ಹೆರಿಗೆ ಸೇರಿ ಸುಮಾರು 10 ಸೌಲಭ್ಯಗಳನ್ನು ಪಡೆಯುವ ಮೂಲಕ ಕುಟುಂಬದ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸರಕಾರ ಸಂಘಟಿತ ಹಾಗೂ ಅಸಮಘಟಿತ ಕಾರ್ಮಿಕರನ್ನು…

