Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಮಹಿಳೆ ಕುಟುಂಬದ ಆರೋಗ್ಯದ ಕಡೆ ಗಮನ ನೀಡುವುದರ ಜೊತೆಗೆ ತನ್ನ ಆರೋಗ್ಯದ ಕಡೆಗೂ ಹೆಚ್ಚು ಗಮನ ಹರಿಸಬೇಕು, ಮಹಿಳೆ ಆರೋಗ್ಯವಾಗಿದ್ದರೆ ಕುಟುಂಬವೂ ಆರೋಗ್ಯವಾಗಿದ್ದಂತೆ ಎಂದು ಯೆನಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿಯ ಕೌನ್ಸಿಲರ್ ಮತ್ತು ವಿದ್ಯಾರ್ಥಿಗಳ ಕ್ಷೇಮಪಾಲನಾ ಅಧಿಕಾರಿ ಸುನಿತಾ ಪ್ರಭು ಹೇಳಿದರು. ಜೈ ಹನುಮಾನ್ ಕ್ರೀಡಾ ಮಂಡಳಿ ಬಟ್ಟೆದಡಿ ಕುತ್ತಾರ್ ಇದರ ಮಹಿಳಾ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕುತ್ತಾರಿನಲ್ಲಿ ಭಾನುವಾರ ನಡೆದ “ಆರೋಗ್ಯ ಮತ್ತು ಕೌಟುಂಬಿಕ ಸಲಹಾ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕುಟುಂಬ ಜೀವನ, ಪ್ರೀತಿ, ಪೋಷಕರ ಪಾತ್ರ, ಮಹಿಳೆಯರ ಆರೋಗ್ಯ ಹಾಗೂ ಮಹಿಳೆಯರ ಜೀವನ ಶೈಲಿಯ ಸಮತೋಲನ ಹಾಗೂ ಉತ್ತಮ ಆರೋಗ್ಯದ ಗುಟ್ಟು ಯಶಸ್ವೀ ಜೀವನವಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಸಮಿತಿಯ ಅಧ್ಯಕ್ಷೆ ಪ್ರಮೀಳಾ ಗಾಣದಮನೆ ವಹಿಸಿದ್ದರು. ಭಾಗೀರಥಿ ಪ್ರಾಸ್ತವಿಕವಾಗಿ ಮಾತನಾಡಿದರು. ಕುಮಾರಿ ಲಿಮಿತ ಸ್ವಾಗತಿಸಿದರು. ತೇಜಶ್ರಿ ಕಂಪ ವಂದಿಸಿದರು.

Read More

UN NETWORKS ಉಳ್ಳಾಲ:  ಕೈರಂಗಳದ ಅಮೃತಧಾರೆ ಗೋಶಾಲೆಯಿಂದ ತಲವಾರು ತೋರಿಸಿ  ದನ ಕಳವು ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ  ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಆದೇಶದಂತೆ ರೌಡಿ ನಿಗ್ರಹದ ದಳದ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಮಂಜೇಶ್ವರ ಪೈವಳಿಕೆಯ  ಅಬ್ದುಲ್ ಸಲಾಂ  ಯಾನೆ ತುಡ್ವ ಸಲಾಂ  ಬಂಧಿತ.  ಈತ 2018ರ ಮಾರ್ಚ್ ತಿಂಗಳಲ್ಲಿ  ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ  ರಾಜಾರಾಂ ಭಟ್ ಅವರಿಗೆ ಸೇರಿದ ಪುಣ್ಯಕೋಟಿ ಗೋ ಆಶ್ರಮದಿಂದ  ದನ ಕಳವು ನಡೆಸಿದ್ದ. ಘಟನೆ ಸಂಬಂಧ  ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆಶ್ರಮದಲ್ಲಿ  ಅಮರಣಾಂತ ಉಪವಾಸ ಸತ್ಯಾಗ್ರಹ ನಡೆದಿತ್ತು. ಜಿಲ್ಲೆಯ ಘಟಾನುಘಟಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದರು. ಬಳಿಕ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವ ಮೂಲಕ  ಆಶ್ರಮದ ರೂವಾರಿ ಭಟ್ ಉಪವಾಸ ಕೈಬಿಡುವ ಮೂಲಕ ಪರಿಸ್ಥಿತಿ ಹತೋಟಿಗೆ ಬಂದಿತ್ತು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯ ಬಂಧಿಸುವ ಮೂಲಕ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿ ಸಲಾಂ ವಿರುದ್ಧ  ಉಳ್ಳಾಲದಲ್ಲಿ ಮೂರು,…

Read More

UN NETWORKS ತೊಕ್ಕೊಟ್ಟು : ತುಳುನಾಡ ರಕ್ಷಣಾ ವೇದಿಕೆಯ ದಶ ಸಂಭ್ರಮವನ್ನು ಅವಿಸ್ಮರಣೀಯಗೊಳಿಸಲು “ವಿಶ್ವ ತೌಳವ ಉಚ್ಚಯ” (ವಿಶ್ವ ತುಳುವರ ಸಮ್ಮಿಲನ) ಕಾರ್ಯಕ್ರಮ ಮಾ.29,30,31 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಆ ಪ್ರಯುಕ್ತ ಮಾ.14 ರಂದು ಕಾಪಿಕಾಡು ಗಟ್ಟಿ ಸಮಾಜ ಭವನದಲ್ಲಿ ಸಾರ್ವಜನಿಕ ಸಮಾಲೋಚನ ಸಭೆ ನಡೆಯಲಿದೆ ಎಂದು ತುಳುನಾಡು ರಕ್ಷಣಾ ವೇದಿಕೆಯ ಮಂಗಳೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಎಂ ಸಿರಾಜ್ ಅಡ್ಕರೆ ಹೇಳಿದರು. ತೊಕ್ಕೊಟ್ಟುವಿನಲ್ಲಿ ಶನಿವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತು.ರ.ವೇ ಆರಂಭಗೊಂಡು 10 ವರ್ಷಗಳಾದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದೆ. ಬಹುಭಾಷಾ ಕವಿಗೋಷ್ಟಿ, ತುಳುನಾಡು ನಡೆದು ಬಂದುದರ ಬಗೆಗೆ ವಿಚಾರ ಗೋಷ್ಠಿಗಳು, ಜಾನಪದ ಸಾಂಸ್ಕೃತಿಕ ಪ್ರದರ್ಶನ, ಗುಡಿಕೈಗಾರಿಕೆ, ಕರಕುಶಲ, ಪುಸ್ತಕ ಪ್ರದರ್ಶನಗಳು, ತುಳುನಾಡ ದಿಬ್ಬಣ, ತುಳುನಾಡಿನ ಆಹಾರೋತ್ಸವ, ತುಳುನಾಡ ರಾಜದರ್ಬಾರ್, ಜನಮೈತ್ರಿಸಂಗಮ, ದೇಹದಾಡ್ಯ ಪ್ರದರ್ಶನ, ತುಳುಹಾಸ್ಯ ಕಾರ್ಯಕ್ರಮಗಳು, ಯಕ್ಷಗಾನ, ನಾಟಕ, ನೃತ್ಯ, ಕೋಸ್ಟಲ್‍ವುಡ್ ಸಿನೇಮಾ ಪರ್ಬ(ರಂಗಭೂಮಿಯಿಂದ ಬೆಳ್ಳಿ ಪರದೆಯವರೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಚಿತ್ರ…

Read More

UN NETWORKS ಕೊಣಾಜೆ: ಹಿಂದಿನ ಕಾಲಕ್ಕೆ ಹೋಲಿಸಿದರೆ ಇಂದು ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುತ್ತಿದ್ದಾರೆ. ಶಿಕ್ಷಣ ಸೇರಿದಂತೆ ಹಲವಾರು ಅವಕಾಶಗಳನ್ನು ಮಹಿಳೆಯರು ಬಳಸಿಕೊಂಡು ಮುನ್ನಡೆದರೆ ಸ್ವಾವಲಂಬೀ ಸಮಾಜವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾದ ಪ್ರೊ.ಮರಿಯಾ ಸಿ.ಡಿ.ಕಾಸ್ಟ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಇಂದು ಸೇನಾಪಡೆ, ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರ ಸಾಧನೆಯನ್ನು ನಾವು ಕಾಣಬಹುದಾಗಿದೆ. ಸಮಾನತೆಯ ಚಿಂತೆನೆಯು ಪ್ರತಿಯೊಬ್ಬರಲ್ಲೂ ಬೆಳೆದರೆ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ. ಮಂಗಳೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರವು ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊ.ಕಿಶೋರಿ ನಾಯಕ್ ಅವರು, ಇಂದು ಜಗ್ತತು ಮುಂದುವರಿದಿದ್ದರೂ ಅಸಮಾನತೆಯು ಸಂಪೂರ್ಣ ಕಡಿಮೆಯಾಗಿಲ್ಲ. ಇಂದಿಗೂ…

Read More

UN NETWORKS ಕೊಣಾಜೆ : ಪ್ರತಿಪಕ್ಷದ ಕೆಲವರು ಮಂಗಳೂರು ಕ್ಷೇತ್ರಕ್ಕೆ ರಸ್ತೆ ಬಿಟ್ಟರೆ ಬೇರೆ ಅಭಿವೃದ್ಧಿ ಕೆಲಸ ಆಗಲಿಲ್ಲ ಎಂದು ಆರೋಪಿಸುತ್ತಿದ್ದರು. ತಾಲೂಕು ಮಟ್ಟಕ್ಕೆ ಸೀಮಿತವಾಗಿರುವ ಅಗ್ನಿಶಾಮಕ ಠಾಣೆ, ತಾಲೂಕು ಕ್ರೀಡಾಂಗಣದಂತಹ ಸೌಲಭ್ಯಗಳನ್ನು ಉಳ್ಳಾಲ ಹೋಬಳಿ ಆಗಿದ್ದರೂ ಲಭ್ಯವಾಗಿಲ್ಲ ಎಂದು ಟೀಕಿಸುತ್ತಾ ಒಂದು ಪಥದಲ್ಲಿ ನನಗೆ ಬಹಳಷ್ಟು ಯೋಜನೆ ತರಲು ಪ್ರೇರಣೆ ಆಗಿದ್ದಾರೆ. ಟೀಕಿಸುವವರಿಗೆ ಅಭಿವೃದ್ಧಿ ಮಾಡಿ ಉತ್ತರಿಸಿದ್ದೇನೆ. ಅವರಿಗೆ ನನ್ನ ಪರವಾಗಿ ಧನ್ಯವಾದಗಳು. ಹಾಗೆಯೇ ಉಳ್ಳಾಲ ತಾಲೂಕಿಗೆ 29 ಸರಕಾರಿ ಇಲಾಖೆಗಳು, ಆರ್ ಟಿ ಒ, ಅಗ್ನಿಶಾಮಕ ಠಾಣೆ, ತಾಲೂಕು ಕೋರ್ಟ್ ಮೊದಲಾದ ಎಲ್ಲ ಸೌಲಭ್ಯಗಳನ್ನು ನಮ್ಮ ಹಕ್ಕಾಗಿ ಬರಲಿದ್ದು ಅವೆಲ್ಲವನ್ನು ಇಂತಿಷ್ಟು ದೂರದಲ್ಲಿ ನಿರ್ಮಿಸುವ ಮೂಲಕ ಉಳ್ಳಾಲದ ಸಮಗ್ರ ಅಭಿವೃದ್ಧಿ ಕಣ್ತುಂಬಿಸಿಕೊಳ್ಳಲಿ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು. ಉಳ್ಳಾಲ ನೂತನ ತಾಲೂಕು ಆಗಿ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಅದಕ್ಕೆ ಶ್ರಮಿಸಿದ ಸಚಿವ ಯು.ಟಿ. ಖಾದರ್ ಅವರನ್ನು ಅಭಿನಂದಿಸುವ ಪ್ರಯುಕ್ತ ಸಾರ್ವಜನಿಕ ಅಭಿನಂದನೆ…

Read More

UN NETWORKS ನರಿಂಗಾನ: ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮ ಪಂಚಾಯಿತಿನಲ್ಲಿ ಜಾಗೃತಿ ಜಾಥದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ನರಿಂಗಾನ ಗ್ರಾಮ ಪಂಚಾಯಿತಿ, ಜನಶಿಕ್ಷಣ ಟ್ರಸ್ಟ್, ಸುಗ್ರಾಮ ಜಾಗೃತಿ ವೇದಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಜಾಗೃತಿ ಜಾಥದೊಂದಿಗೆ ಆರಂಭವಾಯಿತು. ಪಂಚಾಯಿತಿ ವಠಾರ ಮತ್ತು ಪೊಟ್ಟೋಳಿಕೆ ಜನವಸತಿ ಪ್ರದೇಶದಲ್ಲಿ ಸಾಗಿದ ಜಾಗೃತಿ ಜಾಥದಲ್ಲಿ ಹೆಣ್ಣು ಮಕ್ಕಳ ರಕ್ಷಣೆ, ಶಿಕ್ಷಣ, ಗ್ರಾಮ ಸ್ವಚ್ಛತೆ, ಮತದಾನದ ಮಹತ್ವದ ಕುರಿತ ಘೋಷಣೆ, ಭಿತ್ತಿಪತ್ರಗಳ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಳಿನಾಕ್ಷಿ ಮಹಿಳೆಯರು ಜಾಗೃತರಾಗಿ ತಮ್ಮ ಹಕ್ಕುಗಳ ರಕ್ಷಣೆ, ಮಕ್ಕಳ ಶಿಕ್ಷಣ, ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡು ಸ್ವಾವಲಂಬನೆಯಿಂದ ಬದುಕುವ ಸಂಕಲ್ಪ ಮಾಡಿ ಕಾರ್ಯ ಸಾಧಿಸಲು ಸಿದ್ಧರಾಗಬೇಕು ಎಂದರು. ಮಹಿಳಾ ಸಾಧಕಿಯರ ಸಂವಾದ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯರುಗಳಾದ ಬೇಬಿ, ಹರಿಣಾಕ್ಷಿ, ಸೆಫಿಯಾ, ಉಷಾ, ಆದಿವಾಸಿ ಸಮುದಾಯದ ಗಿರಿಜಾ, ಬೇಬಿ ತಮ್ಮ ಕಾರ್ಯ…

Read More

UN NETWORKS ಕುರ್ನಾಡು: ಗ್ರಾಮಾಭಿವೃದ್ಧಿಗೆ ಪೂರಕವಾದ ಸೇವೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಸ್ವಚ್ಛತಾ ಅಂದೋಲನದಂತಹ ಪ್ರಮುಖ ಕಾರ್ಯಕ್ರಮಗಳಿಗೆ ಉತ್ತೇಜನ ಪಂಚಾಯಿತಿ ವತಿಯಿಂದ ನೀಡುತ್ತೇವೆ. ಆದರೆ ಈ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತವಾಗದೇ ದೈನಂದಿನ ಕಾರ್ಯಚಟುವಟಿಕೆಯಾಗಿ ಮಾಡಿಕೊಳ್ಳಬೇಕಾಗಿದೆ ಎಂದು ಕುರ್ನಾಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇಶವ ಅಭಿಪ್ರಾಯಪಟ್ಟರು. ಕೆನರಾ ಅಭಿವೃದ್ಧಿ ಮತ್ತು ಶಾಂತಿ ಸಂಸ್ಥೆ ಮಂಗಳೂರು (ಸಿಒಡಿಪಿ) ಆಶ್ರಯದಲ್ಲಿ ಕುರ್ನಾಡು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪ್ರಗತಿ ಮಹಿಳಾ ಸಂಘದ ಸದಸ್ಯ ಸ್ವಸಹಾಯ ಸಂಘಗಳ ಮಹಿಳಾ ದಿನಾಚರಣೆಯ ಪ್ರಯುಕ್ತ ಕುರ್ನಾಡು ಗ್ರಾಮ ಪಂಚಾಯಿತಿಯಲ್ಲಿ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಸ ಹಾಕುವುದು, ತೆಗೆಯುವುದು ಕೆಲಸವಲ್ಲ. ಕಸಹಾಕುವ ಮುನ್ನ ಜಾಗೃತಿ ಮೂಡಿಸಬೇಕು. ಒಣ ಕಸ, ಹಸಿ ಕಸವನ್ನು ಪತ್ಯೇಕವಾಗಿ ಶೇಖರಿಸಿಟ್ಟು ಅದನ್ನು ತಿಂಗಳಿಗೊಮ್ಮೆ ತೆಗೆಯುವ ಕೆಲಸ ಆಗಬೇಕು. ವಾರದ ಮೂರನೇ ಶನಿವಾರ ಸ್ವಚ್ಛತೆ ಅಭಿಯಾನ ನಡೆಸಲು ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಪ್ರತ್ಯೇಕವಾಗಿ ಪ್ಲಾಸ್ಟಿಕ್ ತ್ಯಾಜ್ಯ ನಿವಾರಣೆಯಾಗಬೇಕು ಎಂದು…

Read More

UN NETWORKS ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2018-19ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಹಾಗೂ ಕೃತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಮತ್ತು ತಾಳಮದ್ದಳೆಯ ಪ್ರಸಿದ್ಧ ಕಲಾವಿದರಾದ ಕುಂಬ್ಳೆ ಸುಂದರ ರಾವ್ ಹಾಗೂ ಬಡಗುತಿಟ್ಟಿನ ಹಿರಿಯ ಯಕ್ಷಗಾನ ವೇಷಧಾರಿ ಗೋಡೆ ನಾರಾಯಣ ಹೆಗಡೆ ಅವರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿದ್ವಾಂಸರಾದ ಪ್ರೊ.ಜಿ.ಎಸ್.ಭಟ್ಟ ಸಾಗರ ಅವರ ‘ಯಕ್ಷಗಾನ ಅಂಗೋಪಾಂಗ ಸಮತೋಲನ ವಿಚಾರ’ ಕೃತಿಯು ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಯಕ್ಷಮಂಗಳ ಪ್ರಶಸ್ತಿಯು ತಲಾ 25 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು 10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರೊ.ಎಂ.ಎಲ್.ಸಾಮಗ, ಡಾ.ಚಂದ್ರಶೇಖರ್ ದಾಮ್ಲೆ , ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಹಾಗೂ ಡಾ.ಧನಂಜಯ ಕುಂಬ್ಳೆ ಇವರನ್ನೊಳಗೊಂಡ ಸಮಿತಿ ಸಾಧಕರನ್ನು ಆಯ್ಕೆ ಮಾಡಿದೆ. ಮಾ.15ರಂದು ಪ್ರಶಸ್ತಿ ಪ್ರದಾನ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಮಾ.15ರಂದು ಅಪರಾಹ್ನ…

Read More

UN NETWORKS ಉಳ್ಳಾಲ : ವಿಕಲಚೇತನರಿಗೆ ಸ್ವಾವಲಂಬಿ ಜೀವನ ನಡೆಸಲು ದ್ವಿಚಕ್ರ ವಾಹನ ಪೂರಕವಾಗಿದ್ದು, ಮಂಗಳೂರು ಕ್ಷೇತ್ರ ವ್ಯಾಪ್ತಿಯ ಇನ್ನಷ್ಟು ವಿಕಲಚೇತನ ಯುವಜನರನ್ನು ಸರ್ವೇ ನಡೆಸಿ ಅವರಿಗೆ ದ್ವಿಚಕ್ರ ವಾಹನ ಪೂರೈಸಲು ಬದ್ಧನಾಗಿದ್ಧೆನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಅವರು ಉಳ್ಳಾಲ ನಗರಸಭಾ ಕಾರ್ಯಾಲಯದ ಬಳಿ ಗುರುವಾರ ಶಾಸಕರ ನಿಧಿಯಡಿ ಮಂಗಳೂರು ವಿಧಾನಸಭಾ ಕ್ಷೇತ್ರದ 13 ಮಂದಿ ಫಲಾನುಭವಿ ವಿಕಲಾಂಗರಿಗೆ ದ್ವಿಚಕ್ರ ವಾಹನ ವಿತರಿಸಿ ಮಾತನಾಡಿದರು. ಕಳೆದ ವರ್ಷ ಮೂವರು ಫಲಾನುಭವಿಗಳಿ ದ್ವಿಚಕ್ರ ವಾಹನ ನೀಡಲಾಗಿತ್ತು. ವಿಕಲ ಚೇತನರ ಬೇಡಿಕೆಯಿಂದ ಹೆಚ್ಚಿನ ದ್ವಿಚಕ್ರ ವಾಹನವನ್ನು ಪೂರೈಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಕಲೇತನರು ಸ್ವಾವಲಂಬಿ ಜೀವನ ನಡೆಸುವ ಉದ್ಧೇಶದಿಂದ ಅವರಿಗೆ ಸರಕಾರದಿಂದ ಸಿಗುವ ಸವಲತ್ತು ನೀಡಲು ಸರಕಾರ ಬದ್ಧವಾಗಿದ್ದು, ದ್ವಿಚಕ್ರ ವಾಹನವನ್ನು ವಿಶೇಷ ಅನುದಾನದಿಂದ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯರಾದ ಜಬ್ಬಾರ್ ಬೋಳಿಯಾರ್, ಮುಖಂಡರಾದ ಸುರೇಶ್ ಭಟ್ನಗರ,…

Read More

UN NETWORKS ಉಳ್ಳಾಲ: ರಿಕ್ಷಾ ಢಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಕುಂಪಲ ಮೂರುಕಟ್ಟೆ ನಿವಾಸಿ ಪ್ಯಾಟ್ರಿಕ್ ವಿಕ್ಟರ್ ಡಿಸೋಜ ಎಂಬವರ ಪತ್ನಿ ಬೆನ್ನಿ ಡಿಸೋಜ(76) ಮೃತರು. ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ಔಷಧಿಗೆಂದು ನಡೆದುಕೊಂಡು ಬಂದು ಕಾಪಿಕಾಡು ಸಮೀಪ ರಾಷ್ಟ್ರೀಯ ಹೆದ್ದಾರಿ-66 ನ್ನು ಅಡ್ಡದಾಟುತ್ತಿದ್ದಾಗ, ಕೋಟೆಕಾರು ಕಡೆಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ರಿಕ್ಷಾ ಢಿಕ್ಕಿ ಹೊಡೆದಿದೆ. ಪರಿಣಾಮ ಬೆನ್ನಿ ಡಿಸೋಜಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚು ಬಸ್ಸಿನಲ್ಲಿ ಪ್ರಯಾಣಿಸದ ಬೆನ್ನಿ ಡಿಸೋಜ ಅವರು ಕುಂಪಲದಿಂದ ತೊಕ್ಕೊಟ್ಟು ಸುಮಾರು 5 ಕಿ.ಮೀ ನಡೆದುಕೊಂಡು ಬಂದು, ವಾಪಸ್ಸಾಗುತ್ತಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಬ್ಬರು ಪುತ್ರರು ಇಸ್ರೇಲ್ ಮತ್ತು ಮಸ್ಕತ್ ನಲ್ಲಿ ಇರುವುದರಿಂದ ಅಂತಿಮ ಸಂಸ್ಕಾರಕ್ಕೆ ಅವರು ಬರುವವರೆಗೆ ಕಾಯಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.

Read More