Author: UllalaVani

Kannada News From Coastal Karnataka

ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ, ಮರಕ್ಕೆ ಕಟ್ಟಿ ಹಾಕಿ ಬಳಿಕ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಜನವರಿ 20 ರಂದು ಬೆಳಗಿನ ಜಾವ 2.10 ರಿಂದ 2.30 ರ ನಡುವೆ ಈ ಘಟನೆ ನಡೆದಿದೆ. ಆರೋಪಿಗಳನ್ನು ಮಂಗಳೂರು ನಗರದ ಕೂಳೂರು ನಿವಾಸಿಗಳಾದ ಮೊಯಿದ್ದೀನ್ ನಾಸಿರ್ ಮತ್ತು ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ.ದೂರಿನ ಪ್ರಕಾರ, ಈ ಜೋಡಿ ದೇವಿಪ್ರಸಾದ್ ಅವರ ಮನೆಯ ಬಳಿ ಕಾಣಿಸಿಕೊಂಡಿತ್ತು. ಆ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ನೆರೆಹೊರೆಯವರು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.ಸಮೀಪದ ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವಿಪ್ರಸಾದ್ ಇತರರೊಂದಿಗೆ ಮನೆಗೆ ಧಾವಿಸಿ ಬಂದಾಗ ಆರೋಪಿ KA-19-W-407 ನೋಂದಣಿ ಸಂಖ್ಯೆಯ ಬೈಕ್‌ ಕದ್ದು ಪರಾರಿಯಾಗುತ್ತಿರುವುದನ್ನು ಕಂಡಿದ್ದಾರೆ ಎಂದು ಹೇಳಲಾಗಿದೆ. ಅವರನ್ನು ಬೆನ್ನಟ್ಟಿ ತಡೆದಾಗ, ಆರೋಪಿ ದೇವಿಪ್ರಸಾದ್ ಮೇಲೆ ಹಲ್ಲೆ ನಡೆಸಿ ಬೈಕ್‌ನೊಂದಿಗೆ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಮಾಹಿತಿ ಪಡೆದ ಸುಮಾರು 25…

Read More

ಮಂಗಳೂರು; ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತು ಘಟಕಕ್ಕೆ ಸರಕಾರದ ವತಿಯಿಂದ ಗುರುಪುರದ ವಾಮಂಜೂರಿನ ತಿರುವೆಲ್ ಗ್ರಾಮದಲ್ಲಿ ಅರ್ಧ ಎಕರೆ ಕನ್ನಡ ಭವನ ನಿರ್ಮಾಣಕ್ಕಾಗಿ ಜಾಗ ಮಂಜೂರಾಗಿದ್ದು, ಶೀಘ್ರದಲ್ಲೇ ಶಂಕು ನೆರೆವೇರಲಿದೆ ಎಂದು ಕಸಪಾ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರು ಡಾ.ಮಂಜುನಾಥ್ ಎಸ್ ರೇವಣಕರ್ ತಿಳಿಸಿದ್ದಾರೆ. ಇವರು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಭವನವು ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ರಾರಾಜಿಸಲಿದೆ ಎಂದು ಹೇಳಿದ್ದಾರೆ. ಅಧ್ಯಕ್ಷರಾದ ಡಾ.ಮಂಜುನಾಥ ಎಸ್ ರೇವಣಕರ್ ಅವರ ಕಳೆದ ನಾಲ್ಕು ವರ್ಷಗಳ ನಿರಂತರ ಪರಿಶ್ರಮ ಮತ್ತು ಮುಂದಾಳತ್ವದಲ್ಲಿ ಈ ಜಾಗ ಮಂಜೂರಾಗಿದೆ. ತಾಲೂಕು ಮಟ್ಟದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಭವನವೊಂದರ ಅಗತ್ಯತೆಯನ್ನು ಮನಗಂಡು ಸರ್ಕಾರದ ಮಟ್ಟದಲ್ಲಿ ಸತತ ಹೋರಾಟವನ್ನು ನಡೆಸಿದ್ದರು. ಅದರ ಫಲವಾಗಿ ಇಂದು ಜಾಗ ಮಂಜೂರಾಗಿದೆ ಎಂದರೆ ತಪ್ಪಗಲಾರದು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

Read More

ತಲಪಾಡಿ; ತಲಪಾಡಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಡೆ ಹೋಗುವ ರಸ್ತೆಯ ಸಮೀಪವಿರುವ ನಾರ್ಲ ಪಡೀಲ್ ಪಶು ಆಸ್ಪತ್ರೆ ಬಳಿ ಘನ ತ್ಯಾಜ್ಯ ಘಟಕವನ್ನು ತಲಪಾಡಿ ಗ್ರಾಮ ಪಂಚಾಯತ್ ನಿರ್ಮಾಣ ಮಾಡುವ ಯೋಜನೆಗೆ ಮುಂದಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯ, ಪರಿಸರ ಮತ್ತು ಮಕ್ಕಳ ಭವಿಷ್ಯಕ್ಕೆ ಗಂಭೀರ ಹಾನಿ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿ ಸ್ಥಳೀಯರು ನಾರ್ಲ ಪಡೀಲ್ ಪಶು ಆಸ್ಪತ್ರೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯರಾದ ಯಶು ಪಕ್ಕಳ ಮಾತನಾಡಿ, ಈ ಪ್ರದೇಶದಲ್ಲಿ ಕೇವಲ ಎರಡು ಮೂರು ಮನೆಗಳ ಸಹಿ ಹಾಕಿಸಿಕೊಂಡು ಕಾರ್ಖಾನೆಗಳು ತಲೆ ಎತ್ತಿನಿಂತಿದೆ. ಇದೀಗ ಕಸ ವಿಲೇವಾರಿ ಘಟಕ ನಿರ್ಮಾಣವಾದರೆ ಪರಿಸರದ ಜೊತೆಗೆ ಸಾರ್ವಜನಿಕರು ಸಂಕಷ್ಟವನ್ನು ಎದುರಿಸಬೇಕಾದೀತು. ಅದಲ್ಲದೇ ಘಟಕಕ್ಕೆ ಬೇಲಿ ನಿರ್ಮಿಸುವುದರ ಮೂಲಕ ಭದ್ರತೆ ಮಾಡಿದ್ರೂ, ಇದೇ ಪ್ರದೇಶದಲ್ಲಿ ಗಾಂಜಾ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ನಡೆಯುವ ಸಾಧ್ಯತೆ ಇದೆ. ಅಂಗನವಾಡಿ ಕೇಂದ್ರ, ಪಶು ಆಸ್ಪತ್ರೆ ವಿರುವ ತಾಣದಲ್ಲಿ ಕಸ ವಿಲೇವಾರಿ ಘಟಕ ಇರೋದಿಲ್ಲ.…

Read More

ಉಳ್ಳಾಲ: ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಾಗತಿಕ ಬಿಲ್ಲವ ಕ್ರೀಡಾ ಕೂಟದಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಬ್ರಹ್ಮಶ್ರೀ ಉಳ್ಳಾಲ ತಂಡ ಪಡೆದುಕೊಂಡಿದೆ. ಬ್ರಹ್ಮಶ್ರೀ ಉಳ್ಳಾಲ ತಂಡವು ವಾಲಿಬಾಲ್ ಪ್ರಥಮ, ಹಗ್ಗ ಜಗ್ಗಾಟ ದ್ವಿತೀಯ , ತ್ರೋಬಾಲ್‌ನಲ್ಲಿ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದೆ. ಮಾಜಿ ಸಚಿವ ವಿ ಸುನೀಲ್ ಕುಮಾರ್, ಶಾಸಕರಾದ ಡಿ ವೇದವ್ಯಾಸ್ ಕಾಮತ್, ಉಮಾನಾಥ ಕೋಟ್ಯಾನ್, ನಿಗಮದ ಅಧ್ಯಕ್ಷರಾದ ಹರೀಶ್ ಕುಮಾರ್, ಅಖಿಲಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಸಂಘಟನಾ ಕಾರ್ಯದರ್ಶಿ ಉದಯಚಂದ್ರ ಸುವರ್ಣ, ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದುಕುಮಾರ್ ಇವರ ಉಪಸ್ಥಿತಿಯಲ್ಲಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಉಳ್ಳಾಲ ಅಧ್ಯಕ್ಷ ಕೆ ಟಿ ಸುವರ್ಣ ಚಾಂಪಿಯನ್ಸ್ ಟ್ರೋಫಿ ಸ್ವೀಕರಿಸಿದರು. ಈ ಸಂದರ್ಭ ಕ್ರೀಡಾ ಕೂಟದ ಸಂಚಾಲಕ ಸದಾನಂದ ಪೂಜಾರಿ,ಸುಮಲತಾ ಸುವರ್ಣ, ಗಂಗಾಧರ ಪೂಜಾರಿ ಮುಂಬಯಿ, ಬ್ರಹ್ಮಶ್ರೀ ಬಿಲ್ಲವ ವೇದಿಕೆ ಗೌರವ ಸಲಹೆಗಾರ ಎ ಜೆ ಶೇಖರ್, ಕಾರ್ಯಧ್ಯಕ್ಷ ಸತೀಶ್ ಕರ್ಕೇರ, ಜೀವನ್…

Read More

ಉಳ್ಳಾಲ: ಮಕ್ಕಳಿಗೆ ಸಂಸ್ಕೃತಿಯ ಪರಿಚಯ ಮಾಡಿಕೊಡುವುದರಿಂದ ಸಂಸ್ಕಾರಯುತ ಸಮಾಜವನ್ನು ಸೃಷ್ಟಿಸಲು ಸಾಧ್ಯ ಎಂದು ಜೆ.ಸಿ ಇಂಟರ್ನ್ಯಾಷನಲ್ ಸ್ಕೂಲ್ ಕಾರ್ಕಳ ಇದರ ಉಪಾಧ್ಯಕ್ಷರಾದ ಪದ್ಮ ಪ್ರಸಾದ್ ಜೈನ್ ಅಭಿಪ್ರಾಯಪಟ್ಟರು. ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ 13ನೇ ವರ್ಷದ ಗುರುಕುಲ ಉತ್ಸವದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಂತ್ರ ನಾಟ್ಯಕಲಾ ಗುರುಕುಲವು ಮಕ್ಕಳಲ್ಲಿ ಸಂಸ್ಕಾರವನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದರು.ಬಾಲ್ಯದಲ್ಲೇ ಮಕ್ಕಳಿಗೆ ನಮ್ಮ ಭಾಷೆ, ಕಲೆ, ಸಾಹಿತ್ಯ, ಜನಪದ ಪರಂಪರೆ, ಧಾರ್ಮಿಕ ಸಹಿಷ್ಣುತೆ ಹಾಗೂ ಸಾಮಾಜಿಕ ಜವಾಬ್ದಾರಿಗಳ ಪರಿಚಯವಾಗುವುದರಿಂದ ಅವರ ಮನಸ್ಸಿನಲ್ಲಿ ಉತ್ತಮ ಗುಣಗಳು ಆಳವಾಗಿ ಬೇರೂರುತ್ತವೆ. ಸಂಸ್ಕೃತಿಯೊಂದಿಗೆ ಬೆಳೆದ ಮಗು ಸಮಾಜದೊಂದಿಗೆ ಹೊಂದಾಣಿಕೆಯಿಂದ ಬದುಕುವುದನ್ನು ಕಲಿಯುತ್ತದೆ. ಹಿರಿಯರಿಗೆ ಗೌರವ, ಕಿರಿಯರಿಗೆ ಪ್ರೀತಿ, ದುರ್ಬಲರಿಗೆ ಸಹಾನುಭೂತಿ ಎಂಬ ಮೌಲ್ಯಗಳು ಸಹಜವಾಗಿ ಅವರಲ್ಲಿ ಬೆಳೆಯುತ್ತವೆ ಎಂದರು.ಸಭಾಧ್ಯಕ್ಷತೆಯನ್ನು ರಾಜೇಶ್ ಅತ್ತಾವರ ವಹಿಸಿದ್ದರು, ಹರೀಶ್ ಮಾಸ್ಟರ್, ಆನಂದ ಕೆ ಅಸೈಗೋಳಿ, ನರೇಶ್ ಪಂಡಿತ್ ಹೌಸ್, ಗುರುಕುಲದ ಗೌರವಾಧ್ಯಕ್ಷೆ ಶಕೀಲಾ ಜನಾರ್ಧನ, ಟ್ರಸ್ಟಿಗಳು ಶೈನಾ ಶ್ರಾವಣ್, ಬಬಿತಾ ಕಿರಣ್ ಉಪಸ್ಥಿತರಿದ್ದರು.ಕನ್ನಡ…

Read More

ಪುತ್ತೂರು,ಜ. 23:   ಜಡ್ಜ್ ಎದುರಲ್ಲೇ ವ್ಯಕ್ತಿಯೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಮಧ್ಯಾಹ್ನ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಪುತ್ತೂರು ತಾಲೂಕಿನ ಕಾವು ಮಾನ್ಯಡ್ಕ ನಿವಾಸಿ ರವಿ (35) ಎಂದು ಗುರುತಿಸಲಾಗಿದೆ. ರವಿ ಮತ್ತು ಆತನ ಪತ್ನಿ ವಿದ್ಯಾಶ್ರೀ ನಡುವೆ ಕಳೆದ ಕೆಲ ದಿನಗಳಿಂದ ಕಲಹ ನಡೆಯುತ್ತಿತ್ತು. ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಗಂಡ–ಹೆಂಡತಿ ನಡುವಿನ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬುಧವಾರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಿಚ್ಛೇದನ ಸಂಬಂಧ ಮಾತುಕತೆ ಕೂಡ ನಡೆದಿತ್ತು. ಠಾಣೆಗೆ ಹಾಜರಾಗುವಂತೆ ಪೊಲೀಸರು ರವಿಗೆ ಸೂಚನೆ ನೀಡಿದ್ದರು. ಈ ಮಧ್ಯೆ ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಆಗಮಿಸಿ, 5ನೇ ಹೆಚ್ಚುವರಿ ನ್ಯಾಯಾಲಯದ ಜಡ್ಜ್ ಎದುರಲ್ಲಿಯೇ ವಿಷ ಸೇವಿಸಿದ್ದಾನೆ. ರವಿ ವಿಷ ಸೇವಿಸುವ ಸಾಧ್ಯತೆ ಇದೆ ಎಂಬ…

Read More

ಉಡುಪಿ, ಜ. 23 : ಎಕ್ಸ್ ಪ್ರೆಸ್ ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟ ಮಹಿಳೆಯೋರ್ವರು ಗಂಭೀರ ಗಾಯಗಳೊಂದಿಗೆ ಹೆದ್ದಾರಿ ಬದಿ ಬಿದ್ದಿರುವುದನ್ನು ಕಂಡ ಯುವ ಸಮಾಜ ಸೇವಕ ಕಟಪಾಡಿ ಅಭಿರಾಜ್ ಸುವರ್ಣ ಅವರು ತನ್ನ ಕಾರ್ ನಲ್ಲಿ ಚಿಕಿತ್ಸೆಗೆ ತುರ್ತಾಗಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಯನ್ನು ಮೆರೆದ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ. ಅಂಡರ್ ಪಾಸ್ ಕಾಮಗಾರಿ ನಿರತ ಕಟಪಾಡಿಯ ಬಸ್ ತಂಗುದಾಣದಲ್ಲಿ ಕಟಪಾಡಿ ಮೂಡಬೆಟ್ಟು ಕುದ್ರಾಡಿ ಎಂಬಲ್ಲಿನ ಚಿಕ್ಕ ಪೂಜಾರ್ತಿ (50) ಎಂಬವರು ಉಡುಪಿಯತ್ತ ತೆರಳಲು ಎಕ್ಸ್ ಪ್ರೆಸ್ ಬಸ್ ಹತ್ತಿದ್ದರು. ಬಸ್ ಚಲಿಸುತ್ತಿದ್ದಂತೆಯೇ ಕೆಲವೇ ಕ್ಷಣಗಳಲ್ಲಿ ಇರುವ ತಿರುವಿನಲ್ಲಿ ಈಕೆ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.ಇದೇ ಹಾದಿಯಾಗಿ ತೆರಳುತ್ತಿದ್ದ ಅಭಿರಾಜ್ ಸುವರ್ಣ ಈಕೆಯನ್ನು ಚಿಕಿತ್ಸೆಗೆ ಕರೆದೊಯ್ಯಲು ಯಾವುದೇ ವಾಹನಗಳ ಲಭ್ಯವಿಲ್ಲದುದನ್ನು ಗಮನಿಸಿ, ಮತ್ತು ತುರ್ತು ಚಿಕಿತ್ಸೆಯ ಅಗತ್ಯತೆಯನ್ನು ಮನಗಂಡು ತನ್ನ ಕಾರ್ ಮೂಲಕ ಉಡುಪಿಯ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ಕೊಡಿಸುತ್ತಾರೆ. ಐಸಿಯು ವಿನಲ್ಲಿ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಮಂಗಳೂರು; ದ.ಕ.ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟ ಜ.25ರಂದು ಬೆಳಗ್ಗೆ 9ಗಂಟೆಗೆ ಕದ್ರಿಯ ಕೆ.ಪಿ.ಟಿ ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ, ಕೆಪಿಟಿ ಪ್ರಾಂಶುಪಾಲ ಹರೀಶ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Read More

ಮಂಗಳೂರು: 9 ವರ್ಷಗಳ ಬಳಿಕ ಮಂಗಳೂರಿನ “ಮಹಾವೀರ ವೃತ್ತ”ಕ್ಕೆ ಕರಾವಳಿಯ ಸಾಂಸ್ಕöÈತಿಕ ವೈಭವಮಂಗಳೂರು: ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತ ಇಂದು ಹೊಸ ಕಾಂತಿಯೊAದಿಗೆ ಕಂಗೊಳಿಸುತ್ತಿದೆ. ಬರೋಬ್ಬರಿ 9 ವರ್ಷಗಳ ದೀರ್ಘ ನಿರೀಕ್ಷೆಗೆತೆರೆ ಎಳೆದಂತೆ, ವೃತ್ತದಲ್ಲಿ ಪುನಃ ಕಲಶ ಪುನರ್ನಿರ್ಮಾಣಗೊಂಡಿದ್ದು, ಕರಾವಳಿಯ ಸಾಂಸ್ಕೃತಿಕ ವೈಶಿಷ್ಟ್ಯಕ್ಕೆ ನವ ಚೈತನ್ಯವನ್ನು ತುಂಬಿದೆ. ಬಹುನಿರೀಕ್ಷಿತ ನವೀಕೃತ ಮಹಾವೀರ ವೃತ್ತದ ಲೋಕಾರ್ಪಣೆ ಜ. 24ರಂದು ನೆರವೇರಲಿದೆ. ಮಂಗಳೂರು ಜೈನ ಸೊಸೈಟಿ (ರಿ) ಅವರ ಮುಂದಾಳತ್ವದಲ್ಲಿ ರೂಪುಗೊಂಡ ಈ ಅಭಿವೃದ್ಧಿ ಕಾರ್ಯಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಲೋಕಾರ್ಪಣೆ ನೆರವೇರಿಸಲಿದ್ದು, ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಸಭಾಧ್ಯಕ್ಷ ಡಾ. ಯು.ಟಿ. ಖಾದರ್ ಅವರು ನಾಮಫಲಕ ಅನಾವರಣಗೊಳಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್‌ಚೌಟ, ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ…

Read More

ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಆಶಾ ಪಂಡಿತ್ ತಮ್ಮ ಬೈಗುಳದ ರೀಲ್‌ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ್ದರು. ಅವರು ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನೂ ನಡೆಸುತ್ತಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರಿಗೆ ನಿನ್ನೆ ರಾತ್ರಿ ವಾಂತಿ ಸಮಸ್ಯೆ ಉಂಟಾಗಿತ್ತು. ಶುಕ್ರವಾರ ಬೆಳಗಿನ ಜಾವ ಅವರಿಗೆ ಹೃದಯಾಘಾತವಾಗಿ ಮನೆಯ ಅಂಗಳದಲ್ಲಿ ಕುಸಿದು ಬಿದ್ದರು ಎಂದು ವರದಿಯಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಆಗಲೇ ಮೃತಪಟ್ಟಿದ್ದರು.

Read More