Author: UllalaVani

Kannada News From Coastal Karnataka

ಉಳ್ಳಾಲ: ಆದರ್ಶ ಮಿತ್ರ ಮಂಡಳಿ ಕೊಲ್ಯ ಇದರ 50 ನೇ ಸುವರ್ಣ ಸಂಭ್ರಮ ಕಾರ್ಯಕ್ರಮವು ಜ.23 ರಿಂದ ಜ 25 ರ ವರೆಗೆ ಕೊಲ್ಯ ಶ್ರೀ ಶಾರದಾ ಮಂದಿರದಲ್ಲಿ ನಡೆಯಲಿದೆ ಎಂದು ಆದರ್ಶ ಮಿತ್ರ ಮಂಡಳಿಯ ಗೌರವ ಸಲಹೆಗಾರರಾದ ರಾಜೇಶ್ ಕುಮಾರ್ ಕೆ.ಎಸ್ ಹೇಳಿದರು. ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿ, ಜ.23 ರಂದು ಶುಕ್ರವಾರ ಸಂಜೆ 4.30 ಗಂಟೆಗೆ ಶ್ರೀ ಶಾರದಾ ಮಹಿಳಾ ಮಂಡಳಿಯವರಿಂದ ಲಲಿತ ಸಹಸ್ರನಾಮ,5.30ಕ್ಕೆ ದೀಪ ಪ್ರಜ್ವಲನೆ, ಭಜನಾ ಕಾರ್ಯಕ್ರಮ, ಸಂಜೆ ಆರು ಗಂಟೆಗೆ ಸತ್ಯ ನಾರಾಯಣ ಪೂಜೆ, ರಾತ್ರಿ ಎಂಟು ಗಂಟೆಗೆ ಮಹಾ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ ಎಂದರು. ಜ.24 ರಂದು ಶನಿವಾರ ರಾತ್ರಿ ಸಭಾ ಕಾರ್ಯಕ್ರಮ ನಡೆಯಲಿದ್ದು ಉದ್ಯಮಿ ಸೌಂದರ್ಯ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮ ದಲ್ಲಿ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಈ ಸಂದರ್ಭದಲ್ಲಿ ಟಿ ಜಿ ರಾಜರಾಮ…

Read More

ನಿಟ್ಟೆ ಡೀಮ್ಡ್ ಯುನಿವರ್ಸಿಟಿ, ಸೆಕ್ಷನ್ ಇನ್ಫಿನ್- 8 ಹಾಗೂ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಗ್ರಾಮೀಣಾಭಿವೃದ್ಧಿಗೆ ಬೇಕಾದ ತಂತ್ರಜ್ಞಾನವನ್ನು ಒದಗಿಸುವ ಉದ್ದೇಶದಿಂದ RuTAGe ಸ್ಮಾರ್ಟ್ ವಿಲೇಜ್ ಸೆಂಟರ್‌ನ್ನು ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಬುಧವಾರ ಶುಭಾರಂಭಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ನಿಟ್ಟೆ ಡೀಮ್ಡ್ ಯುನಿವರ್ಸಿಟಿ ಯ ಸಂಶೋಧನೆ ಮತ್ತು ಪೇಟೆಂಟ್ಸ್ ಸಲಹೆಗಾರರಾದ ಡಾ. ಇಡ್ಯಾ ಕರುಣಸಾಗರ್ ಅವರು RuTAGe ಸಮರ್ಥ ಗ್ರಾಮ ಕೇಂದ್ರ ಯೋಜನೆಯ ವಿವರವಾದ ರೂಪುರೇಷೆ, ಉದ್ದೇಶ ಮತ್ತು ಕಾರ್ಯವಿಧಾನವನ್ನು ಪ್ರಸ್ತುತಪಡಿಸಿದರು. ಗ್ರಾಮೀಣ ಪ್ರದೇಶಗಳ ನೈಜ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಸಂಶೋಧನೆ ಆಧಾರಿತ ಹಾಗೂ ಅನುಷ್ಠಾನಗೊಳ್ಳುವ ತಾಂತ್ರಿಕ ಪರಿಹಾರಗಳನ್ನು ಅಭಿವೃದ್ಧಿಪಡಿಸುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ಅವರು ವಿವರಿಸಿದರು. U.S.A ಯ ACM ಬಿಸಿನೆಸ್ ಸೊಲ್ಯುಷನ್‌ನ ಮುಖ್ಯಸ್ಥರಾದ ಡಾ. ಎನ್. ಸಿ. ಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದ ಜನರ ಅಭಿವೃದ್ದಿಯ ಉದ್ದೇಶದಿಂದ ಈ ಯೋಜನೆಯನ್ನು ಇಲ್ಲಿ ಆರಂಭಿಸುತ್ತಿದ್ದು ಎಲ್ಲರ ಸಹಕಾರ ಖುಷಿ ನೀಡಿದೆ ಎಂದರು. U.S.A ಯ ಕುಟುಂಬ ವೈದ್ಯ…

Read More

ಉಳ್ಳಾಲ: ಲಯನ್ಸ್ ಕ್ಲಬ್ ಛೋಟಾ ಮಂಗಳೂರು ವತಿಯಿಂದ ಹಸಿದವನಿಗೆ ಅನ್ನ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮೂಲಕ ಗೋವರ್ಧನ ಶೆಟ್ಟಿ ಲಯನ್ಸ್ ಇಂಟರ್ನೇಶನಲ್ ಡಿಸ್ಟಿçಕ್ಟ್ 317ಡಿ ಚಾಲನೆ ನೀಡಿದ್ರು. ಅಧ್ಯಕ್ಷತೆಯನ್ನು ಉಳ್ಳಾಲ ನಗರ ಸಭೆ ಪೌರಯುಕ್ತರು ಸಂತೋಷ್ ಎಂಡಿ ಕೆ ಎಮ್‌ಎ ಇ ಎಸ್ ವಹಿಸಿದ್ದರು. ಪೌರ ಕಾರ್ಮಿಕರ ಕರ್ತವ್ಯ ಶಿಸ್ತು ಸಮುದಾಯದ ಆರೋಗ್ಯ ಕಾಪಾಡುವ ಬದ್ಧತೆಯನ್ನು ಶ್ಲಾಘಿಸಿದರು ಹಾಗೂ ಪೌರಾಯುಕ್ತರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪೌರ ಕಾರ್ಮಿಕರು ಹೇಗೆ ಶ್ರಮಪಟ್ಟು ಕೆಲಸ ನಿರ್ವಹಿಸುತ್ತಿದ್ದಾರೆ ಸಮಾಜದ ಆರೋಗ್ಯ ಸ್ವಾಸ್ಥ್ಯ ದಲ್ಲಿ ಅವರು ಪಾತ್ರವನ್ನು ಶ್ಲಾಘಿಸಿದರು. ಸ್ವಚ್ಛತಾ ಪೌರ ಕಾರ್ಮಿಕರಲ್ಲಿ ಇಬ್ಬರು ಮಹಿಳೆ ಹಾಗೂ ಇಬ್ಬರು ಪುರುಷರನ್ನು ಪೌರಾಯುಕ್ತರು ಹಾಗೂ ಉದ್ಘಾಟಕರು ಸಾಂಕೇತಿಕವಾಗಿ ವೇದಿಕೆಯಲ್ಲಿ ಹೂ ನೀಡಿ ಗೌರವಿಸಿದರು ಉಳಿದಂತೆ 61 ಮಂದಿ ಸ್ವಚ್ಛತಾ ಕಾರ್ಮಿಕರನ್ನು ಹೂ ನೀಡಿ ಗೌರವಿಸಲಾಯಿತು. ದಣಿದು ಬಂದ ಜೀವಕ್ಕೆ ತ್ರಾಸ ಆಗಬಾರದೆಂಬ ಇರಾದೆಯಿಂದ ಎತ್ತರದಲ್ಲಿ ಕುಳ್ಳಿರಿಸಿ ಸವಿರುಚಿಯಾದ ಭೋಜನವನ್ನು ಪೌರಾಯುಕ್ತರು ಹಾಗೂ ಉದ್ಘಾಟಕರು ಸ್ವತ:…

Read More

ಕೊಣಾಜೆ: ಸಂಘ ಸಂಸ್ಥೆಗಳು ಸಮಾಜಮುಖಿಯಾಗಿ ತೊಡಗಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಕುಲಾಲ ಸಮಾಜವು ಮಾನವೀಯ ಮೌಲ್ಯ, ನಿಷ್ಠೆಯನ್ನು ಪ್ರತಿಬಿಂಭಿಸುವ ಸಮುದಾಯವಾಗಿದೆ. ಕಿರಿಯರು ಹಿರಿಯ ವ್ಯಕ್ತಿಗಳ ಆದರ್ಶ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಮುನ್ಮಡೆಯಬೇಕು ನರಿಂಗಾನ ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಶಾಂತ್ ಕಾಜವ ಅವರು ಹೇಳಿದರು. ಅವರು ಕುಲಾಲ ಸಂಘ ಮುಡಿಪು ವಲಯ ಇದರ 2025-26 ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಜೀವನದಲ್ಲಿ ಏರು ಪೇರು ಸಹಜ. ಸವಾಲುಗಳನ್ನು ಎದುರಿಸಿ ಮುನ್ನಡೆದರೆ ಯಶಸ್ಸು. ಮಕ್ಕಳಿಗೆ ಸಂಸ್ಕಾರ ಮತ್ತು ವಿದ್ಯೆ ಕೊಡುವ ಮೂಲಕ ಸಮಾಜದಲ್ಲಿ ಮುಖ್ಯವಾಹಿನಿಗೆ ಬರುವ ಹಾಗೆ ನೋಡಿಕೊಳ್ಳುವುದು ನಮ್ಮ ಜವಬ್ಧಾರಿ ಎಂದರು.ಹಿರಿಯರಾದ ದರ್ಣಪ್ಪ ಮೂಲ್ಯ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಇದರ ಮಾಜಿ ಅಧ್ಯಕ್ಣರಾದ ಸಂತೋಷ್ ಕುಮಾರ್ ಬೋಳಿಯಾರ್ ಅವರು ಮಾತನಾಡಿ ಕುಲಾಲ ಸಮಾಜದ ಮಾಣಿಕ್ಯ ಅಮ್ಮೆಂಬಳ ಬಾಳಪ್ಪ ಅವರು ಸ್ವಾತಂತ್ರ್ಯ ಹೋರಾಟದ ಮೂಲಕ , ಸಮಾಜಕ್ಕೆ ಸದಾ ಮಾರ್ಗದರ್ಶನ ನೀಡಿದ ಮಹಾನ್ ಸಾಧಕರಾಗಿದ್ದಾರೆ…

Read More

ಉಳ್ಳಾಲ: ಯಾರಾದರೂ ನೀರಿಗೆ ಬಿದ್ದಾಗಲೂ ತಕ್ಷಣ ಪ್ರಥಮ ಚಿಕಿತ್ಸೆ ನೀಡಬೇಕು, ಹೃದಯಾಘಾತ ಸಂಭವಿಸಿದ ತಕ್ಷಣ ಸಿಪಿಆರ್ ನೀಡಬೇಕು. ಸಮಯ ವ್ಯಯಿಸಿದರೆ ವ್ಯಕ್ತಿಯ ಅಂಗಾಂಗ ಕ್ಷೀಣವಾಗಿ ಸಾವು ಸಂಭವಿಸುವ ಅಪಾಯ ಇದೆ ಎಂದು ಕೆಎಂಸಿ ಆಸ್ಪತ್ರೆಯ ಸ್ಟಾಫ್ ನರ್ಸ್ ಪೂರ್ಣಿಮಾ ಹೇಳಿದರು. ಉಳ್ಳಾಲ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಂಘದ ವತಿಯಿಂದ ಮೀನುಗಾರರ ಸುರಕ್ಷತೆ ನಿಟ್ಟಿನಲ್ಲಿ ಮಂಗಳವಾರ ಕೋಟೆಪುರದಲ್ಲಿ ನಡೆದ ಪ್ರಥಮ ಚಿಕಿತ್ಸಾ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.ಮೀನುಗಾರಿಕೆಗೆ ತೆರಳಿದ ಸಂದರ್ಭ ಹೃದಯಾಘಾತ ಆದರೆ ಪಥಮ ಚಿಕಿತ್ಸೆ ನೀಡಿದ ಬಳಿಕ ತಕ್ಷಣ ಆಸ್ಪತ್ರೆಗೆ ಸೇರಿಸುವ ಮೂಲಕ ಜೀವ ಉಳಿಸಲು ಸಾಧ್ಯವಿದ್ದು ಈ ವಿಚಾರದಲ್ಲಿ ಮೀನುಗಾರರು ಸದಾ ಜಾಗರೂಕರಾಗಿರಬೇಕು ಎಂದು ಕಿವಿಮಾತು ಹೇಳಿದರು.ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಂಘದ ಅಧ್ಯಕ್ಷ ಹನೀಫ್ ಸೋಲಾರ್ ಅಧ್ಯಕ್ಷತೆ ವಹಿಸಿದ್ದರು. ಶಿಪ್ಪಿಂಗ್ ಸಂಸ್ಥೆಯ ಅಧಿಕಾರಿ ಪ್ರೀತಮ್, ಪೈಲೆಟ್ ಯು.ಕೆ.ಇಸ್ಮಾಯಿಲ್, ಸಂಘದ ಕಾರ್ಯದರ್ಶಿ ಅಬ್ದುಲ್ ಘನಿ, ಸಲಹೆಗಾರರಾದ ಇಸ್ಮಾಯಿಲ್ ಕೋಡಿ, ಯುಕೆಎಫ್ ಮೋನು ಮೊದಲಾದವರು ಉಪಸ್ಥಿತರಿದ್ದರು.ನಾಡದೋಣಿ ಮತ್ತು ಗಿಲ್‌ನೆಟ್…

Read More

ಉಳ್ಳಾಲ, ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢ ಶಾಲೆ ವಿದ್ಯಾನಗರ ತಲಪಾಡಿ ಇದರ ಆಶ್ರಯದಲ್ಲಿ ಪೋಷಕರ ಸಭೆ, ಪ್ರತಿಭಾ ಪುರಸ್ಕಾರ, ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಕಾರ್ಯಾಗಾರ ಹಾಗೂ ಸನ್ಮಾನ ಕಾರ್ಯಕ್ರಮವು ಫಲಾಹ್ ಹೊರಾಂಗಣ ವೇದಿಕೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣಾ ನಿರೀಕ್ಷಕ ಕೃಷ್ಣಾನಂದ ಜಿ.ನಾಯಕ್ ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಮೂಡಿಸುವ ಬಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ವಾಹನ ನೀಡದಂತೆ ಪೋಷಕರಿಗೆ ಸೂಚನೆ ನೀಡಿದರು.ಫಲಾಹ್ ವಿದ್ಯಾ ಸಂಸ್ಥೆ ಅಧ್ಯಕ್ಷ ಯು.ಬಿ.ಮೊಹಮ್ಮದ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ತಲಪಾಡಿ ವಲಯ ಸಿಆರ್ ಪಿ ಸುಜಾತಾ ಮಾತನಾಡಿದರು. ಈ ಸಂದರ್ಭದಲ್ಲಿ ಉಳ್ಳಾಲ ತೋಟ ಯು.ಟಿ. ಅಬ್ದುಲ್ ರಹೀಮ್ ಅವರನ್ನುಸನ್ಮಾನಿಸಲಾಯಿತು. ಅತ್ಯಧಿಕ ಅಂಕಗಳನ್ನು ಪಡೆದ ಹಾಗೂ ಕೃಷಿ ಬೆಳೆಗಳನ್ನು ಶಾಲಾ ವಠಾರದಲ್ಲಿ ಬೆಳೆಸುವಲ್ಲಿ ಉತ್ತೇಜನ ನೀಡಿದ ಫಲಾಹ್ ಶಾಲೆಯ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ…

Read More

ಉಳ್ಳಾಲ:ಮಾರುತಿ ಜನಸೇವಾ ಸಂಘದ ಮಾಜಿ ಅಧ್ಯಕ್ಷ ಅಮರ್ ಮತ್ತು ಹರೀಶ್ ಅವರ ತಾಯಿ, ಉಳ್ಳಾಲ ಮೊಗವೀರ ಪಟ್ಣ ನಿವಾಸಿ ದಿ.ಜನಾರ್ದನ ಅವರ ಪತ್ನಿ ವಿಮಲ ಪುತ್ರನ್(88) ಜ. 18ರಂದು ರವಿವಾರ ನಿಧನ ಹೊಂದಿದ್ದಾರೆ. ಮೃತರು ನಾಲ್ವರು ಪುತ್ರಿಯರು, ಮೂವರು ಪುತ್ರರನ್ನು ಅಗಲಿದ್ದಾರೆ. ಮಂಗಳೂರಿನಲ್ಲಿ ಮೀನು ಮಾರಾಟ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಅವರು ಸಾಮಾಜಿಕ, ಧಾರ್ಮಿಕವಾಗಿ ತೊಡಗಿಸಿಕೊಂಡಿದ್ದರು.

Read More

ಉಳ್ಳಾಲ: ಜ-21:ಕೃಷಿಕರು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಸೋಮೇಶ್ವರ ಗ್ರಾಮದ ಪಿಲಾರು ದೇಲಂತ ಬೆಟ್ಟು ನಿವಾಸಿ ರಘುರಾಮ ಶೆಟ್ಟಿ (50)ಯವರು ಮಂಗಳವಾರ ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ಹಠತ್ತನೆ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಿಗ್ಗೆ ಲವಲವಿಕೆಯಿಂದಲೇ ಪುತ್ರನನ್ನ ಶಾಲೆಗೆ ಬಿಟ್ಟು ಬಂದು,ತೋಟದ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ರಘುರಾಮ್ ಅವರು ದಣಿದ ಕಾರಣ ಮನೆಯೊಳಗೆ ನಿದ್ದೆಗೆ ಜಾರಿದ್ದರು.ಮನೆಗೆ ಬಂದಿದ್ದ ಸಹೋದರಿಯು ರಘುರಾಮ್ ಅವರನ್ನ ಎಬ್ಬಿಸಲು ಹೋದಾಗ ರಘು ಅವರ ದೇಹವು ಪ್ರತಿಕ್ರಿಯಿಸದಿದ್ದಾಗ ವೈದ್ಯರನ್ನ ಕರೆಸಿ ಪರಿಶೀಲಿಸಿದ್ದು,ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ಖಚಿತ ಪಡಿಸಿದ್ದಾರೆ. ಕಳೆದ ವಾರ ಜ.12 ರ ಸೋಮವಾರದಂದು ರಘುರಾಮ್ ಶೆಟ್ಟಿಯವರ ಬಾವ (ಸಹೋದರಿಯ ಪತಿ)ಚಂದ್ರಹಾಸ್ ಶೆಟ್ಟಿ ಅವರು ಶಬರಿ ಮಲೆ ಯಾತ್ರೆಗೆ ತೆರಳಿದ್ದ ವೇಳೆ ಎರಿಮಲೆಯಲ್ಲಿ ಹೃದಯಾಘಾತದಿಂದ‌ ಸಾವನ್ನಪ್ಪಿದ್ದರು.ಮಾರನೇ ದಿನ ಮಂಗಳವಾರದಂದು ಚಂದ್ರಹಾಸ್ ಅವರ ಪಾರ್ಥಿವ ಶರೀರವನ್ನ ತಂದು ಅಂತ್ಯಕ್ರಿಯೆ ನಡೆಸಲಾಗಿತ್ತು.ಇದೀಗ ಚಂದ್ರಹಾಸ್ ಅವರ ಬಾಮೈದ ರಘುರಾಮ್ ಅವರು ಮಂಗಳವಾರದಂದೇ ಅಕಾಲಿಕವಾಗಿ ಸಾವನ್ನಪ್ಪಿದ್ದು,ಪಿಲಾರು ದೇಲಂತ ಬೆಟ್ಟುವಿನ ಮನೆಯಲ್ಲಿ ವಾರದಂತರದಲ್ಲೇ ಎರಡು ಸಾವು ಸಂಭವಿಸಿದ್ದು ಕುಟುಂಬಸ್ಥರನ್ನ…

Read More

ಪುತ್ತೂರು, ಜ. 21: ಕಾರು ಮತ್ತು ಅಶೋಕ್ ಲೇಲ್ಯಾಂಡ್ ಸರಕು ಸಾಗಣೆ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸರು ಜ. 19 ರ ಸೋಮವಾರ ಸಂಜೆ ಕಾರ್ಯಾಚರಣೆ ನಡೆಸಿ 106 ಕೆಜಿ 60 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರನ್ನ ಬಂಧಿಸಲಾಗಿದೆ. ಬಂಧಿತರು  ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ (37) , ಅಬ್ದುಲ್ ಸಾದಿಕ್ (37) ಎಂದು ಗುರುತಿಸಲಾಗಿದೆ.ಸುಳಿವು ಆಧರಿಸಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ಗಳು ತಮ್ಮ ಸಿಬ್ಬಂದಿಯೊಂದಿಗೆ ಪುತ್ತೂರು ತಾಲ್ಲೂಕಿನ ಪಡುವನ್ನೂರು ಗ್ರಾಮದ ಸಜನ್‌ಕಾಡಿಯಲ್ಲಿ ಶಂಕಿತ ಕಾರು ಮತ್ತು ಸರಕು ಸಾಗಣೆ ವಾಹನವನ್ನು ತಡೆದು ತಪಾಸಣೆ ನಡೆಸಿದರು. ವಿಚಾರಣೆ ನಡೆಸಿದಾಗ, ಕಾರಿನ ಚಾಲಕ ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ನ ನಡವಳಿಕೆಯನ್ನು ಅನುಮಾನಿಸಿದ ಪೊಲೀಸರು ಕಾರಿನಲ್ಲಿ ಶೋಧ ನಡೆಸಿದಾಗ ಪ್ಲಾಸ್ಟಿಕ್ ಕವರ್‌ನಲ್ಲಿ ಪ್ಯಾಕ್ ಮಾಡಲಾದ ಸುಮಾರು 100 ಗ್ರಾಂ ತೂಕದ ಗಾಂಜಾ ಎಲೆಗಳು, ಹೂವುಗಳು ಮತ್ತು ಬೀಜಗಳನ್ನು ಹೊಂದಿರುವ ಬಂಡಲ್…

Read More

ನವದೆಹಲಿ, ಜ. 21 : ಭಾರತೀಯ ಮೂಲದ ಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಾಸಾದಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ್ದಾರೆ. ಕೇವಲ ಒಂದು ವಾರದ ಕಾರ್ಯನಿಮಿತ್ತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಅವರು, ತಾಂತ್ರಿಕ ದೋಷಗಳ ಕಾರಣದಿಂದಾಗಿ ನಿರೀಕ್ಷೆಗೂ ಮೀರಿದಂತೆ 9 ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲೇ ಸಿಲುಕಿದ್ದು, ಈ ಪಯಣ ಇತಿಹಾಸದಲ್ಲೇ ಅಪರೂಪದ ಘಟನೆಯಾಗಿ ದಾಖಲಾಗಿದೆ. ಅವರು ಡಿಸೆಂಬರ್ 31ರಂದು ನಾಸಾದಿಂದ ನಿವೃತ್ತರಾದರು. ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಜೂನ್ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್ ಕ್ಯಾಪ್ಸುಲ್ ಮೂಲಕ ISS ಗೆ ತೆರಳಿದ್ದರು. ಆದರೆ ಸ್ಟಾರ್‌ಲೈನರ್‌ನಲ್ಲಿ ಹೀಲಿಯಂ ಸೋರಿಕೆ ಮತ್ತು ಪ್ರೊಪಲ್ಷನ್ ವ್ಯವಸ್ಥೆಯ ತಾಂತ್ರಿಕ ದೋಷಗಳು ಕಾಣಿಸಿಕೊಂಡ ಕಾರಣ, ಅವರು ಭೂಮಿಗೆ ವಾಪಸ್ ಬರಲು ಸಾಧ್ಯವಾಗಲಿಲ್ಲ. ಅನೇಕ ಬಾರಿ ಪ್ರಯತ್ನಿಸಿದರೂ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇದ್ದು, ಅವರ ಭೂಮಿಗೆ ಮರಳುವ ಕನಸು ಮುಂದೂಡಲ್ಪಟ್ಟಿತ್ತು.ಒಟ್ಟು 286 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಉಳಿದ ಬಳಿಕ, ಮಾರ್ಚ್ 18, 2025 ರಂದು…

Read More