UN NETWORKS ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘದ ವೈದ್ಯಕೀಯ ನೆರವು ಘಟಕದ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಮಂಗಳೂರು ವಿವಿಯ ಆರೋಗ್ಯ ಕೇಂದ್ರದಲ್ಲಿ ಕಿನ್ಯ ಶಾರದಾ ಆಯುರ್ವೇದ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ಎಂ.ಬಿ.ಪುರಾಣಿಕ್ ಅವರು ಉದ್ಘಾಟಿಸಿ, ಪ್ರಕೃತಿ ಮತ್ತು ಮಾನವನ ಸಂಬಂಧ ಬಹಳ ಪೂರಕವಾದುದು. ಹಾಗೆಯೇ ಆಯುರ್ವೇದವು ಇಂದು ವೈದ್ಯಕೀಯ ಪದ್ದತಿಯಲ್ಲಿ ಪ್ರಮುಖವಾಗಿ ಗುರುತಿಸಲ್ಪಡುತ್ತಿದೆ. ಆಯುರ್ವೇದವನ್ನು ಕಡೆಗಣಿಸದೆ ಅದರ ಉಪಯೋಗಗಳ ಬಗ್ಗೆ ನಾವು ತಿಳಿದುಕೊಳ್ಳಬೇಕಿದೆ. ಅಲ್ಲದೆ ಇಂತಹ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಹೆಚ್ಚೆಚ್ಚು ಜನರು ಭಾಗವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ.ಎ.ಎಂ.ಖಾನ್ ಅವರು, ಆಯುರ್ವೇದ ಬಗೆಗಿನ ಜ್ಞಾನವನ್ನು ನಾವು ಹೆಚ್ಚೆಚ್ಚು ಪಸರಿಸುವ ಕಾರ್ಯ ಮಾಡಬೇಕು. ಅಲ್ಲದೆ ಆರ್ಯುವೇದವನ್ನು ನಾವು ಅನುಸರಿಸುತ್ತಾ ಬಂದರೆ ಹೆಚ್ಚು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಡಾ.ರಾಜೇಶ್, ಡಾ.ರವಿ ಗಣೇಶ್, ವಿವೇಕ್ ತಂತ್ರಿ, ಕಮಲಾಕ್ಷಿ ಪಿ,…
Author: UllalaVani
UN NETWORKS ಇರಾ: ಸಮಾಜದಲ್ಲಿ ಧಾರ್ಮಿಕ ಮತ್ತು ಸಾಮಾಜಿಕವಾಗಿ ಜಾಗೃತಿ ಮೂಡಿಸುವ ಜವಾಬ್ದಾರಿ ಸಮಸ್ತ ಕಾರ್ಯಕರ್ತರ ಮೇಲಿದ್ದು, ಇತರರನ್ನು ಸೋಲಿಸುವ, ದ್ವೇಷಿಸುವ ಕೆಲಸ ಸಮಸ್ತ ಕಾರ್ಯಕರ್ತರಿಂದ ನಡೆಯಬಾರದು ಎಂದು ಬೆಳ್ತಂಗಡಿ ದಾರುಸ್ಸಲಾಂ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ಸಯ್ಯಿದ್ ಝೈನುಲ್ ಅಬಿದೀನ್ ಜಿಫ್ರಿ ತಂಙಳ್ ಪೊಸೋಟ್ ಕಿವಿಮಾತು ಹೇಳಿದರು. ಎಸ್ಕೆಎಸ್ಸೆಸ್ಸೆಫ್ ಪರಪ್ಪು ಸೈಟ್ ಶಾಖೆಯ ವತಿಯಿಂದ ರವಿವಾರ ಪರಪ್ಪು ಸೈಟ್ನಲ್ಲಿರುವ ಪಂಚಾಯಿತಿ ಮೈದಾನದಲ್ಲಿ ನಡೆದ ಸಮಸ್ತ ಮಹಾಸಮ್ಮೇಳನ, ಶೈಖುನಾ ಮಿತ್ತಬೈಲ್ ಜಬ್ಬಾರ್ ಉಸ್ತಾದ್ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಂದು ಕೆಲವು ಧರ್ಮಗುರುಗಳು ಸ್ವಾರ್ಥಕ್ಕಾಗಿ ಜನರನ್ನು ಹೆದರಿಸಿ ಹೆಸರು ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾರನ್ನೋ ಹೆದರಿಸಿ ಅಥವಾ ಯಾರೂ ದೊಡ್ಡ ಫ್ಲೆಕ್ಸ್ ಹಾಕಿದ ಮಾತ್ರಕ್ಕೆ ಮಹಾತ್ಮನಾಗಲಾರ. ಸಮಸ್ತದ ಆದರ್ಶ ಪವಿತ್ರವಾಗಿದೆ, ಈ ಸಂಘಟನೆ ಮಹಾತ್ಮರು ಮುನ್ನಡೆಸುತ್ತಿರುವುದರಿಂದ ಯಾವುದೇ ರೀತಿಯ ಕೊರತೆ ಕಂಡು ಹಿಡಿಯಲು ಸಾಧ್ಯವಿಲ್ಲ ಎಂದು ಹೇಳಿದರು. ಜಿಲ್ಲಾ ಸಮಸ್ತ ಮುದರ್ರಿಸ್ ಉಪಾಧ್ಯಕ್ಷ ಹಾರೂನ್ ಅಹ್ಸನಿ ಕೋಟೆಕಾರ್ ಮಾತನಾಡಿ, ದೊಡ್ಡ…
UN NETWORKS ಉಳ್ಳಾಲ: ಉಳ್ಳಾಲ ಶ್ರೀ ವ್ಯಾಘ್ರಚಾಮುಂಡೇಶ್ವರೀ ದೇವಸ್ಥಾನದ ಹಿರಿಯ ಗುರಿಕಾರ, ಉಳ್ಳಾಲ ಮೊಗವೀರ ಸಂಘದ ಮಾಜಿ ಅಧ್ಯಕ್ಷ , ಮೊಗವೀರ ಮುಂದಾಳು ಉಳ್ಳಾಲ ಮೊಗವೀರಪಟ್ಣ ನಿವಾಸಿ ವಿಠಲ ಸುವರ್ಣ ಗುರಿಕಾರ(84) ಫೆ. 10ರಂದು ರವಿವಾರ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಉಳ್ಳಾಲ ಶ್ರೀ ವ್ಯಾಘ್ರಚಾಮುಂಡೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ, ಉಳ್ಳಾಲ ಮೊಗವೀರ ಸಂಘ, ಹದಿನಾಲ್ಕು ಪಟ್ಣ ಮೊಗವೀರ ಸಂಯುಕ್ತ ಸಭಾ ಮಂಗಳೂರು ಇದರ ಅಧ್ಯಕ್ಷರಾಗಿ, ಶ್ರೀ ವ್ಯಾಘ್ರ ಚಾಮುಂಡೇಶ್ವರೀ ಎಜ್ಯುಕೇಶನ್ ಟ್ರಸ್ಟ್ನ ಮ್ಯಾನೆಜಿಂಗ್ ಟ್ರಸ್ಟಿಯಾಗಿ, ಮೊಗವೀರ ಹಳೇ ವಿದ್ಯಾರ್ಥಿ ಸಂಘ ಮತ್ತು ಬ್ರದರ್ಸ್ ಸ್ಪೋಟ್ರ್ಸ್ ಕ್ಲಬ್ನ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನೊಳಗೊಂಡ ಉಚ್ಚಿಲ ಮೊಗವೀರ ಮಹಾಜನ ಸಭಾದ ಆಡಳಿತ ಸಮಿತಿಯಲ್ಲಿ ಕಾರ್ಯ ನಿರ್ವಹಿಸಿದ್ದ ಇವರು, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಉಳ್ಳಾಲ ಶ್ರೀ ವ್ಯಾಘ್ರಚಾಮುಂಡೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಕಕ್ಷರಾಗಿ, ಕುಳಾಯಿ ಸುವರ್ಣ ಮೂಲಸ್ಥಾನದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
UN NETWORKS ದೇರಳಕಟ್ಟೆ: ಬದ್ರಿಯ ಜುಮಾಮಸೀದಿ ದೇರಳಕಟ್ಟೆ, ಹಯಾತುಲ್ ಇಸ್ಲಾಂ ಮದರಸದ ಹಳೆ ವಿದ್ಯಾರ್ಥಿ ಸಂಘದ ತೃತೀಯ ವಾರ್ಷಿಕ ದ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಮತ್ತು ಯೆನೆಪೋಯ ಆಸ್ಪತ್ರೆ ಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ದೇರಳಕಟ್ಟೆ ಬದ್ರಿಯ ಜುಮಾ ಮಸೀದಿ ವಠಾರದಲ್ಲಿ ನಡೆಯಿತು. ಬದ್ರಿಯ ಜುಮಾಮಸೀದಿ ಖತೀಬ್ ಮಹಮ್ಮದ್ ಶರೀಫ್ ಅರ್ಶದಿ ಕಾರ್ಯ ಕ್ರಮ ಉದ್ಘಾಟಿಸಿದರು.ನಂತರ ಮಾತನಾಡಿ, ದಾನ ಧರ್ಮಕ್ಕೆ ಇಸ್ಲಾಂ ಧರ್ಮ ವಿಶೇಷವಾದ ಮಹತ್ವ ನೀಡಿದೆ. ರಕ್ತದ ಅಗತ್ಯ ಬಂದಾಗ ರಕ್ತದಾನ ಮಾಡಿ ಪರಸ್ಪರ ಸಹಾಯ ಮಾಡುವುದು ಒಂದು ಉತ್ತಮ ಕಾರ್ಯ ಎಂದು ಹೇಳಿದರು.ಕೊಣಾಜೆ ಪೋಲಿಸ್ ಠಾಣಾ ನೀರಿಕ್ಷಕ ರವಿ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ದೇಶದ ಭವಿಷ್ಯ ಯುವ ಸಮೂಹ ರಕ್ತದಾನದಂತಹ ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಸಿದಾಗ. ಮುಂದೆ ಉತ್ತಮ ಸಮಾಜವಾಗಿ ನಿರ್ಮಾಣವಾಗುವಲ್ಲಿ ಸಂಶಯವಿಲ್ಲ. ಯುವ ಸಮೂಹ ದಾರಿಪದಂತೆ ನೋಡಿಗೊಳ್ಳುದ್ದು ಪೋಷಕರ ಜವಬ್ದಾರಿಯಾಗಿ ಎಂದು ಹೇಳಿದರು.ಬದ್ರಿಯ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ಹಾಜಿ…
UN NETWORKS ಉಳ್ಳಾಲ:ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಕುತ್ತಾರು ಮದನಿ ನಗರದಲ್ಲಿರುವ ಹೊಟೇಲ್ ಮಾಲೀಕನ ಮತ್ತು ಪ್ರಬಂಧಕನ ವಿರುದ್ದ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ರೂ.,14,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮದನಿ ನಗರದ ದ್ವಾರಕಾಮಯಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಹೊಟೇಲ್ ಮಾಲೀಕ ಜೋಜೊ ಜೋಸೆಫ್ ಮತ್ತು ಪ್ರಬಂಧಕ ಪುತ್ತೂರು ಕುರಿಯ ದ ಸಲೀಂ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.ಹೊಟೇಲಿನಲ್ಲಿ ಅಕ್ರಮವಾಗಿ ಸ್ಮೋಕಿಂಗ್ ಹಟ್ ನಿರ್ಮಿಸಿ ವಿದ್ಯಾರ್ಥಿಗಳಿಗೆ ಸಿಗರೇಟು, ತಂಬಾಕು ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದರು. ಈ ಸಂಬಂಧ ಉಳ್ಳಾಲ ಪೊಲೀಸರು ದಾಳಿ ನಡೆಸಿ ಎಂಟು ಹುಕ್ಕಾ ಪಾಟ್, 57 ತಂಬಾಕು ಮಿಶ್ರಿತ ಫ್ಲೇವರ್ ಸೇರಿದಂತೆ ಒಟ್ಟು ರೂ. 14,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರ ವಿರುದ್ಧ ಕೋಕ್ಟಾ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ , ಪಿಎಸ್ ಐ ಗುರುವಪ್ಪ ಕಾಂತಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ
UN NETWORKS ಮುಡಿಪು : ಯುವಕರು ಕಟ್ಟಿಕೊಂಡ ಬ್ಲಡ್ ಸೋಮ ತರಣ್ ಮಂಗಳೂರು ತಂಡ ಮೂಲ ಉದ್ದೇಶಕ್ಕೆ ಜಾಸ್ತಿ ಒತ್ತು ಕೊಡುವ ಕೆಲಸ ಸಮಾಜದಲ್ಲಿ ಮಾಡುತ್ತಿದೆ. ಈ ಮೂಲಕ ಮಾನವೀಯತೆಯನ್ನು ಎತ್ತಿ ಹಿಡಿಯುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಯ ಶ್ಲಾಘನೀಯ ಎಂದು ಮುಡಿಪು ಬ್ರೈಟ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಜಲೀಲ್ ಮೋಂಟುಗೋಳಿ ಅಭಿಪ್ರಾಯಪಟ್ಟರು. ಬ್ಲಡ್ ಡೋನರ್ಸ್ ಮಂಗಳೂರು ಇದರ ಐದನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಮುಡಿಪು ಭಾಗದಲ್ಲಿ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಕಾರ್ಯಕ್ಕೆ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಐದು ವರ್ಷಗಳಾದರೂ ವಾರ್ಷಿಕೋತ್ಸವ ಆಚರಣೆಗೆ ದುಂದು ವೆಚ್ಚ ಮಾಡದೆ ಸಂಘಟನೆಯು ನಿರಾಶ್ರಿತರ ಸಹಕಾರಕ್ಕೆ ನಿಂತು ಮೂಲ ಉದ್ದೇಶವನ್ನು ಈಡೇರಿಸುತ್ತಾ ಬಂದಿದೆ. ಇದೀಗ ಬಡಕುಟುಂಬದವರಿಗೆ ಮೂರು ಮನೆಗಳ ನಿರ್ಮಾಣ ಕಾಮಗಾರಿಗೆ ಕೈ ಹಾಕಿರುವುದು ಸಂಘಟನೆ ಯುವಕರ ಮಹೋನ್ನತ ಕಾರ್ಯ. ರಕ್ತ ಕೊಡುವುದರ ಜೊತೆಗೆ ಮನೆ ನಿರ್ಮಾಣದಲ್ಲಿ ತೊಡಗಿಸಿ ಅಶಕ್ತರ ಪಾಲಿಗೆ ದಾರಿದೀಪ ಆಗಿದ್ದಾರೆ. ಇತ್ತೀಚೆಗೆ ಪ್ರಸವ ಸಂದರ್ಭ ಮಹಿಳೆಯೊಬ್ಬರಿಗೆ 39 ಬಾಟಲಿ ರಕ್ತದ…
UN NETWORKS ತಲಪಾಡಿ : ಬಾಡಿಗೆ ಮನೆಯಲ್ಲಿದ್ದ ಮೂವರು ಮಂಗಳಮುಖಿಯರಿಗೆ 15 ಮಂದಿಯಿದ್ದ ತಂಡದ ಮಂಗಳಮುಖಿಯರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವ ಘಟನೆ ತಲಪಾಡಿ ಟೋಲ್ ಸಮೀಪ ಶನಿವಾರ ಮುಂಜಾನೆ ವೇಳೆ ಸಂಭವಿಸಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲಪಾಡಿ ಟೋಲ್ ಸಮೀಪದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅನುಶ್ರೀ, ಶಮ್ಮಾ, ನಿಶಾ ಎಂಬವರು ಹಲ್ಲೆಗೊಳಗಾದವರು. ಇವರಿಗೆ ಸುರತ್ಕಲ್ ಕಾನ ನಿವಾಸಿ ಮೌನಾ , ಆರುಂಧತಿ, ಖುಷಿ ಎಂಬವರ ತಂಡ ದಾಳಿ ನಡೆಸಿದೆ. ತಿಂಗಳಿಗೆ ಹಣ ನೀಡುವಂತೆ ಒತ್ತಾಯಿಸಿರುವುದನ್ನು ಮೂವರು ನಿರಾಕರಿಸಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಕೊಡದೇ ಇದ್ದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿದ ತಂಡ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರು ನಿರಂತರವಾಗಿ ಹಲ್ಲೆ ನಡೆಸುತ್ತಾ ಬಂದಿದ್ದಾರೆ. ಪ್ರಕರಣಗಳು ದಾಖಲಾದರೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿಲ್ಲ ಅನ್ನುವ ಆರೋಪ ಮಾಡಿದ್ದಾರೆ.
UN NETWORKS ಕೊಲ್ಯ: ಕಳೆದ ನಾಲ್ಕು ವರುಷ ಹತ್ತು ತಿಂಗಳ ಅವಧಿಯಲ್ಲಿ ದೇಶದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ.ಎಂದು ಬಿ.ಜೆ.ಪಿ. ಜಿಲ್ಲಾ ಚುನಾವಣಾ ಸಂಚಲಕರಾದ ಗೋಪಾಲಕೃಷ್ಣ ಹೇರಳೆಯವರು ಹೇಳಿದರು.ಅವರು ಕೊಲ್ಯ ಸೌಭಾಗ್ಯ ಭವನದಲ್ಲಿ ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ ಜತೆಯಲ್ಲಿ,ಬಿ.ಜೆ.ಪಿ. ಮಂಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಗೆ ಸಿದ್ದತಾ ಸಭೆ ಮತ್ತು ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಬಡ ಜನರ ಕಲ್ಯಾಣಕ್ಕಾಗಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಜನಧನ ಬ್ಯಾಂಕ್ ಖಾತೆ, ಉಜ್ವಲ ಯೋಜನೆ ಮೂಲಕ ಗ್ಯಾಸ್ ಸ್ಟವ್ ವಿತರಣೆ, ಗರ್ಭಿಣಿ ಮಹಿಳೆಯರ ಹೆರಿಗೆ ರಜೆ ಹೆಚ್ಚಳ, ರೈತರರಿಗಾಗಿ ವಿಶೇಷ ಯೋಜನೆ, 8. ಲಕ್ಷ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ಮೂಲಕ ಜನಸ್ನೇಹಿ ಆಡಳಿತ ನೀಡಿರುವ ಮೋದಿಯವರು ಸೈನ್ಯಕ್ಕೆ ವಿಶೇಷ ಅಧಿಕಾರ ನೀಡುವ ಸೈನಿಕರ ಆತ್ಮ ಸ್ಥೈರ್ಯ ಹಿಗ್ಗಿಸುವ ಕೆಲಸ ಮಾಡಿದರು. ದೇಶದ ಜನತೆ ಮತ್ತೊಮ್ಮೆ ಮೋದಿಜೀಯವರೇ ಪ್ರಧಾನಿಯಾಗಬೇಕೆಂದು ಆಶಿಸಿದರೇ, ದೇಶವನ್ನು ಕೊಳ್ಳೆ ಹೊಡೆದು ತಮ್ಮ ಕುಟುಂಬ ರಕ್ಷಣೆಗಾಗಿ ಮಹಾಘಟಬಂಧನ್ ಹೆಸರಲ್ಲಿ ಅಧಿಕಾರದ…
UN NETWORKS ತೊಕ್ಕೊಟ್ಟು: ಮುಂಚೂಣಿಯ ರೇಸಿಂಗ್ ಬೈಕುಗಳ ಬ್ರಾಂಡ್ ಕೆಟಿಎಂ ನಗರದ ಹೊರವಲಯದ ತೊಕ್ಕೊಟ್ಟುವಿನಲ್ಲಿ ಶುಕ್ರವಾರ ರೋಮಾಂಚಕ ಬೈಕ್ ಸಾಹಸ ಪ್ರದರ್ಶನವನ್ನು ಆಯೋಜಿಸಿತ್ತು. ವೃತ್ತಿಪರ ಸಾಹಸಿ ಬೈಕ್ ಚಾಲಕರು ಮೈನವಿರೇಳಿಸುವಂತೆ ಬೈಕ್ ಸಾಹಸ ಮತ್ತು ಟ್ರಿಕ್ಗಳನ್ನು ಪ್ರದರ್ಶಿಸಿದರು.ತೊಕ್ಕೊಟ್ಟಿವಿನ ಯೂನಿಟಿ ಹಾಲ್ ಆವರಣದಲ್ಲಿ ನಡೆದ ಈ ಸಾಹಸ ಪ್ರದರ್ಶನಕ್ಕೆ ನೂರಾರು ಜನರು ಸಾಕ್ಷಿಯಾದರು. ಪ್ರೇಕ್ಷಕರು ಉಸಿರು ಬಿಗಿಹಿಡಿಯುವಂತೆ ಕೆಟಿಎಂಡ್ಯೂಕ್ ಬೈಕ್ಗಳಲ್ಲಿ ಚಾಲಕರು ಸಾಹಸಗಳನ್ನು ಸಾದರಪಡಿಸಿದರು.ಕೆಟಿಎಂ ಬೈಕ್ ಸಾಹಸ ನೋಡಲು ಸಾರ್ವಜನಿಕರಿಗೆ ಉಚಿತ ಪ್ರವೇಶವಿತ್ತು.“ಕೆಟಿಎಂ ಬ್ರಾಂಡ್ ಅಧಿಕ ಸಾಮಥ್ರ್ಯದ ರೇಸಿಂಗ್ ಬೈಕ್ಗಳಿಗೆ ಹೆಸರಾಗಿದೆ. ಕೆಟಿಎಂ ಬೈಕ್ಗಳು ಚಾಲಕರಿಗೆ ಯಾವ ರೀತಿಯ ರೋಮಾಂಚಕ ಅನುಭವ ನೀಡಬಹುದು ಎನ್ನುವುದನ್ನು ಇಂಥ ಪ್ರದರ್ಶನದ ಮೂಲಕ ಸಾಬೀತುಪಡಿಸಲಾಗುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ವೃತ್ತಿಪರ ಸಾಹಸಿ ಸವಾರರು ಈ ಪ್ರದರ್ಶನ ನೀಡುತ್ತಿದ್ದಾರೆ” ಎಂದು ಬಜಾಜ್ ಆಟೋ ಲಿಮಿಟೆಡ್ನ ಪ್ರೊ ಬೈಕಿಂಗ್ ವಿಭಾಗದ ಅಧ್ಯಕ್ಷರಾದ ಅಮಿತ್ ನಂದಿ ತಿಳಿಸಿದರು. ಇದುವರೆಗೆ ಶಿವಮೊಗ್ಗ, ಕಲಬುರಗಿ, ಹುಬ್ಬಳ್ಳಿ, ಹಾಸನ, ಧಾರವಾಡ, ಚಿಕ್ಕಮಗಳೂರು, ಗೋಕಾಕ, ಹೊಸಪೇಟೆ, ಮಂಗಳೂರು,…
UN NETWORKS ದೇರಳಕಟ್ಟೆ: ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯ ಸತತ 7ನೇ ಬಾರಿಗೆ ಜಪಾನಿನ ಮಿಯಾಝಕಿ ವಿಶ್ವವಿದ್ಯಾನಿಲಯದ ಸಕುರಾ ವಿನಿಮಯ ಕಾರ್ಯಕ್ರಮದಡಿ ಪ್ರಧಾನ ಸಂಶೋಧಕ ಪ್ರೊ| ಫುರುಕುವ ಸೈಶಿ ಮತ್ತು ಸಹಾಯಕ ಸಂಶೋಧಕ ಡಾ| ಹರೀಶ್ ಮುಖ್ಯಸ್ಥ ಅವರ ನೇತೃತ್ವದಲ್ಲಿ ನಡೆಸಲಾಗುವ ಜೆ.ಎಸ್.ಟಿ ಪ್ರವಾಸ ಫೆಲೋಶಿಪ್ಪನ್ನು ಪಡೆದುಕೊಂಡಿದೆ. ನಿಟ್ಟೆ ವಿಶ್ವವಿದ್ಯಾನಿಲಯದಿಂದ ಕುಲಪತಿ ಡಾ| ಸತೀಶ್ ಕುಮಾರ್ ಭಂಡಾರಿ ಅವರ ನೇತೃತ್ವದಲ್ಲಿ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡಮಿಯ 11 ವೈದ್ಯರುಗಳ ತಂಡ ಜಪಾನಿನ ಮಿಯಾಝಾಕಿ ವಿಶ್ವವಿದ್ಯಾಲಯಕ್ಕೆ ಫೆ.11ರಿಂದ 19ರವರೆಗೆ ಸಕುರಾ ವೈಜ್ಞಾನಿಕ ಯೋಜನೆಯಡಿ ಭೇಟಿ ನೀಡಲಿದ್ದು, ಈ ಭೇಟಿಯು ಜಪಾನ್ ಮತ್ತು ಏಷ್ಯಾದ ಇತರ ದೇಶಗಳ ನಡುವೆ ಜೆ.ಎಸ್.ಟಿ ಪ್ರಾಯೋಜಿತ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ವಿನಿಮಯ ಮತ್ತು ಯುವ ಪ್ರತಿಭೆಗಳ ವಿನಿಮಯದ ವೃದ್ಧಿಗಾಗಿ ಜಪಾನ್ ವೈಜ್ಞಾನಿಕ ಮತ್ತು ತಾಂತ್ರಿಕ ಸಂಸ್ಥೆಯು ನಡೆಸುತ್ತಿರುವ ಪ್ರಯತ್ನದ ಭಾಗವಾಗಿದೆ. ಈ ವಿನಿಯಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ವೈಜ್ಞಾನಿಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಉತ್ತಮ ಬಾಂಧವ್ಯವನ್ನು ವೃದ್ಧಿಸುವ…

