UN NETWORKS ಕೊಣಾಜೆ: ಕೊಣಾಜೆ ಗ್ರಾಮದ ಬೆಳ್ಮ ಕೆಳಗಿನ ಮನೆ ಬಳಿಯ ಶ್ರೀ ಬ್ರಹ್ಮ ಸನ್ನಿಧಿ-ನಾಗ ಪರಿವಾರ ಕ್ಷೇತ್ರದ ಜೀರ್ಣೋದ್ದಾರ ಕಾರ್ಯದ ಅಂಗವಾಗಿ ವಿಜ್ಞಾಪಣಾ ಪತ್ರದ ಬಿಡುಗಡೆ ಕಾರ್ಯಕ್ರಮವು ನಡೆಯಿತು. ವಿಜ್ಞಾಪಣಾ ಪತ್ರವನ್ನು ಅರ್ಚಕರಾದ ಜಗದೀಶ್ ಭಟ್ ಅಂಡಾಲ ಅವರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಘುರಾಮ ಗಟ್ಟಿಯವರು ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೋಳಾರ ಸಾಯಿ ಟ್ರಸ್ಟ್ನ ಅಧ್ಯಕ್ಷರಾದ ಸೂರಜ್ ಕುಮಾರ್, ಕೊಣಾಜೆ ಪಂಚಾಯಿತಿ ಸದಸ್ಯೆ ಮುತ್ತು ಶೆಟ್ಟಿ, ವೇದಾವತಿ ಗಟ್ಟಿ, ಪಯ್ಯಗಟ್ಟಿ ಕುಟುಂಬದ ಹಿರಿಯರಾದ ಗಣೇಶ್ ಗಟ್ಟಿ ತುಂಬೆ, ಉಪನ್ಯಾಸಕರಾದ ಸತೀಶ್ ಗಟ್ಟಿ, ಕೋಟಿಪದವು ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷರಾದ ಸೀತಾರಾಮ ಬಂಗೇರ, ಯಾದವ ಬಿ.ಬೊಳ್ಳೆಕುಮೇರ್, ಸಪ್ತಸ್ವರ ಕಲಾತಂಡದ ಅಧ್ಯಕ್ಷರಾದ ನರೇಂದ್ರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾಯದರ್ಶಿ ಅಚ್ಯುತಗಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
Author: UllalaVani
UN NETWORKS ತಲಪಾಡಿ : ಬಡತನದಲ್ಲಿರುವ ಮಹಿಳೆಯೊಬ್ಬರಿಗೆ ಮಾತ್ರ ಹಕ್ಕು ಪತ್ರ ನೀಡಿಲ್ಲ. ಉಳಿದ ಮನೆಗಳಿಗೆ ನೀಡಲಾಗಿದೆ. ನೊಂದ ಮಹಿಳೆ ಆತ್ಮಹತ್ಯೆಗೂ ಮುಂದಾಗಿದ್ದರು ಎಂದು ತಲಪಾಡಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಗ್ರಾಮ ಸಭೆಯಲ್ಲಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು ಕೇಳಿದ ಪ್ರಶ್ನೆಗೆ ಪಂಚಾಯಿತಿ ಸದಸ್ಯರು ಮಾತ್ರವಲ್ಲದೆ ಗ್ರಾಮಸ್ಥರೂ ಧ್ವನಿಗೂಡಿಸಿದರು. ತಲಪಾಡಿಯಲ್ಲಿ ಎಷ್ಟು ಮನೆಗಳಿಗೆ ಹಕ್ಕುಪತ್ರ ನೀಡಲಾಗಿದೆ, ಹಣ ಕಟ್ಟದೆ ಬಾಕಿಯಿರುವ ಮನೆಗಳೆಷ್ಟು? ಎನ್ನುವ ಮಾಹಿತಿ ಕಂದಾಯ ಇಲಾಖೆ ನೀಡಬೇಕು. ನಾಲ್ಕು ಮನೆಗಳ ಪೈಕಿ ಮೂರು ಮನೆಗಳಿಗೆ ಹಕ್ಕುಪತ್ರ ನೀಡಿದ್ದರೂ ಅರ್ಹ ಫಲಾನುಭವಿ ಸುಮಯ್ಯ ಎಂಬವರ ಮನೆಗೇಕೆ ನೀಡಿಲ್ಲ? ಇದರಿಂದ ಮಹಿಳೆ ಸಾಕಷ್ಟು ನೊಂದಿದ್ದಾರೆ ಎಂದು ಕಂದಾಯ ಇಲಾಖೆ ವಿರುದ್ಧ ಹರಿಹಾಯ್ದರು. ಇದಕ್ಕೆ ಧ್ವನಿಗೂಡಿಸಿದ ಪಂಚಾಯಿತಿ ಸದಸ್ಯ ಇಬ್ರಾಹಿಂ ತಲಪಾಡಿ, ಹಕ್ಕುಪತ್ರ ಎಂದರೆ ಅಕ್ರಮ ಮನೆಗಳನ್ನು ಸಕ್ರಮಗೊಳಿಸುವುದಾಗಿದೆ. ಇದಕ್ಕೂ ಮನೆ ನಂಬ್ರ ಬೇಕು ಎಂದರೆ ಅಕ್ರಮ ಮನೆಗಳಿಗೆ ನಂಬ್ರ ಇರ್ತದಾ? ಗ್ರಾಮಕರಣಿಕರು ಇಲಾಖೆಗೆ ಸರಿಯಾದ ಮಾಹಿತಿಯನ್ನೇಕೆ ನೀಡಿಲ್ಲ ಎಂದು ಪ್ರಶ್ನಿಸಿದರು. ದ್ವನಿಗೂಡಿಸಿದ…
UN NETWORKS ಮಂಗಳೂರು: ಬಸ್ ಯಾವ ಮಾರ್ಗದಲ್ಲಿ ಬರುತ್ತಿದೆ, ಎಷ್ಟು ಹೊತ್ತಿಗೆ ಮನೆಯಿಂದ ಹೊರಡಬೇಕು ಎಂಬುದನ್ನು ಮೊಬೈಲ್ನಲ್ಲಿ ನೋಡಿದರೆ ಸಾಕು. ಟಿಕೆಟ್ ಪಡೆಯಲು ಚಿಲ್ಲರೆ ಕೊಡುವ ಸಮಸ್ಯೆಯೂ ಇಲ್ಲ. ಮೊದಲೇ ರೀಚಾರ್ಚ್ ಮಾಡಿದ ಸ್ಮಾರ್ಟ್ ಕಾರ್ಡ್ ಸ್ವೈಪ್ ಮಾಡಿದರಾಯಿತು. ಮಂಗಳೂರು ಸಿಟಿ ಬಸ್ಗಳಲ್ಲಿ ಓಲಾ ಮಾದರಿಯ ‘ಚಲೋ ಆ್ಯಪ್’ ಬರಲಿದ್ದು, ಡಿಜಿಟಲ್ ಟಿಕೆಟಿಂಗ್ ತಂತ್ರಜ್ಞಾನ ಜಾರಿ ಆಗಲಿದೆ. ಇದೀಗ ಪೂರ್ವಭಾವಿಯಾಗಿ 350 ಬಸ್ಗಳಲ್ಲಿ ಜಿಪಿಎಸ್ ಅಳವಡಿಸಲು ಆರಂಭವಾಗಿದೆ. ಫೆಬ್ರವರಿಯಲ್ಲಿ ಸ್ಟೇಟ್ಬ್ಯಾಂಕ್- ಮಂಗಳಾದೇವಿ ಮಾರ್ಗದ (ರೂಟ್ ಸಂಖ್ಯೆ 27) ಐದು ಬಸ್ ಮತ್ತು ಉಳ್ಳಾಲ ಮಾರ್ಗದ (ರೂಟ್ ಸಂಖ್ಯೆ44) 16 ಬಸ್ಗಳಲ್ಲಿ ಪ್ರಾಯೋಗಿಕವಾಗಿ ಚಲೋ ಟಿಕೆಟ್ ಮಷಿನ್ ಬರಲಿದೆ. ಏನಿದು ಚಲೋ ಆ್ಯಪ್? : ಚಲೋ ಆ್ಯಪ್ ಓಲಾ ಕ್ಯಾಬ್ನ ಆ್ಯಪ್ ರೀತಿ ಕಾರ್ಯನಿರ್ವಹಿಸುತ್ತದೆ. ಆ್ಯಪ್ಗೆ ಎಲ್ಲ ಬಸ್ಗಳಲ್ಲಿ ಅಳವಡಿಸಿರುವ ಜಿಪಿಎಸ್ ಸಂಪರ್ಕ ಇರುತ್ತದೆ.ಪ್ರಯಾಣಿಸಬೇಕಾದ ರೂಟ್ ನಂಬರ್ ಅಥವಾ ಬಸ್ ಹೆಸರನ್ನು ಆ್ಯಪ್ನಲ್ಲಿ ನಮೂದಿಸಿದಾಗ ಬಸ್ ಸದ್ಯ ಎಲ್ಲಿದೆ, ಎಷ್ಟು ಹೊತ್ತಿಗೆ ತಾನಿರುವ ಸ್ಥಳಕ್ಕೆ…
UN NETWORKS ಉಳ್ಳಾಲ: ತೊಕ್ಕೊಟ್ಟು ಕಾಪಿಕಾಡಿನಲ್ಲಿ ಸಹೋದರಿಯ ಪತಿಯನ್ನು (ಬಾವನನ್ನು)ಹತ್ಯಗೈದು ವಿಚಾರಾಣಾಧೀನ ಕೈದಿಯಾಗಿ ಬೆಂಗಳೂರಿನ ಜೈಲಿನಲ್ಲಿದ್ದ ಆರೋಪಿ ಡೇನಿಸ್ ಡಿ.ಸೋಜ (78) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಡೆನೀಸ್ ಅವರು ಔಷದಿಗೆ ಹಣ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ಆ. 12ರಂದು ತನ್ನ ಸಹೋದರಿ ಜಾನೆಟ್ ಮತ್ತು ಆಕೆಯ ಪತಿ ಜೋಸೆಫ್ ಅವರಿಗೆ ಕಬ್ಬಿಣ ರಾಡ್ನಿಂದ ಹಲ್ಲೆ ನಡೆಸಿದ್ದರು. ಗಂಬೀರ ಗಾಯಗೊಂಡಿದ್ದ ಜೋಸೆಫ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರೆ, ಸಹೋದರಿ ಜಾನೆಟ್ ಗುಣಮುಖರಾಗಿದ್ದರು.ರಾಡ್ನಿಂದ ಹಲ್ಲೆ ನಡೆಸಿದ ಬಳಿಕ ಉಳ್ಳಾಲ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದ ಡೇನಿಸ್ ಅವರನ್ನು ಮಂಗಳೂರಿನ ಕಾರಾಗೃಹದಲ್ಲಿ ಕೆಲ ಕಾಲ ಇದ್ದ ಬಳಿಕ ಬೆಂಗಳೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಗುತ್ತಿಗೆದಾರರಾಗಿದ್ದ ಡೇನಿಸ್ ಅವರು ಅವಿವಾಹಿತರಾಗಿದ್ದು, ವೃದ್ದಾಪ್ಯದ ಹಿನ್ನಲೆಯಲ್ಲಿ ತನ ಸಹೋದರಿಯ ಕುಟುಂಬಕ್ಕೆ ತನ್ನ ಮನೆ ಬಳಿಯೇ ನಿವೇಶನ ನೀಡಿ ಮನೆ ಕಟ್ಟಲು ಸಹಕರಿಸಿದ್ದರು.
UN NETWORKS ಬೆಂಗಳೂರು : ಮಿಸ್ಬಾಹುಲ್ ಹುದಾ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ಮೀಲಾದ್ ಮೆಹಫಿಲ್ 2019 ಕಾರ್ಯಕ್ರಮ ಎಮ್ ಇ ಸಿ ಟಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಅಬೂಬಕ್ಕರ್ ಉಸ್ತಾದ್ ಎಂಎಫ್ ವಿ ದುಃವಾಶೀರ್ವಚನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ದಕ್ಷಿಣ ಕನ್ನಡ ಇದರ ಅಧ್ಯಕ್ಷ ಎನ್.ಪಿ.ಎಮ್ ಝೈನುಲ್ ,ಆಬಿದೀನ್ ತಂಙಳ್ ಉದ್ಘಾಟಿಸಿದರು. ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ಪ್ರಿನ್ಸಿಪಾಲ್ ನ್ಯಾಯವಾದಿ ಹನೀಫ್ ಹುದವಿ ಮುಖ್ಯ ಪ್ರಭಾಷಣಗೈದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮುಹಮ್ಮದ್ ಹಾಜಿ ನಿರ್ವಹಿಸಿದರು.ವೇದಿಕೆಯಲ್ಲಿ ಅಬ್ದು ಸಮದ್ ದಾರಾನಿ,ಅಸ್ಲಂ ಫೈಝಿ, ಅಲಿ ದಾರಿಮಿ,ಜುನೈದ್ ಬೆಂಗಳೂರು,ಜಾಬಿರ್ ಹಾಜಿ,ಇಬ್ರಾಹಿಂ ಹಾಜಿ ಕತ್ತರ್, ಮುಷ್ತಾಖ್ ಹುದವಿ,ಶಹಜಲ್ ಹುದವಿ ಸುಲೈಮಾನ್ ಹಾಜಿ,ಮುಹಮ್ಮದ್ ಟಿ ಕೆ ,ಖಾಸಿಂ ಹಾಜಿ, ಅಯ್ಯೂಬ್ ಟಿ ಕೆ,ಸಲಾಂ,ಅಝೀಝ್,ಮೊಯ್ದೀನ್ ಇನ್ನಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂರುಲ್ ಹುದಾ ಮದ್ರಸ ವಿದ್ಯಾರ್ಥಿಗಳಿಂದ ಮದ್ ಹ್ ಗೀತೆ ಹಾಗೂ ಭಾಷಣ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಮುಹಮ್ಮದ್ ಅಲಿ…
UN NETWORKS ಉಳ್ಳಾಲ : ಜಿಲ್ಲೆಯಲ್ಲಿ ಇದುವರೆಗೆ ದಾರಿಮೀಸ್ ಅಸೋಸಿಯೇಶನ್ ಉತ್ತಮ ಕಾರ್ಯಕ್ರಮಗಳ ಮೂಲಕ ಮೆಚ್ಚುಗೆ ಪಡೆದಿದೆ. ಅದೇ ರೀತಿ ಮುಸ್ಲಿಂ ಸಮುದಾಯದಲ್ಲಿ ದಾರಿತಪ್ಪುತ್ತಿರುವ ಯುವಕರಿಗೆ ಮಾರ್ಗದರ್ಶನ ನೀಡಿ ಸರಿದಾರಿಗೆ ತರುವ ಪ್ರಯತ್ನ ನಡೆಸಬೇಕು ಎಂದು ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು. ಜಿಲ್ಲಾ ದಾರಿಮೀಸ್ ಅಸೋಸಿಯೇಶನ್ ಇದರ 17ನೇ ವಾರ್ಷಿಕೋತ್ಸವ ಪ್ರಯುಕ್ತ ಉಪ್ಪಿನಂಗಡಿಯ ಕರ್ವೇಲ್ ನಲ್ಲಿ ನ.31ರಂದು ನಡೆಯಲಿರುವ ಶೈಖುನಾ ಸಂಶುಲ್ ಉಲಮಾ ಹಾಗೂ ಅಬ್ದುಲ್ ಜಬ್ಬಾರ್ ಉಸ್ತಾದ್ ಅನುಸ್ಮರಣಾ ಕಾರ್ಯಕ್ರಮದ ಪ್ರಚಾರಕ್ಕೆ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ ಚಾಲನೆ ನೀಡಿ ಮಾತನಾಡಿದರು.ಇತ್ತೀಚಿಗೆ ನಮ್ಮೆಲ್ಲರನ್ನು ಅಗಲಿರುವ ಶೈಖುನಾ ಜಬ್ಬಾರ್ ಉಸ್ತಾದ್ ಅವರು ಪ್ರವಾದಿ (ಸ) ಅವರ ನಿರ್ದೇಶನದಂತೆ ಜೀವನ ಸಾಗಿಸಿರುವುದರಿಂದ ಅವರ ಹೆಸರು ಜನರ ಮನದಲ್ಲಿ ಶಾಶ್ವತವಾಗಿ ನೆಲೆ ನಿಂತಿದೆ. ಈ ವರ್ಷ ಸಂಶುಲ್ ಉಲಮಾ ಜೊತೆ ಜಬ್ಬಾರ್ ಉಸ್ತಾದ್ ಹೆಸರಲ್ಲೂ ಅನುಸ್ಮರಣೆ ದಾರಿಮೀಸ್ ಅಸೋಸಿಯೇಶನ್ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನ್ ಟ್ರಸ್ಟ್ ಜ.ಕಾರ್ಯದರ್ಶಿ…
UN NETWORKS ಅಡ್ಯಾರು: ಗುಣ ಶ್ರೀ ವಿದ್ಯಾಲಯ ಅಡ್ಯಾರು ಇಲ್ಲಿ ವಾರ್ಷಿಕ ಕ್ರೀಡೋತ್ಸವ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ತ್ಯಾಗಂ ಹರೇಕಳ ಇವರು ಇವತ್ತು ಅದೆಷ್ಟೋ ವಿದ್ಯಾಸಂಸ್ಥೆಗಳು ವಾರ್ಷಿಕೋತ್ಸವವನ್ನು ಮಾಡುತ್ತವೆ. ಆದರೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹವನ್ನು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸುವ ಕ್ರೀಡೋತ್ಸವವನ್ನು ಸಂಘಟನೆ ಮಾಡದಿರುವುದು ದುರಂತವೇ ಸರಿ. ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಅಭಿವೃದ್ಧಿ ಹೊಂದುವಲ್ಲಿ ಕ್ರೀಡೆ ಬಹಳ ಮುಖ್ಯ. ವಿದ್ಯಾರ್ಥಿಗಳಿಗೆ ಅದೆಷ್ಟೋ ಶಾಲೆಗಳು ಮೈದಾನವಿಲ್ಲ ಎನ್ನುವ ಕಾರಣ ತೋರಿಸಿ, ದೈಹಿಕ ಶಿಕ್ಷಣ ಶಿಕ್ಷಕರನ್ನೂ ನೇಮಿಸದೇ, ಯಾವುದೇ ಕ್ರೀಡೆಗೆ ಪೂರಕವಾದ ಚಟುವಟಿಕೆಗಳನ್ನು ಮಾಡದೇ ಕೇವಲ ಪಠ್ಯಕ್ಕೆ ಹೆಚ್ಚಿನ ಒತ್ತನ್ನು ಕೊಡುವುದನ್ನು ಕಾಣುತ್ತೇವೆ. ಇದರಲ್ಲಿ ನಾವೆಲ್ಲರೂ ಪರಿವರ್ತನೆಯನ್ನು ಹೊಂದಬೇಕು ಎಂದರು. ಅಧ್ಯಕ್ಷತೆಯನ್ನು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಗಂಗಾಧರ್ ಮಾಣಿಯವರು ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಇಟ್ಟುಕೊಳ್ಳಬೇಕು. ಗುರಿ ಈಡೇರಲು ಸದಾ ಪ್ರಯತ್ನವನ್ನು ಮಾಡಬೇಕು.ಇದರಿಂದ ಯಶಸ್ಸು ಕಾಣಬಹುದು ಎಂದರು.…
UN NETWORKS ಉಳ್ಳಾಲ: ಡ್ರೈವಿಂಗ್ ಶಾಲೆಯೊಂದರ ಶಿಕ್ಷಕ ದಂಪತಿ ಮೇಲೆ 50 ಮಂದಿಯ ತಂಡವೊಂದು ದಾಳಿ ನಡೆಸಿ ಕಾರು ಪುಡಿಗೈದು ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಎದುರುಗಡೆ ಸೋಮವಾರ ಸಂಜೆ ವೇಳೆ ಸಂಭವಿಸಿದೆ. ಪ್ರಕರಣ ಸಂಬಂಧ ನಾಲ್ವರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಡಿಪು ಸ್ಮಾರ್ಟ್ ಮೋಟಾರ್ ಡ್ರೈವಿಂಗ್ ಶಾಲೆಯ ಥೋಮಸ್(45) ಎಂಬವರಿಗೆ ಗಂಭೀರ ಹಲ್ಲೆ ನಡೆಸಲಾಗಿದೆ. ಘಟನೆ ವಿವರ: ಥೋಮಸ್ ಮತ್ತು ಅವರ ಪತ್ನಿ ಕಾರನ್ನು ಚಲಾಯಿಸುತ್ತಿದ್ದ ಸಂದರ್ಭ, ಅದೇ ಕಾರಿನಲ್ಲಿ ಕಾರು ಕಲಿಯಲು ಬಂದಿದ್ದ ಮುಸ್ಲಿಂ ಮಹಿಳೆಯೊಬ್ಬರಿದ್ದರು. ಇದರ ಬಗ್ಗೆ ಕೆಂಗಣ್ಣು ಬೀರಿದ ನೈತಿಕ ಪೊಲೀಸರ ತಂಡವೊಂದು ಕಾರನ್ನು ನಾಟೆಕಲ್ ಕಣಚೂರು ಆಸ್ಪತ್ರೆ ಎದುರುಗಡೆ ತಡೆದಿದ್ದಾರೆ. ಬಳಿಕ ಕಲ್ಲಿನಿಂದ ಕಾರಿನ ಗಾಜು ಪುಡಿಗೈದು ಹಾನಿಗೊಳಿಸಿದ್ದಾರೆ. ಕಾರು ಚಲಾಯಿಸುತ್ತಿದ್ದ ಥೋಮಸ್ ಅವರಿಗೆ ಗಂಭೀರ ಹಲ್ಲೆ ನಡೆಸಿ ಪತ್ನಿಗೂ ದಾಳಿ ನಡೆಸಿದ್ದಾರೆ. ಸುಮಾರು 50 ಮಂದಿಯ ತಂಡ ಕೃತ್ಯದಲ್ಲಿ ಭಾಗಿಯಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರಿನಲ್ಲಿ…
UN NETWORKS ತಲಪಾಡಿ: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ದ ಮಂಗಳೂರಿನಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಂಗಳೂರಿನ ತಲಪಾಡಿಯಿಂದ ಪಂಪ್ ವೆಲ್ ವರೆಗೆ ಪಾದಯಾತ್ರೆ ಎಂಟು ವರ್ಷಗಳಿಂದ ಪೂರ್ಣವಾಗದ ಪಂಪ್ ವೆಲ್ ಮತ್ತು ತೊಕ್ಕೊಟ್ಟು ಫ್ಲೈಓವರ್ ಸಂಸದ ನಳಿನ್ ಕುಮಾರ್ ಬೇಜವಾಬ್ದಾರಿ ಖಂಡಿಸಿ ಪಾದಯಾತ್ರೆ ಸಚಿವ ಯು.ಟಿ.ಖಾದರ್ ರಿಂದ ಪಾದಯಾತ್ರೆಗೆ ಚಾಲನೆ ಸಂಜೆ ಪಂಪ್ ವೆಲ್ ನಲ್ಲಿ ಸಮಾರೋಪಗೊಳ್ಳಲಿರುವ ಪಾದಯಾತ್ರೆ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿ ಕಾಂಗ್ರೆಸ್ ನಾಯಕರು ಭಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯುತ್ತಿರುವ ಪಾದಯಾತ್ರೆ. ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಸಿದ್ದ ಹೇಳಿಕೆ ವಿಚಾರ ಮಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿಕೆ ಖಂಡಿತವಾಗಿಯೂ ಇಲ್ಲ, ಸಿಎಂ, ಡಿಸಿಎಂ, ಸಿದ್ದರಾಮಯ್ಯ ಎಲ್ಲರೂ ಇರೋ ಸಮನ್ವಯ ಸಮಿತಿ ಇದೆ.ಈ ಸಮನ್ವಯ ಸಮಿತಿಯಿಂದ ಸರ್ಕಾರ ಚೆನ್ನಾಗಿ ನಡೆಯುತ್ತಿದೆ.ಎಲ್ಲರೂ ಪ್ರೀತಿ ವಿಶ್ವಾಸದಿಂದ ಟೀಮ್ ವರ್ಕ್ ಆಗಿ ಕೆಲಸ ಮಾಡುತ್ತಿದ್ದೇವೆ ಹೀಗಾಗಿ ನಮ್ಮಲ್ಲಿ ಯಾವುದೇ ಗೊಂದಲಗಳು ಇರಲು ಸಾಧ್ಯವೇ ಇಲ್ಲ .ಈ ವಿಚಾರದಲ್ಲಿ ಸಿಎಂಗೆ ಯಾವುದೇ…
UN NETWORKS ಸೋಮೇಶ್ವರ: ಹಿಂದೂ ಯುವ ಸೇನೆ , ಪಾಂಚಜನ್ಯ ಶಾಖೆ ತೊಕ್ಕೊಟ್ಟು ಇದರ ವತಿಯಿಂದ ಸೋಮೇಶ್ವರ ದೇವಸ್ಥಾನದ ಅಶ್ವತ ಕಟ್ಟೆಯಲ್ಲಿ ಜೋತಾಡಿಸಿದ ಅಯ್ಯಪ್ಪ ಮಾಲೆಗಳನ್ನು ಹಾಗು ಹಳೆಯ ದೇವರ ಫೊಟೋಗಳನ್ನು ತೆಗೆದು ನೇತ್ರಾವತಿ ನದಿಯಲ್ಲಿ ವಿಸರ್ಜಿಸುವ ಕೆಲಸ ಆದಿತ್ಯವಾರ ಬೆಳಿಗ್ಗೆ ನಡೆಯಿತು. ಕಾರ್ಯಕ್ರಮದಲ್ಲಿ ಸೋಮೇಶ್ವರ ಸೋಮನಾಥ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿಶ್ವನಾಥ ಗಟ್ಟಿ ವಗ್ಗ ಪಾಲ್ಗೊಂಡು, ಕಠಿನ ವೃತಾಚರಣೆಯಲ್ಲಿ ಅಯ್ಯಪ್ಪ ಮಾಲೆದರಿಸಿ ನಂತರ ಅದನ್ನು ತೆಗೆದು ಪವಿತ್ರವಾದ ಅಶ್ವತ ಮರದಲ್ಲಿ ಜೋತಾಡಿಸುವುದು ನಮ್ಮ ನಂಬಿಕೆಗೆ ಅಪಚಾರ, ಹಾಗೆಯೇ ಮನೆಯಲ್ಲಿ ಪೂಜಿಸಿದ ದೇವರ ಫೊಟೋಗಳನ್ನು ಕಟ್ಟೆಯಲ್ಲಿ ಬಿಟ್ಟು ಹೋಗುವುದರಿಂದ ನಮಗೆ ನಾವೇ ಗೃಹಚಾರ ತಂದುಕೊಂಡ ಹಾಗೆ, ಅದನ್ನು ಹರಿಯುವ ನದಿಯಲ್ಲಿ ಜಲಸ್ತಂಬನಗೊಳಿಸಿದರೆ ಮುಕ್ತಿ ಸಿಗುತ್ತದೆ ಎಂದು ತಿಳಿಸಿ ಆ ಕಾರ್ಯವನ್ನು ತೊಕ್ಕೊಟ್ಟು ಹಿಂದೂ ಯುವ ಸೇನೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ಅದ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಪ್ರವೀಣ್ ಎಸ್.ಕುಂಪಲ, ಪುರುಷೋತ್ತಮ ಕಲ್ಲಾಪು, ಹಿಂದೂ ಯುವ ಸೇನೆ…

