UN NETWORKS ಬಗಂಬಿಲ : ಬಗಂಬಿಲ ಶ್ರೀ ವೈದ್ಯನಾಥೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವದ ಮೂಲಕ ವೈದ್ಯನಾಥನಗರದಲ್ಲಿ ಯುವಶಕ್ತಿ ಜಾಗೃತವಾಗಿದ್ದು, ಹೀಗೆ ಎಲ್ಲೆಡೆಯಲ್ಲಿಯೂ ಧರ್ಮ ಸಂಘಟನೆಯಲ್ಲಿ ತೊಡಗಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. ಬಗಂಬಿಲ ಶ್ರೀ ವೈದ್ಯನಾಥೇಶ್ವರ ಭಜನಾ ಮಂದಿರದ ಹನ್ನೊಂದನೇ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆಗೆ ಚಾಲನೆ ನೀಡಿ ಮಾತನಾಡಿ ಭಜನೆಯಲ್ಲಿ ಸಾತ್ವಿಕ ಭಾವ ಇದೆ. ಭಜನಾ ಮಂದಿರಗಳಿಂದ ಧರ್ಮದ ಅನುಷ್ಠಾನ ಸಾಧ್ಯವಾಗುತ್ತದೆ ಎಂದು ನುಡಿದರು. ಮಂಗಳೂರಿನ ನ್ಯಾಯವಾದಿ ಶಿವರಾಮ್ ಮಣಿಯಾಣಿ ಸುಸಂಸ್ಕೃತ ಸಮಾಜಕ್ಕೆ ಧಾರ್ಮಿಕ ನೆಲೆಗಟ್ಟು ಅವಶ್ಯಕ. ನಮ್ಮ ಸಂಸ್ಕೃತಿ-ಸಂಪ್ರದಾಯಗಳಿಗೆ ದಾಳಿಯಾಗಲು ಆಸ್ಪದ ನೀಡಬಾರದು ಎಂದು ತಿಳಿಸಿದರು.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿಶ್ರಾಂತ ಮುಖ್ಯ ವ್ಯವಸ್ಥಾಪಕ ಕೆ. ರಾಜಾರಾಮ್ ಭಟ್, ಕೆ. ಗೀತಾಲಕ್ಷ್ಮಿ ಬಗಂಬಿಲ, ದೇರಳಕಟ್ಟೆ ಕರ್ಣಾಟಕ ಬ್ಯಾಂಕಿನ ಶಾಖಾ ಪ್ರಬಂಧಕ ಸಂದೀಪ್ ಕುಮಾರ್ ಪಿ, ಸಾರ್ವಜನಿಕ ಶ್ರೀ ಕೃಷ್ಣ ಜಯಂತ್ಯುತ್ಸವ ಸಮಿತಿ ಅತ್ತಾವರ ಉಪಾಧ್ಯಕ್ಷ ಚಂದ್ರನಾಥ್…
Author: UllalaVani
UN NETWORKS ಉಳ್ಳಾಲ: ನಾವು ಕೆಲಸಕ್ಕೆ ಜಾಸ್ತಿ ಒತ್ತುಕೊಡಬೇಕಾಗಿದೆಯೇ ಹೊರತು ಮಾತಿಗಲ್ಲ. ಆ ಕೆಲಸ ಉಳ್ಳಾಲ ಹಳೆಕೋಟೆ ಶಾಲೆಯಲ್ಲಿ ಆಗಿದೆ. ತಾಜ್ಯವನ್ನು ಸಂಗ್ರಹಣೆ ಮಾಡುವ ಮೂಲಕ ದೇಶದ ಗಮನ ಸೆಳೆಯುವಂತಹ ಕೆಲಸ ನಡೆದಿದೆ. ಯಾರೂ ಮಾಡದ ಕೆಲಸ ಹಳೆಕೋಟೆಯಲ್ಲಿ ವಿದ್ಯಾರ್ಥಿ ಗಳಿಂದ ಆಗಿದೆ. ಇಂತಹ ಕೆಲಸ ಎಲ್ಲೂ ಆಗಿಲ್ಲ. ಈ ಕೆಲಸ ದೇಶದ ಗಮನ ಸೆಳೆಯುತ್ತದೆ. ಇದರ ಎದುರು ನಮಗೆ ಮಾತನಾಡುವಂತಹ ಶಕ್ತಿ ಇಲ್ಲ. ರಾಜ್ಯಕ್ಕೆ ಗೌರವ ತರುವಂತಹ ಕೆಲಸ ಇದಾಗಿದೆ. ಇದನ್ನು ನಾವು ಸದಾ ಗೌರವಿಸುತ್ತೇವೆ ಎಂದು ದ.ಕ. ಜಿಲ್ಲಾ ಸ್ವಚ್ಛತಾ ರಾಯಬಾರಿ ಶೀನ ಶೆಟ್ಟಿ ಹೇಳಿದರು. ಅವರು ಹಳೆಕೋಟೆ ಶಾಲೆಯಲ್ಲಿ ಸಯ್ಯದ್ ಮದನಿ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ತ್ಯಾಜ್ಯ ಸಂಗ್ರಹ ಮತ್ತು ಜಿಲ್ಲಾಧಿಕಾರಿಯವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.ಉಳ್ಳಾಲ ದರ್ಗಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ತ್ವಾಹಾ ಮಾತನಾಡಿ, ಪ್ರಸಕ್ತ ತ್ಯಾಜ್ಯ ಸಂಪೂರ್ಣ ನಿವಾರಣೆ ಮತ್ತು ಸ್ವಚ್ಛತೆ ಕಾಪಾಡುವ ಕೆಲಸ ಉಳ್ಳಾಲದಲ್ಲಿ ಆಗುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ತ್ಯಾಜ್ಯ ಸಂಗ್ರಹ ಮಾಡಿ…
UN NETWORKS ಉಳ್ಳಾಲ: ದೊಡ್ಡ ಕೆಲಸವಾದರೂ, ಸಣ್ಣ ಕೆಲಸವಾದರೂ ಸರಿ, ಅದನ್ನು ಪ್ರೀತಿಯಿಂದ ಮಾಡಬೇಕು. ಆಗ ಮಾತ್ರ ಯಶಸ್ಸು ನಮಗೆ ಸಿಗಲು ಸಾಧ್ಯ. ಇದನ್ನು ನೋಡಿ ಮತ್ತೊಬ್ಬರು ಕಲಿಯುತ್ತಾರೆ. ಇದರಿಂದ ಸ್ವಚ್ಛತೆ ಉಳಿಯುತ್ತದೆ. ಶಾಲೆಯ ಸುತ್ತ ಮೀನು ವಾಸನೆ ಬಂದರೂ ಟಿಪ್ಪು ಸುಲ್ತಾನ್ ಶಾಲೆ ಸ್ವಚ್ಛವಾಗಿದೆ. ಇಂತಹ ಕೆಲಸಗಳನ್ನು ಮಾಡುವ ಮೂಲಕ ಭಾವೀ ಪ್ರಜೆಗಳಾಗಿ ಉನ್ನತ ಹಂತಕ್ಕೆ ವಿದ್ಯಾರ್ಥಿಗಳು ಬೆಳೆಯಲಿ ಎಂದು ದ.ಕ. ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಹೇಳಿದರು. ಅವರು ಉಳ್ಳಾಲದ ಟಿಪ್ಪು ಸುಲ್ತಾನ್ ಶಾಲೆಯಲ್ಲಿ ಬುಧವಾರ ನಡೆದ ಜಿಲ್ಲಾಧಿಕಾರಿಯೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಸ್ವಚ್ಛತೆಯ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.ಉಳ್ಳಾಲ ಪೌರಾಯುಕ್ತೆ ವಾಣಿ ಆಳ್ವ ಮಾತನಾಡಿ, ಉಳ್ಳಾಲ ನಗರ ಸಭೆ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಮುಂದಿನ ಪೀಳಿಗೆಗೆ ಯಾವ ರೀತಿಯ ಯೋಜನೆಗಳನ್ನು ಹಾಕಿಕೊಳ್ಳಬೇಕು ಎಂಬುದಕ್ಕೆ ವಿದ್ಯಾರ್ಥಿಗಳಿಂದಲೇ ಬೆಂಬಲ ಸಿಕ್ಕಿದೆ. ಉಳ್ಳಾಲದಲ್ಲಿರುವ 48 ಶಾಲೆಗಳಿಗೆ ಕೋಟೆಪುರ ಮಾದರಿ ಶಾಲೆಯಾಗಿ ಬಿಟ್ಟಿದೆ. ಸ್ವಚ್ಚತೆ ಹೇಗಿರಬೇಕೆಂದು ವಿದ್ಯಾರ್ಥಿಗಳೇ ತೋರಿಸಿಕೊಟ್ಟಿದ್ದಾರೆ. ಅವರನ್ನು…
UN NETWORKS ಕಿನ್ಯ: ನಮ್ಮ ಸಂಸ್ಕೃತಿ ಉಳಿಯಬೇಕಾದರೆ ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಕಲಿಸಬೇಕು. ಅವರು ಸಣ್ಣ ಪ್ರಾಯದಲ್ಲಿ ಒಳ್ಳೆಯ ಸಂಸ್ಕೃತಿ ಕಲಿತರೆ ಮುಂದಿನ ನಮ್ಮ ಸಮಾಜದಲ್ಲಿ ಉತ್ತಮ ಪ್ರಜೆಗಳಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಾಸರಗೋಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣು ಭಟ್ ಅಭಿಪ್ರಾಯಪಟ್ಟರು. ಕಿನ್ಯ ಕೇಶವ ಶಿಶು ಮಂದಿರದ 30ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಶನಿವಾರ ಉದ್ಘಾಟಿಸಿ ಮಾತನಾಡಿದರು . ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೋಮಯಾಜಿ ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ನ ಮೆನೆಜಿಂಗ್ ಡೈರೆಕ್ಟರ್ ಬಿ. ರಘುನಾಥ ಸೋಮಯಾಜಿ ಮಾತನಾಡಿ ಈಗಿನ ಯುವಕರು, ಮಕ್ಕಳು ಬೇರೆ ದೇಶಕ್ಕೆ ಹೋಗಿ ಕಲಿಯುತ್ತಿದ್ದಾರೆ. ನಮ್ಮ ದೇಶದಲ್ಲೇ ಒಳ್ಳೆಯ ಕೆಲಸಗಳಿವೆ. ಇಲ್ಲಿಯೇ ಶಿಕ್ಷಣ ಪಡೆದರೆ ಇಲ್ಲಿಯೇ ಒಳ್ಳೆಯ ಕೆಲಸ ಮಾಡಬಹುದು ಎಂದರು.ಮಂಗಳೂರು ವಿಭಾಗ ಕುಟುಂಬ ಪ್ರಭೋದನ ಪ್ರಮುಖ್ ಗಜಾನನ ಪೆ` ಮುಖ್ಯ ಪ್ರಭಾಷಣ ಮಾಡಿದರು. ನರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಉತ್ತಮ ಸಂದೇಶ ನೀಡಿದರು. ಮಂಗಳೂರು ಭ್ರಷ್ಟಾಚಾರ…
UN NETWORKS ಕುಂಪಲ: ಕುಂಪಲ ನಿಸರ್ಗ ಲೇಔಟ್ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಮಯೂರ ವಾಹನ ಯಕ್ಷಗಾನ ನಾಟಕ ಸಭಾ ಸೂಡ ಕಾರ್ಕಳದ ಭಾಗವತ ಹಾಗೂ ಮೇಳದ ಸಂಚಾಲಕ ಹರೀಶ್ ಶೆಟ್ಟಿ ಸೂಡ, ರಂಗನಟ ವಿಜಯ ಕುಮಾರ್ ಶೆಟ್ಟಿ ಮೈಲೋಟ್ಟು ಮತ್ತು ಯಕ್ಷಗಾನ ಹಾಸ್ಯ ಕಲಾವಿದರನ್ನು ಸನ್ಮಾನಿಸಲಾಯಿತು. ಬಯಲಾಟ ಸಮಿತಿಯ ಗೌರವ ಅಧ್ಯಕ್ಷ ಕೇಶವದಾಸ್ ಬಗಂಬಿಲ, ಸಮಿತಿಯ ಅಧ್ಯಕ್ಷ ಹರೀಶ್ ಕೊಲೆಪಾಡಿ, ಪ್ರಸನ್ನ ಭಟ್, ಜೀವನ್ ಪೂಜಾರಿ, ರಮನಾಥ ಪೂಂಜಾ, ಪ್ರಶಾಂತ್, ರಾಮಚಂದ್ರ ಬಲ್ಲಾಳ್, ಹರೀಶ್ ಪೂಜಾರಿ, ಚಂದ್ರಶೇಖರ್ ಗೌಡ, ದೇವ್ದಾಸ್, ಲಕ್ಷ್ಮೀ ನಾರಾಯಣ ಕೆ, ನಿತೇಶ್, ದೀಕ್ಷಿತ್, ನಂದನ್, ಪ್ರವೀಣ್ ಪೂಜಾರಿ ಹಾಗೂ ಪ್ರದೀಪ್ ಹೆಗ್ಡೆ ಉಪಸ್ಥಿತರಿದ್ದರು.
UN NETWORKS ಕುಂಪಲ: ಕುಂಪಲ ಗೆಳೆಯರ ವತಿಯಿಂದ ದ.ಕ. ಜಿಲ್ಲಾ ಅಮೆಚೂರ್ ಕಬ್ಬಡ್ಡಿ ಎಸೋಸಿಯೇಶನ್ನ ಸಹಯೋಗದಲ್ಲಿ 21ವರ್ಷದ ವಯೋಮಾನದ ಒಳಗಿನ ಪುರುಷರ ಜಿಲ್ಲಾ ಮಟ್ಟದ ಪ್ರೊ ಮಾದರಿಯ ಮ್ಯಾಟ್ ಕಬ್ಬಡ್ಡಿ ಪಂದ್ಯಾಟ ಕುಂಪಲ ಮೂರುಕಟ್ಟದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ಉದ್ಯಮಿ ಜಯಂತ್ ಕೊಂಡಾಣ, ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಪ್ರಕಾಶ್ ಕುಂಪಲ, ವಿನೋದ್ ಕುಂಪಲ, ಉದ್ಯಮಿ ಹರೀಶ್ ಮೂರುಕಟ್ಟ, ಶರತ್ ಕುಮಾರ್, ಸುರೇಶ್ ಸಾಲಿಯಾನ್, ಚಂದ್ರಹಾಸ್ ಮೂರುಕಟ್ಟ, ಅಶೋಕ್ ಕುಂಪಲ, ವೆಂಕಟಗಿರೀಶ್ ಕುಂಪಲ, ಪುರಸಭೆ ಸದಸ್ಯ ರವಿಚಂದ್ರ ಗಟ್ಟಿ, ವಿನೋದ್ ಗಟ್ಟಿ ಕುಂಪಲ, ಸಾಗರ್ ಕುಂಪಲ, ಕಿಶೋರ್ ಡಿ.ಕೆ, ಲಿಖಿತ್ ಕುಂಪಲ, ಚೇತನ್ ಸನಿಲ್, ಚಂದ್ರಹಾಸ್ ಮಿತ್ರನಗರ, ನವಾಝ್ ಮೊಂಟುಗೋಳಿ ಉಪಸ್ಥಿತರಿದ್ದರು.40ತಂಡಗಳು ಭಾಗವಹಿಸಿದ ಈ ಕಬ್ಬಡ್ಡಿ ಪಂದ್ಯಾಟದಲ್ಲಿ ವಿಕಾಸ್ ಪದವಿಪೂರ್ವ ಕಾಲೇಜು ಪ್ರಥಮ, ಆಝಾದ್ ಕಿನ್ಯ ದ್ವಿತೀಯ, ಆಳ್ವ ಫ್ರೆಂಡ್ ಪಿಲಾರ್ ತೃತೀಯ, ದುರ್ಗಾಪರಮೇಶ್ವರೀ ತಲಪಾಡಿ ಚತುರ್ಥ ಸ್ಥಾನ ಪಡೆಯಿತು. ವಿಕಾಸ್ ಕಾಲೇಜಿನ ಶ್ರೇಯಸ್…
UN NETWORKS ಉಳ್ಳಾಲ: SKSSF ದೇರಳಕಟ್ಟೆ ಶಾಖೆಯ ವತಿಯಿಂದ ಗ್ರೀನ್ ಗ್ರೌಂಡ್ ಮದರಸ ವಠಾರದಲ್ಲಿ ಸಂಶುಲ್ ಉಲಮಾ ಮೌಲಿದ್ ವಾರ್ಷಿಕ ಹಾಗೂ ಮಿತ್ತಬೈಲ್ ಉಸ್ತಾದರ ಅನುಸ್ಮರಣಾ ಸಂಗಮ ನಡೆಯಿತು. ಸಯ್ಯದ್ ಮದನಿ ಅರಬಿಕ್ ಕಾಲೇಜು ಪ್ರಿನ್ಸಿಪಾಲ್,ಶೈಖುನಾ ಉಸ್ಮಾನ್ ಫೈಝಿ ರವರ ಆದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯ್ಯದ್ ಅಮೀರ್ ತಂಗಳ್ ಮೌಲಿದ್ ಮಜ್ಲಿಸ್ ನೇತೃತ್ವ ವಹಿಸಿದರು.ದೇರಳಕಟ್ಟೆ ಬದ್ರಿಯಾ ಜುಮಾ ಮಸ್ಜಿದ್ ಮುದರ್ರಿಸ್ ಬಹು ಶರೀಫ್ ಅರ್ಶದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಹು ಇಬ್ರಾಹಿಂ ಬಾಖಾವಿ ಉಸ್ತಾದ್ ಕೆ.ಸಿ ರೋಡ್, ಎಸ್ ಕೆ.ಎಸ್.ಎಸ್.ಎಫ್ ಜಿಲ್ಲಾಧ್ಯಕ್ಷರಾದ ಬಹು ಖಾಸಿಂ ದಾರಿಮಿ, ಮಿತ್ತಬೈಲ್ ಉಸ್ತಾದರ ಸುಪುತ್ರ ಬಹು ಇರ್ಷಾದ್ ದಾರಿಮಿ. ಹಾಫಿಲ್ ಝೈನ್ ಸಖಾಫಿ. ಅನುಸ್ಮರಣಾ ಪ್ರಭಾಷಣವನ್ನು ನಡೆಸಿದರು.ಹಾಗೂ ಕೀಚೇರಿ ಅಬ್ದುಲ್ ಗಫೂರ್ ಮೌಲವಿ ಮುಖ್ಯ ಪ್ರಭಾಷಣಗೈದರು.ತಹ್ಲೀಲ್ ಹಾಗೂ ದುಆ ಮಜ್ಲಿಸ್ ಗೆ ಬಹು ಸಯ್ಯದ್ ಹಾರಿಸಲಿ ಶಿಹಾಬ್ ತಂಗಳ್ ಪಾಣಕ್ಕಾಡ್ ನೇತೃತ್ವ ವಹಿಸಿದರು.ಕಾರ್ಯಕ್ರಮದಲ್ಲಿ ದೇರಳಕಟ್ಟೆ ಮದರಸ ಮ್ಯಾನೇಜ್ಮೆಂಟ್ ಅಧ್ಯಕ್ಷರಾದ ಡಿ. ಇಸ್ಮಾಯಿಲ್ ಹಾಜಿ.ದೇರಳಕಟ್ಟೆ ಎಜುಕೇಷನಲ್ & ಚಾರೀಟೇಬಲ್ ಟ್ರಸ್ಟ್…
UN NETWORKS ದೇರಳಕಟ್ಟೆ: ನಿಟ್ಟೆ ಉಷಾ ಇನ್ಸಿಟ್ಯೂಟ್ ಆಫ್ ನರ್ಸಿಂಗ್ ಸಾಯನ್ಸ್, ನಿಟ್ಟೆ ಮಕ್ಕಳ ಶುಶ್ರೂಷ ವಿಭಾಗದ ವತಿಯಿಂದ ಎಸಿಸ್ಮೆಂಟ್ ರಿಸಸಿಟೇಷನ್ ಆ್ಯಂಡ್ ಸ್ಟೆಬಿಲೈಜೇಷನ್ ಎಂಬ ರಾಜ್ಯಮಟ್ಟದ ಕಾರ್ಯಗಾರ ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಚಿಂತನ ಸೆಮಿನಾರ್ ಹಾಲ್ನಲ್ಲಿ ನಡೆಯಿತು. ಡಾ. ಸಂದೀಪ್ ರೈ ಕಾರ್ಯಕ್ರಮ ಉದ್ಘಾಟಿಸಿದರು.ಮಕ್ಕಳ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಸಂದೀಪ್ ರೈ, ಕೆ.ಎಂ.ಸಿ ವೀಕ್ಷಕರಾದ ಪ್ರೊ. ಶಾಂತಿ ಎಸ್., ಕಾರ್ಯಗಾರ ಸಂಯೋಜಕಿ ಸುಜಾತ ಆರ್., ಕಾರ್ಯದರ್ಶಿ ಜೀವಿತಾ ಆಳ್ವ, ಉಪನ್ಯಾಸಕಿ ಹರ್ಷಾ ತೋಮಸ್, ಸಂಪನ್ಮೂಲ ವ್ಯಕ್ತಿಗಳಾಗಿ ನಿಟ್ಟೆ ಮಕ್ಕಳ ಶುಶ್ರೂಷ ವಿಭಾಗದವರು ಉಪಸ್ಥಿತರಿದ್ದರು.ಬೆನಿಟಾ ಸನ್ನಿ ಕಾರ್ಯಕ್ರಮ ನಿರೂಪಿಸಿದರು.
UN NETWORKS ಉಳ್ಳಾಲ: ಉಳ್ಳಾಲ ನಗರದ ವಿವಿಧ ರಸ್ತೆ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಳ್ಳಾಲ ಒಳಪೇಟಿಯಿಂದ ನೇರವಾಗಿ ಮಂಚಿಲಕ್ಕೆ ಸಂಪರ್ಕಿಸುವ ರಸ್ತೆ ಹಾಗೂ ವಿವಿಧ ರಸ್ತೆ ಕಾಮಗಾರಿ ಕುರಿತು ಗುತ್ತಿಗೆದಾರರೊಂದಿಗೆ ಚರ್ಚಿಸಿದರು. ಲೋಕೋಪಯೋಗಿ ಸಹಾಯಕ ಎಂಜಿನಿಯರ್ ರವಿ ಕುಮಾರ್, ನಗರಸಭೆ ಮಾಜಿ ಸದಸ್ಯ ಮುಸ್ತಾಫ ಅಬ್ದುಲ್ಲಾ, ದಿನೇಶ್ ರೈ ನಗರಸಭೆ ಕೌನ್ಸಿಲರ್ ಯು.ಎ ಇಸ್ಮಾಯಿಲ್, ಅಶ್ರಫ್ ಮಾಸ್ತಿಕಟ್ಟೆ, ಸ್ವಪ್ನಾ ಹರೀಶ್, ವೀಣಾ ಡಿಸೋಜಾ, ಬಾಝಿಲ್ ಡಿಸೋಜ, ಅಯೂಬ್ ಮಂಚಿಲ, ಸ್ಥಳೀಯರಾದ ಯು.ಎಂ. ಜಬ್ಬಾರ್, ಗುತ್ತಿಗೆದಾರ ಅಹಮ್ಮದ್ ಬಾವಾ ಕೊಟ್ಟಾರ, ಅಯೂಬ್ ಮಂಚಿಲ, ರಾಜು ಬಂಡಸಾಲೆ, ಇಸ್ಮಾಯಿಲ್ ಸೀದಿಯಬ್ಬ, ದೀಪಕ್ ಪಿಲಾರ್, ಇಬ್ರಾಹಿಂ ಹೆಜಮಾಡಿ, ಎಂಜಿನಿಯರುಗಳಾದ ಅನ್ಸಾರ್, ಮಜೀದ್ ಹಾಗೂ ಅಫ್ರೀದ್ ಹುಸೈನ್ ಉಪಸ್ಥಿತರಿದ್ದರು.
UN NETWORKS ದೇರಳಕಟ್ಟೆ: ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿವಿ ಔಷಧೀಯ ವಿಭಾಗಕ್ಕೆ ಸಂಬಂಧಿಸಿದಂತೆ ಮೆಡಿಟೆಕ್ ಇಂಡಿಯಾದ ಅಂಗ ಸಂಸ್ಥೆಯಾದ ಮೆಡಾರ್ಗೊನಿಕ್ಸ್ ಪ್ರೈ. ಲಿ. ಸಂಸ್ಥೆಯ ಜೊತೆಗೆ ಮಂಗಳವಾರ ಒಡಂಬಡಿಕೆ ಮಾಡಿಕೊಂಡಿದ್ದು ಉಭಯ ಸಂಸ್ಥೆಗಳ ಪ್ರಮುಖರು ಸಹಿ ಹಾಕಿದರು. ಮಂಗಳೂರಿನ ಉದ್ಯಮಿ ಪ್ರಮೋದ್ ಹೆಗ್ಡೆ ಅವರು ಮೆಡಿಟೆಕ್ ಇಂಡಿಯಾದ ಅಂಗಸಂಸ್ಥೆಯಾಗಿ 2018ರಲ್ಲಿ ಮೆಡೋರ್ಗೊನಿಕ್ಸ್ ಪ್ರೈ.ಲಿ. ಸಂಸ್ಥೆ ಆರಂಭಿಸಿದ್ದು ಆಯುರ್ವೇದಕ್ಕೆ ಸಂಬಂಧಪಟ್ಟಂತೆ ಸಂಸ್ಥೆಯು ಎಲ್ಲ ಔಷಧ ತಯಾರು ಮಾಡುತ್ತಿದೆ. ಬೈಕಂಪಾಡಿಯಲ್ಲಿ ಅತ್ಯಾಧುನಿಕ ಉತ್ಪಾದನೆ ಘಟಕ ಹೊಂದಿದೆ. ಒಪ್ಪಂದದ ಪ್ರಕಾರ ನಿಟ್ಟೆ ಫಾರ್ಮಸಿ ವಿಭಾಗದ ವಿದ್ಯಾರ್ಥಿಗಳಿಗೆ ಪೂರ್ವ ತರಬೇತಿ ಹಾಗೂ ಪೂರ್ವ ಕ್ಲಿನಿಕಲ್ ಅಧ್ಯಯನ ತರಬೇತಿ ಮತ್ತು ಔಷಧೀಯ ಅಭಿವೃದ್ಧಿ ಕ್ಷೇತ್ರದಲ್ಲಿ ಸಹಕಾರ ನೀಡಲಿದ್ದು ನಿಟ್ಟೆ ಹಾಗೂ ಮೆಡೋರ್ಗನಿಕ್ಸ್ ಸಂಸ್ಥೆ ಸಂಯೋಜನೆಯೊಂದಿಗೆ ಸಂಶೋಧನೆಯನ್ನು ನಡೆಸಲಿದೆ. ಮೆಡೋರ್ಗನಿಕ್ಸ್ನ ವ್ಯವಸ್ಥಾಪಕ ನಿರ್ದೇಶಕ ಪ್ರಮೋದ್ ಹೆಗ್ಡೆ ಹಾಗೂ ನಿಟ್ಟೆ ಪರಿಗಣಿಸಲಾಗಿರುವ ವಿವಿಯ ಕುಲಪತಿ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಒಪ್ಪಂದಕ್ಕೆ ಸಹಿ ಹಾಕಿದರು. ಮೆಡೋರ್ಗನಿಕ್ಸ್ನ ಗುಣಮಟ್ಟ ಪರಿಶೀಲನಾ ಮುಖ್ಯಸ್ಥ…

