UN NETWORKS ಬಾಳೆಪುಣಿ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಸಮಾಜದಲ್ಲಿ ಸೇವೆಯ ಅಗತ್ಯವಿರುವ ಭಾಗದಲ್ಲಿ ತನ್ನ ಸಹಾಯ ಹಸ್ತ ಚಾಚುವ ಆದರ್ಶ ಪಾಲನೆಯ ಮೂಲಕ ಸಶಕ್ತ ಸಂಘಟನೆಯಾಗಿ ಬೆಳೆದಿದೆ ಎಂದು ಲಯನ್ಸ್ ಜಿಲ್ಲೆ 317-ಡಿಯ ಗವರ್ನರ್ ದೇವದಾಸ ಭಂಡಾರಿ ಹೇಳಿದರು. ಬಾಳೆಪುಣಿ ಗ್ರಾಮ ಪಂಚಾಯಿತಿ. ಹಿಂದೂ ರುದ್ರಭೂಮಿ ಸಮಿತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿಯೊಂದಿಗೆ ಲಯನ್ಸ್ ಜಿಲ್ಲೆ 317-ಡಿಯ ಪ್ರಾಂತ್ಯ 4ರ ಪ್ರಾಂತೀಯ ಸಮ್ಮೇಳನ “ಸಮಿದೆ” ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಹೂ ಹಾಕುವ ಕಲ್ಲಿಗೆ ನೀಡಿದ ಶಾಶ್ವತ ಕೊಡುಗೆಯಾದ ಹಿಂದೂ ರುದ್ರಭೂಮಿ ‘ಶಾಂತಿಧಾಮ’ವನ್ನು ಗ್ರಾಮಕ್ಕೆ ಹಸ್ತಾಂತಿರಿಸಿ ಮಾತನಾಡಿದರು.ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ರುದ್ರಭೂಮಿಯನ್ನು ಲೋಕಾರ್ಪಣೆಗೊಳಿಸಿದರು. ಕೈರಂಗಳದ ಶಾರದಾಗಣಪತಿ ವಿದ್ಯಾಕೇಂದ್ರದ ಟಿ. ಜಿ. ರಾಜಾರಾಮ ಭಟ್ ಮಾತನಾಡಿ ಮನುಷ್ಯ ಜೀವಿತದ ಕೊನೆಯ ನಿಲ್ದಾಣವಾಗಿರುವ ರುದ್ರಭೂಮಿ, ಇಂದಿನ ಸಮಾಜದಲ್ಲಿ ಅತ್ಯಗತ್ಯವಾಗಿದ್ದು, ಇದನ್ನು ಕೊಡಮಾಡುವಲ್ಲಿ ಗ್ರಾಮದ ಜನರೊಂದಿಗೆ ಕೈ ಜೋಡಿಸಿದ ಲಯನ್ಸ್ ಪ್ರಾಂತ್ಯಾಧ್ಯಕ್ಷ ಪ್ರವೀಣ್ ಶೆಟ್ಟಿಯವರ ಕೊಡುಗೆ ಮಹತ್ವವಾದುದು,…
Author: UllalaVani
UN NETWORKS ಶಕ್ತಿನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಉಳ್ಳಾಲ ಮಂತ್ರ ನಾಟ್ಯಕಲಾ ಗುರುಕುಲದಿಂದ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ಮಕ್ಕಳ ವಸತಿ ಶಾಲೆಯಲ್ಲಿ “ಸಂಭ್ರಮ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ಮುಡಿಪು ವಿಶ್ವಕರ್ಮ ಸಂಘದ ಅಧ್ಯಕ್ಷ ಇರಾ ಯೋಗೀಶ್ ಆಚಾರ್ಯ ಚಾಲನೆ ನೀಡಿದರು. ಸಾನಿಧ್ಯ ಭಿನ್ನ ಸಾಮಥ್ರ್ಯದ ಮಕ್ಕಳ ವಸತಿ ಶಾಲೆ ಹಾಗೂ ತರಬೇತಿ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶ್ರೀ ಗಣೇಶ್ ಸೇವಾ ಟ್ರಸ್ಟ್ನ ಉಪಾಧ್ಯಕ್ಷ ಎಮ್. ದೇವದತ್ತ ರಾವ್, ವೇಣುಗೋಪಾಲ್ ಯು. ಭಟ್ನಗರ, ಮಂತ್ರ ನಾಟ್ಯಕಲಾ ಗುರುಕುಲ ಅಧ್ಯಕ್ಷ ಶಕೀಲಾ ಜನಾರ್ಧನ, ಅಧ್ಯಕ್ಷೆ ಶಕೀಲಾ ಜನಾರ್ಧನ್, ಟ್ರಸ್ಟಿಗಳಾದ ಶೈನಾ ಶ್ರಾವಣ್ ಉಳ್ಳಾಲ್, ಬಬಿತಾ ಕಿರಣ್ ಉಳ್ಳಾಲ್ ಉಪಸ್ಥಿತರಿದ್ದರು. ನಿರ್ದೇಶಕ ಶ್ರಾವಣ್ ಉಳ್ಳಾಲ್ ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.
UN NETWORKS ಉಳ್ಳಾಲ: ಬೆಂಗಳೂರಿನಲ್ಲಿ ನಡೆದ 66ನೇ ರಾಜ್ಯಮಟ್ಟದ ದೇಹದಾಡ್ರ್ಯ ಚಾಂಪಿಯನ್ಶಿಪ್ನಲ್ಲಿ ಫಯಾಝ್ ಅವರು `ಮಿಸ್ಟರ್ ಕರ್ನಾಟಕ ಉದಯ -2018′ ಪ್ರಶಸ್ತಿಯನ್ನು ಪಡೆದು ರಾಷ್ಟ್ರಮಟ್ಟದ ದೇಹದಾಢ್ರ್ಯ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಅವರು ಕೆ.ಸಿ.ರೋಡ್ ಹೆಲ್ತ್ ಝೋನ್ ಜಿಮ್ನ ತರಬೇತುದಾರರಾಗಿದ್ದು, ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ದೇಹದಾಢ್ರ್ಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ- 2018 ಪ್ರಶಸ್ತಿಯನ್ನು ಪಡೆದಿದ್ದರು.
UN NETWORKS ಕೊಣಾಜೆ: ಮಂಗಳೂರು ವಿಶವಿದ್ಯಾಲಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎಂ.ರಾಜಶೇಖರ್(63) ಅವರು ಶನಿವಾರ ರಾತ್ರಿ ಅಸೌಖ್ಯದಿಂದ ನಿಧನರಾದರು. ಅವರು ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಆಗಿ, ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ, ಜೀವವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಹಾಗೂ ವಿವಿದ ಯೋಜನೆಗಳ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. 2017ರಲ್ಲಿ ವಿವಿಯಿಂದ ನಿವೃತ್ತರಾದ ಅವರು ಪ್ರಸ್ತುತ ಮೈಸೂರಿನಲ್ಲಿ ವಾಸವಾಗಿದ್ದರು.
UN NETWORKS ಕೊಣಾಜೆ: ಕೊಣಾಜೆ ಬೊಲ್ಮದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜ. 16ರಿಂದ ಜ. 18ರ ತನಕ ಜರುಗಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರು ಹೊಸಮನೆ ಹೇಳಿದರು. ಶ್ರೀ ಕ್ಷೇತ್ರದಲ್ಲಿ ಭಾನುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮಗಳ ವಿವರ ನೀಡಿದ ಅವರು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ, ಬ್ರಹ್ಮಶ್ರೀ ಎಡಪದವು ವೇದಮೂರ್ತಿ ವೆಂಕಟೇಶ್ ತಂತ್ರಿಗಳ ಪೌರೋಹಿತ್ಯ ಹಾಗೂ ಕೊಣಾಜೆ ಶ್ಯಾನುಬೋಗರ ಮನೆಯ ಸುದರ್ಶನ ಭಟ್ ಅವರ ಮಾರ್ಗದರ್ಶನದಲ್ಲಿ ಉಳ್ಳಾಲ್ತಿ ಅಮ್ಮನವರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದರು.ಬೊಲ್ಮ ಮುಲಾರದ ಜನ ಕೃಷಿ ಸಂಸ್ಕೃತಿಯಲ್ಲಿ ಹುಟ್ಟಿ ಬೆಳದವರು. ಗ್ರಾಮ ದೇವರಾಗಿ, ಸುಖ ಸಂಪತ್ತನ್ನು ನೀಡುವ ತಾಯಿಯಾಗಿ ಉಳ್ಳಾಲ್ತಿ ದಿವ್ಯಶಕ್ತಿಯಾಗಿ ಉದ್ದೀಪನಗೊಂಡಿರುವ ಐತಿಹ್ಯವಿದೆ. ದೈವಜ್ಞರ ಚಿಂತನೆಯಂತೆ ಅನಾದಿ ಕಾಲದಿಂದ ಜೈನ ಮನೆತನದವರು ಆರಾಧಿಸಿಕೊಂಡು ಬರುತ್ತಿದ್ದ ಸಾನಿಧ್ಯವೆಂದು ತಿಳಿದುಬಂದಿದೆ. ಈ ಭಾಗದ ಜನರ ತೊಂದರೆಗಳಿಗೆ ನೆಲೆ ಇಲ್ಲದ…
UN NETWORKS ಉಳ್ಳಾಲ: ಅಯ್ಯಪ್ಪ ವೃತಧಾರಿಗಳು ಶಬರಿಮಲೆ ದೇವಸ್ಥಾನದ ಹುಂಡಿಗೆ ಕಾಣಿಕೆ ಹಾಕದೆ ಕೇರಳ ಸರಕಾರಕ್ಕೆ ಹೋಗುವ ಆದಾಯವನ್ನು ನಿಲ್ಲಿಸುವ ಮೂಲಕ ಸರಕಾರವನ್ನು ಬಗ್ಗಿಸುವ ಕೆಲಸ ಮಾಡಬೇಕಿದೆ ಎಂದು ಕಪಿಲಾಶ್ರಮ ಉತ್ತರಕಾಶಿಯ ಶ್ರೀರಾಮಚಂದ್ರ ಸ್ವಾಮಿ ಹೇಳಿದರು. ಅವರು ಶ್ರೀ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ಮಂಗಳೂರು ಗ್ರಾಮಾಂತರ ಉಳ್ಳಾಲ ವತಿಯಿಂದ ಕೊಲ್ಯ ಸೌಭಾಗ್ಯ ಸದನದಲ್ಲಿ ಜರಗಿದ ಅಯ್ಯಪ್ಪ ಭಕ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಶಬರಿಮಲೆಗೆ ಹೋಗುವ ಅಯ್ಯಪ್ಪ ವೃತಧಾರಿಗಳು ಜಾಸ್ತಿಯಾಗಬೇಕಿದೆ. ಮಲೆ ಹತ್ತಿ ಶಬರಿಮಲೆಯನ್ನು ಸಂದರ್ಶಿಸಿದರೂ ಕಾಣಿಕೆ ಹುಂಡಿಗೆ ನಯಾಪೈಸೆಯನ್ನು ಹಾಕದಿರಿ. ದಾರಿಯುದ್ದಕ್ಕೂ ಕ್ರೈಸ್ತ ಮಿಷನರಿಗಳು ನಡೆಸುವ ಹೊಟೇಲುಗಳು ವೃತಧಾರಿಗಳು ತೆರಳುವ ಸಂದರ್ಭ ಸಸ್ಯಹಾರಿ ಹೊಟೇಲುಗಳಾದಲ್ಲಿ, ದೇವಸ್ಥಾನದ ಬಾಗಿಲು ಮುಚ್ಚಿದ ನಂತರ ಅದೇ ಹೊಟೇಲುಗಳು ಮಾಂಸಹಾರಿ ಹೊಟೇಲುಗಳಾಗಿ ಕಾರ್ಯಾಚರಿಸುತ್ತಿದೆ. ಇಂತಹ ಹೊಟೇಲುಗಳಲ್ಲಿ ಆಹಾರ ಸೇವಿಸುವುದನ್ನು ನಿಲ್ಲಿಸಿ. ಸರಕಾರಕ್ಕೆ ಆರ್ಥಿಕ ಸಂಕಷ್ಟ ಆದಲ್ಲಿ ಮಾತ್ರ ಹಿಂದೂಗಳಿಗೆ , ಶಬರಿಮಲೆ ಕ್ಷೇತ್ರಕ್ಕೆ ಸಲ್ಲುವ ಜಯವಾಗಿರುತ್ತದೆ. ಅಯ್ಯಪ್ಪ ಮಾಲಾಧಾರಿಗಳ ಮೇಲೆ ವಿದ್ಯುತ್ ಕಟ್ ನಡೆಸಿ ಹಲ್ಲೆ ನಡೆಸುವ…
UN NETWORKS ಬೋಳಿಯಾರು: ಸಮಾಜದ ಕಟ್ಟಕಡೆಯ ಜನ ಸಾಮಾನ್ಯರು ಉತ್ತಮವಾದ ಮೂಲಭೂತ ಸೌಕರ್ಯ ಪಡೆಯಬೇಕೆಂದು ಸರಕಾರದ ಉದ್ದೇಶವಾಗಿದೆ ಎಂದು ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.ಅವರು ಬೋಳಿಯಾರು ಗ್ರಾಮದ ಫರೀದ್ ನಗರ ಸಂಪರ್ಕ ರಸ್ತೆಗೆ ಶಿಲಾ ನ್ಯಾಸಗೈದು ಮಾತನಾಡಿದರು. ನಗರ ಪ್ರದೇಶದ ನಾಗರಿಕರು ಪಡೆಯುತ್ತಿರುವ ಮೂಲಭೂತ ಸೌಕರ್ಯಗಳು ಗ್ರಾಮೀಣ ಪ್ರದೇಶವಾದ ನನ್ನ ಕ್ಷೇತ್ರಕ್ಕೆ ತರುವಲ್ಲಿ ಕ್ಷಮ ಪಡುತ್ತೆನೆ.ಮಂಗಳೂರು ವಿಧಾನ ಸಭಾ ಕ್ಷೇತ್ರದ ಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗಾಗಿ 480ಕೋಟಿ ರೂಪಾಯಿ ಯಲ್ಲಿ 178ಕೋಟಿ ಬ್ರಿಜ್ ನಿರ್ಮಾಣ ಹಾಗೂ198 ಕುಡಿಯುವ ನೀರಿನ ಯೋಜನೆಯ ಸಂಬಂಧಿಸಿ ಅನುದಾನ ಬಿಡುಗಡೆಯಾಗಿದೆ. ಶ್ರೀಘದಲ್ಲಿ ಟೆಂಡರ್ ಕರೆದು 3 ವರ್ಷದೊಳಗೆ ಕಾಮಗಾರಿ ಸಂಪೂರ್ಣಗೊಳಲಿದೆ ಎಂದು ಹೇಳಿದರು. ತಾ.ಪಂ ಸದಸ್ಯ ಜಬ್ಬಾರ್ ಬೋಳಿಯಾರು, ಗ್ರಾ.ಪಂ ಸದಸ್ಯ ರಾಮೇಶ್ ಶೆಟ್ಟಿ, ಅಬ್ದುಲ್ ಶಕೂರು, ಬೋಳಿಯಾರು ಕಾಂಗ್ರೆಸ್ ವಲಯ ಅಧ್ಯಕ್ಷ ಉಸ್ಮಾನ್ ಬಿ.ಎಂ, ಹಿಂದೂಳಿದ ವರ್ಗದ ಗ್ರಾ ಉ ವಲಯಾಧ್ಯಕ್ಷ ಸೀನಾ ಪೂಜಾರಿ, ನಾರಾಯಣ ಗುರು ಮಂದಿರದ ಸದಸ್ಯ ಸುಂದರ್ ಪೂಜಾರಿ,…
UN NETWORKS ಉಳ್ಳಾಲ: ಹಝ್ರತ್ ಅಸ್ಸಯ್ಯಿದ್ ಇಸ್ಮಾಯಿಲ್ ವಲಿಯುಲ್ಲಾಹಿಲ್ ಬುಖಾರಿ ರವರ ಹೆಸರಿನಲ್ಲಿ ಎರಡು ವರ್ಷಕೊಮ್ಮೆ ನಡೆಸಿ ಬರುವ ಮಂಜನಾಡಿ ಉರೂಸ್ ಜನವರಿ 10ರಿಂದ 19ರ ತನಕ ನಡೆಯಲಿದ್ದು ಶುಕ್ರವಾರ ಮಂಜನಾಡಿ ಜಮಾಅತ್ ಗೌರವಾಧ್ಯಕ್ಷ ಅಸ್ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಧ್ವಜಾರೋಹಣಗೈದು ಮಂಜನಾಡಿ ಉರೂಸ್ ಗೆ ಚಾಲನೆ ನೀಡಿದರು. ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಮೈಸೂರು ಬಾವ, ಮುದರ್ರಿಸ್ ಪಿ.ಎ ಅಹ್ಮದ್ ಬಾಖವಿ, ಪ್ರ.ಕಾರ್ಯದರ್ಶಿ ಅಝೀಝ್ ಪರ್ತಿಪ್ಪಾಡಿ, ಉಪಾಧ್ಯಕ್ಷರುಳಾದ ಇಸ್ಮಾಯಿಲ್ ದೊಡ್ಡಮನೆ, ಮೊದ್ದೀನ್ಕುಂಞ ಬಸರ, ಕೋಶಾಧಿಕಾರಿ ಕುಂಞ ಬಾವ ಹಾಜಿ ಕಲ್ಕಟ್ಟ, ಜೊತೆ ಕಾರ್ಯದರ್ಶಿ ಎನ್.ಕೆ ಬಾವು ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.
UN NETWORKS ಬೀರಿ: ಹಿಂದೂಗಳು ಮನಸ್ಸು ಮಾಡಿ, ರೊಚ್ಚಿಗೆದ್ದದ್ದೇ ಆದಲ್ಲಿ ಆರಾಧ್ಯ ಶ್ರೀರಾಮನನ್ನು ತುಚ್ಛವಾಗಿ ನಿಂದಿಸಿರುವ ಭಗವಾನ್ನನ್ನು ಚಡ್ಡಿ ಬಿಚ್ಚಿ ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿಸುವ ಕ್ಷಣಗಣನೆ ಆರಂಭವಾಗಿದೆ ಎಂದು ಹಿಂದು ಜಾಗರಣಾ ವೇದಿಕೆ ವಿಟ್ಲ ಪ್ರಖಂಡ ಕಾರ್ಯದರ್ಶಿ ಗಣರಾಜ್ ಭಟ್ ಕೆದಿಲ ಹೇಳಿದ್ದಾರೆ. ಅವರು ಕೋಟೆಕಾರು ಬೀರಿಯಲ್ಲಿ ಶುಕ್ರವಾರ ಹಿಂದು ಹಿತರಕ್ಷಣಾ ವೇದಿಕೆ ಉಳ್ಳಾಲ ಹಮ್ಮಿಕೊಂಡ ಹಿಂದೂ ಸಮಾಜದ ಆದರ್ಶ ಪುರುಷ ಶ್ರೀರಾಮ ಪ್ರಭು ಮತ್ತು ಹಿಂದೂ ದೇವತೆಗಳನ್ನು ಅವಹೇಳನ ಮಾಡಿ, ತುಚ್ಛವಾಗಿ ನಿಂದಿಸಿ ಸ್ವಯಂ ಘೋಷಿತ ವಿಚಾರವಾಧಿಗಳ ಹಾಗೂ ಇದನ್ನು ಪ್ರೇರೇಪಿಸುವ ರಾಜ್ಯ ಸರಕಾರದ ವಿರುದ್ಧ ಹಮ್ಮಿಕೊಂಡ ಜನಾಕ್ರೋಶ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದೂಗಳ ರಕ್ಷಣೆಯ ರಕ್ಷೆಯೇ ರಾಮನಾಮ. ಆದರೂ ಹಿಂದೂಗಳ ಆಚಾರ-ವಿಚಾರಗಳಲ್ಲಿ ಭಾಗಿಯಾಗದ ಸದಾ ಬಾರಿನಲ್ಲಿ ಕುಳಿತು, ಹೆಣ್ಮಕ್ಕಳ ಸಹವಾಸದಲ್ಲಿರುವ ಇರುವ ಭಗವಾನನಿಗೆ ಶ್ರೀ ರಾಮನ ಹೆಸರನ್ನು ಹೇಳುವ ನೈತಿಕತೆಯೇ ಇಲ್ಲ. ಮಾಧ್ಯಮ ಸಂವಾದದಲ್ಲಿ ಹೇಳಿದ್ದನ್ನೇ ಹೇಳುವಂತಹ ಭಗವಾನ್ ಹಿಂದೆ ಹಣದ ಕೈವಾಡವಿದೆ. ಮಿಷನರಿಗಳ ಕೋಟಿ…
UN NETWORKS ಬಂಟ್ವಾಳ: ದಾರುಲ್ ಅಶ್-ಅರಿಯ್ಯಾ ವಿದ್ಯಾ ಸಂಸ್ಥೆ ಶಿಲ್ಪಿ ಮರ್ಹೂಂ ಸುರಿಬೈಲ್ ಉಸ್ತಾದರ 17ನೇ ಆಂಡ್ ನೇರ್ಚೆ ಹಾಗೂ ಇತ್ತಿಚೆಗೆ ಅಗಲಿದ ಸಂಸ್ಥೆ ಪ್ರಾಂಶುಪಾಲ್ ಪಿ.ಎ ಉಸ್ತಾದ್ ಅನು ಸ್ಮರಣಾ ಸಂಗಮ ಜ.3-4ರಂದು ನಡೆಯಲಿದ್ದು ಸ್ವಾಗತ ಸಮಿತಿ ಅಧ್ಯಕ್ಷ ಸಿಂಗಾರಿ ಹಾಜಿ ಗುರುವಾರ ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೌರವಾಧ್ಯಕ್ಷ ಸಿಹಾಬುದ್ದೀನ್ ತಂಙಳ್ ಮದಕ, ಸಂಸ್ಥೆಯ ಅಧ್ಯಕ್ಷ ಮಹಮುದುಲ್ ಫೈಝಿ, ಚೆಟ್ಟಕಲ್ ತಂಙಳ್, ಕೋಶಾಧಿಕಾರಿ ಅಬೂಬಕ್ಕರ್ ಸಿ.ಎಚ್ ಸಕೆರ್ಳ, ಸಂಸ್ಥೆಯ ಮ್ಯಾನೇಜರ್ ಸಿ.ಎಚ್ ಮುಹಮ್ಮದಾಲಿ ಸಖಾಫಿ, ಉಪಾಧ್ಯಕ್ಷರುಗಳಾದ ಬೋಳ್ಮಾರ್ ಉಸ್ತಾದ್, ಮಂಚಿ ಉಸ್ತಾದ್, ಅಬ್ದುಲ್ ಹಮೀದ್ ಲತೀಫಿ ಸೇರಾಜೆ,ದಾರುನಜಾತ್ ಅಬೂಬಕರ್ ಮುಸ್ಲಿಯಾರ್,ಅಬೂಬಕರ್ ಬಾಖವಿ ಕೊಲಾಕೈ, ವಾಜೀದ್ ಹನೀಫಿ ತಿರ್ವತ್ತೂರು, ಅಬ್ದುಲ್ ರಶೀದ್ ಸ ಅದಿ, ಮುತ್ತಲಿಬ್ ಹಾಜಿ ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.

