Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ ಜೆಸಿಟಿಯು ಕರೆ ನೀಡಿರುವ ಜ.8,9 ರ ಅಖಿಲ ಭಾರತ ಮುಷ್ಕರಕ್ಕೆ ಸಿಪಿಐಎಂ ನ ಉಳ್ಳಾಲ ವಲಯ ಸಮಿತಿ ಬೆಂಬಲ ಸೂಚಿಸಿದೆ. ಬೆಲೆ ಏರಿಕೆಯನ್ನು ತಡೆಗಟ್ಟಬೇಕು ,ಕಾರ್ಮಿಕರ ಕನಿಷ್ಟವೇತನ ಮಾಸಿಕ ರೂ.18000 ನಿಗದಿಗೊಳಿಸಬೇಕು, ಗುತ್ತಿಗೆ ಆಧಾರಿತ ಕಾರ್ಮಿಕರನ್ನು ಖಾಯಂಗೊಳಿಸಬೇಕು.ವಾರ್ಷಿಕ ಒಂದು ಕೋಟಿ ಉದ್ಯೋಗ ಸೃಷ್ಟಿಸುವ ಯೋಜನೆ ಕೈಗೊಳದಳಬೇಕು , ಎಲ್ಲಾ ನಿವೃತ್ತ ಕಾರ್ಮಿಕರಿಗೆ ಕನಿಷ್ಟ ರೂ.3000 ಪಿಂಚಣಿ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಅಸಂಘಟಿತ ಮತ್ತು ಕೃಷಿಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಸರಕಾರಿ ಕ್ಷೇತ್ರದ ಕೈಗಾರಿಕೆಗಳ ಖಾಸಗೀಕರಣ ನಿಲ್ಲಿಸಬೇಕು ,ಬೀಡಿಕಾರ್ಮಿಕರರಿಗೆ ಉದ್ಯೋಗದ ಭದ್ರತೆ ಒದಗಿಸಬೇಕು, ಮುಂತಾದ ಹನ್ನೆರಡು ಅಂಶಗಳ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಯುತ್ತಿದೆ. ರೈತ ಕಾರ್ಮಿಕರ ಹಿತಾಸಕ್ತಿಯನ್ನು ನಿರ್ಲಕ್ಷಿಸುತ್ತಿರುವ ಕೇಂದ್ರದ ಎನ್ ಡಿ ಎ ಸರಕಾರವು ಮುಕ್ತವಾಗಿ ಈ ದೇಶದ ಬಂಡವಾಳಿಗರ ಪರ ನೀತಿಯನ್ನು ಅನುಸರಿಸುತ್ತಿದೆ ಎಂದು ಸಿಪಿಎಂ ಆರೋಪಿಸಿದೆ. ಕೇಂದ್ರ ಸರಕಾರವು ಜನ ಸಾಮಾನ್ಯರ ಪರವಾಗಿ ತನ್ನ…

Read More

UN NETWORKS ಉಳ್ಳಾಲ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನ ಸಾಮಾನ್ಯರ ಹಿತಕಾಪಾಡುವ ಬದಲು ತನ್ನ ಅಧಿಕಾರ ಉಳಿಸಿಕೊಳ್ಳುವ ಕೆಲಸ ಮಾಡುತ್ತಿವೆ. ಕಾರ್ಮಿಕರ ಬಗ್ಗೆಯಾಗಲಿ ಜನ ಸಾಮಾನ್ಯರ ಪ್ರಶ್ನೆಗಳ ಕುರಿತು ಮುತುವರ್ಜಿ ವಹಿಸುತ್ತಿಲ್ಲ. ಈ ನಿಟ್ಟಿನಲ್ಲಿ ಜ.8,9 ರ ಅಖಿಲ ಭಾರತ ಮುಷ್ಕರಕ್ಕೆ ಸಿಐಟಿಯು ಸಂಪೂರ್ಣ ಬೆಂಬಲ ಸೂಚಿಸಿದೆ ಎಂದು ಸಿಐಟಿಯು ಮುಖಂಡ ಕೃಷ್ಣಪ್ಪ ಸಾಲ್ಯಾನ್ ಹೇಳಿದ್ದಾರೆ. ಸಿಐಟಿಯು ಉಳ್ಳಾಲ ವಲಯ ಮಟ್ಟದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬೀಡಿಕಾರ್ಮಿಕರಿಗೆ ಕನಿಷ್ಠ ಮಜೂರಿ 40.00 ಏರಿಕೆಯಾಗಿದ್ದು ಎಂಟು ತಿಂಗಳು ಕಳೆದರು ಮಾಲೀಕರು ನೀಡದೇ ಕಾರ್ಮಿಕರಿಗೆ ವಂಚನೆ ಮಾಡಿದ್ದಾರೆ. ಹಲವು ಹೋರಾಟ ಮಾಡಿ ಸರಕಾರದ ಗಮನ ಸೆಳೆದರು ಕಾರ್ಮಿಕ ಮಂತ್ರಿಗಳು ಕೂಡ ಗಮನ ಹರಿಸಿಲ್ಲ ಎ.2015 ರಿಂದ 2017 ರ ವರೆಗೆ ಮೂರು ವರ್ಷದ 12.75 ಪೈ ತುಟ್ಟಿ ಭತ್ತೆ ಕೂಡ ನೀಡಲಿಲ್ಲ. ವಾರಕ್ಕೆ 6 ದಿನ ಕೆಲಸ ಮಾಡಬೇಕಾಗಿದ್ದ ಮಾಲೀಕರು ಸರಿಯಾಗಿ ಕೆಲಸ ನೀಡುತ್ತಿಲ್ಲ. ಕಳಪೆ ಮಟ್ಟದ ಎಲೆ ವಿತರಿಸಿ ಬೀಡಿಕಾರ್ಮಿಕರನ್ನು…

Read More

UN NETWORKS ಕೋಟೆಕಾರು : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಕೆ.ಸಿ.ರೋಡ್ ಘಟಕದ ವತಿಯಿಂದ ಸಾಂತ್ವನ ಯೋಜನೆಯಡಿ 7ನೇ ವರ್ಷದ 7 ಜೊತೆ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಡಿ.30ರಂದು ಬೆಳಗ್ಗೆ 10.00 ಗಂಟೆಗೆ ಕೋಟೆಕಾರ್ ನೂರ್‍ಮಹಲ್‍ನಲ್ಲಿ ನಡೆಯಲಿದೆ. ಕಾಸರಗೋಡು ಜಾಮಿಆ ಸಅದಿಯಾ ಪ್ರೊಫೆಸರ್ ಅಲ್‍ಹಾಜ್ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲೆ ಸಂಯುಕ್ತ ಖಾಝಿ ಅಲ್‍ಹಾಜ್ ಅಲ್‍ಫುಖಾಹಾಅ ಇಬ್ರಾಹಿಮ್ ಮುಸ್ಲಿಯಾರ್ ಬೇಕಲ್ ನಿಖಾಹ್ ನೇತೃತ್ವ ವಹಿಸಲಿರುವರು. ಸಿ.ಟಿ.ಎಮ್. ಸೈಯ್ಯದ್ ಮುಹಮ್ಮದ್ ಸಲೀಮ್ ಅಸ್ಸಖಾಫ್ ತಂಙಳ್ ಕೆ.ಸಿ.ರೋಡ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಎಸ್.ವೈ.ಎಸ್. ರಾಜ್ಯಾಧ್ಯಕ್ಷ ಅಲ್‍ಹಾಜ್ ಜಿ.ಎಮ್.ಮುಹಮ್ಮದ್ ಕಾಮಿಲ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಎಮ್‍ಎಸ್‍ಎಮ್ ಅಬ್ದುರಶೀದ್ ಝೈನಿ ಅಲ್‍ಕಾಮಿಲ್ ಎಮ್.ಎ, ಎಸ್.ವೈ.ಎಸ್. ದ.ಕ. ಜಿಲ್ಲಾಧ್ಯಕ್ಷ ಅಲ್‍ಹಾಜ್ ಉಸ್ಮಾನ್ ಸಅದಿ ಪಟ್ಟೋರಿ, ಮ್ಯಾರೇಜ್ ಸೆಲ್‍ನ ಅಧ್ಯಕ್ಷ ಯು.ಬಿ. ಮುಹಮ್ಮದ್ ಇನ್ನಿತರರು ಭಾಗವಹಿಸಲಿದ್ದಾರೆ. ಕೆ.ಸಿ.ರೋಡು ಎಸ್‍ವೈಎಸ್ ಕಳೆದ ಹತ್ತು ವರ್ಷಗಳಿಂದ 125 ಮನೆಗಳಿಗೆ ತಲಾ 10ಕೆ.ಜಿ.ಯಂತೆ ಬಡವರಿಗೆ…

Read More

UN NETWORKS ಮುಡಿಪು: ಕೈರಂಗಳದ ಶ್ರೀ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಕೃಷಿ ಉತ್ಸವ ಹಾಗೂ ಕೃಷಿ ಯಂತ್ರೋಪಕರಣಗಳ ಪ್ರದರ್ಶನವು ಡಿ. 29 ಮತ್ತು 30 ರಂದು ನಡೆಯಲಿದ್ದು ಸಕಲ ಸಿದ್ಧತೆ ನಡೆದಿದೆ ಎಂದು ಉತ್ಸವ ಸಮಿತಿ ಸಂಚಾಲಕ ಟಿ.ಜಿ. ರಾಜಾರಾಮ್ ಭಟ್ ಅವರು ಹೇಳಿದರು. ಅವರು ಪುಣ್ಯಕೋಟಿನಗರ ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಯುವ ಜನತೆಯ ನಡೆ ಕೃಷಿ ಕ್ಷೇತ್ರದ ಕಡೆಗೆ ದ್ಯೇಯ ವಾಕ್ಯದೊಂದಿಗೆ ಉತ್ಸವ ನಡೆಯಲಿದ್ದು, ತೆಂಗು ಕೃಷಿ ಹಾಗೂ ಮೌಲ್ಯವರ್ದನೆ, ಗೇರು ಹಾಗೂ ಕರಿಮೆಣಸು, ಕೊಕ್ಕೊ ಬೆಳೆ ಸಂರಕ್ಷಣೆ ಮತ್ತು ಸಂವರ್ದನೆ, ಕೃಷಿ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪ್ರಭಾವ, ಅಡಿಕೆ ಬಳೆ ನಿರ್ವಹಣೆ ಹಾಗೂ ಆದರ್ಶ ಕೃಷಿಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೃಷಿ ಉತ್ಸವದಲ್ಲಿ ಕೃಷಿ ವಸ್ತು ಪ್ರದರ್ಶನ, ವಿಚಾರ ಸಂಕಿರಣ, ಯಂತ್ರಗಳ ಪ್ರದರ್ಶನ, ಸುಧಾರಿತ ಕೃಷಿ ಪದ್ದತಿಗಳ ಪರಿಚಯ, ಕೃಷಿ ತೋಟಗಾರಿಕಾ ಇಲಾಖೆ ಮಳಿಗೆಗಳು, ಸಹಕಾರಿ ಸಂಘಗಳು ಭಾಗವಹಿಸಲಿವೆ ಎಂದರು.ಕೃಷಿ ಉತ್ಸವದಲ್ಲಿ ಪಾಲ್ಗೊಳ್ಳು 132…

Read More

UN NETWORKS ನರಿಂಗಾನ: ಕೊಲ್ಲರಕೋಡಿ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ (ಕಾಸ್ಕ್) ನರಿಂಗಾನ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಡಿ. 30ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲರಕೋಡಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Read More

UN NETWORKS ಉಳ್ಳಾಲ: ದ.ಕ. ಜಿಲ್ಲಾ ಗೃಹರಕ್ಷಕದಳದ ವತಿಯಿಂದ ನಡೆದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ- 2018 ಸಮಾರೋಪ ಗೃಹರಕ್ಷಕದಳದ ಕಚೇರಿ ಆವರಣದಲ್ಲಿ  ನಡೆಯಿತು. ಸಮಾರೋಪದಲ್ಲಿ ಮಂಗಳೂರಿನ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಶ್ರೀ ವೇದಮೂರ್ತಿ ಮಾತನಾಡಿ ಗೃಹರಕ್ಷಕರು ದಿನದ 24 ಗಂಟೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇರುತ್ತದೆ. ಪೊಲೀಸ್ ಇಲಾಖೆಗೆ ಹೆಗಲು ಕೊಟ್ಟು ಕೆಲಸ ನಿರ್ವಹಿಸುವ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಅತೀ ಅಗತ್ಯ. ಆ ನಿಟ್ಟಿನಲ್ಲಿ ಕ್ರೀಡಾಕೂಟಗಳು ಅತೀ ಅವಶ್ಯಕ ಮತ್ತು ಎಲ್ಲ ಗೃಹರಕ್ಷಕರಿಗೂ ಆಟೋಟಗಳಲ್ಲಿ ಪಾಲ್ಗೊಳ್ಳ್ಳುವ ಅವಕಾಶ ಸಿಗಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಠ ಡಾ. ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆ ವಹಿಸಿದ್ದರು.ಲಯನ್ಸ್ ಕ್ಲಬ್ ಮಂಗಳೂರು ಉಪಾಧ್ಯಕ್ಷ ಸತೀಶ್ ರೈ ಬಹುಮಾನ ವಿತರಿಸಿದರು. ವಿಕಾಸ್ ಸಮೂಹ ಸಂಸ್ಥೆಯ ಡೀನ್ ಮಂಜುಳಾ ಅನಿಲ್ ರಾವ್, ಕಚೇರಿ ಅಧೀಕ್ಷ ರತ್ನಾಕರ್, ಪ್ರಥಮ ದರ್ಜೆ ಸಹಾಯಕಿ ಅನಿತಾ.ಟಿ.ಎಸ್., ಲಯನ್ಸ್ ಕ್ಲಬ್ ಮಂಗಳೂರು ಕಾರ್ಯದರ್ಶಿ ಹೇಮರಾವ್ ಮತ್ತು ಲಯನ್ಸ್ ಕ್ಲಬ್…

Read More

UN NETWORKS ಉಚ್ಚಿಲ: ರಾಷ್ಟ್ರೀಯ ದಂತ ವೈದ್ಯರ ದಿನದ ಅಂಗವಾಗಿ ಮಂಗಳೂರಿನ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ಉಚ್ಚಿಲಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಂತ ಆರೋಗ್ಯ ಮಾಹಿತಿ ಶಿಬಿರ ನಡೆಯಿತು. ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಟೂತ್‍ಬ್ರಷ್, ಟೂತ್ ಪೇಸ್ಟ್ ಗಳ ಬಗ್ಗೆ ಮಾಹಿತಿ ನೀಡಿ, ಮಕ್ಕಳು ಹೇಗೆ ಮತ್ತು ಯಾವ ರೀತಿ ಹಲ್ಲು ಉಜ್ಜಬೇಕು ಎಂಬುದರ ಬಗ್ಗೆ ಉಪದೇಶ ನೀಡಿದರು. ಸುಂದರ, ಸುದೃಡ ಆರೋಗ್ಯವಂತ ಹಲ್ಲುಗಳು ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಶಾಲೆಯ 40ಮಕ್ಕಳಿಗೆ ಉಚಿತವಾಗಿ ಟೂತ್ ಪೇಸ್ಟ್ ಮತ್ತು ದಂತ ಆರೋಗ್ಯ ಮಾಹಿತಿ ಕರಪತ್ರವನ್ನು ಪ್ರತಿಷ್ಠಾನದ ವತಿಯಿಂದ ನೀಡಲಾಯಿತು. ಶಾಲಾ ಶಿಕ್ಷಕಿಯರುಗಳಾದ ಬಬಿತಾ ಹಾಗೂ ಶೋಭಿಕಾ ಉಪಸ್ಥಿತರಿದ್ದರು.

Read More

UN NETWORKS ಫಜೀರು: ಯಾವುದೇ ಧರ್ಮದಲ್ಲೂ ಅತ್ಯಾಚಾರ, ಕೋಮುವಾದ ಪ್ರೋತ್ಸಾಹ ನೀಡಿಲ್ಲ. ಯಾವುದೇ ಧರ್ಮಗುರುಗಳೂ ಅಂತಹ ವಿಚಾರವನ್ನೂ ಭೋದಿಸಿಲ್ಲ. ಆದರೂ ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಮಲಾರ್ ಜುಮಾ ಮಸೀದಿ ಖತೀಬ್ ಎಂ.ಎ.ರಿಯಾಝ್ ಫೈಝಿ ಅಭಿಪ್ರಾಯಪಟ್ಟರು. ಫಜೀರ್ ಮೆರ್ಸಿಯಮ್ಮನವರ ಧರ್ಮಕೇಂದ್ರದ ವತಿಯಿಂದ ಮಂಗಳವಾರ ಚರ್ಚ್ ಮೈದಾನದಲ್ಲಿ ನಡೆದ `ಬಂಧುತ್ವ ಕ್ರಿಸ್ಮಸ್’ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಕೋಮು ಗಲಭೆ, ಅತ್ಯಾಚಾರ, ಅನಾಚಾರ ನಡೆದಾಗ ಅದನ್ನು ಧರ್ಮದ ಆಧಾರದಲ್ಲಿ ನೋಡಬಾರದು. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರು ಧರ್ಮಹೀನರಾಗಿದ್ದಾರೆ. ತಪ್ಪು ಕೃತ್ಯದಲ್ಲಿ ಭಾಗಿಯಾದವರಿಗೆ ಬುದ್ಧಿವಾದ ಹೇಳಿ ಸರಿದಾರಿಗೆ ತರುವ ಪ್ರಯತ್ನದ ಮೂಲಕ ಧರ್ಮದ ಪಾವಿತ್ರ್ಯತೆ ಕಾಪಾಡಬೇಕು ಎಂದು ಹೇಳಿದರು. ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಗಂಗಾಧರ್ ಪೂಜಾರಿ ಮಾತನಾಡಿ, ಶಾಂತಿ, ಪ್ರೀತಿ, ಸಹನೆಯನ್ನು ಭೋದಿಸಿದ, ಶಿಲುಬೆಗೇರುವ ಸಂದರ್ಭದಲ್ಲೂ ದುಷ್ಟರಿಗೆ ಕ್ಷಮೆ ಬೇಡಿದ ಏಸು ಕ್ರಿಸ್ತರ ಸಂದೇಶ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಪಾಲಿಸಿ ಶಾಂತಿಯುತ ಸಮಾಜ ನಿರ್ಮಿಸಬೇಕಿದೆ ಎಂದು ಹೇಳಿದರು. ಮೆರ್ಸಿಯಮ್ಮನವರ ಧರ್ಮಕೇಂದ್ರದ…

Read More

UN NETWORKS ಕೊಣಾಜೆ: ಸಮುದಾಯ ಭವನಗಳು ಸಮಾಜದ ಸಂಪತ್ತಾಗಿದ್ದು ಯುವಪೀಳಿಗೆಗೆ ನೀಡುವ ದೊಡ್ಡ ಕೊಡುಗೆಯಾಗಿದೆ. ಯಾವುದೇ ಸಮಾಜ ಭವನ ನಿರ್ಮಾಣಕ್ಕೆ ಮುಂದಾದಾಗ ಸರ್ಕಾರ ಮುಂದೆ ನಿಂತು ಸಂಪೂರ್ಣ ಸಹಕಾರ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ 38ನೇ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹಿರಿಯರನ್ನು ಕಣ್ಣೀರು ಹಾಕಿಸಿದ ಯಾರೂ ಉದ್ಧಾರ ಆಗಿಲ್ಲ. ಯುವಪೀಳಿಗೆ ಹಿರಿಯರಿಂದ ಆಸ್ತಿ, ಅಂತಸ್ತಿಗಿಂತ ಅನುಭವ ಪಡೆದು ಮುನ್ನಡೆದಾಗ ದೇಶ, ಸಮಾಜದ ಸಂಪತ್ತಾಗಲು ಸಾಧ್ಯ. ಹೆತ್ತವರು ಸರ್ಕಾರದ ಮೇಲೆ ವಿಶ್ವಾಸ ಇಡುವ ಜೊತೆ ತಮ್ಮ ಮಕ್ಕಳ ಮೇಲೆ ಹೆಚ್ಚು ವಿಶ್ವಾಸ ಇಟ್ಟು ಶಿಕ್ಷಣ ನೀಡಬೇಕಿದೆ ಎಂದು ಹೇಳಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ `ಸಮಾಜ ಏನಾಗಬೇಕು ಎನ್ನುವ ಸ್ಪಷ್ಟ ನಿರ್ಧಾರ ನಮಗಿರವೇಕು, ಮಂದಿರ, ಭವನ ನಿರ್ಮಾಣ, ಕಾರ್ಯಕ್ರಮಗಳು ಒಂದು ಭಾಗ…

Read More

UN NETWORKS ತಲಪಾಡಿ : ಮಕ್ಕಳು ಬುದ್ಧಿಮತ್ತೆಯಲ್ಲಿ ಬುದ್ಧಿಯಲ್ಲಿ ಮಾತ್ರ ಬೆಳವಣಿಗೆ ಅಲ್ಲ ಆಧುನಿಕ ಶಿಕ್ಷಣದ ಜೊತೆ ಮಕ್ಕಳ ಮಾನಸಿಕ, ದೈಹಿಕವಾಗಿ ಸದೃಡಗೊಳಿಸುವುದರೊಂದಿಗೆ ಅವರಲ್ಲಿ ಉತ್ತಮ ಭಾವನೆ, ಸಂಸ್ಕಾರವನ್ನು ನೀಡುವ ಮೂಲಕ ಸರ್ವಾಂಗೀಣ ಶಿಕ್ಷಣಕ್ಕೆ ಶಾರದಾ ವಿದ್ಯಾ ಸಂಸ್ಥೆಯಲ್ಲಿ ಆದ್ಯತೆ ನೀಡುತ್ತಿದ್ದು, ಇದಕ್ಕೆ ಪೂರಕವಾಗಿ ಹೊನಲು ಬೆಳಕಿನ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ ಎಂದು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್ ಅಭಿಪ್ರಾಯಪಟ್ಟರು. ಶಾರದಾ ಶಿಕ್ಷಣ ಸಂಸ್ಥೆಗಳ ಅಂಗ ಸಂಸ್ಥೆಯಾದ ತಲಪಾಡಿ ದೇವಿನಗರದಲ್ಲಿರುವ ಶಾರದಾ ವಿದ್ಯಾನಿಕೇತನ ವಸತಿ ಶಾಲೆಯ ಆವರಣದಲ್ಲಿ ಶಾರದಾ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ನಡೆದ ವೈಭವದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಗುಣಮಟ್ಟದ ಶಿಕ್ಷಣ ನೀಡುವ ಉದ್ಧೇಶದಿಂದ ತುಳುನಾಡು ಎಜ್ಯುಕೇಶನಲ್ ಟ್ರಸ್ಟ್ ನಮ್ಮ ಹಿರಿಯರು ಪ್ರಾರಂಬಿಸಿ, ಇತರ ಸಂಸ್ಥೆಗಳಿಗಿಂತ ವಿಭಿನ್ನವಾಗಿ ಬೆಳೆಸಿದ್ದು ಮಂಗಳೂರಿನಲ್ಲಿರುವ ಶಾರದಾ ವಿದ್ಯಾಲಯ, ವಾಮಂಜೂರಿನಲ್ಲಿರುವ ಶುಬೋಧಯ ವಿದ್ಯಾಲಯ, ತಲಪಾಡಿ ದೇವಿನಗರದಲ್ಲಿರುವ ಶಾರದವಿದ್ಯಾನಿಕೇತ , ಪದವಿಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ಮೌಲ್ಯಯುತ ಶಿಕ್ಷಣದೊಂದಿಗೆ ಕ್ರೀಡಾ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ…

Read More