Author: UllalaVani

Kannada News From Coastal Karnataka

UN NETWORKS ಅಸೈಗೋಳಿ: ಆಕಾಶದಿಂದ ಚಂದ್ರನನ್ನು ಭೂಮಿಗೆ ತಂದು ನಿಲ್ಲಿಸುತ್ತೇವೆ ಎನ್ನುವ ರೀತಿಯಲ್ಲಿ ಪ್ರಧಾನಿ ನೀಡಿದ್ದ ಪೊಳ್ಳು ಭರವಸೆಗಳಿಂದ ಬೇಸತ್ತ ಜನ ಪಂಚರಾಜ್ಯ ಚುನಾವಣೆಯ ಮೂಲಕ ತಕ್ಕಪಾಠ ಕಲಿಸಿದ್ದು, ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗುವುದಕ್ಕೆ ಫಲಿತಾಂಶ ಮುನ್ಸೂಚನೆಯಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಅಭಿಪ್ರಾಯಪಟ್ಟರು. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ಬುಧವಾರ ಅಸೈಗೋಳಿ ಜಂಕ್ಷನ್‍ನಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ವಿಜಯೋತ್ಸವದಲ್ಲಿ ಮಾತನಾಡಿದರು.ದೇಶದಲ್ಲಿ ನೋಟ್ ನಿಷೇಧ ಬಳಿಕ ಜನಸಾಮಾನ್ಯರ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಚುನಾವಣೆಯ ಫಲಿತಾಂಶದ ಮೂಲಕ ಸಾಬೀತಾಗಿದೆ. ಪ್ರಧಾನಿ ಮೋದಿ ಕೇವಲ ಭರವಸೆಗಳಿಂದಲೇ ಜನರನ್ನು ಮೋಸ ಮಾಡಿದ್ದಾರೆ ಎಂದು ಹೇಳಿದರು.ಉಪಾಧ್ಯಕ್ಷ ಮುಸ್ತಫಾ ಮಲಾರ್ ಮಾತನಾಡಿ, ಕಳೆದ ನಾಲ್ಕುವರೆ ವರ್ಷದ ಆಡಳಿತದಲ್ಲಿ ಕೇಂದ್ರ ಸರ್ಕಾರ ವೈಫಲ್ಯ ಅನುಭವಿಸಿದೆ, ದೇಶದ ಅಭಿವೃದ್ಧಿ ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ ಎನ್ನುವ ಸತ್ಯ ಅರಿತ ಮತದಾರರು ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು. ತಾಲೂಕು…

Read More

UN NETWORKS ತಲಪಾಡಿ : ತಲಪಾಡಿ ವಲಯ ಕಾಂಗ್ರೆಸ್ ವತಿಯಿಂದ ಬುಧವಾರ ಪಂಚರಾಜ್ಯ ಚುನಾವಣಾ ಗೆಲುವಿನ ಸಂಭ್ರಮಾಚರಣೆ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ತಾಲೂಕು ಪಂಚಾಯಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ, ಸುರೇಖ ಚಂದ್ರಹಾಸ್, ವಲಯಾಧ್ಯಕ್ಷ ಗಣೇಶ್ ಶೆಟ್ಟಿ, ಜಮಾಲ್ ಅಜ್ಜಿನಡ್ಕ, ಲತಾ ಕಡೆಮುಗೇರು ಇನ್ನಿತರರು ಉಪಸ್ಥಿತರಿದ್ದರು.

Read More

UN NETWORKS ತೊಕ್ಕೊಟ್ಟು: ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಪ್ರಸಿದ್ಧಿಯನ್ನು ಪಡೆದಿರುವ ತೊಕ್ಕೊಟ್ಟು ಮತ್ತು ಮುಡಿಪುವಿನಲ್ಲಿ ಶಾಖೆಯನ್ನು ಹೊಂದಿರುವ ಅಮ್ಮ ಎಲೆಕ್ಟ್ರಾನಿಕ್ಸ್ ನ ಫರ್ನೀಚರ್ ಮತ್ತು ಎಲೆಕ್ಟ್ರಾನಿಕ್ಸ್ ನ ನೂತನ ವಿಶಾಲ ಮಳಿಗೆ ತೊಕ್ಕೊಟ್ಟು ಮುಖ್ಯ ರಸ್ತೆಯ ಅಮ್ಮ ಎಲೆಕ್ಟ್ರಾನಿಕ್ಸ್ ನ ಹತ್ತಿರವಿರುವ ಸಿಟಿ ಗಾರ್ಡನ್‍ನಲ್ಲಿ ಬುಧವಾರ ಶುಭಾರಂಭಗೊಂಡಿತು. ನೂತನ ಮಳಿಗೆಗೆ ಮಂಗಳೂರು ಬೋಳೂರಿನಲ್ಲಿರುವ ಶ್ರೀ ಅಮೃತಾನಂದಮಯಿ ಶಾಖಾ ಮಠದ ಶ್ರೀ ಮಂಗಳಾಮೃತ ಚೈತನ್ಯ ಸ್ವಾಮಿನಿ ಉದ್ಘಾಟಿಸಿ ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾಗಬೇಕಾದರೆ ಸನ್ಮಾರ್ಗದಲ್ಲಿ ಮುನ್ನಡೆಯುವುದರೊಂದಿಗೆ ಸಮಾಜಕ್ಕೆ ಕೊಡುಗೆಯನ್ನು ನೀಡುವ ಕಾರ್ಯ ಮಾಡಬೇಕು ಈ ನಿಟ್ಟಿನಲ್ಲಿ ಯೋಗೀಶ್ ದಂಪತಿಗಳು ಅಮ್ಮ ಎಲೆಕ್ಟ್ರಾನಿಕ್ಸ್ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುವ ಮೂಲಕ ಯಶಸ್ವಿಯಾಗಿರುವುದು ಶ್ಲಾಘನೀಯ ಎಂದರು. ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್, ತಲಪಾಡಿ ಸಂತ ಚರ್ಚ್ ಧರ್ಮಗುರು ಎಡ್ವಿನ್ ಮಸ್ಕರೇಂಇಸ್, ಹಿಂದೂಸ್ಥಾನ್ ಬಾವ ಬಿಲ್ಡರ್ಸ್ ಅಬ್ದುಲ್ ಖಾದರ್ ಕೆ. ಉಳ್ಳಾಲ ಮೊಗವೀರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ ಮುಖ್ಯ…

Read More

UN NETWORKS ಮೊಂಟೆಪದವು: ಹಳೆವಿದ್ಯಾರ್ಥಿ ಸಂಘ , ಸರಕಾರಿ ಶಾಲಾ ಮತ್ತು ಪ.ಪೂ. ಕಾಲೇಜು ಮೊಂಟೆಪದವು ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಆದರ್ ಮುಲ್ಲರ್ ವೈದ್ಯಕೀಯ ಕಾಲೇಜು ಕಂಕನಾಡಿ ಇದರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಮೊಂಟೆಪದವು ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೊಂಟೆಪದವು ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸಂತೋಷ್ ಕುಮಾರ್ ಅವರು ಮಾತನಾಡಿ ರಕ್ತದಾನವು ಬಹಳ ಉತ್ತಮವಾದ ಕಾರ್ಯ. ಶಿಕ್ಷಣದ ಬೆಳವಣಿಗೆಯ ಜತೆ ಜನರ ಆರೋಗ್ಯದ ಬಗ್ಗೆ ಚಿಂತಿಸಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಹಳೇ ವಿದ್ಯಾರ್ಥಿ ಸಂಘದಿಂದ ಆಗುತ್ತಿದೆ ಎಂದರು. ಮೊಂಟೆಪದವು ಪ.ಪೂ. ಕಾಲೇಜು ಕಾರ್ಯಾಧ್ಯಕ್ಷ ಜಲೀಲ್ ಮಾತನಾಡಿ, ರಕ್ತದಾನ ಕಾರ್ಯಕ್ರಮ ಇದೆ ಎಂಧ ತಕ್ಷಣ ನಾನು ಪೂಣ್ ಸಹಕಾರ ನೀಡಿದ್ದೇನೆ ಇಂತಹ ಕಾರ್ಯಕ್ರಮ ಯಾವ ಸಂದರ್ಭದಲ್ಲಿ ಆಯೋಜಿಸಿದರೂ ನನ್ನ ಸಹಕಾರ ಇನ್ನೂ ಇದೆ. ಇಂತಹ ಕಾರ್ಯಕ್ರಮ ಯಶಸ್ವಿಯಾಗಿ ಸಾಗಲಿ ಎಂದು ಹಾರೈಸಿದರು.ಮುಖ್ಯ ಅತಿಥಿಗಳಾಗಿ ಹನೀಫ್ ಚಂದಹಿತ್ಲು, ರಹ್ಮಾನ್…

Read More

UN NETWORKS ಕೋಟೆಕಾರು: ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸುವ ಸಂದರ್ಭ ವಿದ್ಯುತ್ ಅವಘಢ ಸಂಭವಿಸಿ ಕಂಬದ ಮೇಲಿನಿಂದ ಕೆಳಗೆ ಬಿದ್ದು ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಮೆಸ್ಕಾಂ ಕೋಟೆಕಾರು ಸೆಕ್ಷನ್ ವ್ಯಾಪ್ತಿಯ ಮಡ್ಯಾರು ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬಾದಾಮಿ ಪಟ್ಟದಕಲ್ಲು ಅಂಬೇಡ್ಕರ್ ಕಾಲನಿ ನಿವಾಸಿ ರಮೇಶ್ ಛಲವಾದಿ (22) ಮೃತಪಟ್ಟವರು. ಮಂಗಳವಾರ ಸಂಜೆ ವೇಳೆ ಮಡ್ಯಾರು ಸಮೀಪ ನೂತನ ವಿದ್ಯುತ್ ಕಂಬಗಳನ್ನು ಅಳವಡಿಸಿದ ಬಳಿಕ, ಕಂಬಗಳಿಗೆ ಅಡ್ಡ ವೈರ್ ಕಟ್ಟುವ ಸಂದರ್ಭ ವಿದ್ಯುತ್ ಪ್ರವಹಿಸಿ ಕಂಬದ ಮೇಲಿನಿಂದ ಕೆಳಕ್ಕೆ ಬಿದ್ದು ರಮೇಶ್ ಅವರು ಮೃತಪಟ್ಟಿದ್ದಾರೆ. ಘಟನೆಗೆ ಗುತ್ತಿಗೆದಾರ ಬಂಟ್ವಾಳದ ಲೆವಿನ್ ಇಲೆಕ್ಟ್ರಿಕಲ್ ಮತ್ತು ವೀರಾ ಇಲೆಕ್ಟ್ರಿಕಲ್ಸ್ ಹಾಗೂ ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

UN NETWORKS ತೊಕ್ಕೊಟ್ಟು: ಪರಸ್ಪರ ಸಂಪರ್ಕ ಬೆಳಸುವ ಹಬ್ಬವಾಗಿದೆ ಕ್ರಿಸ್‍ಮಸ್. ಪರರ ಜತೆ, ದೇವರ ಜತೆ, ಅಂತಕರಣದ ಜತೆ ಇಂತಹ ಸಂಬಂಧದ ಬಗ್ಗೆ ಅರಿತುಕೊಂಡು ಪರಸ್ಪರ ಪ್ರೀತಿ ವಿಶ್ವಾಸ ಬೆಳೆಸಿಕೊಂಡು ಎಲ್ಲರನ್ನು ಸ್ವಾಗತಿಸುವ ಗುಣ ಬೆಳೆಸಿಕೊಳ್ಳಬೇಕೆಂದು ಪೆರ್ಮನ್ನೂರು ಸಂತ ಸೆಬೆಸ್ಟಿಯನ್ ಧರ್ಮ ಕೇಂದ್ರದ ಧರ್ಮಗುರು ಜೆ.ಬಿ. ಸಲ್ದಾನ ಕರೆ ನೀಡಿದರು. ಅವರು ಸಂತ ಸೆಬೆಸ್ಟಿಯನ್ ಧರ್ಮಕೇಂದ್ರ ಫೆರ್ಮನ್ನೂರು ಇದರ ಆಶ್ರಯದಲ್ಲಿ ಪೊಸಕುರಲ್ ಬಳಗ, ಸದ್ಭಾವನಾ ವೇದಿಕೆ ಮತ್ತು ಸಾರ್ಜಂಟ್ ಬಿಷಪ್ ದೇವಾಲಯ ಬಬ್ಬುಕಟ್ಟೆ ಇವರ ಸಹಭಾಗಿತ್ವದಲ್ಲಿ ತೊಕ್ಕೊಟ್ಟುವಿನ ಅಂಬೇಡ್ಕರ್ ರಂಗಮಂದಿರದಲ್ಲಿ ಮಂಗಳವಾರ ನಡೆದ ಸೌಹಾರ್ದ ಕ್ರಿಸ್‍ಮಸ್ ಸಂಭ್ರಮದ ಅಧ್ಯಕ್ಷತೆ ವಹಿಸಿ ಆಶಿರ್ವಚನ ನೀಡಿದರು. ಪ್ರಸಕ್ತ ಕಾಲಘಟ್ಟದಲ್ಲಿ ಪ್ರತಿಕ್ಷೇತ್ರಗಳಲ್ಲಿ ಜಾತಿಯತೆ ಬೆಳೆಯುತ್ತಿದ್ದು, ರೀತಿ ವಿಶ್ವಾಸ ಕಡಿಮೆಯಾಗುತ್ತಿದೆ. ಇದಕ್ಕೆ ತೆರೆ ಎಳೆಯಲು ಏಸುಕ್ರಿಸ್ತ ಇನ್ನೊಮ್ಮೆ ಹುಟ್ಟಿ ಬರಬೇಕಾಗಿದೆ. ಸಂಸ್ಕಾರವನ್ನುಹಿರಿಯರಿಗೆ ಗೌರವ ಕೋಡುವುದನ್ನು ನಾವಿಂದು ಮರೆತಿದ್ದೇವೆ. ವೈದ್ಯಕೀಯ, ಶಿಕ್ಷಣ ಕೇತ್ರಗಳು ವ್ಯಾಪಾರೀಕರಣ ಆಗುತ್ತಿದೆ ಎಂದು ಖ್ಯಾತ ದಂತ ವೈದ್ಯ ಮುರಲೀಮೋಹನ್ ಚೊಂತಾರು ಹೇಳಿದರು. ಚೊಕ್ಕಬೆಟ್ಟು ಜುಮಾ…

Read More

UN NETWORKS ಕೋಟೆಕಾರು: ಹಣ ಪಣಕ್ಕಿಟ್ಟು ಅಂದರ್ ಬಾಹರ್ ಜುಗಾರಿ ಆಡುತ್ತಿದ್ದ ಐದು ಮಂದಿಯನ್ನು ಕೋಟೆಕಾರು ಮಾಡೂರು ಬಲ್ಯದಲ್ಲಿ ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಆಟಕ್ಕೆ ಪಣವಾಗಿಟ್ಟ ನಗದು ಹಾಗೂ ಬಳಸಲಾದ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಭಾನುವಾರ ನಡೆದಿದೆ. ಮಾಡೂರು ನಿವಾಸಿಗಳಾದ ನವೀನ್ ಕುಮಾರ್, ರತ್ನಾಕರ, ನಾರಾಯಣ ಮೊಗೇರ ಬಲ್ಯ, ಜಯರಾಜ್, ಅಹಮ್ಮದ್ , ಸುಧೀರ್ ಬಂಧಿತರು. ಬಂಧಿತರಿಂದ 8,200ರೂ. ನಗದು, ಬೈಕ್, ಮೊಬೈಲುಗಳು ಸೇರಿದಂತೆ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದರು.

Read More

UN NETWORKS ಉಳ್ಳಾಲ:ಕೊಲ್ಯ ಶ್ರೀ ರಾಮ ಫ್ರೆಂಡ್ಸ್ ಸರ್ಕಲ್‍ನ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭವು ಕೊಲ್ಯ ಶ್ರೀ ರಾಮಾ ಭಜನಾ ಮಂದಿರದ  ಮೈದಾನದಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಸಿಸ್ಟೆಂಟ್ ಫ್ರೊ. ಡಾ. ಜಯಶ್ರೀ ಕೆ ಉದ್ಘಾಟಿಸಿ ಮಾತನಾಡಿ, ಶ್ರೀರಾಮ ಪ್ರೆಂಡ್ಸ್ ಸರ್ಕಲ್ , ಮತ್ತು ಶ್ರೀ ರಾಮ ಮಹಿಳಾ ವಿಭಾಗದವರ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿವೆ.ಸಮಾಜಮುಖಿ ಕೆಲಸ ಮಾಡುತ್ತಾ ಮಾಡಿ ಸಂಘಟನೆ ಆಗಿ ಬೆಳೆದಿವೆ ಎಂದರು.ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು ಮಾತನಾಡಿ, ಶ್ರೀ ರಾಮನ ಆದರ್ಶಗಳನ್ನು ಇಟ್ಟುಕೊಂಡು ಶ್ರೀರಾಮ ಮಂದಿರ ಮತ್ತು ಶ್ರೀ ರಾಮ ಫ್ರೆಂಡ್ ಸರ್ಕಲ್ ಉತ್ತಮ ಜೀವನ ಮಾಡುತ್ತಿದ್ದಾರೆ. ಹಿರಿಯರ ಮಾರ್ಗದರ್ಶನದಲ್ಲಿ ಈ ಸಂಸ್ಕೃತಿಯನ್ನು ಇಷ್ಟು ಉತ್ತಮವಾಗಿ ಬೆಳೆಸುವುದು ಯುವಕರ ಕೆಲಸ ಎಂದು ಹೇಳಿದರು. ಆನಂದಾಶ್ರಮ ಶಾಲಾ ನಿವೃತ್ತ ಶಿಕ್ಷಕ ಕೆ. ಆರ್. ತಂತ್ರಿ, ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಡಾ. ಕಾರ್ತಿಕ್ ವಿಶ್ವನಾಥ್ , ಪಾಂಡೇಶ್ವರ ಮಹಾಲಿಂಗೇಶ್ವರ…

Read More

UN NETWORKS ಕೊಣಾಜೆ: ನಮ್ಮ ದೇಶದಲ್ಲಿರುವ ಧರ್ಮ ಜಾಗೃತಿ, ಧಾರ್ಮಿಕ ಚಿಂತನೆಗಳು ಬೇರೆ ಯಾವ ದೇಶಗಳಲ್ಲೂ ಕಾಣಲು ಸಾಧ್ಯವಿಲ್ಲ. ಧಾರ್ಮಿಕ ಚಿಂತನೆಗಳು ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳನ್ನು ಬೆಳೆಸುವುದರೊಂದಿಗೆ ಉತ್ತಮ ಸಮಾಜ, ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಮೋಹನ್ ಆಳ್ವ ಆವರು ಹೇಳಿದರು. ಅವರು ಕೊಣಾಜೆ, ಮುಲಾರ ಬೊಲ್ಯ ಶ್ರೀ ಉಳ್ಳಾಲ್ತಿ ಕೇತ್ರದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ದೇಶಕ್ಕೆ ಎಷ್ಟೋ ಭಾರಿ ಜಾಗತಿಕ ದಾಳಿಯಾದರೂ ಭಾರತವು ಸದೃಢವಾಗಿ ನೆಲೆನಿಲ್ಲಲು ಇಲ್ಲಿಯ ಧಾರ್ಮಿಕ ಚಿಂತನೆಗಳು ಗಟ್ಟಿಯಾಗಿರುವುದೇ ಕಾರಣವಾಗಿದೆ. ನಮ್ಮ ತುಳುನಾಡಿನಲ್ಲಿ ಅದೆಷ್ಟೋ ವರ್ಷಗಳಿಂದ ನಮ್ಮ ಹಿರಿಯರ ಕಾಲದಿಂದ ಆರಾಧಿಸಿಕೊಂಡು ಬಂದಿರುವ ದೈವ ದೇವಾಸ್ಥಾನಗಳು ಇವೆ. ಇದು ನಮ್ಮಲ್ಲಿ ನಂಬಿಕೆ ವಿಶ್ವಾಸವನ್ನು ಬೆಳೆಸುವುದರೊಂದಿಗೆ ಧಾರ್ಮಿಕ ಶಕ್ತಿಯನ್ನು ಬೆಳೆಸಿದೆ. ಇದೀಗ ನೂತನವಾಗಿ ನಿರ್ಮಾಣಗೊಂಡ ಉಳ್ಳಾಲ್ತಿ ಸಾನಿಧ್ಯವು ಕೂಡಾ ಪವಿತ್ರವಾದ ಕ್ಷೇತ್ರವಾಗಿದ್ದು, ಕ್ಷೇತ್ರದ ಅಭಿವೃದ್ಧಿಯೊಂದಿಗೆ ಈ ಊರು ಕೂಡಾ ಅಭಿವೃದ್ಧಿಯಾಗಲಿದೆ ಎಂದರು. ಸಮಾರಂಭವನ್ನು…

Read More

UN NETWORKS ಕೊಣಾಜೆ: ಇಂದಿನ ಚಲನಚಿತ್ರಗಳಲ್ಲಿ ಕೇವಲ ಮನರಂಜನೆಯನ್ನೇ ಗುರಿಯಾಗಿಸಿವೆ. ಪ್ರಮುಖವಾಗಿ ಚಿತ್ರಗಳು, ಕಿರುಚಿತ್ರಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವುದರೊಂದಿಗೆ ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ.ಪ್ರಶಾಂತ್ ಮಾರ್ಲ ಅವರು ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪೀಠ ಕ್ರಿಯೇಷನ್ಸ್ ತಂಡದ ಕರೆ ಎನ್ನುವ ಕನ್ನಡ ಕಿರು ಚಿತ್ರವನ್ನು ಶುಕ್ರವಾರ ಬಿಡುಗಡೆಗೊಳಿಸಿ ಮಾತನಾಡಿದರು. ಶಿಕ್ಷಣ ಇವತ್ತಿನ ಯುಗದಲ್ಲಿ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ. ಶಿಕ್ಷಣಕ್ಕೆ ಮಹತ್ವ ನೀಡುವ ಮತ್ತು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವಂತಹ ಚಿತ್ರವನ್ನು ನೀಡಬೇಕಾಗಿದೆ. ಕರೆ ಕಿರುಚಿತ್ರವು ಯುವಕರ ತಂಡದಿಂದ ನಿರ್ಮಾಣಗೊಂಡಿದ್ದು ಉತ್ತಮ ಪ್ರಯತ್ನವಾಗಿದೆ. ಇದರಲ್ಲಿ ಸಮಾಜಕ್ಕೊಂದು ಸಂದೇಶವಿದ್ದು, ಮುಂದಿನ ದಿನಗಳಲ್ಲಿ ಈ ತಂಡದಿಂದ ಇನ್ನಷ್ಟು ಪ್ರಯತ್ನಗಳು ನಡೆಯಲಿ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಎ.ಎಮ್.ಖಾನ್‍ರವರು ಮಾತಾನಾಡಿ ಈಗಿನ ಜನಾಂಗಕ್ಕೆ ತಂತ್ರಜ್ಞಾನ ಮುಂದುವರಿದ ಹಾಗೆ ಮಾಧ್ಯಮ ಕ್ಷೇತ್ರದಲ್ಲಿ ಅವಕಾಶಗಳು…

Read More