Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಸಂಘಟನೆಯಲ್ಲಿ ಪೈಪೋಟಿ ಆಗುವುದು ಬೇಡ. ಎಲ್ಲರೂ ಜತೆಯಾಗಿ ಸೇರಿಕೊಂಡು ಸಂಘಟನೆ ಬೆಳೆಸುತ್ತಾ ಅಪವಾದಗಳು ಬಾರದಂತೆ, ಸಂಘದ ರೀತಿಯಲ್ಲಿ ತೆರೆಮರೆಯಲ್ಲಿ ಕಾರ್ಯಕರ್ತರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ಮಾತೃಭೂಮಿ ಸೇವಾ ಪ್ರತಿಷ್ಠಾನ ದ ಅಧ್ಯಕ್ಷ ಕೆ.ಟಿ ಸುವರ್ಣ ಅಭಿಪ್ರಾಯಪಟ್ಟರು. ತೊಕ್ಕೊಟ್ಟು ಚಾವಡಿ ಸಭಾಂಗಣದಲ್ಲಿ ಭಾನುವಾರ ಹಿಂದೂ ಯುವಸೇನೆ ಪಾಂಚಜನ್ಯ ಶಾಖೆ ತೊಕ್ಕೊಟ್ಟು ಇದನ್ನು ಉದ್ಘಾಟಿಸಿ ಮಾತನಾಡಿದರು.ಉಳ್ಳಾಲ ಭಾಗದಲ್ಲಿನ ಹಿಂದೂ ಸಂಘಟನೆಗಳಲ್ಲಿ ಒಗ್ಗಟ್ಟಿನ ಕೊರತೆಯಿದೆ. ಆದರೆ ಹಿಂದೆ ಇದ್ದಂತಹ ಹಿಂದೂ ಯುವಸೇನೆ ಮರುಸ್ಥಾಪನೆಯಾಗುವ ಮೂಲಕ ಎಲ್ಲಾ ಯುವಕರನ್ನು ಒಗ್ಗೂಡಿಸುವ ಕಾರ್ಯ ಆಗಲಿದೆ. ಹಿಂದೂಗಳ ರಕ್ಷಣೆಯ ಜಾಗ ಎಕ್ಕೂರು ಎಂಬ ಮಾತು ಇದೆ. ಅಲ್ಲಿ ಹಿಂದೂ ಯುವಸೇನೆ ಹಿಂದೆಯೂ , ಈಗಲೂ ಬಲಿಷ್ಠವಾಗಿದೆ. ಸಮಾಜಮುಖಿ ಕಾರ್ಯಗಳೊಂದಿಗೆ ಸಮಾಜದಲ್ಲಿ ಅಸಹಾಯಕರಿಗೆ ಧ್ವನಿಯಾಗಿ ನಿಲ್ಲುತ್ತಾ ಸಂಘಟನೆ ಬೆಳೆದುನಿಂತಿದೆ. ಉಳ್ಳಾಲದಲ್ಲಿಯೂ ತಿಂಗಳಲ್ಲಿ ಸಭೆ ಕರೆದು ಸಂಘಟನೆಯನ್ನು ಬಲಿಷ್ಠಗೊಳಿಸುವ ಪ್ರಯತ್ನ ನೂತನ ಸಮಿತಿಯಿಂದ ನಡೆಯಬೇಕಿದೆ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ…

Read More

UN NETWORKS ಹರೇಕಳ: ಶಿಕ್ಷಣ ಪಡೆದ ಬಳಿಕ ತಾನು ಏನಾಗಬೇಕು ಎನ್ನುವ ತೀರ್ಮಾನ ಶಾಲಾ ಜೀವನದಲ್ಲಿಯೇ ಕೈಗೊಳ್ಳಬೇಕಿದ್ದು ಈ ನಿಟ್ಟಿನಲ್ಲಿ ಶಿಸ್ತಿನ ವಿದ್ಯೆ ಪಡೆದು ಶಿಸ್ತಿನ ಜೀವನ ನಡೆಸಿದರೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬಹುದು ಎಂದು ಕೊಣಾಜೆ ಠಾಣಾ ವೃತ್ತ ನಿರೀಕ್ಷಕ ರವಿ ನಾಯಕ್ ಅಭಿಪ್ರಾಯಪಟ್ಟರು. ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಹಕಾರದಲ್ಲಿ ಶನಿವಾರ ನಡೆದ ವಾರ್ಷಿಕ ಕ್ರೀಡಾಕೂಟದ ವಂದನೆ ಸ್ವೀಕರಿಸಿ ಮಾತನಾಡಿದರು.ಶಿಸ್ತು ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಹೂವು ಬಂಗಾರದ್ದಾದರೂ ಪರಿಮಳವಿಲ್ಲದಿದ್ದರೆ ನಿಷ್ಪ್ರಯೋಜಕ, ಕಲಿತ ಶಿಕ್ಷಣ ಇನ್ನೊಬ್ಬರಿಗೂ ಪ್ರಯೋಜನ ಆಗುವಂತೆ ನೋಡಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.ಸಭಾ ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಮಾತನಾಡಿ, ಕನ್ನಡ ಶಾಲೆಗಳನ್ನು ಮುನ್ನಡೆಸುವುದು ಸುಲಭದ ಕೆಲಸವಲ್ಲ, ಆದರೂ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಿಸ್ತು ಬದ್ಧ ಕಲಿಕೆ, ಪಠ್ಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ರಾಮಕೃಷ್ಣ ಶಾಲೆ…

Read More

UN NETWORKS ಇರಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗು ಗ್ರಾಮ ಪಂಚಾಯಿತಿ ಅನುದಾನದಲ್ಲಿ ಕಾಂಕ್ರೀಟಿಕರಣಗೊಳ್ಳಲಿರುವ ರಸ್ತೆ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಶುಕ್ರವಾರ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಮೇಶ್ ಪೂಜಾರಿ, ಎಂ.ಬಿ. ಉಮರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ., ಗುತ್ತಿಗೆದಾರ ಸಾಹುಲ್ ಹಮೀದ್ ಹಾಗೂ ಎಂಜಿನಿಯರ್ ಗುರುಕಿರಣ್ ಪಾಲ್ಗೊಂಡಿದ್ದರು.

Read More

UN NETWORKS ಮೊಂಟೆಪದವು: ತಮ್ಮಲ್ಲಿರುವ ಪ್ರತಿಭೆಯನ್ನು ಪ್ರಕಟಿಸುವ ಶುಭ ದಿನವೇ ಪ್ರತಿಭಾ ಕಾರಂಜಿ. ಇದು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಪ್ರಗತಿಗೆ ವೇದಿಕೆ ಪೂರಕ. ಮಕ್ಕಳ ಪ್ರತಿಭೆ ಅನಾವರಣಗೊಂಡಾಗ ಮಕ್ಕಳ ಪೋಷಕರ ಮನ ಪುಳಕಿತವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸದಸ್ಯೆ ಮಮತಾ ಡಿ. ಎಸ್ ಗಟ್ಟಿ ಹೇಳಿದರು. ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮ ಪಂಚಾಯತಿಯ ನರಿಂಗಾನ ಸಂಯುಕ್ತ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಶುಕ್ರವಾರ ನಡೆದ ಪ್ರತಿಭಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನ ಅದು ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಂತಸ ಕೊಡುವ ದಿನಗಳು. ನಾವು ಶೈಕ್ಷಣಿಕವಾಗಿ ಹಾಗೂ ಪಠ್ಯೇತರ ಚಟುವಟಿಕೆಯಲ್ಲೂ ಉತ್ತಮ ಸಾಧನೆ ಮಾಡಬೇಕು. ಸರಕಾರ ಶಿಕ್ಷಣಕ್ಕಾಗಿ ಎಲ್ಲ ಸೌಲಭ್ಯ ಕೊಡುತ್ತಿದ್ದು ವಿದ್ಯಾರ್ಥಿಗಳು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಹಾಗೆಯೇ ಶಾಲಾ ಅಭಇವೃದ್ಧೀ ಸಮಿತಿಯ ಬಹುಕಾಲದ ಬೇಡಿಕಯಾಗಿರುವ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ ಸ್ಥಳಾವಕಾಶ ದೊರೆತರೆ ಉತ್ತಮ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಲು ಒಂದು ಲಕ್ಷ ರೂ. ಅನುದಾನ ಮೀಸಲಿಡುತ್ತೇನೆ ಎಂದು ತಿಳಿಸಿದರು. ನರಿಂಗಾನ ಗ್ರಾಮ…

Read More

UN NETWORKS ಉಳ್ಳಾಲ: ಕ್ರೀಡಾ ಕ್ಷೇತ್ರಕ್ಕೆ ಯೆನೆಪೋಯ ವಿಶ್ವವಿದ್ಯಾಲಯ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮನ್ನು ತೊಡಗಿಸಲು ಅವಕಾಶ ದೊರೆತಿದೆ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಯು.ಟಿ. ಇಫ್ತಿಕಾರ್ ಅಲಿ ಅಭಿಪ್ರಾಯಪಟ್ಟರು. ಅಂತರ್ ಕಾಲೇಜು ಫಿಸಿಯೋಥೆರಪಿ ಕ್ರಿಕೆಟ್ ಪಂದ್ಯಾಟ ಚ್ಯಾಂಪ್-ಯೆನ್ಸ್ ಟ್ರೋಫಿ 2018 ದೇರಳಕಟ್ಟೆ ಯೆನೆಪೋಯ ದ ಸಾಕ್ಸರ್ ಗ್ರೌಂಡಿನಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.ಫಿಸಿಯೋಥೆರಪಿ ವಿಭಾಗದಲ್ಲಿ ಕಲಿಕೆಯೇ ಹೆಚ್ಚಿದ್ದ ಕಾಲವೊಂದಿತ್ತು. ಈ ವೇಳೆ ಬೆರಳೆಣಿಕೆಯ ತಂಡಗಳು ಮಾತ್ರ ಪಂದ್ಯಾಟಗಳಲ್ಲಿ ಭಾಗವಹಿಸುತ್ತಿದ್ದವು. ಆದರೆ ಇದೀಗ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹವನ್ನು ಫಿಸಿಯೋಥೆರಪಿ ವಿಭಾಗವೂ ನೀಡುತ್ತಿದೆ. ಇದರಿಂದ ಯೆನೆಪೋಯ ಆಯೋಜಿಸಿರುವ ಟ್ರೋಫಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಂಡಗಳು ಭಾಗವಹಿಸಿರುವುದು ಸಾಕ್ಷಿಯಾಗಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಅಂತರಾಷ್ಟ್ರೀಯ ದಿವ್ಯಾಂಗಿಗಳ ಕ್ರಿಕೆಟ್ ಆಟಗಾರ ವಿಜಯಕಾಂತ್ ತಿವಾರಿ ಮಾತನಾಡಿ ಕ್ರಿಕೆಟ್ ಆಟದಲ್ಲಿ ಹೆಣ್ಮಕ್ಕಳು ತಮ್ಮನ್ನು ತೊಡಗಿಸಿಕೊಳ್ಳುತ್ತಿರುವುದು ಬಹಳಷ್ಟು ಕಡಿಮೆ. ಆದರೆ ಯೆನೆಪೋಯ ಆಯೋಜಿಸಿರುವ ಟ್ರೋಫಿಯಲ್ಲಿ…

Read More

UN NETWORKS ಕೊಣಾಜೆ: ಮಂಗಳಗಂಗೋತ್ರಿ ಜ್ಯೂನಿಯರ್ ಚೇಂಬರ್ ಇಂಟರ್‍ನ್ಯಾಷನಲ್ ಕೊಣಾಜೆ ಘಟಕ `ಮಂಗಳೂರು ಹಿರಿಯ ನಾಗರಿಕರ ಸಂಘ , ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಜಂಟಿ ಸಹಭಾಗಿತ್ವದಲ್ಲಿ `ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ನೋಂದಾವಣಿ ಹಾಗೂ ವಿತರಣೆ’ ಕಾರ್ಯಕ್ರಮ ಕೊಣಾಜೆ ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಉದ್ಯಮಿ ಸೀತಾ ಆರ್. ಪಾವಸ್ಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ `ಹಿರಿಯ ನಾಗರಿಕರನ್ನು ಗುರುತಿಸುವ ಹಾಗೂ ಅವರಿಗೆ ಪ್ರಯೋಜನಗಳನ್ನು ತಲುಪಿಸುವ ಕಾರ್ಯಕ್ರಮ ಯಶಸ್ವಿಯಾಗಲಿ. ಇಂತಹ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಜೇಸಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸಂಸ್ಥೆಗಳ ಕರ್ಯ ಅಭಿನಂದನೀಯ ಎಂದರು. ಅಧ್ಯಕ್ಷತೆ ವಹಿಸಿದ ಜೆಸಿಐ ಮಂಗಳಗಂಗೋತ್ರಿ ಘಟಕದ ಅಧ್ಯಕ್ಷ ಡಾ. ಪ್ರಶಾಂತ ನಾಯ್ಕ ಮಾತನಾಡಿ `ಹಿರಿಯ ನಾಗರಿಕರು ಸಮಾಜದ ಅತ್ಯಮೂಲ್ಯವಾದ ಆಸ್ತಿ. ಅವರ ಜೀವನಾನುಭವಗಳು ಕಿರಿಯರ ಉಜ್ವಲ ಭವಿಷ್ಯಕ್ಕೆ ದಾರಿದೀಪ. ಹಿರಿಯ ನಾಗರಿಕರಿಗಾಗಿ ಸರಕಾರಿ ಹಾಗೂ ಸರಕಾರೇತರ ಸಂಘ ಸಂಸ್ಥೆಗಳಿಂದ ಹಲವು ವಿಶೇಷ ಯೋಜನೆಗಳು…

Read More

UN NETWORKS ಉಳ್ಳಾಲ: ಕ್ರಿಕೆಟ್ ಬೆಟ್ಟಿಂಗ್ ಹಾಕುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಉಳ್ಳಾಲ ಠಾಣಾ ವ್ಯಾಪ್ತಿಯ ಚೆಂಬುಗುಡ್ಡೆ ಪರಿಸರದಿಂದ ಬಂಧಿಸಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಚೆಂಬುಗುಡ್ಡೆ ಮೊಂತೇರೊ ಮನೆಯ ಆಲ್ವಿನ್ ಕಿರಣ್ ಮೊಂತೇರೊ (23) ಪಿಲಾರು ಶಾಲೆ ಬಳಿಯ ಕಿಶೋರ್ ಡಿಸೋಜ (39) ಬಂಧಿತರು. ಅಕ್ರಮ ಬೆಟ್ಟಿಂಗ್ ಗೆ ಸಾರ್ವಜನಿಕರಿಂದ ಸಂಗ್ರಹಿಸಿದ್ದ ನಗದು ರೂ.2,06,000, 7 ಮೊಬೈಲ್ ಫೋನುಗಳು, ಒಂದು ಟ್ಯಾಬ್, 2 ಲ್ಯಾಪ್ ಟಾಪ್, ಮತ್ತು ಕ್ರಿಕೆಟ್ ಬೆಟಿಂಗ್ ವಿವರ ಹಾಕಿದ್ದ ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ವಿಶ್ವಾಸ್ ಎಂಬಾತ ತಲೆಮರೆಸಿಕೊಂಡಿದ್ದಾನೆ.

Read More

UN NETWORKS ದೇರಳಕಟ್ಟೆ: ಧಾರ್ಮಿಕತೆಯನ್ನು ಧ್ವಂಸ ಮಾಡುವ ಮೆಟೀರಿಯಲಿಸಂ ಸಿದ್ಧಾಂತವನ್ನು ಹಿಮ್ಮೆಟ್ಟಿಸೋಣ ಎಂಬ ದ್ಯೇಯ ವಾಕ್ಯದೊಂದಿಗೆ ಸಮಸ್ತ ಶರೀಅತ್ ಸಂರಕ್ಷಣಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ದಿನಾಂಕ 09-12-2018ನೇ ಆದಿತ್ಯವಾರ ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿರುವ ಶರೀಅತ್ ಸಂರಕ್ಷಣಾ ಸಮ್ಮೇಳನವನ್ನು ಯಶಸ್ವಿಗೊಳಿಸಲು ದೇರಳಕಟ್ಟೆ ರೇಂಜ್ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಕರೆ ನೀಡಿದೆ. ಅಸೋಸಿಯೇಷನ್ ನ ಅಧ್ಯಕರಾದ ಇಸ್ಮಾಯಿಲ್ ಹಾಜಿ ದೇರಳಕಟ್ಟೆ, ಗೌರವ ಅಧ್ಯಕ್ಷ ರಾದ ಮಜಲ್ ಅಬ್ಬಾಸ್ ಹಾಜಿ , ಪ್ರಧಾನ ಕಾರ್ಯದರ್ಶಿ ಇಬ್ರಾಹಿಮ್ ಕೊಣಾಜೆ , ಕೋಶಾಧಿಕಾರಿ ಅಬೂಸ್ವಾಲಿಹ್ ಹಾಜಿ ಕುರಿಯಕ್ಕಾರ್ , ಉಪಾಧ್ಯಕ್ಷರುಗಳಾದ ಸ್ವಾಗತ್ ಅಬೂಬಕ್ಕರ್ ಹಾಜಿ , ಎಂ.ಎ.ಅಬ್ದುಲ್ಲಾ ಬೆಳ್ಮ ,ಕಾರ್ಯದರ್ಶಿ ಎಚ್ .ಎಂ. ಮಹಮ್ಮದ್ ಮಾಸ್ಟರ್ ಮಲಾರ್ , ಪತ್ರಿಕಾ ಕಾರ್ಯದರ್ಶಿ ಹಮೀದ್ ಮದ್ಪಾಡಿ ,ಶರೀಅತ್ ಸಂರಕ್ಷಣಾ ಸಮಾವೇಶ ಪ್ರಚಾರ ಸಮ್ಮೇಳನದ ಸ್ವಾಗತ ಸಮಿತಿ ದೇರಳಕಟ್ಟೆ ರೇಂಜ್ ಇದರ ಚೇಯರ್ ಮ್ಯಾನ್ ಅಬೂಬಕ್ಕರ್ ಹಾಜಿ ನಾಟೆಕಲ್ , ಜನರಲ್ ಕನ್ವೀನರ್ ಲತೀಫ್ ದಾರಿಮಿ ರೆಂಜಾಡಿ…

Read More

UN NETWORKS ಉಳ್ಳಾಲ: ಹಿಂದೂಗಳು ಸಂಘಟಿತರಾಗದೇ ಇದ್ದಲ್ಲಿ ಶಬರಿಮಲೆ ದಕ್ಷಿಣದ ಅಯೋಧ್ಯೆ ಆಗುವುದರಲ್ಲಿ ಸಂಶಯವಿಲ್ಲ. ಬೇರೆ ಸಮುದಾಯದ ಮಹಿಳೆಯರು ಹೋರಾಟದ ಹೆಸರಲ್ಲಿ 800 ವರ್ಷಗಳ ಪಾವಿತ್ರ್ಯತೆಯನ್ನು ಹಾಳುಗೆಡವಲು ಯತ್ನಿಸುತ್ತಿರುವುದು ಹಿಂದೂ ಸಮಾಜ ಒಗ್ಗಟ್ಟಾಗಲು ನೀಡಿರುವ ಸೂಚನೆ ಎಂದು ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದ್ದಾರೆ. ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಹಿಂದು ಜಾಗರಣ ವೇದಿಕೆ ಓಂ ಶಕ್ತಿ ಘಟಕ ಕುಂಪಲ ಇವರ ಆಶ್ರಯದಲ್ಲಿ ಕುಂಪಲದ ಆಶ್ರಯ ಕಾಲನಿ ಮೈದಾನದಲ್ಲಿ ಜರಗಿದ 9 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಬರಿಮಲೆಯನ್ನು ಪಾವಿತ್ರ್ಯತೆಯನ್ನು ಕೆಡವಲು ಅಲ್ಲಿನ ಸಿಪಿಎಂ ಸರಕಾರ ಮತ್ತು ಕೆಲ ಹಿಂದೂ ವಿರೋಧಿಗಳಿಂದ ನಡೆಯುತ್ತಿದೆ. ಇದು ಮುಂದುವರಿದರೆ ದೇಶದ ದಕ್ಷಿಣದ ಅಯೋಧ್ಯೆ ಆಗುವುದರಲ್ಲಿ ಸಂಶಯವಿಲ್ಲ. ಶಬರಿಮಲೆ ವಿಚಾರದಲ್ಲಿ ಇದೀಗ ಕೇರಳದಲ್ಲಿ ರಾಷ್ಟ್ರೀಯತೆ ವಿಜೃಂಭಿಸುತ್ತಿದೆ. ಹಿಂದೂಗಳು ಎಲ್ಲರೂ ಒಗ್ಗಟ್ಟಾಗುವ ಅನಿವಾರ್ಯತೆ ಎದುರಾಗಿದೆ. ಬಾಬರಿ ಮಸೀದಿ ಧ್ವಂಸ ಹಿನ್ನೆಲೆಯಲ್ಲಿ ನಡೆಯುತ್ತಿರುವ ಜಾತ್ಯಾತೀತವಾದಿಗಳು ಬಂಟರ,…

Read More

UN NETWORKS ಉಳ್ಳಾಲ: ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿಕೊಳ್ಳಲು , ಇರುವ ಮನೆ ವಿಸ್ತರಿಸಲು ಬಯಸುವ , ವಾರ್ಷಿಕ 3 ಲಕ್ಷ ಆದಾಯ ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಆವಾಝ್ ಯೋಜನೆಯಡಿ ತಲಾ ಒಂದು ಕುಟುಂಬಕ್ಕೆ ರೂ.1.50 ಲಕ್ಷ ಸಹಾಯಧನ ಅತ್ಯಂತ ಸರಳ ವಿಧಾನದಲ್ಲಿ ಒದಗಿಸಲಾಗುವುದು ಎಂದು ನಗರಸಭೆ ಪೌರಾಯುಕ್ತೆ ವಾಣಿ.ವಿ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಅವಾಝ್ ಯೋಜನೆಯನ್ನು ಜೂನ್ 2015ರಲ್ಲಿ ಜಾರಿಗೊಳಿಸಲಾಗಿದೆ. ಇದೀಗ ಉಳ್ಳಾಲ ನಗರಸಭೆ ವ್ಯಾಪ್ತಿಗೆ ಬಂದಿದೆ. ಹೊಸದಾಗಿ ಮನೆ ನಿರ್ಮಿಸಿಕೊಳ್ಳುವುದಾದಲ್ಲಿ ಅಂತಹ ಕುಟುಂಬವು ಸ್ವಂತ ಹೆಸರಿನಲ್ಲಿ ನಿವೇಶನ ಹೊಂದಿರಬೇಕು ಅಥವಾ ಕಚ್ಚಾ ಮನೆ ಹೊಂದಿರಬೇಕು. ಫಲಾನುಭವಿಯು ಫೋಟೋ, ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ಖಾತೆಯ ವಿವರಗಳು ಹಾಗೂ ತನ್ನ ಹೆಸರಿನಲ್ಲಿ ಈಗಾಗಲೇ ಪಕ್ಕಾ ಮನೆ ಇಲ್ಲವೆಂದು ಅಫಿದವಿತ್‍ಗಳನ್ನು ಉಳ್ಳಾಲ ನಗರಸಭೆಗೆ ಸಲ್ಲಿಸಬೇಕಾಗಿದೆ. ಒಂದು ಕುಟುಂಬದಲ್ಲಿ ವಿವಾಹಿತ /…

Read More