Author: UllalaVani

Kannada News From Coastal Karnataka

ಉಳ್ಳಾಲ; ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಫೆ.27 ಮತ್ತು ಫೆ.28 ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿAದ ನಡೆಯಲಿದೆ ಎಂದು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ತಿಳಿಸಿದ್ದಾರೆ. ತೊಕ್ಕೊಟ್ಟು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು, ಸಂಘದ ಬೆಳವಣಿಗೆಯ ಬಗ್ಗೆ ವಿವರಿಸಿದರು. ಆರಂಭದಲ್ಲಿ ಕೇವಲ 41 ಸದಸ್ಯರೊಂದಿಗೆ ಕಾರ್ಯಾರಂಭ ಮಾಡಿದ ಈ ಸಂಘದಲ್ಲಿ ಇದೀಗ 75 ಮಂದಿ ಸದಸ್ಯರಿದ್ದಾರೆ. ಬಡವ-ಶ್ರೀಮಂತ ಎಂಬ ಭೇದವಿಲ್ಲದೆ, ಜಾತಿ ಭಿನ್ನತೆ ಎಂಬ ಸಂಘರ್ಷವಿಲ್ಲದೆ ಭಾರತಾಂಬೆ ಅಡಿಯಲ್ಲೆಲ್ಲರೂ ಒಂದೇ ಎಂಬ ಧ್ಯೇಯವಾಕ್ಯದಡಿ ಸಂಘವು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಸಣ್ಣ ಕಟ್ಟಡ ನಿರ್ಮಿಸುವ ಕನಸಿನಿಂದ ಆರಂಭವಾದ ಪ್ರಯತ್ನ ದೇವರ ಆಶೀರ್ವಾದದಿಂದ ಇಂದು ಅದರ ಹತ್ತು ಪಟ್ಟು ದೊಡ್ಡ…

Read More

ಹರೇಕಳ: ಭಾರತದ ಸಂವಿಧಾನ ಬರೆದಿರುವ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರ ಬಿಡಿಸುವ ಮತ್ತು ಭಾವಚಿತ್ರಕ್ಕೆ ಬಣ್ಣ ಹಚ್ಚುವ ಚಿತ್ರಕಲೆಯಲ್ಲಿ ವಿದ್ಯಾರ್ಥಿಗಳು ಉನ್ನತ ಸ್ಥಾನಮಾನ ಪಡೆದು ನಾಡಿಗೆ ಕೀರ್ತಿ ತರಬೇಕೆಂಬ ಉದ್ದೇಶ ಇಟ್ಟುಕೊಂಡು 135ನೇ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಹರೇಕಳದಲ್ಲಿ ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ಉಳ್ಳಾಲ ತಾಲೂಕು ವತಿಯಿಂದ ಚಿತ್ರಕಲಾ ಸ್ಪರ್ಧೆ ನಡೆಯಿತು. ಪದ್ಮಶ್ರೀ ಪ್ರಶಸ್ತಿ ಪಡೆದ ಹಾಜಬ್ಬ ಇವರು ಕಾರ್ಯಕ್ರಮ ಉದ್ಘಾಟಿಸಿ, ಅಂಬೇಡ್ಕರ್ ರವರ ಜೀವನ ಚರಿತ್ರೆ, ಶಿಕ್ಷಣದ ಕುರಿತು ವಿದ್ಯಾರ್ಥಿಯವರಿಗೆ ಮಾಹಿತಿ ನೀಡಿದರು. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ಸ್ಥಾಪಕ ಅಧ್ಯಕ್ಷರಾದ ಯಾದವ ಪ್ರಾಸ್ತವಿಕ ಮಾತುಗಳನ್ನಾಡಿದರು. ಶಾಲಾ ಅಧ್ಯಕ್ಷರಾದ ಮೀನಝ, ಮುಖ್ಯ ಶಿಕ್ಷಕಿಯಾದ ರಾಜೇಶ್ವರಿ,ಶಾಲಾ ಶಿಕ್ಷಕಿ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.

Read More

ಕುಂದಾಪುರ, ಫೆ. 26 : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದು ಕುಂದಾಪುರ ಮತ್ತು ಗಂಗೊಳ್ಳಿ ನಡುವಿನ ಸಮುದ್ರದಲ್ಲಿ ನೀರು ತುಂಬಿ ಮುಳುಗಡೆಯಾಗಿದೆ. ಈ ಬೋಟ್‌ನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟ್‌ನ ಮೀನುಗಾರರು ರಕ್ಷಿಸಿದ್ದಾರೆ. ಬೋಟ್‌ನಲ್ಲಿದ್ದ ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಮತ್ತು ಶ್ರೀನಿವಾಸ ಎಂಬ ಮೀನುಗಾರರನ್ನು ರಕ್ಷಿಸಲಾಗಿದೆ.ಕೆಮ್ಮಣ್ಣು ನಿವಾಸಿ ನಾಗರಾಜ್ ಪುತ್ರನ್ ಅವರಿಗೆ ಸೇರಿದ ಶ್ರೀ ದುರ್ಗಾಪರಮೇಶ್ವರಿ ಎಂಬ ಹೆಸರಿನ ಬೋಟ್ ಫೆಬ್ರವರಿ 23ರ ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ಫೆಬ್ರವರಿ 24ರಂದು ಸಮುದ್ರದಲ್ಲಿ ಯಾವುದೋ ವಸ್ತು ಬೋಟ್‌ನ ಕೆಳಭಾಗಕ್ಕೆ ತಾಗಿದ ಪರಿಣಾಮ, ಇಂಜಿನ್ ಅಡಿ ಭಾಗದಲ್ಲಿ ನೀರು ನುಗ್ಗಲು ಆರಂಭಿಸಿದೆ. ಪರಿಣಾಮ ಇಂಜಿನ್ ಸ್ಥಗಿತಗೊಂಡಿದೆ.ಕೂಡಲೇ ಮೀನುಗಾರರು ಬೋಟಿನಿಂದ ನೀರನ್ನು ಖಾಲಿ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ತಕ್ಷಣವೇ ಮಲ್ಪೆಯ ಶ್ರೀ ಕೃಷ್ಣ ಬೋಟ್‌ನ ಮೀನುಗಾರರು ಮತ್ತು ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಐವರು ಮೀನುಗಾರರನ್ನು ರಕ್ಷಿಸಿದರು.ಬಳಿಕ ಶ್ರೀ ಕೃಷ್ಣ ಬೋಟ್ ಮೂಲಕ ಮುಳುಗುತ್ತಿದ್ದ…

Read More

ಸುಳ್ಯ, ಫೆ. 26: ಸುಳ್ಯ ತಾಲೂಕಿನಾದ್ಯಂತ ಗುಡುಗು ಸಹಿತ ಗಾಳಿ-ಮಳೆಯಾಗಿದ್ದು, ಸುಳ್ಯ ಸಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಉರುಳಿ ಬಿದ್ದು ಮನೆ ಹಾಗೂ ಕಟ್ಟಡಗಳಿಗೆ ಹಾನಿಯುಂಟಾಗಿದೆ. ಸುಳ್ಯ ನಗರ, ಸಂಪಾಜೆ, ಕಲ್ಲುಗುಂಡಿ, ಅರಂತೋಡು, ಬೆಳ್ಳಾರೆ, ಮಂಡೆಕೋಲು, ಅಜ್ಜಾವರ, ಎಲಿಮಲೆ, ದೊಡ್ಡತೋಟ, ಸೋಣಂಗೇರಿ ಮತ್ತು ಪೆರುವಾಜೆ ಪರಿಸರದಲ್ಲಿ ಭಾರೀ ಗಾಳಿ-ಮಳೆ ಸುರಿದಿದೆ.ಸುಳ್ಯದ ಗುರುಂಪು ನಿವಾಸಿ ಮುನೀರ್ ಎಂಬುವವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಸಂಪಾಜೆಯ ಪೆಲ್ತಡ್ಕದಲ್ಲಿ ಚಂದ್ರಾವತಿ ಎಂಬುವವರ ಮನೆಗೆ ಹಾಗೂ ಗೂನಡ್ಕದ ರಾಜ ಎಂಬುವವರ ಮನೆಯ ಮೇಲೆ ತೆಂಗಿನ ಮರಗಳು ಬಿದ್ದು ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಎಲಿಮಲೆಯಲ್ಲಿ ತೆಂಗಿನ ಮರವು ಎಲಿಮಲೆ ನೂರುಲ್ ಹುದಾ ಮದ್ರಸ ಕಟ್ಟಡದ ಮೇಲೆ ಬಿದ್ದಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದೆ.ಗಾಳಿಯ ವೇಗಕ್ಕೆ ತಾಲೂಕಿನ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ತೋಟಗಾರಿಕಾ ಬೆಳೆಗಳಿಗೂ ಈ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಸಾಧ್ಯತೆಯಿದೆ.

Read More

ಸೋಮೇಶ್ವರ; ಅನುದಾನಿತ ಸ್ಟೇಲ್ಮಾ ಮರೀಸ್ ಹಿರಿಯ ಪ್ರಾಥಮಿಕ ಶಾಲೆ ಸೋಮೇಶ್ವರ ಇಲ್ಲಿನ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆಯ ಪ್ರಯುಕ್ತ ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ವತಿಯಿಂದ ಅಂಬೇಡ್ಕರ್ ಅವರ ಭಾವಚಿತ್ರ ಬಿಡಿಸುವ ಮತ್ತು ಭಾವಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ ನಡೆಯಿತು. ವಿದ್ಯಾನಿಧಿ ಟ್ರಸ್ಟ್ನ ಸ್ಥಾಪಕಧ್ಯಕ್ಷರಾದ ಯಾದವ ಅಸ್ಸೈಗೋಳಿ ಕಾರ್ಯಕ್ರಮ ಉದ್ಘಾಟಿಸಿ ಚಿತ್ರಕಲೆಯ ಕುರಿತು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯನಿ ಪ್ರೆಸಿಲ್ಲಾ ಡಿಸೋಜಾ ಪ್ರಾಸ್ತಾವಿಕ ಮಾತಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ವಿಚಾರಧಾರೆ ಪ್ರಸ್ತಾಪಿಸಿದ್ದು, ಶಿಕ್ಷಕಿರಾದ ಮರಿಯ ಜ್ಯೋತಿ ಡಿ’ಸೋಜಾ, ಸೌಜನ್ಯ, ಸವಿತಾ ಪೂಜಾರಿ, ದುಲ್ಸಿನ್ ಪ್ಲಾವಿಯ ಡಿ’ಸೋಜಾ, ಶ್ರಾವ್ಯ ಶೆಟ್ಟಿ, ಲವಿಟ ಪ್ಲೇವಿ ಡಿ’ಸೋಜಾ, ವಸಂತ, ಕಲ್ಪಿತ ಉಪಸ್ಥಿತರಿದ್ದರು.

Read More

ಮಂಗಳೂರು; ಸಹಕಾರ ರತ್ನ ಡಾ.ಎಂ.ಎನ್.ರಾಜೇoದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮದೊಂದಿಗೆ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಸಹಕಾರಿ ರಂಗದಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪರಿಶ್ರಮ ಛಲದಿಂದ ಮಾಡಿದ ಸಾಧನೆ, ಸಹಕಾರಿ ಬ್ಯಾಂಕ್ ಅನ್ನು ರಾಷ್ಟçಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಅವರಿಗೆ ಸಲ್ಲುತ್ತದೆ. ಇಂತಹ ಸಾಧಕರಿಗೆ ಸನ್ಮಾನ ಮಾಡುವುದರಿಂದ ಭವಿಷ್ಯದಲ್ಲಿ ಈ ರೀತಿಯ ಸಾಧನೆಗೈಯಲು ಯುವಜನರಿಗೆ ಪ್ರೇರಣೆ ಆಗಲಿದೆ. ಅವರ ನೇತೃತ್ವದಲ್ಲಿ ಸಹಕಾರ ರಂಗ ಇನ್ನಷ್ಟು ಎತ್ತರಕ್ಕೆ ಏರುವಂತಾಗಲಿ ಎಂದು ಶುಭಹಾರೈಸಿದರು. ಅಭಿವಂದನಾ ಭಾಷಣ ಮಾಡಿದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸಹಕಾರಿ ರಂಗದ ಸ್ಥಾನಕ್ಕೆ ಡಾ.ಎಂ.ಎನ್.ರಾಜೇAದ್ರ ಕುಮಾರ್ ನ್ಯಾಯ ಒದಗಿಸಿ ದಾಖಲೆ ನಿರ್ಮಿಸಿದ್ದಾರೆ. ಜೊತೆಗೆ ಸಾಕಷ್ಟು ಪ್ರತಿಭಾವಂತರನ್ನು ಬೆಳೆಸಿದ್ದಾರೆ ಸರ್ವರಿಗೆ ಸಮಬಾಳು ಸರ್ವರಿಗೂ ಸಮಪಾಲು ಎಂಬ ಧೈಯದೊಂದಿಗೆ ನೆಹರು ಅವರ ಸಹಕಾರಿ ರಂಗದ ಯೋಜನೆಯಂತ ಸಹಕಾರ ರಂಗವನ್ನು ಮುನ್ನಡೆಸಿದ್ದಾರೆ. ಅವರ 45 ವರ್ಷಗಳ…

Read More

ಇರಾ; ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಇರಾ ಗ್ರಾಮ ಪಂಚಾಯತ್ ಮಟ್ಟದ ಕಾಂಗ್ರೆಸ್ ಪಕ್ಷದ ಬಿಎಲ್‌ಒ ಆಯ್ಕೆ ಬಗ್ಗೆ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಸಭೆ ನಡೆಯಿತು. ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಬೋಳಿಯಾರ್ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿಎಸ್ ಗಟ್ಟಿ ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರ ಅಬ್ದುಲ್ ರಝಕ್ ಕುಕ್ಕಾಜೆ, ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಮಿತಾ ಶೆಟ್ಟಿ, ಅಸಂಘಟಿತ ಕಾರ್ಮಿಕ ಘಟಕದ ಕಾರ್ಯದರ್ಶಿ ಜೆಸಿಂತಾ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶ್ರಫ್ ಸಂಪಿಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಉಳ್ಳಾಲ ; ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಮೂರುಕಟ್ಟೆ ಪ್ರದೇಶದಲ್ಲಿ ನಾಯಿ ಕಚ್ಚಿದ ಪರಿಣಾಮವಾಗಿ ಮೃತಪಟ್ಟ ದಯಾನಂದ (60) ಅವರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಘಟನೆಯ ಬಳಿಕ ಪೊಲೀಸರು ಹಾಗೂ ವಿಧಿವಿಜ್ಞಾನ ತಂಡ (FSL) ಸ್ಥಳ ಪರಿಶೀಲನೆ ನಡೆಸಿ, ಇದು ಬೀದಿ ನಾಯಿಗಳ ದಾಳಿ ಎಂಬುದನ್ನು ದೃಢಪಡಿಸಿದ್ದರು. ಈ ಬಗ್ಗೆ ಉಳ್ಳಾಲವಾಣಿ ವರದಿ ಪ್ರಕಟವಾಗಿ ಸರಕಾರದ ಹಾಗೂ ಸ್ಥಳೀಯ ಆಡಳಿತದ ಗಮನ ಸೆಳೆದಿತ್ತು. ಇದೀಗ ಉಳ್ಳಾಲ ಪುರಸಭೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು. ಪುರಸಭೆಯ ಮುಖ್ಯಾಧಿಕಾರಿ, ಅಧ್ಯಕ್ಷೆ ಕಮಲಾ, ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗಟ್ಟಿ ಹಾಗೂ ವಾರ್ಡ್ ಕೌನ್ಸಿಲರ್ ಮನೋಜ್ ಕುಮಾರ್ ಉಪಸ್ಥಿತರಿದ್ದರು.ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ನಾಯಿಗಳ ಸಮಸ್ಯೆ ಹೆಚ್ಚುತ್ತಿರುವ ಬಗ್ಗೆ ಉಳ್ಳಾಲವಾಣಿ ವರದಿ ಪ್ರಕಟಿಸಿದ್ದು, ದಯಾನಂದ ಗಟ್ಟಿಯವರಿಗೆ ಪರಿಹಾರ ದೊರಕಿದಂತಾಗಿದೆ.

Read More

ಉಳ್ಳಾಲ; ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ ವಿಜೃಂಭಣೆಯಿoದ ನಡೆದಿದೆ. ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜನ ಈ ಸ್ಥಳ ಹಿಂದು-ಮುಸ್ಲಿo-ಕ್ರೈಸ್ತರ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಈ ವೇಳೆ ಗೌರವ ಅಧ್ಯಕ್ಷರಾದ ಸಿರಿಲ್ ರಾಬರ್ಟ್ ಡಿ’ಸೋಜ ಮಾತನಾಡಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿ ವತಿಯಿಂದ ಕಳೆದ 11ವರ್ಷಗಳಿಗೆ ವರ್ಷಾವಧಿ ಕೋಲ ನಡೆಸುತ್ತಿದ್ದೇವೆ. ಕೊರಗಜ್ಜ ದೈವದ ದೊಂದಿಬೆಳಕಿನ ಕೋಲಸೇವೆ ವಿಶೇಷವಾಗಿದ್ದು, ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈಗಾಗಲೇ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಸ್ಥೆಯಾಗಿರುವ ಶಿವಾಜಿ ಫ್ರೇಂಡ್ಸ್ ಸುವರ್ಣ ಮಹೋತ್ಸದತ್ತ ಹೆಜ್ಜೆಇಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ದೈವಿಕ ಕಾರ್ಯದಲ್ಲಿ ಭಕ್ತಾದಿಗಳು ಆಗಮಿಸಿ, ಅನ್ನಸಂತರ್ಪಣೆ ಸ್ವೀಕರಿಸಿ, ದೊಂದಿಬೆಳಕಿನ ಕೊರಗಜ್ಜನ ಕೋಲಸೇವೆಯನ್ನು ಕಣ್ತುಂಬಿಕೊoಡಿದ್ದಾರೆ. ಈ ಸಂದರ್ಭದಲ್ಲಿ ಸದಾನಂದ ಒಂಬತ್ತುಕೆರೆ, ಮಾಜಿ ಕಾರ್ಯದರ್ಶಿ ಚಂದ್ರಶೇಖರ ಉಚ್ಚಿಲ್, ಮಾಜಿ ಗೌರವ ಅಧ್ಯಕ್ಷರಾದ ಕೇಶವ ಭಟ್ನಗರ, ಸಂಘದ ಪ್ರಧಾನ ಕಾರ್ಯದರ್ಶಿ ರೋಹನ್ ತೊಕ್ಕೊಟ್ಟು ಉಪಸ್ಥಿತರಿದ್ದರು.

Read More

ಕೋಟೆಕಾರು; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾ.ಬೃಜೇಶ್ ಚೌಟರವರು, ತಮ್ಮ ಪ್ರದೇಶಾಭಿವೃದ್ಧಿ ನಿಧಿಯ 5 ಲಕ್ಷ ರೂಪಾಯಿ ಅನುದಾನದಲ್ಲಿ ಮುನ್ನೂರು ಗ್ರಾಮದ ಸುಭಾಷ್ ನಗರದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಕಾರ್ಯಕರ್ತನಿಂದ ಉದ್ಘಾಟಿಸ ಬೇಕೆಂಬ ಆಶಯದಿಂದ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸತೀಶ್ ಪೂಜಾರಿ ಯವರಿಂದ ಉದ್ಘಾಟಿಸಿದರು. ಕಾರ್ಯಕರ್ತನ ಶ್ರಮ ಮತ್ತು ಕಾರ್ಯದಿಂದ ಪಕ್ಷ ಎನ್ನುವ ಸಿದ್ಧಾಂತದಡಿಯಲ್ಲಿ ಕಾರ್ಯಕರ್ತನಿಗೆ ಗೌರವ ನೀಡಿದ ಸಂಸದರು, ಬಳಿಕ ಮಾತನಾಡಿ, ಪ್ರದೇಶಾಭಿವೃದ್ಧಿ ನಿಧಿಯಿಂದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡುವುದರ ಜತೆಯಲ್ಲಿ ಹೆದ್ದಾರಿ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತದೆ. ಕೋಟೆಕಾರು, ದೇರಳಕಟ್ಟೆ ರಸ್ತೆ ಅಭಿವೃದ್ಧಿಗೆ ಅನುದಾನವನ್ನು ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಥಮ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದು ಸಂಸದರು ತಿಳಿಸಿದರು. ಬಳಿಕ ಪರಿಸರದ ನಾಗರಿಕರು ಸಂಸದರನ್ನು ಗೌರವಪೂರ್ವಕವಾಗಿ ಅಭಿನಂದಿಸಿದರು. ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಮಾತನಾಡಿ,ಅಭಿವೃದ್ಧಿಯ ಜತೆಯಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರು ಪ್ರಾಮಾಣಿಕ ವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಭಾಷ್ ನಗರದ ಈ ರಸ್ತೆ…

Read More