Author: UllalaVani

Kannada News From Coastal Karnataka

ಮಂಗಳೂರು, ಜೂನ್ 18: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಕಾರ್ಯಕರ್ತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಎಸ್.ಐ.ಆರ್ ಕಾರ್ಯಾಗಾರವನ್ನು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಮಾತನಾಡಿದ ಪದ್ಮನಾಥ್ ಆರ್ ಪೂಜಾರಿ ರವರು ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾರರ ಪಟ್ಟಿಯ ನಿಖರತೆ ಅತ್ಯಂತ ಮುಖ್ಯವಾಗಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಮತದಾರರ ನೋಂದಣಿ, ತಿದ್ದುಪಡಿ, ಹೆಸರು ಸೇರ್ಪಡೆ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತಂತೆ ಕಾರ್ಯಕರ್ತರಿಗೆ ಸಮಗ್ರ ಮಾಹಿತಿ ನೀಡಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಕರು ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವು ಹೊಂದಿರುವುದು ಅಗತ್ಯವಾಗಿದೆ. ಎಸ್.ಐ.ಆರ್ ಪ್ರಕ್ರಿಯೆಯ ಕುರಿತು ಮನೆಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಯುವ ಕಾಂಗ್ರೆಸ್…

Read More

ತೊಕ್ಕೊಟ್ಟು: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ಶಾರದಾ ಯೋಗ ಮತ್ತು ನ್ಯಾಚುರೋಪಥಿ ಮೆಡಿಕಲ್ ಕಾಲೇಜು, ಮಂಗಳೂರು ಇವರ ಸಹಯೋಗದಲ್ಲಿ ನಾಲ್ಕು ದಿನಗಳ ಯೋಗ ಶಿಬಿರವನ್ನು ಆಯೋಜಿಸಲಾಗಿದೆ. “ಸ್ವಲ್ಪ ಸಮಯ ನಮಗಾಗಿ” ಎಂಬ ಧ್ಯೇಯದೊಂದಿಗೆ ನಡೆಯಲಿರುವ ಈ ಯೋಗ ಶಿಬಿರವು ಜೂನ್ 18 ರಿಂದ ಜೂನ್ 21ರವರೆಗೆ ಪ್ರತಿದಿನ ಸಂಜೆ 6.00 ರಿಂದ 7.00 ಗಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮವು ತೊಕ್ಕೊಟ್ಟಿನ ಗಣಪತಿ ದೇವಸ್ಥಾನದ ಸಮೀಪದ ಓವರ್‌ಬ್ರಿಡ್ಜ್ ಹತ್ತಿರ ಇರುವ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಯೋಗಾಭ್ಯಾಸದಲ್ಲಿ ಭಾಗವಹಿಸುವವರು ತಮ್ಮದೇ ಹಾಸುವ ವ್ಯವಸ್ಥೆಯನ್ನು ತರಬೇಕೆಂದು ಸಂಘಟಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಣಿಗಾಗಿ 9591889409 ಮತ್ತು 9964996008 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಉಡುಪಿ, ಜೂ.18: ಜಾಗತಿಕ ಯುದ್ಧದ ಮೂಲಕ ಜನಾಂಗದ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ಪ್ರಕೃತಿಯ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಕರ್ಮಿ, ಕನ್ನಡ ಉಪನ್ಯಾಸಕ ರಾಮಾಂಜಿ ನಮ್ಮ ಭೂಮಿ ಶನಿವಾರ ಮಣಿಪಾಲ ಟೈಗರ್ ಸರ್ಕಲ್ ಬಳಿ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ಮಣಿಪಾಲದ ಬ್ರಹ್ಮ ಡಾ. ಟಿ.ಎಂ.ಎ.ಪೈ ಅವರ ಪುತ್ತಳಿಗೆ ಪುಷ್ಪ ನಮನ ಅರ್ಪಿಸಿ, ಈ ಯುದ್ಧ ನೀತಿಗಳಿಂದ ಮಡಿದವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಾಂಜಿ, ಕಳೆದ ಐದು ತಿಂಗಳಿನಿಂದ ನಡೆಯುತ್ತಿರುವ ಜಾಗತಿಕ ಯುದ್ಧ ಸಂಬಂಧಿ ಘಟನೆಗಳನ್ನು ನೋಡಿ ಮನನೊಂದು ನೈತಿಕ ಪ್ರತಿಭಟನೆ ಮಾಡುತ್ತಿದ್ದೇನೆ. ಈ ಕುರಿತು ಈಗಾಗಲೇ ಉಡುಪಿ, ಕುಂದಾಪುರ, ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ ನಾಲ್ಕನೇ ಬಾರಿಗೆ ಪ್ರತಿಭಟನಾ ಚಳುವಳಿ ನಡೆಸುತ್ತಿದ್ದೇನೆ. ಜಾಗತಿಕ ಮಟ್ಟದ ಸಹಬಾಳ್ವೆ, ಶಾಂತಿ, ಸೌಹಾರ್ದತೆ, ಪರಸ್ಪರ ಹೊಂದಾಣಿಕೆ, ಮಾನವ ಪ್ರೀತಿ, ಪರಿಸರ ಕಾಳಜಿ, ನಮ್ಮ ಮಕ್ಕಳ ಭವಿಷ್ಯಕ್ಕೆ ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದರು.ಸ್ಥಳಕ್ಕೆ…

Read More

ಬೆಳ್ತಂಗಡಿ, ಜೂ. 18 ; ಎರಡು ಕಾರುಗಳು ಮತ್ತು ಬೈಕ್‌ ನಡುವೆ ಅಪಘಾತವಾಗಿ ಬೈಕ್‌ ಸವಾರ ಗಾಯಗೊಂಡ ಘಟನೆ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಬಳಿ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎದುರುಗಡೆ ಬರುತ್ತಿದ್ದ ಕಾರು ಮತ್ತು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಉರುಳಿ ಬಿದ್ದು ಗಾಯಗೊಂಡರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಡಿಕ್ಕಿಯ ಬಲಕ್ಕೆ ಒಂದು ಕಾರು ಪಲ್ಟಿಯಾಗಿದ್ದು, ಇನ್ನೊಂದು ಕಾರಿನ ಮುಂಭಾಗ ತೀವ್ರವಾಗಿ ಹಾನಿಯಾಗಿದೆ.ಕಾರುಗಳಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Read More

ನಮ್ಮ ಆಲೋಚನೆಗಳು ನಮ್ಮ ಸಂತೋಷ ಮತ್ತು ದುಃಖವನ್ನು ನಿರ್ಧರಿಸುತ್ತದೆ ನಮ್ಮ ಜೀವನದ ಅನುಭವಗಳು ಭಾವನೆಗಳು ಕಷ್ಟ ಮತ್ತು ದುಃಖಕ್ಕೆ ನಮ್ಮ ಮನಸ್ಥಿತಿಯೇ ಕಾರಣವಾಗುತ್ತದೆ ಮಾತ್ರವಲ್ಲದೆ ದೇಹ ಮತ್ತು ಮನಸ್ಸು ಪರಸ್ಪರ ನಿಕಟ ಪೂರ್ವ ಸಂಬಂಧಗಳನ್ನು ಹೊಂದಿರುತ್ತದೆ ಹಾಗಾಗಿ ಮನಸ್ಸು ಮತ್ತು ದೇಹವನ್ನು ಆರೋಗ್ಯವಾಗಿ ಇಟ್ಟುಕೊಂಡಾಗ ಸದೃಢ ಜೀವನ ಸಾಧ್ಯವೆಂದು ಮಂಗಳೂರಿನ ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಮ್ ಅವರು ಅಭಿಪ್ರಾಯಪಟ್ಟರು. ಇವರು ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಸಭೆ ಮತ್ತು ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಕಡೆಂಜ ಶ್ರೀ ಸೋಮಶೇಖರ ಚೌಟ ವಹಿಸಿ ವಿದ್ಯಾ ಶ್ರೀ ಶೈಕ್ಷಣಿಕ ದತ್ತು ಯೋಜನೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಾದ ದರ್ಶಿನಿ, ಫಾತಿಮ ರಫೀದ, ಮಹಮ್ಮದ್ ಮುಂಝಿರ್ ಇವರುಗಳನ್ನು ಸನ್ಮಾನಿಸಲಾಯಿತು.ಹಾಗು 2026-27 ನೇ…

Read More

ನವದೆಹಲಿ, ಜೂ. 17 : ಭಾರತದ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ ದಾಖಲೆಯ 1.78 ಲಕ್ಷ ಕೋಟಿ ರೂ. ಮಟ್ಟ ತಲುಪಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 15.6 ಪ್ರತಿಶತ ಹೆಚ್ಚಳವಾಗಿದೆ. ಇದು ಆತ್ಮನಿರ್ಭರ ಭಾರತದ ದೊಡ್ಡ ಸಾಧನೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ರಕ್ಷಣಾ ಉತ್ಪಾದನಾ ಇಲಾಖೆ, ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳ ಪ್ರಯತ್ನಗಳನ್ನು ಪ್ರಶಂಸಿಸಿದರು. ಇದು ದೇಶದ ರಕ್ಷಣಾ ಕೈಗಾರಿಕಾ ಬುನಾದಿಯ ಬಲವರ್ಧನೆಯ ಸ್ಪಷ್ಟ ಸಂಕೇತ. ಸರ್ಕಾರದ ನೀತಿಗಳು, ಹೊಸ ಉಪಕ್ರಮಗಳು ಮತ್ತು ಖಾಸಗಿ ಕ್ಷೇತ್ರದ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆಯಿಂದ ಮುಂದಿನ ವರ್ಷಗಳಲ್ಲಿ ಇನ್ನಷ್ಟು ವೇಗವಾಗಿ ಬೆಳೆಯುತ್ತದೆ” ಎಂದರು.ಹಿಂದಿನ ಹಣಕಾಸು ವರ್ಷ 2024-25ರಲ್ಲಿ ರಕ್ಷಣಾ ಉತ್ಪಾದನೆ 1.54 ಲಕ್ಷ ಕೋಟಿ ರೂ. ಇತ್ತು. 2020-21ರಲ್ಲಿ ಇದು 84,643 ಕೋಟಿ ರೂ. ಮಾತ್ರ ಇತ್ತು. ಈಗ 110 ಪ್ರತಿಶತ ಹೆಚ್ಚಳವಾಗಿದೆ. 2013-14ರಲ್ಲಿ 43,746 ಕೋಟಿ ರೂ. ಇದ್ದದ್ದು ಈಗ ನಾಲ್ಕು…

Read More

ಉಳ್ಳಾಲ: ಆಯೋರ್ಟಿಕ್ ವಾಲ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಕ್ಯಾಮರೂನ್ ದೇಶದ 38 ವರ್ಷದ ಮಹಿಳಾ ರೋಗಿಯೊಬ್ಬರು ಚಿಕಿತ್ಸೆ ಪಡೆಯಲು ಭಾರತಕ್ಕೆ ಬಂದಿದ್ದು, ಆಕೆಗೆ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ವರ್ಗಾಯಿತ ರಕ್ತ ನೀಡದೆ ಆಯೋರ್ಟಿಕ್ ವಾಳ್ವೆ ಬದಲಾವಣೆ ಅಪರೂಪದ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದೆ. ಮಹಿಳೆಯು ಯೆಹೋವನ ಸಾಕ್ಷಿಗಳು  ಧರ್ಮಕ್ಕೆ ಸೇರಿದವರಾಗಿದ್ದು,ಅವರು ತಮ್ಮ ಧಾರ್ಮಿಕ ನಂಬಿಕೆಯ ಪ್ರಕಾರ ಯಾವುದೇ ಸಂದರ್ಭದಲ್ಲೂ ರಕ್ತ ವರ್ಗಾವಣೆಯನ್ನು  ಸ್ವೀಕರಿಸುವುವಂತಿರಲಿಲ್ಲ. ಈ ಕಾರಣದಿಂದಾಗಿ ಅನೇಕ ಆಸ್ಪತ್ರೆಗಳು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲು ಮುಂದಾಗಿರಲಿಲ್ಲ. ಬಳಿಕ ಅವರು ಭಾರತದಲ್ಲಿನ ಯೆಹೋವನ ಸಾಕ್ಷಿಗಳು ಸಂಸ್ಥೆಯ ಸಂಯೋಜಕರನ್ನು ಸಂಪರ್ಕಿಸಿದ್ದು, ಅವರು ಈ ಮಹಿಳೆಯನ್ನು ರಕ್ತದಾನಿಗಳ ವರ್ಗಾಯಿತ ರಕ್ತವನ್ನು ಬಳಸದೆ ಅನೇಕ ಹೃದಯ ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಿರುವ ಹೃದಯ ಶಸ್ತ್ರಚಿಕಿತ್ಸಕರಾದ ಡಾ.ಎ.ಜಿ.ಜಯಕೃಷ್ಣನ್ ಅವರ ಬಳಿಗೆ ಕಳುಹಿಸಿದ್ದಾರೆ. ಕೆ.ಎಸ್‌.ಹೆಗ್ಡೆ ಆಸ್ಪತ್ರೆಯ ಹೃದಯ ಶಸ್ತ್ರಚಿಕಿತ್ಸಕರಾದ ಡಾ.ಎ.ಜಿ.ಜಯಕೃಷ್ಣನ್ ಅವರ ನೇತೃತ್ವದಲ್ಲಿ ಅರಿವಳಿಕೆ ವಿಭಾಗದ ತಜ್ಞರಾದ ಡಾ.ಮಂಜುನಾಥ ಕಾಮತ್ ಹಾಗೂ ಡಾ.ಚೇತನ್ ಕುಮಾರ್ ಅವರೊಂದಿಗೆ ಹೃದ್ರೋಗ ವಿಭಾಗದ ಹೃದಯ ಶಸ್ತ್ರಚಿಕಿತ್ಸಕರಾದ ಡಾ.ನರೇಶ್‌ಚಂದ ಹೆಗ್ಡೆ…

Read More

ಸುರತ್ಕಲ್, ಜೂ.17: ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಸ್ತಾಪವನ್ನು ವಿರೋಧಿಸಿ ಹಾಗೂ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ (ಸಿಎಚ್‌ಸಿ) ಮೇಲ್ದರ್ಜೆಗೆ ಏರಿಸುವಂತೆ ಆಗ್ರಹಿಸಿ ಸುರತ್ಕಲ್ ಆರೋಗ್ಯ ಕೇಂದ್ರದ ಮುಂಭಾಗ ಬುಧವಾರ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಯಿತು. ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ಸುರತ್ಕಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹತ್ತಕ್ಕೂ ಹೆಚ್ಚು ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ರಾಜಕೀಯ, ಸಾಮಾಜಿಕ, ಕಾರ್ಮಿಕ, ಯುವಜನ ಹಾಗೂ ನಾಗರಿಕ ಸಂಘಟನೆಗಳ ಸದಸ್ಯರು ಭಾಗವಹಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸರ್ಕಾರಿ ಆಸ್ಪತ್ರೆಗಳು ಬಡವರು, ಮಧ್ಯಮ ವರ್ಗದವರು ಹಾಗೂ ದುರ್ಬಲ ವರ್ಗಗಳ ಜನರಿಗೆ ಜೀವನಾಡಿಯಾಗಿದ್ದು, ಅವುಗಳನ್ನು ಖಾಸಗಿ ಸಂಸ್ಥೆಗಳ ಅಧೀನಕ್ಕೆ ನೀಡುವುದರಿಂದ ಆರೋಗ್ಯ ಸೇವೆಗಳು ದುಬಾರಿಯಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣಗೊಂಡಿರುವ ಆರೋಗ್ಯ ಮೂಲಸೌಕರ್ಯಗಳು ಸಾರ್ವಜನಿಕ ಸೇವೆಗಾಗಿಯೇ ಉಳಿಯಬೇಕು ಎಂದು ಒತ್ತಾಯಿಸಿದರು. ಸುರತ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ…

Read More

ಮಂಗಳೂರು, ಜೂ. 17 :ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವಾಗ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ನಿಯಮದ ಕುರಿತು ಪೊಲೀಸರು ಮತ್ತೊಮ್ಮೆ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಶಾಲೆಗಳು ಮತ್ತೆ ತೆರೆದಿರುವುದರಿಂದ ಹೆಚ್ಚಿನ ಸಂಖ್ಯೆಯ ಪೋಷಕರು ತಮ್ಮ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸ್ ಸಿಬ್ಬಂದಿ ಬೆಳಿಗ್ಗೆ ಬೇಗನೆ ಶಾಲೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಮತ್ತು ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಬಗ್ಗೆ ನ್ಯಾಯಾಲಯದ ನಿರ್ದೇಶನದ ಬಗ್ಗೆ ನೆನಪಿಸುತ್ತಿದ್ದಾರೆ.ಅನೇಕ ಪೋಷಕರು ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುತ್ತಿದ್ದರೂ, ತಮ್ಮ ಮಕ್ಕಳ ಸುರಕ್ಷತೆಯನ್ನು ನಿರ್ಲಕ್ಷಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ದ್ವಿಚಕ್ರ ವಾಹನದಲ್ಲಿ ಮಗುವನ್ನು ಮುಂದೆ ಅಥವಾ ಹಿಂದೆ ಕುಳಿತಿದ್ದರೂ, ವಾಹನವು ಸಮತೋಲನ ಕಳೆದುಕೊಂಡರೆ ಅಥವಾ ಅಪಘಾತಕ್ಕೀಡಾದರೆ ತಲೆಗೆ ಗಾಯವಾಗುವ ಅಪಾಯ ಹೆಚ್ಚು ಎಂದು ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ. ಶಾಲೆ ಹತ್ತಿರದಲ್ಲಿದೆ ಅಥವಾ ಪ್ರಯಾಣ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಹೆಲ್ಮೆಟ್ ಬಳಕೆಯನ್ನು ನಿರ್ಲಕ್ಷಿಸುವುದು ಅಪಾಯಕಾರಿ ಎಂದು ಅವರು…

Read More

ಮಂಗಳೂರು, ಜೂ. 17: ಕಳೆದ 2001ರಿಂದಲೇ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಸರ್ಕಾರ ಮುಂದಾಗಿದ್ದು, ಆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತೀವ್ರ ಪ್ರತಿಭಟನೆ ನಡೆಸಿ ಸರ್ಕಾರದ ಪ್ರಯತ್ನವನ್ನು ವಿಫಲಗೊಳಿಸಿತ್ತು ಎಂದು ಸಂಘದ ಮುಖಂಡರು ತಿಳಿಸಿದ್ದಾರೆ. ಅಂದು ರಾಜ್ಯದಾದ್ಯಂತ ರೈತರು ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸಿದ್ದ ಮೀಟರ್‌ಗಳನ್ನು ಕಿತ್ತು ವಿದ್ಯುತ್ ಇಲಾಖೆ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿತ್ತು ಎಂದು ಅವರು ಸ್ಮರಿಸಿದ್ದಾರೆ. ಈಗ ರಾಜ್ಯ ಸರ್ಕಾರ ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ವಿದ್ಯುತ್ ಸಂಸ್ಥೆಗಳನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಿ ರೈತರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಯೋಜನೆ ರೂಪಿಸಿದೆ ಎಂದು ಆರೋಪಿಸಲಾಗಿದೆ. ಈ ಯೋಜನೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಗ್ರ ಹೋರಾಟ ನಡೆಯುತ್ತಿದೆ. ಆದರೆ ದಕ್ಷಿಣ ಕನ್ನಡ…

Read More