Author: UllalaVani

Kannada News From Coastal Karnataka

UN NETWORKS ತೊಕ್ಕೊಟ್ಟು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಶನಿವಾರ ನಡೆದಿದೆ. ರಾಣಿಪುರ ಸಂತೋಷನಗರ ನಿವಾಸಿ ದಿ. ರತ್ನಾಕರ್ ಎಂಬವರ ಪತ್ನಿ ಜಯಂತಿ (67) ಮೃತರು. ತೊಕ್ಕೊಟ್ಟು ಬ್ಯಾಂಕಿಗೆ ತೆರಳುತ್ತಿದ್ದ ಸಮಯ ರಾ.ಹೆ.66ರ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ರಸ್ತೆ ದಾಟುತ್ತಿದ್ದ ಸಮಯ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಿರಿಯ ಪುತ್ರ ಮಿಥುನ್ ಎಂಬವರು ಶನಿವಾರ ಬೆಳಿಗ್ಗೆ ದುಬೈ ತೆರಳುವವರಿದ್ದರು. ಅಪಘಾತ ಸಂಭವಿಸಿದಾಗ ಅವರು ಬೆಂಗಳೂರು ತಲುಪಿದ್ದು, ವಿಷಯ ತಿಳಿದು ವಾಪಸ್ಸಾಗಿದ್ದಾರೆ. ಅಪಘಾತ ನಡೆಸಿದ ವಾಹನದ ಸುಳಿವು ಸಿಸಿಟಿವಿ ಮೂಲಕ ಪತ್ತೆಯಾಗಿದ್ದು, ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಾಹನದ ಹುಡುಕಾಟ ಆರಂಭಿಸಿದ್ದಾರೆ.

Read More

UN NETWORKS ಕೊಣಾಜೆ: ಸಾವಿರಾರು ದೇವಸ್ಥಾನ, ದೈವಸ್ಥಾನಗಳಿರುವ ನೆಲೆಬೀಡಾಗಿರುವ ಪರಶುರಾಮನ ಸೃಷ್ಠಿಯ ಈ ತುಳುನಾಡಿನಲ್ಲಿ ಸಂಪ್ರದಾಯ, ಆಚರಣೆಗಳಿಗೆ ಮಹತ್ವದ ಸ್ಥಾನವಿದೆ. ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ದೇವಸ್ಥಾನದ ಅರ್ಚಕರಿಗೆ ಸರ್ಕಾರದಿಂದ ವೇತನ ನೀಡಲಾಗುತ್ತಿದ್ದು, ದೈವದ ಸೇವಕರಿಗೂ ಸರ್ಕಾರದಿಂದ ಶೀಘ್ರ ವೇತನ ವ್ಯವಸ್ಥೆ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಅವರು ಕೊಣಾಜೆ ಗ್ರಾಮದ ಬೊಲ್ಮ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರ, ಶ್ರೀ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಅಂಗವಾಗಿ ಗುರುವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಕ್ಷೇತ್ರಗಳ ಬ್ರಹ್ಮ ಕಲಶೋತ್ಸವ ಆಗಲು ಐದಾರು ವರ್ಷ ಹಿಡಿಯುತ್ತದೆ. ಆದರೆ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಬ್ರಹ್ಮಕಲಶೋತ್ಸವ ಕೇವಲ ಆರು ತಿಂಗಳಲ್ಲಿಯೇ ನಡೆಯುತ್ತಿರುವುದು ವಿಶೇಷವಾಗಿದ್ದು, ದೇವರ ಆಶೀರ್ವಾದ ಹಾಗೂ ಈ ಭಾಗದ…

Read More

UN NETWORKS ಕೊಣಾಜೆ: ಕೊಣಾಜೆ ಗ್ರಾಮದ ಬೊಲ್ಮದ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಬ್ರಹ್ಮಶ್ರೀ ಎಡಪದವು ವೇದಮೂರ್ತಿ ವೆಂಕಟೇಶ್ ತಂತ್ರಿಗಳ ಪೌರೋಹಿತ್ಯ ಹಾಗೂ ಕೊಣಾಜೆ ಶ್ಯಾನುಬೋಗರ ಮನೆಯ ಸುದರ್ಶನ ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.

Read More

UN NETWORKS ಮುಡಿಪು: ಜನವರಿ 27 ರಂದು ಬೆಂಗಳೂರಿನ ಖುದ್ದೂಸ್ ಈದ್ಗಾ ಮೈದಾನದಲ್ಲಿ ನಡೆಯುವ ಕರ್ನಾಟಕ ಮುಸ್ಲಿಂ ಜಮಾಅತ್ ಘೋಷಣೆ ಮತ್ತು 26 ಹಾಗೂ 27ರಂದು ನಡೆಯುವ ಉಂದುಲುಸ್ ಎಸ್ಸೆಸ್ಸೆಫ್ ರಾಜ್ಯ ಪ್ರತಿನಿಧಿ ಸಮಾವೇಶದ ಪ್ರಚಾರಾರ್ಥ ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ “ಡಿವಿಶನ್ ಪಬ್ಲಿಸಿಟಿ ಕನ್ವೆನ್ಶನ್” ಮುಡಿಪುವಿನ ಮಜ್ಲಿಸ್ ಎಜ್ಯು ಪಾರ್ಕ್ ನಲ್ಲಿ ನಡೆಯಿತು. ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳರವರು ಅಧ್ಯಕ್ಷತೆ ವಹಿಸಿದ್ದರು.ಡಿವಿಶನ್ ಉಪಾಧ್ಯಕ್ಷ ಸಿದ್ದೀಕ್ ಸಖಾಫಿ ಕಾಯಾರ್ ಸಭೆಯನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಜಮಾಲ್ ಸಖಾಫಿ ಮುದುಂಗಾರ್ ಕಟ್ಟೆ, ಇಬ್ರಾಹಿಂ ಅಹ್ಸನಿ ಮಂಜನಾಡಿ ಸಂದೇಶ ಭಾಷಣ ಮಾಡಿದರು. ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ನಾಯಕರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಸಿರಾಜುದ್ದೀನ್ ಸಖಾಫಿ ಕನ್ಯಾನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ…

Read More

UN NETWORKS ಉಳ್ಳಾಲ: ಪ್ರವಾದಿ ಅವರು ಶಾಂತಿಯನ್ನು ಸಾರಿದವರು. ಆದರೆ ಅವರನ್ನು ನಿಂದಿಸುವ ಮೂಲಕ ಟಿವಿ ನಿರೂಪಕರು ಜೀತ ಪದ್ಧತಿಯನ್ನು ತೋರಿದ್ದಾರೆ ಎಂದು ದರ್ಗಾ ಅಧ್ಯಕ್ಷ ರಶೀದ್ ಹಾಜಿ ಹೇಳಿದರು. ಅವರು ಉಳ್ಳಾಲ ಮುಸ್ಲಿಂ ಜಮಾಅತ್ ವತಿಯಿಂದ ಉಳ್ಳಾಲ ಹಝ್ರತ್ ಶಾಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಪ್ರವಾದಿಯವರು ಸಹನೆಯನ್ನು ಬಯಸಿದವರು. ನಿಂದನೆ ಅವರಿಗಿಷ್ಟವಿಲ್ಲ. ಪ್ರವಾದಿಯವರನ್ನು ನಿಂದಿಸಿದ ಅಜಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಆದು ನಮಗೆ ಸಾಕಾಗುವುದಿಲ್ಲ. ಪರಧರ್ಮವನ್ನು ಟೀಕಿಸುವುದನ್ನು ಇಸ್ಲಾಂ ಮಾತ್ರವಲ್ಲ ಸಮಾಜ ಕೂಡಾ ವಿರೋಧಿ ಸುತ್ತದೆ ಎಂದರು.ಎಸ್ ಬಿ ದಾರಿಮಿ ಮಾತನಾಡಿ, ಅಜಿತ್‍ನನ್ನು ಬಂಧಿಸಿದರೆ ರಾಜಕೀಯದವರಿಗೆ ಜಯ ಸಿಗುತ್ತದೆ. ಈಗ ನಡೆಯುತ್ತಿರುವುದು ಅಜಿತ್ ಅವರ ವಿರುದ್ಧ ಹೋರಾಟ ವಲ್ಲ, ಅವರ ಸಿದ್ಧಾಂತದ ವಿರುದ್ಧ ಹೋರಾಟವಾಗಿದೆ. ಭಾರತೀಯ ಮುಸ್ಲಿಮರು ರಾಜಕೀಯ ಇಚ್ಛಾ ಶಕ್ತಿ ಹೊಂದಿದ್ದಾರೆ. ಬಾಂಗ್ ನಲ್ಲಿ ಪ್ರವಾದಿ ಯವರ ಹೆಸರು ಬಳಕೆ ಮಾಡಲಾಗುತ್ತದೆ. ಸರ್ಕಾರಕ್ಕೆ ತಾಕತ್ತಿದ್ದರೆ ಮೊದಲು ಸಂವಿಧಾನ ರಕ್ಷಣೆ ಮಾಡಲಿ. ಅಧಿಕಾರ ಶಾಶ್ವತ ಅಲ್ಲ.…

Read More

UN NETWORKS ತೊಕ್ಕೊಟ್ಟು: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕುರ್ನಾಡು ಮಹಾಶಕ್ತಿ ಕೇಂದ್ರ ಆಶ್ರಯದಲ್ಲಿ ಜ. 20ರಂದು ಸಂಜೆ 4.30ಕ್ಕೆ ಚುನಾವಣಾ ಕಾರ್ಯಾಲಯ ಉದ್ಘಾಟನೆ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಕುರ್ನಾಡು ಮಹಾಶಕ್ತಿಕೇಂದ್ರದ ಅಧ್ಯಕ್ಷ ಹಾಗೂ ಹಿರಿಯ ಬಿಜೆಪಿ ಮುಖಂಡ ಟಿ.ಜಿ. ರಾಜಾರಾಂ ಭಟ್ ಹೇಳಿದರು. ತೊಕ್ಕೊಟ್ಟು ಖಾಸಗಿ ಹೊಟೇಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭಾ ಕ್ಷೇತ್ರದ ಚುನಾವಣಾ ತಯಾರಿ ದೃಷ್ಟಿಯಿಂದ ಚುನಾವಣಾ ಕಾರ್ಯಾಲಯ ಉದ್ಘಾಟನೆ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ಮುಡಿಪು ಅಮರ್ ದೀಪ ಕಾಂಪ್ಲೆಕ್ಸ್‍ನಲ್ಲಿ ಸಂಜೆ 4.30ಕ್ಕೆ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು, ಕಾರ್ಕಳ ಶಾಸಕ ಸುನಿಲ್ ಕುಮಾರ್, ಮಂಗಳೂರು ಲೋಕಸಭಾ ಕ್ಷೇತ್ರ ಸಂಚಾಲಕ ಗೋಪಾಲಕೃಷ್ಣ ಹೇರಳ ಹಾಗೂ ಅಧ್ಯಕ್ಷತೆಯನ್ನು ಸಂತೋಷ್ ಕುಮಾರ್ ರೈ ಬೋಳಿಯಾರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ 4.00ಗಂಟೆಗೆ ತೌಡುಗೋಳಿ ಕ್ರಾಸ್‍ನಿಂದ 4.15ಕ್ಕೆ ಬೋಳಿಯಾರಿನಿಂದ ಬೈಕ್ ರ್ಯಾಲಿ ಆರಂಭವಾಗಿ ಮುಡಿಪುವಿನಲ್ಲಿ…

Read More

UN NETWORKS ಕೊಣಾಜೆ: ದಿನದ ಹಿಂದೆಯಷ್ಟೆ ಬಸ್ಸಿಗೆ ಬಳಿದ ಪೈಂಟ್ ಒಣಗುವ ಮುನ್ನ ಸಂಚಾರಕ್ಕೆ ಬಳಸಿದ ಪರಿಣಾಮ ಪ್ರಯಾಣಿಕರ ಬಟ್ಟೆ, ದೇಹಕ್ಕೆ ಅಂಟಿಕೊಂಡ ಹಿನ್ನೆಲೆಯಲ್ಲಿ ಆಕ್ರೋಶಿತ ಪ್ರಯಾಣಿಕರು ಬಸ್ಸನ್ನು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ ಪ್ರಕರಣ ನಡೆದಿದೆ. ಮಂಗಳೂರಿನಿಂದ ಹರೇಕಳ ನಡುವೆ ಸಂಚರಿಸುವ ಬಸ್ಸೊಂದರ ಮಾಲೀಕ ಶುಕ್ರವಾರ ಆರ್‍ಟಿಎ ತಪಾಸಣೆ ಇದ್ದ ಹಿನ್ನೆಲೆಯಲ್ಲಿ ನಿರ್ಲಕ್ಷ್ಯದಿಂದ ಗುರುವಾರ ರಾತ್ರಿ ಪೈಂಟ್ ಮಾಡಿಸಿ ಮರುದಿನವೇ ಬಸ್ ಸಂಚಾರಕ್ಕೆ ಬಳಸಿದ್ದು ಅವಾಂತರಕ್ಕೆ ಕಾರಣವಾಗಿದೆ. ಮಂಗಳೂರಿನಿಂದ ಹರೇಕಳಕ್ಕೆ ಹಲವು ಬಸ್ಸುಗಳ ಪರವಾನಗಿ ಇದೆಯಾದರೂ ಈ ರೂಟ್‍ನಲ್ಲಿ ಎರಡು ಬಸ್ಸುಗಳು ಮಾತ್ರ ಸಂಚರಿಸುತ್ತಿವೆ. ಅದರ ವಿರುದ್ಧ ಡಿವೈಎಫ್‍ಐ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಎಷ್ಟು ಬಸ್ಸುಗಳ ಪರವಾನಿಗೆ ಹರೇಕಳಕ್ಕಿದೆ ಎನ್ನುವ ಮಾಹಿತಿಯೂ ಗ್ರಾಮಸ್ಥರಲ್ಲಿಲ್ಲ. ಗ್ರಾಮಕ್ಕೆ ಬರುವ ಎರಡು ಬಸ್ಸುಗಳ ಪೈಕಿ ಒಂದು ಬಸ್ಸಿಗೆ ಶುಕ್ರವಾರ ಆರ್‍ಟಿಓ ತಪಾಸಣೆ ಇತ್ತು. ಅಲ್ಲಲ್ಲಿ ಪೈಂಟ್ ಎದ್ದುಹೋಗಿದ್ದರಿಂದ ಬಸ್ಸನ್ನು ಮೇಲ್ನೊಟಕ್ಕೆ ಸುಂದರವನ್ನಾಗಿಸಲು ಹೊರಟ ಮಾಲೀಕ ಗುರುವಾರ ರಾತ್ರಿ ಎಲ್ಲ ಟ್ರಿಪ್ ಮುಗಿದ…

Read More

UN NETWORKS ಉಳ್ಳಾಲ: ಫಿಸಿಯೋಥೆಪರಪಿ ಮತ್ತು ವಾಕ್ ಶ್ರವಣ ವಿಭಾಗ ಆಸ್ಪತ್ರೆಯಲ್ಲಿ ಕಾರ್ಯಾಚರಿಸುವ ಪ್ರಮುಖ ವಿಭಾಗಗಳಾಗಿವೆ. ಪರಿಣಾಮಕಾರಿಯಾದ ತರಬೇತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ವಾಕ್ ಶ್ರವಣ ವಿಭಾಗ ಕಳೆದ ಮೂರು ವರ್ಷಗಳಿಂದ ಒಂದನೇ ರ್ಯಾಂಕ್ ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ವಿಭಾಗವೂ ಕಾರ್ಯಾಚರಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ನಿಟ್ಟೆ ಸ್ವಾಯುತ್ತೆ ಆಗಲಿರುವ ವಿ.ವಿ ಯ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯ ಇದರ ವಾಕ್ ಶ್ರವಣ ವಿಭಾಗದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ವಿಭಾಗವನ್ನು ಉದ್ಘಾಟಿಸಿದರು. ಈ ಸಂದರ್ಭ ಸಹಕುಲಾಧಿಪತಿಗಳಾದ ಡಾ. ಎಂ.ಶಾಂತರಾಮ ಶೆಟ್ಟಿ, ವಿಶಾಲ್ ಹೆಗ್ಡೆ, ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ, ಸಹಕುಲಪತಿ ಡಾ.ಎಂ ಎಸ್ ಮೂಡಿತ್ತಾಯ, ಕುಲಸಚಿವೆ ಡಾ. ಅಲ್ಕಾ ಕುಲಕರ್ಣಿ, ನಿಟ್ಟೆ ವಾಕ್ ಶ್ರವಣ ಕಾಲೇಜಿನ ನಿರ್ದೇಶಕ ದತ್ತಾತ್ರೇಯ, ಪ್ರಾಂಶುಪಾಲೆ ಶ್ವೇತಾ, ಕ್ಷೇಮ ಡೀನ್ ಡಾ. ಪಿ.ಯಸ್ ಪ್ರಕಾಶ್, ದಂತ ಕಾಲೇಜಿನ ಡೀನ್ ಡಾ. ಯು.ಯಸ್ ಕೃಷ್ಣ ನಾಯಕ್, ಸಹಡೀನ್ ಗಳಾದ ಡಾ.…

Read More

UN NETWORKS ತೊಕ್ಕೊಟ್ಟು: ಎಸೆಸ್ಸೆಫ್ ಉಳ್ಳಾಲ ಡಿವಿಜನ್ ಮತ್ತು ತೊಕ್ಕೊಟ್ಟು ಸೆಕ್ಟರ್‌ನ ಜಂಟಿ ಆಶ್ರಯದಲ್ಲಿ ಕರ್ನಾಟಕ ಮುಸ್ಲಿಮ್ ಜಮಾಅತ್‌ನ ಪಬ್ಲಿಸಿಟಿ ಕನ್ವೆನ್ಷನ್ ಕಾರ್ಯಕ್ರಮವು ತೊಕ್ಕೊಟ್ಟು ತಾಜುಲ್ ಉಲಮಾ ಮಸೀದಿಯಲ್ಲಿ ಇತ್ತೀಚೆಗೆ ನಡೆಯಿತು. ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಎಸೆಸ್ಸೆಫ್ ನಿಕಟಪೂರ್ವ ಅಧ್ಯಕ್ಷ ಸಿರಾಜುದ್ದೀನ್ ಸಖಾಫಿ ಮುಸ್ಲಿಂ ಸಮುದಾಯವು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಸುನ್ನತ್ ಜಮಾಅತ್‌ನ ಆದರ್ಶದಲ್ಲಿ ನಂಬಿಕೆ ಇರುವ ಎಲ್ಲಾ ಮುಸಲ್ಮಾನರನ್ನು ಸೇರಿಸಿ ರಾಜಕೀಯ ಪಕ್ಷಕ್ಕಿಂತ ಭಿನ್ನವಾಗಿ ಸಮಸ್ಯೆಗಳನ್ನು ಎದುರಿಸಲು ಮತ್ತು ಮುಸ್ಲಿಂ ಸಮುದಾಯದವರಿಗೆ ವಿವಿಧ ಸವಲತ್ತುಗಳನ್ನು ಪಡೆಯಲು ಕರ್ನಾಟಕ ಮುಸ್ಲಿಮ್ ಜಮಾಅತ್ ಪಬ್ಲಿಸಿಟಿ ಕನ್ವೆನ್ಷನ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದರು. ಸೈಯದ್ ಮದನಿ ಅರಬಿಕ್ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಝಿಯಾದ್ ತಂಙಳ್ ಕಾರ್ಯಕ್ರಮ ಉದ್ಘಾಟಿಸಿದರು. ಎಸೆಸ್ಸೆಫ್ ಉಳ್ಳಾಲ ಡಿವಿಜನ್ ಅಧ್ಯಕ್ಷ ಖುಬೈಬ್ ತಂಗಳ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ವೈಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷ ಜಲಾಲ್ ತಂಙಳ್ ದುಆ ನೆರವೇರಿಸಿದರು. ಮಂಜನಾಡಿ ಅಲ್ ಮದೀನದ ಜನರಲ್ ಮ್ಯಾನೇಜರ್…

Read More

UN NETWORKS ಉಳ್ಳಾಲ: ಯುನಿವೆಫ್ ಕರ್ನಾಟಕ ನ. 30 ರಿಂದ ಫೆ. 1ರವರೆಗೆ “ಮಾನವ ಸಮಾಜ ಮತ್ತು ಆಧ್ಯಾತ್ಮಿಕತೆ ಪ್ರವಾದಿ ಮುಹಮ್ಮದ್ (ಸ) ರ ದೃಷ್ಟಿಯಲ್ಲಿ” ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಪ್ರಯುಕ್ತ ಉಳ್ಳಾಲದ ನಗರ ಸಭಾ ಮೈದಾನದಲ್ಲಿ ಸೀರತ್ ಸಮಾವೇಶ ಜರಗಿತು. “ವರ್ತಮಾನದ ಮುಸ್ಲಿಮ್ ಸಮುದಾಯ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ವಿಷಯದಲ್ಲಿ ಮುಖ್ಯ ಭಾಷಣ ಮಾಡಿದ ಯುನಿವೆಫ್ ರಾಜ್ಯಾಧ್ಯಕ್ಷ ರಫೀಉದ್ದೀನ್ ಕುದ್ರೋಳಿಯವರು “ಆರೋಪದ ಮೇಲೆ ಆರೋಪ ಹೊರಿಸಿ, ಸಮುದಾಯವನ್ನು ರೊಚ್ಚಿಗೆಬ್ಬಿಸಲು ಹಿಟ್ ಆ್ಯಂಡ್ ರನ್ ತಂತ್ರವನ್ನು ಇಸ್ಲಾಮೀ ವಿರೋಧಿ ಶಕ್ತಿಗಳು ಅನುಸರಿಸುತ್ತಾ ಬಂದಿರುವುದು ಫ್ಯಾಸಿಸ್ಟ್ ತಂತ್ರದ ಒಂದು ಭಾಗ ಎಂದು ಹೇಳಿದರು.ರಾಜ್ಯ ಕಾರ್ಯದರ್ಶಿ ಯು.ಕೆ. ಖಾಲಿದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೌಲಾನಾ ಅಬ್ದುರ್ರಹ್ಮಾನ್ ಕಿರಾಅತ್ ಪಠಿಸಿದರು. ಜಿಲ್ಲಾಧ್ಯಕ್ಷ ಮತ್ತು ಸಂಚಾಲಕ ಅಬ್ದುಲ್ಲಾ ಪಾರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೈಫುದ್ದೀನ್ ವಂದಿಸಿದರು.

Read More