Author: UllalaVani

Kannada News From Coastal Karnataka

UN NETWORKS ದೇರಳಕಟ್ಟೆ: ನೂತನ ಫುಟ್ಬಾಲ್ ಕ್ಲಬ್‍ಗಳು ಆರಂಭವಾಗುವುದರಿಂದ ಆಟಗಾರರು ಜೊತೆಗೆ ಫುಟ್ಬಾಲ್ ಮತ್ತಷ್ಟು ವಿಜೃಂಭಿಸಲಿದೆ . ಸದ್ಯ ಹೆಚ್ಚಾಗಿ ಮಹಿಳೆಯರು ಫುಟ್ಬಾಲ್ ಆಟದಲ್ಲಿ ಉತ್ಸಾಹ ತೋರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿಯೂ ಮಹಿಳಾ ಕ್ರೀಡಾಳುಗಳು ಕ್ಲಬ್ ಗಳಲ್ಲಿ ನೋಂದಾಯಿಸುವ ಮೂಲಕ ತಂಡಗಳನ್ನು ಕಟ್ಟಿಕೊಳ್ಳಬೇಕಿದೆ ಎಂದು ಕರ್ನಾಟಕ ರಾಜ್ಯ ಫುಟ್ಬಾಲ್ ಎಸೋಸಿಯೇಷನ್ ಅಧ್ಯಕ್ಷ, ಶಾಂತಿನಗರ ಶಾಸಕ ಎನ್. ಎ. ಹ್ಯಾರಿಸ್ ಹೇಳಿದರು. ದೇರಳಕಟ್ಟೆಯ ಯೇನೆಪೊಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಂಗಳೂರು ಫುಟ್ಬಾಲ್ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಯುವ ಜನತೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅತಿ ಮುಖ್ಯ. ಈ ದೇಶಕ್ಕೆ ಉತ್ತಮ ಆರೋಗ್ಯಕರ ವಾತವಾವರಣ ಮೂಡಿಸಬೇಕಾದ ಜವಾಬ್ದಾರಿ ಯುವಜನತೆಯ ಮುಂದಿದೆ. ಹೆಚ್ಚಿನ ಪರಿಕರಗಳ ಅವಶ್ಯಕತೆಗಳು ಇಲ್ಲದ ಕೇವಲ ಮೈದಾನ ಹಾಗೂ ಒಂದು ಚೆಂಡಿನ ಆಟವಾಗಿರುವ ಫುಟ್ಬಾಲ್ ಆಟದಲ್ಲಿ ಆಟಗಾರರಿಗೆ ಮಂಗಳೂರು ಫುಟ್ಬಾಲ್ ಕ್ಲಬ್ ಒಂದು ಉತ್ತಮ ವೇದಿಕೆಯಾಗಲಿದೆ ಎಂದು ನುಡಿದರು. ಕೆಲವೇ ಭಾಗಗಳಿಗೆ ಸೀಮಿತವಾಗಿದ್ದ ಫುಟ್ಬಾಲ್ ಈಗ ಕ್ರಿಕೆಟ್‍ನಂತೆ ಮಿಂಚುತ್ತಿದೆ. ಯೇನೆಪೊಯ…

Read More

UN NETWORKS ದೇರಳಕಟ್ಟೆ: ದೇರಳಕಟ್ಟೆಯ ಯೇನೆಪೊಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಸಂಶೋಧನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಹೇಶ್. ಎಂ. ಗೌಡ ಅವರು ಯುರೋಪಿಯನ್ ರೆಸ್ಪಿರೇಟರಿ ಸೊಸೈಟಿ ಪ್ರಾಯೋಜಕತ್ವದ ಸಂಶೋಧನಾ ಫೆಲೋಶಿಪ್‍ಗೆ ಆಯ್ಕೆಯಾಗಿದ್ದಾರೆ. ಅವರು ಜರ್ಮನಿಯ ಲುಡ್ವಿಗ್ ಮ್ಯಾಕ್ಸಿಮಿಲಿಯನ್ ವಿಶ್ವವಿದ್ಯಾಲಯ, ಮುನಿಚ್‍ನಲ್ಲಿ ಡಾ. ಜೊರಲ್ಡ್ ಬಗ್ಸ್ರ್ಟಾಲರ್ ಮಾರ್ಗದರ್ಶನದಲ್ಲಿ ಮೂರು ತಿಂಗಳ ಅಧ್ಯಯನ ನಡೆಸಲಿದ್ದಾರೆ. ಯೇನೆಪೊಯ ಸಂಶೋಧನಾ ಕೇಂದ್ರದ ಸಹ ಪ್ರಾಚಾರ್ಯ ಡಾ. ಯಶೋಧರ ಪಿ. ಭಂಡಾರಿ ಅವರ ಮಾರ್ಗದರ್ಶನದಲ್ಲಿ ಸಂಶೋಧಕರಾಗಿ ಶ್ವಾಸಕೋಶದ ಕಾಯಿಲೆಗೆ ಸಂಬಂಧಿಸಿದ ವಿಷಯದಲ್ಲಿ ಗಾಯವನ್ನು ಪ್ರಚೋದಿಸುತ್ತದೆ ಎಂಬ ವಿಷಯದಲ್ಲಿ ಪಿ.ಎಚ್‍ಡಿ ಅಧ್ಯಯನವನ್ನು ಮಾಡುತ್ತಿದ್ದಾರೆ.

Read More

UN NETWORKS ದೇರಳಕಟ್ಟೆ: ಆರೋಗ್ಯ ಹಾಗೂ ಸಾಮಾಜಿಕ ಭದ್ರತೆ ದೃಷ್ಟಿಯಿಂದ ಭಾರತದಲ್ಲಿ 2020-30ರಲ್ಲಿ ಬಹಳಷ್ಟು ಪ್ರಗತಿ ಕಾಣಲಿದ್ದು ರೇಡಿಯೇಶನ್ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಕಾಣಲು ಸಾಧ್ಯ ಎಂದು ಇಂಡಿಯನ್ ಸೊಸೈಟಿ ಫಾರ್ ರೇಡಿಯೇಶನ್ ಬಯೋಲಾಜಿ ಅಧ್ಯಕ್ಷೆ ಡಾ.‌ ಮಧುಬಾಲ ಅಭಿಪ್ರಾಯಪಟ್ಟರು. ನಿಟ್ಟೆ ವಿಶ್ವವಿದ್ಯಾಲಯದ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಹಾಗೂ ಇಂಡಿಯನ್ ಸೊಸೈಟಿ ಫಾರ್ ರೇಡಿಯೇಶನ್ ಬಯೋಲಾಜಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ರೇಡಿಯೇಶನ್ ಬಯೋಲಾಜಿಯಲ್ಲಿನ ಪ್ರಗತಿ, ರೇಡಿಯೇಶನ್ ಥೆರಪಿ ಹಾಗೂ ಪ್ರತಿ ಮಾರ್ಗೋಪಾಯದ ಕುರಿತಾಗಿ ನಡೆದ ಅಂತರಾಷ್ಟೀಯ ಸಮ್ಮೇಳನವನ್ನು ಕ್ಷೇಮ ಆಡಿಟೋರಿಯಂನಲ್ಲಿ ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇಮದಲ್ಲಿರುವ ರೇಡಿಯೇಶನ್ ವಿಭಾಗ ಕರ್ನಾಟಕದಲ್ಲಿಯೇ ಅತಿ ಪ್ರಾಮುಖ್ಯತೆ ಪಡೆದ ವೈದ್ಯಕೀಯ ರಂಗದಲ್ಲಿ ರಾಜ್ಯದಲ್ಲಿಯೇ ಅತ್ಯಾಧುನಿಕ ಕೇಂದ್ರವಾಗಿ ಗುರುತಿಸಲ್ಪಟ್ಟಿದೆ. ಕ್ಯಾನ್ಸರ್ ಕುರಿತಾಗಿ ಬಹಳಷ್ಟು ಜಾಗೃತಿ ಕಾರ್ಯಗಾರಗಳು ನಡೆಯುತ್ತಿದ್ದು ಈ ಸಮ್ಮೇಳನದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ರೇಡಿಯನ್ ತಜ್ಞರು ಪಾಲ್ಗೊಂಡಿದ್ದು ರೇಡಿಯೇಶನ್ ಕ್ಷೇತ್ರದಲ್ಲಿನ ನೂತನ ಆವಿಷ್ಕಾರಗಳು, ಚಿಕಿತ್ಸೆ ಪ್ರತಿ ಮಾರ್ಗೋಪಾಯಗಳ ಕುರಿತಾಗಿ ನೂತನ ದೃಷ್ಟಿಕೋನ…

Read More

UN NETWORKS ಮಂಗಳೂರು: ರಾಜ್ಯದ ಏಳು ಪ್ರಮುಖ ನಗರಗಳನ್ನು ಸ್ಮಾರ್ಟ್ ಸಿಟಿಯನ್ನಾಗಿ ಪರಿವರ್ತಿಸುವ ಯೋಜನೆ ಮುಂದಿದ್ದು, ನಗರಗಳು ಸಮರ್ಥನೀಯವಾಗಿ ಬೆಳೆಯಲು ಸ್ಮಾಟ್ ಏಷ್ಯಾ ಶೃಂಗಸಭೆ ಸಹಕಾರಿಯಾಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ದಕ್ಷಿಣ ಭಾರತದ ಅತಿದೊಡ್ಡ ಸ್ಮಾರ್ಟ್ ಸಿಟಿ ವಸ್ತುಪ್ರದರ್ಶನವಾದ ಸ್ಮಾರ್ಟ್ ಏಷ್ಯಾ ಇಂಡಿಯಾ ಪ್ರದರ್ಶನವನ್ನು ತೈಪೆ ವಲ್ರ್ಡ್ ಟ್ರೇಡ್ ಸೆಂಟರ್ (ಟಿಡಬ್ಲ್ಯುಟಿಸಿ) ಬೆಂಗಳೂರು ಅಂತರ್ರಾಷ್ಟ್ರೀಯ ವಸ್ತುಪ್ರದರ್ಶನ ಸಭಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ ಸ್ಮಾರ್ಟ್ ಏಷ್ಯಾ ಇಂಡಿಯಾ ವಸ್ತುಪ್ರದರ್ಶನ ಮತ್ತು ಶೃಂಗಸಭೆಯನ್ನು ಗುರುವಾರದಂದು ಉದ್ಘಾಟಿಸಿ ಮಾತನಾಡಿದರು. ಜನಸಂಖ್ಯೆ ಬೆಳೆಯುತ್ತಿರುವ ರಾಜ್ಯದಲ್ಲಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಶುಚಿತ್ವ ಕಾಪಾಡಲು ತ್ಯಾಜ್ಯ ನಿರ್ವಹಣೆ, ನೀರು ಸಂರಕ್ಷಣೆ, ತ್ಯಾಜ್ಯ ನಿರ್ವಹಣಾ ಘಟಕಗಳು, ಸಂಚಾರಿ ನಿಯಮಗಳ ಪಾಲನೆಗೆ ಆಧುನಿಕ ತಂತ್ರಜ್ಞಾನಗಳ ಅವಶ್ಯಕತೆ ಇದೆ. ಈ ಕುರಿತು ಪರಿಸರ ಪೂರಕವಾಗಿ ಸಾಧನಗಳನ್ನು ಬಳಸಲು ಗ್ರಾಮೀಣ ಭಾಗದ ಜನತೆಯೂ ಮುಂದಾಗಬೇಕಿದೆ. ರಾಜ್ಯ ಸರಕಾರವೂ ಸ್ಮಾರ್ಟ್ ಏಷ್ಯಾ ಇಂಡಿಯಾ ಜತೆಗೆ ಕೈಜೋಡಿಸಲಿದೆ ಎಂದರು. ತೈಪೈ ವರ್ಲ್ಡ್ ಟ್ರೇಡ್…

Read More

UN NETWORKS ಉಳ್ಳಾಲ: ಮುನ್ನೂರು ಗ್ರಾಮ ಪಂಚಾಯಿತಿ ಕಚೇರಿಯ ಅಭಿವೃದ್ಧಿ ಅಧಿಕಾರಿಯ ನಕಲಿ ಸಹಿ ಹಾಗೂ ನಕಲಿ ಸೀಲು, ಲೆಟರ್ ಪ್ಯಾಡ್ ಬಳಸಿ ದಾಖಲೆ ಸೃಷ್ಟಿಸಿದ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಫೋರ್ಜರಿ ಪ್ರಕರಣ ದಾಖಲಾಗಿದೆ. ಸೆ. 13 ರಂದು ದಾಖಲೆಯನ್ನು ಫೋರ್ಜರಿ ಮಾಡಲಾಗಿದೆ. ಆ ತಾರೀಕಿನಂದು ಮುನ್ನೂರು ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಯೇ ಇರಲಿಲ್ಲ. ಹಿಂದೆ ಇದ್ದಂತಹ ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಎಂಬವರು ಕಚೇರಿಯ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತೀರಿ ಹೋದ ಬಳಿಕ ಅವರ ಸಹಿಯನ್ನೇ ನಕಲಿ ಮಾಡಿ ದಾಖಲೆ ತಯಾರಿಸಲಾಗಿದೆ. ಮುನ್ನೂರು ನಿವಾಸಿ ಅಬ್ದುಲ್ ನಾಸಿರ್ ಯಾನೆ ಸೀದಿ ಬಾವ ಎಂಬವರು ಮಗಳು ನಿಧಾ ಎಂಬವರ ಆಧಾರ್ ಕಾರ್ಡು ದಾಖಲಾತಿ ಬದಲಾವಣೆಗಾಗಿ ಪಂಚಾಯಿತಿಗೆ ಆಗಮಿಸಿದ್ದರು. ಈ ಸಂದರ್ಭ ಸಿಬ್ಬಂದಿ ದಾಖಲಾತಿ ಪರಿಶೀಲನೆ ವೇಳೆ ಕಡತದಲ್ಲಿ ಯಾವುದೇ ರೀತಿಯ ರೆಫರೆನ್ಸ್ ಸಂಖ್ಯೆ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನಕಲಿ ದಾಖಲೆ , ಸಹಿ ಬಳಸಿ ದಾಖಲಾತಿ…

Read More

UN NETWORKS ಬಾಳೆಪುಣಿ: ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಅಗತ್ಯವಿರುವಲ್ಲಿ ಕೊಳವೆಬಾವಿ ನಿರ್ಮಿಸಲಾಗಿದ್ದು ಬಾಳೆಪುಣಿಯಲ್ಲಿ ಅತ್ಯಧಿಕ ಕೊಳವೆಬಾವಿಗಳಿವೆ, ಆದರೂ ನೀರಿನ ಸಮಸ್ಯೆ ನೀಗಿಲ್ಲ, ನೀರಿನ ಸಮಸ್ಯೆ ಪರಿಹಾರಕ್ಕೆ ಕ್ಷೇತ್ರ ಮಟ್ಟದಲ್ಲೇ ದೊಡ್ಡ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದರು. ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಬಾಳೆಪುಣಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಬಳಿಕ ನವಗ್ರಾಮ ಸೈಟ್‍ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿಂದೆಯೂ ಕ್ಷೇತ್ರದಲ್ಲಿ ಶಾಸಕರು, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರಿದ್ದರೂ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಇದೀಗ ಕಾಂಗ್ರೆಸ್ ಪ್ರತಿನಿಧಿಗಳು ಆಯ್ಕೆಯಾದ ಬಳಿಕ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ, ಹೊಸ ರಸ್ತೆಗಳ ನಿರ್ಮಾಣ, ಕಾಂಕ್ರೀಟ್ ಕಾಮಗಾರಿ ನಡೆದಿದ್ದು, ಸಣ್ಣ ರಸ್ತೆಗಳು ಮಾತ್ರವೇ ಬಾಕಿಯಾಗಿವೆ. ಅವುಗಳನ್ನೂ ಶೀಘ್ರ ಅಭಿವೃದ್ಧಿಪಡಿಸಲಾಗುವುದು. ಮುಂದಿನ ದಿನಗಳಲ್ಲಿ ವಸತಿರಹಿತರಿಗೂ ಯೋಜನೆ ರೂಪಿಸಲಿದ್ದು, ಫಲಾನುಭವಿಗಳು ಪ್ರಯೋಜನಪಡೆಯಬೇಕು ಎಂದು ಹೇಳಿದರು. ಪಡಿಕ್ಕಲ್‍ನಲ್ಲಿ 150 ಮನೆಗಳಿದ್ದು…

Read More

UN NETWORKS ಕೋಟೆಕಾರ್: ಕೋಳಿ ಸಾಕುವುದರಿಂದ ಸ್ವಚ್ಛ ಪರಿಸರ ನಿರ್ಮಾಣ, ಹಲವು ರೋಗಳಿಂದ ದೂರವಿರಲು ಸಾಧ್ಯ, ಅದರಲ್ಲೂ ಗಿರಿರಾಜ ಕೋಳಿಗಳಿಂದ ಹೆಚ್ಚು ಮಾಂಸವೂ ದೊರಕುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮಿ ಗಟ್ಟಿ ಅಭಿಪ್ರಾಯಪಟ್ಟರು. ಪಶುಪಾಲನಾ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿ ಆಶ್ರಯದಲ್ಲಿ ಕೋಟೆಕಾರ್ ಪಶು ಆಸ್ಪತ್ರೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಕೋಳಿಗಳನ್ನು ವಿತರಿಸಿ ಮಾತನಾಡಿದರು. ಜನರಿಂದ ಆರಿಸಲ್ಪಟ್ಟ ಜನಪ್ರತಿನಿಧಿಗಳು ತಮ್ಮ ಐದು ವರ್ಷದ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕಾಗಿದೆ, ಶೇ.75ರಷ್ಟು ಜನಪ್ರತಿನಿಧಿಗಳು ಕೆಲಸ ಮಾಡುತ್ತಿದ್ದರೂ ಫಲಾನುಭವಿಗಳು ಸಮರ್ಪಕ ದಾಖಲೆಗಳನ್ನು ನೀಡದ ಕಾರಣ ಯೋಜನೆಗಳನ್ನು ದೊರಕಿಸಲು ಸಾಧ್ಯವಾಗುತ್ತಿಲ್ಲ. ಇಂದು ಅಂತರ್ಜಾಲದ ಮುಖಾಂತರ ಸಂಬಂಧಪಟ್ಟ ಇಲಾಖೆಗಳಿಗೆ ದಾಖಲೆಗಳನ್ನು ಸಲ್ಲಿಸಬೇಕಿದ್ದು, ಅರ್ಹರಿಗೆ ಸರ್ಕಾರಿ ಸವಲತ್ತು ಸಿಗುವುದರಲ್ಲಿ ಸಂಶಯ ಬೇಡ ಎಂದು ಹೇಳಿದರು. ಸೋಮೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಉಚ್ಚಿಲ್ ಮಾತನಾಡಿ, ಹಿಂದಿನಿಂದಲೂ ಗಿರಿರಾಜ ಕೋಳಿಗಳಿದ್ದರೂ ಅದನ್ನು ಸಾಕುವ ರೀತಿಯ ಬಗ್ಗೆ ಜನರಲ್ಲಿ ಅರಿವಿನ ಕೊರತೆಯಿದೆ. ಇದೀಗ ಇಲಾಖೆಯಿಂದ ದೊರಕಿರುವ…

Read More

UN NETWORKS ಉಳ್ಳಾಲ: ಗುರುವಾರ ಸಂಜೆ ವೇಳೆಗೆ ಸುರಿದ ಸಿಡಿಲು ಮಳೆಗೆ ತಲಪಾಡಿ ನಾರ್ಲ ಪಡೀಲ್ ಬಳಿ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ತೆಂಗಿನ ಮರ ಬಿದ್ದು ಕಾರೊಂದಕ್ಕೆ ಹಾನಿಯಾಗಿದೆ. ತಲಪಾಡಿ ನಾರ್ಲ ಪಡೀಲ್ ನಿವಾಸಿ ಹೇಮಾವತಿ ಕೃಷ್ಣ ಪೂಜಾರಿ ಅವರ ಮನೆಗೆ ಸಂಜೆ ವೇಳೆಗೆ ಸಿಡಿಲು ಬಡಿದು ಗ್ಯಾಸ್ ಸಿಲಿಂಡರ್, ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು ಸುಮಾರು 50 ಸಾವಿರಕ್ಕೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.ಘಟನೆಯ ವೇಳೆಗೆ ಮನೆಯಲ್ಲಿದ್ದ ಇಬ್ಬರು ಹೊರಗಡೆ ಇದ್ದರಿಮದ ದೊಡ್ಡದೊಂದು ದುರಂತ ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಬಜರಂಗದಳ ಮತ್ತು ವಿಶ್ವಹಿಂದೂಪರಿಷತ್‍ನ ಸ್ವಾಮಿ ಕೊರಗಜ್ಜ ಶಾಖೆಯ ಸದಸ್ಯರು ಧಾವಿಸಿ ಮನೆಯವರಿಗೆ ಸಹಕಾರ ನೀಡಿದರು. ಇನ್ನೊಂದು ಘಟನೆಯಲ್ಲಿ ತಲಪಾಡಿ ನಾರ್ಲದಲ್ಲಿ ಕೀರ್ತಿ ಶೆಟ್ಟಿ ಅವರ ಮನೆಯ ಬಳಿ ನಿಲ್ಲಿಸಿದ್ದ ಕಾರಿಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ನಾರ್ಲದಲ್ಲಿ ರಸ್ತೆಗೆ ಮರ ಬಿದ್ದು ಯಾವುದೇ ಹಾನಿಯಾಗಿಲ್ಲ.

Read More

UN NETWORKS ಕೊಣಾಜೆ: ಮಹಾತ್ಮ ಗಾಂಧೀಜಿಯವರ ತತ್ವ, ಆದರ್ಶಗಳು ನಮಗೆಲ್ಲರಿಗೂ ಪ್ರೇರಣೆಯಾಗಿದೆ. ಇಂದಿನ ಪ್ರಸ್ತುತ ಕಾಲಘಟ್ಟದಲ್ಲಿಯೂ ಅವರ ಚಿಂತನೆಗಳನ್ನು ಸಮಾಜದಲ್ಲಿ ಅಳವಡಿಕೊಂಡು ಸಾಮರಸ್ಯವನ್ನು ಕಟ್ಟುವ ಕಾರ್ಯ ಆಗಬೇಕಿದೆ ಎಂದು ಕಂಜರ್ಪಣೆ ಬಾಲಸುಬ್ರಹ್ಮಣ್ಯ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಬುಧವಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಗಾಂಧೀಜಿಯವರ ಸ್ವದೇಶಿ ಚಳುವಳಿ, ಸ್ವಚ್ಚತಾ ಆಂದೋಲನ, ಗ್ರಾಮೀಣಾಭಿವೃದ್ದಿ ಚಿಂತನೆಗಳು ಇಂದಿನ ಕಾಲಕ್ಕೂ ಪ್ರಸ್ತುತವಾಗಿದ್ದು, ಇಂತಹ ಚಿಂತನೆಗಳು ಭವ್ಯ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ.ಕಿಶೋರ್ ಕುಮಾರ್ ಸಿ.ಕೆ. ಅವರು, ಗಾಂಧೀಜಿವರ 150ನೇ ಜನ್ಮ ದಿನಾಚರಣೆಯ ಇಂತಹ ಸುಸಂದರ್ಭದಲ್ಲಿ ನಾವು ಎಷ್ಟರ ಮಟ್ಟಿಗೆ ಅವರ ಚಿಂತನೆ, ತತ್ವಾದರ್ಶನಗಳನ್ನು ಜೀವನದಲ್ಲಿ ಅಳವಡಿಕೊಂಡಿದ್ದೇವೆ ಎಂಬುದರ ಬಗ್ಗೆ ಆಲೋಚಿಸಬೇಕಾಗಿದೆ. ಗಾಂಧೀಜಿಯವರ ಜೀವನವೇ ನಮಗೆಲ್ಲರಿಗೂ ಒಂದು ಸಂದೇಶವಾಗಿದೆ ಎಂದು ಹೇಳಿದರು. ಸಮಾರಂಭದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ.ರವೀಂದ್ರ ಆಚಾರಿ…

Read More

UN NETWORKS ಕೊಣಾಜೆ: ನಡುಪದವು ಸುತ್ತಮುತ್ತಲಿನ ಪ್ರದೇಶವನ್ನು ಸಂಪರ್ಕಿಸುವ ಪ್ರಮುಖ ಜಂಕ್ಷನ್ ಆಗಿ ರೂಪುಗೊಳ್ಳಲಿದೆ. ಪ್ರಮುಖವಾಗಿ ಈ ಭಾಗದ ಜನರ ಬಹು ದಿನಗಳ ಕನಸಾಗಿದ್ದ ನಡುಪದವು, ಲಾಡ, ಮೋಂಟುಗೋಳಿಯನ್ನು ಸಂಪರ್ಕಿಸುವ ರಸ್ತೆಯ ಇದೀಗ ನನಸಾಗುವ ಸಂದರ್ಭ ಬಂದಿದೆ ಎಂದು ಸಚಿವ ಯು.ಟಿ.ಖಾದರ್ ಅವರು ಹೇಳಿದರು. ಅವರು ನಡುಪದವು ಕ್ರಾಸ್‍ನಿಂದ ಲಾಡ, ಪಟ್ಟೋರಿ ಮಾರ್ಗವಾಗಿ ಸಂಪರ್ಕದ 2.20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ರಸ್ತೆ ಕಾಮಗಾರಿಗೆ ನಡುಪದವಿನಲ್ಲಿ ಬುಧವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಸಂಪರ್ಕ ರಸ್ತೆ ಹಾಗೂ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಡುಪದವು ಮೋಂಟುಗೋಳಿ ರಸ್ತೆಯ ಕಾಮಗಾರಿಯೂ ಶೀಘ್ರವಾಗಿ ನಡೆಯಲಿದೆ ಎಂದರು. ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಅಲಿ ಮಾತನಾಡಿ, ಸಚಿವರು ಈಗಾಗಲೇ ಸಾಕಷ್ಟು ಅನುದಾನ ನೀಡಿ ಗ್ರಾಮದ ಅಭಿವೃದ್ಧಿಯ ರೂವಾರಿಯಾಗಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಬಂಟ್ವಾಳ ತಾಲೂಕು…

Read More