Author: UllalaVani

Kannada News From Coastal Karnataka

UN NETWORKS ಕೊಣಾಜೆ: ಅಸೈಗೋಳಿ ಬಳಿ ರಮೇಶ್ ಎಂಬಾತನಿಗೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಸೈಗೋಳಿ ನಿವಾಸಿಗಳಾದ ಶಫೀತ್ ಆಲಿ ಯಾನೆ ಶಾಫಿ, ಅಬ್ದುಲ್ ಅಝೀಜ್ ಯಾನೆ ಸಮೀರ್ ಹಾಗೂ ಉಳ್ಳಾಲ ಮುಕ್ಕಚ್ಚೇರಿ ವಾಸಿ ಸವಾದ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸೆ.30 ರಂದು ಅಸೈಗೋಳಿ ಬಾರ್ ಬಳಿ ಕೊಣಾಜೆ ನಿವಾಸಿ ರಮೇಶ್ ಎಂಬಾತನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೊಣಾಜೆ ಪೊಲೀಸರು ಮಂಗಳವಾರ ನೆತ್ತಿಲಪದವು ಎಂಬಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಕೊಣಾಜೆ ಪೊಲೀಸ್ ಇನ್‍ಸ್ಪೆಕ್ಟರ್ ರವಿ ನಾಯ್ಕ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Read More

UN NETWORKS ಉಳ್ಳಾಲ: ಆರ್ಥೋಡಾಂಟಿಕ್ ಸಲಹೆಗಾರ ಹಾಗೂ ದಂತ ವೈದ್ಯ ಡಾ. ಅರ್ಜುನ್ ನಾಯಕ್ ಅವರು ದಂತ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ `ಪ್ರತಿಭಾನ್ವಿತ ಯುವ ವೈದ್ಯ ಅಂತರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಸೆ. 29, 30ರಂದು ದುಬೈನಲ್ಲಿ ನಡೆಯಲಿರುವ ವಿಶ್ವ ದಂತ ಸಮ್ಮೇಳನದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರು ದೇರಳಕಟ್ಟೆ ಎ.ಬಿ ಶೆಟ್ಟಿ ಸ್ಮಾರಕ ದಂತ ವಿಜ್ಞಾನ ಮಹಾವಿದ್ಯಾಲಯದ ಡೀನ್ ಡಾ. ಯು.ಯಸ್. ಕೃಷ್ಣ ನಾಯಕ್ ಅವರ ಪುತ್ರ.

Read More

UN NETWORKS ಮುಡಿಪು: ಮನುಷ್ಯನಾಗಿ ಹುಟ್ಟಿದ ಮೇಲೆ ಕಷ್ಟ ಸಮಸ್ಯೆಗಳು ಸರ್ವೆ ಸಾಮಾನ್ಯ. ನಮಗೆ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿ ಸವಾಲುಗಳನ್ನು ದಿಟ್ಟತನದಿಂದ ಎದುರಿಸಬೇಕು. ಸಕರತ್ಮಕ ಚಿಂತನೆಯಿಂದ ನಮ್ಮ ಬದುಕನ್ನು ಸಂತಸದಿಂದ ಕಳೆಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಅಭಿಪ್ರಾಯಪಟ್ಟರು. ಗಾಂಧೀಜಯಂತಿ ಪ್ರಯುಕ್ತ ಮುಡಿಪು ವರ್ತಕರ ಸಂಘ, ಆಯುಷ್ ಇಲಾಖೆ, ಸಾರ್ವಜನಿಕರು ಹಾಗೂ ಸ್ಥಳೀಯ ಸ್ವಯಂ ಸೇವಾ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿಮಂಗಳವಾರ ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಿಂದ ಮುಡಿಪು ಜಂಕ್ಷನ್ ತನಕ ನಡೆದ “ನಮ್ಮ ನಡೆ ಆರೋಗ್ಯದ ಕಡೆ” ಕಾಲ್ನಡಿಗೆ ಜಾಥಾದ ಬಳಿಕ ಮುಡಿಪು ಜಂಕ್ಷನ್‍ನಲ್ಲಿ ನಡೆದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಬದುಕಿನಲ್ಲಿ ಅದೆಷ್ಟೋ ಸಂತಸದ ಕ್ಷಣಗಳಿದೆ. ಅದರೆ ಆ ಅಮೂಲ್ಯವಾದ ಕ್ಷಣಗಳನ್ನು ಕ್ಷುಲ್ಲಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳುತ್ತಾ ನಕಾರಾತ್ಮಕ ಚಿಂತಿಸುತ್ತಾ ಕಳೆದುಕೊಳ್ಳುತ್ತಿದ್ದೇವೆ. ಅದರಿಂದ ಬದುಕಿನುದ್ದಕ್ಕೂ ಪ್ರತಿಕ್ಷಣ ಒತ್ತಡ ತರುತ್ತದೆ. ಜೊತೆಗೆ ಸಮಾಜದಲ್ಲಿ ಸಾಮರಸ್ಯ ಸಹೋದರತ್ವಕ್ಕೆ ಭಂಗ ತರುವುದೇ ಹೊರತು ಮಾನಸಿಕ ನೆಮ್ಮದಿಯಾಗಲೀ…

Read More

UN NETWORKS ಹರೇಕಳ: ಮೊದಲ ಹಂತದಲ್ಲಿ ಸಾಂಕೇತಿಕ ಬಸ್ ತಡೆ ನಡೆಸಲಾಗಿದೆ, ಮುಂದೆ ವಿವಿಧ ಹಂತದ ಹೋರಾಟ ನಡೆಯಲಿದ್ದು, ಆರ್ ಟಿ ಓ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗುವುದು ಎಂದು ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಎಚ್ಚರಿಸಿದರು. ಸಮರ್ಪಕ ಸಾರಿಗೆ ವ್ಯವಸ್ಥೆ, ಹರೇಕಳದಿಂದ ಕೊಜಪಾಡಿಗೆ ಬಸ್ ಸೇವೆ ವಿಸ್ತರಿಸುವಂತೆ ಒತ್ತಾಯಿಸಿ ಸೋಮವಾರ ಹರೇಕಳ ಕಡವಿನ ಬಳಿ ಡಿವೈಎಫ್‍ಐ ವತಿಯಿಂದ ನಡೆದ ರಸ್ತೆತಡೆ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಹತ್ತು ವರ್ಷಗಳ ಹಿಂದೆ ಹರೇಕಳದ ಜನಸಂಖ್ಯೆ ಕಡಿಮೆಯಿದ್ದರೂ ಹತ್ತು ಬಸ್ ಪರವಾನಿಗೆಗಳಿದ್ದವು, ಆದರೆ ಇಂದು ಜನಸಂಖ್ಯೆ ಹೆಚ್ಚಾಗಿದ್ದು, ಗ್ರಾಮ ಅಭಿವೃದ್ಧಿಯನ್ನೂ ಕಂಡಿದೆ. ಆದರೆ ಬಸ್‍ಗಳಿಗಿದ್ದ ಪರವಾನಿಗೆ ಕಡಿಮೆಯಾಗಿದ್ದು, ಅದಕ್ಕಿಂತಲೂ ಕಡಿಮೆ ಬಸುಗಳು ಸಂಚರಿಸುತ್ತಿದೆ. ನರ್ಮ್ ಯೋಜನೆಯಡಿ ಹರೇಕಳಕ್ಕೆ ಬಸ್ಸುಗಳ ಅವಶ್ಯಕತೆ ಇರುವ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಡಿವೈಎಫ್‍ಐ ಒತ್ತಾಯಿಸಿದ್ದ ಫಲವಾಗಿ ಅಧಿಕಾರಿಗಳು ಗ್ರಾಮದಲ್ಲಿ ಸರ್ವೇ ಮಾಡಿದ್ದರು. ಆದರೆ ನರ್ಮ್ ಬಸ್ಸುಗಳು ಬರದಿದ್ದು ಇದರ ಹಿಂದೆ ನಡೆದಿರುವ ಪಿತೂರಿಯಾದರೂ ಏನು ಎಂದು ಪ್ರಶ್ನಿಸಿದರು.…

Read More

UN NETWORKS ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ದಶಮಾನೋತ್ಸವವನ್ನು ಆಚರಿಸಿರುವುದು ಎಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಸಂಘವನ್ನು ಹತ್ತು ವರ್ಷಗಳಿಂದ ಮುನ್ನಡೆಸಿದ ಆತ್ಮತೃಪ್ತಿ ನನಗಿದೆ. ಸಂಘವು ಕೇವಲ ಪದಾಕಾರಿಗಳಿಗೆ ಸೀಮಿತವಾಗಿಲ್ಲ. ಪ್ರತಿಯೋರ್ವ ಸದಸ್ಯರು ಸಂಘದ ಬಗ್ಗೆ ಅಭಿಮಾನವನ್ನು ಹೊಂದಿರಬೇಕು. ಸಂಘದ ಮೇಲಿನ ಅಭಿಮಾನದಿಂದ ನಗರದಲ್ಲಿನ ಅನೇಕ ದಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸಿರುವುದು ಸಂತೋಷ ತಂದಿದೆ. ಭವಿಷ್ಯದಲ್ಲೂ ನಾವೆಲ್ಲರು ಒಂದಾಗಿ ಸಂಘವನ್ನು ಇನ್ನಷ್ಟು ಬಲಿಷ್ಟಗೊಳಿಸೋಣ. ಹುದ್ದೆಯ ಆಶೆಯಿಂದ ನಾನು ಯಾವತ್ತೂ ಸಂಘಕ್ಕೆ ಬಂದವನಲ್ಲ. ನೂತನ ಸದಸ್ಯರು ಸಂಘದ ಕಾರ್ಯಕಾರಿ ಸಮಿತಿಗೆ ಬಂದು ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂಬುವುದು ನನ್ನ ಉದ್ಧೇಶವಾಗಿದೆ. ಸಣ್ಣ ಸಣ್ಣ ತಪ್ಪುಗಳು ಆಗುವುದು ಸಹಜ. ಅದನ್ನು ಬದಿಗೊತ್ತಿ ಸಂಘವನ್ನು ಮತ್ತಷ್ಟು ಅಭಿವೃದ್ಧಿಯತ್ತ ಸಾಗಿಸೋಣ ಎಂದು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ತಿಳಿಸಿದರು ಕರ್ನಾಟಕ ರಾಜ್ಯದ ಹೊರನಾಡ ಕನ್ನಡಿಗ ಪತ್ರಕರ್ತರ ಶ್ರೇಯೋಭಿವೃದ್ಧಿಗಾಗಿ ಬೃಹನ್ಮುಂಬಯಿಯಲ್ಲಿ ಪತ್ರಕರ್ತರ ಸಂಘಟನೆಯಾಗಿ ರೂಪುಗೊಂಡು ದಶಮಾನೋತ್ಸವ ಸಂಭ್ರದಲ್ಲಿರುವ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ…

Read More

UN NETWORKS ಉಳ್ಳಾಲ : ಉಳ್ಳಾಲ ನಗರ ಕಾಂಗ್ರೆಸ್ ಹಾಗೂ ಯು.ಟಿ. ಖಾದರ್ ಅಭಿಮಾನಿಗಳ ಬಳಗದ ಆಶ್ರಯದಲ್ಲಿ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಜನಜಾಗೃತಿ ಸಭೆ ಮತ್ತು ಇತ್ತೀಚೆಗೆ ನಡೆದ ಸ್ಥಳೀಯ ಪಂಚಾಯಿತಿ ಚುನಾವಣೆಯಲ್ಲಿ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಅಭಿನಂದನೆ ಸಭೆ ಅ. 2ರಂದು ಸಂಜೆ 6.30ಕ್ಕೆ ಉಳ್ಳಾಲ ಅಬ್ಬಕ್ಕ ವೃತ್ತದ ಬಳಿ ನಡೆಯಲಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್ ಹೇಳಿದರು. ತೊಕ್ಕೊಟ್ಟಿನ‌ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಫೆಲ್ ವಿಮಾನ ಖರೀದಿಯಲ್ಲಿ ಹಗರಣ, ತೈಲ ಹಾಗೂ ಅನಿಲ ಬೆಲೆ ಏರಿಕೆ , ದಿನ ನಿತ್ಯದ ಆಹಾರ ಸಾಮಗ್ರಿಗಳ ಬೆಲೆ ಏರಿಕೆಯನ್ನು ವಿರೋಧಿಸಿ ರಾಜ್ಯದ ಮುಖಂಡರು ಜನಸಾಮಾನ್ಯರಿಗೆ ಜಾಗೃತಿ ಮೂಡಿಸಲಿದ್ದಾರೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಮಾಜಿ ಸಚಿವ ಬಿ. ರಮನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ್…

Read More

UN NETWORKS ಉಳ್ಳಾಲ: ಉಳ್ಳಾಲ ಭಾಗದಲ್ಲಿ ಪ್ಲಾಸ್ಟಿಕ್ ಮೊಟ್ಟೆಯೊಂದು ಆಮ್ಲೆಟ್ ಮಾಡುವ ಸಂದರ್ಭ ಪತ್ತೆಯಾಗಿದೆ ಎಂದು ಮಹಿಳೆಯೊಬ್ಬರು ಅದನ್ನು ತೋರಿಸಿರುವ ವೀಡಿಯೋ ಇದೀಗ ವಾಟ್ಸ್ಯಾಪ್ ನಲ್ಲಿ ವೈರಲ್ ಆಗಿದ್ದು, ನಾಗರೀಕರಲ್ಲಿ ಆತಂಕ ಸೃಷ್ಟಿಸಿದೆ. ಮೊಟ್ಟೆಯೊಂದನ್ನು ಆಮ್ಲೇಟ್ ಮಾಡುವ ಸಂದರ್ಭ ಅದು ಪ್ಲಾಸ್ಟಿಕ್ ಮಿಶ್ರಿತದಂತೆ ಕಂಡುಬರುತ್ತದೆ. ಅಡುಗೆ ಮನೆಯಲ್ಲಿ ಸೆರೆಹಿಡಿಯಲಾದ ವೀಡಿಯೋದಲ್ಲಿ ಮುಸ್ಲಿಂ ಮಲಯಾಳಿ ಭಾಷೆಯಲ್ಲಿ ಮಾತನಾಡುವ ಮಹಿಳೆ ಅದನ್ನು ತೋರಿಸಿ ಉಳ್ಳಾಲದ ಅಂಗಡಿಯಿಂದ ತಂದಿರುವ ಮೊಟ್ಟೆಯಲ್ಲಿ ತಯಾರಿಸಲಾಗಿದೆ. ಇದೊಂದು ಪ್ಲಾಸ್ಟಿಕ್ ಮೊಟ್ಟೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ಆದರೆ ಇದೀಗ ಅಂತಹದ್ದೇ ಮೊಟ್ಟೆ ಮನೆಗೆ ತಲುಪಿದೆ. ಎಲ್ಲರೂ ಈ ನಿಟ್ಟಿನಲ್ಲಿ ಜಾಗರೂಕರಾಗಿ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿರುವ ವೀಡಿಯೋ ವೈರಲ್ ಆಗಿದೆ. ಶನಿವಾರದಿಂದ ಮಹಿಳೆಯೊಬ್ಬರು ಮಾಡಿರುವ ವೀಡಿಯೋ ವಾಟ್ಸ್ಯಾಪ್ ಮೂಲಕ ಹರಿದಾಡುತ್ತಿದೆ. ಆದರೆ ಈ ಕುರಿತು ಉಳ್ಳಾಲ ನಗರಸಭೆಯ ಆರೋಗ್ಯ ನಿರೀಕ್ಷಕರಿಗೆ ಯಾವುದೇ ರೀತಿಯ ಮಾಹಿತಿಯೂ ಬಂದಿಲ್ಲ. ಅಲ್ಲದೆ ಯಾವ ಮನೆಯಲ್ಲಿ ದೊರೆತಿದೆ ಅನ್ನುವ ಕುರಿತು ಸ್ಪಷ್ಟ ಮಾಹಿತಿಯೂ ಇಲ್ಲ.

Read More

UN NETWORKS ಅಸೈಗೋಳಿ: ಹಿಂದೂ ಸಂಘಟನೆ ಕಾರ್ಯಕರ್ತನೋರ್ವನಿಗೆ ಬಾರೊಳಗಡೆ ಕುಳಿತಿದ್ದ ಮೂವರು ಯುವಕರು ನಾಮ ಹಾಕುವ ವಿಚಾರಕ್ಕೆ ವಾಗ್ವಾದ ನಡೆದು ಕೀಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಅಸೈಗೋಳಿ ವೈಭವ್ ಬಾರಿನಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದ್ದು, ಘಟನೆಯಲ್ಲಿ ದಾಳಿ ನಡೆಸಿದ ಓರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾರಿನಲ್ಲಿ ಕುಳಿತಿದ್ದ ಶಮೀರ್,ಶವಾಝ್ ಮತ್ತು ಇಲಿಯಾಸ್ ಎಂಬವರು ಅಲ್ಲೇ ಕುಳಿತಿದ್ದ ರಮೇಶ್ ಜತೆಗೆ ವಾಗ್ವಾದ ನಡೆಸಿದ್ದರು. ನಾಮಧಾರಣೆ ವಿಚಾರಕ್ಕೆ ಸಂಬಂಧಿಸಿ ನಾಲ್ವರ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಈ ವೇಳೆ ನಾಲ್ವರ ವಾದ ತಾರಕಕ್ಕೇರಿ ಮೂವರು ಸೇರಿ ರಮೇಶ್ ಮೂಗಿಗೆ ಹೊಡೆದು ಎರಡು ಕೈಗಳಿಗೆ ಕೀ ಮೂಲಕ ಇರಿದಿದ್ದಾರೆ. ಬಳಿಕ ಸ್ಥಳದಿಂದ ಮೂವರು ಪರಾರಿಯಾಗುವಷ್ಟರಲ್ಲಿ ಶವಾಝ್ ಎಂಬಾತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ರಮೇಶ್ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಕೊಣಾಜೆ ದಾಸರಮೂಲೆ ನಿವಾಸಿ ರಮೇಶ್…

Read More

UN NETWORKS ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್‍ನ ಕಂದಾಯ ನಿರೀಕ್ಷಕ ಉಳ್ಳಾಲಬೈಲು ಬಂಗೇರ ಲೈನ್ ನಿವಾಸಿ ದೇವದಾಸ ಶ್ರೀಯಾನ್(59) ಹೃದಯಾಘಾತದಿಂದ ಸೆ. 30ರಂದು ರವಿವಾರ ನಿಧನ ಹೊಂದಿದರು.ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ಉಳ್ಳಾಲ ನಗರಸಭೆಯಲ್ಲಿ ಸುಮಾರು 25 ವರ್ಷಕ್ಕೂ ಅ„ಕ ಕಾಲ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಬಳಿಕ ಉಳ್ಳಾಲ ಪುರಸಭೆಯಲ್ಲಿ ಕಂದಾಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿ ಕೋಟೆಕಾರು ಪಟ್ಟಣ ಪಂಚಾಯತ್‍ನಲ್ಲಿ ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕವಾಗಿ ತೊಡಗಿಸಿಕೊಂಡಿದ್ದ ಅವರು ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ, ಪ್ರಸ್ತುತ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಸಚಿವ ಖಾದರ್ ಸಂತಾಪ : ದೇವದಾಸ್ ಶ್ರೀಯಾನ್ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಂತಾಪ ಸೂಚಿಸಿದ್ದಾರೆ.

Read More

UN NETWORKS ದೇರಳಕಟ್ಟೆ: ದೇರಳಕಟ್ಟೆ ರೇಂಜ್ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್  ಇದರ ಸಾಮಾನ್ಯ ಸಬೆಯು  ದೇರಳಕಟ್ಟೆ ಬದ್ರಿಯಾ ಜುಮ್ಹಾ ಮಸೀದಿ ಸಭಾಂಗಣದಲ್ಲಿ ಅಸೋಸಿಯೇಷನ್ ಅಧ್ಯಕ್ಷರಾದ .ಇಸ್ಮಾಯಿಲ್ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯನ್ನು ಸ್ಥಳೀಯ ಖತೀಬರಾದ ಶರೀಫ್ ಅರ್ಶದಿಯವರು ಉದ್ಘಾಟಿಸಿ ಮದರಸ ಮ್ಯಾನೇಜ್ಮೆಂಟ್ ನ ಕರ್ತವ್ಯ ಮತ್ತು ಜವಾಬ್ದಾರಿ ಗಳ ಬಗ್ಗೆ ಸಭೆಗೆ ತಿಳಿಸಿದರು. ಮುಖ್ಯಾತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಅದ್ಯಕ್ಷರಾದ ಐ.ಮೊೃದಿನಬ್ಬ ಹಾಜಿ, ಪ್ರಧಾನ ಕಾರ್ಯದರ್ಶಿ ರಫೀಕ್ ಹಾಜಿ ಕೊಡಾಜೆ,ಮಂಗಳೂರು ಸೌತ್ ರೇಂಜಿನ ಹೆೃದರ್ ವಳಚ್ಚಿಲ್, ರೇಂಜ್ ಮ್ಯಾನೇಜ್ಮೆಂಟ್ ನ ಗೌರವಾಧ್ಯಕ್ಷರಾದ ಮಜಲ್ ಅಬ್ಬಾಸ್ ಹಾಜಿ  , ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಬಹು! ಲತೀಫ್ ದಾರಿಮಿ ರೆಂಜಾಡಿ ಮತ್ತು ಬದ್ರಿಯಾ ಜುಮ್ಹಾ ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಮುಂತಾದವರು ಭಾಗವಹಿಸಿದರು. ಸಭೆಯಲ್ಲಿ ರೇಂಜ್ ಮದರಸ ಮ್ಯಾನೇಜ್ಮೆಂಟ್ ನ ಉಪಾಧ್ಯಕ್ಷರುಗಳಾದ ಸ್ವಾಗತ್ ಅಬೂಬಕ್ಕರ್ ಹಾಜಿ, ಎಂ.ಎ. ಅಬ್ದುಲ್ಲಾ ಹಾಜಿ ಬೆಳ್ಮ ಹಾಗೂ ರೇಂಜ್ ವ್ಯಾಪ್ತಿಯಲ್ಲಿನ ವಿವಿಧ ಮದರಸ…

Read More