Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಉಳ್ಳಾಲ ಝೋನ್ ಇದರ ಆಶ್ರಯದಲ್ಲಿ ಬ್ರಹತ್ ಉಲಮಾ ಸಮ್ಮಿಲನ ತೊಕ್ಕೊಟ್ಟು ವಿನ ತಾಜುಲ್ ಉಲಮಾ ಜುಮಾ ಮಸೀದಿಯಲ್ಲಿ ನಡೆಯಿತು.ಉಳ್ಳಾಲ ಝೋನ್ ಅಧ್ಯಕ್ಷ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಿದರು. ಶರೀಫ್ ಸಅದಿ ಸುಂದರಿಭಾಗ್ ಕಾರ್ಯಕ್ರಮ ಉದ್ಘಾಟಿಸಿದರು. ಜಂಇಯ್ಯತುಲ್ ಉಲಮಾ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಎಸ್. ಪಿ .ಹಂಝ ಸಖಾಫಿ ಮುಖ್ಯ ಭಾಷಣ ನಡೆಸಿದರು.ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಉಳ್ಳಾಲ ಇದರ ಅಧ್ಯಕ್ಷರಾದ ಪಿ ಎಸ್ ಎಂ ಶಿಹಾಬುದ್ದೀನ್ ಸಖಾಫಿ ಫಿಕ್ಹ್ ತರಗತಿ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಸುನ್ನೀ ಯವ ಜನ ಸಂಘ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್, ತಲಪಾಡಿ ರೇಂಜ್ ಅಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ಉಳ್ಳಾಲ ರೇಂಜ್ ಪ್ರಧಾನ ಕಾರ್ಯದರ್ಶಿ ಯೂನುಸ್ ಇಮ್ದಾದಿ ಹಾಗು ಉಳ್ಳಾಲ ಝೋನ್ ವ್ಯಾಪ್ತಿಯ ಉಲಮಾಗಳು ಉಪಸ್ಥಿತರಿದ್ದರು. ಝೋನ್ ಪ್ರಧಾನ ಕಾರ್ಯದರ್ಶಿ ಮುನೀರ್ ಸಖಾಫಿ ಸಾಲೆತ್ತೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Read More

UN NETWORKS ಮಂಗಳೂರು: ಮಂಗಳೂರು ಹವ್ಯಕ ಸಭಾ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಲಯನ್ಸ್ ಕ್ಲಬ್ ಮಂಗಳೂರು ಜಂಟಿ ಆಶ್ರಯದಲ್ಲಿ ತೇಜಸ್ವಿನಿ ಆಸ್ಪತ್ರೆ ಸಹಕಾರದಲ್ಲಿ ನಂತೂರು ಶ್ರೀ ಭಾರತಿ ಕಾಲೇಜಿನಲ್ಲಿ ರಕ್ತದಾನ ಶಿಬಿರ  ನಡೆಯಿತು. ಮಂಗಳೂರು ಕೆ.ಎಂ.ಸಿಯ ಹಿರಿಯ ವೈದ್ಯ ಡಾ. ಸದಾಶಿವ ರಾವ್ ಮಾತನಾಡಿ ರಕ್ತದ ಅವಶ್ಯಕತೆ ಇದ್ದಾಗ ಇರುವ ಅತುರ, ರಕ್ತದಾನ ಮಾಡುವಾಗಲೂ ಇರಬೇಕು, ರಕ್ತದಾನದಿಂದ ಆರೋಗ್ಯಕ್ಕೂ ಒಳ್ಳೆಯದು ಎಂದು ಹೇಳಿದರು.ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ವಿಜಯ ವಿಷ್ಣು ಮಯ್ಯ, ರಕ್ತದಾನ ಮಾಡಲು ಹಿಂಜರಿಕೆ ಇರಬಾರದು, ಅಪರೂಪದ ರಕ್ತದ ಮಾದರಿ ಅಗತ್ಯ ಇರುವಾಗ ಕೆಲವೊಮ್ಮೆ ಪರದಾಡುವ ಪರಿಸ್ಥಿತಿ ಇರುತ್ತದೆ ಎಂದು ರಕ್ತದಾನದ ಅಗತ್ಯವನ್ನು ವಿವರಿಸಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಮಾತನಾಡಿ ರಕ್ತದಾನ ನಿರಂತರವಾಗಿ ನಡೆಯುತ್ತಿರಬೇಕು, ರಕ್ತದಾನ ಮಾಡುವುದರಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ರಕ್ತದಾನದ ಮಾಹಿತಿ ನೀಡಿದರು. ಮಂಗಳೂರು ಲಯನ್ಸ್ ಕ್ಲಬ್ ಕಾರ್ಯದರ್ಶಿ ಕ್ಷೇಮ ರಾವ್, ಲಯನ್ಸ್…

Read More

UN NETWORKS ಯೇನೆಪೊಯ: ಔಷಧಿ ಕ್ಷೇತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ದೊರಕುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಿಂದಲೇ ಔಷಧಿ ಶಾಸ್ತ್ರದ ಸಂಶೋಧನೆ ಸೇರಿದಂತೆ ಹೊಸ ವಿಚಾರಗಳ ಅಧ್ಯಯನಕ್ಕೆ ಆದ್ಯತೆ ನೀಡಬೇಕು ಎಂದು ಯೇನೆಪೊಯ ವಿಶ್ವವಿಶ್ಯಾನಿಲಯದ ಉಪಕುಲಪತಿ ಡಾ| ಎಂ. ವಿಜಯಕುಮಾರ್ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ಯೇನೆಪೊಯ ವಿಶ್ವವಿದ್ಯಾಲಯದಲ್ಲಿ ವಿಶ್ವ ಔಷಧಿ ತಜ್ಞರ ದಿನದ ಅಂಗವಾಗಿ ಯೇನೆಪೊಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನಾ ಕೇಂದ್ರವು “ಫಾರ್ಮಸಿಸ್ಟ್: ನಿಮ್ಮ ಔಷಧಿ ತಜ್ಞರು” ಎಂಬ ವಿಷಯದ ಬಗ್ಗೆ ನಡೆದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂಸ್ಥೆಯ ಎಲ್ಲಾ ವೈದ್ಯಕೀಯ ಮತ್ತು ಅರೆವೈದ್ಯಕೀಯ ತರಬೇತಿಯ ಭೋಧಕ, ಭೋಧಕೇತರ ಮತ್ತು ವಿದ್ಯಾರ್ಥಿ ವರ್ಗ ಸಕ್ರಿಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಂಗಳೂರಿನ ಫೈಟೋಟೆಕ್ ಎಕ್ಸ್ಟ್ರಾಕ್ಟ್ಸ್ ಪ್ರೈವೆಟ್. ಲಿಮಿಟೆಡ್‍ನ ಟೆಕ್ನಿಕಲ್ ಡೈರೆಕ್ಟರ್ ಡಾ| ಪಾರಂಜೋತಿ ಕನ್ನಿ, ಪಿ.ಎ. ಶೈಕ್ಷಣಿಕ ಟ್ರಸ್ಟ್ ಅಕಾಡೆಮಿಕ್ಸ್ ನಿರ್ದೇಶಕ ಸರ್ಫಾಜ್ ಜೆ ಹಾಶಿಮ್, ಯೇನೆಪೊಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ| ಜಿ. ಶ್ರೀಕುಮಾರ್ ಮೆನನ್, ಸಹಾಯಕ ಪ್ರಾಧ್ಯಾಪಕಿ ಸೋನಾಲ್ ಡಿ’ಸೋಜಾ ಭಾಗವಹಿಸಿದ್ದರು.…

Read More

UN NETWORKS ಕೊಣಾಜೆ: ಅತ್ಯಂತ ಅಕರ್ಷಕವಾಗಿರುವ ತಲಪಾಡಿ ಬೀಚ್‍ನ್ನು ಸುಸಜ್ಜಿತ ಬೀಚ್ ಆಗಿ ಪರಿವರ್ತಿಸುವ ಯೋಜನೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಮುಂದಿದ್ದು, ಆ ನಿಟ್ಟಿನಲ್ಲಿ ಮುಂದಿನ ಐದು ವರ್ಷಗಳಲ್ಲಿ ತಲಪಾಡಿಯ ಬೀಚ್ ಚಿತ್ರಣ ಬದಲಾಗಲಿದೆ ಎಂದು ಮಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಉದಯ ಶೆಟ್ಟಿ ಹೇಳಿದರು. ಮಂಗಳೂರು ವಿವಿಯ ಎಂಬಿಎ ಸಭಾಭವನದಲ್ಲಿ ವಿವಿಯ ಟೂರಿಸಂ ಆ್ಯಂಡ್ ಟ್ರಾವೆಲ್ ಮೆನೇಜ್‍ಮೆಂಟ್ ವಿಭಾಗ ಹಾಗೂ ಪ್ರವಾಸೋದ್ಯಮ ಇಲಾಖೆ ಮಂಗಳೂರು ಜಂಟಿ ಆಶ್ರಯದಲ್ಲಿಗುರುವಾರ ಆಚರಿಸಲಾದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿಅವರು ಮಾತನಾಡಿದರು. ಸ್ವದೇಶ ದರ್ಶನ್ ಕೋಸ್ಟಲ್ ಸರ್ಕಿಟ್ ಕಾರ್ಯಕ್ರಮದಲ್ಲಿತಲಪಾಡಿ ಬೀಚ್ ನನ್ನು ಆಯ್ಕೆ ಮಾಡಲಾಗಿದ್ದು ಹಂತಹಂತವಾಗಿ ಮೂಲ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಲಾಗುತ್ತಿದ್ದು ಮುಂದಿನ ಐದು ವರ್ಷಗಳಲ್ಲಿಪ್ರವಾಸಿಗರನ್ನು ಸೆಳೆಯುವ ಬೀಚ್ ಆಗಿ ಬದಲಾಗಲಿದೆ. ಈಗಾಗಲೇ ತಲಪಾಡಿ ಬೀಚ್ ಅಭಿವೃದ್ಧಿ ಕಾಮಗಾರಿ ಬಗ್ಗೆ ಖಾಸಗಿ ಸಂಸ್ಥೆಗೆ ಟೆಂಡರ್ ಕೊಡಲಾಗಿದೆ. ದೇಶ ವಿದೇಶಗಳಿಂದ ಪ್ರವಾಸಿಗರನ್ನು ಸೆಳೆಯುವ ಸಲುವಾಗಿ ಜಲಸಾಹಸ ಕ್ರೀಡೆಗಳನ್ನು ತಲಪಾಡಿ ಕಡಲ ಕಿನಾರೆಯನ್ನು ಆಯೋಜಿಸುವ ಚಿಂತನೆ ಇಲಾಖೆ ಮುಂದೆ…

Read More

UN NETWORKS ಉಳ್ಳಾಲ: ಮದ್ಯಪಾನದಂತಹ ಮಹಾ ಪಿಡುಗುವಿನಿಂದ ಮನುಷ್ಯ ತನ್ನ ಜೀವನವನ್ನು ವ್ಯರ್ಥ ಮಾಡುತ್ತಿದ್ದು ಇದರಿಂದ ಮುಕ್ತರಾಗಿ ನವಜೀವನವನ್ನು ಸ್ವೀಕರಿಸುವಲ್ಲಿ ಪ್ರತಿಯೊಬ್ಬ ಶಿಬಿರಾರ್ಥಿಗಳ ಅದ್ಯ ಕರ್ತವ್ಯ ಎಂದು ಕೋಟೆಕಾರ್ ಶ್ರೀ ಶೃಂಗೇರಿ ಶಾರದಾ ಶಾಖಾ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿವಿಧ ಸಂಘಟನೆಗಳ ಸರಕಾರದಲ್ಲಿ ಕೊಲ್ಯ ಶ್ರೀದೇವಿ ಮೂಕಾಂಬಿಕಾ ದೇವಸ್ಥಾನದಲ್ಲಿ ಎಂಟು ದಿನ ನಡೆಯಲಿರುವ 1263ನೇ ಮದ್ಯವರ್ಜನ ಶಿಬಿರ ಬುಧವಾರ ಉದ್ಘಾಟಿಸಿ ಮಾತನಾಡಿದರು. ಕೆಲವು ಕೋಟಿ ಪುಣ್ಯದ ಫಲವಾಗಿ ಮನುಷ್ಯ ಜನ್ಮ ಪಡೆದಿದ್ದೇವೆ. ಇಂತಹ ಮಹಾ ಪಿಡುಗಗಳಿಂದ ನಮ್ಮ ಜಿಈವನವನ್ನು ಹಳು ಮಾಡುತ್ತಿದ್ದು, ಉತ್ತಮ ರೀತಿಯಲ್ಲಿ ಬದುಕುವ ಮೂಲಕ ನಾವು ಸಮಾಜದಲ್ಲಿ ಗುರುತಿಸಿಕೊಳ್ಳುವಂತಗಬೇಕು ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಚಂದ್ರಶೇಖರ ಕೆ.ನೆಲ್ಯಾಡಿ ಮಾತನಾಡಿ, ಅಮಲು ವ್ಯಸನಕ್ಕೆ ರಾಜಕೀಯ, ಜಾತಿ, ಧರ್ಮದ ಭೇದವಿಲ್ಲ. ಆದರೆ ಈ ಚಟ ಸಮಾಜ, ಕುಟುಂಬಕ್ಕೆ ಮಾರಕವಾಗಿದೆ. ಇಂದು ಯುವಜನತೆ ಮದ್ಯವ್ಯಸನಕ್ಜೆ ಬಲಿಯಾಗಿ…

Read More

UN NETWORKS ಉಳ್ಳಾಲ: ಭಾರತ್ ಪ್ರೌಢಶಾಲೆ ಕೇವಲ ಶೈಕ್ಷಣಿಕ ಕಾರ್ಯಕ್ಕೆ ಸೀಮಿತವಾಗಿದೆ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಭಾರತ್ ಪ್ರೌಢಶಾಲಾ ಮೈದಾನದಲ್ಲಿ ಆಡಿದ ಅನೇಕ ಕ್ರೀಡಾಪಟುಗಳು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದಿದ್ದು ಮುಂದಿನ ದಿನಗಳಲ್ಲಿಯೂ ಈ ಕ್ರೀಡಾಂಗಣದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿ ಎಂದು ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ ಅಭಿಪ್ರಾಯಪಟ್ಟರು. ಉಳ್ಳಾಲ ಭಾರತ್ ಪ್ರೌಢಶಾಲಾ ಮೈದಾನದಲ್ಲಿ ನಡೆದ ದ.ಕ.ಜಿ.ಪ. ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಅನುದಾನಿತ ಭಾರತ್ ಪ್ರೌಢಶಾಲೆ ಉಳ್ಳಾಲ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ಸೇವಂತಿ ಪಂದ್ಯಾಟಕ್ಕೆ ಚಾಲನೆ ನೀಡಿ ಸ್ಪರ್ಧಾತ್ಮಕ ಮನೋಭಾವನೆಯೊಂದಿಗೆ ಆಟವಾಡುವ ಮೂಲಕ ಗೆಲುವನ್ನು ಸಾಧಿಸಿ. ಸೋಲು ಗೆಲುವು ಸಹಜ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಗೆಲುವಿನ ಪಥದತ್ತ ಸಾಗಬೇಕು ಎಂದರು.…

Read More

UN NETWORKS ಉಳ್ಳಾಲ: ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಉಳ್ಳಾಲ ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಅರೋಗ್ಯ ತಪಾಸಣಾ ಕಾರ್ಯಕ್ರಮ ಶಿಬಿರವನ್ನು ಹಾಗೂ ಹೆಪಟೈಟಿಸ್ ಚುಚ್ಚುಮದ್ದನ್ನು ಸಹಾರ ಹಾಸ್ಪಿಟಲ್ ಇವರ ಸಹಯೋಗದೊಂದಿಗೆ ನಡೆಸಲಾಯಿತು. ಪೌರಾಯುಕ್ತರಾದ ವಾಣಿ ವಿ ಆಳ್ವ, ಆರೋಗ್ಯ ನಿರೀಕ್ಷಕರಾದ ಜಯಶಂಕರ್ ಪ್ರಸಾದ್, ಶಾಜಿತ್, ರಾಜೇಶ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.

Read More

UN NETWORKS ಕೊಣಾಜೆ: ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತಿ ಆಲ್ಪ್ರೇಡ್ ಲಾರ್ಡ್ ಟೆನಿಸ್ನ ಸಾಹಿತ್ಯಕ್ಕೆ ಸಂಬಂಧಪಟ್ಟ ಅಂತರ್ ಕಾಲೇಜು ವಿಚಾರಸಂಕಿರಣದಲ್ಲಿ `ವಿಶುವಲಿಂಗ್ ಟೆನ್ಯಾಸನ್’ ಶಿರ್ಷಿಕೆಯಡಿಯಲ್ಲಿ ಪ್ರಸ್ತುತಪಡಿಸಿದ ಸೆಮಿನಾರ್ ಹಾಗೂ ಮಾಡೆಲ್ ಸ್ಪರ್ಧೆಯಲ್ಲಿ ಮಂಗಳಗಂಗೋತ್ರಿಯ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಸ್ಪರ್ಧೆಯಲ್ಲಿ ನಫೀಸಾ ಸಮಿಹ, ಧನ್ಯಶ್ರೀ, ಪಾತೀಮತ್ ಆಫೀಯಾ, ಪ್ರಜನ್ಯಾ, ಶಾಂತಿಪ್ರಿಯಾ ಭಾಗವಹಿಸಿದ್ದರು. ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಅನಿತಾ ರವಿಶಂಕರ್, ಉಪನ್ಯಾಸಕರಾದ ಮಿಯಾಜ್, ಲಿಜ್‍ಬೆತ್ ಶೈನ್ ಮಾರ್ಗದರ್ಶನನೀಡಿದ್ದರು.

Read More

UN NETWORKS ಮಂಗಳೂರು:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ರವರು ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸಿದ ಸಂದರ್ಭ ಎಸ್ ಡಿಪಿಐ ಕಾರ್ಯಕರ್ತರು ಸ್ವಾಗತಿಸಿದರು. ಮಂಗಳೂರಿನ ಜಮಿಯ್ಯತುಲ್ ಫಲಾಹ್ ನಲ್ಲಿ ಸೆ.25ರಂದು ನಡೆಯುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರ ಮೀಟ್ ದೀ ಪ್ರೆಸಿಡೆಂಟ್ ಸಭೆಗೆ ಮತ್ತು ಉಳ್ಳಾಲದಲ್ಲಿ ನಡೆಯುವ ನಗರ ಸಭೆ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳಿಗೆ ಅಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗಮಿಸಿದ್ದಾರೆ. ಈ ಸಂದರ್ಭ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಶರಪ್ಪುದ್ದೀನ್, ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಕೋಶಾಧಿಕಾರಿ ನೂರುಲ್ಲಾ ಕುಲಾಯಿ, ಪ್ರ.ಕಾರ್ಯದರ್ಶಿ ಹಮೀದ್ ಎಸ್.ಎಚ್, ಕಾರ್ಯದರ್ಶಿ ಅಶ್ರಫ್ ಮಂಚಿ, ಉಪಾಧ್ಯಕ್ಷರುಗಳಾದ ಇಕ್ಬಾಲ್ ಐ.ಎಂ.ಅರ್, ಇಕ್ಬಾಲ್ ಬೆಳ್ಳಾರೆ, ಜಿಲ್ಲಾ ಸದಸ್ಯರಾದ ಯೂಸುಫ್ ಆಲಡ್ಕ, ಝಾಹೀರ್ ಮಲಾರ್, ಮನೀಬ್ ಬೆಂಗ್ರೆ, ಅಲ್ತಾಫ್ ಬೆಳ್ತಂಗಡಿ ಉಪಸ್ಥಿತರಿದ್ದರು.

Read More

UN NETWORKS ಕುವೈತ್: ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ನಡೆಯಲಿರುವ “ಇಲೈಕ ಯಾ ರಸೂಲಲ್ಲಾಹ” ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ರಚನೆಯು ಕೆಸಿಎಫ್ ಕುವೈತ್ ರಾಷ್ಟ್ರೀಯ ಅಧ್ಯಕ್ಷ ರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಉಸ್ತಾದರ ಘನ ಅಧ್ಯಕ್ಷತೆಯಲ್ಲಿ ದುವಾದೊಂದಿಗೆ ಕುವೈತ್ ಸಿಟಿಯಲ್ಲಿರುವ ನಶಾತ್ ಹಾಲ್ ನಲ್ಲಿ ದಿನಾಂಕ 21/09/2018 ರಂದು ಮಗ್ರಿಬ್ ನಮಾಝ್ ನ ನಂತರ ನಡೆಯಿತು. ಕೆಸಿಎಫ್ ಕುವೈತ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜನಾಬ್ ತೌಫೀಕ್ ಅಡ್ಡೂರ್ ಸ್ವಾಗತಿಸಿದರು. ರಾಷ್ಟ್ರೀಯ ಶಿಕ್ಷಣ ವಿಭಾಗದ ಚೆರ್ಮೇನ್ ಬಹುಮಾನ್ಯ ಫಾರೂಕ್ ಸಖಾಫಿ ಉದ್ಘಾಟಿಸಿದರು.ಕೆಸಿಎಫ್ ಕುವೈತ್ ಸೌತ್ ಝೋನ್ ಚೆಯರ್ಮ್ಯಾನ್ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ ಉಸ್ತಾದರು ಮುಹರ್ರಂ ತಿಂಗಳ ಬಗ್ಗೆ ತಿಳಿಸಿದರು.ರಾಷ್ಟ್ರೀಯ ಶಿಕ್ಷಣ ಕನ್ವೀನರ್ ಬಹುಮಾನ್ಯ ಬಾದುಷ ಸಖಾಫಿ ಹಾಗೂ ಕೆಸಿಎಫ್ ಅಂತರರಾಷ್ಟ್ರೀಯ ಆಡಳಿತ ವಿಭಾಗದ ಕನ್ವೀನರ್ ಬಹುಮಾನ್ಯ ಹುಸೈನ್ ಎರ್ಮಾಡ್ ರವರು ಉಪಸ್ಥಿತರಿದ್ದರು. ನವೆಂಬರ್ 30 ರಂದು ನಡೆಯಲಿರುವ ಇತಿಹಾಸದಲ್ಲಿ ಆಧ್ಯಾತ್ಮಿಕ ಹಾಗೂ ಲೌಕಿಕ ಇವೆರಡರಲ್ಲೂ ನಾಯಕರಾದ ಮುಹಮ್ಮದ್…

Read More