Author: UllalaVani

Kannada News From Coastal Karnataka

UN NETWORKS ಕೊಣಾಜೆ: ಶಿಕ್ಷಕರು ಕೇವಲ ಪಾಠದ ವಿಷಯಗಳನ್ನು ಮಾತ್ರ ಕಲಿಸದೇ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಹರಿಕಾರರು ಮಾನವೀಯ ಮೌಲ್ಯಗಳನ್ನು ಬೆಳೆಸಿ ತಾಯಿಯಾಗಿ, ತಂದೆಯಾಗಿ ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವಂತಹ ವ್ಯಕ್ತಿಗಳು ಎಂದು ಜಸ್ಟೀಸ್ ಕೆ.ಎಸ್.ಹೆಗಡೆ  ಆಡಳಿತ ಸಂಸ್ಥೆಯ ಸಂಖ್ಯಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ| ಟಿ.ಪಿ.ಎಮ್ ಪಕ್ಕಳ ಅಭಿಪ್ರಾಯಪಟ್ಟರು. ಅವರು ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ  ನಡೆದ ಶಿಕ್ಷಕರ ದಿನಾಚರಣೆ ಅಂಗವಾಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಕ್ಷಕ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು. ವಿಶ್ವಮಂಗಳ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ| ಇಸ್ಮಾಯಿಲ್ ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಶಿಕ್ಷಕರೇ ಮಕ್ಕಳ ಭವಿಷ್ಯ ರೂಪಿಸುವ ರೂವಾರಿಗಳು ಸಮಾಜದ ಮುನ್ನಡೆಗೆ ಕಾರಣೀಭೂತರಾದ ಮಕ್ಕಳ ಭವಿಷ್ಯ ರೂಪಿಸುತ್ತಿರುವ ಶಿಕ್ಷಕ ಬಂಧುಗಳಿಗೆ ವಂದನೆಯನ್ನು ಸಲ್ಲಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಮರೀಯಾ ಡಿ’ಸೋಜ ಮತ್ತು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವನಿತಾ ಸುರೇಶ್ ಕೊಟ್ಟಾರಿ ಇವರನ್ನು ಆಡಳಿತ…

Read More

UN NETWORKS ಉಳ್ಳಾಲ: ಉಳ್ಳಾಲ ವ್ಯಾಪ್ತಿಯಲ್ಲಿ ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರಮುಖ ಪೇಟೆಗಳಾದ ತೊಕ್ಕೊಟ್ಟು , ಉಳ್ಳಾಲ, ದೇರಳಕಟ್ಟೆ, ಮುಡಿಪು ಜಂಕ್ಷನ್ನಿನಲ್ಲಿ ಅಂಗಡಿ ಮುಂಗಟ್ಟುಗಳನ್ನು ಕೆಲವರು ಸ್ವಯಂ ಪ್ರೇರಿತರಾಗಿ ಬಂದ್ ನಡೆಸಿದ್ದರೆ, ಇನ್ನು ತೆರೆದಿದ್ದ ಅಂಗಡಿಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ ಮುಚ್ಚಿಸಿದ್ದಾರೆ. ಖಾಸಗಿ ಮತ್ತು ಸರಕಾರಿ ಬಸ್ಸುಗಳು ಸಂಚರಿಸದೆ ಪ್ರಯಾಣಿಕರು ಬಹಳ ತೊಂದರೆ ಅನುಭವಿಸಿದರು. ತಲಪಾಡಿ, ಕೋಟೆಕಾರು, ಕುತ್ತಾರು, ಪಂಡಿತ್ ಹೌಸ್, ಮಾಡೂರು, ಭಾಗಗಳಲ್ಲಿಯೂ ಕೆಲ ಅಂಗಡಿಗಳನ್ನು ಸ್ವಯಂಪ್ರೇರಿತರಾಗಿ ಹಲವರು ಬಂದ್ ನಡೆಸಿದ್ದರೆ, ಇನ್ನು ಕೆಲವರು ಎಂದಿನಂತೆ ಅಂಗಡಿಗಳನ್ನು ತೆರೆದು ವ್ಯಾಪಾರ ನಡೆಸಿದ್ದಾರೆ. ಬೆಳಿಗ್ಗೆನಿಂದ ಹಾಲು, ಮೀನು, ಪತ್ರಿಕೆ ಹಾಗೂ ಔಷಧಿ ಅಂಗಡಿಗಳು ಎಲ್ಲೆಡೆ ಕಾರ್ಯಾಚರಿಸುತಿತ್ತು. ಬೆಳಗ್ಗಿನಿಂದ ಖಾಸಗಿ ಬಸ್ಸುಗಳು ಮತ್ತು ಸರಕಾರಿ ಬಸ್ಸುಗಳು ಸಂಚರಿಸದೆ ಕೆಲಸಕ್ಕೆ ತೆರಳುವ ಮಂದಿಗೆ ತೊಂದರೆಯಾಯಿತು. ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಬಹಳಷ್ಟು ಪ್ರಯಾಣಿಕರು ಬಸ್ಸಿಗಾಗಿ ಕಾದು, ಬಳಿಕ ರಿಕ್ಷಾ ಖಾಸಗಿ ವಾಹನಗಳಲ್ಲಿ ತೆರಳಿದರು. ರೈಲಿನಿಂದ ದೇರಳಕಟ್ಟೆ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ರೋಗಿಗಳನ್ನು…

Read More

UN NETWORKS ತೊಕ್ಕೊಟ್ಟು: ಸಂತ ಸೆಬೆಸ್ತಿಯನ್ನರ ಧರ್ಮಕೇಂದ್ರ ಪೆರ್ಮನ್ನೂರಿನಲ್ಲಿ ಮಾತೆ ಮರಿಯಮ್ಮನವರ ಜನ್ಮ ದಿನ, ತೆನೆ ಹಬ್ಬ ಹಾಗೂ ಕುಟುಂಬದ ಹಬ್ಬವನ್ನು ಆಚರಿಸಲಾಯಿತು. ಭಕ್ತಿವಿಧಿಗಳನ್ನು ಮಂಗಳೂರು ಧರ್ಮಪ್ರಾಂತ್ಯದ ಕಿರು ಕ್ರೈಸ್ತ ಸಮುದಾಯದ ನಿರ್ದೇಶಕ ಫಾದರ್ ಜೋಕಿಮ್ ಫೆರ್ನಾಂಡಿಸ್ ನೆರವೇರಿಸಿದರು. ಈ ಸಂಧರ್ಭದಲ್ಲಿ ಧರ್ಮಕೇಂದ್ರದ ಪ್ರಧಾನ ಗುರು ಫಾ| ಜೆ. ಬಿ. ಸಲ್ಡಾನ್ಹಾ, ಸಹಾಯಕ ಧರ್ಮಗುರುಗಳಾದ ಫಾ| ಸ್ಟ್ಯಾನಿ, ಫಾ| ಲೈಝಿಲ್ ಹಾಜರಿದ್ದರು. ಫಾ| ವಲೇರಿಯನ್, ಫಾ| ವಿಪಿನ್, ಫಾ| ರೊಕ್ಕಿ ಉಪಸ್ಥಿತರಿದ್ದರು. ಧರ್ಮಭಗಿನಿಯರು, ಪಾಲನ ಮಂಡಳಿಯ ಸದಸ್ಯರು, ಭಕ್ತಾಧಿಗಳು ಭಕ್ತಿವಿಧಿಗಳಲ್ಲಿ ಭಾಗವಹಿಸಿ ದೇವರಿಗೆ ಹೂವುಗಳನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಚರ್ಚ್ ಶತಮನೋತ್ಸವದ ಸ್ಮಾರಕ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭ ಸಮುದಾಯದವರು ತಾವು ಬೆಳೆಸಿದ ತೆನೆಯನ್ನು ದೇವರಿಗೆ ಅರ್ಪಿಸಿ ಬಳಿಕ ವಿತರಿಸಲಾಯಿತು. ಇದರ ಜೊತೆಗೆ ಕಬ್ಬುಗಳನ್ನು ವಿತರಿಸಲಾಯಿತು.

Read More

UN NETWORKS ಉಳ್ಳಾಲ: ಅತಂತ್ರ ಸ್ಥಿತಿಯಲ್ಲಿರುವ ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವುದು ನಿಚ್ಚಳವಾಗಿದ್ದು, ಮೈತ್ರಿ ಉದ್ಧೇಶದಿಂದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇದ್ದ ಮೀಸಲಾತಿ ಬದಲಾವಣೆಯಾಗಿದ್ದು, ಹಿಂದುಳಿದ ವರ್ಗ ಬಿ. ಅಧ್ಯಕ್ಷ ಸ್ಥಾನ ಮೀಸಲಾತಿ ಬಂದರೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ.ಮೀಸಲಾತಿ ನಿಗದಿ ಪಡಿಸಿ ಆದೇಶ ಬಂದಿದೆ. ಉಳ್ಳಾಲ ನಗರ ಸಭೆಯಲ್ಲಿ 31 ಸದಸ್ಯ ಬಲವಿದ್ದು ಅಧಿಕಾರಕ್ಕೇರಲು 16 ಸದಸ್ಯರ ಸಂಖ್ಯೆ ಅಗತ್ಯವಿದೆ. ಅತಂತ್ರ ಸ್ಥಿತಿಯಲ್ಲಿರುವ ನಗರಸಭೆಯಲ್ಲಿ ಕಾಂಗ್ರೆಸ್ 13 ಸದಸ್ಯ ಬಲವನ್ನು ಹೊಂದಿದ್ದು, ಬಿಜೆಪಿ ಮತ್ತು ಎಸ್‍ಡಿಪಿಐ ತಲಾ 6 ಸದಸ ಬಲವನ್ನು ಹೊಂದಿದೆ, ಜೆಡಿಎಸ್ 4 ಮತ್ತು ಪಕ್ಷೇತರರು 2 ಸದಸ್ಯರನ್ನು ಹೊಂದಿದ್ದು , ಕಾಂಗ್ರೆಸ್‍ಗೆ ಅಧಿಕಾರಕ್ಕೇರಲು ಪಕ್ಷೇತರರು ಅಥವಾ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಅನಿವಾರ್ಯವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೈತ್ರಿಗೆ ಬರುವ ಸದಸ್ಯರಿಗೆ ನೀಡುವ ಸಾಧ್ಯತೆ ಇದೆ. ಆದರೆ ಪ್ರಥಮ ಹಂತದಮೀಸಲಾತಿ ಬಂದಾಗ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ.ಮೀಸಲಾತಿ ಬಂದಿದ್ದರೆ, ಉಪಾಧ್ಯಕ್ಷ…

Read More

UN NETWORKS ಉಳ್ಳಾಲ: ಉಳ್ಳಾಲ ನಗರ ಸಭೆ ಚುನಾವಣೆಯಲ್ಲಿ ಎಸ್‍ಡಿಪಿಐನ 6 ಅಭ್ಯರ್ಥಿಗಳ ಜಯಗಳಿಸಿದ ಹಿನ್ನೆಲೆಯಲ್ಲಿ ಎಸ್‍ಡಿಪಿಐ ಮಂಜನಾಡಿ ವಲಯ ವತಿಯಿಂದ ಶಾಲಾ ಮಕ್ಕಳಿಗೆ ಅವಶ್ಯಕ ವಸ್ತುಗಳನ್ನು ವಿತರಿಸುವ ಮೂಲಕ ವಿಜಯೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಮಂಜನಾಡಿ ಗ್ರಾಮದ ಕಲ್ಕಟ್ಟ ಹಿರಿಯ ಪ್ರಾಥಮಿಕ ಶಾಲೆಯ “ನಲಿಕಲಿ” ವಿದ್ಯಾರ್ಥಿಗಳಿಗೆ ಅವಶ್ಯಕ 10 ಸಾವಿರ ಮೊತ್ತದ ಪೀಠೋಪಕರಣಗಳನ್ನು ವಿತರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಬಿ ಮೊಹಮ್ಮದ್, ಸದಸ್ಯ ಕೆ.ಕೆ ಹಸೈನಾರ್, ಎಸ್ ಡಿಐ ಮುಖಂಡರಾದ ನೌಷಾದ್ ಕಲ್ಕಟ್ಟ, ಫಯಾಝ್ ಮಂಜನಾಡಿ, ಶಹೀದ್ ಕಲ್ಕಟ್ಟ ಉಪಸ್ಥಿತರಿದ್ದರು.

Read More

UN NETWORKS ಯೇನೆಪೋಯ: ಹುಟ್ಟಿನಿಂದ ಸಾವಿನವರೆಗೆ ಆರೋಗ್ಯ ಕಾಪಾಡುವುದರಲ್ಲಿ ಶ್ವಾಸಕೋಶ ಪ್ರಮುಖ ಪಾತ್ರವಹಿಸುತ್ತದೆ. ಶ್ವಾಸಕೋಶದ ಆರೋಗ್ಯ ಸಮಸ್ಯೆಗೆ ಆಧುನಿಕ ವೈದ್ಯಕೀಯ ಚಿಕಿತ್ಸೆಯೊಂದಿಗೆ ಪ್ರಾಚೀನ ಅಭ್ಯಾಸವಾದ ಯೋಗ ಪ್ರಾಣಾಯಾಮ ಕಾಯಿಲೆಗೆ ಪರಿಹಾರ ನೀಡಬಲ್ಲುದು ಎಂದು ದೇರಳಕಟ್ಟೆಯ ಯೇನೆಪೋಯ ಮೆಡಿಕಲ್ ಕಾಲೇಜು ಸಾಮಾನ್ಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಪ್ರಭಾ ಅಧಿಕಾರಿ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ಯೇನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶ್ವಾಸಕೋಶ ಚಿಕಿತ್ಸಾ ವಿಭಾಗ ಮತ್ತು ಮಾರುಕಟ್ಟೆ ವಿಭಾಗ ಜಂಟಿಯಾಗಿ ಆಯೋಜಿಸಿದ ಶ್ವಾಸಕೋಶ ಆರೋಗ್ಯ ತಪಾಸಣೆ ಹಾಗೂ ಯೋಗ ಚಿಕಿತ್ಸೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಶ್ವಾಸಕೋಶ ವಿಭಾಗದ ಮುಖ್ಯಸ್ಥ ಡಾ. ಇರ್ಫಾನ್ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ಧೂಮಪಾನ ಶ್ವಾಸಕೋಶದ ದಕ್ಷತೆಯನ್ನು ಕಡಿಮೆಗೊಳಿಸುತ್ತದೆ ಎಂದು ತಿಳಿಸಿದರು. ಡಾ. ಪ್ರೀತಿರಾಜ್ ಬಳ್ಳಾಲ್ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳು ಮತ್ತು ಅದನ್ನು ತಡೆಗಟ್ಟುವ ಬಗ್ಗೆ ಸಾಕ್ಷಚಿತ್ರ ಮುಖೇನ ವಿವರಿಸಿದರು. ಯೋಗ ಶಿಕ್ಷಕ ಕುಶಾಲಪ್ಪ ಗೌಡ ಯೋಗ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಮಾರುಕಟ್ಟೆ ವಿಭಾಗದ ವಿಜಯಾನಂದ ಶೆಟ್ಟಿ ವಂದಿಸಿದರು. ಡಾ.…

Read More

UN NETWORKS ಕೊಣಾಜೆ: ಯಕ್ಷಗಾನ ಕಲೆಯು ಸಾಕಷ್ಟು ಪ್ರೋತ್ಸಾಹದಿಂದ ಬೆಳೆಯುತ್ತಿರುವ ಕಲೆಯಾಗಿದ್ದು ಕಾಲವನ್ನು ಅರ್ಥಮಾಡಿಕೊಂಡು ಹೊಸತನವೂ ಪ್ರವೇಶಿಸುತ್ತಿದೆ. ಬದಲಾವಣೆ ಅನಿವಾರ್ಯ ಆದರೆ ಅದರಿಂದ ಯಕ್ಷಗಾನ ಪರಂಪರೆಗೆ ಧಕ್ಕೆ ಬಾರದಿರಲಿ ಎಂದು ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ.ಕಿಶೋರ್ ಕುಮಾರ್ ಸಿ.ಕೆ ಹೇಳಿದರು. ಅವರು ಗುರುವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ 2018-19ನೇ ಸಾಲಿನ ಯಕ್ಷಮಂಗಳ ತಂಡದ ಯಕ್ಷನಾಟ್ಯ ತರಬೇತಿ ಕಾರ್ಯಕ್ರಮವನ್ನು ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ಚೆಂಡೆ ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಕಲಿಕೆಯ ಜೊತೆಗೆ ಕಲೆ, ಸಾಹಿತ್ಯ, ಕ್ರೀಡಾಸಕ್ತಿಗಳು ಬೆಳೆದಾಗ ಜೀವನದಲ್ಲಿ ಪರಿಪೂರ್ಣತೆಯನ್ನು ಹೊಂದಲು ಸಾಧ್ಯ. ಆಸಕ್ತಿಯೇ ಬದುಕನ್ನು ರೂಪಿಸುವ ವೃತ್ತಿಯಾಗಿಯೂ ಅವಕಾಶವನ್ನು ಕಲ್ಪಿಸಿಕೊಡಬಲ್ಲುದು ಎನ್ನುವುದಕ್ಕೆ ಹಲವು ಯಕ್ಷಗಾನ ಕಲಾವಿದರು ಸಾಕ್ಷಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪ್ರಸಿದ್ಧ ಕಲಾವಿದರಾದ ರವಿ ಅಲೆವೂರಾಯ ಅವರು, ಯಕ್ಷಗಾನ ಕಲೆಯು ಶ್ರೀಮಂತ ಕಲೆಯಾಗಿದ್ದು ಉದ್ಯಮದ ಸ್ವರೂಪವನ್ನೂ ಪಡೆಯುತ್ತಿದೆ.…

Read More

UN NETWORKS ಉಳ್ಳಾಲ: ಜಗತ್ತಿನಲ್ಲಿ ಶಿಕ್ಷಕರಿಗೆ ಶ್ರೇಷ್ಠ ಸ್ಥಾನ ನೀಡಲಾಗಿದೆ, ಆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಸಿಗುವ ಗೌರವ ಪ್ರಧಾನಿಗೂ ಸಿಗುವುದಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು. ಮಂಗಳೂರು ದಕ್ಷಿಣ ವಲಯ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಶಿಕ್ಷಕರ ದಿನಾಚರಣೆ ಸಮಿತಿ ಸರಕಾರದಲ್ಲಿ ಶಿಕ್ಷಕರ ದಿನ ಪ್ರಯುಕ್ತ ಬುಧವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾವು ಮಾಡುವ ತಪ್ಪಿಗೆ ಸಮಾಜ ಶಿಕ್ಷಕರತ್ತ ಕೈ ತೋರಿಸುತ್ತದೆ. ಮಕ್ಕಳು ಶಿಕ್ಷಕರ ನಡೆ, ನುಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ಅಲ್ಲದೆ ದೇಶ ಕಟ್ಟುವ ಕಾರ್ಯದಲ್ಲಿ ಶಿಕ್ಷಕರ ಸೇವೆ ಅಗತ್ಯ. ಶಿಕ್ಷಕರದ್ದು ಕೇವಲ ಪಾಠ ಮಾಡುವ ಕೆಲಸವಲ್ಲ, ಸಮಾಜ ಕಟ್ಟುವ ಜವಾಬ್ದಾರಿ ಇದು ವೃತ್ತಿಯಲ್ಲ, ಸೇವೆಯಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಅತ್ತಾವರ ಪ್ರಾಥಮಿಕ ಶಾಲೆಯ ಶಿ ಹೇಮಾವತಿ ಅತ್ತಾವರ ವಾಮಂಜೂರು ಮಂಗಳಾ ಜ್ಯೋತಿ ಶಾಲೆಯ ಅಶೋಕ್ ಕುಮಾರ್ ಶೆಟ್ಟಿ, ನಿಕಟಪೂರ್ವ ದೈಹಿಕ ಶಿಕ್ಷಣಾಧಿಕಾರಿ…

Read More

UN NETWORKS ಉಳ್ಳಾಲ: ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಬಿಜೆಪಿಯ ಅಭ್ಯರ್ಥಿ ಸೋಲಿಗೆ ಕಾರಣರಾದರೆಂದು ಆರೋಪಿಸಿ ಬಿಜೆಪಿ ಪಕ್ಷದ ಮೂವರು ಕಾರ್ಯಕರ್ತರು ಬಾರಿನೊಳಕ್ಕೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರಿಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತೊಕ್ಕೊಟ್ಟು ಮೂನ್‍ಲೈಟ್ ಬಾರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೃಷ್ಣನಗರ ನಿವಾಸಿಗಳಾದ ಜಾರ್ಜ್ ಲೋಬೊ (51) ಮತ್ತು ಮೋಹನದಾಸ್ (42) ದಾಳಿಗೆ ಒಳಗಾದವರು. ನಿನ್ನೆ ರಾತ್ರಿ ವೇಳೆ ಬಾರಿನ ಒಳಗಡೆ ಕುಳಿತಿದ್ದ ಸಂದರ್ಭ ಸ್ಥಳೀಯ ನಿವಾಸಿಗಳೇ ಆಗಿರುವ ಈ ಹಿಂದೆಯೂ ಕ್ರಿಮಿನಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ಕಾರ್ಯಕರ್ತರೆನ್ನಲಾದ ಕವಿತ್ ಪೂಜಾರಿ , ಅರುಣ್ ಭಂಡಾರಿ ಯಾನೆ ಮಡ್ಡಿ, ಸುನಿ ಬೆಳ್ಚಾಡ ಯಾನೆ ಚಟ್ನಿ ಎಂಬವರು ಸೇರಿಕೊಂಡು ಬಾರಿನೊಳಕ್ಕೆ ನುಗ್ಗಿ ಬಿಯರ್ ಬಾಟಲಿಯಿಂದ ಇಬ್ಬರ ಮೇಲೂ ದಾಳಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕೃಷ್ಣನಗರ ವಾರ್ಡಿನಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಚಿತ್ರಾ ಚಂದ್ರಕಾಂತ್ ಅವರು ವಿಜಯಿಯಾಗಿದ್ದರು. ಈ ಹಿಂದೆಯೂ ಉಳ್ಳಾಲ ಪುರಸಭೆಯ ಉಪಾಧ್ಯಕ್ಷೆಯಾಗಿದ್ದ ಚಿತ್ರ, ಎರಡನೇ ಬಾರಿಯೂ…

Read More

UN NETWORKS ದೇರಳಕಟ್ಟೆ: ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯಲ್ಲಿನಡೆದ ಶಿಕ್ಷಕರ ದಿನಾಚರಣೆಯಲ್ಲಿಮಾಜಿ ರಾಷ್ಟ್ರಪತಿ ದಿ. ಡಾ.ಎಸ್. ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ರವೀ0ದ್ರ ಶೆಟ್ಟಿ ಉಳಿದೊಟ್ಟು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ಎಸ್. ರಾಧಾಕೃಷ್ಣನ್ ಒಬ್ಬ ಆದರ್ಶ ಶಿಕ್ಷಕರಾಗಿ ನಮ್ಮದೇಶದ ಉಪರಾಷ್ಟ್ರಪತಿಯಾಗಿ, ರಾಷ್ಟ್ರಪತಿಯಾಗಿ ದೇಶಕ್ಕೆ ಸಲ್ಲಿಸಿದ ಸೇವೆ ಅಮೋಘವಾದದು. ಅವರ ತತ್ವಾದರ್ಶಗಳನ್ನು ನಾವು ನಮ್ಮ ಜೀವನದಲ್ಲಿಕೂಡ ಅಳವಡಿಸಬೇಕು. ಅವರು ಒಬ್ಬ ಆದರ್ಶ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಮ್ಮ ಎಲ್ಲಶಿಕ್ಷಕರಿಗೆ ಆದರ್ಶಪ್ರಾಯರಾದವರು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್. ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ನಯಿಮ್ ಹಮೀದ್, ಶಿಕ್ಷಕ ರವಿಕುಮಾರ್ ಕೋಡಿ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಆಯಿಶಾತ್ ಝಕೀಯ ಸ್ವಾಗತಿಸಿದರು. ಚರೀಶ್ಮಾ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ಶಾಹಿಲ್ ವಂದಿಸಿದರು.

Read More