Author: UllalaVani

Kannada News From Coastal Karnataka

ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಅವರ ನೆನಪು ಶಾಶ್ವತ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿನಯ ಹೆಗ್ಡೆ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಶ್ರೀ‌ರಾಮಕೃಷ್ಣ ಕಾಲೇಜ್ ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ಇತ್ತೀಚೆಗೆ ಅಗಲಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಹೆಗ್ಡೆಯವರಿಗೆ ಸಲ್ಲಿಸಿದ ಶ್ರದ್ದಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿನಯ ಹೆಗ್ಡೆಯವರ ಜೀವನ ಶೈಲಿ ನಮಗೆಲ್ಲರಿಗೂ ಮಾದರಿ. ಅವರಂತೆ ಇನ್ನೋರ್ವ ಬಂಟ ಇಲ್ಲ. ವಿನಯ ಹೆಗ್ಡೆಯವರ ನೆನಪು ನಮ್ಮ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ. ಅವರು ನಡೆದ ಹಾದಿಯಲ್ಲಿ ನಾವು ಮುನ್ನಡೆಯೋಣ ಎಂದರು. ಕರ್ನಲ್ ಶರಶ್ಚಂದ್ರ ಭಂಡಾರಿ ಮಾತನಾಡಿ…

Read More

ಜನವರಿ 10: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ಬರುವ ವೇಳೆ ನಿಂತಿದ್ದ ಲಾರಿಗೆ ಅಯ್ಯಪ್ಪ ಭಕ್ತರಿದ್ದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದೆ. ಮೃತರನ್ನು ವೆಂಕಟೇಶ್ (30), ಮಾರುತಪ್ಪ (44) ಮತ್ತು ಸಾಕ್ಷಿ (7) ಎಂದು ಗುರುತಿಸಲಾಗಿದೆ. 11 ಜನರು ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಕ್ರೂಜರ್ ವಾಹನದಲ್ಲಿ ವಾಪಸ್ ಊರಿಗೆ ತೆಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಇವರೆಲ್ಲರೂ ಕೊಪ್ಪಳ ಜಿಲ್ಲೆಯ ಕುಕ್ಕನೂರು ಗ್ರಾಮದವರು ಎಂದು ಗುರುತಿಸಲಾಗಿದೆ.ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೂಸರ್​​ನಲ್ಲಿ ಒಟ್ಟು 12 ಮಂದಿ ಪ್ರಯಾಣ ಮಾಡುತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಗಳನ್ನು ಕಳೆದುಕೊಂಡು ಆಕೆಯ ತಂದೆ ಉಲಗಪ್ಪ ಕಣ್ಣೀರು ಹಾಕುತ್ತಿದ್ದಾರೆ. ಸಾಕ್ಷಿ…

Read More

ಬಂಟ್ವಾಳ, ಜ. 10 : ಮನೆಗೆ ಹೋಗಲು ರಸ್ತೆ ಮಾಡಿಕೊಡಿ ಎಂದು ಕುಟುಂಬವೊಂದು ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಧರಣಿ ಕುಳಿತಕೊಂಡ ಘಟನೆ ನಡೆದಿದ್ದು, ಇವರ ಹೋರಾಟಕ್ಕೆ ಅಂಬೇಡ್ಕರ್ ತತ್ವ ಹಿತರಕ್ಷಣಾ ವೇದಿಕೆ ಕೈ ಜೋಡಿಸಿದೆ. ಪುಣಚ ಗ್ರಾಮದ ಸುಣ್ಣಂಗಳ ರಾಮಣ್ಣ ನಾಯ್ಕ ಹಾಗೂ ಅವರ ಪತ್ನಿ ಸುನಂದಾ ಮತ್ತು ಮಕ್ಕಳು ರಸ್ತೆಗಾಗಿ ತಹಶಿಲ್ದಾರ್ ಕಚೇರಿಯ ಮುಂಭಾಗದಲ್ಲಿ ಧರಣಿ ಕುಳಿತಕೊಂಡಿದ್ದಾರೆ. ಕಳೆದ 75 ವರ್ಷಗಳಿಂದ ಕಾಲುದಾರಿ ಮಾತ್ರ ಇದ್ದು ರಸ್ತೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದು, ಹೊರತು ಲಾಭವಾಗಿಲ್ಲ ಎಂದು ಪ್ರತಿಭಟನೆ ನಿರತ ಕುಟುಂಬ ಹೇಳಿದೆ. ಇನ್ನು ತಿಂಗಳ ಹಿಂದೆ ರಾಮಣ್ಣ ಅವರ ಪತ್ನಿ ಸುನಂದಾ ಅವರಿಗೆ ಆರೋಗ್ಯ ಸಮಸ್ಯೆಯಾದಾಗ ರಸ್ತೆಯಿಲ್ಲದ ಕಾರಣ ಆಸ್ಪತ್ರೆಗೆ ಹೋಗಲು ಸಾಕಷ್ಟು ಕಷ್ಟ ಪಡಬೇಕಾಯಿತು. ಇಂತಹ ಸಂದರ್ಭಗಳಲ್ಲಿ ರಸ್ತೆ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಈ ಬಗ್ಗೆ SC ST ಸಭೆಯಲ್ಲಿ ಕೂಡ ಅಧಿಕಾರಿಗಳ ಗಮನಕೆ ತಂದಿದ್ದೇವೆ. ಇನ್ನು ತಾಲೂಕು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ…

Read More

ಬಂಟ್ವಾಳ, ಜ. 10: ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ಆಟೋ ರಿಕ್ಷಾವೊಂದು ಚಾಲಕ‌ನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಳ್ತಂಗಡಿ, ಜ. 10 : ಚಾರ್ಮಾಡಿ ಘಾಟ್ ರಸ್ತೆಯ ಎರಡು ಮತ್ತು ಮೂರನೇ ತಿರುವಿನ ಮಧ್ಯೆ ಶುಕ್ರವಾರ ರಾತ್ರಿ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರಾತ್ರಿ ಸುಮಾರು 9.45ರ ಸುಮಾರಿಗೆ ಮರವೊಂದನ್ನು ಮುರಿದು ರಸ್ತೆಯ ಮಧ್ಯದಲ್ಲೇ ನಿಂತ ಆನೆಯು ಅದರ ಎಲೆಗಳನ್ನು ತಿನ್ನುತ್ತಾ ನಿಂತಿತ್ತು. ಈ ಸಂದರ್ಭದಲ್ಲಿ ವಾಹನ ಸವಾರರು ಆನೆಯನ್ನು ಕಾಡಿನೊಳಗೆ ಅಟ್ಟಲು ಪ್ರಯತ್ನಿಸಿದರು. ಆದರೆ ಆನೆಯು ಸ್ಥಳದಿಂದ ಕದಲದ ಕಾರಣ ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಲ್ಲುವಂತಾಯಿತು.ಈ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸಂಪರ್ಕ ಇಲ್ಲದ ಕಾರಣ, ಆನೆಯ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಲು ಪ್ರಯಾಣಿಕರು ಹರಸಾಹಸ ಪಡಬೇಕಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Read More

ದಕ್ಷಿಣಕನ್ನಡ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್‌ ಮೂವರು ಪ್ರಾಣಾಪಯಾದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಲಾರಿಯ ಟಯರ್ ನ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿ ಲಾರಿಯಲ್ಲಿದ್ದ ಮೆಕ್ಕೆಜೋಳ ಸಹಿತ ಲಾರಿಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ.ಬೆಂಕಿಯ ತೀವ್ರತೆಯಿಂದ ಘಾಟ್‌ನ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ್ದು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ…

Read More

ಉಳ್ಳಾಲ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಮಹಿಳೆಯ ಮೇಲಿನ ಹಲ್ಲೆ ಹಾಗೂ ಅವಮಾನಕಾರಿ ವರ್ತನೆ ಪ್ರಕರಣವನ್ನು ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸಿದೆ. ಪ್ರಕರಣದ ಸಂಬಂಧಿಸಿದಂತೆ ಜ. 06ರ ಮಂಗಳವಾರ ದಂದು ರಾತ್ರಿ ಸುಮಾರು 8 ಗಂಟೆಗೆ ಸುನೀತಾ ಲೋಬೋ ಅವರು ತಮ್ಮ ಪತಿ ವಿಲೈನ್ ಲೋಬೋ ಹಾಗೂ ಮಕ್ಕಳಾದ ವಿಶಾಲ್ ಲೋಬೋ ಮತ್ತು ವಿನೂಶ್ ಲೋಬೋರೊಂದಿಗೆ ಪಜೀರು ಗ್ರಾಮದ ಲೇಡಿ ಆಫ್ ಮರ್ಸಿ ಹಾಲ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ರೋಜ್ ಕಾರ್ಯಕ್ರಮಕ್ಕೆ ತೆರಳಿದ್ದರು. ರೋಜ್ ಕಾರ್ಯಕ್ರಮ ಮುಗಿಸಿ ಊಟ ಮಾಡಿದ ಬಳಿಕ, ರಾತ್ರಿ ಸುಮಾರು 10.45ರ ವೇಳೆಗೆ ಹಾಲ್ ಒಳಗೆ ನಿಂತಿದ್ದಾಗ ವಲೆರಿನ್ ಡಿಸೋಜ ಎಂಬ ಆರೋಪಿಯು ಸುನೀತಾ ಲೋಬೋ ಅವರನ್ನು ದುರುದ್ದೇಶದಿಂದ ನೋಡಿ ಮೈಗೆ ಕೈತಾಗಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ, “ನಾನು ಏನು ಬೇಕಾದರೂ ಮಾಡುತ್ತೇನೆ” ಎಂದು ಬೆದರಿಕೆ ಹಾಕಿ ಆರೋಪಿತನು ಅಲ್ಲಿಂದ ತೆರಳಿದ್ದು, ಸ್ವಲ್ಪ ಸಮಯದ…

Read More

ಉಳ್ಳಾಲ: ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 04ದನಗಳು ಕಳ್ಳತನವಾಗಿದ್ದ ಪ್ರಕರಣಕ್ಕೆ ಸಂಬoಧಿಸಿದoತೆ ಇದೀಗ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯುತ್ತಿದ್ದಾಗ 4 ದನಗಳನ್ನು ಉಳ್ಳಾಲ ತಾಲೂಕಿನ ಝುಲ್ಫಾನ್ ಮಾಲಿಕ್ ಕಳ್ಳತನ ಮಾಡಿದ್ದಾನೆ. ದನಗಳು ಮರಳಿ ಮನೆಗೆ ಬಾರದ ಹಿನ್ನಲೆ ದನದ ಮಾಲೀಕರು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.

Read More

ಉಳ್ಳಾಲ;ಮಂಜನಾಡಿ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಾಗೂ ರಥೋತ್ಸವ ಇದೇ ಜ.11ರಿಂದ 18ರವರೆಗೆ ನಡೆಯಲಿದೆ ಎಂದು ನೂತನ ರಥ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾದ ತಿರುಮಲೇಶ್ವರ ಭಟ್ ಪೆರಡೆ ಹೇಳಿದ್ದಾರೆ. ಇವರು ಉಳ್ಳಾಲದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜ.15ರಂದು ನೂತನ ಮಹಾರಥ, ಪುಷ್ಪರಥ ಹಾಗೂ ಪಲ್ಲಕ್ಕಿ ಸಮರ್ಪಣೆ ನಡೆಯಲಿದ್ದು, ಜಾತ್ರೋತ್ಸವದ ಪ್ರಯುಕ್ತ ಜ.11ರಂದು ಕುತ್ತಾರು ರಾಜರಾಜೇಶ್ವರಿ ಸಾನಿಧ್ಯದಿಂದ ಮಧ್ಯಾಹ್ನ 2:30ಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಜನವರಿ 12ರಂದು ಬೆಳಗ್ಗೆ 8ರಿಂದ ಸಾಮೂಹಿಕ ರುದ್ರಯಾಗ, ಜನವರಿ 14ರಂದು ಧ್ವಜಾರೋಹಣ, ಜ.15ರಂದು ಬಲಿವಾಡು ಸೇವೆ, ಸಂಜೆ 6:30ಕ್ಕೆ ದೊಡ್ಡರಂಗ ಪೂಜೆ, ರಾತ್ರಿ 7ಕ್ಕೆ ಮಹಾರಥ, ಪುಷ್ಪರಥ, ಪಲ್ಲಕ್ಕಿ ಸಮರ್ಪಣೆ, ಸಂಜೆ 7:30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ರಾತ್ರಿ 8:30ಕ್ಕೆ ಬಲಿ ಉತ್ಸವ ಪುಷ್ಪ ರಥೋತ್ಸವ ನೆರವೇರಲಿದೆ ಎಂದರು. ಜ.15ರಂದು ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಲಿಮಾರು ಮಠದ ವಿದ್ಯಾಧೀಶ…

Read More

ಬಿಕರ್ನಕಟ್ಟೆ, ಜ. 8; ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೋವೆನಾದ ಮೂರನೇ ದಿನದಂದು, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ದಿನವನ್ನು ಭಕ್ತಿ ಮತ್ತು ಆಧ್ಯಾತ್ಮಿಕ ಉತ್ಸಾಹದೊಂದಿಗೆ ಆಚರಿಸಲಾಗಿದ್ದು, ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪ್ರಾರ್ಥನೆ ಮತ್ತು ಚಿಂತನೆಯಲ್ಲಿ ಪಾಲ್ಗೊಂಡಿದ್ದರು. “ನಿನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಅನುಸರಿಸು” ಎಂಬುದು ಈ ದಿನದ ಶೀರ್ಷಿಕೆಯಾಗಿದ್ದು, ಭಕ್ತಾದಿಗಳು ಕ್ರಿಸ್ತನನ್ನು ಅನುಸರಿಸುವಲ್ಲಿ ಎದುರಾಗುವ ಸವಾಲುಗಳು ಮತ್ತು ಅಡೆತಡೆಗಳನ್ನು ನಂಬಿಕೆ ಹಾಗೂ ತಾಳ್ಮೆಯಿಂದ ಸ್ವೀಕರಿಸುವ ಸತ್ಯ ಶಿಷ್ಯತ್ವದ ಬಗ್ಗೆ ಪ್ರತಿಬಿಂಬಿಸಲು ಆಹ್ವಾನ ನೀಡಲಾಯಿತು. ಆರೋಗ್ಯಕರ ಪರಿಸರ ಮತ್ತು ಪ್ರಕೃತಿಯ ಸೌಂದರ್ಯವೆಂಬ ದೇವರ ಕೊಡುಗೆಗಾಗಿ ಕೃತಜ್ಞತಾ ಪ್ರಾರ್ಥನೆಗಳನ್ನು ಸಲ್ಲಿಸಲಾಯಿತು, ಜೊತೆಗೆ ಅದರ ರಕ್ಷಣೆ ಮತ್ತು ಸಂರಕ್ಷಣೆಗಾಗಿ ವಿಶೇಷ ಬಿನ್ನಹಗಳನ್ನು ಅರ್ಪಿಸಲಾಯಿತು. ದಿನದ ಕಾರ್ಯಕ್ರಮಗಳು ಬೆಳಿಗ್ಗೆ 6:00 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಪತ್ರಿಕೆ ‘ಉಜ್ವಾಡ್’ನ ಸಂಪಾದಕರಾದ ವಂ| ಆಲ್ವಿನ್ ಸಿಕ್ವೇರಾ, ಒಸಿಡಿ ಇವರಿಂದ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಬೆಳಿಗ್ಗೆ 7:30ರ ಪ್ರಾರ್ಥನಾ ವಿಧಿಯನ್ನು…

Read More