Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಅರಣ್ಯ ಇಲಾಖೆಯಿಂದ ಪ್ರಸಕ್ತ ವರ್ಷದಲ್ಲಿ 80 ಹಾವುಗಳನ್ನು ಹಿಡಿದ ದಾಖಲೆಯಿದ್ದು, ಇದರಲ್ಲಿ ಹಲವು ಕೇರೆ ಹಾವುಗಳನ್ನೇ ಸಿಬ್ಬಂದಿ ಹಿಡಿದಿದ್ದಾರೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ಪಿ.ಶ್ರೀಧರ್ ಹೇಳಿದರು. ಅವರು ಮಂತ್ರ ನಾಟ್ಯಕಲಾ ಗುರುಕುಲ ಉಳ್ಳಾಲ ಇವರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ನಡೆದ ‘ ವೃಕ್ಷ ‘ನಾಟ್ಯದ ಮೂಲಕ ಪ್ರಕೃತಿ ಉಪಾಸನೆ ಕಾರ್ಯಕ್ರಮಕ್ಕೆ ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಚಾಲನೆ ನೀಡಿ ಮಾತನಾಡಿದರು. ಜನ ಬೌಗೋಳಿಕ ಪರಿಸರವನ್ನು ಬದಲಾಯಿಸಿದ್ದಾರೆ. ಅದಕ್ಕಾಗಿ ಪ್ರಾಣಿ ಪಕ್ಷಿಗಳನ್ನು ಹತ್ಯೆಗೈಯ್ಯಲಾಗಿದೆ. ಸಾಮಾಜಿಕ ಪರಿಸರ ಕಾಳಜಿಯಿಲ್ಲದಿದ್ದರೆ, ಪರಿಸರ ಬೆಳೆಸುವ ಮನೋಭಾವ ಬೆಳೆಯಲು ಅಸಾಧ್ಯ . ಮಂಗಳೂರಿನಲ್ಲಿ ಕೇರೆ ಹಾವು , ಮುಂಗುಸಿ, ಕಾಡು ಬೆಕ್ಕು ಬಂದರೂ ಜನ ಅರಣ್ಯ ಇಲಾಖೆಗೆ ಕರೆ ಮಾಡುತ್ತಾರೆ. ಅದರಂತೆ ಈ ವರ್ಷ ಸುಮಾರು 80 ಹಾವುಗಳನ್ನೇ ಹಿಡಿದ ದಾಖಲೆ ಇಲಾಖೆಯಲ್ಲಿದೆ. ಜನರಲ್ಲಿ ನಾವು ಮಾತ್ರ ಬದುಕಬೇಕು ಅನ್ನುವ ಮನೋಭಾವ ಬೆಳೆದಿದೆ.…

Read More

UN NETWORKS ಕೊಣಾಜೆ: ಇಂದಿನ ಆಧುನಿಕತೆಯಲ್ಲಿ ಸಮಾಜಕ್ಕೆ ಇಂಜಿನಿಯರ್ ಮತ್ತು ವೈದ್ಯರುಗಳ ಕೊಡುಗೆ ಅಪಾರವಾಗಿದೆ. ಇಂದು ಈ ಎರಡು ವೃತ್ತಿರಂಗದವರ ಜವಬ್ಧಾರಿ ಮತ್ತಷ್ಟು ಹೆಚ್ಚಿದೆ. ಈ ನಿಟ್ಟಿನಲ್ಲಿ ಜಾಗತಿಕ ಸ್ಮರ್ಧಾತ್ಮಕದ ಈ ಕಾಲಘಟ್ಟದಲ್ಲಿ ಯುವಸಮುದಾಯದ ಪಾತ್ರ ಮಹತ್ವದ್ದು ಎಂದು ಬೆಂಗಳೂರು ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉಪಪ್ರಾಂಶುಪಾಲ ಡಾ.ಭಗವಾನ್ ಬಿ.ಸಿ. ಅವರು ಅಭಿಪ್ರಾಯಪಟ್ಟರು. ಅವರು ಶನಿವಾರ ನಡುಪದವಿನ ಪಿ.ಎ.ಇಂಜೀನಿಯರಿಂಗ್ ಕಾಲೇಜಿನ 11ನೇ ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಉನ್ನತ ಶಿಕ್ಷಣದಿಂದ ಉದ್ದೇಶಿತ ಗುರಿಯನ್ನು ತಲುಪಲು ಸಾಧ್ಯವಿದ್ದು ಇದರೊಂದಿಗೆ ಉತ್ತಮ ಪರಿಶ್ರಮವೂ ಅಗತ್ಯವಾಗಿದೆ. ವಿದ್ಯಾರ್ಥಿಗಳು ಉತ್ತಮ ಮಾನವೀಯ ಮೌಲ್ಯಗಳು, ಸೇವಾ ಮನೋಭಾದೊಂದಿಗೆ ಉತ್ತಮ ಹವ್ಯಾಸಗಳನ್ನಿಟ್ಟು ಮುನ್ನಡೆಯಬೇಕು. ಶಿಕ್ಷಣವು ನಮ್ಮ ಯಶಸ್ವಿಗೆ ಇರುವ ಪ್ರಮುಖ ಅಸ್ತ್ರವಾಗಿದ್ದು ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು ಎಂದು ಹೇಳಿದರು. ಬೆಂಗಳೂರು ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ಇದರ ಕರ್ನಾಟಕ ಅಕಾಡೆಮಿಕ್ ರಿಲೇಶನ್‍ಶಿಪ್ ಮ್ಯಾನೇಜರ್ ಶ್ರೀನಿವಾಸ ರಾಮಾನುಜಂ ಅವರು ಮಾತನಾಡಿ, ನಾವು ಮಾಡುವ ಕಾರ್ಯದಲ್ಲಿ ಪ್ರಾಮಾಣಿಕತೆಯಿದ್ದರೆ…

Read More

UN NETWORKS ಉಳ್ಳಾಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಂಕ ವಸೂಲಿ ಮಾಡುತ್ತಿರುವುದು ಪೊಲೀಸರು ಮತ್ತು ಜಿಲ್ಲಾಡಳಿತದ ಎದುರಲ್ಲೇ ನಡೆಯುತ್ತಿರುವ ಹಗಲುದರೋಡೆ ಮತ್ತು ಡಕಾಯಿತಿ ಎಂದು ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಅವರು ಪಂಪ್ ವೆಲ್ , ತೊಕ್ಕೊಟ್ಟು, ತಲಪಾಡಿ ಹೆದ್ದಾರಿ ದುರವಸ್ಥೆಯ ವಿರುದ್ಧ ಸರ್ವಿಸ್ ರಸ್ತೆಗಳನ್ನು ತಕ್ಷಣ ಪೂರ್ಣಗೊಳಿಸಲು ಒತ್ತಾಯಿಸಿ ತಲಪಾಡಿಯಲ್ಲಿ ಅಕ್ರಮ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ತೊಕ್ಕೊಟ್ಟುವಿನಿಂದ ತಲಪಾಡಿ ಟೋಲ್ ವರೆಗೆ ಡಿವೈ ಎಫ್ ಐ ಉಳ್ಳಾಲ ವಲಯ ಸಮಿತಿ ಹಮ್ಮಿಕೊಂಡ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದರು. ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನೆ ಕಾಟಾಚಾರದ ಹೋರಾಟ ಆಗಿರದೆ , ಜನರ ನಿಜವಾದ ಸಮಸ್ಯೆ ತೀವ್ರ ಆದ ಹಿನ್ನೆಲೆಯಲ್ಲಿ ಹೋರಾಟವನ್ನು ಆರಂಭಿಸಿದೆ. ವಾಹನ ಸವಾರರು ರಸ್ತೆಗೆ ತೆರಿಗೆ ಕಟ್ಟಿದ ನಂತರ ಸುಂಕ ಕಟ್ಟುವುದೇ ಅಕ್ರಮ ಹಾಗೂ ಕಾನೂನು ವಿರೋಧಿ. ವಾಹನ ಖರೀದಿಸುವಾಗಲೇ ತೆರಿಗೆ ಕಟ್ಟಲಾಗುತ್ತದೆ. ಜೊತೆಗೆ ಮಾಸಿಕ ಹಾಗೂ ವಾರ್ಷಿಕವಾಗಿ ವಿವಿಧ ರೀತಿಯ ತೆರಿಗೆಯನ್ನು ಕಟ್ಟುತ್ತಲೇ ಇರುತ್ತಾರೆ.…

Read More

UN NETWORKS ಕೊಣಾಜೆ: ಅಸೈಗೋಳಿ ಬಳಿ ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬಂಟ್ವಾಳದ ಮಂಚಿ ಮೋಂತಿಮಾರು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್ ಝುಬೈರ್ (24) ಮೃತರು. ತೊಕ್ಕೊಟ್ಟು ಕಡೆಯಿಂದ ಮಂಚಿ ಕಡೆಗೆ ಅಬೂಬಕರ್ ಸಿದ್ದೀಖ್ ಎಂಬವರ ಜೊತೆಗೆ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಹಿಂಬದಿ ಕುಳಿತಿದ್ದ ಝುಬೈರ್ ಬೈಕ್ ಅಪಘಾತದಿಂದ ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ.

Read More

UN NETWORKS ಉಳ್ಳಾಲ: ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ಉಪಕಾರ್ಯದರ್ಶಿ ಹಾಗೂ ಡಿವೈಎಫ್ ಐ ಪಿಲಾರು ಘಟಕದ ಕಾರ್ಯದರ್ಶಿ ಪಿಲಾರು ಲಕ್ಷ್ಮೀಗುಡ್ಡೆಯ ಸಂದೇಶ್ ಶೆಟ್ಟಿ (31) ಶನಿವಾರ ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೇ ಸಂಘಟನೆಗೆ ಸೇರಿದ ಇವರು ಸಿಪಿಎಂ ಪಕ್ಷದ ಸದಸ್ಯರಾಗಿ ಹೋರಾಟಗಳಲ್ಲಿ ಭಾಗಿಯಾಗಿದ್ದರು. ಮಂಗಳೂರು ತಾಲೂಕು ಕಚೇರಿಯಲ್ಲಿ ಖಾಸಗಿ ಸರ್ವೇಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಯುವಜನ ಸಂಘಟನೆ ಹೋರಾಟಗಳಿಗೆ ನಾಯಕತ್ವ ನೀಡಿದ್ದರು. ಇವರ ನಿಧನಕ್ಕೆ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ, ಉಳ್ಳಾಲ ವಲಯ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್, ಜನವಾದಿ ಮಹಿಳಾ ಸಂಘಟನೆ ಸದಸ್ಯೆ ಪದ್ಮಾವತಿ.ಯಸ್.ಶೆಟ್ಟಿ, ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಎಂ ನಾಯಕ ಸುನಿಲ್ ಕುಮಾರ್ ಬಜಾಲ್ ಸಂತಾಪ ಸೂಚಿಸಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Read More

UN NETWORKS ದೇರಳಕಟ್ಟೆ: ಎಐಸಿಸಿ ವತಿಯಿಂದ ಕೆನರಾ ಶಾಲಾ ದಶಮಾನೋತ್ಸವದ ಅಂಗವಾಗಿ ಸಿಬಿಎಸಿ ಶಾಲಾ ವಿದ್ಯಾರ್ಥಿಗಳಿಗೆ ಜರಗಿದ ವಿವಿಧ ಸಾಂಸ್ಕ್ರತಿಕ ಸ್ಪರ್ಧೆಗಳಲ್ಲಿ ಕಣಚೂರು ಶಾಲೆಯ ವಿದ್ಯಾರ್ಥಿಗಳಿಗೆ ಸಮೂಹ ನೃತ್ಯ ಹಾಗೂ ಒರಿಗಾಮಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ.

Read More

UN NETWORKS ಉಳ್ಳಾಲ: ಕಣಚೂರು ಶಾಲೆಯಲ್ಲಿ ಶಾಲಾ ಮಕ್ಕಳಿಗೆ ರಾಷ್ಟ್ರಪ್ರೇಮ ಮೈಗೂಡಿಸಲು ಸ್ವಾತಂತ್ರ್ಯ ಯೋಧರ ಬಗ್ಗೆ ಉಪನ್ಯಾಸಗಳನ್ನು ಆಯೋಜಿಸಲಾಯಿತು. ಡಾ| ಎ. ಕೆ. ಪ್ರಸಾದ್‍ರವರು ವಿದ್ಯಾರ್ಥಿಗಳಿಗೆ ಯೋಧರ ಜೀವನದ ಸ್ಥಿತಿಗತಿಗಳ ಬಗ್ಗೆ ವಿವರಿಸಿದರು. ಎಮಿಲೀನ್ ಹೆಲನ್ ಪಾಯ್ಸ್ ಅವರು ಅತಿಥಿಗಳನ್ನು ಪರಿಚಯಿಸಿದರು. ಇಸಬೆಲ್ಲ ಅವರು ಸ್ವಾಗತಿಸಿದರು. ಲಿಕಿತ್ ಅವರು ವಂದಿಸಿದರು. ಸಮ್ರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Read More

UN NETWORKS ತಲಪಾಡಿ: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 17ರ ವಯೋಮಿತಿಯ ಬಾಲಕರ ತಂಡದಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮೊಹಿತ್ ಕುಮಾರ್, ಪಬ್ಲಿಕ್ ಸ್ಕೂಲ್‍ನ ವಿದ್ಯಾರ್ಥಿಗಳಾದ ಹರ್ಷಿತ್ ಎಸ್., ದಿನೇಶ್ ಧರ್ಮ, ಮೋಹಿತ್ ಕುಮಾರ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 17ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿನಿಯರಾದ ಸುರಭಿ, ಸುನೈನಾ, ನಿಸರ್ಗ, ತೇಜಸ್ವಿನಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 14 ವಯೋಮಿತಿಯ ಬಾಲಕರ ವಿಭಾಗದಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿಗಳಾದ ದೇವರಾಜ್, ಧುನುಷ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Read More

UN NETWORKS ಕೊಣಾಜೆ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಈಗೀಗ ಅಂತರ್-ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶವು ಉತ್ತಮ ಸಾಧನೆಯನ್ನು ಮಾಡುತ್ತಿದ್ದು ಹೆಚ್ಚು ಜನಪ್ರಿಯಗೊಂಡಿದೆ. ಇದನ್ನು ಕೇವಲ ಸ್ಪರ್ಧೆಗಾಗಿ ಮಾತ್ರವಲ್ಲದೇ ಮನೋರಂಜನೆಯ ದೃಷ್ಟಿಯಲ್ಲಿ ಮತ್ತು ವ್ಯಾಯಾಮಕ್ಕಾಗಿ ಆಡಬಹುದು ಎಂದು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ದಕ್ಷಿಣ ವಲಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇರಳಕಟ್ಟೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳೂರು ದಕ್ಷಿಣ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತ್ಯಾಗಂ ಹರೇಕಳ ಮಾತನಾಡಿ ಇವತ್ತಿನ ಆಧುನೀಕತೆಯ ಜೀವನದಲ್ಲಿ ಹೆಚ್ಚು ಶ್ರೀಮಂತರು ನೆಗಾಡುವುದಕ್ಕೂ ಹಣ ಕೊಟ್ಟು ನೆಗಾಡಿ ಬರುತ್ತಿದ್ದಾರೆ. ನಿದ್ರೆ ಬರುವುದಕ್ಕೂ ಮಾತ್ರೆಗಳನ್ನು ಸೇವಿಸುತ್ತಾರೆ. ಹಾಗಾಗಿ ಎಲ್ಲವನ್ನೂ ಹಣ ಕೊಟ್ಟು ಪಡೆಯಬಹುದು. ಆದರೆ ಉತ್ತಮ ಆರೋಗ್ಯವನ್ನು…

Read More

UN NETWORKS ಉಳ್ಳಾಲ: ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ವೀರರಾಣಿ ಅಬ್ಬಕ್ಕ ಉಳ್ಳಾಲದಲ್ಲಿ ರಾಜ್ಯವನ್ನು ಆಳಿ ಪೋರ್ಚುಗೀಸರ ವಿರುದ್ಧ ಹೋರಾಡಿ ತನ್ನ ಪ್ರಾಣವನ್ನೇ ಈ ನಾಡಿಗಾಗಿ ಸಮರ್ಪಣೆ ಮಾಡಿದ್ದಾಳೆ. ಅವಳ ಶೌರ್ಯ, ದೇಶಾಭಿಮಾನ, ಸಹಬಾಳ್ವೆ, ಕೋಮುಸೌಹಾರ್ದತೆಯನ್ನು ಎತ್ತಿ ತೋರಿಸುವ ಸಲುವಾಗಿ ವರ್ಷಂಪ್ರತಿ ನಡೆಯುವ ವೀರರಾಣಿ ಅಬ್ಬಕ್ಕ ಉತ್ಸವವನ್ನು ಈ ಬಾರಿ ಉಳ್ಳಾಲದಲ್ಲಿ ನಡೆಸಬೇಕೆಂದು ಉಳ್ಳಾಲ ರಾಣಿ ಅಬ್ಬಕ್ಕ ಪ್ರತಿಷ್ಠಾನ ಹಾಗೂ ಅದರ ಅಂಗಸಂಸ್ಥೆಯಾದ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ಇತ್ತೀಚಿಗೆ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾದ ಮತ್ತು ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಗೌರವಾಧ್ಯಕ್ಷ ಯು.ಟಿ.ಖಾದರ್‍ರವರಿಗೆ ಮನವಿಯನ್ನು ಸಲ್ಲಿಸಿತು. ಈ ಸಮಯದಲ್ಲಿ ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಗೌರವ ಉಪಾಧ್ಯಕ್ಷರಾದ ಸದನಾಂದ ಬಂಗೇರ, ಯು.ಪಿ.ಆಲಿಯಬ್ಬ, ಸುವಾಸಿನಿ ಜೆ. ಬಬ್ಬುಕಟ್ಟೆ, ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ  ಗಟ್ಟಿ, ಕೋಶಾಧಿಕಾರಿ ಆನಂದ ಕೆ. ಅಸೈಗೋಳಿ, ಕಾರ್ಯದರ್ಶಿಗಳಾದ ಎಮ್.ಕೆ.ಮಂಜನಾಡಿ, ಸತೀಶ್ ಭಂಡಾರಿ, ದೇವಕಿ ಆರ್ ಉಳ್ಳಾಲ್, ರತ್ನಾವತಿ ಜೆ…

Read More