UN NETWORKS ಕಿನ್ಯ: ‘ವಿಶ್ವ ಶಾಂತಿಗೆ ಧಾರ್ಮಿಕ ವಿದ್ಯೆ’ ಎಂಬ ಧ್ಯೇಯವಾಕ್ಯದೊಂದಿಗೆ 60ನೇ ವಾರ್ಷಿಕ ಸಮ್ಮೇಳನಕ್ಕೆ ಸಜ್ಜಾಗುತ್ತಿರುವ ಸಮಸ್ತ ಕೇರಳ ಜಂಇಯ್ಯತ್ತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ (ಮದ್ರಸ ಅಧ್ಯಾಪಕರ ಒಕ್ಕೂಟ)ದ 60 ಕಾರ್ಯಯೋಜನೆಗಳ ಪೈಕಿ 10ನೆಯದಾದ ಸಸಿ ವಿತರಣೆ ಕಾರ್ಯಕ್ರಮವು ಕಿನ್ಯ ಕುತುಬಿಯ್ಯಾ ಮದ್ರಸದಲ್ಲಿ ಇತ್ತೀಚೆಗೆ ನಡೆಯಿತು. ಸ್ಥಳೀಯ ಮುದರ್ರಿಸ್ ಅಬ್ದುಲ್ ಫತ್ತಾಹ್ ಫೈಝಿ ದುಆಗೈದು ಸಸಿ ವಿತರಿಸಿದರು. ಮದ್ರಸದ ಸದರ್ ಮುಅಲ್ಲಿಂ ಫಾರೂಕ್ ದಾರಿಮಿ ಗ್ರಾಮಚಾವಡಿ ಸ್ವಾಗತಿಸಿದರು. ಮದ್ರಸದ ಮುಅಲ್ಲಿಮರಾದ ಅಲಿ ಹೈದರ್ ಫೈಝಿ, ಹನೀಫ್ ದಾರಿಮಿ ಪಜೀರ್, ಇಕ್ಬಾಲ್ ಮುಸ್ಲಿಯಾರ್ ಕಿನ್ಯ, ಅಬ್ದುಲ್ ಖಾದಿರ್ ಮುಸ್ಲಿಯಾರ್, ಅಬ್ದುಲ್ಲತೀಫ್ ಅಮಾನಿ, ಉಮರ್ ಅಝ್ಹರಿ, ಅಬ್ದುರ್ರಹ್ಮಾನ್ ಮುಸ್ಲಿಯಾರ್, ಜಮಾಅತ್ ಕಾರ್ಯದರ್ಶಿ ಅಬೂಸ್ವಾಲಿಹ್ ಹಾಜಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಇಸ್ಮಾಯೀಲ್ ಮಾಸ್ಟರ್, ಟಿ.ಎಂ. ಮುಹಮ್ಮದ್, ಅಬುಲ್ ಗೈಸ್ ಉಪಸ್ಥಿತರಿದ್ದರು.
Author: UllalaVani
UN NETWORKS ಉಳ್ಳಾಲ: ಊರಿನ ಸ್ಥಳೀಯ ಸಂಘ ಸಂಸ್ಥೆಗಳು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದಾಗ ನಮ್ಮ ಊರಿನ ಸಮಸ್ಯೆಗಳಿಗೆ ನಾವೇ ಪರಹಾರ ಕಾಣಬಹುದು ಎಂದು ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಗುರುವಪ್ಪಕಾಂತ್ ಹೇಳಿದರು. ಅವರು ಎಸ್ಸೆಸ್ಸೆಫ್ ರಾಜ್ಯಾದಂತಹ ಹಮ್ಮಿಕೊಂಡ “ನಮ್ಮ ಮಕ್ಕಳು ನಮ್ಮವರಾಗಲು” ಎಂಬ ಧೈಯ ವಾಕ್ಯದೊಂದಿಗೆ ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ವತಿಯಿಂದ ಜಾಗೃತಿ ಮೂಡಿಸುವ ಬೈಕ್ ರ್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದರು.ಮಕ್ಕಳನ್ನು ತಂದೆ ತಾಯಿ ನಿಯಂತ್ರಣದಲ್ಲಿ ಇಟ್ಟಾಗ ನಮ್ಮ ಮಕ್ಕಳನ್ನು ನಾವೇ ದುಷ್ಟ ಕೃತ್ಯಗಳಿಂದ ಕಾಪಾಡಬಹುದು. ಮಕ್ಕಳನ್ನು ತಂದೆ ತಾಯಿಯಂದಿರು ನಿರ್ಲಕ್ಷ ವಹಿಸಿದಾಗ ಮಕ್ಕಳು ಅಡ್ಡ ದಾರಿ ಹಿಡಿದು ತನ್ನ ಬದುಕನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದರು. ಎಸ್ಸೆಸ್ಸೆಫ್ ರಾಜ್ಯ ನಾಯಕ ಯಕೂಬ್ ಸಅದಿ ನಾವೂರು ಮಾತನಾಡಿ ಭಾರತ ದೇಶದ ಭವಿಷ್ಯ ಉತ್ತಮವಾಗಬೇಕಾದರೆ ಯುವ ಸಮೂಹ ಮದ್ಯವೆಸನ ದಿಂದ ದೂರವಿದ್ದು ಶಾಲಾ ವಿದ್ಯಾಭ್ಯಾಸದ ಜೊತೆಗೆ ಬದುಕಿನ ಮೌಲ್ಯ ತಿಳಿಸುವ ವಿದ್ಯೆ ನೀಡಿದಾಗ ಮಾತ್ರ ಭಾರತ ದೇಶ ಮುಂದೆ ಉತ್ತಮ ದೇಶವಾಗಿ ಉಳಿಯಲು ಸಾಧ್ಯ. ಹೊರತು…
UN NETWORKS ಅದೂರು: ಕಾಸರಗೋಡುವಿನ ಅದೂರುನಲಲ್ಲಿ ಸೈಯ್ಯದ್ ಅಶ್ರಫ್ ತಂಙಳ್ ಮದನಿ ಅಸ್ಸಖಾಫ್ ಅದೂರು ಸಾರಥ್ಯದಲ್ಲಿ ಮಜ್ಲಿಸ್ ಅದೂರು ಕ್ಯಾಂಪಸ್ನಲ್ಲಿ ನಿರ್ಮಿಸಿದ ಮಜ್ಲಿಸ್ ಗ್ರಾಂಡ್ ಮಸೀದಿಯಲ್ಲಿ ಜುಮಾ ಇತ್ತೀಚೆಗೆ ಪ್ರಾರಂಭಗೊಂಡಿತು. ಅಖಿಲ ಭಾರತ ಸುನ್ನೀ ಒಕ್ಕೂಟದ ಅಧ್ಯಕ್ಷ ಎ.ಪಿ ಅಬೂಬಕ್ಕರ್ ಮುಸ್ಲಿಯರ್ ಜುಮಾ ನಮಾಝ್ ನಿರ್ವಸಿಸುವ ಮೂಲಕ ಜುಮಾ ನಮಾಝಿಗೆ ಚಾಲನೆ ನೀಡಿದರು.ನಂತರ ಮಾತನಾಡಿ ಕೇರಳದ ಮಾರ್ಕಝ್ ಸಂಸ್ಥೆ ವತಿಯಿಂದ ಉಚಿತ 500 ಮಸೀದಿಯನ್ನು ನಿರ್ಮಿಸಿದೆ ಮತ್ತು ಕರ್ನಾಟಕದಲ್ಲಿ 60ಮಸೀದಿ ನಿರ್ಮಿಸಿಕೊಟ್ಟಿದೆ. ಮಾರ್ಕಝ್ ಅಧೀನ ಸಂಸ್ಥೆಯಾದ ಆರ್ಸಿಎಫ್ಐ ವತಿಂದ ಮಜ್ಲಿಸ್ ಗ್ರಾಂಡ್ ಮಸೀದಿ ನಿರ್ಮಿಸಲಾಗಿದೆ ಎಂದು ಹೆಳಿದರು. ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯದ ಸರಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಭಾಗವಹಿಸಿ ಮಾತನಾಡಿ ನಾನು ಉಲಮಾಗಳ ಮಾರ್ಗದರ್ಶನದಲ್ಲಿ ರಾಜ್ಯಕೀಯದಲ್ಲಿ ಮುಂದುವರಿಯುತ್ತಿದ್ದೆನೆ ಅಗಾಗಿ ನನ್ನ ರಾಜಕೀಯ ಜೀವನದಲ್ಲಿ ಯಸಶ್ವಿಯಗಿದೆ ಎಂದು ಹೇಳಿದರು. ಸೈಯ್ಯದ್ ಅಶ್ರಫ್ ತಂಙಳ್ ಮದನಿ ಅಸ್ಸಖಾಫ್ ಆದೂರು ಕಾರ್ಯಕ್ರಮದ ನೇತೃತ್ವ ವಹಿಸಿದರು.ಇಬ್ರಾಹೀಂ ಪೂಕುಂಞ ತಂಙಳ್ ಕಲ್ಲಕಟ್ಟ, ಪಂಜಿಕಲ್…
UN NETWORKS ತೊಕ್ಕೊಟ್ಟು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಇದರ ವತಿಯಿಂದ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ನೂತನ ಬಜೆಟ್ ನಲ್ಲಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯವನ್ನು ಕಡೆಗಣಿಸಿದರ ವಿರುದ್ದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಎಸ್ ಡಿಪಿಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಕ್ರಂ ಹಸನ್ ಮಾತನಾಡಿದರು. ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಬ್ಬಾಸ್ ಕಿನ್ಯ ರವರು ಪ್ರತಿಭಟನೆಯ ನೇತ್ರತ್ವ ವಹಿಸಿದರು , ಉಪಾಧ್ಯಕ್ಷರಾದ ಸುಲೈಮಾನ್ ಉಸ್ತಾದ್ , ಜಿಲ್ಲಾ ಸಮಿತಿ ಸದಸ್ಯರಾದ ಝಾಹಿದ್ ಮಲಾರ್, ಕ್ಷೇತ್ರ ಕಾರ್ಯದರ್ಶಿ ಲತೀಫ್ ಕೋಡಿಜಾಲ್ ಹಾಜರಿದ್ದರು. ಫಯಾಝ್ ದೊಡ್ಡಮನೆ ಸ್ವಾಗತಿಸಿ. ಜೊತೆ ಕಾರ್ಯದರ್ಶಿ ಝಹೂರ್ ತುಂಬೆ ವಂದಿಸಿದರು. ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೀಡಲಾಯಿತು.
UN NETWORKS ಮಂಜನಾಡಿ: ನಾಟೆಕಲ್ ಮುಡಿಪು ಸಂಪರ್ಕಿಸುವ ರಸ್ತೆಯ ಕಲ್ಕಟ್ಟ-ಮಂಜನಾಡಿ ದೇವಸ್ಥಾನ ಸಮೀಪ ಇರುವ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಸುಮಾರು70-75 ವರ್ಷದ ಹಳೆಯದಾದ ಸೇತುವೆಯ ಮೇಲ್ಭಾಗದ ಮೂರು ಕಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಸೇತುವೆಯ ಕೆಳಭಾಗದಲ್ಲಿ ಸಿಮೆಂಟು ಉದುರಿದ್ದು, ಅಲ್ಲಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ತಿಂಗಳ ಹಿಂದೆ ಸೇತುವೆಯ ಮೇಲಿನ ಭಾಗದಲ್ಲಿ ಒಂದು ಕಡೆಯಲ್ಲಿ ಮಾತ್ರ ಬಿರುಕು ಇತ್ತು ಇದೀಗ ಮೂರು ಕಡೆಗಳಲ್ಲಿ ಡಾಮಾರಿನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದನ್ನು ಬೈಕಿನಲ್ಲಿ ತೆರಳುತ್ತಿದ್ದ ಸ್ಥಳೀಯ ಯುವಕರಾದ ಹ್ಯಾರೀಸ್ ಮತ್ತು ಇಕ್ಬಾಲ್ ಮಂಜನಾಡಿ ಪಂಚಾಯಿತಿ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸುವ ಭರವಸೆಯನ್ನು ನೀಡಿದ್ದಾರೆ. ಸ್ಥಳದಲ್ಲಿ ಘನವಾಹನಗಳು ಸೇತುವೆಯಲ್ಲಿ ಒಂದೊಂದಾಗಿ ಚಲಿಸುವಂತೆ ಸ್ಥಳೀಯರು ಕೋರಿಕೊಂಡ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಒಂದೊಂದೇ ವಾಹನಗಳು ಸೇತುವೆಯಲ್ಲಿ ತೆರಳುತ್ತಿದೆ. 1 ಕೋಟಿ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲಾಗಿದೆ ನಾಟೆಕಲ್ ಮಾರ್ಗವಾಗಿ ಮುಡಿಪು, ವಿಟ್ಲ,…
UN NETWORKS ಮಂಗಳೂರು: ನಗರದ ರಥಬೀದಿಯಲ್ಲಿರುವ ಡಾ.ಪಿ.ದಯಾನಂದ ಪೈ-ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜು.30ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಶೇಖರ ಹೆಬ್ಬಾರ್ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ.ಕ. ಜಿಲ್ಲೆಯ ಎಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಹಾಗೂ ಆಯ್ದ ಕೆಲವು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಿಎ, ಬಿಬಿಎಂ, ಬಿಎಸ್ಸಿ, ಬಿಸಿಎ, ಎಂಕಾಂ, ಎಂ.ಎಸ್.ಡಬ್ಲ್ಯು, ಎಂಸಿಎ, ಮಾಹಿತಿ ತಂತ್ರಜ್ಞಾನದ ಪದವಿ ವ್ಯಾಸಂಗ ಪೂರ್ಣಗೊಳಿಸಿದ ಮತ್ತು ವಿದೇಶದಿಂದ ಮರಳಿ ಉದ್ಯೋಗ ಅರಸುತ್ತಿರುವರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳ ನಡೆಸಲಾಗುವುದು ಎಂದರು. ಮಂಗಳೂರು ಮತ್ತು ಬೆಂಗಳೂರು ಸಹಿತ ಸುಮಾರು 40ಕ್ಕೂ ಅಧಿಕ ಕಂಪೆನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ. ಕಳೆದ ವರ್ಷ ಕೂಡ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು,1265 ಕಂಪೆನಿಗಳು ನೋಂದಾವಣೆ ಮಾಡಿಕೊಂಡಿದ್ದವು. ಸುಮಾರು 200 ಮಂದಿಗೆ ಉದ್ಯೋಗ ಕಲ್ಪಿಸಲಾಗಿತ್ತು. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾರ್ಥಿಗಳು…
UN NETWORKS ದೇರಳಕಟ್ಟೆ : ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ, ನಿಟ್ಟೆ ಫಾರ್ಮಸಿ ಕಾಲೇಜು, ಮತ್ತು ನಿಟ್ಟೆ ನರ್ಸಿಂಗ್ ಕಾಲೇಜು, ಹಾಗೂ ಬೆಳ್ಮ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ “ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್” ಉದ್ಘಾಟನಾ ಕಾರ್ಯಕ್ರಮವು ಬೆಳ್ಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ನಿಟ್ಟೆ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಅವರು, ಭಾರತ ದೇಶ ಅಭಿವೃದ್ದಿಯಾಗಬೇಕಾದರೆ ಯುವಜನಾಂಗ ಸ್ವಚ್ಛತೆಯನ್ನು ಮೈಗೂಡಿಸಿಕೊಳ್ಳಬೇಕು. ಯುವ ಜನಾಂಗದೊಂದಿಗೆ ಸ್ಥಳೀಯ ಸಂಸ್ಥೆಗಳು ಕೈಗೂಡಿಸಿದಲ್ಲಿ ಮಾತ್ರ ಸ್ವಚ್ಛತೆಯನ್ನು ಅಳವಡಿಸಲು ಸಾಧ್ಯ ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆ.ಎಸ್ ಹೆಗ್ದೆ ಮೆಡಿಕಲ್ ಅಕಾಡೆಮಿಯ ವೈಸ್ ಡೀನ್ ಪ್ರೊ. ಡಾ. ಜಯಪ್ರಕಾಶ್ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ. ಸಿ. ಎಸ್. ಶಾಸ್ತ್ರಿ, ನಿಟ್ಟೆ ನರ್ಸಿಂಗ್ ಕಾಲೇಜಿನ ಡಾ. ನೀತಾ ಕಾಮ, ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಜಯ, ತಾಲೂಕು ಪಂ. ಸದಸ್ಯರಾದ ನೂರ್ಜಹಾನ್, ಎನ್ಎಸ್ಎಸ್ ಕಾರ್ಯನಿರ್ವಾಹಕರಾದ…
UN NETWORKS ತೊಕ್ಕೊಟ್ಟು: ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ಸಾಂತ್ವಾನ ವಿಭಾಗದಿಂದ ಸಾಕಣೆಗಾಗಿ ಆಡು ವಿತರಣೆ ಕಾರ್ಯಕ್ರಮ ವಾದಿ ರೈಹಾನ್ ತೇೂಟ ಉಳ್ಳಾಲದಲ್ಲಿ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ವಿಭಾಗದ ಚೆಯರ್ಮ್ಯಾನ್ ಅಲ್ತಾಫ್ ಕುಂಪಲ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ತೊಕ್ಕೊಟ್ಟು ಸೆಕ್ಟರ್ ಮಹ್ಳರತುಲ್ ಬದ್ರಿಯ್ಯ ಖಲೀಫ ಇಲ್ಯಾಸ್ ಸಖಾಫಿ ದುಆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಮುಸ್ತಫ ಮಾಸ್ಟರ್ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಕೇೂಶಾಧಿಕಾರಿ ಮುಝಮ್ಮಿಲ್ ಕೊಟೇಪುರ ಫಲಾನುಭವಿಗೆ ಆಡು ಹಸ್ತಾಂತರ ಮಾಡಿದರು. ವೇದಿಕೆಯಲ್ಲಿ ಇಮ್ರಾನ್ ಕುತ್ತಾರ್, ಯುಬಿ ಹಂಝ ಸುಂದರಿ ಬಾಗ್, ಅಬ್ದುಲ್ ಖಾದರ್ ಜೀಲಾನಿ, ಬಾತಿಶ್ ಮಂಚಿಲ ಹಾಗು ಇತರರು ಉಪಸ್ಥಿತರಿದ್ದರು.
UN NETWORKS ಕೊಣಾಜೆ: ಕೊಣಾಜೆ ಠಾಣೆ ವ್ಯಾಪ್ತಿಯ ಕೈರಂಗಳ ಗ್ರಾಮದ ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆ ಹಾಗೂ ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಿಂದ ದನ ಕಳವು ಮಾಡಿದ ಆರೋಪಿಗಳ ಪೈಕಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತನನ್ನು ಮಂಜೇಶ್ವರ ಮಚ್ಲಂಪಾಡಿಯ ಅಬ್ದುಲ್ಲಾ ಹುಸೈನ್(38) ಯಾನೆ ಹುಸೈನ್ ಮಂಜೇಶ್ವರ ಯಾನೆ ಜಾಕಿರ್ ಎಂದು ಗುರುತಿಸಲಾಗಿದೆ. ಈತನಲ್ಲಿದ್ದ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತ ಪಾಂಡೇಶ್ವರ ಮಹಾಲಿಂಗೇಶ್ವರ ದೇವಾಸ್ಥಾನದ 2 ದನ ಮತ್ತು ಕರುವನ್ನು ಕಳವು ಮಾಡಿದ್ದು ಹಾಗೂ ಈ ಕೃತ್ಯಕ್ಕೆ ರಿಟ್ಸ್ ಕಾರನ್ನು ಬಳಸಿಕೊಂಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ದನ ಕಳವಿಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 3 ಪ್ರಕರಣ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ 2 ಪ್ರಕರಣ, ಮಂಗಳೂರು ದಕ್ಷಿಣ ಠಾಣೆಯಲ್ಲಿ…
UN NETWORKS ಮಂಜೇಶ್ವರ: ಇವತ್ತು ಬೆಳಗ್ಗೆ ವರೆಗೆ ನಡೆದ ಖಗ್ರಾಸ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಬಂಗ್ರ ಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಗ್ರಹಣ ದೋಷ ಪರಿಹಾರಕ್ಕಾಗಿ ಮಕರ, ಕುಂಭ, ಮಿಥುನ, ಸಿಂಹ ರಾಶಿಯವರಿಗೆ ಉಪರಾಗ ಶಾಂತಿ ಹೋಮ, ರವಿ, ಚಂದ್ರ, ಕೇತುಗಳ ಪ್ರೀತ್ಯರ್ಥವಾಗಿ ಗ್ರಹಣ ಶಾಂತಿ ಹೋಮ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ಚಂದ್ರ ಶ್ರೌತಿ ವೈದಿಕ ಕಾರ್ಯಕ್ಕೆ ನೇತೃತ್ವ ನೀಡಿದರು. ಸಹಸ್ರಾರು ಮಂದಿ ಭಕ್ತಾದಿಗಳು ಪಾಲ್ಗೊಂಡರು.

