Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಸತತ ಎರಡು ದಿನಗಳಿಂದ ಬೀಸುತ್ತಿರುವ ಗಾಳಿಯಿಂದಾಗಿ ಕಡಲ್ಕೊರೆತ ಆರಂಭವಾಗಿದ್ದು, ಸೋಮೇಶ್ವರ ಉಚ್ಚಿಲದಲ್ಲಿ 50 ರಷ್ಟು ತೆಂಗು ಹಾಗೂ ಇತರೆ ಮರಗಳು ಸಮುದ್ರಪಾಲಾಗಿದೆ. ಉಚ್ಚಿಲ ಉಳ್ಳಾಲ ಸಂಪರ್ಕಿಸುವ ರಸ್ತೆಗೂ ಸಮುದ್ರದ ಅಲೆಗಳು ಹೊಡೆಯಲು ಆರಂಭಿಸಿ ಸಾರ್ವಜನಿಕ ರಸ್ತೆಯ ಜೊತೆಗೆ ಸಮುದ್ರ ತೀರದ ಹಲವು ಮನೆಗಳು ಅಪಾಯದಂಚಿಗೆ ಸಿಲುಕಿದೆ. ಉಚ್ಚಿಲ, ಸೀರೋಡ್, ಬೆಟ್ಟಂಪಾಡಿ, ಪೆರಿಬೈಲು ಪ್ರದೇಶದಲ್ಲಿ ಸಮುದ್ರದ ಅಲೆಗಳು ಅಪ್ಪಳಿಸಲು ಆರಂಭವಾಗಿದೆ. ಗುರುವಾರ ತಡರಾತ್ರಿಯಿಂದ ಸಮುದ್ರದ ಅಲೆಗಳು ಬಿರುಸುಗೊಂಡು ಸುಮಾರು ಅರ್ಧ ಕಿ.ಮೀ ನಷ್ಟು ಸಮುದ್ರ ಎದುರು ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಟ್ಟಂಪಾಡಿ ಪ್ರದೇಶದಲ್ಲಿರುವ ತೆಂಗಿನ ಮರಗಳು ಸಮುದ್ರಪಾಲಾದರೆ, ಪೆರಿಬೈಲು ಸಮೀಪ ಹಲವು ವರ್ಷಗಳ ಹಿಂದಿನ ಪ್ರವಾಸಿಗರು ಕುಳಿತುಕೊಳ್ಳುವ ತಡೆಗೋಡೆಯೊಂದು ಸಂಪೂರ್ಣ ಕುಸಿದುಬಿದ್ದಿದೆ. ಇದೇ ಪ್ರದೇಶದಲ್ಲಿ ರಾತ್ರಿ ಮತ್ತು ಮಧ್ಯಾಹ್ನ ವೇಳೆ ಸಮುದ್ರದ ಅಲೆಗಳು ರಸ್ತೆಗೆ ಅಪ್ಪಳಿಸಲು ಆರಂಭಿಸಿದ್ದು, ಇದರಿಂದ ಉಚ್ಚಿಲದಿಂದ ಉಳ್ಳಾಲ ಕಡೆಗೆ ವಾಹನ ಸವಾರರು ಹೋಗಲು ಸಾಧ್ಯವಾಗಿರಲಿಲ್ಲ. ಪ್ರತಿ ವರ್ಷವೂ ಸಮುದ್ರ ಮುಂದೆ ಬರುತ್ತಿದೆ. ಡಿ.ಸಿ.ಎಸಿ…

Read More

UN NETWORKS ಮುಡಿಪು: ಕೊಣಾಜೆ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಕ್ರಾಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಕೊಣಾಜೆ ಪೊಲೀಸರು ಬಂಧಿಸಿ, ಆತನಿಂದ 1 ಕೆ.ಜಿ.300 ಗ್ರಾಂ ಗಾಂಜಾ ಹಾಗೂ 22.030 ರೂ ನಗದು, ಕೃತ್ಯಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ಅಜೀಜ್ ಎಂದು ಗುರುತಿಸಲಾಗಿದೆ. ಆರೋಪಿಯು ಕೋಲಾರದಿಂದ ಗಾಂಜಾವನ್ನು ತಂದು ನರಿಂಗಾನ ಬಳಿಯ ಕೊಲ್ಲರಕೋಡಿ ಬಳಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ದ ಈಗಾಗಲೇ ಮಂಗಳೂರು ನಗರದಲ್ಲಿ 4 ಗಾಂಜಾ ಮಾರಾಟ ಪ್ರಕರಣವು ದಾಖಲಾಗಿತ್ತು. ಅಲ್ಲದೆ ಈತನ ಜೊತೆಗಿದ್ದ ಇತರ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

UN NETWORKS ಉಳ್ಳಾಲ: ದೇರಳಕಟ್ಟೆಯ ಯೇನೆಪೊಯ ಆಸ್ಪತ್ರೆಗೆ ಹೊರರೋಗಿಯಾಗಿ ಚಿಕಿತ್ಸೆ ಪಡೆದು ತೆರಳಿದ್ದ ಸುಮಾರು 47 ವಯೋಮಿತಿಯ ವ್ಯಕ್ತಿಯೊಬ್ಬರು ಆಸ್ಪತ್ರೆ ಹೊರಭಾಗದಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಯೇನೆಪೊಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿ ಆರೋಗ್ಯ ಕಾರ್ಡ್ ಪಡೆದುಕೊಂಡಿದ್ದು. ಅದರಲ್ಲಿ ಲವನ್ ಗೌಡ ಪಟೀಲ್ ತಂದೆ ಷಣ್ಮಖ ಎಂದು ಹೆಸರು ನೋಂದಾಯಿಸಿದ್ದು,ಮಂಗಳೂರಿನ ಪಡಿಲ್, ಅಡ್ಯಾರ್ ನಿವಾಸಿಯೆಂದು ನೋಂದಾಯಿಸಿದ್ದು, ವಾರಾಸುದಾರರು ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆ ಅಥವಾ ಯೇನೆಪೊಯ ಆಸ್ಪತ್ರೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

Read More

UN NETWORKS ಮಂಗಳೂರು:ಹಝ್ರತ್ ಸೈಯದ್ ಫತಾಹ್ ವಲಿಯುಲ್ಲಾಹಿ (ಖ.ಸ)ದರ್ಗಾದ ಅಧೀನದಲ್ಲಿ ಕಾರ್ಯಾಚರಿಸುವ ಅಲ್-ರಿಫಾಯಿಯ್ಯ ಮದ್ರಸ ಸಶಿಹಿತ್ಲು ಇಲ್ಲಿನ ವಿಧ್ಯಾರ್ಥಿಗಳ ಸಂಘಟನೆಯಾದ ಸುನ್ನಿ ಬಾಲ ಸಂಘದ ನೂತನ ಸಮಿತಿಯನ್ನು ಅಯ್ಕೆ ಮಾಡಲಾಯಿತು. ಅಬ್ದುಲ್ ರಹಿಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಖತೀಬ್ ಉಸ್ಮಾನ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.ಅಧ್ಯಕ್ಷರಾಗಿ ಮುಹಮ್ಮದ್ ರಾಝಿಕ್, ಉಪಾಧ್ಯಕ್ಷರುಗಳಾಗಿ ಝೈದ್ ಮುಹಮ್ಮದ್ ಆದಿಲ್ , ಹಬೀಬುರ್ರಹ್ಮಾನ್, ಪ್ರ.ಕಾರ್ಯದರ್ಶಿಯಾಗಿ ಮುಜೀಬುರ್ರಹ್ಮಾನ್, ಕಾರ್ಯದರ್ಶಿಯಾಗಿ ಮುಹಮ್ಮದ್ ಮುಝಮ್ಮಿಲ್, ಕೋಶಾಧಿಕಾರಿಯಾಗಿ ಸೈಯದ್ ಅಕ್ತರ್, ಅಡಳಿತ ಸಮಿತಿ‌ ಸದಸ್ಯರಾಗಿ ಅಮಾನ್, ತಮೀಂ, ಅಸ್ಗರ್ ಅಲಿ, ಕೋಯ ಖಲೀಫ, ಕಲಂದರ್ ಅಯ್ಕೆ ಮಾಡಲಾಯಿತು.

Read More

UN NETWORKS ಉಳ್ಳಾಲ: ನಗರಸಭೆಗೆ ರಾಜ್ಯಮಟ್ಟದಲ್ಲಿ ನಾಲ್ಕನೇ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಬರುವಲ್ಲಿ ಪೌರ ಕಾರ್ಮಿಕರು ಸ್ವಚ್ಚತಾ ರಾಯಭಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಉಳ್ಳಾಲ ನಗರಸಭಾ ಪೌರಾಯುಕ್ತೆ ವಾಣಿ ವಿ.ಆಳ್ವ ಅಭಿಪ್ರಾಯಪಟ್ಟರು. ಸ್ವಚ್ಛತಾ ಸರ್ವೇಕ್ಷಣೆಯಲ್ಲಿ ನಗರಸಭೆಗೆ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಗುರುವಾರ ಅಯೋಜಿಸಲಾಗಿದ್ದ ಪೌರ ಕಾರ್ಮಿಕರಿಗೆ ಗೌರವಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಳ್ಳಾಲ ನಗರಸಭೆ ಇತರ ಸ್ಥಳೀಯ ಸಂಸ್ಥೆಗಳಿಗಿಂತಲೂ ಅಭಿವೃದ್ಧಿ ಹೊಂದಿದೆ. ಆದರೆ ಈ ವಿಚಾರದಲ್ಲಿ ಬೀಗುವಂತಿಲ್ಲ. ಇನ್ನೂ ಸಾಧಿಸಬೇಕಿರುವುದು ಸಾಕಷ್ಟಿದೆ. ನಾವು ಕಚೇರಿಯಲ್ಲಿ ಕುಳಿತು ನೀಡಿದ ಸೂಚನೆಗಳನ್ನು ಪೌರ ಕಾರ್ಮಿಕರು ಪ್ರತೀ ವಾರ್ಡ್ ಗಳಲ್ಲೂ ಪಾಲಿಸಿದ್ದರಿಂದ ನಮಗೆ ಪ್ರಶಸ್ತಿ ಬಂದಿದೆ ಎಂದು ಹೇಳಿದರು. ನಗರಸಭಾ ಸದಸ್ಯ ಫಾರೂಕ್ ಉಳ್ಳಾಲ್ ಮಾತನಾಡಿ, ಊರು ಶುಚಿಯಾಗಿಡುವಲ್ಲಿ ದೊರಕಿರುವ ನಾಲ್ಕನೇ ಸ್ಥಾನ ತೃಪ್ತಿಕರವಲ್ಲ, ಮೊದಲನೇ ಸ್ಥಾನಕ್ಕೆ ಬರಬೇಕಿತ್ತು. ಹಿಂದಿನ ಉಳ್ಲಾಲಕ್ಕೂ ಇಂದಿಗೂ ಅಜಗಜಾಂತರ ವ್ಯತ್ಯಾಸ ಇದೆ. ಆದರೆ ದೂರುತ್ತಾ ಇರುವವರಿಗೆ ಏನೂ ಮಾಡಲಾಗದು. ಸ್ವಚ್ಚತಾ ವಿಷಯದಲ್ಲಿ ಪೊಲೀಸರ ಸಹಕಾರ ಇಲ್ಲದಿದ್ದರೂ ಪೌರಾಯುಕ್ತರ ಶ್ರಮ ಅಭಿನಂದನೀಯ ಎಂದರು.…

Read More

UN NETWORKS ಬಿಕರ್ನಕಟ್ಟೆ: ಪುರಾತನ ಕಾಲದಿಂದಲೂ ನಮ್ಮ ಪೂರ್ವಜರು ಪ್ರಕೃತಿಯ ಸಮತೋಲನಕ್ಕಾಗಿ ಯಾಗಯಜ್ಞದಿಗಳನ್ನು ಮಾಡುತ್ತಿದ್ದರು, ಅದೂ ಆಧುನಿಕ ಯುಗದಲ್ಲಿಯೂ ಬೆರೆತಿರುವುದು ನಮ್ಮ ಸನಾತನ ಪರಂಪರೆಯನ್ನು ಉಳಿಸಿದಂತಾಗುತ್ತದೆ, ಈ ನಿಟ್ಟಿನಲ್ಲಿ ಗತಕಾಲವನ್ನು ನೆನಪಿಸುವ ಸಗ್ರಹಮುಖ ಶನೈಶ್ಚರ ಯಾಗ ಶಯಸ್ಸಾಗಿ ನಡೆಯಲಿ ಎಂದು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅಭಿಪ್ರಾಯಪಟ್ಟರು. ಅವರು ಹಿಂದೂ ಯುವ ಸೇನೆ ಪದವು ಶಾಖೆ, ಶನೈಶ್ಚರ ಪೂಜಾ ಸಮಿತಿ, ಅಯ್ಯಪ್ಪ ಭಕ್ತಮಂಡಳಿ ಇದರ ವತಿಯಿಂದ ಬಿಕರ್ನಕಟ್ಟೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಸಾರ್ವಜನಿಕ ಸಗ್ರಹಮುಖ ಶನೈಶ್ಚರ ಮಹಾಯಾಗದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬಾಳಂಭಟ್ ಮನೆತನದ ವೇದಮೂರ್ತಿ ಗಿರಿಧರ್ ಭಟ್ ದೀಪಬೆಳಗಿಸಿ, ಶನೈಶ್ಚರ ಮಹಾಯಾಗದ ಮಹತ್ವವವನ್ನು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಪದವು ಮೇಗಿನ ಮನೆ ಮಂಜಣ್ಷ ಶೆಟ್ಟಿ ವಹಿಸಿದ್ದರು. ಅತಿಥಿಗಳಾಗಿ ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿಯ ಗೌರವಾದ್ಯಕ್ಷ ಭಾಸ್ಕರಚಂದ್ರ ಶೆಟ್ಟಿ, ಅಧ್ಯಕ್ಷ ಯಶೋಧರ ಚೌಟ, ಸತ್ಸಂಗ ಸಮಿತಿ ಅಳಪೆಯ ಸಂಚಾಲಕ ವಾಸುದೇವ ಕೊಟ್ಟಾರಿ, ಪದವು ಮೇಗಿನ ಮನೆ ಉಮೇಶ್ ರೈ,…

Read More

UN NETWORKS ಉಳ್ಳಾಲ: ಲೌಕಿಕ ಶಿಕ್ಷಣದೊಂದಿಗೆ ಧಾರ್ಮಿಕ ಶಿಕ್ಷಣವನ್ನೂ ಪಡೆದಾಗ ಮಾತ್ರವೇ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಜೀವನ ನಡೆಸಲು ಸಾಧ್ಯ ಎಂದು ಕೋಟೆಕಾರ್ ಮಳ್‍ಹರ್ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಇದರ ಅಧ್ಯಕ್ಷ ಸಯ್ಯಿದ್ ಅಬ್ದುರ್ರಹ್ಮಾನ್ ಶಹೀರ್ ತಂಙಳ್ ಅಲ್‍ಬುಖಾರಿ ಅಭಿಪ್ರಾಯಪಟ್ಟರು. ಕೋಟೆಕಾರ್ ಮಳ್‍ಹರ್ ನಗರದಲ್ಲಿರುವ ಮಳ್‍ಹರ್ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಅಧೀನದ ಮರ್ಖಝುಲ್ ಹಿದಾಯ ಇನ್ಸ್‍ಟಿಟ್ಯೂಷನ್‍ನಲ್ಲಿ ನಡೆದ ಶಿಕ್ಷಕ-ರಕ್ಷಕ ಸಭೆಯಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ಇಂದು ಶಿಕ್ಷಣ ಪಡೆಯಲು ಸಾಕಷ್ಟು ಅವಕಾಶ ವ್ಯವಸ್ಥೆಗಳಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಮಕ್ಕಳನ್ನು ಶಾಲೆಗೆ ಸೇರಿಸಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಮುಗಿಯುದಿಲ್ಲ, ಶಿಕ್ಷಕರಿಗಿಂತಲೂ ಹೆಚ್ಚಿನ ಜವಾಬ್ದಾರಿ ಪೋಷಕರಿಗೆ ಎಂದು ತಿಳಿಸಿದರು. ಸಂಸ್ಥೆಯ ಸಂಚಾಲಕ ಎನ್.ಎಸ್.ಉಮರಬ್ಬ ಮಾಸ್ಟರ್ ಮಾತನಾಡಿ, ಯಾವುದೇ ಶಿಕ್ಷಣ ಸಂಸ್ಥೆಗಳು ಮುನ್ನಡೆಯಬೇಕಾದರೆ ಸಂಸ್ಥೆಯಲ್ಲಿ ಕಲಿಯುವ ವಿದ್ಯಾರ್ಥಿಗಳ ಪೋಷಕರ ಸಂಪೂರ್ಣ ಸಹಕಾರ ಅಗತ್ಯ. ಪರಿಸರದ ಮಕ್ಕಳಿಗೆ ಉತ್ತಮ ರೀತಿಯಲ್ಲಿ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣ ನೀಡುವ ಉತ್ತಮ ಧ್ಯೇಯದೊಂದಿಗೆ…

Read More

UN NETWORKS ದೇರಳಕಟ್ಟೆ: ಕಣಚೂರು ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯಲ್ಲಿ ದೊರಕುವ ಶಿಕ್ಷಣದೊಂದಿಗೆ ಸರಕಾರ ಶಿಕ್ಷಣಕ್ಕೆ ನೀಡುವ ಸವಲತ್ತನ್ನು ಉಪಯೋಗಿಸಿ ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುವಂತಾಗಬೇಕು ಎಂದು ಕಣಚೂರು ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯು.ಕಣಚೂರು ಮೋನು ಅಭಿಪ್ರಾಯಪಟ್ಟರು. ಕಣಚೂರು ಪಬ್ಲಿಕ್ ಸ್ಕೂಲ್‍ನಲ್ಲಿ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಣಚೂರು ವೈದ್ಯಕೀಯ ಕಾಲೇಜಿನ ಡೀನ್ ಡಾ| ವಿರೂಪಾಕ್ಷ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಶಾಲಾ ಸಂಸ್ಥಾಪಕ ಯು.ಕೆ, ಮೋನು ಅವರನ್ನು ಅಭಿನಂದಿಸಿದರು. ಫಿಸಿಯೊಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ| ಮಹಮ್ಮದ್ ಸುಹೈಲ್ ಅವರು ತಮ್ಮ ಅಭಿನಂದನಾ ಭಾಷಣದಲ್ಲಿ ಜ್ಞಾನ ವಿಕಾಸಕ್ಕಾಗಿ ಯು.ಕೆ ಮೋನು ಅವರ ಪ್ರಯತ್ನ, ವಿದ್ಯಾಭ್ಯಾಸಕ್ಕಾಗಿ ಅವರು ಕೊಡುವ ಪ್ರೋತ್ಸಾಹವನ್ನು ಅನನ್ಯ ಎಂದರು. ಕಾರ್ಯಕ್ರಮದಲ್ಲಿ ಕಣಚೂರು ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನ ಉಪ ಡೀನ್ ಡಾ| ಶ್ರೀಶಾ ಕಂಡಿಗೆ, ವೈದ್ಯಕೀಯ ಅಧೀಕ್ಷಕ ಡಾ| ದೇವಿ ಪ್ರಸಾದ್ ಶೆಟ್ಟಿ ಹಾಗೂ…

Read More

UN NETWORKS ಉಳ್ಳಾಲ: ಸರಕಾರದ ಸೌಲಭ್ಯಗಳನ್ನು ಸರಕಾರಿ ಅಧಿಕಾರಿಗಳು ಜನರ ಬಳಿ ಮುಟ್ಟಿಸುವ ಕಾರ್ಯ ಸಾಧಾರಣ ಆದರೆ ಜನಪ್ರತಿನಿಧಿಯಾಗಿದ್ದುಕೊಂಡು ತಮ್ಮ ಕ್ಷೇತ್ರದ ವಿಕಲಚೇತನ, ಹಿರಿಯ ನಾಗರಿಕರ ಆರೋಗ್ಯ ಮತ್ತು ಅವರಿಗೆ ಸಿಗುವ ಸವಲತ್ತುಗಳನ್ನು ಒಂದೆ ಸೂರಿನಡಿ ಭಾವನಾತ್ಮಕವಾಗಿ ಫಲಾನುಭವಿಗಳಿಗೆ ಮುಟ್ಟಿಸುವ ಮೂಲಕ ಸೋಮೇಶ್ವರ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿಗಟ್ಟಿ ಅವರ ಕಾರ್ಯ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸೋಮೇಶ್ವರ ಜಿಲ್ಲಾ ಪಂಚಾಯತ್ ಕ್ಷೇತ್ರ, ಸೋಮೇಶ್ವರ, ಮುನ್ನೂರು, ಅಂಬ್ಲಮೊಗರು, ಹರೇಕಳ ಗ್ರಾಮ ಸಮಿತಿಗಳ ಸಹಕಾರದೊಂದಿಗೆ ಕುತ್ತಾರು ದುರ್ಗಾವಾಹಿನಿ ಮಹಿಳಾ ಮಂಡಲದಲ್ಲಿ ಗುರುವಾರದಂದು ವಿಕಲ ಚೇತನರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸರಕಾರದ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ, ಅರ್ಜಿ ಹಾಗೂ ಗುರುತಿನ ಚೀಟಿ ವಿತರಣೆ, ಹಿರಿಯ ನಾಗರಿಕರಿಗೆ ಊರುಗೋಲು ವಿತರಣೆ, ಸಂಧ್ಯಾ ಸುರಕ್ಷಾ ಅರ್ಜಿ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಪ್ರತಿನಿಧಿಯಾಗಿದ್ದುಕೊಂಡು ಸಾಮಾಜಿಕ ಕಳಕಳಿಯಿದ್ದರೆ ಮಾತ್ರ ತಮ್ಮ ಕ್ಷೇತ್ರದ ಅಭಿವೃದ್ಧಿ…

Read More

UN NETWORKS ತಲಪಾಡಿ: ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‍ನ ವಿದ್ಯಾರ್ಥಿ ಪರಿಷತ್ ಉದ್ಘಾಟನೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Read More