Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಇಂದಿರಾ ಕ್ಯಾಂಟೀನ್ ತೆರೆದರೆ ತಮ್ಮ ವ್ಯಾಪಾರಕ್ಕೆ ತೊಂದರೆಯಾಗಬಹುದು ಎಂದು ಆತಂಕಿಸಿ ಕೆಲವು ಹೋಟೆಲ್‍ನವರು ಬೇರೆಯವರನ್ನು ಛೂ ಬಿಟ್ಟು ವಿರೋಧ ವ್ಯಕ್ತಪಡಿಸುತ್ತಿದ್ದು, ಉಳ್ಳಾಲದಲ್ಲಿ ಗುರುತಿಸಲಾಗಿರುವ ಖಾಲಿ ಜಾಗದಲ್ಲಿರುವ ಕೊರಗಜ್ಜನ ಕಟ್ಟೆಯನ್ನು ಯಾವುದೇ ಕಾರಣಕ್ಕೂ ತೆಗೆಯುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಉಳ್ಳಾಲದಲ್ಲೂ ಖಾಲಿ ಜಾಗ ಗುರುತಿಸಲಾಗಿದೆ. ಅಲ್ಲಿರುವ ಕೊರಗಜ್ಜನ ಕಲ್ಲನ್ನು ಯಾವ ಕಾರಣಕ್ಕೂ ತೆಗೆಯುವುದಿಲ್ಲ. ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಾರದೆ ಸೂಕ್ತ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು ಎಂದರು.ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್‍ಗೆ ಜಾಗ ಗುರುತಿಸಲಾಗಿದೆ. ಬೆಂಗಳೂರು ಮಾದರಿಯಲ್ಲೇ ಕ್ಯಾಂಟೀನ್ ನಿರ್ಮಾಣವಾಗುತ್ತಿವೆ. ಇಂದಿರಾ ಕ್ಯಾಂಟೀನ್ ತೆರೆದರೆ ತಮ್ಮ ವ್ಯಾಪಾರಕ್ಕೆ ತೊಂದರೆಯಾಗಬಹುದು ಎಂದು ಆತಂಕಿಸಿ ಕೆಲವು ಹೋಟೆಲ್‍ನವರು ಬೇರೆಯವರನ್ನು ಛೂ ಬಿಟ್ಟು ವಿರೋಧ ಮಾಡಿಸುತ್ತಿದ್ದಾರೆ. ಉಳ್ಳಾಲದಲ್ಲೂ ಖಾಲಿ ಜಾಗ ಗುರುತಿಸಲಾಗಿದೆ. ಅಲ್ಲಿರುವ ಕೊರಗಜ್ಜನ ಕಲ್ಲನ್ನು ಯಾವ ಕಾರಣಕ್ಕೂ ತೆಗೆಯುವುದಿಲ್ಲ. ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ…

Read More

UN NETWORKS ಮಂಗಳೂರು: ಮನಪಾ ಸದಸ್ಯ ತಿಲಕ್ ರಾಜ್ ಕೃಷ್ಣಾ ಪುರ ಮೇಲೆ ಶಾಸಕ ಬಿ ಎ ಮೊಯ್ದೀನ್ ಬಾವಾನ ಕುಮ್ಮಕ್ಕಿನಿಂದ ರಾಜ್ಯ ಮಾಜಿ ಮುಖ್ಯಮಂತ್ರಿ ಜೆ ಡಿ ಎಸ್ ನಾಯಕ ಕುಮಾರ ಸ್ವಾಮಿ ಮಾಡಿದ ಆಧಾರರಹಿತ ಗುರು ತರ ಅರೋಪದ ಹಿನ್ನೆಲೆ ಕೃಷ್ಣಾ ಪುರದಲ್ಲಿ ನಾಗರಿಕರು ಬೃಹತ್ ಪ್ರತಿಭಟನೆ ನಡೆಸಿ ತಿಲಕ್ ರಾಜ್ ರವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಪ್ರತಿಭಟನೆ ಯಲ್ಲಿ ಗ್ರಾಮದ ಹಿರಿಯರಾದ ಅಜೀಜ್ ಪ್ಯಾನ್ಸಿ, ಪಿ, ಟಿ, ರೈ ಯಾನೆ ಮಂಜುಕಾವ, ಶರೀಫ್ ಎಂ ಎಸ್, ಲೋಕೇಶ್ ಬೊಳ್ಳಾಜೆ, ಪ್ರಶಾಂತ್ ಮೂಡಾಯಿಕೊಡಿ, ನ್ಯಾಯವಾದಿ ಸದಾಶಿವ ಐತಾಳ್, ಸುಂದರ ಶೆಟ್ಟಿ, ಮಹಾಬಲ ಶೆಟ್ಟಿ, ಯಶ್ ಪಾಲ್ ಸಾಲ್ಯಾನ್, ಶಶಿಕಲಾ ಶೆಟ್ಟಿ, ಸದಾನಂದ ಸನಿಲ್ ಮುಂತಾದವರು ಉಪಸ್ಥಿತರಿದ್ದರು.

Read More

UN NETWORKS ಮಂಗಳೂರು : ಕಾಟಿಪಳ್ಳದ ದೀಪಕ್ ರಾವ್ ಕೊಲೆ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಈಗ ದೊಡ್ಡ ವಿವಾದವಾಗಿ ಬೆಳೆದಿದೆ. ಮೈಸೂರಲ್ಲಿ ಸೋಮವಾರ ಬೆಳಗ್ಗೆ ಮಾತನಾಡಿದ ಕುಮಾರಸ್ವಾಮಿ, ದೀಪಕ್ ಕೊಲೆ ಕೇಸಲ್ಲಿ ಬಿಜೆಪಿ ಕಾರ್ಪೊರೇಟರ್ ಒಬ್ಬರ ಕೈವಾಡವಿದೆ ಎಂದು ಹೇಳಿದ್ದು ವರದಿಯಾಗಿತ್ತು. ಬಳಿಕ ಈ ಬಗ್ಗೆ ಕುಮಾರಸ್ವಾಮಿ ಯೂಟರ್ನ್ ಹೊಡೆದು ತನಗೆ ಬಂದಿರುವ ಮಾಹಿತಿ ತಪ್ಪಿರಬಹುದು ಎಂದು ಹೇಳಿದ್ದಾರೆ ಎಂದು ಸುದ್ದಿಯಾಯಿತು. ಕುಮಾರಸ್ವಾಮಿ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಕೊಲೆ ಪ್ರಕರಣದ ಕುರಿತು ದಾಖಲೆಗಳಿದ್ದರೆ ಕುಮಾರಸ್ವಾಮಿ ನೀಡಿ ಸಹಕರಿಸಿ ಎಂದು ಹೇಳಿದರು. ಮಂಗಳೂರಲ್ಲಿ ಮಾತನಾಡಿದ ಬಿಜೆಪಿ ಮುಖಂಡರು ಕುಮಾರಸ್ವಾಮಿ ಹಾಗು ಶಾಸಕ ಮೊಯ್ದಿನ್ ಬಾವಾ ಅವರನ್ನೇ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಜೆಡಿಎಸ್ ನಲ್ಲಿರುವ ಮೊಯ್ದಿನ್ ಬಾವಾ ಅವರ ಸೋದರ ಬಿ ಎಂ ಫಾರೂಕ್ ಅವರ ಕುಮ್ಮಕ್ಕಿನಿಂದ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಕುಮಾರಸ್ವಾಮಿ ಹೇಳಿದ್ದಿಷ್ಟು…

Read More

UN NETWORKS ಉಳ್ಳಾಲ: ಮಸೀದಿ ಹಾಗೂ ಅಂಗಡಿಗಳಿಗೆ ಹಾನಿಗೈದು ಗಲಭೆಗೆ ಸಂಚು ರೂಪಿಸಿದ ಇಬ್ಬರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ಘಟನೆ ಖಂಡಿಸಿ ಹಾಗೂ ಕೃತ್ಯಕ್ಕೆ ಬೆಂಬಲ ನಿಂತವರ ತನಿಖೆ ನಡೆಸಿ ಅವರನ್ನು ಬಂಧಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ನಾಟೆಕಲ್ ವರ್ತಕರ ಸಂಘ ಅಂಗಡಿ ಮುಂಗಟ್ಟುಗಳನ್ನು ಬಂದ್ ನಡೆಸಿ ಪ್ರತಿಭಟನೆಯನ್ನು ಸೋಮವಾರ ನಡೆಸಿದರು. ಸುಳ್ಯದ ಏನಕಲ್‍ನ ಯತಿರಾಜ್ (23) ಮತ್ತು ಬೀದಿಗುಡ್ಡೆಯ ನಿತಿನ್ (25) ಬಂಧಿತರು. ಇಬ್ಬರು ತಡರಾತ್ರಿ ಬೈಕಿನಲ್ಲಿ ಬಂದು ನಾಟೆಕಲ್ ಜಂಕ್ಷನ್ನಿನಲ್ಲಿರುವ ಅಬ್ದುಲ್ ರಝಾಕ್ ಎಂಬವರ ಬೇಕರಿ ಅಂಗಡಿಗೆ ಸೇರಿದ 2 ಫ್ರಿಡ್ಜ್ ನ ಗಾಜುಗಳನ್ನು ಪುಡಿಗೈದು, ಹಂಝ ನೌಷನ್ ಎಂಬವರಿಗೆ ಸೇರಿದ ಬೀಫ್ ಸ್ಟಾಲ್‍ನ ಕಲ್ಲುಗಳನ್ನು ಧ್ವಂಸಗೊಳಿಸಿ, ಇಬ್ರಾಹಿಂ ಎಂಬವರಿಗೆ ಸೇರಿದ ನಾಟೆಕಲ್ ಬೇಕರಿ ಅಂಗಡಿಯ ಸಿಸಿ ಕ್ಯಾಮರಾವನ್ನು ಹುಡಿಗೈದು, ಸೆಲೂನ್ ಅಲ್ಲೇ ಸ್ವಲ್ಪ ದೂರದಲ್ಲಿರುವ ರಕ್ಷೀದಿ ಮಸೀದಿಯ ಎರಡು ಟ್ಯೂಬ್ ಲೈಟ್ ಮತ್ತು ಸಿಎಫ್‍ಎಲ್ ಬಲ್ಬ್ ಗಳನ್ನು ಪುಡಿಗೈದಿದ್ದಾರೆ. ಘಟನೆ ನಡೆದು ಕೊಣಾಜೆ ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿ ದುಷ್ಕರ್ಮಿಗಳಿಬ್ಬರು…

Read More

UN NETWORKS ಉಳ್ಳಾಲ: ಬೆಂಗಳೂರು, ಧಾರವಾಡ ಬಳಿಕ ಮೂರನೆ ಜಿಲ್ಲೆಯಾಗಿ ದ.ಕ.ದಲ್ಲಿ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರವು ನಿರ್ಮಾಣವಾಗುತ್ತಿದ್ದು, ಮುಂದಿನ 18 ತಿಂಗಳಲ್ಲಿ ಈ ಕೇಂದ್ರ ಕಾರ್ಯಾಚರಿಸಲಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದ್ದಾರೆ. ಪಜೀರು ಗ್ರಾಮದ ಕೆಐಎಡಿಬಿ ಕಂಬ್ಳಪದವು ಬಳಿಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಚಾಲನಾ ತರಬೇತಿ ಕೇಂದ್ರ, ಬಂಟ್ವಾಳದಲ್ಲಿ ಆರ್‍ಟಿಒ ಕಚೇರಿ ಸೇರಿದಂತೆ ಸಾರಿಗೆ ಇಲಾಖೆಯು ದ.ಕ. ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳಿಗಾಗಿ ಒಟ್ಟು 44 ಕೋಟಿ ರೂ.ಗಳನ್ನು ವೆಚ್ಚ ಮಾಡುತ್ತಿದೆ. ಅದರಲ್ಲಿ ರೂ.15 ಕೋಟಿ ಯನ್ನು ಕಂಬ್ಲಪದವು ಚಾಲನಾ ತರಬೇತಿ ಕೇಂದ್ರಕ್ಕೆ ವ್ಯಯಿಸಲಾಗುತ್ತಿದೆ. ಜೀವಕ್ಕೆ ಬೆಲೆ ಕೊಡದೆ ಅನೇಕ ಅವಘಢಗಳು ಸಂಭವಿಸುತ್ತಿರುವ ಕಾಲಘಟ್ಟವನ್ನು ಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ಸಾರಿಗೆ ಇಲಾಖೆ ರಸ್ತೆ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಹೆಚ್ಚಿನ ಕ್ರಮಕೈಗೊಳ್ಳುತ್ತಿದೆ. ಸರಕಾರದ ವತಿಯಿಂದ ಮಹಿಳೆಯರಿಗೆ ಘನ ವಾಹನಗಳ ತರಬೇತಿಯನ್ನು ಕೊಡಿಸಿ,…

Read More

UN NETWORKS ಉಳ್ಳಾಲ: ಯಾವುದೇ ಭಾಗದಲ್ಲೂ ನಿರ್ಮಾಣವಾಗುವ ಅಥವಾ ಅಭಿವೃದ್ಧಿ ಕಾಣುವ ರಸ್ತೆಗಳು ನಿಮ್ಮದಾಗಿದೆ, ಈ ನಿಟ್ಟಿನಲ್ಲಿ ನಿಮ್ಮೂರಿನ ರಸ್ತೆಗಳ ಕಾಮಗಾರಿ ಸಂದರ್ಭ ಸಂಪೂರ್ಣ ಸಹಕಾರ ನೀಡಿ ಎಂದು ಆಹಾರ ಸಚಿವ ಯು.ಟಿ.ಖಾದರ್ ಹೇಳಿದರು. ಮುನ್ನೂರು ಗ್ರಾಮದ ಪಂಡಿತೌಸ್ ಮುಖ್ಯರಸ್ತೆಯಿಂದ ಸಂತೋಷ್‍ನಗರ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಮುನ್ನೂರು ಗ್ರಾಮದಲ್ಲಿ ಸಂತೋಷ್‍ನಗರ, ಸುಭಾಷ್‍ನಗರ ರಸ್ತೆ ಅಭಿವೃದ್ಧಿಗೆ ತಲಾ ಐದು ಲಕ್ಷ ಹಾಗೂ ಒಳರಸ್ತೆಗೆ ಹೆಚ್ಚುವರಿ ಐದು ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಕಾಮಗಾರಿ ಆರಂಭಗೊಂಡು ರಸ್ತೆ ಸಂಪೂರ್ಣ ಗಟ್ಟಿಯಾಗುವತನಕ ವಾಹನ ಸಂಚಾರ ನಿಲ್ಲಿಸಿ ಸಹಕಾರ ನೀಡುವುದು ಗ್ರಾಮಸ್ಥರ ಜವಾಬ್ದಾರಿ ಎಂದು ತಿಳಿರಸ್ತೆಸಿದರು. ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ವಿಲ್ಮಾ ವಿಲ್ಫ್ರೆಡ್ ಡಿಸೋಜ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾರ್ಮಿಕ ಘಟಕದ ಅಧ್ಯಕ್ಷ ನಾಸೀರ್ ನಡುಪದವು, ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯರಾದ ಹಸೈನಾರ್, ಬಾಸ್ಕರ, ಪುಷ್ಪಾ, ಐರಿನ್, ಮಾಜಿ ಅಧ್ಯಕ್ಷ ಅಬ್ದುಲ್…

Read More

UN NETWORKS ತೊಕ್ಕೊಟ್ಟು: ಪ್ರಸ್ತುತ ದಿನಗಳಿಗೆ ಅನುಗುಣವಾಗಿ ಚರ್ಚ್ ಶತಮಾನೋತ್ಸವ ಸಮಿತಿ ಆಯೋಜಿಸಿರುವ ಕಾರ್ಯಕ್ರಮ ಮಹತ್ವಪೂರ್ಣವಾಗಿದೆ. ಈ ಮೂಲಕ ಎಲ್ಲಾ ಜಾತಿ, ಧರ್ಮದವರು ಒಗ್ಗಟ್ಟಾಗಿ ಬಾಳುವ ಸಂದೇಶ ಸಾರಿದಂತಾಗಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅಭಿಪ್ರಾಯಪಟ್ಟರು. ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಚರ್ಚಿನ ಶತಮಾನೋತ್ಸವದ ಅಂಗವಾಗಿ ಕಲ್ಲಾಪು ಆಡಂಕುದ್ರುವಿನಿಂದ ಪೆರ್ಮನ್ನೂರು ಸಂತ ಸೆಬೆಸ್ಟಿಯನ್ ಚರ್ಚ್ ತನಕ ಭಾನುವಾರ ಶಾಂತಿ ಹಾಗೂ ಸೌಹಾರ್ದಕ್ಕೆ ಪ್ರತೀಕವಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಾಥಾನ್‍ಗೆ ಆಡಂಕುದ್ರುವಿನಲ್ಲಿ ಚಾಲನೆ ನೀಡಿ ಮಾತನಾಡಿದರು. ಸಾವಿರಕ್ಕೂ ಮಿಕ್ಕಿದ ಮಂದಿ ಪಾಲ್ಗೊಂಡಿದ್ದು ದುಷ್ಕತ್ಯ ಎಸಗುವವರಿಗೆ, ಕೋಮು ಭಾವನೆ ಕೆರಳಿಸುವ ಮಂದಿಗೆ ಕಾರ್ಯಕ್ರಮದಿಂದ ಶಾಂತಿ ಮನೋಸ್ಥಿತಿ ನಿರ್ಮಾಣವಾಗಲಿದೆ. ಪ್ರಸ್ತುತ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಅಗತ್ಯ, ಈ ನಿಟ್ಟಿನಲ್ಲಿ ಜಿಲ್ಲೆಗೆ ಮಾದರಿಯಾದಂತಹ ಕಾರ್ಯಕ್ರಮ ತೊಕ್ಕೊಟ್ಟುವಿನಲ್ಲಿ ನಡೆದಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಾಯ್ಜಿವಲ್ರ್ಡ್ ಮುಖ್ಯಸ್ಥ ವಾಲ್ಟರ್ ನಂದಳಿಕೆ ಮಾತನಾಡಿ ಸದ್ಯ ಜಿಲ್ಲೆ ಅತ್ಯಂತ ದುರ್ಬಲ ಸ್ಥಿತಿಯನ್ನು ಎದುರಿಸುತ್ತಿದೆ. ಪ್ರತಿನಿತ್ಯ ಶಾಂತಿ ಕದಡುವಂತಹ ಸುದ್ಧಿಗಳನ್ನು ಕೇಳಿ…

Read More

UN NETWORKS ಕೊಲ್ಯ: ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರ ಭಾವನೆಗಳಿಗೆ ಧಕ್ಕೆ ಬಾರದಂತೆ ಅನುಷ್ಠಾನಕ್ಕೆ ತಂದು ಜನರ ಚಿಂತನೆಗಳಿಗೆ ಸ್ಪಂಧಿಸಿರುವ ಯಡಿಯೂರಪ್ಪ ನೇತೃತ್ವದ ಸರಕಾರವನ್ನು ಮತ್ತೆ ರಾಜ್ಯದ ಜನತೆ ಬಯಸುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅಭಿಪ್ರಾಯಪಟ್ಟರು. ಕೊಲ್ಯ ಸೌಭಾಗ್ಯ ಸದನದಲ್ಲಿ ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿ ವತಿಯಿಂದ ಭಾನುವಾರ ನಡೆದ ನವಭಾರತಕ್ಕಾಗಿ ನವಕರ್ನಾಟಕ ಚುನಾವಣಾ ಪ್ರಣಾಳಿಕೆ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಇದೇ ಮೊದಲ ಬಾರಿಗೆ ಬಿಜೆಪ ಚುನಾವಣ ಪ್ರಣಾಳಿಕೆಯಲ್ಲೂ ಹೊಸತನ ತಂದಿದ್ದು ಆ ನಿಟ್ಟಿನಲ್ಲಿ ರಾಜ್ಯ, ಜಿಲ್ಲೆ , ಕ್ಷೇತ್ರ ಮಟ್ಟದಲ್ಲಿ ಅಗತ್ಯವಿರುವ ಕಾರ್ಯಕ್ರಮಗಳ ಕುರಿತಾಗಿ ಪ್ರತಿಯೊಬ್ಬರ ಭಾವನೆ ಚಿಂತನೆಗಳನ್ನು ಪತ್ರವೊಂದರಲ್ಲಿ ಬರೆದು ತಿಳಿಸಬಹುದು. ಯಡಿಯೂರಪ್ಪ ನೇತೃತ್ವ ಸರಕಾರ ಆಡಳಿತಕ್ಕೆ ಬಂದಾಗ ಯಾವ ಕಾರ್ಯಕ್ರಮ ಅಗತ್ಯ ಎಂಬುದನ್ನು ಬಲು ಸುಲಭದಲ್ಲಿ ಅರಿಯಲು ಸಾಧ್ಯವಾಗುತ್ತದೆ. ಆ ಮೂಲಕ ನವಕರ್ನಾಟಕ ನಿರ್ಮಾಣದಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯವಿದ್ದು ಪ್ರತಿಯೊಬ್ಬರ ಚಿಂತನೆಗೆ ಮನ್ನಣೆ ದೊರಕಲಿದೆ ಎಂದರು. ದಶಕದ ಹಿಂದೆ ಪ್ರಪಂಚದಲ್ಲಿ ಚೀನಾ ಏಕ ಪಕ್ಷ ಪಾರಮ್ಯ…

Read More

UN NETWORKS ನಾಟೆಕಲ್: ಮಸೀದಿ ಟ್ಯೂಬ್‍ಲೈಟ್ , ಮನೆಯೊಂದರ ಲೈಟ್ ಮತ್ತು ಮಾಂಸದ ಅಂಗಡಿಗೆ ಹಾನಿಗೈದು ಗಲಭೆಗೆ ಯತ್ನಿಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ನಡೆದಿದ್ದು, ಸಿಸಿಟಿವಿಯಲ್ಲಿ ಸರೆಸಿಕ್ಕ ದೃಶ್ಯದ ಆಧಾರದಲ್ಲಿ ಸುಳ್ಯ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಾಟೆಕಲ್ ಜಂಕ್ಷನ್ನಿನಲ್ಲಿರುವ ರಕ್ಷೀದಿ ಮಸೀದಿಯಲ್ಲಿ ಘಟನೆ ನಡೆದಿದೆ. ತಡರಾತ್ರಿ ಬೈಕಿನಲ್ಲಿ ಬಂದಿದ್ದ ಇಬ್ಬರು ಕಿರಾತಕರು ಮಸೀದಿಯೊಳಗಡೆ ನುಗ್ಗಿ ಹೊರಹಾಕಿದ್ದ ಟ್ಯೂಬ್ ಲೈಟ್ ಧ್ವಂಸಗೈದು ಮತ್ತೆ ಒಳನುಗ್ಗಿ ಅಲ್ಲಿ ಹಾಕಲಾಗಿದ್ದ ಟ್ಯೂಬ್‍ಲೈಟನ್ನು ಹುಡಿಗೈದು ಪರಾರಿಯಾಗಿದ್ದಾರೆ. ಅಲ್ಲದೆ ಸ್ಥಳದಲ್ಲೇ ಇದ್ದ ಮನೆಯೊಂದರ ಲೈಟ್ ನ್ನೂ ಪುಡಿಗೈದ ಕಿರಾತಕರು ಅಲ್ಲಿ ಸಮೀಪವೇ ಇದ್ದ ಮಾಂಸದ ಅಂಗಡಿಗೆ ಅಳವಡಿಸಲಾಗಿದ್ದ ಟೈಲ್ಸ್ ಅನ್ನೂ ಮುರಿದು ಹಾಕಿದ್ದಾರೆ. ಘಟನೆ ನಂತರ ಜಂಕ್ಷನ್ನಿನಲ್ಲಿ ಅಂಗಡಿಯೊಂದಕ್ಕೆ ಅಳವಡಿಸಲಾಗಿದ್ದ ಸಿಸಿಟಿವಿಯನ್ನು ಮುರಿದು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಬೆಳಿಗ್ಗೆ ಮಸೀದಿಗೆ ನಮಾಜಿಗೆ ಬಂದ ಸಂದರ್ಭ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ…

Read More

UN NETWORKS ಕೊಣಾಜೆ : ಕೊಣಾಜೆ ಗ್ರಾಮ ಪಂಚಾಯಿತಿ ಹಾಗೂ ಕೊಣಾಜೆಪದವು ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನಮ್ಮ ತ್ಯಾಜ್ಯ ನಮ್ಮ ಹೊಣೆ, ನಮ್ಮ ಗ್ರಾಮ ಸ್ವಚ್ಚ ಗ್ರಾಮ ಎಂಬ ಕಲ್ಪನೆಯೊಂದಿಗೆ ಸ್ವಚ್ಚತೆಯ ಬಗ್ಗೆ ಕಾಲ್ನಡಿಗೆ ಜಾಥಾ ಕಾರ್ಯಕ್ರಮವು ಶನಿವಾರ ಕೊಣಾಜೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು ಅವರು ಮಾತನಾಡಿ, ಸ್ವಚ್ಚತೆಯ ಬಗ್ಗೆ ಈಗಾಗಲೇ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರ ಮನೆ ಮನದಲ್ಲಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿದರೆ ಆರೋಗ್ಯಕರ ಸಮಾಜವಾಗಿ ರೂಪುಗೊಳ್ಳಲಿದೆ ಎಂದರು. ಕೊಣಾಜೆ ಪಂಚಾಯಿತಿ ಅಧ್ಯಕ್ಷ ಶೌಕತ್ ಆಲಿ ಅವರು ಮಾತನಾಡಿ, ಕೊಣಾಜೆ ಗ್ರಾಮದಲ್ಲಿ ಈಗಾಗಲೇ ಸ್ವಚ್ಚತೆಯ ಬಗ್ಗೆ ಹಲವಾರು ಯೋಜನೆಯ ಮೂಲಕ ಜಾಗೃತಿ ಮೂಡಿಸಲಾಗಿದೆ. ಪ್ರತೀ ಮನೆ ಮನೆಯಿಂದ ಕಸಗಳನ್ನು ವಾಹನದ ಮೂಲಕ ಸಂಗ್ರಹಿಸಲಾಗುತ್ತಿದೆ. ಇದರಿಂದಾಗಿ ಗ್ರಾಮದ ಜನರಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿದೆ. ಅಲ್ಲದೆ ಇಂತಹ ಕಾರ್ಯಕ್ರಮಗಳ ಮೂಲಕ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ಆಗುತ್ತಿದೆ ಎಂದರು.…

Read More