Author: UllalaVani

Kannada News From Coastal Karnataka

UN NETWORKS ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಎಂಬಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ. ಮೃತ ಪಟ್ಟ ಯುವಕನನ್ನು ಕೃಷ್ಣಾಪುರದ ಗಣೇಶ್ ಪುರ ನಿವಾಸಿ ದೀಪಕ್ (32) ಎಂದು ಗುರುತಿಸಲಾಗಿದೆ. ಡೊಕೊಮೊ ಮೊಬೈಲ್ ಕಂಪನಿಯಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿದ್ದ ದೀಪಕ್ ಸ್ಥಳೀಯ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂದು ಹೇಳಲಾಗಿದೆ. ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾರಿನಲ್ಲಿ ಬಂದ 4 ಮಂದಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಮುಸ್ಲಿಮರು ಕಲ್ಲೆಸೆದು ದುಷ್ಕರ್ಮಿಗಳನ್ನು ಓಡಿಸಿದ್ದಾರೆ. ಅಷ್ಟರಲ್ಲಿ ತೀವ್ರ ಗಾಯಗೊಂಡ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.ಮಜೀದ್ ಎಂಬವರ ಮೊಬೈಲ್ ಶಾಪ್ ನಲ್ಲಿ ದೀಪಕ್ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದ್ದು, ಕಲೆಕ್ಷನ್ ಹಣವನ್ನು ಅಂಗಡಿಗೆ ಕೊಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ಕಾಟಿಪಳ್ಳದ ಮೂಡಾಯಿಕೋಡಿ ಎಂಬಲ್ಲಿ ಹತ್ಯೆ…

Read More

UN NETWORKS ತಲಪಾಡಿ: ತಲಪಾಡಿ ಕೆ.ಸಿ.ರೋಡ್‍ನ ವಿದ್ಯಾನಗರದ ಫಲಾಹ್ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಬುಧವಾರ 03-01-2018 ರಂದು ಫಲಾಹ್ ಮೈದಾನದಲ್ಲಿ ಫಲಾಹ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಜಿ ಯು.ಬಿ. ಮೊಹಮ್ಮದ್, ಕಾರ್ಯದರ್ಶಿ ಟಿ.ಎಂ.ಬಶೀರ್, ಕೋಶಾಧಿಕಾರಿ ಇಸ್ಮಾಯಿಲ್ ನಾಗತೋಟ, ಹಾಗೂ ಮಾಜಿ ಕಾರ್ಯದರ್ಶಿ ಎನ್.ಅರಬಿ ಕುಂಞ ಪಾರಿವಾಳಗಳನ್ನು ಬಾನಿಗೆ ಹಾರಿಸುವ ಮೂಲಕ ಉದ್ಘಾಟಿಸಿದರು. ಇಸ್ಮಾಯಿಲ್ ನಾಗತೋಟ ಪ್ರಾಸ್ತವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೇನ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಆಯಿಶಾ ಸಬೀನಾ ಕೈಸಿರಾನ್, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ವಿದ್ಯಾ ಡಿ ಸೋಜ ಉಪಸ್ಥಿತರಿದ್ದರು. ಫಲಾಹ್ ಅನುದಾನಿತ ಕನ್ನಡ ಪ್ರೌಡಶಾಲೆಯ ಮುಖ್ಯ ಶಿಕ್ಷಕ ಮಹಮ್ಮದ್ ರಫೀಕ್ ವಂದಿಸಿದರು. ಶಿಕ್ಷಕ ರಮೇಶ್ ಕಾರ್ಯಕ್ರಮ ನಿರೂಪಿಸಿದರು.

Read More

UN NETWORKS ಕುತ್ತಾರು: ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಬಡಾವಣೆಯ 1ನೇ ಮತ್ತು 2ನೇ ಕಾಂಕ್ರೀಟೀಕರಣ ರಸ್ತೆಯ ಉದ್ಘಾಟನೆಯನ್ನು ಆಹಾರ ಸಚಿವ ಯು.ಟಿ.ಖಾದರ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಈ ರಸ್ತೆಯು ಬಹಳಷ್ಟು ವರ್ಷದಿಂದ ಹದಗೆಟ್ಟಿದ್ದು,ಊರಿನ ಪ್ರಮುಖರು ಕಳೆದ ಚುನಾವಣೆ ಸಂದರ್ಭದಲ್ಲಿ ರಸ್ತೆ ಅಬಿವೃದ್ಧಿ ಪಡಿಸಲು ಬೇಡಿಕೆಯನ್ನಿಟ್ಟಿದ್ದರು,ಆ ನಿಟ್ಟಿನಲ್ಲಿ ನನ್ನ ವಿಶೇಷ ನಿಧಿಯಿಂದ 20 ಲಕ್ಷ ಅನುಧಾನದಲ್ಲಿ ಉತ್ತಮ ಕಾಂಕ್ರೀಟೀಕರಣ ರಸ್ತೆ ಮಾಡಿದ್ದೇನೆ ಎಂದರು. ಇದೇ ಸಂದರ್ಭದಲ್ಲಿ ಆಹಾರ ಸಚಿವ ಯು.ಟಿ.ಖಾದರ್,ಉಳ್ಳಾಲ ನಗರ ಸಭೆ ಸದಸ್ಯೆ ಕುಮಾರಿ ಭಾರತಿ.ಎಂ, ಸಾಮಾಜಿಕ ಕಾರ್ಯಕರ್ತ ಸತೀಶ್ ಕುತ್ತಾರ್ ಅವರನ್ನು ಸನ್ಮಾನಿಸಲಾಯಿತು. ಉಳ್ಳಾಲ ನಗರ ಸಭೆ ಅಧ್ಯಕ್ಷ ಹುಸೈನ್ ಕುಂಞ ಮೋನು,ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ,ಗುರು ಸ್ವಾಮಿ ಈಶ್ವರ್ ಬಡಾಜೆ,ಮಾಜಿ ತಾಲೂಕು ಪಂಚಾಯತ್ ಸದಸ್ಯ ಮೊಹಮ್ಮದ್ ಮುಸ್ತಫ,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಸಾಮಾನಿಗೆ,ಸಲೀಮ್ ಮೆಗಾ,ಸೋಮೇಶ್ವರ ಪಂಚಾಯತ್ ಸದಸ್ಯ ಪುರುಷೋತ್ತಮ ಪಿಲಾರ್ ಹಾಗೂ…

Read More

UN NETWORKS ಕೊಣಾಜೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ(ರಿ) ಮಂಗಳೂರು ಇದರ ವತಿಯಿಂದ ಗ್ರಾಮೀಣ ಅಭಿವೃದ್ಧಿಯಲ್ಲಿ ವಿಶೇಷ ಸಾಧನೆಗೈದ ಕೊಣಾಜೆ ವಿಜಯ ಗ್ರಾಮಾಭಿವೃದ್ಧಿ ಸಮಿತಿಗೆ ಸತತ ಎರಡನೇ ಬಾರಿ ಗ್ರಾಮಾಭಿವೃದ್ಧಿ ಪುರಸ್ಕಾರ ಲಭಿಸಿದೆ. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಮಂಗಳೂರಿನ ವಿಜಯ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಪುರಸಾರ್ಕವನ್ನುನೀಡಲಾಯಿತು. ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿ ಗಿಡ ನೆಡುವ ಕಾರ್ಯಕ್ರಮ, ಔಷಧೀಯ ಸಸ್ಯಗಳ ಬಗ್ಗೆ ಮಾಹಿತಿ ಕಾರ್ಯಗಾರ, ಜಲ ಸಂರಕ್ಷಣೆಗೆ ಇಂಗು ಗುಂಡಿ ನಿರ್ಮಾಣ, ಕೊಳವೆ ಬಾವಿಗೆ ನೀರು ಇಂಗಿಸುವ ಕಾರ್ಯಕ್ರಮ, ಕೆರೆ ಅಭಿವೃದ್ಧಿ, ಕಾಲೇಜು ವಿದ್ಯಾರ್ಥಿಗಳಿಗೆ ಭತ್ತದ ಕೃಷಿ ಬಗ್ಗೆ ಮಾಹಿತಿ ಕಾರ್ಯಗಾರ, ಪ್ರೌಢಶಾಲಾ ಮಕ್ಕಳಿಗೆ ತೋಟಗಾರಿಕೆ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರ, ಸರಕಾರಿ ಪ್ರೌಢಶಾಲೆಗಳಲ್ಲಿ ಕೃಷಿಕ ಸಂಘಗಳ ನಿರ್ಮಾಣ, ಡಿಜಿಟಲ್ ಬ್ಯಾಂಕಿಂಗ್ ಕಾರ್ಯಗಾರ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಮೊದಲಾದ ಕಾರ್ಯಕ್ರಮಗಳನ್ನು ಕೊಣಾಜೆ ವಿಜಯ ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ…

Read More

UN NETWORKS ತಲಪಾಡಿ: ಎಲ್ಲಾ ಸಮುದಾಯದವರನ್ನು ಒಟ್ಟುಗೂಡಿಸಿ, ಅವರ ಕಷ್ಟಗಳಿಗೆ ಸ್ಪಂಧಿಸುವ ಉದ್ದೇಶವನ್ನು ಪಕ್ಷ ಹೊಂದಿದೆ. ಇದನ್ನು ಮುಂದಿಟ್ಟುಕೊಂಡು ಕಾರ್ಯಕರ್ತರು ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಚರಿಸಬೇಕಿದೆ ಎಂದು ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ ರಝಾಕ್ ಹೇಳಿದ್ದಾರೆ. ಅವರು ತಲಪಾಡಿಯಲ್ಲಿ ಮುಸ್ಲಿಂ ಲೀಗ್ ಪಕ್ಷದ ಕಚೇರಿಯ ಉದ್ಘಾಟನಾ ಸಮಾರಂಭ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮುದಾಯಗಳ ನಡುವೆ ಬಿಕ್ಕಟ್ಟನ್ನು ಸೃಷ್ಟಿಸುವ ಕೆಲಸವನ್ನು ಲೀಗ್ ಪಕ್ಷ ಮಾಡುತ್ತಿಲ್ಲ. ಇದರಿಂದಾಗಿ ಕೇರಳದಲ್ಲಿ ಅಸ್ತಿತ್ವವವನ್ನು ಸ್ಥಾಪಿಸಿರುವ ಪಕ್ಷ, ಅಧಿಕಾರವನ್ನು ಸ್ಥಾಪಿಸಿದೆ. ಪ್ರತಿ ಗ್ರಾ.ಪಂಗಳಲ್ಲಿ ಅಧಿಕಾರದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ಸೌಹಾರ್ದಯುತವಾಗಿ ತೊಡಗಿಸಿಕೊಂಡಿರುವುದರಿಂದ ಎಲ್ಲಾ ರೀತಿಯಲ್ಲೂ ಬೆಂಬಲ ದೊರೆಯುತ್ತಿದೆ. ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಾಗಿ ಲೀಗ್ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿ ಂ ಲೀಗ್ ಅಧ್ಯಕ್ಷ ಸಿದ್ದೀಖ್ ಎ.ಕೆ ಬಂಟ್ವಾಳ್ ಮಾತನಾಡಿ ಕರ್ನಾಟಕ ಮತ್ತು ಜಿಲ್ಲೆಗೆ ಲೀಗ್ ಪಕ್ಷ ಹೊಸತಲ್ಲ. ರಾಜ್ಯದಲ್ಲಿ ಓರ್ವ ಶಾಸಕನಿದ್ದು, ಹಲವೆಡೆ…

Read More

UN NETWORKS ಉಳ್ಳಾಲ: ನಾಟೆಕಲ್‍ನ ಫಾತಿಮಾ ಕಾಂಪ್ಲೆಕ್ಸ್‍ನಲ್ಲಿ ನೂತನವಾಗಿ ಆರಂಭಗೊಂಡ ಎಕ್ಟ್ರೀಂ ಫಿಟ್‍ನೆಸ್ ಜಿಮ್ ಸೋಮವಾರ ಉಳ್ಳಾಲದ ಸೈಯ್ಯಿದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವಕರಿಗೆ ಆಲಸ್ಯ ಜಾಸ್ತಿಯಾಗಿದೆ. ವ್ಯಾಯಾಮ ನಡೆಸದೆ ಅನಾರೋಗ್ಯಕ್ಕೊಳಗಾಗುವವರ ಸಂಖ್ಯೆಯೇ ಹೆಚ್ಚಿದೆ. ನಮಾಝ್ ಸಮಯದಲ್ಲೂ ಯುವಕರು ಆಲಸ್ಯ ನಡೆಸುವುದು ಕಾಣುತ್ತಿದೆ. ಇಂತಹ ಆಲಸ್ಯ ಮನೋಭಾವನೆಯಿಂದ ವ್ಯಾಯಾಮ ಶಾಲೆಗಳು ಮುಚ್ಚಿಹೋಗುತ್ತಿವೆ. ದುಬಾರಿ ಬೆಲೆಯ ಸಾಮಗ್ರಿಗಳ ಜತೆಗೆ ಜಿಮ್ ಅನ್ನು ಸ್ಥಾಪಿಸಿರುವ ಪಾಲುದಾರರಾದ ಶಬೀರ್ ಮತ್ತು ರಾಮಕೃಷ್ಣ ಅವರು ಯುವಕರನ್ನು ಉತ್ತಮ ತರಬೇತಿಯನ್ನು ನೀಡುವಂತಾಗಲಿ ಎಂದರು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ ಜಿಮ್ ಹೆಸರನ್ನು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸುವಂತೆ ಮಾಡಬೇಕಿದೆ. ಅದಕ್ಕಾಗಿ ಯುವಕರು ದುಶ್ಚಟಗಳಲ್ಲಿ ಭಾಗವಹಿಸದೆ ತರಬೇತಿಯನ್ನು ಪಡೆದು ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ಜಿಮ್ ಹೆಸರನ್ನು ಶಾಶ್ವತವಾಗಿ ಉಳಿಸುವಂತಾಗಬೇಕು ಎಂದರು. ಉಮರ್ ಮೌಲವಿ ಅಲೇಕಳ ಇವರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ…

Read More

UN NETWORKS ಉಳ್ಳಾಲ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಮುಖಂಡ ಖಲೀಲ್ ಎಂಬವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮತ್ತು ಜಿಲ್ಲೆಯಾದ್ಯಂತ ಶಾಂತಿ ನೆಲೆಸುವ ಸಲುವಾಗಿ ಜಿಲ್ಲಾಧಿಕಾರಿ ಪಿಎಫ್ ಐ ಮುಖಂಡ ಸೇರಿದಂತೆ ಹಿಂದು ಜಾಗರಣಾ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಇಬ್ಬರನ್ನು ಆರು ತಿಂಗಳುಗಳ ಕಾಲ ಗಡಿಪಾರು ನಡೆಸಿದ್ದಾರೆಂದು ತಿಳಿದುಬಂದಿದೆ. ಇಬ್ಬರಿಗೆ ಗಡಿಪಾರಿಗೆ ಆದೇಶ ನೀಡುವಂತೆ ಎರಡು ತಿಂಗಳ ಹಿಂದೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂತಿಲ್ ಇಬ್ಬರ ಗಡಿಪಾರಿಗೆ ಆದೇಶ ನೀಡಿದ್ದು, ಇಬ್ಬರು ಜಿಲ್ಲೆಯಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

Read More

UN NETWORKS ಮಂಗಳೂರು: ದಕ ಜಿಲ್ಲೆ ಹಿಂದೂ ಜಾಗರಣೆ ವೇದಿಕೆಯ ಜಿಲ್ಲಾಧ್ಯಕ್ಷರಾದ ರತ್ನಾಕರ ಶೆಟ್ಟಿಯವರನ್ನು ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಬಂಟ್ವಾಳ ಪೊಲೀಸರು ಇಂದು ಕಾರ್ಯಗತಗೊಳಿಸಿದರು. ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ವಾಪಸು ಮನೆಗೆ ಮರಳುತ್ತಿದ್ದ ಸಂಧರ್ಭದಲ್ಲಿ ಅವರನ್ನು ವಶಕ್ಕೆ ಪಡೆದ ಬಂಟ್ವಾಳ ಪೊಲೀಸರು ,ಅವರನ್ನು ಜಿಲ್ಲೆಯ ಗಡಿ ದಾಟಿಸಿ ಬಿಡುಗಡೆಗೊಳಿಸಿದ್ದಾರೆ. ಗಡಿಪಾರು ಆದೇಶ ವಜಾಗೊಳ್ಳುವವರೆಗೆ ಇನ್ನು ಅವರು ಜಿಲ್ಲೆಯ ಗಡಿ ಪ್ರವೇಶಿಸುವಂತಿಲ್ಲ. ಇದೇ ವರ್ಷದ ಜುಲೈ 13ರಂದು ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಹಾಗೂ ಹಲ್ಲೆ ಸಂಧರ್ಭದಲ್ಲಿ ಗಾಯಗೊಂಡಿದ್ದ ಅವರು ಪುತ್ತೂರು ಖಾಸಗಿ ಆಸ್ಫತ್ರೆಯಲ್ಲಿ 2 ತಿಂಗಳುಗಳ ಕಾಲ ಚಿಕಿತ್ಸೆ ಪಡೆದಿದ್ದರು.ಇದೇ ಪ್ರಕರಣದಲ್ಲಿ ಅವರ ಮೇಲೂ ಹಲ್ಲೆ ಯತ್ನ ಕೇಸು ದಾಖಲಾಗಿತ್ತು. ಈ ಪ್ರಕರಣ ನಡೆದ ಕೆಲ ದಿನಗಳ ಬಳಿಕ ಅವರನ್ನು ಗಡಿಪಾರುಗೊಳಿಸುವ ಆದೇಶವನ್ನು ಜಿಲ್ಲ್ಲಾದಲಿತ ಕೈಗೊಂಡಿತ್ತು.ಇದೀಗ ಇಂದು ಬೆಳಿಗ್ಗೆ ಅವರನ್ನು ಪೂಲೀಸ್ ಇಲಾಖೆ ಅವರನ್ನು ಗಡಿಪಾರುಗೊಳಿಸಿದೆ

Read More

UN NETWORKS ಉಳ್ಳಾಲ: ನಿಟ್ಟೆ ಇನ್‍ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ, ನಿಟ್ಟೆ ವಿಶ್ವವಿದ್ಯಾಲಯ ದೇರಳಕಟ್ಟೆ ಆಶ್ರಯದಲ್ಲಿ ಇತ್ತೀಚೆಗೆ “ವಾಸುದೇವ ಕ್ರಿಯಾಯೋಗ” ಎಂಬ ವಿಷಯದ ಕುರಿತ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಪತಿ ಪ್ರೋ.ಡಾ.ಎಂ.ಎಸ್ ಮೂಡಿತ್ತಾಯ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಣಿಪಾಲ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಬಿ.ಎಂ ಹೆಗ್ಡೆ ದಿಕ್ಸೂಚಿ ಭಾಷಣಗೈದರು. “ವಾಸುದೇವ ಕ್ರಿಯಾ ಯೋಗ ” ವಿಭಾಗದ ಮುಖ್ಯಸ್ಥ ರಾಜೇಂದ್ರ ಯಂಕಣ್ಣ ಮೂಲೆ ವಿದ್ಯಾರ್ಥಿಗಳಿಗೆ ವಾಸುದೇವ ಕ್ರಿಯಾಯೋಗ ಇದರ ವಿಧಿವಿಧಾನಗಳು ಆರೋಗ್ಯದ ಹಾಗೂ ಮಾನಸಿಕ ಪರಿಣಾಮಗಳು,ವಿಭಿನ್ನ ಒಳಿತುಗಳ ಕುರಿತು ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲ ಡಾ.ಧಾನೇಶ್ ಕುಮಾರ್ ಕೆ.ಯು ಸ್ವಾಗತಿಸಿದರು. ಡಾ.ಪುರುಷೋತ್ತಮ ಟಿಪ್ಪಲ ವಂದಿಸಿದರು. ಡಾ.ರಶ್ಮಿತಾ ಶೆಟ್ಟಿ ನಿರೂಪಿಸಿದರು. ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿದರು.

Read More

UN NETWORKS ತಲಪಾಡಿ : ತಲಪಾಡಿ ಶಾಲೆಯಿಂದ ತೆರಳುವ ಸಂದರ್ಭ ಕೆ.ಸಿ.ರೋಡಿನಲ್ಲಿ ಯುವಕರ ತಂಡವೊಂದು ನಿಂತು ಮೊಬೈಲ್ ನಂಬರ್ ಕೊಡುವಂತೆ ಪೀಡಿಸುತ್ತಿದ್ದು, ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಹೆದರಿಕೆಯಾಗುತ್ತಿದೆ ಎಂದು ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಆರೋಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಗ್ರಾಮ ಪಂಚಾಯಿತಿ ಶುಕ್ರವಾರ ಗ್ರಾಮಸೌಧ ತಲಪಾಡಿಯಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಯಲ್ಲಿ ಆರೋಪಿಸಿದ್ದಾಳೆ. ನಿತ್ಯ ತಲಪಾಡಿಯಿಂದ ಶಾಲೆ ಬಿಟ್ಟು ಮನೆಗೆ ವಾಪಸ್ಸಾಗುವ ಸಂದರ್ಭ ಕೆ.ಸಿ.ರೋಡ್ ಜಂಕ್ಷನ್ ಸಮೀಪ ಕೆಲ ಯುವಕರ ತಂಡ ನಿಂತು ಮೊಬೈಲ್ ನಂಬರನ್ನು ಕೇಳುವುದಲ್ಲದೆ, ಅಶ್ಲೀಲ ಸನ್ನೆಯನ್ನು ಮಾಡುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಹೆದರಿಕೆಯಾಗುತ್ತಿದೆ. ಈ ಬಗ್ಗೆ ಪಂಚಾಯಿತಿನವರು ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳು ಗಮನಹರಿಸಿ , ವಿದ್ಯಾರ್ಥಿಗಳು ನಿರ್ಭೀತಿಯಿಂದ ಶಾಲೆಯಿಂದ ವಾಪಸ್ಸಾಗುವಂತೆ ವಾತಾವರಣ ನಿರ್ಮಿಸಿ ಕೊಡಬೇಕಿದೆ ಎಂದು ಒತ್ತಾಯಿಸಿದ್ದಾಳೆ. ಇದಕ್ಕೆ ಪ್ರತಿಕ್ರಿಯಿಸಿದ ತಲಪಾಡಿ ಪಂಚಾಯಿತಿ ಅಧ್ಯಕ್ಷ ಸುರೇಶ್ ಆಳ್ವ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ತಿಳಿಸಿ,…

Read More