UN NETWORKS ಉಳ್ಳಾಲ: ಸಮಗ್ರ ಔಷಧ ಪದ್ಧತಿ ಜನರಿಗೆ ಒಂದೇ ಸ್ಥಾನದಲ್ಲಿ ಸಿಗುವಂತಹ ಕೇಂದ್ರಗಳನ್ನು ಸ್ಥಾಪಿಸಲು ಸರಕಾರ ಚಿಂತನೆ ನಡೆಸುತ್ತಿದೆ. ಜನರಿಗೆ ಉಪಯುಕ್ತವಾಗುವ ಉದ್ದೇಶದಿಂದ ಇಂತಹ ಕೇಂದ್ರಗಳ ಸ್ಥಾಪನೆಗೆ ಆಯುಷ್ ಸಚಿವಾಲಯ ಹೆಚ್ಚಿನ ಒತ್ತು ನೀಡಲಿದೆ ಎಂದು ಕೇಂದ್ರ ಆಯುಶ್ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಅಭಿಪ್ರಾಯಪಟ್ಟರು.ತಲಪಾಡಿ ದೇವಿನಗರದಲ್ಲಿ ಭಾನುವಾರ ತುಳುನಾಡು ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡ ಶಾರದಾ ಆಯುರ್ವೇದ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದರು. ಆಯುಷ್ ಸಚಿವಾಲಯದಿಂದ ಕಡ್ಡಾಯ ನೀತಿಗಳನ್ನು ಜಾರಿಗೊಳಿಸಲಾಗಿದ್ದು, ಆಯುಷ್ ಸರಕಾರಿ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಆಧುನಿಕ ತಂತ್ರಜ್ಞಾನಗಳ ಸ್ಥಾಪನೆ ಮತ್ತು ಸಿಬ್ಬಂದಿ ಮತ್ತು ಸಿಬ್ಬಂದಿಯೇತರರಿಗೆ ಕಡ್ಡಾಯ ಹಾಜರುವಿಕೆಗಾಗಿ ಬಯೋಮೆಟ್ರಿಕ್ ವ್ಯವಸ್ಥೆ ಸೇರಿದಂತೆ ಜನರಿಗೆ ಅನುಕೂಲಕರ ಸೇವೆ ಒದಗಿಸುವ ಸಲುವಾಗಿ ಆಧುನಿಕ ಸಲಕರಣೆಗಳ ವ್ಯವಸ್ಥೆಯನ್ನು ಪೂರೈಸಲಾಗಿದೆ . 2018-19 ಸಾಲಿನಲ್ಲಿ ಭಾರತೀಯ ಔಷಧ ಪದ್ಧತಿ (ಆಯುರ್ವೇದ, ಹೋಮಿಯೋಪತಿ, ಯುನಾನಿ) ಕಾಲೇಜು ಪ್ರವೇಶಾತಿಗೆ ನೀಟ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಪ್ರತಿಭಾನ್ವಿತರು ಶಿಕ್ಷಣ ಪಡೆಯುವವರಂತಾಗಬೇಕು ಅನ್ನುವ ಉದ್ದೇಶದಿಂದ ನೀತಿಯನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ…
Author: UllalaVani
UN NETWORKS ಉಳ್ಳಾಲ: ವೈದ್ಯಕೀಯ ಶಿಕ್ಷಣದ ವೇಳೆ ನೈತಿಕವಾಗಿ ಅಭ್ಯಾಸ ನಡೆಸಿದಾಗ ವೃತ್ತಿಯಲ್ಲಿ ಸಮರ್ಥನೀಯತೆಯನ್ನು ಗಳಿಸಬಹುದು. ಈ ಮೂಲಕ ನ್ಯಾಯಬದ್ಧವಾಗಿ ಕರ್ತವ್ಯ ನಿರ್ವಹಿಸುವುದರಿಂದ ಜನಮಾನಸದಲ್ಲಿ ಶಾಶ್ವತವಾದ ಗೌರವ ಪಡೆಯಲು ಸಾಧ್ಯ ಎಂದು ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಹೇಳಿದರು. ವೈದ್ಯರ ದಿನಾಚರಣೆ ಪ್ರಯುಕ್ತ ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಧೀನದ ಕ್ಷೇಮ ಚಿಂತನಾ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದ ಅಧ್ಯಕಕ್ಷತೆ ವಹಿಸಿ ಅವರು ಮಾತನಾಡಿದರು. ವೈದ್ಯರೆಂದರೆ ನಾಯಕರು, ಜೀವಮಾನ ಕಲಿಯುವವರು, ಸಂವಹನವುಳ್ಳವರು ಹಾಗೂ ವೃತ್ತಿಪರರಾಗಿರುತ್ತಾರೆ. ಇದೆಲ್ಲರ ಜೊತೆಗೆ ವೃತ್ತಿಯಲ್ಲಿ ಸಮಗ್ರತೆ ಮತ್ತು ಬದ್ಧತೆಯನ್ನು ಕಾಪಾಡುವುದರ ಮೂಲಕ ಯಶಸ್ವಿ ವೈದ್ಯನಾಗಬಹುದು. ಇಂತಹ ಬದ್ಧತೆಯನ್ನು ಇಟ್ಟುಕೊಂಡು ದೂರದ ಪಯ್ಯನ್ನೂರಿನಲ್ಲಿ ಕೋಪಿಷ್ಠ ರೋಗಿಗಳ ನಡುವೆ ಯಶಸ್ವಿಯಾಗಿ ಡಾ|.ಎ.ಹೆಚ್ ಶೆಣೈ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಹಳ ಕಷ್ಟದಿಂದ ಸೇವೆ ನಡೆಸಿ ಜನಮಾನಸದಲ್ಲಿ ಇಂದಿಗೂ ಶಿರಸಿಯ ಡಾ| ಅರುಣ್ ಪ್ರಭು ದಂಪತಿಗಳಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ…
UN NETWORKS ಮಂಗಳೂರು: ಮಂಗಳೂರಿನಲ್ಲಿ ಶ್ರೀ ರಾಮಕೃಷ್ಣ ಮಿಶನ್ ವತಿಯಿಂದ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ಶುಚಿತ್ವಕ್ಕಾಗಿ ಜಾದು ಕಾರ್ಯಕ್ರಮಕ್ಕೆ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಯ್ಯದ್ ಮದನಿ ಫ್ರೌಡ ಶಾಲೆ ಹಳೆಕೋಟೆಯಲ್ಲಿ ಶಾಲಾ ಮಖ್ಯ ಶಿಕ್ಷಕರಾದ ಕೆ.ಎಂ .ಕೆ ಮಂಜನಾಡಿಯವರು ಚಾಲನೆ ನೀಡಿದರು. ಕಳೆದ ಶೈಕ್ಷಣೆಕ ವರ್ಷ ದಲ್ಲಿ ನಮ್ಮ ಶಾಲೆಯಲ್ಲಿ ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಚತೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳು ಶಿಕ್ಷಕರೆಲ್ಲರೂ ಸಕ್ರೀಯರಾಗಿ ಭಾಗವಹಿಸಿರುವರೆಂದು ತಿಳಿಸಿದರು. ಪ್ರಸಿದ್ಧ ಜಾದುಗಾರರಾದ ಕುದ್ರೋಳಿ ಗಣೇಶ್ ತಂಡದಿಂದ ರಂಜನೀಯವಾದ ಜಾದು ಪ್ರದರ್ಶನದೊಂದಿಗೆ ಮಕ್ಕಳ ಮನಸ್ಸನ್ನು ಕೇಂದ್ರೀಕರಿಸಿ ಸ್ವಚ್ಚತೆ, ಕಸ ಪೊರಕೆಯ ಬಳಕೆ , ಕಸ ತೊಟ್ಟಿಯ ಬಳಕೆ ಹಾಗೂ 3 ಆರ್ಗಳ ಬಗ್ಗೆ ಮಕ್ಕಳಿಗೆ ಬಹಳ ಸ್ವಾರಸ್ಯವಾಗಿ ತಿಳಿಸಿ ಮಕ್ಕಳು ಸಂತಸ ಪಟ್ಟರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಮಹಮ್ಮದ್ ಇಸ್ಮಾಯಿಲ್ ಹಾಜಬ್ಬ, ಶಾಲೆಯಲ್ಲಿ ಸ್ವಚ್ಚತಾ ಕಾರ್ಯದ ಉಸ್ತುವಾರಿ ಶಕೀಲಾ ಹಗೂ ಶಿಕ್ಷಕರು ಉಪಸ್ಥಿತರಿದ್ದರು.
UN NETWORKS ಹರೇಕಳ: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪಾವೂರು-ಹರೇಕಳ ಇಲ್ಲಿ 2018-19ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಉಚಿತ ಸಮವಸ್ತ್ರ, ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಸಿ.ಎಸ್.ಐ.ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಉಡುಪಿ ಇದರ ನಿರ್ದೇಶಕರಾದ ‘ಡಾ| ಸುಶಿಲ್ ಜತ್ತನ್ನ’ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ದಾನ ಪಡೆದ ವಸ್ತುಗಳನ್ನು ಸದುಪಯೋಗ ಪಡಿಸುವಂತೆ ಕರೆಯಿತ್ತರು. ಮುಖ್ಯ ಅತಿಥಿಗಳಾಗಿದ್ದ ಕೆ.ರವೀಂದ್ರ ರೈ ಮುಖ್ಯೋಪಾಧ್ಯಾಯರು, ಶ್ರೀ ರಾಮಕೃಷ್ಣ ಪ್ರೌಢಶಾಲೆ, ಪಾವೂರು-ಹರೇಕಳ ಇವರು ಮಕ್ಕಳು ತಮ್ಮಲ್ಲಿ ಶಿಸ್ತು, ಏಕಾಗ್ರತೆಯನ್ನು ಬೆಳೆಸಿಕೊಳ್ಳುವಂತೆ ಕರೆಯಿತ್ತರು. ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಗೀತಾ ಶ್ಯಾನುಭಾಗ್ ಕ್ಷೇತ್ರ ಸಮನ್ವಯಾಧಿಕಾರಿ, ಬಿ.ಆರ್.ಸಿ. ಮಂಗಳೂರು ದಕ್ಷಿಣ ವಲಯ ಇವರು ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆಯ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ಪುಸ್ತಕ, ಸಮವಸ್ತ್ರ, ಬ್ಯಾಗ್ಗಳನ್ನು ದಾನವಾಗಿ ನೀಡಿದವರಿಗೆ ಇಲಾಖಾ ವತಿಯಿಂದ ಕೃತಜ್ಞತೆ ಸಲ್ಲಿಸಿದರು. ಅತಿಥಿಗಳಾಗಿದ್ದ ಕಲ್ಲಾಯಿ…
UN NETWORKS ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಜಂಕ್ಷನ್ ಶುಕ್ರವಾರವೂ ಸಂಚಾರ ಅಸ್ತವ್ಯಸ್ತಗೊಂಡಿದ್ದು ಬೆಳಗ್ಗಿನಿಂದ ರಾತ್ರಿವರೆಗೆ ವಾಹನಗಳು ಸರತಿಯಲ್ಲಿ ಸಂಚರಿಸಿತು. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಲ್ಲಾಪುವಿನಿಂದ ತೊಕ್ಕೊಟ್ಟು ಓವರ್ಬ್ರಿಡ್ಜ್ವರೆಗೆ ಮಳೆ ನೀರು ರಸ್ತೆಯಲ್ಲೇ ಹರಿದು ಸಂಪೂರ್ಣ ಹೊಂಡಮಯವಾಗಿದ್ದು, ಶುಕ್ರವಾರ ಸುರಿದ ಮಳೆಗೆ ಜಂಕ್ಷನ್ ಇನ್ನಷ್ಟು ಹದಗೆಟ್ಟಿದೆ. ಸುಮಾರು ಒಂದು ಕಿ. ಮಿ. ರಸ್ತೆ ಹೊಂಡದಿಂದ ವಾಹನಗಳು ಸುಮಾರು ಅರ್ಧ ಗಂಟೆಗಳ ಕಾಲ ಈ ರಸ್ತೆಯಲ್ಲೇ ನಿಧಾನವಾಗಿ ಸಂಚರಿಸುವಂತಾಗಿದೆ. ನೀರು ಪಾಲಾಗುತ್ತಿರುವ ಜಲ್ಲಿ ಹುಡಿ : ಫ್ಲೈಓವರ್ ಕಾಮಗಾರಿಯಿಂದ ಸಮಸ್ಯೆ ಉದ್ಬವಿಸಿದ್ದು, ಕಾಮಗಾರಿ ನಡೆಸುವ ಸಂಸ್ಥೆ ಕಾರ್ಮಿಕರ ಮೂಲಕ ಜಲ್ಲಿ ಹುಡಿಯನ್ನು ಹೊಂಡಗಳಿಗೆ ಹಾಕಿದರೂ ಜಲ್ಲಿಹುಡಿ ಮಳೆಯ ನೀರಿನೊಂದಿಗೆ ಹರಿದು ಹೋಗುತ್ತಿದ್ದು, ಹೊಂಡ ಹಾಗೇ ಉಳಿದಿದೆ. ವಾಹನ ಚಾಲಕರು ನೀರಿನಿಂದ ತುಂಬಿದ ಹೊಂಡದ ಮಾಹಿತಿ ಇರದೆ ಹೊಂಡಗಳಿಗೆ ಕಾರು, ದ್ವಿಚಕ್ರ ವಾಹನಗಳು ಇಳಿಯುವುದರಿಂದ ಚಾಲಕರು ಇಲ್ಲಿ ಸಂಚಾರ ನಡೆಸುವುದೇ ದುಸ್ತರವಾಗಿದೆ. ಹೊಂಡ ತುಂಬಿಸಿದ ಟ್ರಾಫಿಕ್ ಪೊಲೀಸರು : ತೊಕ್ಕೊಟ್ಟು ಜಂಕ್ಷನ್ನಲ್ಲಿ…
UN NETWORKS ಉಳ್ಳಾಲ: ಉಳ್ಳಾಲ ಮಾಸ್ತಿಕಟ್ಟೆ ಬಳಿ ಅಪರಿಚಿತರಿಬ್ಬರು ಯುವಕನೊಬ್ಬನಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಅಕ್ಕರೆಕೆರೆ ನಿವಾಸಿ ವೆಂಕಟೇಶ್(34) ಹಲ್ಲೆಗೊಳಗಾದ ಯುವಕನಾಗಿದ್ದು, ಮಾಸ್ತಿಕಟ್ಟೆ ಬಳಿ ಅಂಗಡಿಯೊಂದರ ಬಳಿ ನಿಂತಿದ್ದಾಗ ಇಬ್ಬರು ಆಗಂತುಕರು ಬಂದು ನಿನ್ನ ತಮ್ಮ ನಮ್ಮ ಮೇಲೆ ಕೊಟ್ಟಿರುವ ಪ್ರಕರಣವನ್ನು ವಾಪಾಸ್ ಪಡೆದುಕೊಳ್ಳಬೇಕು ಇಲ್ಲದಿದ್ದಲ್ಲಿ ನಿನ್ನನ್ನು ಕೊಲ್ಲುತ್ತೇನೆ ಎಂದು ಚೂರಿಯನ್ನು ಎದೆಗೆ ಇಟ್ಟು ಬಳಿಕ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ಸಹಾಯಕ್ಕೆ ಆಗಮಿಸಿದಾಗ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
UN NETWORKS ಸೋಮೇಶ್ವರ : ಸೋಮೇಶ್ವರ ಉಚ್ಚಿಲ ನಿವಾಸಿ ಕೃಷ್ಣ ಕಾರಂತ್(91) ಜೂ. 29ರಂದು ಶುಕ್ರವಾರ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮುಂಬೈಯಲ್ಲಿ ಶಿಕ್ಷಕರಾಗಿದ್ದ ಅವರು ಒಂದು ವರ್ಷ ದೇರಳಕಟ್ಟೆ ಶಾಲೆಯಲ್ಲಿ ಕಾರ್ಯ ನಿರ್ವಹಿಸಿ ಬಳಿಕ ಭಾರತೀಯ ಜೀವ ವಿಮಾ ನಿಗಮದಲ್ಲಿ ಸುಮಾರು 40 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಪ್ರಬಂಧಕರಾಗಿ ನಿವೃತ್ತಿಹೊಂಡಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ಮುಂಬೈ ಫುಟ್ಬಾಲ್ ಅಸೋಸಿಯೇಶನ್ನಲ್ಲಿ ಸಕ್ರಿಯರಾಗಿದ್ದರು. ಕೋಟೆಕಾರು ಗಣೇಶೋತ್ಸವ ಸಮಿತಿಯಲ್ಲಿ 10 ವರ್ಷಗಳ ಕಾಲ ಅಧ್ಯಕ್ಷರಾಗಿ, ಕೋಟೆಕಾರು ಶಾಲಾ ಹಲೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದರು.
UN NETWORKS ಉಳ್ಳಾಲ: ಶಾಲೆಯಲ್ಲಿ ನೀಡಿದ ಹೋಮ್ವರ್ಕ್ ಮಾಡಿಲ್ಲ ಎಂದು ಆರೋಪಿಸಿ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಗೆ ಹೊಡೆದಿದ್ದು, ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿನ್ಯ ಗ್ರಾಮದ ಅಜ್ಜಿನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 4ನೇ ತರಗತಿ ವಿದ್ಯಾರ್ಥಿನಿ ಹೊಡೆತ ತಿಂದು ಗಾಯಗೊಂಡಿರುವ ವಿದ್ಯಾರ್ಥಿನಿಯಾಗಿದ್ದು, ಶಾಲೆಯಲ್ಲಿ ನೀಡಿದ ಹೋಮ್ವರ್ಕ್ ಮಾಡಿಲ್ಲ ಎಂದು ಆರೋಪಿಸಿ ಶಾಲಾ ಮುಖ್ಯ ಶಿಕ್ಷಕಿ ಬೆನ್ನಿಗೆ ಮತ್ತು ಕೈಗೆ ಬೆತ್ತದಿಂದ ಹೊಡೆದಿದ್ದು, ಗಾಯಗೊಂಡಿರುವ ವಿದ್ಯಾರ್ಥಿನಿಯ ತಂದೆ ಚೈಲ್ಡ್ ಲೈನ್ಗೆ ದೂರು ನೀಡಿದ್ದು, ಚೈಲ್ಡ್ ಲೈನ್ನ ಅಧಿಕಾರಿಗಳು ಆಗಮಿಸಿ ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
UN NETWORKS ಉಳ್ಳಾಲ: ಟೋಲ್ ಸಂಗ್ರಹ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಕಾರು ಚಾಲಕರು ಅನುಚಿತವಾಗಿ ವರ್ತಿಸುತ್ತಿದ್ದಾರೆ. ಇದನ್ನು ಇತರೆ ಸಿಬ್ಬಂದಿ ಪ್ರಶ್ನಿಸಿದಾಗ ನಡೆಯುವ ಗಲಾಟೆಗೆ ಬಣ್ಣ ಹಚ್ಚುವ ಮೂಲಕ ಮಾಸಿಕ ವೇತನಕ್ಕೆ ದುಡಿಯುವ ಸಿಬ್ಬಂದಿಯನ್ನೇ ಗೂಂಡಾಗಳೆಂದು ಕರೆಯಲಾಗುತ್ತಿದೆ ಎಂದು ಟೋಲ್ ಸಿಬ್ಬಂದಿಯೇ ಆಗಿರುವ ತಲಪಾಡಿ ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಷತಾ ಆರೋಪಿಸಿದರು. ತಲಪಾಡಿ ಗ್ರಾಮ ಪಂಚಾಯಿತಿನ 2018-19ರ ಸಾಲಿನ ಪ್ರಥಮ ಹಂತದ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಸ್ತೆ ಸರಿಯಿಲ್ಲದೇ ಟೋಲ್ ಪಡೆಯುವುದು ತಪ್ಪು ಎಂದು ಗೊತ್ತಿದೆ. ಸಂಬಂಧಪಟ್ಟ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯವರೊಡನೆ ಹೋರಾಟ ನಡೆಸುವವರು ಮಾತನಾಡಬೇಕಿದೆ. ಆದರೆ ತಿಂಗಳ ವೇತನಕ್ಕೆ ದುಡಿಯುವ ಸಿಬ್ಬಂದಿ ಮೇಲೆ ಹೋರಾಟ ನಡೆಸುವವರು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ. ಕರ್ತವ್ಯ ನಿರ್ವಹಣೆ ಸಂದರ್ಭ ಕೇರಳ ಭಾಗದಿಂದ ಬರುವ ಮತ್ತು ಹೋಗುವ ಕಾರುಗಳಲ್ಲಿರುವ ಯುವಕರು ಹಣ ಪಡೆದುಕೊಳ್ಳುವಾಗ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ವಿರೋಧಿಸಿದರೆ ಗಲಾಟೆಯನ್ನೇ ನಡೆಸುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.…
UN NETWORKS ಮುಡಿಪು: ಯುವಕರಿಗೆ ಗಾಂಜಾ ಮಾರಾಟ ಮಾಡಲು ಒಯ್ಯುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಸೆರೆ ಹಿಡಿದು, ಆತನಿಂದ ಗಾಂಜಾ ವಶಪಡಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಮುಡಿಪು ನವಗ್ರಾಮದಲ್ಲಿ ಗುರುವಾರ ನಡೆದಿದೆ.ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೈರಂಗಳ ಗ್ರಾಮದ ಮುಡಿಪುವಿನ ಇಕ್ಬಾಲ್ ಎಂದು ಗುರುತಿಸಲಾಗಿದೆ. ಆತನಿಂದ 680 ಗ್ರಾಂ ಗಾಂಜಾ ಮತ್ತು ಸ್ಕೂಟರ್ನ್ನು ವಶಪಡಿಸಿಕೊಳ್ಳಲಾಗಿದೆ. ಮುಡಿಪು ನವಗ್ರಾಮದಿಂದ ಸ್ಕೂಟರ್ನಲ್ಲಿ ಬರುತ್ತಿದ್ದ ಇಕ್ಬಾಲ್ ಪೊಲೀಸರ ವಾಹನ ಕಂಡ ತಕ್ಷಣ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ ಪೊಲೀಸರು ಆತನನ್ನು ಹಿಡಿದು ತಪಾಸಣೆ ಮಾಡಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಆರೋಪಿಯನ್ನು ವಿಚಾರಿಸಿದಾಗ ಮೀಯಪದವಿನ ಅರ್ಷಾದ್ ಎಂಬಾತನಿಂದ ಗಾಂಜಾ ಖರೀದಿಸಿಕೊಂಡು ಯುವಕರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

