UN NETWORKS ಉಳ್ಳಾಲ: ನಮ್ಮ ತುಳುನಾಡಿನ ಕೃಷಿ ಸಂಸ್ಕೃತಿಯೊಂದಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಕಾರ್ಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರತ್ನೋತ್ಸವದಂತಹ ಕಾರ್ಯಕ್ರಮ ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿ ಕಾರ್ಯಕ್ರಮ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆಯುತ್ತಿರುವ 6ನೇ ವರ್ಷದ ನಾಡುನುಡಿ ವೈಭವದ ರತ್ನೋತ್ಸವ-2017 ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಬೆರಳೆಣಿಕೆಯಷ್ಟು ಶಿಕ್ಷಣ ಪಡೆಯುತ್ತಿದ್ದರು. ಸರ್ವ ಶಿಕ್ಷಣ ಆಭಿಯಾನ, ಶಿಕ್ಷಣ ಮಾಹಿತಿ ಹಕ್ಕು ಬಂದ ನಂತರ ಪ್ರತಿಯೊಬ್ಬರು ಶಿಕ್ಷಣ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಶೋಷಣೆಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರೂ ಶಿಕ್ಷಣವಂತರಾಗಬೇಕು. ಈ ಸಂದರ್ಭದಲ್ಲಿ ಸ್ವಸ್ಥ ಸಮಾಜ, ಆರೋಗ್ಯ ಸಮಾಜ ನಿರ್ಮಾಣವಾದಾಗ ನಾವು ಅಭಿವೃದ್ದಿಯಾಗುವುದರೊಂದಿಗೆ ಸಮಾಜ ಅಬಿವೃದ್ಧಿಯಾಗುತ್ತದೆ ಎಂದರು. ತುಳು ಭಾಷೆಯ ಸುವರ್ಣ ಯುಗ ಪ್ರಾರಂಭಗೊಂಡಿದ್ದು ಎಲ್ಲಾ ಕಡೆ ತುಳುವಿಗೆ ಸಂಬಂಧಿ ಸಿದ ಕಾರ್ಯಕ್ರಮಗಳು…
Author: UllalaVani
UN NETWORKS ಉಳ್ಳಾಲ: ಜೆಪ್ಪಿನಮೊಗರು ದುಷ್ಕರ್ಮಿಗಳಿಂದ ದಾಳಿಗೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಕೀರ್ ಅಲೇಕಲ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಯು.ಟಿ.ಖಾದರ್ ರವರು ಭೇಟಿ ಮಾಡಿ ಸಾಂತ್ವನ ಹೇಳಿದರು. ದಾಳಿಗೀಡಾದ ಸಂಧರ್ಭದಲ್ಲಿ ಸಾಹಸ ಮೆರೆದು ದುಷ್ಕರ್ಮಿಗಳಿಂದ ತಪ್ಪಿಸಿ,ಕಾರು ನಂಬರನ್ನು ನೋಟ್ ಮಾಡಿ ಆರೋಪಿಗಳನ್ನು ಬಂಧಿಸಲು ಸಹಕರಿಸಿದ ಶಾಕೀರ್ ರವರನ್ನು ಸಚಿವರು ಅಭಿನಂದಿಸಿದರು.ಈ ಸಂಧರ್ಭದಲ್ಲಿ ಕಿನ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿರಾಜ್ ಕಿನ್ಯ ಜತೆಗಿದ್ದರು.
UN NETWORKS ಹೊಸದಿಲ್ಲಿ : ಕುವೆಂಪು ಎಂದೇ ಖ್ಯಾತರಾದ ಕನ್ನಡದ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113ನೇ ಜನ್ಮದಿನೋತ್ಸವವಾದ ಡಿಸೆಂಬರ್ 29, ಶುಕ್ರವಾರ ಗೂಗಲ್ ಅವರಿಗೆ ಆಕರ್ಷಕ ಡೂಡಲ್ ಮೂಲಕ ಗೌರವ ಸಲ್ಲಿಸಿದೆ. ತಮ್ಮ ಕಾಲದ ಮಹೋನ್ನತ ಕವಿ ಹಾಗೂ ಬರಹಗಾರರೆಂದು ಖ್ಯಾತರಾಗಿರುವ ಕುವೆಂಪು ಕನ್ನಡ ಮಾಧ್ಯಮದಲ್ಲಿಯೇ ಮಕ್ಕಳಿಗೆ ಶಿಕ್ಷಣವೊದಗಿಸಬೇಕೆಂದು ಬಲವಾಗಿ ಪ್ರತಿಪಾದಿಸಿದವರು.ಗೂಗಲ್ ಡೂಡಲ್ ಅನ್ನು ರಚಿಸಿದವರು ಉಪಮನ್ಯು ಭಟ್ಟಾಚಾರ್ಯ, ಅದರಲ್ಲಿ ಕನ್ನಡ ಅಕ್ಷರಗಳನ್ನು ಸೇರಿಸಲು ಅವರಿಗೆ ಸಹಾಯ ಮಾಡಿದವರು ಸ್ವಾತಿ ಶೇಲರ್. ಡೂಡಲ್ ನಲ್ಲಿ ಕುವೆಂಪು ತಮ್ಮ ನೆಚ್ಚಿನ ಮನೆ ಸಮೀಪ ಪ್ರಕೃತಿಯ ಮಡಿಲಲ್ಲಿ ಕುಳಿತಂತೆ ತೋರಿಸಲಾಗಿದೆ. ಡಿಸೆಂಬರ್ 29, 1904ರಂದು ಮೈಸೂರಿನಲ್ಲಿ ಜನಿಸಿದ ಅವರು ಕನ್ನಡದ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ವಿಜೇತರು. ಕರ್ನಾಟಕ ಸರಕಾರ ಅವರಿಗೆ 1958ರಲ್ಲಿ ರಾಷ್ಟ್ರಕವಿ ಹಾಗೂ 1992ರಲ್ಲಿ ಕರ್ನಾಟಕ ರತ್ನ ಬಿರುದುಗಳನ್ನಿತ್ತು ಗೌರವಿಸಿತ್ತು. ಅವರ ಕೃತಿ `ಶ್ರೀ ರಾಮಾಯಣ ದರ್ಶನಂ’ ಆಧುನಿಕ ಕಾಲದಲ್ಲಿ ಮಹಾಕಾವ್ಯ ಯುಗವನ್ನು ಪುನರಾರಂಭಿಸಿದ ಕೃತಿ ಎಂದೇ ವರ್ಣಿಸಲ್ಪಟ್ಟಿದೆ. ವಿಶ್ವ…
UN NETWORKS ಉಡುಪಿ : ಮರ್ಕಝುಲ್ ಬದ್ರಿಯ್ಯಃ ಎಜ್ಯುಕೇಶನಲ್ ಸೆಂಟರ್ (ರಿ.)ಉಡುಪಿ ಇದರ ದಶವಾರ್ಷಿಕ ಸಂಭ್ರಮವು 2018 ಜನವರಿ 2 ಮಂಗಳವಾರ ಕಟಪಾಡಿ ಜಂಕ್ಷನ್ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ 1ಗಂಟೆಗೆ ಅಶ್ಶಖ್ ಫಕೀರ್ ಶಾಹ್ ವಲಿಯುಲ್ಲಾಹಿ (ಖ.ಸಿ.)ರವರ ಮಖಾಂ ಝಿಯಾರತ್ ನಡೆಯಲಿದೆ.ಮಧ್ಯಾಹ್ನ 2.30ಕ್ಕೆ ಕಟಪಾಡಿ ಪೇಟೆಯಲ್ಲಿ ಸ್ವಚ್ಚತಾ ಆಂದೋಲನಾ ನಡೆಯಲಿದ್ದು ಮಧ್ಯಾಹ್ನ 3.30ಕ್ಕೆ ದ್ವಜಾರೋಹಣ ನಡೆಯಲಿದೆ ಸಂಜೆ ಗಂಟೆ 4.30ಕ್ಕೆ ದಶವಾರ್ಷಿಕ ಸಂಭ್ರಮವು ಅಸ್ಸಯ್ಯಿದ್ ಜಅಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ರವರ ದುಆ ದೊಂದಿಗೆ ಚಾಲನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ| ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.ಯು.ಕೆ.ಮುಸ್ತಫ ಸಅದಿ ಕಾರ್ಯಕ್ರಮವನ್ನು ಉಧ್ಘಾಟಿಸಲಿರುವರು. ಖ್ಯಾತ ವಾಗ್ಮಿ ಬಹು ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ಗಯ್ಯಲಿದ್ದು ಅಸ್ಸಯ್ಯಿದ್ ಹೈದರೋಸ್ ಕಿಲ್ಲೂರು ತಂಙಳ್ ಸಮಾರೋಪ ದುಆ ಮಾಡಲಿರುವರು. ಅಲ್ಹಾಜ್ ಸಲೀಂ ಮದನಿ ಎಲ್ಲೂರು. ಸಚಿವರಾದರು ಪ್ರಮೋದ್ ಮಧ್ವರಾಜ್.ಶಾಸಕರಾದ ವಿನಯ ಕುಮಾರ್ ಸೊರಕೆ.ಜನಾಬ್ ಎಂ.ಎ.ಗಫೂರು.ಸುರೇಶ್ ಶೆಟ್ಟಿ ಗುರ್ಮೆ.ವಿನಯ ಬಲ್ಲಾಳ್…
UN NETWORKS ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ 23-12-2017 ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಾಗಾರವನ್ನು ಉಧ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನುಡಿದರು. ಮುಖ್ಯ ಅಥಿತಿಗಳಾಗಿ ಶ್ರೀ ದತ್ತೇಶ್ ಪೂಜಾರಿ ಮಾಲಕರು ಶ್ರೀ ಭವಾನಿ ಸ್ಯಾನಿಟರಿ ಮಂಗಳಾದೇವಿ, ಶ್ರೀ ದೇವೇಂದ್ರ ಕೋಟ್ಯಾನ್ ಮಾಲಕರು ಪ್ರಿಯಾ ವುಡ್ ವಕ್ರ್ಸ್ ಕೋಡಿಕಲ್ ಕಾರ್ಯಾಗಾರಕ್ಕೆ ಶುಭ ಹಾರೈಸಿದರು. ಯುವ ವಾಹಿನಿ ಕೇಂದ್ರ ಸಮಿತಿ ಅದ್ಯಕ್ಷರಾದ ಶ್ರೀ ಯಶವಂತ್ ಪೂಜಾರಿ ಮಾತನಾಡಿ ಮಂಗಳೂರು ಘಟಕವು ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭಿಸಿದ ಯುವಜನ ಜಾಗೃತಿ ಪ್ರಗತಿ ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಚಿಂತನೆ, ವಿಮರ್ಶೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಒಂದು ಅವಕಾಶವಾಗಿದ್ದು ವಿದ್ಯಾರ್ಥಿಗಳು ಕಾರ್ಯಾಗಾರದ ಪೂರ್ಣ…
UN NETWORKS ಮುಡಿಪು: ಕೊಣಾಜೆ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನಾರ್ಯ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವರ್ಕಾಡಿ ಗ್ರಾಮದ ತಲೆಕ್ಕಿ ಗ್ರಾಮದ ಮಹಮ್ಮದ್ ಬಶೀರ್(21) ಎಂದು ಗುರುತಿಸಲಾಗಿದೆ. ಈತನಿಂದ ಪೊಲೀಸರು 1 ಕೆ.ಜಿ 300 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ನಾರ್ಯ ಬಳಿ ವಾಹನ ತಪಾಸಣೆ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ಈತನ ಜೊತೆಗೆ ಇರುವ ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
UN NETWORKS ಕೊಣಾಜೆ: ಸೇವೆ ಮತ್ತು ತ್ಯಾಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ದೇಶ ತನ್ನಿಂತಾನೆ ಆಬಿವೃದ್ಧಿಯಾಗಲು ಸಾಧ್ಯ ಎಂದು ಮಾಜಿ ಒಂಬುಡ್ಸ್ಮೆನ್ ಹಾಗೂ ಜನಶಿಕ್ಷಣ ಟ್ರಸ್ಟ್ನ ಮುಖ್ಯಸ್ಥರಾದ ಶೀನ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಕೊಣಾಜೆಯ ಗುಡ್ಡುಪಾಲು ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ಸಭಾಂಗಣದಲ್ಲಿ ಮಂಗಳೂರು ರಥಬೀದಿಯ ಡಾ| ಪಿ. ದಯಾನಂದ ಪೈ ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು. ಎಲ್ಲಾ ಕ್ರಿಯೆಗಳಿಗೆ ಚಿಂತನೆಗಳೇ ಬೀಜಗಳು ಇಂತಹ ಚಿಂತನೆಗಳು ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಮುಖ್ಯಸ್ಥರು ಆಳವಡಿಸಿಕೊಂಡಿದ್ದು, ಇದರೊಂದಿಗೆ ಎರಡು ಆದರ್ಶಗಳ ಮೂಲಕ ಗ್ರಾಮದ ಅಭಿವೃದ್ಧಿಯ ಚಿಂತನೆಯತ್ತ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಆಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮದ ಆಭಿವೃದ್ಧಿಯ ನಿಟ್ಟಿನಲ್ಲಿ ಕಳೆದ ಆರು ತಿಂಗಳಿನಿಂದ ಉತ್ತಮ ಕಾರ್ಯವನ್ನು ಗ್ರಾಮದಲ್ಲಿ ನಡೆಸುತ್ತಿದ್ದು,…
UN NETWORKS ಉಳ್ಳಾಲ: ಪಕ್ಷದ ಧ್ವನಿ ಮತ್ತು ಕಣ್ಣಾಗಿರುವ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋಗುವ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ವ್ಯಾಪಿಯಲ್ಲಿ ಕಾರ್ಯಗಾರಗಳನ್ನು ಆಯೋಜಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಮುಡಿಪು ಮತ್ತು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮುಡಿಪು ಆಡಿಟೋರಿಯಂನಲ್ಲಿ ಗುರುವಾರ ಜರಗಿದ ಬೂತ್ ಮಟ್ಟದ ಪ್ರತಿನಿಧಿ ಮಾಹಿತಿ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು. ರಾಜಕೀಯ ಎಂದಿಗೂ ಗಣಿತವಾಗಲು ಸಾಧ್ಯವಿಲ್ಲ, ಅದು ರಸಾಯನಶಾಸ್ತ್ರವಿದ್ದಂತೆ, ಕೂಡಿಸಿ ಕಳೆಯುವಂತಹ ಪ್ರಮೇಯ ರಾಜಕೀಯದಲ್ಲಿಲ್ಲ. ಕೇವಲ ಸೂತ್ರಗಳು ಮಾತ್ರ ರಾಜಕೀಯ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು. ಕಾರ್ಯಕರ್ತರು ವಿರೋಧ ಪಕ್ಷದವರ ಎದುರಲ್ಲಿ ಧರ್ಯವಾಗಿ ಮಾತನಾಡಲು ಆತ್ಮವಿಶ್ವಾಸ ಮತ್ತು ಸ್ವಾಭಿಮಾನದಿಂದ ರಾಜ್ಯಾದ್ಯಂತ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಚಯಿಸುವ ಪ್ರಯತ್ನ ಕಾರ್ಯಾಗಾರದಿಂದ ಆಗಲಿದೆ. ಚುನಾವಣೆ ಪೂರ್ವ ಇಟ್ಟಂತಹ ಆಶ್ವಾಸನೆಗಳನ್ನು ಬಹುತೇಕ ಈಡೇರಿಸಲಾಗಿದೆ. ಎಲ್ಲಿಯಾದರೂ ಬಿಟ್ಟುಹೋಗಿದ್ದಲ್ಲಿ ಕಾರ್ಯಕರ್ತರು ಗಮನಕ್ಕೆ ತಂದಲ್ಲಿ , ಅದನ್ನು ನಿರ್ವಹಿಸುವ ಪ್ರಯತ್ನ ಮುಂದುವರಿಸುವುದಾಗಿ ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಕಾಂಗ್ರೆಸ್…
UN NETWORKS ಕಣ್ಣೂರು : ಸಿಪಿಎಂ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಇದು ಆರೆಸ್ಸೆಸ್ ಕಾರ್ಯಕರ್ತರ ಕೃತ್ಯ ಎಂದು ಸಿಪಿಎಂ ಆರೋಪಿಸಿದೆ. ದಾಳಿಯಿಂದ ಸಿಪಿಎಂ ಕಾರ್ಯಕರ್ತ ಚಂದ್ರನ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಕೇರಳದ ತಿರುವನಂತಪುರಂನಲ್ಲೂ ಅಪರಿಚಿತ ವ್ಯಕ್ತಿಗಳು ಸಿಪಿಎಂ ಕಾರ್ಯಕರ್ತನ ಮೇಲೆ ದಾಳಿ ನಡೆಸಿದ್ದರು. ಅವರನ್ನು ಕಣ್ಣೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಾಳಿಗಳ ಹಿಂದೆ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರಿದ್ದಾರೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಅನವೂರ್ ನಾಗಪ್ಪನ್ ಆರೋಪಿಸಿದ್ದಾರೆ.
UN NETWORKS ಕಲ್ಲಡ್ಕ: ಕಲ್ಲಡ್ಕ ಸಮೀಪದ ವೀರಕಂಬದ ಮಸೀದಿಗೆ ಬುಧವಾರ ತಡರಾತ್ರಿ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಘಟನೆಯಿಂದ ಮಸೀದಿಯ ನಾಲ್ಕು ಕಿಟಕಿಯ ಗಾಜುಗಳಿಗೆ ಹಾನಿಯಾಗಿದೆ. ಇಂದು ಬೆಳಗ್ಗೆ ನಮಾಝ್ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಜಮಾಅತ್ ಹಾಗೂ ಸ್ಥಳೀಯರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.

