Author: UllalaVani

Kannada News From Coastal Karnataka

ಕೈರಂಗಳ; ರಾಘವೇಶ್ವರಭಾರತೀಮಹಾಸ್ವಾಮೀಜಿಯವರ ಮಾಗದರ್ಶನದಲ್ಲಿ ಕೈರಂಗಳದ ಪುಣ್ಯಕೋಟಿ ನಗರದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಜ.14ರಿಂದ ಫೆ.12ರವರೆಗೆ ಗೋಸೇವಾ ಮಾಸಾಚರಣೆ ಆದ್ದೂರಿಯಾಗಿ ನಡೆಯಲಿದೆ. ಸುಮಾರು ಒಂದು ತಿಂಗಳುಗಳ ಕಾಲ ನಡೆಯಲಿರುವ ಗೋ ಮಾಸಾಚರಣೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಸೇರಿದಂತೆ ವೈಭವಯುತ ಕಾರ್ಯಕ್ರಮಗಳೊಂದಿಗೆ ಮೇಳೈಸಲಿದೆ. ಜ.14ರಂದು ಸಂಜೆ 5ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಭಾಧ್ಯಕ್ಷತೆಯನ್ನು ಇನೋಳಿ ಶ್ರೀಸೋಮನಾಥ ದುರ್ಗಾಪರಮೇಶ್ವರೀ ದೇವಸ್ಥಾನ ದೇವಂದಬೆಟ್ಟು ಇದರ ಆಡಳಿ ಮೊಕ್ತೇಸರರಾದ ಚಂದ್ರಹಾಸ ಪೂಂಜ, ಕಿಲ್ಲೂರುಗುತ್ತು ವಹಿಸಲಿದ್ದಾರೆ. ಉದ್ಘಾಟಕರಾಗಿ ಭಜನಾ ಸಂಕೀರ್ತನಕಾರರು ಹಾಗೂ ತರಬೇತುದಾರರಾದ ದೀನ್‌ರಾಜ್ ಕಳವಾರು ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ದೇವಿಪ್ರಸಾದ್ ಪೊಯ್ಯತ್ತಾಯ, ಗಡಿ ಪ್ರಧಾನ ಪದ್ಮನಾಭ ರೈ ಯಾನೆ ಮಂಜು ಭಂಡಾರಿ ನಾರ್ಯಗುತ್ತು, ಮುಡಿಪು ಹವ್ಯಕ ವಲಯಾಧ್ಯಕ್ಷ ಪೆರಡೆ ತಿರುಮಲೇಶ್ವರ ಭಟ್ ನಚ್ಚ, ಡಾ.ಹರಿಕಿರಣ್ ಟಿ.ಬಂಗೇರ, ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಉಪಾಧ್ಯಕ್ಷ ಸುಭಾಷ್ ಧರ್ಮನಗರ, ಚಂದ್ರಹಾಸ ಕಣಂತೂರು, ವಿಶ್ವಕರ್ಮ ಸಂಘ ಅಧ್ಯಕ್ಷ ಸುರೇಶ್ ಆಚಾರ್ಯ, ನಿವೃತ್ತ ಯೋಧ ಪೂವಪ್ಪ ಕಡಂಬಾರು…

Read More

ಉಳ್ಳಾಲ:ಜ-05; ಉಳ್ಳಾಲ ಬಂಡಿಕೊಟ್ಯದ ಶ್ರೀ ಮಲರಾಯ ದೈವಸ್ಥಾನದ ನೂತನ ಭಂಡಾರ ಮನೆಯ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು ಇದೇ ಮಾರ್ಚ್ 28,29,30 ರಂದು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವವು ನಡೆಯಲಿದ್ದು ಆ ಪ್ರಯುಕ್ತ ಭಾನುವಾರದಂದು ಕ್ಷೇತ್ರದಲ್ಲಿ ದೇವಸ್ಥಾನ,ದೈವಸ್ಥಾನ,ಮಠ,ಮಂದಿರ ಮತ್ತು ಸಂಘ ಸಂಸ್ಥೆಗಳ ಪ್ರಮುಖರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.ಬಂಡಿಕೊಟ್ಯ ಶ್ರೀ ಮಲರಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುಂದರ ಉಳ್ಳಾಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಮಲರಾಯ ದೈವಸ್ಥಾನದ ಅರ್ಚಕರಾದ ಲತೀಶ್ ಯಾನೆ ಮುಂಡ ಪೂಜಾರಿ,ಚೀರುಂಭ ಭಗವತೀ ಕ್ಷೇತ್ರದ ಪ್ರಧಾನ ಅರ್ಚಕರಾದ ಮಂಜಪ್ಪ ಕಾರ್ನವರ್,ಪ್ರಮುಖರಾದ ಬಾಲಕೃಷ್ಣ ಶೆಟ್ಟಿ ಉಳ್ಳಾಲಗುತ್ತು,ಉಳ್ಳಾಲ ಮೊಗವೀರ ಸಂಘದ ಮಾಜಿ ಅಧ್ಯಕ್ಷರಾದ ಸದಾನಂದ ಬಂಗೇರ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಸುರೇಶ್ ಭಟ್ನಗರ,ತಲಪಾಡಿ ಅಲಂಕಾರಗುಡ್ಡೆ ಶ್ರೀ ಮಲರಾಯ ದೈವಸ್ಥಾನದ ಪ್ರಮುಖರಾದ ರವೀಂದ್ರನಾಥ ರೈ,ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಕೆ.ಟಿ.ಸುವರ್ಣ,ಮಂಗಳೂರು ವಿಶ್ವವಿದ್ಯಾಲಯದ ನಾರಾಯಣಗುರು ಅಧ್ಯಯನ ಪೀಠದ ಸದಸ್ಯರಾದ ಸತೀಶ್ ಕರ್ಕೇರ,ಉಳ್ಳಾಲ ಚೀರುಂಭ…

Read More

ಜ.05:ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ’ಸೋಜಾ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯ ಮೌಲ್ಯ ರೂ. 25,000, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಜನವರಿ 11, 2026 ರಂದು ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ನಲ್ಲಿರುವ ಮದರ್ ತೆರೇಸಾ ಪೀಸ್ ಪಾರ್ಕ್‌ನಲ್ಲಿ ನಡೆಯುವ 20 ನೇ ಕವಿತಾ ಫೆಸ್ತ್ ಉತ್ಸವದ ಸಂದರ್ಭದಲ್ಲಿ ಪ್ರಸಿದ್ಧ ಕೊಂಕಣಿ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಣ್ಣ ಕಥೆಗಾರ ದಾಮೋದರ್ ಮಾವ್ಜೊ ಅವರು ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಿದ್ದಾರೆ. ಕೊಂಕಣಿ-ಕನ್ನಡ ಕವಿ ಮತ್ತು ಸಣ್ಣ ಕಥೆಗಾರ ವಲೇರಿಯನ್ ಡಿಸೋಜಾ ಅವರು ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುತ್ತಾರೆ. ಅವರು 1947 ಜುಲೈ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಳಿಯ ವಗ್ಗ ಎಂಬ ಸಣ್ಣ ಪಟ್ಟಣದಲ್ಲಿ ಪೀಟರ್ ಮತ್ತು ಮೇರಿ ಡಿ’ಸೋಜಾ ಅವರಿಗೆ ನಾಲ್ಕನೇ ಮಗುವಾಗಿ ಜನಿಸಿದರು. ಹದಿನೇಳನೇ ವಯಸ್ಸಿನಲ್ಲಿ,…

Read More

ಬಾಳೆಪುಣಿ,ಜ.05: ಅಂಬೇಡ್ಕರ್ ಅವರ ಸಿದ್ಧಾಂತಗಳನ್ನು ಪ್ರತಿ ವರ್ಷ ಈ ರೀತಿಯ ಕ್ರೀಡಾ ಕೂಟ ನಡೆಸುವ ಮೂಲಕ ಎತ್ತಿ ಹಿಡಿಯಬೇಕು. ಮಂಗಳೂರು ಕ್ಷೇತ್ರದಲ್ಲಿ ದಲಿತರ ಉದ್ಧಾರಕ್ಕಾಗಿ ಮಾಡಿದ ಮನವಿಗೆ ಕ್ಷೇತ್ರದ ಶಾಸಕರ ಜೊತೆಗೆ ಚರ್ಚಿಸಿ ಅಭಿವೃದ್ಧಿಗೆ ಸಹಕರಿಸುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇವರು ಉಳ್ಳಾಲ ವಿದಾನಸಭಾ ಕ್ಷೇತ್ರದ ಬಾಳೆಪುಣಿ ರಾಜೀವ್ ಗಾಂಧಿ ಪಂಚಾಯಿತಿ ಮೈದಾನದಲ್ಲಿ ನಡೆದ ಅಖಿಲ ಕರ್ನಾಟಕ ಮಹಾನಾಯಕ ಜೈ ಭೀಮ್ ಬಳಗ, ಉಳ್ಳಾಲ ತಾಲೂಕು ಕ್ರೀಡಾ ಮತ್ತು ಸಾಂಸ್ಕೃತಿಕ ಘಟಕದಿಂದ ಪರಿಶಿಷ್ಟ ಜಾತಿ, ಪಂಗಡದ ಸಮಾಜ ಬಾಂಧವರಿಗೆ ನಡೆಸಲಾದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಮಾದರಿಯ “ಮಹಾನಾಯಕ ಜೈ ಭೀಮ್ ಟ್ರೋಫಿ” -2026″ರ ಪಂದ್ಯಾಕೂಟದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ. ರಾಜ್ಯ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ನಮ್ಮ ದೇಶದ ಜನರ ಭಾಷೆ, ವರ್ಣ, ಸಂಸ್ಕೃತಿ, ಆಹಾರ ಪದ್ಧತಿ, ಆಚಾರ, ವಿಚಾರ, ಪದ್ಧತಿಗಳು ಬೇರೆ ಬೇರೆ ಆಗಿದ್ದರೂ ಎಲ್ಲರಲ್ಲೂ ಭಾರತೀಯರು ಎಂಬ ಭಾವನೆ ಒಕ್ಕೊರಲಲ್ಲಿ…

Read More

ಕಲ್ಲಾಪು: ಬುರ್ದುಗೋಳಿ ಕಲ್ಲಾಪುವಿನ ಮಣ್ಣು ನನಗೆ ಮನೆ ಅನ್ನುವ ಭಾವನೆ ನೀಡಿದೆ. ಬೇರೆ ಊರಿಗೆ ಬಂದಿದ್ದೇವೆ ಎಂಬ ಯಾವುದೇ ರೀತಿಯ ಅಂಜಿಕೆ ಇಲ್ಲಿ ಎಷ್ಟೂ ಅನಿಸಿಲ್ಲ. ಸಮಿತಿ ಸದಸ್ಯರ ಪ್ರೀತಿ, ಅಪ್ಯಾಯತೆ, ಆತ್ಮೀಯತೆ ಹಾಗೂ ದೈವದಲ್ಲಿ ಇಟ್ಟ ಅಚಲ ನಂಬಿಕೆ ಇವೆಲ್ಲವೂ ನನಗೆ ಅಜ್ಜನ ಕಾರಣೀಕ ಶಕ್ತಿಯ ಜೀವಂತ ಪ್ರತ್ಯಕ್ಷ ಉದಾಹರಣೆಯಂತೆ ಕಾಣುತ್ತಿವೆ.ನಾವು ದೈವವನ್ನು ಎಷ್ಟು ಗಟ್ಟಿಯಾಗಿ ಹಿಡಿದುಕೊಳ್ಳುತ್ತೇವೋ, ಆಪತ್ತು ಬಂದಾಗ ದೈವಗಳೇ ಕೈಚಾಚಿ ನಮ್ಮನ್ನು ರಕ್ಷಿಸುತ್ತವೆ ಎಂದು ವಾರಣಾಸಿ ಕಾಶಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ಕಲ್ಲಾಪು ಬುರ್ದುಗೋಳಿಯ ಗುಳಿಗ ಕೊರಗಜ್ಜ ದೈವಗಳ ಉದ್ಭವಶಿಲೆಯ ಪ್ರಧಾನ ಆದಿಸ್ಥಳ ಸೇವಾ ಟ್ರಸ್ಟ್‌ ಆಶ್ರಯದಲ್ಲಿ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಗುಳಿಗ ಕೊರಗಜ್ಜ ದೈವದ ವರ್ಷಾವಧಿ ಕೋಲದಲ್ಲಿ ಭಾಗವಹಿಸಿ ಮಾತನಾಡಿದರು.ಕಲ್ಲಾಪುವಿನ ಮಣ್ಣಿನಲ್ಲಿ ನಮಗೆ ಏನಾಗಿದೆ ಎಂಬುದೇ ಮುಖ್ಯ. ಜೀವನದ ಪ್ರತಿಯೊಂದು ನಿರ್ಧಾರವೂ ಕೊರಗಜ್ಜನ ಅಪ್ಪಣೆಯಿಲ್ಲದೆ ತೆಗೆದುಕೊಳ್ಳುವುದೇ ಇಲ್ಲ. ಅಜ್ಜ ನಮ್ಮನ್ನು ಇಷ್ಟಪಡುತ್ತಾರಾ, ನಾವು ಅವರನ್ನು…

Read More

ಉಳ್ಳಾಲ, ಜ:4: ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ದೈವಗಳ ಉದ್ಭವಶಿಲೆಯ ಪ್ರಧಾನ ಆದಿಸ್ಥಳದ ಕುರಿತಾದ ʻಸಿಂಗಾರ ಸುಗಿಪುʼ ತುಳು ಭಕ್ತಿಗೀತೆ ವಿಡಿಯೋ ಹಾಡುಗಳ ಬಿಡುಗಡೆಯನ್ನು ವಾರಣಾಸಿ ಕಾಶಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಸ್ವಾಮೀಜಿ ಕ್ಷೇತ್ರದಲ್ಲಿ ಶನಿವಾರ ಜರಗಿದ ವರ್ಷಾವಧಿ ಕೋಲ ಸಂದರ್ಭ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಅಜ್ಜನ ಕ್ಷೇತ್ರದ ಕುರಿತ ವೀಡಿಯೋ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಮನೆಮನೆಗಳಲ್ಲಿ ಈ ಭಕ್ತಿಗೀತೆಗಳು ನಾದಿಸುತ್ತಾ, ಕ್ಷೇತ್ರಕ್ಕೂ ತಂಡಕ್ಕೂ ಉತ್ತಮ ಹೆಸರು ಮತ್ತು ಗೌರವ ದೊರಕಲಿ. ದೈವವನ್ನು ನಂಬುವ ಎಲ್ಲ ಭಕ್ತರೂ ಇದನ್ನು ನೋಡಬೇಕು, ಆಲಿಸಬೇಕು. ಈ ಪ್ರಯತ್ನ ಸುಗ್ಗಿಯಂತೆ ಸಮೃದ್ಧ ಫಲ ನೀಡಲಿ, ದೈವ ಕೃಪೆ ಸದಾ ಇರಲಿ ಎಂದು ಹಾರೈಸಿದರು.ಮಾ. ಅಭಿಷೇಕ್‌ ಕಲ್ಲಾಪು ಹಾಗೂ ಕು.ಸಾನ್ವಿ ಕೊಟ್ಟಾರಿ ಗಾಯನದಲ್ಲಿ ಮೂಡಿಬಂದಿರುವ ಹಾಡುಗಳಿಗೆ ತೋನ್ಸೆ ಪುಷ್ಕಳ್‌ ಕುಮಾರ್‌ ಸಾಹಿತ್ಯ ನೀಡಿದ್ದಾರೆ. ಸಮೀರ್‌ ಮುಡಿಪು ಧ್ವನಿ ಮುದ್ರಣ, ಸಂದೀಪ್‌ ಕಲ್ಲಾಪು ಛಾಯಗ್ರಹಣ, ಸಂಕಲನ, ಪ್ರಚಾರಕಲೆಯನ್ನು ಎಸ್ಎನ್.ಸಿ ಹಾಗೂ ಪುರುಷೋತ್ತಮ್‌ ಕಲ್ಲಾಪು,…

Read More

 ಉಡುಪಿ,ಜ.3: ಹೆಜಮಾಡಿ ಕಡಲ ತೀರದಲ್ಲಿ ಅಪರೂಪದ ದೃಶ್ಯವೊಂದು ಕಂಡುಬಂದಿದ್ದು, ರಾಶಿ ರಾಶಿಯಾಗಿ ಬೂತಾಯಿ ಮೀನುಗಳು ಕಡಲ ತೀರಕ್ಕೆ ಜಿಗಿದು ಬಂದ ಪರಿಣಾಮ ಸ್ಥಳೀಯ ನಿವಾಸಿಗಳಿಗೆ ಮೀನಿನ ಮಹಾ ಸುಗ್ಗಿ ದೊರೆತಿದೆ. ಕೈರಂಪಣಿ ಬಲೆ ಬೀಸುವ ವೇಳೆ ಸಮುದ್ರದ ತೀರ ಪ್ರದೇಶಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಬೂತಾಯಿ ಮೀನುಗಳು ಜಿಗಿದು ಬಂದಿವೆ. ಅಚ್ಚರಿಯ ಈ ದೃಶ್ಯವನ್ನು ಕಂಡ ಸ್ಥಳೀಯರು ಹಾಗೂ ತೀರ ಪ್ರದೇಶದ ನಿವಾಸಿಗಳು ಕೈಗೆ ಸಿಕ್ಕಿದಷ್ಟು ಮೀನುಗಳನ್ನು ಹೆಕ್ಕಿಕೊಂಡು ಹೋಗಿದ್ದಾರೆ.ಕಡಲ ತೀರದಲ್ಲಿ ಬೂತಾಯಿ ಮೀನುಗಳು ಜಿಗಿಯುತ್ತಿರುವುದು ಹಾಗೂ ಜನರು ಅವುಗಳನ್ನು ಹಿಡಿದುಕೊಂಡು ಹೋಗುತ್ತಿರುವ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಅಪರೂಪದ ಘಟನೆ ದೃಶ್ಯ ರಮಣೀಯವೆನಸಿದರೂ ಮಾನವ ಆಹಾರ ಶೃಂಖಲೆಯನ್ನು ಒಂದೊಮ್ಮೆ ನೆನಪಿಸುತ್ತದೆ. ಆದರೂ ಇಂತಹ ಮೀನಿನ ಅಪ್ರತೀಕ್ಷಿತ ಸುಗ್ಗಿ ಕಂಡು ತೀರ ಪ್ರದೇಶದ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದು, ಸಮುದ್ರ ನೀಡಿದ ಈ ಪ್ರಕೃತಿ ವರವನ್ನು ಸಂಭ್ರಮದಿಂದ ಸ್ವೀಕರಿಸಿದ್ದಾರೆ.

Read More

ಮಂಗಳೂರು,ಜ.03: ಬೋಂದೆಲ್‌ನ ಸೇಂಟ್ ಲಾರೆನ್ಸ್ ದೇಗುಲ ಮತ್ತು ಚರ್ಚ್‌ನ ಪ್ಯಾರಿಷ್ ಧರ್ಮಗುರು ಫಾದರ್ ಆಂಡ್ರ್ಯೂ ಲಿಯೋ ಡಿ’ಸೋಜಾ ಅವರು ಜನವರಿ 1 ರಂದು ಕಾರು ಅಪಘಾತಕ್ಕೀಡಾಗಿದ್ದರೂ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಫಾದರ್ ಡಿ’ಸೋಜಾ ಅವರು ತಮ್ಮ ನಿವಾಸದಲ್ಲಿ ನಡೆದ ಹೊಸ ವರ್ಷದ ಕೂಟದಲ್ಲಿ ಭಾಗವಹಿಸಿದ ನಂತರ ತಮ್ಮ ಹುಟ್ಟೂರು ನೀರುಡೆಯಿಂದ ಬೊಂದೆಲ್ ಚರ್ಚ್‌ಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮರಕಡ ಮೂಲಕ ಹಾದುಹೋಗುವಾಗ ಅವರ ಕಾರಿನ ಒಂದು ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿದೆ ಎಂದು ವರದಿಯಾಗಿದೆ.ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾರು ರಸ್ತೆಯಿಂದ ಹೊರಟು ರಸ್ತೆಯ ಪಕ್ಕದಲ್ಲಿರುವ ಮನೆಯ ಅಂಗಳದಲ್ಲಿ ಪಕ್ಕಕ್ಕೆ ಬಿದ್ದಿದೆ. ಅಪಘಾತದಲ್ಲಿ ಫಾದರ್ ಡಿ’ಸೋಜಾ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.ಅಪಘಾತವನ್ನು ಕಂಡ ಅನೇಕ ಪ್ರೇಕ್ಷಕರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರನ್ನು ಮೇಲೆತ್ತಲು ಮತ್ತು ಫಾದರ್ ಡಿಸೋಜಾ ಅವರನ್ನು ವಾಹನದಿಂದ ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದರು. ಘಟನೆಯ ನಂತರ ಮಾತನಾಡಿದ ಫಾದರ್ ಡಿ’ಸೋಜಾ, ದೇವರ ದಯೆಯಿಂದ ಇಂತಹ ಭೀಕರ ಅಪಘಾತದಿಂದ ಪಾರಾಗಿದ್ದಾನೆ…

Read More

ಕೊಲ್ಯ: ಜಗದ್ಗುರು ಶ್ರೀ ಶ್ರೀ ರಮಾನಂದ ಸ್ವಾಮೀಜಿಯವರು ಸ್ಥಾಪಿಸಿದ, “ದಕ್ಷಿಣದ ಕೊಲ್ಲೂರು” ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶ್ರೀ ಕ್ಷೇತ್ರ ಕೊಲ್ಯ ಶ್ರೀ ಮೂಕಾಂಬಿಕ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ, ಕೊಲ್ಲೂರು ಶ್ರೀ ಮೂಕಾಂಬಿಕೆಯ ಅನನ್ಯ ಆರಾಧಕರು ಹಾಗೂ ಶ್ರೀ ಮೂಕಾಂಬಿಕ ಬಿಲ್ಡರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಚಂದ್ರಹಾಸ್ ಪಂಡಿತ್ ಹೌಸ್ ಅವರನ್ನು ಆಯ್ಕೆ ಮಾಡಲಾಗಿದೆ. ಧಾರ್ಮಿಕ ಶ್ರದ್ಧೆ, ಸಾಮಾಜಿಕ ಬದ್ಧತೆ ಹಾಗೂ ಸಂಘಟನಾ ಸಾಮರ್ಥ್ಯದಿಂದ ಗುರುತಿಸಿಕೊಂಡಿರುವ ಚಂದ್ರಹಾಸ್ ಪಂಡಿತ್ ಹೌಸ್ ಅವರ ಆಯ್ಕೆ ದೇವಸ್ಥಾನದ ದೈನಂದಿನ ಆಡಳಿತ, ಧಾರ್ಮಿಕ ಆಚರಣೆಗಳ ಸುವ್ಯವಸ್ಥೆ, ಭಕ್ತರಿಗೆ ಅನುಕೂಲವಾಗುವ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಕ್ಷೇತ್ರದ ಸಮಗ್ರ ಪ್ರಗತಿಗೆ ಅವರು ಮಹತ್ವದ ಕೊಡುಗೆ ನೀಡುವ ವಿಶ್ವಾಸ ವ್ಯಕ್ತವಾಗಿದೆ.ಪೌರಾಣಿಕ ಹಿನ್ನೆಲೆಯಂತೆ ಕೋಲ ಮಹರ್ಷಿಗಳು ತಪಸ್ಸು ಮಾಡಿದ ಪವಿತ್ರ ಸ್ಥಳವೇ “ಕೊಲ್ಯ” ಎಂದು ನಾಮಾಂಕಿತವಾಗಿದ್ದು, ತಾಯಿ ಶ್ರೀ ಮೂಕಾಂಬಿಕೆಯ ಕೃಪೆಯಿಂದ ಈ ಕ್ಷೇತ್ರವು ಆಧ್ಯಾತ್ಮಿಕ ಕೇಂದ್ರವಾಗಿ ಬೆಳೆಯುತ್ತಿದೆ. ನೂತನ ಅಧ್ಯಕ್ಷರ ನೇತೃತ್ವದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಧಾರ್ಮಿಕ ಪ್ರವಾಸೋದ್ಯಮದ ಉತ್ತೇಜನ…

Read More

ಮುಲ್ಕಿ,ಜ.2: ಎಮ್ಮೆ ಹಾಗೂ ಹಸುಗಳನ್ನು ಹೊಂದಿದ್ದ ವ್ಯಕ್ತಿಯೋರ್ವರ ಸುಲಿಗೆಗೆ ಯತ್ನಿಸಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬAಧಿಸಿದ0ತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಅಂಗಾರಗುಡ್ಡೆಯ ನಿವಾಸಿ ಅಬೂಬಕ್ಕರ್ ಎಂಬುವವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಅಬೂಬಕ್ಕರ್ ಅವರ ಬಳಿ ಮೂವರು ಜೋಡಿ ಎಮ್ಮೆ, ಹಾಲು ನೀಡುವ ಐದು ಹಸುಗಳು ಹಾಗೂ ಇನ್ನಿತರ ಎತ್ತು-ಎಮ್ಮೆಗಳನ್ನು ಸಾಕುತ್ತಿದ್ದರು. ಇತ್ತೀಚೆಗೆ ಅವರ ಎಮ್ಮೆಗಳು ಕಂಬಳ ಕೂಟದಲ್ಲಿ ಬಹುಮಾನ ಗೆದ್ದಿದ್ದವು. ಪಕ್ಕದ ಗ್ರಾಮದಿಂದ ಬಂದಿದ್ದ ಮೂವರು ಆರೋಪಿಗಳು ಅಬೂಬಕ್ಕರ್ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಬೂಬಕ್ಕರ್ ಅವರ ತಂದೆ ಶಂಶುದ್ದೀನ್ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅಬೂಬಕ್ಕರ್ ಅವರು ಮಧ್ಯಪ್ರವೇಶಿಸಿ ತಂದೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಗ್ರಾಮದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರು ಅಬೂಬಕ್ಕರ್ ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಸೌಹಾರ್ದತೆಯಿಂದ ಜೀವನ ನಡೆಸುತ್ತಿರುವ…

Read More