UN NETWORKS ಮಂಗಳೂರು : ಮಂಗಳೂರು ದಕ್ಷಿಣ ಉಪವಿಭಾಗದ ರೌಡಿ ನಿಗ್ರಹ ದಳದ ಸಹಾಯಕ ಪೊಲಿಸ್ ಆಯುಕ್ತರಿಗೆ ಈ ಮೊದಲು ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿಯಂತೆ ಈ ಮೊದಲು ನಿಖಿಲ್ ಕೆ.ಬಿ., ಶ್ರವಣ ಪೂಜಾರಿ, ರೋಶನ್ ವೇಗಸ್, ಬಾಶೀಂ ಬಶೀರ್ ಎಂಬವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಂಪನಕಟ್ಟೆಯಕಾರ್ಲ್ ಡಿಕುನ್ಹ ಯಾನೆ ಆಸ್ಟಿನ್(29), ಕುಲಶೇಖರ ಸಿಲ್ವರ್ಗೇಟ್ನ ಅನೂಪ್ ಡಿ ಅಲ್ಮೇಡಾ (26) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಎಂ ಡಿ ಎಂ ಪೀಲ್ಸ್ -93, ಹುಂಡೈ ಇಯಾನ್ ಕಾರು-1, ಮೊಬೈಲ್ ಪೋನ್-3 ಹಾಗೂ 30,850 ನಗದು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಳ್ಳಲಾದ ಸೊತ್ತುಗಳ ಮೌಲ್ಯ 2,36,000ರೂ. ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿ ಕಾರ್ಲ್ ಎಂಬಾತನ ಮೇಲೆ 2014 ಮತ್ತು 2015ರಲ್ಲಿ ಎನ್.ಸಿ.ಬಿ. ಬೆಂಗಳೂರು ಇಲ್ಲಿ ಪ್ರಕರಣಗಳು ದಾಖಲಾಗಿವೆ. ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ…
Author: UllalaVani
UN NETWORKS ಮುಡಿಪು : ಮಂಗಳೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಸಭೆಯು ಮಂಗಳವಾರ ಸಂಜೆ 06:00 ಗಂಟೆಗೆ ಸರಿಯಾಗಿ ಮುಡಿಪು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಲಿದೆ. ಅದ್ದರಿಂದ ಈ ಸಭೆಯಲ್ಲಿ ಮುಡಿಪು ಬ್ಲಾಕ್ ಸಮಿತಿಗೆ ಒಳಪಟ್ಟ ಎಲ್ಲಾ ವಲಯ ಮಟ್ಟದ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಜರಾಗಬೇಕಾಗಿ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರವೂಫ್ ಸಿ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
UN NETWORKS ಮಂಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸೋಸಿಯಲ್ ಅಚೀವ್ಮೆಂಟ್ ಫಾರಂ ಇದರ ಸದಸ್ಯರು ವೆಲೆನ್ಸಿಯಾದಲ್ಲಿರುವ ಸೈಂಟ್ ಆಂಟನಿ ಪೂವರ್ ಹೋಂ ಎಂಬ ಕ್ರೈಸ್ತರ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಫಾದರ್ ಫ್ರಾನ್ಸಿಸ್ಡಿ ಸೋಜರವರಿಗೆ ಹೂಗುಚ್ಛ ನೀಡಿ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭ ಸಂಸ್ಥೆಯ ಫಾದರ್ ಫ್ರಾನ್ಸಿಸ್ಡಿಸೋಜರವರು ಸೋಸಿಯಲ್ ಅಚೀವ್ಮೆಂಟ್ನ ಸದಸ್ಯರ ಕಾರ್ಯವನ್ನು ಮೆಚ್ಚಿಕೊಂಡರು. ಬಳಳಿಕ ಮಾತನಾಡಿದ ಅವರು ಹಬ್ಬ ಹರಿದಿನಗಳಲ್ಲಿ ಬೇರೆ ಬೇರೆ ಧರ್ಮದವರು ಪರಸ್ಪರ ಶುಭಾಶಯ ಕೋರುವಿಕೆ, ಸಿಹಿತಿಂಡಿ ವಿತರಣೆ ಮೋದಲಾದ ಕಾರ್ಯಕ್ರಮಗಳು ನಡೆಯುತ್ತವೆ. ಧರ್ಮಗಳ ಮಧ್ಯೆ ನಂಬಿಕೆ, ಪ್ರೀತಿ, ವಿಶ್ವಾಸ, ಸಹೋದರತೆ, ಸೌಹಾರ್ದತೆ ಕಡಿಮೆಯಾಗದಂತೆ ಸಮಾಜಿಕ ಮೌಲ್ಯಗಳನ್ನು ಕಾಪಾಡಬೇಕಾದ ಅವಶ್ಯಕತೆ ಇಂದಿನ ದಿನಗಳಲ್ಲಿ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾಸಿರ್ ಸಾಮಣಿಗೆ, ಸಂಚಾಲಕ, ನಿಯಾಝ್ ಸಾಮಣಿಗೆ, ಪತ್ರಕರ್ತ ಬಶೀರ್ ಕಲ್ಕಟ್ಟ, ಅಡ್ವೋಕೇಟ್ ಫೈಝಲ್, ಪ್ರ. ಕಾರ್ಯದರ್ಶಿ ಇಬ್ರಾಹಿಂ ಖಲೀಲ್, ಸಂಘಟನಾ ಕಾರ್ಯದರ್ಶಿ ಅಬ್ದುಲ್ ಖಾದರ್ ಅಡ್ಕರೆ, ಉದ್ಯಮಿ ಅಜೀಂ ಕಂಕನಾಡಿ, ಮುಸ್ತಫಾ ಪಟ್ಲ,…
UN NETWORKS ತೊಕ್ಕೊಟ್ಟು: ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಚರ್ಚಿನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬವನ್ನು ಭಾನುವಾರ ರಾತ್ರಿ ಆಚರಿಸಲಾಯಿತು. ಚಿತ್ರಗಳು: ಪಚ್ಚು ಪೆರ್ಮನ್ನೂರು
UN NETWORKS ಕೊಲ್ಯ: ಕಾರೊಂದು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಗಾಯಗೊಂಡ ಘಟನೆ ರಾ.ಹೆ.66 ರ ಕೋಟೆಕಾರು ಸಮೀಪ ಸಂಭವಿಸಿದೆ. ಮಂಗಳೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಕಾರು ರಸ್ತೆ ಬದಿಯಲ್ಲಿ ಸೈಕಲಿನಲ್ಲಿ ಬರುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸೈಕಲ್ ಛಿದ್ರವಾಗಿದ್ದು, ಬಾಲಕ ಕಾರಿನ ಗಾಜಿಗೆ ಎಸೆಯಲ್ಪಟ್ಟು ಅಲ್ಲಿಂದ ದೂರದ ಪೊದೆಯೊಂದಕ್ಕೆ ಎಸೆಯಲ್ಪಟ್ಟಿದ್ದಾನೆ. ಸಣ್ಣಪುಟ್ಟ ಗಾಯಗೊಂಡ ಬಾಲಕನನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
UN NETWORKS ಸುರತ್ಕಲ್: ಮುಹಿಯುದ್ದೀನ್ ಜುಮಾ ಮಸೀದಿ, ಈದ್ಗಾ ಜುಮಾ ಮಸೀದಿ ಮತ್ತು ಗೌಸಯಾ ಕಾಂಪ್ಲೆಕ್ಸ್ ಇದರ ಅಡಳಿತಕ್ಕೆ ಒಳಪಟ್ಟ ತಡಂಬೈಲಿನ ನೂರಲ್ ಹುದಾ ಮದ್ರಸ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮೀಲಾದ್ ಸಂದೇಶ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಭಾನುವಾರ ನಡೆಯಿತು. ಮೊಹಮ್ಮದ್ ಇಮ್ತಿಯಾಝ್ ಪ್ರೀತಿಯ ತಾಯಿ ವಿಷಯದಲ್ಲಿ ಮತ್ತು ಅಬ್ದುಲ್ ಜಲೀಲ್ ಸಖಾಫಿ ಪ್ರೀತಿಯ ಪ್ರವಾದಿ ಎಂಬ ವಿಷಯದ ಕುರಿತು ಮಾತನಾಡಿದರು. ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಇಸ್ಮಾಯಿಲ್ ಸ ಅದಿ ದುಅ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಹಿಯುದ್ದೀನ್ ಜುಮಾ ಮಸೀದಿ ಸಮಿತಿ ಹಾಗೂ ನೂರಲ್ ಹುದಾ ಮದ್ರಸ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪಿ.ಎ ಮೊಹಮ್ಮದಾಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭ ವಿಶೇಷ ಮಾಡಿದ ಮಸೀದಿ ಸಿಬ್ಬಂದಿ ಸೇರಿದಂತೆ ಹಲವರನ್ನು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ಸುರತ್ಕಲ್, ಪ್ರ.ಕಾರ್ಯದರ್ಶಿ ಐ.ಎಚ್ ಮೊದ್ದೀನಬ್ಬ, ಹಳೆ ವಿದ್ಯಾರ್ಥಿ ಸಂಘದ…
UN NETWORKS ಉಳ್ಳಾಲ: ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಇವರ ವತಿಯಿಂದ ಮಂಗಳೂರಲ್ಲಿ ನಡೆಸಿದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಿತ್ಯಾಧರ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಆದಿತ್ಯ ಕೆ. ಇವರು ಕಟಾ ಮತ್ತು ಕುಮಿಟೆಯಲ್ಲಿ ಚಿನ್ನದ ಪದಕ ಹಾಗೂ ಕೊಯಮತ್ತೂರಿನಲ್ಲಿ ನಡೆದ ಅಂತರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್ ಶಿಪ್ನ ಕುಮಿಟೆ ಸ್ಪರ್ಧೆಯಲ್ಲಿ ಕಂಚಿನ ಪದಕಗಳಿಸಿರುತ್ತಾರೆ. ಇವರು ಕುತ್ತಾರು ದುರ್ಗಾವಾಹಿನಿ ಮಹಿಳಾ ಮಂಡಲದಲ್ಲಿ ಕರಾಟೆ ಶಿಕ್ಷಕ ದರ್ನಪ್ಪರವರಿಂದ ತರಬೇತಿಯನ್ನು ಪಡೆಯುತ್ತಿದ್ದು, ಆಶಾ ಕುಶಲಪ್ಪ ದಂಪತಿಗಳ ಪುತ್ರ.
UN NETWORKS ಉಳ್ಳಾಲ: ನವೋದಯ ಫ್ರೆಂಡ್ಸ್ ಉಳ್ಳಾಲ ಬೈಲ್ ಇದರ ವತಿಯಿಂದ ಚಿಣ್ಣರಿಗಾಗಿ ಚಿತ್ರಕಲಾ ಮತ್ತು ಆವೆ ಮಣ್ಣಿನ ಕಲಾಕೃತಿ ತರಬೇತಿ ಶಿಬಿರ ತೊಕ್ಕೊಟ್ಟು ಕ್ಲಿಕ್ ಮ್ಯಾರೇಜ್ ಹಾಲ್ನಲ್ಲಿ ಇತ್ತೀಚೆಗೆ ನಡೆಯಿತು. ಹಿರಿಯ ಕಲಾವಿದ ಉಮೇಶ್ ಬೋಳಾರ್ ತರಬೇತಿ ಶಿಬಿರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್, ಯೋಗೇಶ್ ಉಳ್ಳಾಲ್, ಭಾಸ್ಕರ್ ಉಳ್ಳಾಲಬೈಲ್, ನಾರಾಯಣ ಉಳ್ಳಾಲ್, ಶ್ರೀಲತಾ ಉಳ್ಳಾಲ್ ಬೈಲ್, ಮಹೇಶ್ ಉಳ್ಳಾಲ್ ಬೈಲ್, ಸದಾಶಿವ ಉಳ್ಳಾಲ್ ಬೈಲ್, ನವೋದಯ ತಂಡದ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಮತ್ತು ಚಿಣ್ಣರು ಉಪಸ್ಥಿತರಿದ್ದರು. ಈ ಸಂದರ್ಭ ಕಲಾವಿದ ಉಮೇಶ್ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ವಿನಯ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.
UN NETWORKS ಉಳ್ಳಾಲ: ಡೈಮಂಡ್ ಸ್ಪೋಟ್ಸ್ ಕ್ಲಬ್ ಮುಕ್ಕಚ್ಚೇರಿ ಇದರ ಅಧ್ಯಕ್ಷರಾಗಿ ಖಲೀಲ್ ಮುಕ್ಕಚೇರಿ ಆಯ್ಕೆಯಾದರು. ಮಾಸ್ಕ್ ಫುಟ್ ಬಾಲ್ ಮೈದಾನದಲ್ಲಿ ಖಲೀಲ್ ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಖಾಲಿದ್ ಮುಕ್ಕಚೇರಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಸರ್ಮದ್, ಕೋಶಾಧಿಕಾರಿಯಾಗಿ ಇಕ್ಬಲ್ ಇವರುಗಳನ್ನು ಆಯ್ಕೆಮಾಡಲಾಯಿತು.
UN NETWORKS ಉಳ್ಳಾಲ: ಬಂಟ ಸಮಾಜದ ಪ್ರತಿಷ್ಠಿತ ಹೇರೂರು ಮನೆತನದ ದಿ. ಗುಡ್ಡಣ್ಣ ಅಳ್ವ ಅವರ ಪುತ್ರ ಡಾ| ಹೇರೂರು ಮನಮೋಹನ ಆಳ್ವ (84) ಡಿ. 24ರಂದು ನಿಧನ ಹೊಂದಿದರು. ಮೃತರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ತಮಿಳುನಾಡಿನಲ್ಲಿ ವೈದ್ಯಕೀಯ ಪದವಿ ಪಡೆದ ಬಳಿಕ ಸುಮಾರು 55 ವರ್ಷಗಳ ಕಾಲ ಖಾಸಾಗಿ, ಸರಕಾರಿ ವೈದ್ಯರಾಗಿ ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದರು. ತಮಿಳುನಾಡಿನ ತಿರುಚಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸಾವಿರಾರು ಬಡ ರೋಗಿಗಳಿಗೆ ವೈದ್ಯಕೀಯ ಸೇವೆ ನೀಡಿದ್ದ ಅವರು `ಆಳ್ವ ಡಾಕ್ಟರ್’ ಎಂದೇ ಪ್ರಸಿದ್ದಿಯನ್ನು ಪಡೆದಿದ್ದರು. ಇವರ ಗ್ರಾಮೀಣ ವೈದ್ಯಕೀಯ ಸೇವೆಯನ್ನು ಗುರುತಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ವೈದ್ಯಕೀಯ ಜೀವನದೊಂದಿಗೆ ಸಾಮಾಜಿಕವಾಗಿ, ಧಾರ್ಮಿಕವಾಗಿ ಶೈಕ್ಷಣಿಕವಾಗಿ ತೊಡಗಿಸಿಕೊಂಡಿದ್ದ ಅವರು ಕೊಡುಗೈದಾನಿಯಾಗಿದ್ದರು.

