UN NETWORKS ಮಂಗಳೂರು: ಮನುಷ್ಯನಿಗೆ ಎಷ್ಟೇ ಸಂಪತ್ತು ಇದ್ದರೂ, ನೆಮ್ಮದಿ ಎನ್ನುವ ಸಂಪತ್ತು ಇಲ್ಲದಿದ್ದರೆ ಬದುಕೇ ವ್ಯರ್ಥ, ಅಂತಹ ನೆಮ್ಮದಿ ಬದುಕಿನಲ್ಲಿ ಸಿಗಬೇಕಾದರೆ, ದೈವೀ ಅನುಗ್ರಹ ಬೇಕು, ದೈವಿ ಸಂಪತ್ತು ಸಿಗಬೇಕು, ಅದುವೇ ಶಾಶ್ವತ, ಇದಕ್ಕೆ ಭಜನೆ ದೊಡ್ಡ ಸಾಧನ. ಭಜನೆಯಲ್ಲಿ ತನ್ಮಯವಾದರೆ ನಮ್ಮನ್ನು ನಾವೇ ಮರೆಯುತ್ತೇವೆ. ಎಂದು ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಆಶೀರ್ವಚನದ ಮಾತನಾಡಿದರು. ಮಾಡೂರು ಸಾಯಿಧಾಮ ಬಡಾವಣೆಯಲ್ಲಿ, ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಅಖಂಡ ಭಜನಾ ಸಪ್ತಾಹದ ಸಮಾರೋಪಗೊಂಡು, ಭಜನೆಯ ಮೂಲಕ ಬದುಕಿಗೆ ಸಿಗುವ ನೆಮ್ಮದಿಯ ಬಗ್ಗೆ ಅವರು ಆಶೀರ್ವಚನದ ಮಾತಾನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಟೀಲು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಅನುವಂಶಿಕ ಅರ್ಚಕರು ವೇದಮೂರ್ತಿ ಬ್ರಹ್ಮಶ್ರೀ ಅನಂತ ಪದ್ಮನಾಭ ಅಸ್ರಣ್ಣ ಮಾತನಾಡಿ ಶಿರಡಿ ಸಾಯಿಬಾಬಾ ಗುರುಗಳು ಎಂದರೆ,ಕಷ್ಟದಲ್ಲಿರುವವರ ಕಷ್ಟವನ್ನು ಕಳೆಯುವ, ದುಖಃದಲ್ಲಿರುವವರ ದುಖಃವನ್ನು ಕಳೆಯುವ, ಇಂತಹ ಮಹಾತ್ಮರ ಸಾನಿಧ್ಯದಲ್ಲಿ ಅಖಂಡ ಭಜನಾ ಸಪ್ತಾಹ, ಪೂಜ್ಯ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಡೆದಿದೆ,ಇದರಿಂದ ಪರಿಸರಕ್ಕೆ…
Author: UllalaVani
UN NETWORKS ಮುಡಿಪು: ವಿದ್ಯಾಸಂಸ್ಥೆಗಳಲ್ಲಿ ಕಲೆ ಸಂಸ್ಕೃತಿಯನ್ನು ಬೆಳೆಸುವ ಕಾರ್ಯ ನಿರಂತರವಾಗಿ ನಡೆದರೆ ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುತ್ತಿರಬೇಕು ಮತ್ತು ಎಲ್ಲರ ಪ್ರೋತ್ಸಾಹವೂ ಅಗತ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ,ಬೈರಪ್ಪ ಅವರು ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಮುಡಿಪುವಿನಲ್ಲಿ ನಡೆಯುತ್ತಿರುವ ಸೂರಜ್ ಕಲಾಸಿರಿ-2017 ಸಾಂಸ್ಕೃತಿಕ ಉತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಸಾಧನಶ್ರೀ ಪ್ರಶಸ್ತಿ ಪ್ರಧಾನಗೈದು ಮಾತನಾಡಿದರು. ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಇಂತಹ ಕಾರ್ಯಕ್ರಮವನ್ನು ಸೂರಜ್ ಶಿಕ್ಷಣ ಸಂಸ್ಥೆಯು ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಜ್ರಂಭಣೆಯಿಂದ ನಡೆಯುವಂತಾಗಲಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕರುಣಾಕರಣ್, ಹೇಮಂತ್ ಕುಮಾರ್, ಇಲಿಯಾಸ್ ಸ್ಯಾಂಟೀಸ್, ನವೀನ್ ಕಿಲ್ಲೆ, ದೇವದಾಸ್ ರೈ, ಪ್ರಕಾಶ್ ಶೆಟ್ಟಿ, ಶ್ರೀಪತಿ ಭಟ್ ಮೂಡಬಿದ್ರೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರಿನ ಕೌನ್ಸಿಲರ್ ಬಿ.ರೇವತಿ ಸನಿಲ್, ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಸೂರಜ್ ಶಿಕ್ಷಣ ಸಂಸ್ಥೆಯ…
UN NETWORKS ಮುಡಿಪು: ನಾವು ಕಾವ್ಯವನ್ನು ಅರ್ಥೈಸುವಾಗ ಕವಿಯ ಬಗ್ಗೆ ಹಾಗೂ ಆತನ ಸ್ವಭಾವದ ಬಗ್ಗೆಯೂ ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಇದರಿಂದ ಅವರ ರಚನೆಯ ನೈಜತೆಯನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಎಷ್ಟೋ ಸಂದರ್ಭಗಳಲ್ಲಿ ಕವಿಗಳು ಅಜ್ಞಾತರಾಗಿಯೇ ಉಳಿಯುತ್ತಾರೆ, ಇನ್ನು ಕೆಲವು ಸಂದರ್ಭದಲ್ಲಿ ಬರೆದದ್ದು ಯಾರೋ ಕೀರ್ತಿ ಯಾರಿಗೋ ಸಲ್ಲುತ್ತದೆ. ಹಾಗೆಯೇ ಹಿಂದೆ ಯಕ್ಷಗಾನ ಕ್ಷೇತ್ರದಲ್ಲಿ ಕೂಡಾ ಇಂತಹ ಹಲವಾರು ಮಹಾನ್ ಕವಿಗಳು ಇದ್ದರೂ ಅಜ್ಞಾತರಾಗಿ ಉಳಿದಿದ್ದಾರೆ ಎಂದು ಪ್ರಸಿದ್ಧ ಯಕ್ಷಗಾನ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಅವರು ಹೇಳಿದರು. ಅವರು ಮಂಗಳೂರು ವಿಶ್ವ ವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಬುಧವಾರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ನಡೆದ ಯಕ್ಷಮಂಗಳ ಪ್ರಚಾರೋಪನ್ಯಾಸದಲ್ಲಿ `ಮುದ್ದಣ’ ಕವಿಯ ಕುರಿತು ಮಾತನಾಡಿದರು. ಮುದ್ದಣ ಕವಿಯು ರತ್ನಾವತಿ ಕಲ್ಯಾಣ ಹಾಗೂ ಕುಮಾರ ವಿಜಯ ಎಂಬ ಎರಡು ಯಕ್ಷಗಾನ ಪ್ರಸಂಗಗಳನ್ನು ಬರೆದಿದ್ದನು. ಅಪಾರವಾದ ಜ್ಞಾನ…
UN NETWORKS ಉಳ್ಳಾಲ: ಸೋಮೇಶ್ವರ ಗ್ರಾಮ ಪಂಚಾಯತ್ 2017-18ನೇ ಸಾಲಿನ ಅರಿವಿನ ಸಿಂಚನ ಕಾರ್ಯಕ್ರಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಿತು. ಅರಿವಿನ ಸಿಂಚನ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ 14ನೇ ಹಣಕಾಸು ನಿಧಿ ಮತ್ತು ಪಂಚಾಯತ್ ಅನುದಾನದಿಂದ 48 ಫಲಾನುಭವಿಗಳಿಗೆ 2.68 ಲಕ್ಷ ಸಹಾಯ ಧನದ ಚೆಕ್ ವಿತರಣೆಯನ್ನು ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ವಿಶೇಷವಾಗಿ ಸರಕಾರದಿಂದ ವಿಕಲಚೇತನರಿಗೆ ಸಿಗುವಂತಹ ಸವಲತ್ತುಗಳನ್ನು ಸಮರ್ಪಕವಾಗಿ ಬಳಸುವಲ್ಲಿ ಫಲಾನುಭವಿಗಳು ಆಸಕ್ತಿವಹಿಸಬೇಕು,ಸರಿಯಾದ ವೈದ್ಯಕೀಯ ದಾಖಲೆಯೊಂದಿಗೆ ಸಂಭಂಧಪಟ್ಟ ಇಲಾಖೆಯೊಂದಿಗೆ ನಿಖಟ ಸಂಪರ್ಕದಲ್ಲಿರಬೇಕು,ಸ್ವ ಉದ್ಯೋಗ,ದ್ವಿಚರ್ಕ ವಾಹನ,ಪಿಂಚಣಿ,ಹತ್ತು ಹಲವು ಸವಲತ್ತು ಸಿಗುತ್ತಿದ್ದು ಗೌರವಾನ್ವಿತ ಎಲ್ಲಾ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಯೋಜನೆಯ ಸವಲತ್ತುಗಳನ್ನು ವಿಶೇಷವಾಗಿ ಫಲಾನುಭವಿಗಳಿಗೆ ಮುಟ್ಟಿಸುವಲ್ಲಿ ಆಸಕ್ತಿ ಮತ್ತು ಸಹಕಾರ ನೀಡಬೇಕೆಂದು ಹೇಳಿದರು. ಸೋಮೇಶ್ವರ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಧನಲಕ್ಷ್ಮಿ ಗಟ್ಟಿ,ಸೋಮೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಶೀಲಾ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೇಶವ ಪೂಜಾರಿ, ಗುಮಾಸ್ತೆ ರೂಪಾ,ವಿಕಲಚೇತನ ಶರತ್ ಉಪಸ್ಥಿತರಿದ್ದರು
UN NETWORKS ಉಳ್ಳಾಲ: ಪುತ್ತೂರು ಸುನ್ನಿ ಸೆಂಟರ್ ನಲ್ಲಿ ಕರ್ನಾಟಕ ಕಲ್ಚರಲ್ ಫೌಂಡೇಶನ್.(ಕೆಸಿಎಫ್.)ನ ಸೌದಿ ಅರೇಬಿಯಾದಿಂದ ಎಕ್ಷಿಟ್ ಆಗಿ ಬಂದ ಹಾಗೂ ರಜಾವಧಿಯಲ್ಲಿ ಊರಿಗೆ ತೆರಳಿರುವ ಕಾರ್ಯಕರ್ತರಿಂದ ಪ್ರವಾದಿ ಜನ್ಮದಿನದಿಂದ ಪುಳಕಿತಗೊಂಡ ರಬೀಹ್’ಗೆ (ಮೌಲಿದ್)ಪ್ರವಾದಿ ಕೀರ್ತನೆ ಹಾಡುವ ಮೂಲಕ ಶುಭ ವಿದಾಯ ಕೋರಲಾಯಿತು. ಪ್ರಸ್ತುತ ಕಾರ್ಯಕ್ರಮವನ್ನು ತಾಜುದ್ದೀನ್ ಸಖಾಫಿ ಸುಳ್ಯ ಉದ್ಘಾಟಿಸಿ ಕೆಸಿಎಫ್ ದಮ್ಮಾಂ ಝೋನಲ್ ಅದ್ಯಕ್ಷ ಉಮ್ಮರ್ ಫಾರೂಖ್ ಮುಸ್ಲಿಯಾರ್ ಕುಪ್ಪೆಟ್ಟಿ ಅದ್ಯಕ್ಷ ವಹಿಸಿ ಮಾತನಾಡಿ ಪ್ರವಾದಿಯ ಉದಾತ್ತ ಸಂದೇಶವನ್ನು ತಿಳಿ ಹೇಳಿ ಕೆಸಿಎಫ್ ಮತ್ತು ಎಸ್ಸೆಸ್ಸೆಫ್ ಇವೆರಡೂ ಒಂದೇ ನಾಣ್ಯದ ಎರಡು ಮುಖ.ಕೆಸಿಎಫ್’ಗೆ ಜನ್ಮ ನೀಡಿದ ನಾಡು ಸೌದಿ ಅರೇಬಿಯಾ ತದನಂತರ ಜಿಸಿಸಿಯ ಆರು ರಾಷ್ಟ್ರ ದಾಟಿ ಇದೀಗ ಯೂರೋಪ್ ರಾಷ್ಟ್ರಗಳಲ್ಲಿ ವ್ಯಾಪಿಸಿ ಅನಿವಾಸಿ ಭಾರತೀಯರಿಗೆ ಆಸರೆಯ ಸಂಘಟನೆಯಾಗಿ ಒಂದು ವಟವೃಕ್ಷವಾಗಿ ಬೆಳೆದಿದೆ ಎಂದು ಕೆಸಿಎಫ್ ಕಾರ್ಯಚಟುವಟಿಕೆಯ ಬಗ್ಗೆ ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಸೆಸ್ಸೆಫ್ ಪುತ್ತೂರು ಡಿವಿಶನ್ ಅದ್ಯಕ್ಷ ನ್ಯಾಯವಾದಿ ಶಾಕೀರ್ ಹಾಜಿ ಮಿತ್ತೂರು ಮಾತನಾಡಿ ಕೆಸಿಎಫ್…
UN NETWORKS ಮುಡಿಪು: ಪರಂಪರೆಯೊಂದಿಗೆ ಹೊಸತನವನ್ನು ಯಕ್ಷಗಾನಕ್ಕೆ ಪರಿಚಯಿಸುವುದರೊಂದಿಗೆ, ಯಕ್ಷಗಾನದಲ್ಲಿ ಆರೋಗ್ಯಕರ ವಾತಾವರಣವನ್ನು ಸೃಷ್ಟಿ ಮಾಡಿದವರಲ್ಲಿ ಹಿರಿಯ ಬಲಿಪ ನಾರಾಯಣ ಭಾಗವತರು ಪ್ರಮುಖರಾಗಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಹಿರಿಯ ಬಲಿಪರ ಕೊಡುಗೆ ಅಪಾರವಾದುದು ಎಂದು ಮಂಗಳೂರು ಸರಕಾರಿ ರಥಬೀದಿ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ನಾಗವೇಣಿ ಮಂಚಿ ಅವರು ಅಭಿಪ್ರಾಯ ಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ಯಕ್ಷಮಂಗಳ ಪ್ರಚಾರೋಪನ್ಯಾಸ ಕಾರ್ಯಕ್ರಮದಲ್ಲಿ `ಹಿರಿಯ ಬಲಿಪ ನಾರಾಯಣ ಭಾಗವತ’ ವಿಷಯದ ಕುರಿತು ಮಾತನಾಡಿದರು. ಯಕ್ಷಗಾನವು ಪರಂಪರೆಯೊಂದಿಗೆ ಸಮರ್ಥವಾಗಿರಬೇಕು ಎಂಬುದು ಹಿರಿಯ ಬಲಿಪ ನಾರಾಯಣ ಭಾಗವತರ ಆಶಯವಾಗಿತ್ತು. ಇದಕ್ಕಾಗಿ ಅವರು ಯಾವುದೇ ನಿಷ್ಟುರತೆಯನ್ನು ಎದುರಿಸಲು ಸಿದ್ಧರಿದ್ದರು. ಯಕ್ಷಗಾನ ಪದ್ಯಕ್ಕಿಂತ ಹೆಚ್ಚಾಗಿ ದೀರ್ಘವಾಗಿ ಅರ್ಥ ಹೇಳುವುದನ್ನೂ ಅವರು ವಿರೋಧಿಸುತ್ತಿದ್ದರು. ಹಿಂದಿನ ಕಾಲದಲ್ಲಿ ಭಾಗತವರು ಸೇರಿ ಹಿಮ್ಮೇಳ ಕಲಾವಿದರು ಪ್ರದರ್ಶನ ಮುಗಿಯುವ ವರೆಗೆ ನಿಂತುಕೊಂಡೇ ಇರಬೇಕಿತ್ತು. ಆದರೆ…
UN NETWORKS ಉಳ್ಳಾಲ: ಇಸ್ಲಾಹಿ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವವು 20.12.2017 ರವರೆಗೆ ಜರಗಲಿದ್ದು,20.12.2017 ರಂದು ಸಮಯ ಪೂರ್ವಾಹ್ನ ಗಂಟೆ 10.00 ಕ್ಕೆ ಕರ್ನಾಟಕ ಸರ್ಕಾರದ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವರಾದ ಮಾನ್ಯ ಯು.ಟಿ.ಖಾದರ್ ರವರು ಧ್ವಜಾರೋಹಣ ನೆರವೇರಿಸಿ,ಕ್ರೀಡೋತ್ಸವ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತಾಡಿದರು. ಹಾಗೂ ಜಮ್ಮು ಕಾಶ್ಮೀರದಲ್ಲಿ ಜರಗಿದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸ್ಪರ್ಧಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಸಭಾಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷರಾದ ಜಿ.ಅಬ್ದುಲ್ ರಜಾಕ್ರವರು ವಹಿಸಿದರು.ಶಾಲಾ ಆಡಳಿತಾಟ್ರಸ್ಟಿಯವರು ಉಪಸ್ಥಿತರಿದ್ದರು,ವಿದ್ಯಾರ್ಧಿಯಾದ ಅಲಿಮಾಶಾಝ್ಮ್ ರವರು ಅಭಿನಂದಿಸಿದರು.ವಿದ್ಯಾರ್ಥಿಯಾದ ಹಂಝೀನರವರು ವಂದಿಸಿದರು,ಶಿಕ್ಷಕಿಯಾದ ನಿತಾಶ ಹಾಗೂ ಜುಲ್ಫಿ ಕಾಸಿಮ್ ರವರು ಕಾರ್ಯಕ್ರಮ ನಿರೂಪಿಸಿದರು. ಶಾಲಾ ಕಾರ್ಯಕ್ರಮದ ನಂತರ ಸಂಸ್ಥೆಯ ಸಲ್ ಸಬೀಲ್ ಮಸೀದಿಯ ರಸ್ತೆಯನ್ನು ಕರ್ನಾಟಕ ಸರ್ಕಾರದ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವರಾದ ಮಾನ್ಯ ಯು.ಟಿ.ಖಾದರ್ರವರು ಉದ್ಘಾಟಿಸಿ ಮಾತಾನಾಡಿದರು.
UN NETWORKS ಕಿನ್ಯಾ: ಕಿನ್ಯಾ ಗ್ರಾಮದ ಯುವ ಕಾಂಗ್ರೆಸ್ ಸಮಿತಿಯ ರಚನೆಯು ದಿನಾಂಕ 20-12-2017 ರಂದು ರಾತ್ರಿ 7:30 ಕ್ಕೆ ಬೆಳರಿಂಗೆ ಜಂಕ್ಷನ್ನಲ್ಲಿ ಮಂಗಳೂರು ವಿಧಾನ ಕ್ಷೇತ್ರದ ಯುವ ಅಧ್ಯಕ್ಷರಾದ ರವುಫ್ ಸಿ.ಎಂ.ರವರ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯ ಸ್ವಾಗತವನ್ನು ಮಂಗಳೂರು ವಿಧಾನ ಸಬಾ ಕ್ಷೇತ್ರದ ಕಾರ್ಯದರ್ಶಿ ಫಾರೂಕ್ ಕಿನ್ಯಾ ನೆರೆವೇರಿಸಿದರು ನಂತರ . ಯುವ ಕಾರ್ಯಕರ್ತರ ಬಗ್ಗೆ ಸವಿಸ್ತಾರವಾಗಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬುಸಮೀರ್ ಪಜೀರ್ ಮಾತನಾಡಿದರು.ಕಿನ್ಯಾ ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಅನ್ಸಾರ್ ಕಿನ್ಯ ಸಭೆಯ ಸಂಪೂರ್ಣ ಉಸ್ತುವಾರಿ ವಹಿಸಿಕೊಂಡು ಸಮಿತಿಯ ಪಧಾಧಿಕಾರಿಗಳನ್ನು ಆಯ್ಕೆಮಾಡಿ ಪಕ್ಷದ ಧ್ವಜ ಮತ್ತು ಆದೇಶ ಪತ್ರ ನೀಡಿ ಗೌರವಿಸಿದರು. ಮುಂದಿನ ದಿನಗಳಲ್ಲಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಿ ವಾರ್ಡ್ ಸಮಿತಿಗಳನ್ನು ರಚಿಸಲು ಕರೆನೀಡಿದರು. ಮುಖ್ಯ ಅತಿಥಿಯಾಗಿ ಬೆಳರಿಂಗೆ ವಾರ್ಡಿನ ಕಾಂಗ್ರೆಸ್ ಅಧ್ಯಕ್ಷರಾದ ಉಮರ್ ಕುಞ ಹಾಗೂ ಅಲ್ಪಸಂಖ್ಯಾತ ಸದಸ್ಯರಾದ ಅಬೂಬಕರ್ ಹಾಜಿ ಕಲ್ಲಾಂಡ ಉಪಸ್ತಿತಿದ್ದರು. ಕೊನೆಯಲ್ಲಿ ನೂತನವಾಗಿ ಆಯ್ಕೆಯಾದ ಕಿನ್ಯ ಯುವ…
UN NETWORKS ಉಳ್ಳಾಲ:ಭಗವಾನ್ ಶ್ರೀರಾಮನನ್ನು ವರ್ಷಗಳಿಂದ ಕಟಕಟೆಯಲ್ಲಿ ನಿಲ್ಲಿಸುತ್ತಿರುವುದು ಖೇದಕರ ಸಂಗತಿ, ಮತ್ತೆ ವಿಚಾರಣೆಯನ್ನು ಮುಂದೂಡಲು ಪ್ರೇರೇಪಿಸುವ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ನಂತಹ ಹಿಂದೂ ಜನರೇ ಇದರಲ್ಲಿ ತೊಡಗಿಕೊಂಡಿರುವುದು ಹಿಂದು ಸಮಾಜದ ದುರಾದೃಷ್ಟ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ. ಅವರು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ , ಕುಂಪಲ ಹಿಂದು ಜಾಗರಣಾ ವೇದಿಕೆ ಓಂ ಶಕ್ತಿ ಘಟಕದ ಆಶ್ರಯದಲ್ಲಿ ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವ ಅಂಗವಾಗಿ ಬುಧವಾರ ನಡೆದ 8 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಅಯೋಧ್ಯೆ ಚಳವಳಿ ದೇಶದ ಇತಿಹಾಸಕ್ಕೆ ಬಹುದೊಡ್ಡ ಸವಾಲಾಗಿದೆ. ದೇಶದ ಹಿತ ಕಾಯುವ ಪಕ್ಷ ಆಡಳಿತಕ್ಕೆ ಬರಲು ಚಳವಳಿಯಿಂದ ಸಾಧ್ಯವಾಗಿದೆ. ಇದೀಗ ಆಡಳಿತ ಕೈಯಲ್ಲಿರುವ ಸಂದರ್ಭ ಅಯೋಧ್ಯೆಯಲ್ಲಿ ಪವಿತ್ರ ರಾಮಜನ್ಮಭೂಮಿ ರಚಿಸಿಯೇ ಸಿದ್ದ. ಅದಕ್ಕಾಗಿ ಹಿಂದು ಸಮಾಜ ಒಗ್ಗಟ್ಟಾಗುವ ನೆಲೆಯಲ್ಲಿ ಇಂತಹ ಕಾರ್ಯಕ್ರಮ…
UN NETWORKS ಉಳ್ಳಾಲ: ಓಖಿ ಚಂಡಾಮಾರುತದ ಹಿನ್ನೆಲೆಯಲ್ಲಿ ಉಳ್ಳಾಲದಲ್ಲಿ ಕಂಡುಬಂದ ಸಮುದ್ರದ ಅಲೆಗಳ ನರ್ತನಕ್ಕೆ ಎರಡು ಮನೆಗಳು ಸಮುದ್ರ ಪಾಲಾದರೆ, ರೆಸಾರ್ಟಿಗೆ ನೀರು ನುಗ್ಗಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಂದಿ ದಿಕ್ಕು ಪಾಲಾಗಿ ಓಡಿ ಪಾರಾಗಿ , ಉಳ್ಳಾಲ, ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಹಲವು ಮನೆಗಳಿಗೆ ಅಲೆಗಳು ಅಪ್ಪಳಿಸಿ ಹಾನಿಗೀಡಾದ ಘಟನೆ ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಗ್ಗಿನವರೆಗೆ ಸಂಭವಿಸಿದೆ. ಉಳ್ಳಾಲ ಒಂಭತ್ತುಕೆರೆಯ ಸೀಸೈಡ್ ನಿವಾಸಿ ಫಿಲೋಮಿನಾ ಫೆರ್ನಾಂಡಿಸ್ ಮತ್ತು ಎವರೆಸ್ಟ್ ಅಲ್ಫೋನ್ಸ್ ಎಂಬವರಿಗೆ ಸೇರಿದ 30 ವರ್ಷಗಳ ಹಳೇಯ ಮನೆ ಸಂಪೂರ್ಣವಾಗಿ ಸಮುದ್ರಪಾಲಾಗಿವೆ. ಉಳ್ಳಾಲದ ಮೊಗವೀರಪಟ್ನ ಸಮೀಪದ ಸಮ್ಮರ್ ಸ್ಯಾಂಡ್ ರೆಸಾರ್ಟ್ನಲ್ಲಿ ಶನಿವಾರ ತಡರಾತ್ರಿ ನಡೆಯುತ್ತಿದ್ದ ಸಮಾರಂಭಕ್ಕೆ ನೀರು ನುಗ್ಗಿ , ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಂದಿ ಆತಂಕಗೊಂಡು ದಿಕ್ಕುಪಾಲಾಗಿ ಓಡಿರುವ ಘಟನೆಯೂ ನಡೆದಿದೆ. ಚರ್ಚಿನಿಂದ ಬರುವಷ್ಟರಲ್ಲಿ ಮನೆಯೇ ಇರಲಿಲ್ಲ : ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಚರ್ಚಿನಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ವಿಶೇಷ ಪೂಜೆಯ ನಿಮಿತ್ತ ಶನಿವಾರ ಸಂಜೆ ಎರಡು ಮನೆಗಳ ಉರ್ಬನ್ ಫೆರ್ನಾಂಡಿಸ್, ಫಿಲೋಮಿನಾ…

