UN NETWORKS ಮಂಗಳೂರು: ನಂತೂರು ಸರ್ಕಲ್ ಬಳಿ ಮಂಗಳವಾರ ಸಂಜೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ನಿವಾಸಿಯಾಗಿರುವ ಸಮರೀನ್(26) ಎಂಬವರೇ ಮೃತಪಟ್ಟ ದುರ್ದೈವಿ. ಈಚರ್ ಟೆಂಪೋವೊಂದು ಸ್ಕೂಟರ್ ಗೆ ಹಿಂದಿನಿಂದ ಬಂದು ಗುದ್ದಿದ ಪರಿಣಾಮ ಸಮರೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ಸಮರೀನ್ ಅವರ ಪತಿ ಮೊಹಮ್ಮದ್ ಸಮೀರ್(30) ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
Author: UllalaVani
UN NETWORKS ಮಂಗಳೂರು: ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆಯಾದ ಹಿನ್ನೆಲೆಯಲ್ಲಿ ಮುಂದಿನ ಎರಡು ಕಾಲ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜೂನ್ 14ರ ತನಕ ಮಂಗಳೂರು ಮತ್ತು ಮೂಡಿಗೆರೆ ಎರಡೂ ಕಡೆಗಳಿಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ತಿಳಿಸಿದರು. ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ವಾಹನ ಸವಾರರು ರಸ್ತೆ ಮಧ್ಯೆ ಸಿಲುಕಿ ಪರದಾಡುವಂತಾಯಿತು. ಮಂಗಳವಾರ ಸಂಜೆ ವೇಳೆಗೆ ರಸ್ತೆ ಸಂಚಾರಕ್ಕೆ ತೆರವುಗೊಳಿಸಲಾಯಿತು. ಪೊಲೀಸರು, ಅಧಿಕಾರಿಗಳು, ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹಾಗೂ ಇತರರು ಸಿಲುಕಿದ್ದ ಪ್ರಯಾಣಿಕರಿಗೆ ಆಹಾರದ ವ್ಯವಸ್ಥೆ ಮಾಡಿದರು.
UN NETWORKS ಉಳ್ಳಾಲ: ಉಳ್ಳಾಲವನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಉಳ್ಳಾಲ ನಗರಸಭೆ ಯೋಜನೆ ರೂಪಿದ್ದು, ಈ ಯೋಜನೆಯನ್ನು ಸಾಕಾರಗೊಳಿಸಲು ನಗರಸಭಾ ವ್ಯಾಪ್ತಿಯ ಜನರ ಸಹಕಾರ ಅತೀ ಅಗತ್ಯ ಎಂದು ಉಳ್ಳಾಲ ನಗರಸಭಾ ಪೌರಾಯುಕ್ತೆ ವಾಣಿ ವಿ.ಆಳ್ವ ಅಭಿಪ್ರಾಯಪಟ್ಟರು. ಉಳ್ಳಾಲ ನಗರಸಭಾ ವತಿಯಿಂದ ಪರಿಸರ ಸಪ್ತಾಹದ ಅಂಗವಾಗಿ ಮಂಗಳವಾರ ಪರಿಸರ ಸಂರಕ್ಷಣೆಯ ಬಗ್ಗೆ ತೊಕ್ಕೊಟ್ಟು ಬಸ್ಸು ನಿಲ್ದಾಣದ ಬಳಿ ನಡೆದ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಉಳ್ಳಾಲವನ್ನು ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿದೆ. ಕಸ ವಿಲೇವಾರಿ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಸಿಲು ಬೀದಿ ನಾಟಕದಂತಹ ಮಾದ್ಯಮವನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು. ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್ ಕುಂಇಮೋನು ಮಾತನಾಡಿ ನಗರಸಭೆಯನ್ನು ಸ್ವಚ್ಛ ನಗರಸಭೆ ಮಾಡುವಲ್ಲಿ ಕೌನ್ಸಿಲರ್ಗಳೊಂದಿಗೆ ಜನರ ಸಹಭಾಗಿತ್ವ ಅಗತ್ಯವಿದೆ ಎಂದರು. ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಪ್ರೌಢಶಾಲಾ ವಿದ್ಯಾರ್ಥಿಗಳು ತೊಕ್ಕೊಟ್ಟು…
UN NETWORKS ಉಳ್ಳಾಲ: ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಪ್ರದಾನಿ ಆಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಶೀಘ್ರ ಸುದಾರಣೆಯಾಗಲಿ ಎಂದು ಕುಂಪಲ ಬಾಲಕೃಷ್ಣ ಮಂದಿರದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಶೇಷ ಪೂಜೆಯ ನೇತೃತ್ವ ವಹಿಸಿದ್ದ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಅಜಾತಶತ್ರು,ಉತ್ತಮ ಆಡಳಿತ ನೀಡಿದ ,ಪ್ರಾಮಾಣಿಕತೆಯ ಇನ್ನೊಂದು ಹೆಸರು ಅಟಲ್ ಬಿಹಾರಿ ವಾಜಪೇಯಿ. ಅವರು ಪ್ರಧಾನಿಯಾಗಿದ್ದಾಗ ಮಾಡಿದ ಅಭಿವೃದ್ದಿ ಕಾರ್ಯಕ್ರಮಗಳು ಜನಮಾನಸದಲ್ಲಿ ಇಂದಿಗೂ ಸ್ಮರಣೀಯವಾಗಿದೆ, ಅರೋಗ್ಯ ಏರುಪೇರಾಗಿದೆ ಎಂಬ ವಿಷಯ ತಿಳಿದು ಅವರ ಅಭಿಮಾನಿಯಾದ ನಮಗೆ ಬಹಳಷ್ಟು ಆತಂಕವಾಯಿತು. ಆದ್ದರಿಂದ ಅವರ ಆರೋಗ್ಯ ಸುಧಾರಣೆಗಾಗಿ ಕುಂಪಲ ಬಾಲಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆ ನಡೆಸಿದ್ದೇವೆ ಎಂದು ಹೇಳಿದರು. ಸೋಮೇಶ್ವರ ಪಂಚಾಯತ್ ಮಾಜಿ ಅಧ್ಯಕ್ಷ ಮೋಹನ್ ಶೆಟ್ಟಿ, ಮಾಜಿ ಸದಸ್ಯರಾದ ಶಿವಾನಂದ, ಅಶೋಕ್ ಕುಂಪಲ, ಗ್ರಾಮ ಪಂಚಾತ್ ಸದಸ್ಯೆ ಕುಮುದ ಅಡಪ, ಬಾಲಕೃಷ್ಣ ಮಂದಿರದ ಉತ್ಸವ ಸಮಿತಿಯ ಗೌರವ ಅಧ್ಯಕ್ಷ ಸೋಮಶೇಕರ್. ಕೆ, ಉಳ್ಳಾಲ ಪುರಸಭೆ…
UN NETWORKS ಕೋಟೆಕಾರು: ಶಿಕ್ಷಣಕ್ಕೆ ಸರಕಾರ ಸೇರಿದಂತೆ ಸಂಘ ಸಂಸ್ಥೆಗಳು ಉತ್ತೇಜನ ನೀಡುತ್ತಿದ್ದು, ಶಿಕ್ಷಣಕ್ಕೆ ಸಿಗುವ ಸವಲತ್ತನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉನ್ನತ ಸ್ಥಾನಕ್ಕೆ ಹೋಗುವುದರೊಂದಿಗೆ ವಿದ್ಯೆ ಕಲಿಸಿದ ಶಾಲೆ ಮತ್ತು ಸಹಕಾರ ನೀಡಿದ ಸಂಸ್ಥೆಗಳನ್ನು ಮರೆಯಬಾರದು ಎಂದು ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶೇಖರ ಕನೀರುತೋಟ ಅಭಿಪ್ರಾಯಪಟ್ಟರು. ಸ್ಪೂರ್ತಿ ಸೇವಾ ಬಳಗ ಮಾಡೂರು ಹಾಗೂ ಕೊರಗಜ್ಜ ಸೇವಾ ಸಮಿತಿ ಮಾಡೂರು ಇದರ ಜಂಟಿ ಆಶ್ರಯದಲ್ಲಿ ದ.ಕ.ಜಿ.ಪ. ಹಿ.ಪ್ರಾ ಶಾಲೆ ಮಾಡೂರು ಇಲ್ಲಿನ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಡೂರು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ನಾಯ್ಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಟೆಕಾರು ಪಟ್ಟಣ ಪಂಚಾಯತ್ ಕೌನ್ಸಿಲರ್ಗಳಾದ ಜಯಶ್ರೀ, ಪ್ರಫುಲ್ಲ ದಾಸ್ ಕನೀರುತೋಟ, ಸ್ಪೂರ್ತಿ ಸೇವಾ ಬಳಗದ ಅಧ್ಯಕ್ಷ ರಮೇಶ್ ಕೊಂಡಾಣ, ಕೊರಗಜ್ಜ ಸೇವಾ ಟ್ರಸ್ಟ್ ಅಧ್ಯಕ್ಷ ಮಾಧವ ಶೆಟ್ಟಿ ಕುಸಾಲ್ನಗರ, ರೋಹಿತ್ ಬಿ. ಕುಲಾಲ್ ಮಾಡೂರು, ಚಿದಾನಂದ ಮಡ್ಯಾರು, ಸಂಪತ್ ಭಂಡಾರ…
UN NETWORKS ಸೋಮೇಶ್ವರ: ದೇಶದ ಮಾಜಿ ಪ್ರಧಾನಿ, ಭಾರತ ಕಂಡ ಅಧ್ಬುತ ಮೇಧಾವಿ ರಾಜಕಾರಣಿ, ದೇಶದ ಅಭಿವೃದ್ಧಿಯ ಹರಿಕಾರ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯ ಆರೋಗ್ಯ ದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಾಗಿದ್ದಾರೆ. ವಿಶ್ವದೆದುರು ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಏರಿಸಿದ ಮಹಾನ್ ನಾಯಕನ ಆರೋಗ್ಯ ಶೀಘ್ರವಾಗಿ ಸುದಾರಿಸಿ ಗುಣಮುಖರಾಗಿಲಿ ಎಂದು ದೇಶ ಭಕ್ತ ಸಂಘಟನೆ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟು ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಿಶೇಷವಾಗಿ ಪ್ರಾರ್ಥಿಸಲಾಯಿತು. ಈ ಸಂಧರ್ಭದಲ್ಲಿ ಗೌರವ ಸಲಹೆಗಾರರಾದ ಆನಂದ್ ಕೆ ಅಸೈಗೋಳಿ, ಉಪಾಧ್ಯಕ್ಷರಾದ ರವಿ ಶೆಟ್ಟಿ ಮಾಡೂರು, ಮೋಹನ್ ಸಾಲ್ಯಾನ್, ಗೋಪಿನಾಥ್ ಬಗಂಬಿಲ, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಪ್ರಮುಖರಾದ ಪ್ರವೀಣ್ ಎಸ್.ಕುಂಪಲ, ಹರೀಶ್ ಅಂಬ್ಲಮೊಗರು,ರಾಕೇಶ್ ಬೈಪಾಸ್, ಕಿರಣ್ ಕೊಲ್ಯ, ಪ್ರವೀಣ್ ಬಸ್ತಿ ಮತ್ತಿತರರು ಉಪಸ್ಥಿತರಿದ್ದರು.
UN NETWORKS ಬಂಟ್ವಾಳ: ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿ ಸಂದರ್ಭದಲ್ಲಿ ತುಳು ಸಿನಿಮಾ ನಟ ಸುರೇಂದ್ರ ಬಂಟ್ವಾಳ ಚಿತ್ರಮಂದಿರ ಸಮೀಪ ತಲವಾರು ಝಳಪಿಳಿಸಿ ಅಟ್ಟಾಡಿಸಿ ಬೆದರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಜರಂಗದಳದ ಕಾರ್ಯಕರ್ತ ಭುವಿತ್ ಶೆಟ್ಟಿ ನೇತೃತ್ವದ ಗುಂಪು ಬಡ್ಡಕಟ್ಡೆಯ ಕ್ಷೌರದಂಗಡಿಗೆ ಭಾನುವಾರ ನುಗ್ಗಿ ಅಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಸುರೇಂದ್ರ ಭಂಡಾರಿ ನೇತೃತ್ವದ ಗುಂಪು ಭುವಿತ್ ಶೆಟ್ಟಿ ಗುಂಪಿನವರ ಮೇಲೆ ಸೋಮವಾರ ಹಲ್ಲೆಗೆ ಯತ್ನಿಸಿದೆ. ಈ ಸಂದರ್ಭದಲ್ಲಿ ಸುರೇಂದ್ರ ತಲವಾರು ಹಿಡಿದು ತಿರುಗಾಡುತ್ತಾ ಬೆದರಿಕೆ ಹಾಕುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಬಿಜೆಪಿ ಕಾರ್ಯಕರ್ತರಾದ ಗಣೇಶ್ ರೈ ಮಾಣಿ ಹಾಗೂ ಪುಷ್ಪರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರೇಂದ್ರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
UN NETWORKS ತಲಪಾಡಿ: ಶಾಲಾ ಕಾಲೇಜು ಗಳು ಕೃಷಿಯತ್ತ ಮುಖ ಮಾಡುವುದು ಇತ್ತೀಚಿನ ದಿನಗಳ ಉತ್ತಮ ಬೆಳವಣಿಗೆ. ಈ ಮೂಲಕ ಮಕ್ಕಳಿಗೆ ಕೃಷಿ ಸಂಸ್ಕೃತಿಯ ಪರಿಚಯ ಕಾರ್ಯ ನಡೆಯುತ್ತಿದೆ. ಇಲ್ಲೊಂದು ಶಾಲೆ ಇನ್ನೂ ಒಂದು ಹೆಜ್ಜೆ ಮುಂದಿರಿಸಿ ಸಾವಯವ ಕೃಷಿಯನ್ನು ಒಂದು ವಿಷಯವಾಗಿ ಅಳವಡಿಸಿಕೊಂಡು ಕಡ್ಡಾಯ ಕೃಷಿ ಶಿಕ್ಷಣಕ್ಕೆ ಮುಂದಾಗಿದೆ. ತಲಪಾಡಿಯ ದೇವಿನಗರದಲ್ಲಿರುವ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ 5ನೇ ತರಗತಿಯಿಂದ 10ನೇ ತರಗತಿವರೆಗಿನ ಸುಮಾರು 900 ವಿದ್ಯಾರ್ಥಿಗಳು ಕೃಷಿ ಪಾಠದ ಲಾಭ ಪಡೆಯಲಿದ್ದಾರೆ. ಪ್ರತೀ ತರಗತಿಗೂ ಪಠ್ಯಕ್ರಮವನ್ನು ಕೃಷಿ ವಿಜ್ಞಾನಿಗಳ ಸಹಕಾರದೊಂದಿಗೆ ಶಾಲಾ ಆಡಳಿತ ರಚಿಸಿದೆ. ಒಂದು ತರಗತಿಯಲ್ಲಿ ಥಿಯರಿ ಮತ್ತು ಎರಡು ತರಗತಿಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಪ್ರತ್ಯೇಕ ಪರೀಕ್ಷೆಯೂ ಇದ್ದು, ಪ್ರತೀ ವಿದ್ಯಾರ್ಥಿಗೆ ಥಿಯರಿ ಮತ್ತು ಪ್ರಾಯೋಗಿಕ ಕಾರ್ಯಕ್ಕೆ ಅಂಕ ನಿಗದಿಪಡಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಸುಷ್ಮಾ ದಿನಕರ್ ಹೇಳಿದ್ದಾರೆ. ಕೃಷಿ ಪದವೀಧರರಿಂದ ಪಾಠ ಕೃಷಿ ಪಾಠಕ್ಕೆಂದೇ ಇಲ್ಲಿ ಏಳು ಮಂದಿ ಕೃಷಿ ಪದವೀಧರರಿದ್ದಾರೆ. ಕೃಷಿ ವಿಜ್ಞಾನ ಸ್ನಾತಕೋತ್ತರ…
UN NETWORKS ಅಂಬ್ಲಮೊಗರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಅಡು ಎಂಬಲ್ಲಿ ನಿರ್ಮಾಣಗೊಳ್ಳುತ್ತಿರುವ ಮುನ್ನೂರು – ಅಂಬ್ಲಮೊಗರು ಸಂಪರ್ಕ ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಪರ್ಯಾಯ ರಸ್ತೆ ಈಗಾಗಲೇ ಮುಳುಗಡೆಯಾಗಿದೆ. ಸಂಚಾರ ಸ್ಥಗಿತಗೊಳ್ಳುವ ಭೀತಿಯಲ್ಲಿ ಸ್ಥಳೀಯ ಜನರಿದ್ದಾರೆ. ಅಂಬ್ಲಮೊಗರು ಸಹಿತ ಸುತ್ತಮುತ್ತಲಿನ ಪ್ರದೇಶದಿಂದ ಮುನ್ನೂರು ಸಂಪರ್ಕಿಸುವ ಏಕೈಕ ಸಂಪರ್ಕ ಸೇತುವೆ ಇದಾಗಿದ್ದು, ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಕೆಲ ದಿನಗಳ ಹಿಂದೆ ಸೇತುವೆ ಅಗಲೀಕರಣ ಕಾಮಗಾರಿ ಪ್ರಾರಂಭಗೊಂಡಿತ್ತು. ಇಲ್ಲಿ ತಗ್ಗು ಪ್ರದೇಶಗಳಿರುವುದರಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಇವು ಜಲಾವೃತಗೊಂಡಿವೆ?. ಪರ್ಯಾಯ ರಸ್ತೆಯ ಮೂಲಕ ಕೃತಕ ನೆರೆ ನೀರು ಹರಿಯುತ್ತಿರುವುದರಿಂದ ರಸ್ತೆ ಸಂಪೂರ್ಣ ನೀರು ತುಂಬಿ ಹರಿಯುತ್ತಿದ್ದು ಸಂಚಾರಕ್ಕೆ ತಡೆಯಾಗಿದೆ. ಪರದಾಡುತ್ತಿರುವ ಚಾಲಕರು ಪರ್ಯಾಯ ರಸ್ತೆಯಲ್ಲಿ ಘನ ವಾಹನಗಳು ಶ್ರಮಪಟ್ಟು ಸಂಚರಿಸಿದರೆ, ದ್ವಿಚಕ್ರ ವಾಹನ ಚಾಲಕರಿಗೆ ಸಂಚರಿಸುವುದೇ ದುಸ್ತರವಾಗಿದೆ. ರಭಸವಾಗಿ ನೀರು ಮಾರ್ಗದಲ್ಲಿ ಹರಿಯುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ವಾಹನವನ್ನು ಮುಂದಕ್ಕೆ ಕೊಂಡೊಯ್ಯಲಾಗದೆ ಪರದಾಡುತ್ತಿದ್ದಾರೆ. ಪರ್ಯಾಯ ರಸ್ತೆಯು…
UN NETWORKS ಉಳ್ಳಾಲ: ಕ್ಷೇತ್ರದ ಸರ್ವ ಧರ್ಮದ ಜನರ ಬೆಂಬಲದಿಂದ ಶಾಸಕನಾಗಿ ಆಯ್ಕೆಯಾಗುವ ಮೂಲಕ ಸಚಿವನಾಗುವ ಅವಕಾಶ ಸಿಕ್ಕಿದ್ದು, ಜನರ ಆಶೋತ್ತರದಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟಿನ ಪೆರ್ಮನ್ನೂರು ಸಂತ ಸೆಬಾಸ್ತಿಯನ್ನರ ಚರ್ಚ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಗೌರವ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಚರ್ಚ್ನ ಸಹಾಯಕ ಧರ್ಮಗುರು ಪಾ| ಸ್ಟ್ಯಾನಿ ಪಿಂಟೋ ಖಾದರ್ ಅವರನ್ನು ಗೌರವಿಸಿದರು.ಈ ಸಂದರ್ಭದಲ್ಲಿ ಸಹಾಯಕ ಧರ್ಮಗುರು ಪಾ| ಲೈಝಿಲ್ ಡಿ.ಸೋಜ, ಸಿಸ್ಟರ್ ಕಾರ್ಮಿಲ್ ಮಿಸ್ಕಿತ್, ಹೋಲಿ ಏಂಜೆಲ್ಸ್ ಶಾಲಾ ಮುಖ್ಯಸ್ಥೆ ಸಿಸ್ಟರ್ ಸೆವರಿನ್ ಫೆರ್ನಾಂಡೀಸ್, ಚರ್ಚ್ನ ಕಾರ್ಯಕಾರಿ ಸಮಿತಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಕಣಚೂರು ಮೋನು, ಸದಾಶಿವ ಉಳ್ಳಾಲ, ತಾಲೂಕು ಪಂಚಾಯತ್ ಆಧ್ಯಕ್ಷ ಮಹಮ್ಮದ್ ಮೋನು, ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್ ಕುಂಇಮೋನು, ಬಾಝಿಲ್ ಡಿ.ಸೋಜ, ರಿಚ್ಚಾರ್ಡ್ ವೇಗಸ್ ಧರ್ಮನಗರ, ಡೆನ್ನಿಸ್ ಡಿ.ಸೋಜ, ಶಿವಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

