Author: UllalaVani

Kannada News From Coastal Karnataka

UN NETWORKS ತಲಪಾಡಿ: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯವೇ ಶ್ರೀರಕ್ಷೆಯಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಯೊಂದಿಗೆ ಅಧಿಕಾರ ನಡೆಸಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ತಲಪಾಡಿ ಸಮೀಪದ ಕೆ.ಸಿ.ರೊಡ್ ಜಂಕ್ಷನ್‍ನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಧ್ವಜ ನೀಡುವ ಮೂಲಕ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿಯ ಕಲ್ಪನೆಯಂತೆ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವೈಫಲ್ಯವನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಕಾಂಗ್ರೆಸ್‍ನ ಕಾರ್ಯಕರ್ತರು ನಡೆಸಲಿದ್ದು, ರಾಜ್ಯದ ಜನಪರ ಯೋಜನೆಗಳಿಂದ ಕಾಂಗ್ರೆಸ್‍ಗೆ ಜನರು ಬೆಂಬಲ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯರಾದ ಸುರೇಖಾ ಚಂದ್ರಹಾಸ್, ಸಿದ್ಧಿಕ್ ತಲಪಾಡಿ, ಮಾಜಿ ಸದಸ್ಯ ಮಹಮ್ಮದ್ ಮುಸ್ತಾಫ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್…

Read More

UN NETWORKS ಉಳ್ಳಾಲ: ನಿರಂತರ ಶಿಕ್ಷಣ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರ ಕೌಶಲ್ಯಾಭಿವೃದ್ಧಿಗೆ ಪೂರಕವಾಗಿದ್ದು, ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವ ಮೂಲಕ ವಿಜ್ಞಾನಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ| ಎಂ.ಎಸ್. ಮೂಡಿತ್ತಾಯ ಅಭಿಪ್ರಾಯಪಟ್ಟರು. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಎ.ಬಿ. ಶೆಟ್ಟಿ ಸ್ಮಾರಕ ದಂತವಿಜ್ಞಾನ ಮಹಾವಿದ್ಯಾಲಯದ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಮತ್ತು ಎಂಡೋಡಾಂಟಿಕ್ಸ್ ವಿಭಾಗದ ಆಶ್ರಯದಲ್ಲಿ ಕಾಲೇಜಿನ ವಿಂಶತಿ ಭವನದಲ್ಲಿ `ಕರೆಂಟ್ ಅಪ್‍ಡೇಟ್ಸ್ ಆನ್ ಫಂಡಮೆಂಟಲ್ಸ್ ಆಫ್ ಎಂಡೋಡಾಂಟಿಕ್ಸ್’ ವಿಚಾರದ ಮೇಲೆ ನಡೆದ ನಿರಂತರ ದಂತ ವೈದ್ಯಕೀಯ ಶಿಕ್ಷಣ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಎ.ಬಿ. ಶೆಟ್ಟಿ ಸ್ಮಾರಕ ದಂತವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಕೃಷ್ಣ ನಾಯಕ್, ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕ ಡಾ| ರಾಜೇಂದ್ರ ಪ್ರಸಾದ್, ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್‍ನ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಮತ್ತು ಎಂಡೋಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕಿ ಡಾ| ಶಶಿ ರಶ್ಮಿ ಆಚಾರ್ಯ, ಜೈಪುರದ ಮಹಾತ್ಮಗಾಂಧಿ ದಂತ ವಿಜ್ಞಾನ ಕಾಲೇಜಿನ ಕನ್ಸರ್ವೇಟಿವ್…

Read More

UN NETWORKS ಉಳ್ಳಾಲ: ಗ್ರಾಮೀಣ ಪ್ರದೇಶದ ಸೇವೆಯೊಂದಿಗೆ ನಾಯಕತ್ವ ಗುಣ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ಎಂದು ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಡೀನ್ ಡಾ| ಸತೀಶ್ ಕುಮಾರ್ ಭಂಡಾರಿ ಅಭಿಪ್ರಾಯಪಟ್ಟರು. ನಿಟ್ಟೆ ಉಷಾ ನರ್ಸಿಂಗ್ ಕಾಲೇಜು, ನಿಟ್ಟೆ ವಿಶ್ವ ವಿದ್ಯಾನಿಲಯದ ಎನ್‍ಎಸ್‍ಎಸ್ ಘಟಕದ ಆಶ್ರಯದಲ್ಲಿ ಪಜೀರುವಿನ ಅನುದಾನಿತ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಎನ್‍ಎಸ್‍ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೋ| ಡಾ| ಫಾಟಿಮ ಡಿ’ಸಿಲ್ವಾ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷ ಎಂ. ಸೀತಾರಾಮ ಶೆಟ್ಟಿ, ನಿಟ್ಟೆ ವಿಶ್ವ ವಿದ್ಯಾನಿಲಯದ ಎನ್.ಎಸ್.ಎಸ್ ಸಂಯೋಜನಾಧಿಕಾರಿ ಡಾ| ಸುಮಲತ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಇನೆಟ್ ಡಿ’ಸೋಜ, ಎಸ್‍ಡಿಎಮ್‍ಸಿ ಅಧ್ಯಕ್ಷೆ ಜ್ಯೋತಿ ಪ್ರೆಸಿಲ್ಲಾ ಕ್ತಾಸ್ತಾ, ಪಜೀರು ವಾರ್ಡ್ ಸದಸ್ಯೆ ಫ್ಲೋರಿನ್, ಶೇಖರ್, ವೀಣಾ, ಕ್ಷೇಮ ಮಾನಸಿಕ ವಿಭಾಗದ ಮುಖ್ಯಸ್ಥ ಡಾ| ಸತೀಶ್ ರಾವ್, ಉಪ…

Read More

UN NETWORKS ಉಳ್ಳಾಲ : ಸಾಮಾಜಿಕ ಜೀವನದಲ್ಲಿ ಕತ್ತಲೆಯನ್ನು ಹೋಗಲಾಡಿಸಿ ಬೆಳಕಿನಂತೆ ನಮಗೆ ಸಾಧ್ಯವಾದಷ್ಟು ಮಟ್ಟಿಗೆ ಇನ್ನೊಬ್ಬರ ಕಷ್ಟಗಳಲ್ಲಿ ಭಾಗಿಯಾಗುವ ರೀತಿಯಲ್ಲಿ ಕೆಲಸವನ್ನು ಮಾಡಿದಾಗ ಸುಂದರ ಸಮಾಜದ ನಿರ್ಮಾಣ ಸಾಧ್ಯ ಎಂದು ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅಭಿಪ್ರಾಯಪಟ್ಟರು. ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾದ್ಯಮ ಶಾಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕವಾಗಿ ಹಣತೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ ಜೆಸಿಐ ಮಂಗಳಗಂಗೂತ್ರಿಯ ಅಧ್ಯಕ್ಷ ಬಾದ್ ಷಾ ಸರ್ವಧರ್ಮ ಸಮನ್ವಯತೆಯನ್ನು ಸದಾ ಮೈಗೂಡಿಸಿ ವಿದ್ಯಾರತ್ನ ವಿದ್ಯಾ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮ ಶ್ಲ್ಲಾಘನೀಯ ಎಂದರಲ್ಲದೆ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಬಾಳಿಗೂ ಬೆಳಕಾಗಲಿ ಎಂದು ಶುಭಹಾರೈಸಿದರು. ರೋಟರಿ ಕ್ಲಬ್ ದೇರಳಕಟ್ಟೆಯ ಕಾರ್ಯದರ್ಶಿ ಜಯಪ್ರಕಾಶ್ ರೈ, ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಶೆಟ್ಟಿ , ಶಾಲಾ ಮುಖ್ಯೋಪಾಧ್ಯಾಯಿನಿ ನಹೀಮ್ ಹಮೀದ್, ಶಾಲಾ ವಿದಾರ್ಥಿ ನಾಯಕ ಶ್ರೇಯಶ್ ಉಪಸ್ಥಿತರಿದ್ದರು. ಶಿಕ್ಷಕಿ ಭಾರತಿ ಸ್ವಾಗತಿಸಿದರು, ಸಹ ಶಿಕ್ಷಕ ರಮೇಶ್…

Read More

UN NETWORKS ಉಳ್ಳಾಲ : ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ ಇದರ 35ನೇ ವರ್ಷದ ಸಂಸ್ಥಾಪನಾ ದಿನದ ಅಂಗವಾಗಿ ಎಸ್ ಐ ಓ ಉಳ್ಳಾಲ ಶಾಖೆಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವನ್ನು ಇಂದು ಸುಮಯ್ಯಾ ಮಸೀದಿ ಹಿರಾ ನಗರ್ ಬಬ್ಬು ಕಟ್ಟೆಯಲ್ಲಿ ಬೆಳಗ್ಗೆ 7-30ಕ್ಕೆ ಸರಿಯಾಗಿ ಕಾರ್ಯಕ್ರಮ ನೆರೆವೇರಿತು. ಮುಖ್ಯ ಅಥಿತಿಯಾಗಿ ಆಗಮಿಸಿದ ಜಮಾಅತೇ ಇಸ್ಲಾಮಿ ವಲಯ ಕಾರ್ಯದರ್ಶಿ ಇಲ್ಯಾಸ್ ಇಸ್ಮಾಯಿಲ್ ಧ್ವಜಾರೋಹಣ ಮಾಡೂದರ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿದರು . “ಯುವಕರು ಸಮಾಜದ ಪುನರ್ನಿಮಾಣದ ಕಾರ್ಯದಲ್ಲಿರಬೇಕು ಯವ್ವನವನ್ನು ಹಾಳುಮಾಡಬಾರದು ಉತ್ತಮ ಸಮಾಜದ ವಕ್ತಾರರಾಗಬೇಕು ಎಂದರು ” . ಇನ್ನೋರ್ವ ಮುಖ್ಯ ಅತಿಥಿ ಎಸ್ ಐ ಓ ಉಳ್ಳಾಲ ಶಾಖೆಯ ಸ್ಥಾಪಕ ಅದ್ಯಕ್ಷರೂ ಸ್ಥಾನೀಯ ಜಮಾಅತ್ ಅಧ್ಯಕ್ಷರಾದ ಜನಾಬ್ ಅಬ್ದುಲ್ ಕರೀಂ ರವರು ಮಾತನಾಡುತ್ತಾ “ಎಸ್ ಐ ಓ ಧಾರ್ಮಿಕ ಜ್ಞಾನದೊಂದಿಗೆ ಸಾಮಾಜಿಕ ಕಳಕಳಿಯನನ್ನುಂಟು ಮಾಡುವ ಸಂಘಟನೆ ಇಂದು ದೇಶಾದ್ಯಂತ ಬೆಳೆದು 35 ವರ್ಷಗಳು ದಾಟಿದೆ ಇನ್ನೂ ಬೆಳೆಯಬೇಕು ಸಮಾಜದಲ್ಲಿ ಶಾಂತಿ ಸೌಹಾರ್ದತೆಗೆ…

Read More

UN NETWORKS ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಚಿ ವಲಯ ಸಮಿತಿ ವತಿಯಿಂದ ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಕುಕ್ಕಾಜೆ ಚೆಕ್ ಪೋಸ್ಟ್ ಬಳಿ ನಿರ್ಮಿಸಿದ ಸಾರ್ವಜನಿಕ ಬಸ್ಸು ತಂಗುದಾಣವನ್ನು ಎಸ್.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಹುಲ್ ಹಮೀದ್ ಉದ್ಘಾಟಿಸಿದರು. ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಮಂಚಿ ಪ್ರಸ್ತಾವಿಕ ಭಾಷಣ ಮಾಡಿದರು. ಶೈನ್ ಗೈಸ್ ಕುಕ್ಕಾಜೆ ಅಧ್ಯಕ್ಷ ಗಫ್ಫಾರ್ ಕುಕ್ಕಾಜೆ, ಸಾಮಾಜಿಕ ಕಾರ್ಯಕರ್ತ ನಝೀರ್ ಕುಕ್ಕಾಜೆ ಮಾಜಿ ತಾಲೂಕು ಪಂಚಾಯಿತ್ ಸದಸ್ಯ ಡಿ.ಕೆ. ಹಂಝ, ಮಂಚಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೋಹನ್ ದಾಸ್, ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಹಾಗೂ ಇರ್ಫಾದ್ ಕುಕ್ಕಾಜೆ (ಮೋನು) ಮತ್ತಿತರರು ಉಪಸ್ಥಿತರಿದ್ದರು. ಎಸ್.ಡಿ.ಪಿ.ಐ ಗ್ರಾಮ ಸಮಿತಿ ಅಧ್ಧಕ್ಷ ಡಿ.ಎನ್. ಫಾರೂಕ್ ಮಂಚಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Read More

UN NETWORKS ಅಂಬ್ಲಮೊಗರು: ಬೈಕ್ ಮೂಲಕ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಮಂಗಳವಾರ ಅಂಬ್ಲಮೊಗರು ಗ್ರಾಮದ ಮದಕ ಎಂಬಲ್ಲಿ ಬಂಧಿಸಿದ್ದಾರೆ. ಕುದ್ರೋಳಿಯ ಮಹಮ್ಮದ್ ಆಸೀಫ್ ಹಾಗೂ ಕುತ್ತಾರಿನ ಶೇಖ್ ಶಹಬಾಝ್ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಅಂಬ್ಲಮೊಗರು ಗ್ರಾಮದ ಮದಕ ಎಂಬಲ್ಲಿ ಬೈಕ್ ಮೂಲಕ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಕೈಗೆ ಸಿಕ್ಕಿ ಬಿದ್ದಿದ್ದಾರೆ. ಪೊಲೀಸರು ಇವರ ಬಳಿ ಇದ್ದ ಐದು ಪ್ಯಾಕೆಟ್ ಗಾಂಜಾ ಹಾಗೂ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಇವರಿಬ್ಬರೂ ಗಾಂಜಾ ಸೇವನೆ ಮಾಡಿದ ಬಗ್ಗೆ ಪೊಲೀಸ್ ತನಿಖೆಯಿಂದ ದೃಡಪಟ್ಟಿದೆ. ಆರೋಪಿಗಳು ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಮಾರಾಟ ಮಾಡುತ್ತಿದ್ದರೆಂದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

UN NETWORKS ಉಳ್ಳಾಲ : ಕೊಲ್ಯ ಬಳಿ ಸ್ಕೂಟರ್ ಬೈಕ್ ನಡುವೆ ನಡೆದ ಅಪಘಾತದ ಗಾಯಾಳು ರವೀಂದ್ರ(71) ಅವರಿಗೆ ಹರೀಶ್ ಸಾಂತ್ವಾನ ಯೋಜನೆಯಡಿ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ಸೋಮವಾರ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಉಳ್ಳಾಲಬೈಲು ನಿವಾಸಿ ರವೀಂದ್ರ ಅವರು ತಮ್ಮ ಮೊಮ್ಮಗನೊಂದಿಗೆ ಸ್ಕೂಟರ್‍ನಲ್ಲಿ ಕೊಲ್ಯ ಬೈಪಾಸ್ ಮಾರ್ಗವಾಗಿ ಉಚ್ಚಿಲ ಕಡೆ ತೆರಳುತ್ತಿದ್ದಾಗ ಅತೀ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರವೀಂದ್ರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ ತೊಕ್ಕೊಟ್ಟಿನ ನೇತಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಆಸ್ಪತ್ರೆಯವರು 15 ಸಾವಿರ ಕಟ್ಟುವಂತೆ ಹೇಳಿದಾಗ ರವೀಂದ್ರ ಅವರ ಕುಟುಂಬದ ಸದಸ್ಯರು ಗಾಯಗೊಂಡ ತಕ್ಷಣ ರಾಜ್ಯ ಸರಕಾರದ ಹರೀಶ್ ಸಾಂತ್ವಾನ ಯೋಜನೆಯಡಿ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ಮುಖ್ಯಸ್ಥರಿಗೆ ತಿಳಿಸಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಈ ಹಿಂದೆ ಇಬ್ಬರಿಗೆ ಚಿಕಿತ್ಸೆ ನೀಡಿದ ಹಣ ಸರಕಾರ ನೀಡದೆ ಇದ್ದ ಕಾರಣ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದಾಗ ಕೆಲಕಾಲ ಗೊಂದಲವಾಯಿತು. ಮದ್ಯಪ್ರವೇಶಿಸಿದ ಬಿಜೆಪಿ ಮುಖಂಡರು…

Read More

UN NETWORKS ಉಳ್ಳಾಲ: ಯೇನೆಪೋಯ ಆಸ್ಪತ್ರೆಯಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಸ್ಥಾಪಿಸಿದ ಅತ್ಯಾಧುನಿಕ ರೊಬೊಟಿಕ್ ಶಸ್ತ್ರಚಿಕಿತ್ಸಾ ವ್ಯವಸ್ಥೆಯನ್ನು ಬಳಸಿ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗವು ಮೂತ್ರಪಿಂಡದ ರೋಗಿಗಳಲ್ಲಿ ಶಸ್ತ್ರಚಿಕಿತ್ಸೆ ಸೇರಿದಂತೆ ಮೂತ್ರಪಿಂಡದ ಕ್ಯಾನ್ಸರ್‍ಗಳಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆ ನೀಡಿ ಯಶಸ್ವಿಯಾಗಿದ್ದು, ಸುಮಾರು 150ಕ್ಕೂ ಹೆಚ್ಚು ಪ್ರಕರಣಗಳಿಗೆ ಚಿಕಿತ್ಸೆ ನೀಡಿದೆ. ಮೂತ್ರಶಾಸ್ತ್ರ ವಿಭಾಗದ ರೊಬೊಟಿಕ್ ಮೂತ್ರಶಾಸ್ತ್ರಜ್ಞರಾದ ಡಾ| ಮುಜೀಬ್ ರಹಿಮಾನ್, ಡಾ| ಅಲ್ತಾಫ್ ಖಾನ್ ಮತ್ತು ಡಾ| ನಿಶ್ತ್ ಡಿ’ಸೋಜಾ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂತ್ರಪಿಂಡದ ಕ್ಯಾನ್ಸರ್ಸ್ ರೋಗಿಗಳಲ್ಲಿ 20ಕ್ಕೂ ಅಧಿಕ ರೋಗಿಗಳಿಗೆ ಮೂತ್ರಪಿಂಡದ ಸಂರಕ್ಷಣೆ ಮಾಡುವ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಾರೆ. ಮೂತ್ರಪಿಂಡದ ಕ್ಯಾನ್ಸರ್‍ಗೆ ಸಾಂಪ್ರದಾಯಿಕ ಚಿಕಿತ್ಸೆಯು ಇಡೀ ಮೂತ್ರಪಿಂಡ ಮತ್ತು ಸುತ್ತಮುತ್ತಲಿನ ಅಂಗಾಂಶಗಳ ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಲ್ಪಟ್ಟಿದೆ (ಇದನ್ನು ರಾಡಿಕಲ್ ನೆಫ್ರೆಕ್ಟೊಮಿ ಎಂದು ಕರೆಯಲಾಗುತ್ತದೆ). ಮೂತ್ರಪಿಂಡ ಸಂರಕ್ಷಿಸುವ ಶಸ್ತ್ರಚಿಕಿತ್ಸೆಗಳೊಂದಿಗೆ ನೆಫ್ರಾನ್ ಸೇವಿಂಗ್ ಸರ್ಜರಿ (ಎನ್‍ಎಸ್‍ಎಸ್) ಅಥವಾ ಪಾರ್ಟಿಯಲ್ ನೆಫ್ರೆಕ್ಟೊಮಿ ಎಂದು ಕೂಡ ಕರೆಯಲಾಗುತ್ತದೆ. ತಕ್ಷಣವೇ ಗೆಡ್ಡೆಯನ್ನು ಸುತ್ತುವರೆದಿರುವ ಗೆಡ್ಡೆ ಮತ್ತು ಅಂಗಾಂಶಗಳನ್ನು ತೆಗೆದುಹಾಕಲಾಗುತ್ತದೆ…

Read More

UN NETWORKS ಉಳ್ಳಾಲ : ಸನಾತನ ಸಂಸ್ಕೃತಿಯನ್ನು ಬಿಂಬಿಸುವಂತಹ ದೀಪಾವಳಿ ಉತ್ಸವವನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಹಬ್ಬ ಹರಿದಿನಗಳ ಮಹತ್ವ ತಿಳಿಸುವ ಕಾರ್ಯ ಆಗಬೇಕು ಎಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ಅಭಿಪ್ರಾಯಪಟ್ಟರು. ಕುತ್ತಾರು ಶ್ರೀ ರಾಜರಾಜೇಶ್ವರೀ ಸಿದ್ಧಿ ವಿನಾಯಕ ದೇವಸ್ಥಾನ ಕುತ್ತಾರಿನಲ್ಲಿ ವೀರ ಸಾವರ್ಕರ್ ಪ್ರತಿಷ್ಠಾನ ಕುತ್ತಾರ್ ಇದರ ದ್ವಿತೀಯ ವರ್ಷದ ಗೂಡುದೀಪ ಸ್ಪರ್ಧಾ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ದೀಪಾವಳಿ ಉತ್ಸವದೊಂದಿಗೆ ಗೋಪೂಜೆಗೂ ಮಹತ್ವದ ಸ್ಥಾನವಿದೆ. ನಮ್ಮ ಗೋ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವುದರೊಂದಿಗೆ ಕೃಷಿ ಸಂಸ್ಕೃತಿಯನ್ನು ಬೆಳೆಸುವ ಕಾರ್ಯ ಆಗಬೇಕು ಎಂದರು. ಗೋಪೂಜೆ ನೆರವೇರಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್‍ನ ಮುಖಂಡ ಬಿ.ನಾರಾಯಣ ಕುಂಪಲ ಮಾತನಾಡಿ ಗೋವು ಕೇವಲ ಒಂದು ಪಶುವಾಗದೆ ಮುಕ್ಕೋಟಿ ದೇವತರಗಳ ಆವಾಸ ಸ್ಥಾನವಾಗಿದ್ದು,ಇದು ಧಾರ್ಮಿಕ ನೆಲೆಯಲ್ಲಿ ಮಾತ್ರವಲ್ಲದೆ, ವೈಜ್ಞಾನಿಕ, ಆರೋಗ್ಯ ದೃಷ್ಠಿಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಗೋವಿನ ಅರ್ಕದಿಂದ ಕ್ಯಾನ್ಸರ್ ಶಮನ ಮಾಡುವ ಶಕ್ತಿಯಿದ್ದು, ಬೆನ್ನುಮೂಳೆಯಲ್ಲಿರುವ…

Read More