Author: UllalaVani

Kannada News From Coastal Karnataka

ಬಳ್ಳಾರಿ, ಜನವರಿ 02: ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರವೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಎಂಎಲ್​​ಎ ನಾರಾ ಭರತ್​​ ರೆಡ್ಡಿ ವಿರುದ್ಧ ಸಮರಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆಯನ್ನೇ ಗೈಯುತ್ತಿದ್ದಾರೆ. ಇದು ನನ್ನ ಕೊಲೆಗೆ ನಡೆದ ಸಂಚು ಎಂದು ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್​ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ ಇಳಿದಿದ್ದಾನೆ ಎಂದು ಏಕವಚನದಲ್ಲೇ ಭರತ್​​ ರೆಡ್ಡಿ ಕಿಡಿಕಾರಿದ್ದಾರೆ. ಇದೆಲ್ಲದರ ನಡುವೆ ಯುವಕ ರಾಜಶೇಖರ್​​ ಸಾವಿಗೆ ಕಾರಣವಾದ ಬುಲೆಟ್ ಫೈರ್​​ ಮಾಡಿದ್ದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಬ್ಯಾನರ್ ವಿಚಾರವಾಗಿ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜೊತೆಗೆ ಶಾಸಕ ಭರತ್ ರೆಡ್ಡಿ ಆಪ್ತನ ಬಾಡಿಗಾರ್ಡ್ಗಳು ಕೂಡ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬ0ಧ ಖಾಸಗಿ ಗನ್‌ಮ್ಯಾನ್‌ಗಳ ೩ಗನ್ ಸೀಜ್ ಮಾಡಿದ್ದಾರೆ. ಅವುಗಳನ್ನು…

Read More

ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ತಂಬಾಕು ಮತ್ತು ಪಾನ್ ಮಸಾಲಾ ಮೇಲಿನ ಹೊಸ ಸುಂಕಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚಿರುತ್ತವೆ. ಸರಕುಗಳ ಮೇಲೆ ಪ್ರಸ್ತುತ ವಿಧಿಸಲಾಗುತ್ತಿರುವ ಪರಿಹಾರ ಸೆಸ್ ಅನ್ನು ಬದಲಾಯಿಸುತ್ತವೆ.ಫೆ.1 ರಿಂದ ಪಾನ್ ಮಸಾಲಾ, ಸಿಗರೇಟ್, ತಂಬಾಕು ಮತ್ತು ಅಂತಹುದೇ ಉತ್ಪನ್ನಗಳಿಗೆ ಶೇ. 40 ರಷ್ಟು ಜಿಎಸ್‌ಟಿ ದರ ಇರಲಿದೆ. ಬೀಡಿಗಳಿಗೆ ಶೇ. 18 ರಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬೀಳಲಿದೆ ಎಂದು ಸರ್ಕಾರಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಪಾನ್ ಮಸಾಲಾ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುವುದು, ಆದರೆ ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳು ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸುತ್ತವೆ. ಬುಧವಾರ ಹಣಕಾಸು ಸಚಿವಾಲಯವು ಚೂಯಿಂಗ್ ತಂಬಾಕು, ಜರ್ದಾ ಸುಗಂಧಿತ ತಂಬಾಕು ಮತ್ತು ಗುಟ್ಕಾ ಪ್ಯಾಕಿಂಗ್ ಯಂತ್ರಗಳ (ಸಾಮರ್ಥ್ಯ ನಿರ್ಣಯ ಮತ್ತು ಸುಂಕ ಸಂಗ್ರಹ)…

Read More

ಉಳ್ಳಾಲ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕು, ಮಾನವೀಯ ಮೌಲ್ಯಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕೇರಳ ಯಾತ್ರೆ ಆರಂಭಿಸಲಾಗಿದೆ. ಮನುಷ್ಯರೊಂದಿಗ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಯಾತ್ರೆ ನಡೆಯಲಿದೆ. ತಾಜುಲ್ ಉಲಮಾ ಉಳ್ಳಾಲ ತಂಙಳ್ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಅದನ್ನು ಉಳಿಸುವ ಕಾರ್ಯ ನಮ್ಮಿಂದ ಆಗಬೇಕು ಎಂದು ಉಳ್ಳಾಲ ಸಂಯುಕ್ತ ಖಾಝಿ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರಾö್ಯಂಡ್ ಮುಫ್ತಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು. ಅವರು ಮನುಷ್ಯರೊಂದಿಗೆ ಎಂಬ ಧ್ಯೇಯವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಆಯೋಜಿಸಿರುವ ಕೇರಳ ಯಾತ್ರೆಗೆ ಉಳ್ಳಾಲ ದರ್ಗಾ ಝಿಯಾರತ್‌ನೊಂದಿಗೆ ಚಾಲನೆ ನೀಡಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು. ದೇಶದಲ್ಲಿ ಮನುಷ್ಯತ್ವ ಉಳಿಯಬೇಕು. ಅರಾಜಕತೆ, ಅಧರ್ಮ ನಮಗೆ ಬೇಡ. ಇದನ್ನು ಅಳಿಸಿ ಜನರು ಸನ್ಮಾರ್ಗದಲ್ಲಿ ನಡೆಯಬೇಕು. ಐಕ್ಯತೆ ಬೆಳೆಯಬೇಕು ಎಂದು ಕರೆ ನೀಡಿದರು. ಅಸಯ್ಯಿದ್ ಇಬ್ರಾಹೀಮ್ ಖಲೀಲ್ ತಂಙಳ್ ಕಡಲುಂಡಿ ಮಾತನಾಡಿ, ಎ.ಪಿ. ಉಸ್ತಾದ್ ಅವರ ನೇತೃತ್ವದಲ್ಲಿ ಇಂದು ನಡೆಯುವುದು ಮೂರನೇ ಯಾತ್ರೆ ಆಗಿದೆ. ಮನುಷ್ಯರೊಂದಿಗೆ ಎಂಬ…

Read More

ತೊಕ್ಕೊಟ್ಟು: ಭಾರತೀಯ ಗುರುಕುಲ ಮಾದರಿಯ ಪಂಚಮುಖಿ ಶಿಕ್ಷಣಕ್ಕೆ ಜಿಲ್ಲೆಯಲ್ಲೇ ಉನ್ನತ ಹೆಸರಿರುವ ಮಂಗಳೂರು ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಈ ಬಾರಿಯ `ರಾಷ್ಟ್ರೋತ್ಸವ’ ಜನವರಿ 3ರಂದು ಸಂಜೆ 5;30ಕ್ಕೆ ತೊಕ್ಕೊಟ್ಟು ಚೆಂಬುಗುಡ್ಡೆಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ರಾಣಿ ಅಬ್ಬಕ್ಕ ಚಾವಡಿಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಡಾ.ಎಂ,ಎಸ್ ಮೂಡಿತ್ತಾಯ ಆಗಮಿಸಲಿದ್ದಾರೆ. ರಾಷ್ಟೋತ್ಥಾನ ಪರಿಷತ್ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿಗಳಾದ ನಾ.ದಿನೇಶ್ ಹೆಗ್ಡೆ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

Read More

ಮಂಗಳೂರು,ಜ.6: ದಕ್ಷಿಣ ಕನ್ನಡ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮಂಗಳೂರು ನಗರ ವ್ಯಾಪ್ತಿಯಲ್ಲಿ ಇ-ಆಟೋಗಳನ್ನು ನಿರ್ವಹಿಸಲು ಪರವಾನಗಿ ನೀಡಲು ನಿರ್ದಿಷ್ಟ ಷರತ್ತುಗಳನ್ನು ವಿಧಿಸಲು ನಿರ್ಧರಿಸಿದೆ. ಇ-ಆಟೋ ಪರವಾನಗಿಯನ್ನು ಬಯಸುವ ಅರ್ಜಿದಾರರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಠ ಐದು ವರ್ಷಗಳ ಕಾಲ ವಾಸಿಸುತ್ತಿದ್ದಾರೆ ಎಂದು ಸಾಬೀತುಪಡಿಸುವ ನಿವಾಸ ಪ್ರಮಾಣಪತ್ರವನ್ನು ಸಲ್ಲಿಸಬೇಕು. ನಗರ ವ್ಯಾಪ್ತಿಯಲ್ಲಿ ಈಗಾಗಲೇ ಆಟೋರಿಕ್ಷಾ ಪರವಾನಗಿಗಳನ್ನು ಹೊಂದಿರುವವರು ಇ-ಆಟೋರಿಕ್ಷಾ ಪರವಾನಗಿಗೆ ಅರ್ಹರಾಗಿರುವುದಿಲ್ಲ. ಒಬ್ಬ ವ್ಯಕ್ತಿಗೆ ಒಂದೇ ಇ-ಆಟೋರಿಕ್ಷಾ ಪರ್ಮಿಟ್ ನೀಡಲಾಗುವುದು. ಇ-ಆಟೋ ಪರ್ಮಿಟ್ ಹೊಂದಿರುವವರು ಮಾನ್ಯ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಹೊಂದಿರುವುದು ಕಡ್ಡಾಯವಾಗಿದೆ. ಇದಲ್ಲದೆ, ಪರ್ಮಿಟ್ ಹೊಂದಿರುವವರು ಸ್ವತಃ ಇ-ಆಟೋರಿಕ್ಷಾವನ್ನು ಕಡ್ಡಾಯವಾಗಿ ಚಾಲನೆ ಮಾಡಬೇಕು ಎಂದು ಪ್ರಾಧಿಕಾರವು ಷರತ್ತು ವಿಧಿಸಿದೆ. ನಗರದಲ್ಲಿ ಇ-ಆಟೋಗಳ ಕಾರ್ಯಾಚರಣೆಯನ್ನು ನಿಯಂತ್ರಿಸಲು ಮತ್ತು ಸಾರಿಗೆ ನಿಯಮಗಳ ಸರಿಯಾದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗಿದೆ

Read More

ಮಂಗಳೂರು ; ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬಾಲ ಏಸು ಪುಣ್ಯಕ್ಷೇತ್ರ ದ ನಿರ್ದೇಶಕರಾದ ಫಾ| ಸ್ಟೀಫನ್ ಪಿರೇರಾ ರವರು ತಿಳಿಸಿದ್ದಾರೆ. ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು ನಡೆಯಲಿದ್ದು ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ನಡೆಸಿಕೊಡಲಿರುವರು. ಅದೇ ದಿನ ಬೆಳಿಗ್ಗೆ 10.00 ಘಂಟೆಗೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಅತೀ ವಂದನೀಯ ಡಾ| ಅಲೋಶಿಯಸ್ ಪಾವ್ ಡಿಸೋಜಾ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರು ವಿಶೇಷ ಬಲಿಪೂಜೆಯನ್ನು ನೆರವೇರಿಸುವರು ಎಂದರು. ಜನವರಿ 15ರಂದು ಬೆಳಿಗ್ಗೆ 10.00 ಘಂಟೆಗೆ ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ದುಮಿಂಗ್ ಡಾಯಸ್ ನಡೆಸಿಕೊಡಲಿರುವರು. ಇದು ಮಕ್ಕಳಿಗಾಗಿ ಅರ್ಪಿಸಲಾಗುವ ವಿಶೇಷ ಪೂಜಾವಿಧಿಯಾಗಿದೆ. ಮಹೋತ್ಸವದ ಸಮಾರೋಪ ಪ್ರಾರ್ಥನಾ ವಿಧಿ ಸಂಜೆ 6.00 ಘಂಟೆಗೆ ಅತಿ…

Read More

ಕೊಟ್ಟಾರ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್ ಉರ್ವಸ್ಟೋರ್, ಮಂಗಳೂರು, ಇವರ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿoದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಮಂಗಳೂರಿನ ಉರ್ವಸ್ಟೋರ್‌ನ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಬ್ರಹ್ಮಕುಮಾರಿಯರ ಮಂಗಳೂರು ವಿಭಾಗದ ಮುಖ್ಯಸ್ಥರಾದ ಬಿ. ಕೆ ವಿಶ್ವೇಶ್ವರಿ ರವರು ಉದ್ಘಾಟಿಸಿ ಮಾತನಾಡಿ “ಶಾರೀರಿಕ ಆರೋಗ್ಯದ ಜೊತೆಗೆ ಮನಸ್ಥಿತಿಯು ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಆರೋಗ್ಯಕ್ಕಾಗಿ ಔಷಧಿಗಳ ಜೊತೆಗೆ ಪ್ರತಿ ದಿನ ಧ್ಯಾನ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು” ಎಂದರು. ಮುಖ್ಯ ಅತಿಥಿಯಾದ ಹಿರಿಯ ಧಾರ್ಮಿಕ ಮುಖಂಡರಾದ ಯು. ಮಾಧವ ಸುವರ್ಣ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ…

Read More

ಮಂಗಳೂರು: ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘದ ಅದೀನ ಸಂಸ್ಥೆಯಾದ ಶಿಕ್ಷಕ ಮಳಿಗೆಯಲ್ಲಿ ಸುಧೀರ್ಘ ಸೇವ ಮಾಡಿದ ಸಜ್ಜನ ವ್ಯಕ್ತಿ ನವೀನ್ ಚಂದ್ರರವರು ವಯೋನಿವೃತ್ತಿ ಹೊಂದಿದ ಕಾರಣ ಅವರನ್ನು ಶಿಕ್ಷಕರ ಸಹಕಾರಿ ಸಂಘದಲ್ಲಿ ಅಧ್ಯಕ್ಷರಾದ ಕೆ ಎಂ ಕೆ ಮಂಜನಾಡಿ ಅವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಿ , ಬೀಳ್ಕೊಡಲಾಯಿತು. ಶಿಕ್ಷಕರ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಿಕ್ಷಕರ ಸ್ವತ್ತಾಗಿದ್ದು ಇದನ್ನು ಸಂರಕ್ಷಿಸಿ ಪ್ರಾಮಾಣಿಕ ಸೇವೆಯನ್ನು ಸಂಸ್ಥೆಯಲ್ಲಿ ಸಿಬ್ಬಂದಿಗಳು ಮಾಡಬೇಕು ಎಂದು ಶಿಕ್ಷಕರ ಸಂಘದ ಅಧ್ಯಕ್ಷರು ಸಂಘದ ನೌಕರರಿಗೆ ಕಿವಿಮಾತು ಹೇಳಿದರು. ತಮ್ಮ ಪ್ರಾಮಾಣಿಕ ಸೇವೆಯು ನೀಡಬೇಕು ಆ ಮೂಲಕ ನಿವೃತ್ತಿ ಸಂದರ್ಭದಲ್ಲಿ ತಮ್ಮ ಹಕ್ಕುಗಳನ್ನು ಸಮರ್ಪಕವಾಗಿ ಪಡೆಯಬೇಕು ಎಂದರು. ಸಂಘದ ಉಪಾಧ್ಯಕ್ಷರಾದ ಉದಯಶಂಕರ್ ನಾಯಕರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರ್ಮಿಳಾ ಅವರು ಅಭಿನಂದನಾ ಭಾಷಣ ಮಾಡಿದರು. ನಿರ್ದೇಶಕರಾದ ಹಿಲ್ದಾ ಕ್ಲ ಮೆಲೆಮನ್ಷಿಯಾ, ಪಿಂಟೋ, ಪುಸ್ತಕ ಮಳಿಗೆಯ ಕಾರ್ಯನಿರ್ವಾಹಕ ಸುಭಾಷ್ ನಿವೃತ್ತರ ಬಗ್ಗೆ ಅಭಿನಂದನೆಯನ್ನು ಸಲ್ಲಿಸಿದರು. ಈ…

Read More

ಮಂಗಳೂರು, ಜ.01 : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ(86) ಗುರುವಾರ ಬೆಳಗಿನ ಜಾವ ನಿಧನರಾದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದರು. ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ, ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ. ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿದವರು. ತಮ್ಮ ತಂದೆಯವರ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ. ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.ಲೆಮಿನಾ ಸಸ್ಪೆನ್ಷನ್…

Read More

ಶ್ರೀ ಉಮಾಮಹೇಶ್ವರಿ ದೇವಸ್ಥಾನ ದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ನೀಡಿ ಆಮಂತ್ರಿಸಲಾಯಿತು. ‌ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರ್ ಎ ಜೆ ಶೇಖರ್ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಸತೀಶ್ ಕುಂಪಲ ,ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಅತ್ತಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡ್, ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಅಧ್ಯಕ್ಷರಾದ ಜೀವನ್ ತೊಕ್ಕೊಟ್ಟು, ಉಗ್ರಾಣ ಸಮಿತಿ ಪ್ರಧಾನ ಸಂಚಾಲಕರಾದ ಭಾಸ್ಕರ್ ಗಟ್ಟಿ, ಮೊಕ್ತೇಸರ್ ಡಾ ಆರ್ ಕೆ ಶೆಟ್ಟಿ , ಸೇವಾ ಸಮಿತಿ ಅಧ್ಯಕ್ಷ ರಾದ ದಿನೇಶ್ ರೈ ಕಳ್ಳಿಗೆ , ಕರುಣಾಕರ್ ಶೆಟ್ಟಿ , ಪ್ರಚಾರ ಸಮಿತಿ ಅಧ್ಯಕ್ಷ ಜಗದೀಶ್ ಆಚಾರ್ಯ , ಕೋಶಾಧಿಕಾರಿ ಆನಂದ್ ಶೆಟ್ಟಿ , ಶ್ರೀರಿಶ್ ಕಾಪಿಕಾಡ್ , ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಪ್ರಜ್ವಲ್ ಗಟ್ಟಿ , ಪೊಸ ಕುರಲ್ , ಅಬ್ಬಕ್ಕ ಟಿವಿ ಮಾಧ್ಯಮದವರು ಉಪಸ್ಥಿತರಿದ್ದರು,

Read More